HAL Helicopter Factory : ಇಲ್ಲಿ ರೆಡಿಯಾಗಿದೆ, 20,000 ಅಡಿ ಎತ್ತರದಲ್ಲಿ ಹಾರಬಲ್ಲ, ನೀರಲ್ಲೂ ಇಳಿಯಬಲ್ಲ ಎಲ್‌ಯುಎಚ್‌ ಹೆಲಿಕಾಪ್ಟರ್‌ - Vistara News

ಕರ್ನಾಟಕ

HAL Helicopter Factory : ಇಲ್ಲಿ ರೆಡಿಯಾಗಿದೆ, 20,000 ಅಡಿ ಎತ್ತರದಲ್ಲಿ ಹಾರಬಲ್ಲ, ನೀರಲ್ಲೂ ಇಳಿಯಬಲ್ಲ ಎಲ್‌ಯುಎಚ್‌ ಹೆಲಿಕಾಪ್ಟರ್‌

ತುಮಕೂರಿನ ಗುಬ್ಬಿಯಲ್ಲಿ ಸ್ಥಾಪನೆಯಾಗಿರುವ ಹೆಲಿಕಾಪ್ಟರ್‌ ಉತ್ಪಾದನಾ ಫ್ಯಾಕ್ಟರಿಯ ಸಾಮರ್ಥ್ಯವೇನು? ಅಲ್ಲಿ ತಯಾರಾಗುವ ಹೆಲಿಕಾಪ್ಟರ್‌ಗಳು ಯಾವುದಕ್ಕೆ ಬಳಕೆ ಆಗುತ್ತವೆ ಎಂಬುದರ ಸಂಪೂರ್ಣ ವಿವರ ಇಲ್ಲಿದೆ.

VISTARANEWS.COM


on

HAL LUH
ತುಮಕೂರಿನ ಎಚ್‌ಎಎಲ್‌ನಲ್ಲಿ ನಿರ್ಮಾಣವಾಗಲಿರುವ ಲಘು ಉಪಯೋಗಿ ವಿಮಾನದ ಮಾದರಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Gireesh linganna

ಗಿರೀಶ್ ಲಿಂಗಣ್ಣ, ಬಾಹ್ಯಾಕಾಶ ಮತ್ತು ರಕ್ಷಣಾ ವಿಶ್ಲೇಷಕ

ರಾಜ್ಯ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಬಿದರೆಹಳ್ಳ ಕಾವಲ್‌ನಲ್ಲಿ ನಿರ್ಮಿಸಲಾಗಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನ (ಎಚ್ಎಎಲ್) ನೂತನ ಹೆಲಿಕಾಪ್ಟರ್ ಉತ್ಪಾದನಾ ಘಟಕವನ್ನು (HAL Helicopter Factory) ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಲೋಕಾರ್ಪಣೆ ಮಾಡಿದರು. ಇದು ಏಷ್ಯಾದ ಅತಿದೊಡ್ಡ ಹೆಲಿಕಾಪ್ಟರ್‌ ಉತ್ಪಾದನಾ ಘಟಕ ಎಂಬ ಹೆಗ್ಗಳಿಕೆಯನ್ನು ಹೊಂದಿದೆ.

615 ಎಕರೆ ಭೂಪ್ರದೇಶದಲ್ಲಿ ವಿಸ್ತಾರವಾಗಿ ಹರಡಿರುವ ಈ ಘಟಕದ ಸ್ಥಾಪನೆಗೆ ಪ್ರಧಾನಿ ಮೋದಿ ಅವರು 2016ರಲ್ಲಿ ಶಂಕುಸ್ಥಾಪನೆ ನಡೆಸಿದ್ದರು. ಈ ಹೆಲಿಕಾಪ್ಟರ್ ಉತ್ಪಾದನಾ ಘಟಕದಲ್ಲಿ ಉತ್ಪಾದನೆ, ಪರೀಕ್ಷೆಗಳಿಗೆ ಬೇಕಾದ ವ್ಯವಸ್ಥೆಗಳು ಇವೆ. 3 ಟನ್‌ನಿಂದ 12 ಟನ್ ತೂಕದ ತನಕ ವಿವಿಧ ಶ್ರೇಣಿಗಳ ಹೆಲಿಕಾಪ್ಟರ್ ನಿರ್ಮಾಣ ಸಾಮರ್ಥ್ಯ ಈ ಸ್ಥಾವರಕ್ಕಿದೆ.

೨೦೧೬ರಲ್ಲಿ ಸ್ಥಾವರಕ್ಕೆ ಅಡಿಗಲ್ಲು ಹಾಕುವ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಮಾತನಾಡಿದಾಗ..

ಎಲ್‌ಯುಎಚ್‌ ಹೊಸ ತಲೆಮಾರಿನ ಹೆಲಿಕಾಪ್ಟರ್

ಇಲ್ಲಿ ಉತ್ಪಾದನೆಗೊಳ್ಳಲಿರುವ ಲೈಟ್ ಯುಟಿಲಿಟಿ ಹೆಲಿಕಾಪ್ಟರ್‌ (Light Utility Helicopter-LHU) ಒಂದು 3 ಟನ್ ವರ್ಗದ ಹೊಸ ತಲೆಮಾರಿನ ಹೆಲಿಕಾಪ್ಟರ್ ಆಗಿದ್ದು, ಎಚ್ಎಎಲ್ ಇದನ್ನು ಮಿಲಿಟರಿ ಮತ್ತು ನಾಗರಿಕ ಎರಡೂ ಅಗತ್ಯತೆಗಳನ್ನು ಪೂರೈಸಲು ನಿರ್ಮಿಸಿದೆ.

ಎಲ್‌ಯುಎಚ್ ಎನ್ನುವುದು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್ಎಎಲ್) ನಿರ್ಮಿಸಿರುವ ಇತ್ತೀಚಿನ ಹೆಲಿಕಾಪ್ಟರ್ ಆಗಿದ್ದು, ಸಮುದ್ರ ಮಟ್ಟದಿಂದ 20,000 ಅಡಿ ಎತ್ತರದಲ್ಲಿ ಕಾರ್ಯಾಚರಣೆ ನಡೆಸಬಲ್ಲ ಸಾಮರ್ಥ್ಯ ಹೊಂದಿದೆ. ಈ ಆಧುನಿಕ ಹೆಲಿಕಾಪ್ಟರ್ ಗಾಜಿನ ಕಾಕ್‌ಪಿಟ್, ಡ್ಯುವಲ್ ಕಂಟ್ರೋಲ್ ಮತ್ತು ಒಂದು ಸಫ್ರಾನ್ ಅರ್ಡಿಡೆನ್ 1ಯು1 ಟರ್ಬೋಶಾಫ್ಟ್ ಇಂಜಿನ್ ಹೊಂದಿದೆ. ಈ ಹೆಲಿಕಾಪ್ಟರ್ ಅತ್ಯಂತ ಯಶಸ್ವಿಯಾಗಿದ್ದು, ಜಾಗತಿಕ ಗುಣಮಟ್ಟಗಳಿಗೆ ಅನುಗುಣವಾಗಿ ನಿರ್ಮಿಸಲಾಗಿದೆ. ಈ ಯಶಸ್ಸಿನ ಬಳಿಕ ಹೆಲಿಕಾಪ್ಟರ್ ಅನ್ನು ನಾಗರಿಕ ಬಳಕೆಗೆ ಬೇಕಾದಂತೆ ತಯಾರಿಸುವ ಪ್ರಯತ್ನಗಳೂ ಆರಂಭಗೊಂಡಿವೆ.

ಭಾರತೀಯ ಸೇನಾಪಡೆಗಳಿಗೆ 20,000 ಅಡಿಗಳಿಗಿಂತ ಹೆಚ್ಚು ಎತ್ತರದಲ್ಲಿ ಕಾರ್ಯಾಚರಣೆ ನಡೆಸಬಲ್ಲ ಹೆಲಿಕಾಪ್ಟರ್ ಅಗತ್ಯವಿದೆ. ಈ ಅಗತ್ಯತೆ ಹೆಲಿಕಾಪ್ಟರ್‌ಗೆ ವಿನೂತನ ಸವಾಲನ್ನು ತಂದೊಡ್ಡಿದೆ. ಇಂತಹ ಎತ್ತರದ ಪ್ರದೇಶದಲ್ಲಿ ಪ್ರಚಲಿತ ಗಾಳಿಯ ಸಾಂದ್ರತೆ ಅತ್ಯಂತ ಕಡಿಮೆಯಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ ಕೆಲವೇ ಕೆಲವು ಹೆಲಿಕಾಪ್ಟರ್‌ಗಳು ಮಾತ್ರ ಕಾರ್ಯಾಚರಿಸುವ ಸಾಮರ್ಥ್ಯ ಹೊಂದಿವೆ. ಅಂತಹಾ ಹೆಲಿಕಾಪ್ಟರ್‌ಗಳಲ್ಲಿ ಎಲ್‌ಯುಎಚ್ ಸಹ ಒಂದಾಗಿದೆ.

ಏನೇನು ವಿಶೇಷ ವ್ಯವಸ್ಥೆಗಳಿವೆ?
-ಇದು ಅತ್ಯಾಧುನಿಕ ತಂತ್ರಜ್ಞಾನಗಳಾದ ಗಾಜಿನ ಕಾಕ್‌ಪಿಟ್ ಹಾಗೂ ಬಹು ಕಾರ್ಯಗಳ ಡಿಸ್‌ಪ್ಲೇ ವ್ಯವಸ್ಥೆಗಳನ್ನು ಹೊಂದಿದೆ.

– ಎಲ್‌ಯುಎಚ್ 127 ನಾಟ್ಸ್ (ಪ್ರತಿ ಗಂಟೆಗೆ 230 ಕಿಲೋಮೀಟರ್ ಅಥವಾ 146 ಮೈಲಿ) ವೇಗದಲ್ಲಿ ಚಲಿಸಬಲ್ಲದಾಗಿದ್ದು, 350 ಕಿಲೋಮೀಟರ್ (217 ಮೈಲಿ) ಗರಿಷ್ಠ ವ್ಯಾಪ್ತಿ ಹೊಂದಿದೆ.

-ಇದು 500 ಕೆಜಿ (1,102) ಪೌಂಡ್‌ಗಳಷ್ಟು ಗರಿಷ್ಠ ಭಾರ ಹೊತ್ತು ಚಲಿಸಬಲ್ಲದು.

ತುಮಕೂರಿನ ಹೆಲಿಕಾಪ್ಟರ್‌ ನಿರ್ಮಾಣ ಸ್ಥಾವರದ ದೃಶ್ಯ

೩೯೪ ಲೈಟ್‌ ಹೆಲಿಕಾಪ್ಟರ್‌ಗಳು ಬೇಕು
ಎಲ್‌ಯುಎಚ್ ಭಾರತೀಯ ಸೇನೆ ಮತ್ತು ವಾಯುಪಡೆಗಳಿಗೆ ಅತ್ಯಂತ ಅಗತ್ಯವಾಗಿದ್ದ 394 ಲೈಟ್ ಹೆಲಿಕಾಪ್ಟರ್‌ಗಳ ಅವಶ್ಯಕತೆಯನ್ನು ಪೂರೈಸಲಿದ್ದು, ಆ ಮೂಲಕ ಹಳೆಯದಾಗುತ್ತಿರುವ ಚೀತಾ (ಲಾಮಾ) ಹಾಗೂ ಚೇತಕ್ (ಅಲೌಟ್ಟೆ III) ಹೆಲಿಕಾಪ್ಟರ್‌ಗಳ ಬದಲಿಗೆ ಕಾರ್ಯನಿರ್ವಹಿಸಲಿವೆ. ಭೂಸೇನೆಗೆ 126 ಹೆಲಿಕಾಪ್ಟರ್‌ಗಳ ಅಗತ್ಯವಿದ್ದರೆ, ವಾಯು ಸೇನೆಗೆ 61 ಹೆಲಿಕಾಪ್ಟರ್‌ಗಳ ಅವಶ್ಯಕತೆಯಿದೆ.

ಮುಂದಿನ ದಿನಗಳಲ್ಲಿ ನಾಗರಿಕ ಬಳಕೆಗೂ ಲಭ್ಯ

ಮಿಲಿಟರಿ ಅವಶ್ಯಕತೆಗಳನ್ನು ಪೂರೈಸುವ ಈ ಹೆಲಿಕಾಪ್ಟರ್‌ಗಳು ನಾಗರಿಕ ಬಳಕೆಗೂ ಲಭ್ಯವಾಗಲಿವೆ. ಮೂಲಗಳ ಮಾಹಿತಿಯ ಪ್ರಕಾರ, ಎಚ್ಎಎಲ್ 600ಕ್ಕೂ ಹೆಚ್ಚು ಎಲ್‌ಯುಎಚ್‌ಗಳನ್ನು ನಾಗರಿಕ ಬಳಕೆಗೆ ಪೂರೈಸಲಿದೆ. ಆರಂಭದಲ್ಲಿ ಈ ಬಳಕೆದಾರರು ಭಾರತೀಯರೇ ಆಗಿರಲಿದ್ದು, ಪ್ರವಾಸೋದ್ಯಮ, ವಾಯು ಆಂಬ್ಯುಲೆನ್ಸ್, ಇತ್ಯಾದಿ ಕ್ಷೇತ್ರಗಳಲ್ಲಿ ಬಳಕೆಯಾಗಲಿವೆ. 6-7 ಆಸನಗಳ ಸಾಮರ್ಥ್ಯ ಹೊಂದಿರುವ ಈ ಹೆಲಿಕಾಪ್ಟರ್‌ಗಳನ್ನು ನಾಲ್ಕು ಆಸನಗಳ ವಿಐಪಿ ಹೆಲಿಕಾಪ್ಟರ್ ಆಗಿಯೂ ಬಳಸಬಹುದಾಗಿದೆ.

ಎಲ್‌ಯುಎಚ್ ಹೆಲಿಕಾಪ್ಟರ್‌ಗಳನ್ನು 200-250 ಗಂಟೆಗಳ ಹಾರಾಟ ನಡೆಸಿ, ಸರ್ವಿಸ್ ನಡೆಸಿದ ಬಳಿಕ ಅದರ ಪ್ರಮುಖ ಮೂರು ಘಟಕಗಳಾದ ಗೇರ್‌ಬಾಕ್ಸ್, ಇಂಜಿನ್ ಹಾಗೂ ರೋಟಾರ್‌ಗಳು ಅತ್ಯುತ್ತಮ ಸ್ಥಿತಿಯಲ್ಲಿದ್ದವು.

ಏಳೇ ನಿಮಿಷದಲ್ಲಿ ರೆಕ್ಕೆ ಮಡಚಿ ಇಡಬಹುದು!

ಎಲ್‌ಯುಎಚ್‌ನ ರೋಟರ್ ವ್ಯವಸ್ಥೆಯಲ್ಲಿ ಇದೇ ಮೊದಲ ಬಾರಿಗೆ ‘ಟೂ ಸೆಗ್ಮೆಂಟ್ ಬ್ಲೇಡ್’ ವ್ಯವಸ್ಥೆಯನ್ನು ಅಳವಡಿಸಲಾಗಿದ್ದು, ಇದು ಕಾಂಪ್ಯಾಕ್ಟ್ ಫೋಲ್ಡಿಂಗ್ ಆಯಾಮ ಒದಗಿಸುತ್ತದೆ. ಅಂದರೆ, ಏಳು ನಿಮಿಷಗಳ ಒಳಗೆ ಹೆಲಿಕಾಪ್ಟರ್ ರೆಕ್ಕೆಗಳನ್ನು ಮಡಚಬಹುದಾಗಿದ್ದು, ವಿಮಾನ ವಾಹಕ ನೌಕೆಗಳಲ್ಲಿ ಬಳಸಬಹುದಾಗಿದೆ.

ಎಲ್‌ಯುಎಚ್ ನಲ್ಲಿ ಎಮರ್ಜೆನ್ಸಿ ಫ್ಲೋಟಿಂಗ್ ಗೇರ್ (ಇಎಫ್‌ಜಿ) ಅಳವಡಿಸಲಾಗಿದ್ದು, ಇದು ತುರ್ತು ಪರಿಸ್ಥಿತಿಯಲ್ಲಿ ನೀರಿನ ಮೇಲೆ ಭೂಸ್ಪರ್ಶ ಮಾಡಲು ಅನುಕೂಲಕರವಾಗಿದೆ. ಅದರೊಡನೆ, ಇದು ಹೆಲಿಕಾಪ್ಟರ್ ನೀರಿನ ಮೇಲೆ ಕಾರ್ಯಾಚರಣೆ ನಡೆಸಲು ಪೂರಕವಾಗಿದೆ. ಇಎಫ್‌ಜಿ ಉದ್ದೇಶಪೂರ್ವಕವಾಗಿ ನೀರಿನ ಮೇಲೆ ಭೂಸ್ಪರ್ಶ ನಡೆಸುವ ‘ಫ್ಲೋಟ್ ಲ್ಯಾಂಡಿಂಗ್ ಗೇರ್’ ನಿಂದ ವಿಭಿನ್ನವಾಗಿದೆ.

ಇದರ ಹಿಂದಿರುವುದು ಯೋಧರ ಪತ್ನಿಯರ ಮನವಿ

ಭಾರತೀಯ ಸೇನಾ ಯೋಧರ ಪತ್ನಿಯರ ಸಂಘದ ಸದಸ್ಯೆಯರು ಪ್ರಧಾನಿ ನರೇಂದ್ರ ಮೋದಿಯವರ ಬಳಿ ಹಳೆಯದಾಗಿರುವ ಚೀತಾ ಮತ್ತು ಚೇತಕ್ ಹೆಲಿಕಾಪ್ಟರ್‌ಗಳ ಬಳಕೆಯ ಮೂಲಕ ಸೇನೆ ತನ್ನ ಯೋಧರನ್ನು ಬಲಿ ಕೊಡುತ್ತಿದೆ ಎಂದಿದ್ದರು.

ತಾವು ಬರೆದ ಪತ್ರದಲ್ಲಿ ಇಂಡಿಯನ್ ಆರ್ಮಿ ವೈವ್ಸ್ ಅಜಿಟೇಷನ್ ಗ್ರೂಪ್ ಸದಸ್ಯೆಯರು 31 ಮಿಲಿಟರಿ ಪೈಲಟ್‌ಗಳು 2017ರ ಬಳಿಕ ಪ್ರಾಣಾರ್ಪಣೆ ಮಾಡಿದ್ದಾರೆ. ದುರದೃಷ್ಟವಶಾತ್ ಇವರು ಯಾರೂ ಶತ್ರುಗಳ ದಾಳಿಯಿಂದ ಬಲಿಯಾಗಿಲ್ಲ. ಬದಲಿಗೆ ಚೀತಾ ಮತ್ತು ಚೇತಕ್ ಹೆಲಿಕಾಪ್ಟರ್‌ಗಳ ಬಳಕೆಯ ವೇಳೆ ನಡೆದ ಅಪಘಾತದಲ್ಲಿ ಬಲಿಯಾಗಿದ್ದಾರೆ ಎಂದಿದ್ದಾರೆ.

ಚೀತಾ ಮತ್ತು ಚೇತಕ್ ಹೆಲಿಕಾಪ್ಟರ್‌ಗಳು 1960ರ ಕಾಲದ ವಿನ್ಯಾಸ ಹೊಂದಿದ್ದು, ಅದೇ ವಿನ್ಯಾಸದ ಆಧಾರದಲ್ಲಿ ನಿರ್ಮಾಣಗೊಳ್ಳುತ್ತಿವೆ. ಇಂದಿನ ಪರಿಸ್ಥಿತಿಗೆ ಹಳತಾಗಿರುವ ಈ ಮಾದರಿಯ 400 ಹೆಲಿಕಾಪ್ಟರ್‌ಗಳು ಭಾರತದಲ್ಲಿ ಕಾರ್ಯಾಚರಿಸುತ್ತಿವೆ. ಅವುಗಳ ಬದಲಿಗೆ ಸೇನೆ ನೂತನ ಎಲ್‌ಯುಎಚ್ ಗಳನ್ನು ಪಡೆದುಕೊಳ್ಳಲಿದೆ.

ಹೆಚ್ಚಲಿದೆ ಉದ್ಯೋಗಾವಕಾಶಗಳು

ತುಮಕೂರು ಜಿಲ್ಲೆಯಲ್ಲಿ 7 ಇಂಜಿನಿಯರಿಂಗ್ ಕಾಲೇಜುಗಳು, 60 ಐಟಿಐಗಳು, ಹಾಗೂ 16 ಪಾಲಿಟೆಕ್ನಿಕ್ ಕಾಲೇಜುಗಳಿವೆ. ಎಚ್ಎಎಲ್‌ನಲ್ಲಿ ಉದ್ಯೋಗಾವಕಾಶಗಳನ್ನು ಪಡೆಯಲು ಪದವಿ ಪ್ರಮಾಣ ಪತ್ರಕ್ಕಿಂತಲೂ ಕೌಶಲ್ಯ ಹೆಚ್ಚು ಮುಖ್ಯವಾಗುತ್ತದೆ. ಆದ್ದರಿಂದ ಇಂಜಿನಿಯರಿಂಗ್ ಪದವಿ ಪಡೆದಿರುವ ವಿದ್ಯಾರ್ಥಿಗಳಿಗೆ ಅಪ್ರೆಂಟಿಸ್ ಕಾರ್ಯಕ್ರಮ ಆಯೋಜಿಸಲಾಗುತ್ತದೆ. ಈ ತರಬೇತಿ ಪಡೆದ ಬಳಿಕ, ರಾಷ್ಟ್ರ ಮಟ್ಟದಲ್ಲಿ ಪರೀಕ್ಷೆಯನ್ನು ಎದುರಿಸಿ, ಅವರು ಎಚ್ಎಎಲ್‌ನಲ್ಲಿ ಉದ್ಯೋಗ ಪಡೆಯಬಹುದು.

ಪಾಲಿಟೆಕ್ನಿಕ್ ವಿದ್ಯಾರ್ಥಿಗಳೂ ಇದೇ ಮಾದರಿಯನ್ನು ಅನುಸರಿಸಿ ಉದ್ಯೋಗ ಪಡೆಯಬೇಕಾಗುತ್ತದೆ. ಅದೇ ರೀತಿ ಐಟಿಐ ವಿದ್ಯಾರ್ಥಿಗಳಿಗೂ ಅವಕಾಶ ಸೃಷ್ಟಿಸಲಾಗುತ್ತಿದೆ. ಒಟ್ಟಿನಲ್ಲಿ ಈ ತರಬೇತಿ ಪಡೆದವರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಪ್ರಸ್ತುತ ಟಾಟಾ ಟೆಕ್ನಾಲಜಿ ಸಂಸ್ಥೆ ಏಳು ಐಟಿಐಗಳೊಡನೆ ಸಹಯೋಗ ಹೊಂದಿ, ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ.

ಎಚ್ಎಎಲ್‌ ಚಳ್ಳಕೆರೆಯಲ್ಲಿ ಈಗಾಗಲೇ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಜೊತೆಗೂಡಿ, 75,000 ಚದರ ಅಡಿಗಳ ಕಟ್ಟಡ ನಿರ್ಮಾಣಗೊಳಿಸಿ, 250 ಜನರಿಗೆ ಏರೋಸ್ಪೇಸ್ ಮತ್ತು ಅಲೈಡ್ ಸೇವೆಗಳ ತರಬೇತಿ ಒದಗಿಸುತ್ತಿದೆ. ಈ ತರಬೇತಿಯೂ ಉದ್ಯೋಗಾವಕಾಶಗಳನ್ನು ಪಡೆಯಲು ಅನುಕೂಲಕರವಾಗಿದೆ.

ಗುಬ್ಬಿಯಲ್ಲಿ ೪೦೦೦ ಜನರಿಗೆ ಉದ್ಯೋಗ

ಗುಬ್ಬಿಯ ಹೆಲಿಕಾಪ್ಟರ್ ಘಟಕದಿಂದ ನೇರವಾಗಿ 4,000 ಜನರಿಗೆ ಉದ್ಯೋಗ ಲಭ್ಯವಾಗಲಿದೆ ಎನ್ನಲಾಗುತ್ತಿದೆ. ಗಮನಿಸಬೇಕಾದ ಅಂಶವೆಂದರೆ, 4,000 ಅತಿಸಣ್ಣ ಉದ್ಯಮಗಳು, 700 ಸಣ್ಣ ಉದ್ಯಮಗಳು ಹಾಗೂ 7 ಮಧ್ಯಮ ಗಾತ್ರದ ಉದ್ಯಮಗಳಿವೆ. ಈ ಉದ್ಯಮಗಳಲ್ಲಿ ಎಚ್ಎಎಲ್‌ಗೆ ಅಗತ್ಯವಿರುವ ಉತ್ಪಾದನೆ ನಡೆಸುವ ಸಂಸ್ಥೆಗಳು ಹೆಚ್ಚಿನ ಉತ್ಪಾದನೆ ಆರಂಭಿಸುತ್ತವೆ. ಆ ಮೂಲಕವೂ ಪರೋಕ್ಷವಾಗಿ ಉದ್ಯೋಗ ಸೃಷ್ಟಿಯಾಗುತ್ತದೆ. ಜೊತೆಗೆ ವಸಂತ ನರಸಾಪುರದಲ್ಲಿ ನಾಲ್ಕನೇ ಹಂತದ ಅಭಿವೃದ್ಧಿಯಾಗುತ್ತಿದ್ದು, ಅಲ್ಲೂ ಎಚ್ಎಎಲ್‌ನ್ನು ಗಮನದಲ್ಲಿಟ್ಟುಕೊಂಡು 3-4,000 ಉದ್ಯಮಗಳು ಬರಲಿದ್ದು, ಉದ್ಯೋಗ ಸೃಷ್ಟಿಯಾಗಲಿದೆ.

ಹೀಗೆ ಉದ್ಯೋಗ ಸೃಷ್ಟಿ ಹೆಚ್ಚಾದಾಗ, ಆ ಹೆಚ್ಚಿನ ಜನರಿಗೆ ಪೂರಕ ಸೇವೆಗಳಾದ ಟ್ಯಾಕ್ಸಿ, ಹೋಟೆಲ್ ಹಾಗೂ ರಿಯಲ್ ಎಸ್ಟೇಟ್ ಉದ್ಯಮಗಳೂ ಬೆಳೆಯುತ್ತವೆ. ಆ ಮೂಲಕ ತುಮಕೂರು ಮತ್ತು ಗುಬ್ಬಿ ಸುತ್ತಮುತ್ತಲಿನ ಪ್ರದೇಶಗಳು ಅಭಿವೃದ್ಧಿಯಾಗುತ್ತವೆ.

ಇದನ್ನೂ ಓದಿ : India energy week 2023: ಪರಿಸರಕ್ಕೆ ಹಾನಿ ಮಾಡುವ ಪ್ಲಾಸ್ಟಿಕ್ ಬಾಟಲಿಗಳಿಂದ ಬಟ್ಟೆ! ಹೇಗೆ ತಯಾರಿಸುತ್ತಾರೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

VISTARANEWS.COM


on

ಬೆಂಗಳೂರು: ಜಿಬಿಎ ಚುನಾವಣೆ ದಿನಾಂಕ ನಿಗದಿಗೆ ದಿನಗಣನೆ ಆರಂಭವಾಗಿದೆ. ಈ ಸಂಬಂಧ ರಾಜ್ಯ ಚುನಾವಣಾ ಆಯೋಗ ಮಹತ್ವದ ಸಭೆ ನಡೆಸಿದೆ. ಸಭೆ ಬಳಿಕ ಮಾತಾಡಿದ ರಾಜ್ಯ ಚುನಾವಣಾ ಆಯೋಗದ ಆಯಕ್ತ ಸಂಗ್ರೇಶಿ, ʼʼಚುನಾವಣೆಯ ಎಲ್ಲಾ ಪ್ರಕ್ರಿಯೆ ಮುಗಿಸಲಾಗಿದೆ. ಕೇವಲ ದಿನಾಂಕ ನಿಗದಿ ಮಾತ್ರ ಬಾಕಿ ಉಳಿದಿದೆ. ಶಾಲೆ, ಕಾಲೇಜು, ವಿಧಾನಸಭಾ ಅಧಿವೇಶನ ಇತ್ಯಾದಿ ಗಮನದಲ್ಲಿಟ್ಟುಕೊಂಡು ಡೇಟ್‌ ಫಿಕ್ಸ್‌ ಮಾಡಬೇಕು. ಜೂನ್‌ ೩೦ರ ಒಳಗಾಗಿ ಚುನಾವಣೆ ಮುಗಿಸುವಂತೆ ಸುಪ್ರೀಂ ಕೋರ್ಟ್‌ ಹೇಳಿದೆ. ಜೂನ್‌ ೧೪ರಿಂದ ಜೂನ್‌ ೨೪ರ ಒಳಗೆ ಒಂದು ಡೇಟ್‌ ಹೇಳಿದ್ದೇವೆ. ಕೆಲವೇ ದಿನಗಳಲ್ಲಿ ಅಂತಿಮ ದಿನಾಂಕ ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಚುನಾವಣೆ ಮುಂದೂಡುವ ಅಧಿಕಾರ ರಾಜ್ಯ ಚುನಾವಣಾ ಆಯೋಗಕ್ಕೆ ಇಲ್ಲ, ಅದು ಸುಪ್ರೀಂ ಕೋರ್ಟ್‌ ಪರಮಾಧಿಕಾರ ಎಂದು ಸಂಗ್ರೇಶಿ ಹೇಳಿದ್ದಾರೆ.

Continue Reading

Latest

ದಾವಣಗೆರೆ ದಕ್ಷಿಣ ʼಕೈʼ ವಶ, ಸಮರ್ಥ್‌ಗೆ ವಿಜಯಮಾಲೆ

VISTARANEWS.COM


on

ಕಾಂಗ್ರೆಸ್‌ ಪಕ್ಷಕ್ಕೆ ಪ್ರತಿಷ್ಠೆಯ ಕಣವಾಗಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌‌‌ ಅಭ್ಯರ್ಥಿ ಸಮರ್ಥ್​ ಮಲ್ಲಿಕಾರ್ಜುನ್‌‌‌‌‌‌ ವಿಜಯ ಪತಾಕೆ ಹಾರಿಸಿದ್ದಾರೆ. ದಿವಂಗತ ಶಾಮನೂರು ಶಿವಶಂಕರಪ್ಪ ಮೊಮ್ಮಗ ಹಾಗೂ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌, ಸಂಸದೆ ಪ್ರಭಾ ಮಲ್ಲಿಕಾರ್ಜುನ್‌ ಅವರ ಪುತ್ರ ಸಮರ್ಥ್‌ ಉಪಸಮರದಲ್ಲಿ ಗೆದ್ದು ಬೀಗಿದ್ದಾರೆ. ಇವರಿಗೆ ಪ್ರಬಲ ಪೈಪೋಟಿ ನೀಡಿದ್ದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ ಕರಿಯಪ್ಪ ಸೋಲನುಭವಿಸಿದ್ದಾರೆ. ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ಏ.9ರಂದು ಉಪಚುನಾವಣೆ ನಡೆದಿತ್ತು.

Continue Reading

Latest

ಬಾಗಲಕೋಟೆಯಲ್ಲಿ ಕಾಂಗ್ರೆಸ್‌‌‌ನ ಉಮೇಶ್‌ ಮೇಟಿ ಭರ್ಜರಿ ಗೆಲುವು

VISTARANEWS.COM


on

ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌‌ ಮೇಟಿ ಗೆಲುವು ಸಾಧಿಸಿದ್ದಾರೆ. 21,866 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಮಠ ವಿರುದ್ಧ ಕಾಂಗ್ರೆಸ್‌‌ನ ಉಮೇಶ್‌ ಮೇಟಿ ಗೆಲುವು ಪಡೆದಿದ್ದಾರೆ. ಉಮೇಶ್‌ ಮೇಟಿ 97,941 ಮತಗಳನ್ನು ಪಡೆದಿದ್ರೆ, ವೀರಣ್ಣ ಚರಂತಿಮಠ 76,075 ಮತಗಳನ್ನು ಪಡೆದುಕೊಂಡಿದ್ದರು. ಬಾಗಲಕೋಟೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ಉಮೇಶ್‌‌ ಮೇಟಿಯವರ ತಂದೆ ಹೆಚ್‌.ವೈ.ಮೇಟಿ ಯವರ ನಿಧನದಿಂದ ತೆರವಾಗಿದ್ದ ಕ್ಷೇತ್ರವನ್ನು ತನ್ನಲ್ಲೇ ಉಳಿಸಿಕೊಳ್ಳುವಲ್ಲಿ ಕಾಂಗ್ರೆಸ್‌ ಪಕ್ಷ ಯಶಸ್ವಿಯಾಗಿದೆ.

Continue Reading

Latest

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

VISTARANEWS.COM


on

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ‘ಡಾಲಿ’ ಧನಂಜಯ್ ಹಾಗೂ ಧನ್ಯತಾ ದಂಪತಿಗೆ ಗಂಡು ಮಗುವಿನ ಜನನವಾಗಿದೆ. ಗಂಡು ಮಗು ಜನಿಸಿದ ವಿಚಾರವನ್ನು ಧನಂಜಯ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಗುವಿನ ಪುಟ್ಟ ಕೈಗಳ ಫೋಟೋ ಶೇರ್‌ ಮಾಡಿದ್ದಾರೆ. ನಟ ಧನಂಜಯ್ ಹಾಗೂ ವೈದ್ಯೆ ಧನ್ಯತಾ 2025ರ ಫೆಬ್ರವರಿ 16ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾದ ಒಂದು ವರ್ಷದ ಸಂಭ್ರಮದ ಬೆನ್ನಲ್ಲೇ ಈ ಜೋಡಿ ಈಗ ಗಂಡು ಮಗುವನ್ನು ಸ್ವಾಗತಿಸಿದೆ.

Continue Reading
Advertisement
Rakshit Shetty Richard Anthony Produce By Hombale
ದೇಶ3 hours ago

ಸುವೇಂದು ಅಧಿಕಾರಿ ಪ.ಬಂಗಾಳದ ಹೊಸ ಸಿಎಂ, ಶನಿವಾರ ಪ್ರಮಾಣವಚನ

ಪ್ರಮುಖ ಸುದ್ದಿ3 hours ago

ಹಡಗಿನಲ್ಲಿ ಹ್ಯಾಂಟವೈರಸ್‌ ದಾಂಗುಡಿ, ಕೊರೋನಾವನ್ನೂ ಮೀರಿಸುತ್ತಾ ಈ ಪಿಡುಗು?

ಕರ್ನಾಟಕ3 hours ago

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

ದೇಶ1 day ago

ಬಂಗಾಳದಲ್ಲಿ ಬಿಜೆಪಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ, ಯಾರ ಪಾಲಾಗಲಿದೆ ಮುಖ್ಯಮಂತ್ರಿ ಗದ್ದುಗೆ?

ರಾಜಕೀಯ1 day ago

ವಿಜಯ್‌ ಪ್ರಮಾಣವಚನಕ್ಕೆ ಬ್ರೇಕ್‌, ರಾಷ್ಟ್ರಪತಿಗೆ ಟಿವಿಕೆ ಪತ್ರಚೆನ್ನೈ

ರಾಜಕೀಯ1 day ago

ತಮಿಳುನಾಡು ರಾಜಕೀಯಕ್ಕೆ ರೋಚಕ ಟ್ವಿಸ್ಟ್‌, ದಳಪತಿ ಪ್ರಮಾಣವಚನಕ್ಕೆ ಬ್ರೇಕ್‌, ಡಿಎಂಕೆ-ಎಐಎಡಿಎಂಕೆ ಮೈತ್ರಿ ಸಾಧ್ಯತೆ

ಕ್ರೈಂ1 day ago

ಪ.ಬಂಗಾಳ ಶೂಟೌಟ್‌ಗೆ ಟ್ವಿಸ್ಟ್‌, ಅಸಲಿಗೆ ಸುವೇಂದು ಟಾರ್ಗೆಟ್‌ ಆಗಿದ್ರಾ?

ಕ್ರೈಂ1 day ago

ಪಶ್ಚಿಮ ಬಂಗಾಳದಲ್ಲಿ ರಕ್ತದೋಕುಳಿ, ಸುವೇಂದು ಅಧಿಕಾರಿ ಪಿಎ ಚಂದ್ರನಾಥ್‌ ಶೂಟೌಟ್‌‌..!

Latest2 days ago

ಪಶ್ಚಿಮ ಬಂಗಾಳದಲ್ಲಿ ಕೇಸರಿ ಪರ್ವ: ಯಾರಾಗಲಿದ್ದಾರೆ ʼಸಿಎಂʼ?

Latest2 days ago

ದಳಪತಿʼ ಪಟ್ಟಾಭಿಷೇಕಕ್ಕೆ ಕ್ಷಣಗಣನೆ : ತಮಿಳುನಾಡು ರಾಜಕಾರಣದಲ್ಲಿ ಬಿರುಗಾಳಿ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌