Amit Shah | ಶೀಘ್ರವೇ ಸಹಕಾರ ವಿವಿ ಸ್ಥಾಪನೆ, ಮೋದಿಯಿಂದ ರೈತಪರ ಯೋಜನೆಗಳು: ಅಮಿತ್ ಶಾ - Vistara News

ಕರ್ನಾಟಕ

Amit Shah | ಶೀಘ್ರವೇ ಸಹಕಾರ ವಿವಿ ಸ್ಥಾಪನೆ, ಮೋದಿಯಿಂದ ರೈತಪರ ಯೋಜನೆಗಳು: ಅಮಿತ್ ಶಾ

ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಸಹಕಾರ ಸಮ್ಮೇಳನವನ್ನು ಉದ್ಘಾಟಿಸಿ, ಮೋದಿ ನೇತೃತ್ವದ ಸರ್ಕಾರ ಹೇಗೆ ಸಹಕಾರ ಕ್ಷೇತ್ರವನ್ನು ಅಭಿವೃದ್ಧಿಗೊಳಿಸುತ್ತಿದೆ ಎಂದು ಸಚಿವ ಅಮಿತ್ ಶಾ (Amit Shah) ಅವರು ವಿವರಿಸಿದರು.

VISTARANEWS.COM


on

Amit Shah in Karnataka
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ದೇಶದಲ್ಲಿ ಸಹಕಾರಿ ಆಂದೋಲನಕ್ಕೆ ಹೊಸ ದಿಕ್ಕು ನೀಡುವ ಪ್ರಯತ್ನಗಳ ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಕೃಷಿ ಇಲಾಖೆಯಿಂದ ಸಹಕಾರಿ ಇಲಾಖೆಯನ್ನು ಪ್ರತ್ಯೇಕಗೊಳಿಸುವ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದರು. ಇದರಿಂದ ಸಾಕಷ್ಟು ಲಾಭವಾಗಿದೆ. ಸಹಕಾರ ಕ್ಷೇತ್ರವನ್ನು ಮತ್ತಷ್ಟು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಸಹಕಾರ ವಿಶ್ವವಿದ್ಯಾಲಯವನ್ನು ಸ್ಥಾಪಿಸುತ್ತಿದ್ದೇವೆ. ದೇಶದ ಯಾವ ಭಾಗದಲ್ಲಿ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕು ಎಂಬ ಕುರಿತು ಚರ್ಚೆ ನಡೆಯುತ್ತಿದೆ. ಇದಕ್ಕಾಗಿ ಈ ಹಿಂದೆ ರೈಲ್ವೆ ಸಚಿವರಾಗಿದ್ದ ಸುರೇಶ್ ಪ್ರಭು ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ ಎಂದು ಕೇಂದ್ರ ಸಹಕಾರ ಸಚಿವರೂ ಆಗಿರುವ ಗೃಹ ಮಂತ್ರಿ ಅಮಿತ್ ಶಾ (Amit Shah) ಅವರು ಹೇಳಿದರು.

ಬೆಂಗಳೂರಲ್ಲಿ ಆಯೋಜಿಸಲಾಗಿದ್ದ ಸಹಕಾರ ಸಮ್ಮೇಳನವನ್ನು ಉದ್ಘಾಟಿಸಿ, ವಿವಿಧ ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಿಸಿ ಮಾತನಾಡಿದ ಅವರು, ಆರ್ಗಾನಿಕ್ ಉತ್ಪನ್ನಗಳನ್ನು ಮಾರಾಟ ಮಾಡುವುದಕ್ಕಾಗಿ ಮಲ್ಟಿ ಸ್ಟೇಟ್ ಕೋ ಆಪರೇಟಿವ್, ಬೀಜ ಉತ್ಪಾದನೆ ಮತ್ತು ಸಂರಕ್ಷಣೆಗಾಗಿ ಮಲ್ಟಿ ಸ್ಟೇಟ್ ಕೋ ಆಪರೇಟಿವ್ ಸಂಸ್ಥೆ ಮತ್ತು ಉತ್ಪನ್ನಗಳು ರಫ್ತು ಮಾಡಲು ಸಹಕಾರ ತತ್ವದ ಆಧಾರದ ಮೇಲೆಯೇ ಎಕ್ಸ್‌ಪೋರ್ಟ್ ಹೌಸ್ ಸ್ಥಾಪಿಲಾಗುತ್ತಿದೆ. ಈ ಎಲ್ಲ ಕೆಲಸಗಳನ್ನು ನಿರ್ವಹಿಸಲು ಸಾಕಷ್ಟು ಮಾನವ ಸಂಪನ್ಮೂಲ ಬೇಕಾಗುತ್ತದೆ. ಅದಕ್ಕಾಗಿಯೇ ಕೌಶಲಯುಕ್ತ ಮಾನವ ಸಂಪನ್ಮೂಲವನ್ನು ಸಜ್ಜುಗೊಳಿಸಲು ಸಹಕಾರ ವಿವಿಯನ್ನು ಆರಂಭಿಸಲಾಗುವುದು ಎಂದು ಅಮಿತ್ ಶಾ ಅವರು ಹೇಳಿದರು.

ಸಹಕಾರಿ ಸಂಸ್ಥೆಗಳಿಗೆ ಆರ್ಥಿಕ ಬಲವನ್ನು ನೀಡುವುದಕ್ಕಾಗಿ, ಚುನಾವಣೆಯಲ್ಲಿ ಪಾರದರ್ಶಕತೆಯನ್ನು ತರುವುದಕ್ಕಾಗಿ ಮಾದರಿ ಕಾನೂನು ರೂಪಿಸುತ್ತಿದ್ದೇವೆ. ಆರ್ಥಿಕ ನೆರವು ನೀಡುವುದಕ್ಕಾಗಿ ನಬಾರ್ಡ್ ಜತೆಗೇ ಎನ್‌ಸಿಡಿಸಿ ಕೂಡ ಕೈಜೋಡಿಸುತ್ತಿದೆ. ಹಾಗೆಯೇ, ಸಹಕಾರ ಕ್ಷೇತ್ರದಲ್ಲಿ ರಾಜ್ಯಗಳ ಹೊಣೆಗಾರಿಕೆಯನ್ನು ಹೆಚ್ಚಿಸುವುದಕ್ಕಾಗಿ ಬಿಲ್ ಸಿದ್ಧಪಡಿಸಲಾಗಿದ್ದು, ಸ್ಥಾಯಿ ಸಮಿತಿ ಮುಂದೆ ಇದೆ. ಹಾಗೆಯೇ ರಾಜ್ಯಗಳು ಕೂಡ ತಮ್ಮ ಕಾನೂನುಗಳಲ್ಲಿ ಪರಿವರ್ತನೆ ಮಾಡಿಕೊಳ್ಳಬೇಕು ಎಂದು ಶಾ ಕರೆ ನೀಡಿದರು.

ಈ ಮೊದಲು ಸಹಕಾರಿ ಸಂಸ್ಥೆಗಳೂ ಕಂಪನಿಗಳು ರೀತಿಯಲ್ಲಿ ಅಧಿಕ ತೆರಿಗೆಯನ್ನು ಭರಿಸುತ್ತಿದ್ದವು. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರು ಈ ತೆರಿಗೆ ಭಾರವನ್ನು ಕಡಿಮೆ ಮಾಡಿದ್ದಾರೆ. ಶೇ.12ರಷ್ಟು ಕಡಿಮೆ ಮಾಡಿ, ತೆರಿಗೆಯನ್ನು ಶೇ.7ಕ್ಕೆ ಸ್ಥಿರಗೊಳಿಸಿದ್ದಾರೆ ಎಂದು ಶಾ ಹೇಳಿದರು.

ಕರ್ನಾಟಕ ಮಾದರಿಯಾಗಲಿ
ಸಹಕಾರ ಕ್ಷೇತ್ರದಲ್ಲಿ ಕರ್ನಾಟಕವು ಮೊದಲಿನಿಂದಲೂ ಮುಂಚೂಣಿಯಲ್ಲಿದೆ. ಇದು ಮಾದರಿ ರಾಜ್ಯವಾಗಬೇಕು. ಇಲ್ಲಿನ ಅತ್ಯುತ್ತಮ ಪದ್ಧತಿಗಳನ್ನು ಬೇರೆ ರಾಜ್ಯಗಳೂ ಅಳವಡಿಸಿಕೊಳ್ಳುವಂತಾಗಬೇಕು. ಮೋದಿ ಅವರ ಪ್ರಯತ್ನದಿಂದಾಗಿ ಯಾವ ರಾಜ್ಯವು ಸಹಕಾರಿ ಕ್ಷೇತ್ರದಲ್ಲಿ ಹಿಂದೆ ಬಿದ್ದಿದೆಯೋ ಆ ರಾಜ್ಯಗಳು ಕೂಡ ಈ ನಿಟ್ಟಿನಲ್ಲಿ ದಾಪುಗಾಲು ಹಾಕಲು ಸಾಧ್ಯವಾಗಲಿದೆ ಎಂದರು.

ಸಹಕಾರಿ ಆಂದೋಲನಕ್ಕೆ ಸಂಬಂಧಿಸಿದಂತೆ ಶತಮಾನದ ಇತಿಹಾಸ ಹೊಂದಿರುವ ಕರ್ನಾಟಕವು ದೇಶದ ಇತರ ರಾಜ್ಯಗಳಿಗೆ ಮಾದರಿ ರಾಜ್ಯವಾಗಿದೆ. ಹಾಗಿದ್ದೂ ಪಾರದರ್ಶಕ ಆಡಳಿತವನ್ನು ಅನುಸರಿಸಿಕೊಳ್ಳುವ ಮೂಲಕ ಮೇಲ್ಪಂಕ್ತಿ ಹಾಕಿಕೊಡಬೇಕು. ಇಲ್ಲಿನ ಸಹಕಾರಿ ಕ್ಷೇತ್ರದಲ್ಲಿನ ಆಡಳಿತ ಪದ್ಧತಿಗಳನ್ನು ಇತರ ರಾಜ್ಯಗಳು ಅನುಸರಿಸುವಂತಾಗಬೇಕು ಎಂದು ಸಚಿವ ಅಮಿತ್ ಶಾ ಅವರು ಹೇಳಿದರು.

ರೈತ ಕೇಂದ್ರೀತ ಯೋಜನೆಗಳು
ಮೋದಿ ಆಡಳಿತ ಬಂದ ಮೇಲೆ ರೈತ ಕೇಂದ್ರೀತ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಸಹಕಾರಿ ಸಚಿವಾಲಯವು ಈ ನಿಟ್ಟಿನಲ್ಲಿ ಸಾಕಷ್ಟು ನಿರ್ಧಾರಗಳನ್ನು ಕೈಗೊಂಡಿದೆ. ಪಾದರ್ಶಕ ಆಡಳಿತಕ್ಕಾಗಿ ಗಣಕೀಕರಣ ಮಾಡಲು ನಿರ್ಧಾರಿಸಲಾಗಿದೆ. ದೇಶದಲ್ಲಿನ ಪ್ರತಿ ಪಂಚಾಯ್ತಿ ಮಟ್ಟದಲ್ಲಿ ಸಹಕಾರಿ ಸಮಿತಿಗಳನ್ನು ಆರಂಭಿಸಲಾಗುವುದು. ಈ ಸಂಸ್ಥೆಯು ಎಲ್ಲ ರೀತಿಯ ಸಹಕಾರಿ ಕೆಲಸಗಳನ್ನು ಮಾಡಲಿದೆ. ಮುಂದಿನ ಮೂರು ವರ್ಷಗಳಲ್ಲಿ 2 ಲಕ್ಷ ಸಹಕಾರಿ ಸಂಘಗಳು ಆರಂಭವಾಗಲಿವೆ ಎಂದು ಅವರು ತಿಳಿಸಿದರು. ಇದರಿಂದ ಸಹಕಾರಿ ಕ್ಷೇತ್ರದ ಫಲಾನುಭವಿಗಳಲ್ಲಿ ಮೂರು ಪಟ್ಟು ಹೆಚ್ಚಳವಾಗಲಿದೆ ಎಂದು ಹೇಳಿದರು.

ಇದನ್ನೂ ಓದಿ | Amit Shah | ಮುಂದಿನ 3 ವರ್ಷದಲ್ಲಿ ದೇಶದ ಎಲ್ಲ ಪಂಚಾಯಿತಿಗಳಲ್ಲಿ ಡೇರಿ ಸ್ಥಾಪನೆ: ಸಚಿವ ಅಮಿತ್ ಶಾ ಭರವಸೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Sirsi News: ವಿಶ್ವಶಾಂತಿಗೆ ಯಕ್ಷ ನೃತ್ಯ ಕೊಡುಗೆ; ವಿಶ್ವದಾಖಲೆ ಪಟ್ಟಿಗೆ ತುಳಸಿ ಹೆಗಡೆ ಸೇರ್ಪಡೆ

Sirsi News: ಲಂಡನ್ ಮೂಲದ ಪ್ರತಿಷ್ಠಿತ ವರ್ಲ್ಡ್ ರೆಕಾರ್ಡ್ ಸಂಸ್ಥೆಯು ಶಿರಸಿಯ ಯಕ್ಷಗಾನ ತುಳಸಿ ಹೆಗಡೆ ಹೆಸರನ್ನು ತನ್ನ ವಿಶ್ವದಾಖಲೆಯ ಪಟ್ಟಿಯಲ್ಲಿ ಸೇರ್ಪಡೆಗೊಳಿಸಿಕೊಂಡಿದೆ. ಯಕ್ಷಗಾನ ಕಲಾ ಪ್ರಕಾರದ ಮೂಲಕ ವಿಶ್ವಶಾಂತಿಗೆ ಈವರೆಗೆ 9 ಕಲಾ ಕುಸುಮದ ಮೂಲಕ ನೀಡುತ್ತಿರುವ ಕೊಡುಗೆಗಳನ್ನು ಗಮನಿಸಿ ಮಕ್ಕಳ ವಿಭಾಗದ ತನ್ನ ದಾಖಲಾತಿಯಲ್ಲಿ ಸೇರಿಸಿಕೊಂಡಿದೆ.

VISTARANEWS.COM


on

Yakshagana artist Tulsi Hegade added to the world record list
Koo

ಶಿರಸಿ: ಅತ್ಯಂತ ಕಿರಿಯ ವಯಸ್ಸಿನಲ್ಲೇ ʼವಿಶ್ವಶಾಂತಿಗೆ ಯಕ್ಷ ನೃತ್ಯʼ ಮೂಲಕ ಕೊಡುಗೆ ನೀಡುತ್ತಿರುವ ಯಕ್ಷಗಾನ ಕಲಾವಿದೆ ತುಳಸಿ ಹೆಗಡೆ ಹೆಸರು ಇದೀಗ ಜಾಗತಿಕ ಮಟ್ಟದಲ್ಲೂ (Sirsi News) ದಾಖಲಾಗಿದೆ.

ಲಂಡನ್ ಮೂಲದ ಪ್ರತಿಷ್ಠಿತ ವರ್ಲ್ಡ್ ರೆಕಾರ್ಡ್ ಸಂಸ್ಥೆಯು ತುಳಸಿ ಹೆಗಡೆ ಹೆಸರನ್ನು ತನ್ನ ವಿಶ್ವದಾಖಲೆಯ ಪಟ್ಟಿಯಲ್ಲಿ ಸೇರ್ಪಡೆಗೊಳಿಸಿಕೊಂಡಿದೆ. ಯಕ್ಷಗಾನ ಕಲಾ ಪ್ರಕಾರದ ಮೂಲಕ ವಿಶ್ವಶಾಂತಿಗೆ ಈವರೆಗೆ 9 ಕಲಾ ಕುಸುಮದ ಮೂಲಕ ನೀಡುತ್ತಿರುವ ಕೊಡುಗೆಗಳನ್ನು ಗಮನಿಸಿ ಮಕ್ಕಳ ವಿಭಾಗದ ತನ್ನ ದಾಖಲಾತಿಯಲ್ಲಿ ಸೇರಿಸಿಕೊಂಡಿದೆ.

ಬೆರಳ ತುದಿಯಲ್ಲಿ ನರ್ತನ ಮಾಡುವ ವಿದೇಶವೊಂದರ ನೃತ್ಯ ಕಲಾ ಪ್ರಕಾರ ಹೊರತುಪಡಿಸಿದರೆ ಈವರೆಗೆ ಪ್ರಪಂಚದ ಯಾವುದೇ ಕಲಾ ಪ್ರಕಾರ ಈ ದಾಖಲಾತಿ ಪಟ್ಟಿಗೆ ಸೇರ್ಪಡೆ ಆಗಿರಲಿಲ್ಲ ಎಂದು ಈ ಸಂಸ್ಥೆ ತಿಳಿಸಿದೆ. ಈ ದಾಖಲೆಗೆ ತುಳಸಿ ಹೆಗಡೆ ಹೆಸರು ಸೇರ್ಪಡೆಯಿಂದ ಯಕ್ಷ ರೂಪಕದ ಮೂಲಕ ಯಕ್ಷಗಾನದ ಹೆಸರೂ ಇದೇ ಪ್ರಥಮ ಬಾರಿಗೆ ಸೇರಿದಂತಾಗಿದೆ.

ಇದನ್ನೂ ಓದಿ: Bengaluru News: ಬೆಂಗಳೂರಿನ ವಿದ್ಯಾರ್ಥಿನಿಗೆ ಐಐಟಿ ಬಾಂಬೆಯ ಪ್ರತಿಷ್ಠಿತ ಪ್ರಶಸ್ತಿ

ಶಿರಸಿ ಮಾರಿಕಾಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿ ಓದುತ್ತಿರುವ ತುಳಸಿ ಹೆಗಡೆ ತನ್ನ 3ನೇ ವಯಸ್ಸಿನಿಂದಲೇ ಯಕ್ಷಗಾನ ಕ್ಷೇತ್ರಕ್ಕೆ ಬಾಲ ಹೆಜ್ಜೆ ಇಟ್ಟವಳು. ಐದೂವರೆ ವರ್ಷದಿಂದ ವಿಶ್ವ ಶಾಂತಿ ರೂಪಕಗಳನ್ನು ಪ್ರಸ್ತುತಗೊಳಿಸುತ್ತಿದ್ದಾಳೆ. ಪೌರಾಣಿಕ ಆಖ್ಯಾನಗಳ 9 ರೂಪಕಗಳನ್ನು ಪ್ರಸ್ತುತಗೊಳಿಸುವ ತುಳಸಿ, ರಾಜ್ಯ, ಹೊರ ರಾಜ್ಯಗಳಲ್ಲಿ 850ಕ್ಕೂ ಅಧಿಕ ಪ್ರದರ್ಶನ ನೀಡಿ ಗಮನ ಸೆಳೆದಿದ್ದಾಳೆ. ಜತೆಗೆ ಹಿರಿಯ ಕಲಾವಿದರ ಜತೆ ಬೇರೆ ಬೇರೆ ಯಕ್ಷಗಾನ ಆಖ್ಯಾನಗಳಲ್ಲೂ ಪಾತ್ರ ಮಾಡುತ್ತಿದ್ದಾಳೆ.

ಇದನ್ನೂ ಓದಿ: Kannada New Movie: ಗೋಪಿನಾಥ ಬೆಟ್ಟದಲ್ಲಿ ನಡೆದ ಧರ್ಮ ಕೀರ್ತಿರಾಜ್ ಅಭಿನಯದ ʼಪ್ರೊಡಕ್ಷನ್ ನಂ 1ʼ ಚಿತ್ರದ ಮುಹೂರ್ತ

ಈಗಾಗಲೇ ತುಳಸಿ ಹೆಗಡೆ ಹೆಸರು ಇಂಡಿಯಾ ಬುಕ್ ಆಪ್ ರೆಕಾರ್ಡ್‌ನಲ್ಲಿಯೂ ದಾಖಲಾಗಿದ್ದು, ಕರ್ನಾಟಕ ಬಾಲ ವಿಕಾಸ ಅಕಾಡೆಮಿ ನೀಡುವ ರಾಜ್ಯ ಮಟ್ಟದ ಬಾಲ ಗೌರವ ಪ್ರಶಸ್ತಿ, ಟೈಮ್ಸ್ ಆಫ್ ಇಂಡಿಯಾದ ದೇಶ ಮಟ್ಟದ 21 ವರ್ಷದೊಳಗಿನ ಅನ್ ಸ್ಟಾಪೇಬಲ್ 21 ಅವಾರ್ಡ್ ಸೇರಿದಂತೆ ಅನೇಕ ಪ್ರಶಸ್ತಿ, ಪುರಸ್ಕಾರಗಳು ಅರಸಿ ಬಂದಿವೆ. ತುಳಸಿ ಹೆಗಡೆ ತನ್ನ ಪ್ರತಿಭೆಯಿಂದಲೇ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೂ ಅವಕಾಶ ಸಿಕ್ಕಿತ್ತು.

Continue Reading

ಕರ್ನಾಟಕ

BJP Protest: ಪ್ರತಿಭಟನೆ ವೇಳೆ ಶಾಸಕ ವೇದವ್ಯಾಸ್ ಕಾಮತ್ ಧಮ್ಕಿ; ಕೆರಳಿದ ಪೊಲೀಸ್‌!

BJP Protest: ಬೆಂಗಳೂರಿನಲ್ಲಿ ಪ್ರತಿಭಟನಾಕಾರರನ್ನು ಬಸ್‌ ಹತ್ತಿಸುವ ವೇಳೆ ಧಮ್ಕಿ ಹಾಕಿದ್ದರಿಂದ ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಜತೆ ಪೊಲೀಸ್‌ ಒಬ್ಬರು ವಾಗ್ದಾದ ನಡೆಸಿದ್ದಾರೆ.

VISTARANEWS.COM


on

BJP Protest
Koo

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ದರ ಹೆಚ್ಚಳ ಖಂಡಿಸಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ (BJP Protest) ಹಾಕಲು ಯತ್ನಿಸಿದ ಬಿಜೆಪಿಯ ರಾಜ್ಯ ಅಧ್ಯಕ್ಷ ಬಿ..ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್‌.ಅಶೋಕ್‌ ಸೇರಿ ಹಲವು ನಾಯಕರನ್ನು ಪೊಲೀಸರು ಬುಧವಾರ ವಶಕ್ಕೆ ಪಡೆದರು. ಪ್ರತಿಭಟನಾಕಾರರನ್ನು ಬಸ್‌ ಹತ್ತಿಸುವ ವೇಳೆ ಧಮ್ಕಿ ಹಾಕಿದ್ದರಿಂದ ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಜತೆ ಪೊಲೀಸ್‌ ಒಬ್ಬರು ವಾಗ್ದಾದ ನಡೆಸಿರುವುದು ಕಂಡುಬಂದಿದೆ.

ಬಸ್‌ ಬಾಗಿಲಲ್ಲಿ ನಿಂತಿದ್ದ ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಅವರು ಕೆಳಗಿದ್ದ ಒಬ್ಬ ಪೊಲೀಸ್‌ಗೆ ಹೇಯ್ ಅಂದಿದ್ದಾರೆ. ಇದರಿಂದ ಕೆರಳಿದ ಪೊಲೀಸ್, ಶಾಸಕನ ಜತೆ ವಾಗ್ವಾದಕ್ಕೆ ಇಳಿದಿದ್ದಾರೆ. ಪೊಲೀಸರು ಹೋಗಪ್ಪ ಬಾರಪ್ಪ ಎಂದರೆ ಕೇಳಿಸಿಕೊಂಡು ಸುಮ್ಮನಿರಬೇಕಾ? ಎಂದು ಶಾಸಕ ಕಾಮತ್ ಆಕ್ರೋಶ ಹೊರಹಾಕಿದ್ದಾರೆ.

ರಾಜ್ಯದಲ್ಲಿ ದಿನಕ್ಕೊಂದು ಹಗರಣ: ವಿಜಯೇಂದ್ರ ಅಕ್ರೋಶ

ಪ್ರತಿಭಟನೆ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮಾತನಾಡಿ, ರಾಜ್ಯದಲ್ಲಿ ದಿನಕ್ಕೊಂದು ಹಗರಣ ನಡೆಯುತ್ತಿದೆ. ಹಗಲು ದರೋಡೆ ಮಾಡುತ್ತಿದ್ದಾರೆ. ಸಿಎಂ ಮನೆ ಮುತ್ತಿಗೆಗೆ ಹೊರಟರೆ ಬಂಧನ ಮಾಡುವ ಕೆಲಸ ನಡೆಯುತ್ತಿದೆ. ನಾವು ಭ್ರಷ್ಟಾಚಾರ ವಿರೋಧಿಸಿ ಹೋರಾಟ ಮಾಡುತ್ತಿದ್ದೇವೆ ಎಂದು ಹೇಳಿದರು.

ಮೈಸೂರು ಮುಡಾ ಹಗರಣ ನಡೆದಿದೆ. ಸಿಎಂ ಮೈಸೂರಿನವರು, ಅವರ ಗಮನಕ್ಕೆ ಬಾರದೆ ಹಗರಣ ನಡೆದಿರುವುದಿಲ್ಲ. ಅವರೇ ಸ್ವತಃ ಹಣಕಾಸು ಸಚಿವರು. ಯಾವೆಲ್ಲಾ ಹಗರಣ ನಡೆದಿದೆ, ಎಲ್ಲವೂ ತನಿಖೆ ಮಾಡಬೇಕು. ಬಿಜೆಪಿಗೆ ತಿರುಗುಬಾಣ ಆದರೂ ಎದುರಿಸುತ್ತೇವೆ. ಬೈರತಿ ಸುರೇಶ್ ಅವರು ಸಿಎಂಗೆ ಪರಮಾಪ್ತರಿದ್ದಾರೆ. ಹಾಗಾಗಿ ಸೂಕ್ತ ತನಿಖೆ ಆಗಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ | Mangalore News: ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತ; ಮಣ್ಣಿನಡಿ ಸಿಲುಕಿದ ಇಬ್ಬರು ಕಾರ್ಮಿಕರು

ನಮ್ಮ ವಿರುದ್ದ ಭ್ರಷ್ಟಾಚಾರದ ಆರೋಪ ಮಾಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಆದರೆ, ಸಿಎಂ ತವರಿನ ಮುಡಾದಲ್ಲಿ 4 ಸಾವಿರ ಕೋಟಿ ಹಗರಣ ಆಗಿದೆ. ಬೈರತಿ ಸುರೇಶ್ ಅವರು ಮೈಸೂರಲ್ಲಿ ಅಧಿಕಾರಿಗಳ ಸಭೆ ಮಾಡಿದ್ದರು, ಅಧಿಕಾರಿಗಳ ವರ್ಗಾವಣೆ ಮಾಡಿದ್ದಾರೆ. ಆದರೆ ಅವರನ್ನು ಸಸ್ಪೆಂಡ್ ಮಾಡಿಬೇಕಿತ್ತು. ಇವರ ಬುಡಕ್ಕೆ ಬರುತ್ತೆ ಅಂತ ಸಸ್ಪೆಂಡ್ ಮಾಡಿಲ್ಲ. ಕಡತಗಳನ್ನ ತಿದ್ದುಪಡಿ ಮಾಡಲು ಬೈರತಿ ಸುರೇಶ್ ತಂದಿದ್ದಾರೆ. ಯಾವುದೇ ತಿದ್ದುಪಡಿ ಮಾಡಿದ್ರೂ ಭ್ರಷ್ಟಾಚಾರ ಹೊರಗೆ ಬರಲಿದೆ. ಬಿಜೆಪಿ ಅವಧಿಯದ್ದೂ ಸೇರಿಸಿ, ಇವರ ಸರ್ಕಾರದ ಭ್ರಷ್ಟಾಚಾರ ತನಿಖೆ ಮಾಡಲಿ. ಅಲ್ಲಿಯವರೆಗೂ ಸಿಎಂ ರಾಜೀನಾಮೆ ಕೊಡಲಿ ಎಂದು ಆಗ್ರಹಿಸಿದರು.

Continue Reading

ಪ್ರಮುಖ ಸುದ್ದಿ

Sudha Murthy: ʼಹೆಣ್ಣುಮಕ್ಕಳಿಗೆ ಇದೊಂದು ಕೊಟ್ಟುಬಿಡಿ, ಪ್ಲೀಸ್‌ʼ ಎಂದ ಸುಧಾ ಮೂರ್ತಿ; ರಾಜ್ಯಸಭೆಯಲ್ಲಿ ಭಾಷಣಕ್ಕೆ ಮೋದಿ ಮೆಚ್ಚುಗೆ

Sudha Murthy: ಮಂಗಳವಾರ ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಸುಧಾ ಮೂರ್ತಿ, ಮಹಿಳೆಯರ ಆರೋಗ್ಯದ ಬಗ್ಗೆ ಮಾತನಾಡಿದರು. “ಒಂಬತ್ತರಿಂದ 14 ವರ್ಷದೊಳಗಿನ ಹೆಣ್ಣುಮಕ್ಕಳಿಗೆ ನೀಡಲಾಗುವ ಗರ್ಭಕಂಠದ ಕ್ಯಾನ್ಸರ್‌ (Cervical cancer) ಪ್ರತಿರೋಧ ಲಸಿಕೆ (Cervical Vaccine) ಎಲ್ಲರಿಗೂ ಒದಗಿಸುವ ತೀವ್ರ ಅವಶ್ಯಕತೆ ಇದೆʼ ಎಂದು ಅವರು ಸರಕಾರವನ್ನು ಒತ್ತಾಯಿಸಿದರು.

VISTARANEWS.COM


on

sudha murthy pm narendra modi
Koo

ಹೊಸದಿಲ್ಲಿ: ರಾಜ್ಯಸಭೆಯಲ್ಲಿ (Rajya Sabha) ನೂತನ ಸಂಸದೆ ಸುಧಾ ಮೂರ್ತಿ (Sudha Murthy) ಅವರು ಮಾಡಿದ ಚೊಚ್ಚಲ ಭಾಷಣ (Speech) ಸಂಸದರ ಮೆಚ್ಚುಗೆಗೆ ಪಾತ್ರವಾಯಿತು. ಸ್ವತಃ ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಶ್ಲಾಘನೆ ವ್ಯಕ್ತಪಡಿಸಿದರು.

ಮಂಗಳವಾರ ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಸುಧಾ ಮೂರ್ತಿ, ಮಹಿಳೆಯರ ಆರೋಗ್ಯದ ಬಗ್ಗೆ ಮಾತನಾಡಿದರು. “ಒಂಬತ್ತರಿಂದ 14 ವರ್ಷದೊಳಗಿನ ಹೆಣ್ಣುಮಕ್ಕಳಿಗೆ ನೀಡಲಾಗುವ ಗರ್ಭಕಂಠದ ಕ್ಯಾನ್ಸರ್‌ (Cervical cancer) ಪ್ರತಿರೋಧ ಲಸಿಕೆ (Cervical Vaccine) ಎಲ್ಲರಿಗೂ ಒದಗಿಸುವ ತೀವ್ರ ಅವಶ್ಯಕತೆ ಇದೆʼ ಎಂದು ಅವರು ಸರಕಾರವನ್ನು ಒತ್ತಾಯಿಸಿದರು. ತಮ್ಮ ತಂದೆಯ ಮಾತನ್ನು ಉಲ್ಲೇಖಿಸಿದ ಅವರು, ʼತಾಯಿ ಸತ್ತಾಗ ಅದನ್ನು ಆಸ್ಪತ್ರೆಯಲ್ಲಿ ಒಂದು ಸಾವು ಎಂದು ಪರಿಗಣಿಸಲಾಗುತ್ತದೆ. ಆದರೆ ಒಂದು ಕುಟುಂಬ ತಾಯಿಯನ್ನು ಶಾಶ್ವತವಾಗಿ ಕಳೆದುಕೊಳ್ಳುತ್ತದೆ. ಹೀಗಾಗಿ ಮಹಿಳೆಯ ಆರೋಗ್ಯ ಅತ್ಯಂತ ಮುಖ್ಯʼ ಎಂದು ಹೇಳಿದರು.

ಗರ್ಭಕಂಠದ ಕ್ಯಾನ್ಸರ್ ವಿರುದ್ಧ ಹೋರಾಡಲು ಸರ್ಕಾರ ಪ್ರಾಯೋಜಿತ ಲಸಿಕೆ ಕಾರ್ಯಕ್ರಮಕ್ಕಾಗಿ ಸುಧಾ ಮೂರ್ತಿ ಒತ್ತಾಯಿಸಿದರು. “ಒಂಬತ್ತರಿಂದ 14 ವರ್ಷದೊಳಗಿನ ಹೆಣ್ಣುಮಕ್ಕಳಿಗೆ ನೀಡಲಾಗುವ ಸರ್ವಿಕಲ್‌ ಗರ್ಭಕಂಠದ ಲಸಿಕೆ ಅಭಿಯಾನವನ್ನು ನಾವು ಉತ್ತೇಜಿಸಬೇಕು. ಅದರಿಂದ ಗರ್ಭಕೊರಳಿನ ಕ್ಯಾನ್ಸರ್ ತಪ್ಪಿಸಬಹುದು. ನಮ್ಮ ಪ್ರಯೋಜನಕ್ಕಾಗಿ ನಾವು ಲಸಿಕೆಯನ್ನು ಉತ್ತೇಜಿಸಬೇಕು. ಕ್ಯಾನ್ಸರ್‌ ಚಿಕಿತ್ಸೆಗಿಂತ ತಡೆಗಟ್ಟುವಿಕೆ ಉತ್ತಮ” ಎಂದು ಅವರು ರಾಜ್ಯಸಭೆಯಲ್ಲಿ ತಮ್ಮ ಮೊದಲ ಭಾಷಣದಲ್ಲಿ ಹೇಳಿದರು.

“ಸರ್ಕಾರವು ಕೋವಿಡ್ ಸಮಯದಲ್ಲಿ ಬೃಹತ್‌ ವ್ಯಾಕ್ಸಿನೇಷನ್ ಅಭಿಯಾನವನ್ನು ನಿರ್ವಹಿಸಿದೆ. ಹೀಗೆಯೇ 9-14 ವರ್ಷ ವಯಸ್ಸಿನ ಹುಡುಗಿಯರಿಗೆ ಗರ್ಭಕಂಠದ ಲಸಿಕೆಯನ್ನು ನೀಡುವುದು ಕಷ್ಟಕರವಲ್ಲ. ಇದರ ಗುಣಮಟ್ಟ ತುಂಬಾ ಚೆನ್ನಾಗಿದೆ. ಇವತ್ತು ಅದರ ಬೆಲೆ ಸುಮಾರು ₹1,400 ಇದೆ. ಸರ್ಕಾರ ಮಧ್ಯಸ್ಥಿಕೆ ವಹಿಸಿದರೆ ₹700-800ಕ್ಕೆ ತರಬಹುದು. ನಮ್ಮಲ್ಲಿ ಇಷ್ಟು ದೊಡ್ಡ ಜನಸಂಖ್ಯೆಯಿರುವುದರಂದ ಭವಿಷ್ಯದಲ್ಲಿ ನಮ್ಮ ಸ್ತ್ರೀಯರಿಗೆ ಇದು ಪ್ರಯೋಜನಕಾರಿಯಾಗಿದೆ. ಗರ್ಭಕಂಠದ ಲಸಿಕೆಯನ್ನು ಪಶ್ಚಿಮದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಕಳೆದ 20 ವರ್ಷಗಳಿಂದ ಇದನ್ನು ಬಳಸಲಾಗುತ್ತಿದೆ” ಎಂದು ಅವರು ತಮ್ಮ 13 ನಿಮಿಷಗಳ ಭಾಷಣದಲ್ಲಿ ಹೇಳಿದರು.

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಮುನ್ನಾದಿನದಂದು ಅಧ್ಯಕ್ಷೆ ದ್ರೌಪದಿ ಮುರ್ಮು (President Draupadi Murmu) ಅವರು ಸುಧಾ ಮೂರ್ತಿಯವರನ್ನು ಮೇಲ್ಮನೆಗೆ ನಾಮನಿರ್ದೇಶನ ಮಾಡಿದ್ದರು.

ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ

“ಮಹಿಳೆಯರ ಆರೋಗ್ಯದ ಬಗ್ಗೆ ವಿವರವಾಗಿ ಮಾತನಾಡಿದ್ದಕ್ಕಾಗಿ ನಾನು ಸುಧಾ ಮೂರ್ತಿ ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ” ಪಿಎಂ ಮೋದಿ ಹೇಳಿದರು. ತಾಯಂದಿರ ಕುರಿತು ಮೂರ್ತಿ ಅವರ “ಭಾವನಾತ್ಮಕ” ಹೇಳಿಕೆಯನ್ನು ಉಲ್ಲೇಖಿಸಿ, ಕಳೆದ 10 ವರ್ಷಗಳಲ್ಲಿ ತಮ್ಮ ಸರ್ಕಾರವು ಮಹಿಳೆಯರ ಆರೋಗ್ಯ ಮತ್ತು ನೈರ್ಮಲ್ಯವನ್ನು ಆದ್ಯತೆಯ ವಲಯವಾಗಿ ಕೇಂದ್ರೀಕರಿಸಿದೆ ಎಂದು ಹೇಳಿದರು.

ಕಳೆದ ವಾರ ಸಂಸತ್ತಿನ ಜಂಟಿ ಅಧಿವೇಶನದಲ್ಲಿ ಅಧ್ಯಕ್ಷೆ ದ್ರೌಪದಿ ಮುರ್ಮು ಮಾಡಿದ ಭಾಷಣಕ್ಕೆ ಧನ್ಯವಾದ ಸಲ್ಲಿಸುವ ನಿರ್ಣಯದ ಮೇಲಿನ ಚರ್ಚೆಗೆ ಉತ್ತರಿಸಿದ ಪ್ರಧಾನಿ ಮೋದಿ, “ನಮ್ಮ ದೇಶದ ಮಹಿಳೆಯರು ನಾವು ನಿರ್ಮಿಸಿದ ಶೌಚಾಲಯಗಳಿಂದ ಪ್ರಯೋಜನ ಪಡೆದಿದ್ದಾರೆ. ಸ್ಯಾನಿಟರಿ ಪ್ಯಾಡ್‌ಗಳನ್ನು ಅವರಿಗೆ ಒದಗಿಸಲಾಗಿದೆ. ಮಹಿಳೆಯರಿಗೆ ಗರ್ಭಾವಸ್ಥೆಯಲ್ಲಿ ನೀಡಲಾಗುವ ಲಸಿಕೆ ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: Sudha Murthy : ರಾಜ್ಯಸಭೆ ಸದಸ್ಯರಾಗಿ ಕನ್ನಡದಲ್ಲೇ ಪ್ರತಿಜ್ಞೆ ಸ್ವೀಕರಿಸಿದ ಸುಧಾ ಮೂರ್ತಿ; ನಾರಾಯಣಮೂರ್ತಿ ಸಾಥ್‌

Continue Reading

ಕರ್ನಾಟಕ

Mangalore News: ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತ; ಮಣ್ಣಿನಡಿ ಸಿಲುಕಿದ ಇಬ್ಬರು ಕಾರ್ಮಿಕರು

Mangalore News: ಮಂಗಳೂರಿನ ಬಲ್ಮಠ ರೋಡ್ ಸಮೀಪದ ರೋಹನ್ ಕಾರ್ಪೋರೇಶನ್‌ಗೆ ಸೇರಿದ ಕಟ್ಟಡ ನಿರ್ಮಾಣದ ವೇಳೆ ಘಟನೆ ನಡೆದಿದೆ.

VISTARANEWS.COM


on

Mangalore News
Koo

ಮಂಗಳೂರು: ನಗರದಲ್ಲಿ (Mangalore News) ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿದಿದ್ದು, ಮಣ್ಣಿನಡಿ‌ ಇಬ್ಬರು ಕಾರ್ಮಿಕರು ಸಿಲುಕಿದ್ದಾರೆ. ಕಾರ್ಮಿಕರ ರಕ್ಷಣೆಗಾಗಿ ಕಾರ್ಯಾಚರಣೆ ನಡೆಯುತ್ತಿದೆ. ಕಳೆದ ಮೂರು ದಿನದ ಹಿಂದೆ ಸುರಿದ ಮಳೆಯಿಂದ ಮಣ್ಣಿನ‌ ದಿಬ್ಬ ಸಡಿಲಗೊಂಡಿದ್ದರಿಂದ ಮಣ್ಣು ಕುಸಿದಿದೆ.

ಮಂಗಳೂರಿನ ಬಲ್ಮಠ ರೋಡ್ ಸಮೀಪದ ರೋಹನ್ ಕಾರ್ಪೋರೇಶನ್‌ಗೆ ಸೇರಿದ ಕಟ್ಟಡ ನಿರ್ಮಾಣದ ವೇಳೆ ಘಟನೆ ನಡೆದಿದೆ. ಬಿಹಾರ ಮೂಲದ ಚಂದನ್ ಮತ್ತು ರಾಜಕುಮಾರ್ ಮಣ್ಣಿನಡಿ ಸಿಲುಕಿರುವ ಕಾರ್ಮಿಕರು.

ಮಣ್ಣಿನಡಿ ಸಿಲುಕಿರುವ ಇಬ್ಬರು ಕಾರ್ಮಿಕರು ಕಾಣುತ್ತಿದ್ದು, ಅವರ ಜತೆ ರಕ್ಷಣಾ ತಂಡದ ಸಿಬ್ಬಂದಿ ಸಂಪರ್ಕ ಸಾಧಿಸಿದ್ದಾರೆ. ಸ್ಟ್ರೆಚರ್ ಜೊತೆ ಆರೋಗ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದಾರೆ. ಕಟ್ಟಡ ಕಾಮಗಾರಿ ವೇಳೆ ಒಂದು ಭಾಗದ ಮಣ್ಣು ಕುಸಿದಿದ್ದರಿಂದ ಅವಘಡ ಸಂಭವಿಸಿದೆ.

ಇದನ್ನೂ ಓದಿ | Actor Darshan: ಮಗುವನ್ನು ಕೈದಿ ಮಾಡಿದವರಿಗೆ ಕಾನೂನು ಕಂಟಕ; ಪಾಲಕರಿಗೆ ನೋಟಿಸ್‌!

ಬಿರುಗಾಳಿ ಮಳೆಗೆ ಮನೆ ಮೇಲೆ ಬಿದ್ದ ಆಲದ ಮರ; ಮನೆಯಲ್ಲಿದ್ದವರು ಪಾರು

ಉಡುಪಿ: ಬಿರುಗಾಳಿ ಸಹಿತ ಭಾರಿ ಮಳೆಗೆ ನಗರದ ವಸಂತಿ ಶೆಟ್ಟಿ ಎಂಬುವವರ ಮನೆ ಮೇಲೆ ಆಲದ ಮರ ಬಿದ್ದಿದ್ದು, ಅದೃಷ್ಟವಶಾತ್ ಮನೆಯಲ್ಲಿದ್ದ ಎಲ್ಲರೂ ಪಾರಾಗಿದ್ದಾರೆ. ಘಟನೆ ನಡೆದ ವೇಳೆ ವಸಂತಿ ಶೆಟ್ಟಿ, ಮಗಳು, ಮೊಮ್ಮಕ್ಕಳು ಮನೆಯಲ್ಲಿದ್ದರು.

ಮರ ಬಿದ್ದಿದ್ದರಿಂದ ಮನೆಯ ಎರಡು ಕೊಠಡಿಗಳ ಮೇಲ್ಚಾವಣಿ ಕುಸಿದು ಬಿದ್ದಿದೆ. ಮನೆಯ ಸದಸ್ಯರು ಬೇರೆ ಕೋಣೆಯಲ್ಲಿ ಮಲಗಿದ್ದರು, ಇದರಿಂದ ಅಪಾಯ ತಪ್ಪಿದೆ. ಅವಘಡದಿಂದ ಸೈಕಲ್ ಶಾಪ್, ಜನಪ್ರಿಯ ಸೌಂಡ್ಸ್, ಸಲೂನ್‌ಗೆ ಹಾನಿಯಾಗಿದೆ.

Physical Abuse: ಬೆಂಗಳೂರಲ್ಲಿ 6 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ

ಬೆಂಗಳೂರು: ನಗರದಲ್ಲಿ ಮತ್ತೊಂದು ರೇಪ್ ಆ್ಯಂಡ್ ಮರ್ಡರ್ ಕೇಸ್‌ ನಡೆದಿದೆ. ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿರುವ ಘಟನೆ (Physical Abuse) ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.

ಕೂಲಿ ಕೆಲಸ ಮಾಡುವ ದಂಪತಿಯ 6 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಿಗಳು, ನಂತರ ಕೊಲೆ ಮಾಡಿ ಪಾರ್ಕಿಂಗ್‌ ಪ್ರದೇಶದ ಮರವೊಂದರ ಬಳಿ ಶವ ಎಸೆದಿದ್ದಾರೆ. ರಾತ್ರಿ ವೇಳೆ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಪಾರ್ಕಿಂಗ್ ಲಾಟ್‌ನಲ್ಲಿದ್ದರೂ ಬಾಲಕಿ ಕೊಲೆ ವಿಚಾರ ಬೆಳಕಿಗೆ ಬಂದಿರಲಿಲ್ಲ. ಜನರು ಓಡಾಡುತ್ತಿದ್ದರೂ ಯಾರೂ ಗಮನ ಹರಿಸಿರಲಿಲ್ಲ. ಮೈ ಮೇಲೆ ಪರಚಿದ ಗಾಯಗಳು ಹಾಗು ರಕ್ತಸಿಕ್ತ ಬಟ್ಟೆಗಳಿಂದ ಬಾಲಕಿ ಶವ ಕಂಡುಬಂದಿದೆ. ಸದ್ಯ ಬಾಲಕಿ ಶವವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇದನ್ನೂ ಓದಿ | Actor Darshan: ಮಗುವನ್ನು ಕೈದಿ ಮಾಡಿದವರಿಗೆ ಕಾನೂನು ಕಂಟಕ; ಪಾಲಕರಿಗೆ ನೋಟಿಸ್‌!

ಈ ಬಗ್ಗೆ ರೈಲ್ವೆ ಎಸ್ ಪಿ ಡಾ. ಸೌಮ್ಯ ಲತಾ ಅವರು ಪ್ರತಿಕ್ರಿಯಿಸಿ, ಸಂಗೊಳ್ಳಿ ರಾಯಣ್ಣ ರೈಲ್ವೆ ಸ್ಟೇಷನ್‌ನಲ್ಲಿ ಒಂದು ಹೆಣ್ಣು ಮಗವಿನ ಮೃತ ದೇಹ ಸಿಕ್ಕಿದೆ. ನಮ್ಮ ಸಿಬ್ಬಂದಿ ಬಂದು ತಿಳಿಸಿದ್ದು, ಪರಿಶೀಲನೆ ನಡೆಸಲಾಗಿದೆ. ದೇಹದ ಮೇಲೆ ಸಾಕಾಷ್ಟು ಗಾಯಗಳಾಗಿವೆ, ಸಿಸಿಟಿವಿ ದೃಶ್ಯ ಪರಿಶೀಲನೆ ನಡೆಸಲಾಗುತ್ತಿದೆ. ಕೊಲೆ ಮಾಡಿ ಎಲ್ಲಿಂದಲ್ಲೋ ತಂದು ಇಲ್ಲಿ ಎಸೆಯಲಾಗಿದೆ. ಭಿಕ್ಷಾಟನೆ ಮಾಡುತ್ತಿದ್ದ ಕುಟುಂಬದ ಮಗು ಎಂದು ತಿಳಿದು ಬಂದಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Continue Reading
Advertisement
Yakshagana artist Tulsi Hegade added to the world record list
ಕರ್ನಾಟಕ44 seconds ago

Sirsi News: ವಿಶ್ವಶಾಂತಿಗೆ ಯಕ್ಷ ನೃತ್ಯ ಕೊಡುಗೆ; ವಿಶ್ವದಾಖಲೆ ಪಟ್ಟಿಗೆ ತುಳಸಿ ಹೆಗಡೆ ಸೇರ್ಪಡೆ

Hardik Pandya
ಕ್ರೀಡೆ52 seconds ago

Hardik Pandya: ಆಲ್​ರೌಂಡರ್​ ಶ್ರೇಯಾಂಕದಲ್ಲಿ ನಂ.1 ಸ್ಥಾನಕ್ಕೇರಿದ ಹಾರ್ದಿಕ್​ ಪಾಂಡ್ಯ

Actor Darshan K manju talks
ಸ್ಯಾಂಡಲ್ ವುಡ್3 mins ago

Actor Darshan: ದರ್ಶನ್‌ ಕೆಟ್ಟ ವ್ಯಕ್ತಿಯಲ್ಲ, ತಪ್ಪು ಮಾಡಿಲ್ಲ ಎಂದ ಕೆ. ಮಂಜು

Viral Video
ತಂತ್ರಜ್ಞಾನ8 mins ago

Viral Video: ರೋಬೋಟಿಕ್ ಹಾವುಗಳೊಂದಿಗೆ ವಿಶ್ವದ ಮೊದಲ ಎಐ ಉಡುಗೆ ಸಿದ್ಧ! ಹೇಗಿದೆ ನೋಡಿ!

Hathras Stampede
ದೇಶ20 mins ago

Hathras Stampede: 2.5 ಲಕ್ಷ ಜನ ಭೋಲೆ ಬಾಬಾ ಪಾದ ಮುಟ್ಟಲು ಓಡಿ ಹೋಗಿದಕ್ಕೇ ಕಾಲ್ತುಳಿತ? ಇಲ್ಲಿದೆ ಕಂಪ್ಲೀಟ್‌ ಮಾಹಿತಿ

BJP Protest
ಕರ್ನಾಟಕ23 mins ago

BJP Protest: ಪ್ರತಿಭಟನೆ ವೇಳೆ ಶಾಸಕ ವೇದವ್ಯಾಸ್ ಕಾಮತ್ ಧಮ್ಕಿ; ಕೆರಳಿದ ಪೊಲೀಸ್‌!

Narendra Modi
ದೇಶ29 mins ago

Narendra Modi: ಲೋಕಸಭಾ ಚುನಾವಣೆಯ ಫಲಿತಾಂಶದಿಂದ ದೇಶೀಯ ಮಾರುಕಟ್ಟೆಗೆ ಉತ್ತೇಜನ; ಮೋದಿ ಬಣ್ಣನೆ

Viral Video
Latest50 mins ago

Viral Video: ಮಕ್ಕಳನ್ನು ಬೆಲ್ಟ್‌ನಿಂದ ಕ್ರೂರವಾಗಿ ಥಳಿಸಿದ ತಾಯಿ; ವಿಡಿಯೊ ನೋಡಿ ಜನಾಕ್ರೋಶ

sudha murthy pm narendra modi
ಪ್ರಮುಖ ಸುದ್ದಿ58 mins ago

Sudha Murthy: ʼಹೆಣ್ಣುಮಕ್ಕಳಿಗೆ ಇದೊಂದು ಕೊಟ್ಟುಬಿಡಿ, ಪ್ಲೀಸ್‌ʼ ಎಂದ ಸುಧಾ ಮೂರ್ತಿ; ರಾಜ್ಯಸಭೆಯಲ್ಲಿ ಭಾಷಣಕ್ಕೆ ಮೋದಿ ಮೆಚ್ಚುಗೆ

James Anderson
ಕ್ರೀಡೆ1 hour ago

James Anderson: 41ನೇ ವಯಸ್ಸಿನಲ್ಲಿಯೂ 7 ವಿಕೆಟ್​ ಕಿತ್ತ ಜೇಮ್ಸ್ ಆಂಡರ್ಸನ್

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ21 hours ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ2 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ3 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು3 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ4 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ4 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ5 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ6 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌