ಕರ್ನಾಟಕ
HAL Helicopter Factory : ಇಲ್ಲಿ ರೆಡಿಯಾಗಿದೆ, 20,000 ಅಡಿ ಎತ್ತರದಲ್ಲಿ ಹಾರಬಲ್ಲ, ನೀರಲ್ಲೂ ಇಳಿಯಬಲ್ಲ ಎಲ್ಯುಎಚ್ ಹೆಲಿಕಾಪ್ಟರ್
ತುಮಕೂರಿನ ಗುಬ್ಬಿಯಲ್ಲಿ ಸ್ಥಾಪನೆಯಾಗಿರುವ ಹೆಲಿಕಾಪ್ಟರ್ ಉತ್ಪಾದನಾ ಫ್ಯಾಕ್ಟರಿಯ ಸಾಮರ್ಥ್ಯವೇನು? ಅಲ್ಲಿ ತಯಾರಾಗುವ ಹೆಲಿಕಾಪ್ಟರ್ಗಳು ಯಾವುದಕ್ಕೆ ಬಳಕೆ ಆಗುತ್ತವೆ ಎಂಬುದರ ಸಂಪೂರ್ಣ ವಿವರ ಇಲ್ಲಿದೆ.
ಗಿರೀಶ್ ಲಿಂಗಣ್ಣ, ಬಾಹ್ಯಾಕಾಶ ಮತ್ತು ರಕ್ಷಣಾ ವಿಶ್ಲೇಷಕ
ರಾಜ್ಯ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಬಿದರೆಹಳ್ಳ ಕಾವಲ್ನಲ್ಲಿ ನಿರ್ಮಿಸಲಾಗಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ನ (ಎಚ್ಎಎಲ್) ನೂತನ ಹೆಲಿಕಾಪ್ಟರ್ ಉತ್ಪಾದನಾ ಘಟಕವನ್ನು (HAL Helicopter Factory) ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಲೋಕಾರ್ಪಣೆ ಮಾಡಿದರು. ಇದು ಏಷ್ಯಾದ ಅತಿದೊಡ್ಡ ಹೆಲಿಕಾಪ್ಟರ್ ಉತ್ಪಾದನಾ ಘಟಕ ಎಂಬ ಹೆಗ್ಗಳಿಕೆಯನ್ನು ಹೊಂದಿದೆ.
615 ಎಕರೆ ಭೂಪ್ರದೇಶದಲ್ಲಿ ವಿಸ್ತಾರವಾಗಿ ಹರಡಿರುವ ಈ ಘಟಕದ ಸ್ಥಾಪನೆಗೆ ಪ್ರಧಾನಿ ಮೋದಿ ಅವರು 2016ರಲ್ಲಿ ಶಂಕುಸ್ಥಾಪನೆ ನಡೆಸಿದ್ದರು. ಈ ಹೆಲಿಕಾಪ್ಟರ್ ಉತ್ಪಾದನಾ ಘಟಕದಲ್ಲಿ ಉತ್ಪಾದನೆ, ಪರೀಕ್ಷೆಗಳಿಗೆ ಬೇಕಾದ ವ್ಯವಸ್ಥೆಗಳು ಇವೆ. 3 ಟನ್ನಿಂದ 12 ಟನ್ ತೂಕದ ತನಕ ವಿವಿಧ ಶ್ರೇಣಿಗಳ ಹೆಲಿಕಾಪ್ಟರ್ ನಿರ್ಮಾಣ ಸಾಮರ್ಥ್ಯ ಈ ಸ್ಥಾವರಕ್ಕಿದೆ.
ಎಲ್ಯುಎಚ್ ಹೊಸ ತಲೆಮಾರಿನ ಹೆಲಿಕಾಪ್ಟರ್
ಇಲ್ಲಿ ಉತ್ಪಾದನೆಗೊಳ್ಳಲಿರುವ ಲೈಟ್ ಯುಟಿಲಿಟಿ ಹೆಲಿಕಾಪ್ಟರ್ (Light Utility Helicopter-LHU) ಒಂದು 3 ಟನ್ ವರ್ಗದ ಹೊಸ ತಲೆಮಾರಿನ ಹೆಲಿಕಾಪ್ಟರ್ ಆಗಿದ್ದು, ಎಚ್ಎಎಲ್ ಇದನ್ನು ಮಿಲಿಟರಿ ಮತ್ತು ನಾಗರಿಕ ಎರಡೂ ಅಗತ್ಯತೆಗಳನ್ನು ಪೂರೈಸಲು ನಿರ್ಮಿಸಿದೆ.
ಎಲ್ಯುಎಚ್ ಎನ್ನುವುದು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್ಎಎಲ್) ನಿರ್ಮಿಸಿರುವ ಇತ್ತೀಚಿನ ಹೆಲಿಕಾಪ್ಟರ್ ಆಗಿದ್ದು, ಸಮುದ್ರ ಮಟ್ಟದಿಂದ 20,000 ಅಡಿ ಎತ್ತರದಲ್ಲಿ ಕಾರ್ಯಾಚರಣೆ ನಡೆಸಬಲ್ಲ ಸಾಮರ್ಥ್ಯ ಹೊಂದಿದೆ. ಈ ಆಧುನಿಕ ಹೆಲಿಕಾಪ್ಟರ್ ಗಾಜಿನ ಕಾಕ್ಪಿಟ್, ಡ್ಯುವಲ್ ಕಂಟ್ರೋಲ್ ಮತ್ತು ಒಂದು ಸಫ್ರಾನ್ ಅರ್ಡಿಡೆನ್ 1ಯು1 ಟರ್ಬೋಶಾಫ್ಟ್ ಇಂಜಿನ್ ಹೊಂದಿದೆ. ಈ ಹೆಲಿಕಾಪ್ಟರ್ ಅತ್ಯಂತ ಯಶಸ್ವಿಯಾಗಿದ್ದು, ಜಾಗತಿಕ ಗುಣಮಟ್ಟಗಳಿಗೆ ಅನುಗುಣವಾಗಿ ನಿರ್ಮಿಸಲಾಗಿದೆ. ಈ ಯಶಸ್ಸಿನ ಬಳಿಕ ಹೆಲಿಕಾಪ್ಟರ್ ಅನ್ನು ನಾಗರಿಕ ಬಳಕೆಗೆ ಬೇಕಾದಂತೆ ತಯಾರಿಸುವ ಪ್ರಯತ್ನಗಳೂ ಆರಂಭಗೊಂಡಿವೆ.
ಭಾರತೀಯ ಸೇನಾಪಡೆಗಳಿಗೆ 20,000 ಅಡಿಗಳಿಗಿಂತ ಹೆಚ್ಚು ಎತ್ತರದಲ್ಲಿ ಕಾರ್ಯಾಚರಣೆ ನಡೆಸಬಲ್ಲ ಹೆಲಿಕಾಪ್ಟರ್ ಅಗತ್ಯವಿದೆ. ಈ ಅಗತ್ಯತೆ ಹೆಲಿಕಾಪ್ಟರ್ಗೆ ವಿನೂತನ ಸವಾಲನ್ನು ತಂದೊಡ್ಡಿದೆ. ಇಂತಹ ಎತ್ತರದ ಪ್ರದೇಶದಲ್ಲಿ ಪ್ರಚಲಿತ ಗಾಳಿಯ ಸಾಂದ್ರತೆ ಅತ್ಯಂತ ಕಡಿಮೆಯಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ ಕೆಲವೇ ಕೆಲವು ಹೆಲಿಕಾಪ್ಟರ್ಗಳು ಮಾತ್ರ ಕಾರ್ಯಾಚರಿಸುವ ಸಾಮರ್ಥ್ಯ ಹೊಂದಿವೆ. ಅಂತಹಾ ಹೆಲಿಕಾಪ್ಟರ್ಗಳಲ್ಲಿ ಎಲ್ಯುಎಚ್ ಸಹ ಒಂದಾಗಿದೆ.
ಏನೇನು ವಿಶೇಷ ವ್ಯವಸ್ಥೆಗಳಿವೆ?
-ಇದು ಅತ್ಯಾಧುನಿಕ ತಂತ್ರಜ್ಞಾನಗಳಾದ ಗಾಜಿನ ಕಾಕ್ಪಿಟ್ ಹಾಗೂ ಬಹು ಕಾರ್ಯಗಳ ಡಿಸ್ಪ್ಲೇ ವ್ಯವಸ್ಥೆಗಳನ್ನು ಹೊಂದಿದೆ.
– ಎಲ್ಯುಎಚ್ 127 ನಾಟ್ಸ್ (ಪ್ರತಿ ಗಂಟೆಗೆ 230 ಕಿಲೋಮೀಟರ್ ಅಥವಾ 146 ಮೈಲಿ) ವೇಗದಲ್ಲಿ ಚಲಿಸಬಲ್ಲದಾಗಿದ್ದು, 350 ಕಿಲೋಮೀಟರ್ (217 ಮೈಲಿ) ಗರಿಷ್ಠ ವ್ಯಾಪ್ತಿ ಹೊಂದಿದೆ.
-ಇದು 500 ಕೆಜಿ (1,102) ಪೌಂಡ್ಗಳಷ್ಟು ಗರಿಷ್ಠ ಭಾರ ಹೊತ್ತು ಚಲಿಸಬಲ್ಲದು.
೩೯೪ ಲೈಟ್ ಹೆಲಿಕಾಪ್ಟರ್ಗಳು ಬೇಕು
ಎಲ್ಯುಎಚ್ ಭಾರತೀಯ ಸೇನೆ ಮತ್ತು ವಾಯುಪಡೆಗಳಿಗೆ ಅತ್ಯಂತ ಅಗತ್ಯವಾಗಿದ್ದ 394 ಲೈಟ್ ಹೆಲಿಕಾಪ್ಟರ್ಗಳ ಅವಶ್ಯಕತೆಯನ್ನು ಪೂರೈಸಲಿದ್ದು, ಆ ಮೂಲಕ ಹಳೆಯದಾಗುತ್ತಿರುವ ಚೀತಾ (ಲಾಮಾ) ಹಾಗೂ ಚೇತಕ್ (ಅಲೌಟ್ಟೆ III) ಹೆಲಿಕಾಪ್ಟರ್ಗಳ ಬದಲಿಗೆ ಕಾರ್ಯನಿರ್ವಹಿಸಲಿವೆ. ಭೂಸೇನೆಗೆ 126 ಹೆಲಿಕಾಪ್ಟರ್ಗಳ ಅಗತ್ಯವಿದ್ದರೆ, ವಾಯು ಸೇನೆಗೆ 61 ಹೆಲಿಕಾಪ್ಟರ್ಗಳ ಅವಶ್ಯಕತೆಯಿದೆ.
ಮುಂದಿನ ದಿನಗಳಲ್ಲಿ ನಾಗರಿಕ ಬಳಕೆಗೂ ಲಭ್ಯ
ಮಿಲಿಟರಿ ಅವಶ್ಯಕತೆಗಳನ್ನು ಪೂರೈಸುವ ಈ ಹೆಲಿಕಾಪ್ಟರ್ಗಳು ನಾಗರಿಕ ಬಳಕೆಗೂ ಲಭ್ಯವಾಗಲಿವೆ. ಮೂಲಗಳ ಮಾಹಿತಿಯ ಪ್ರಕಾರ, ಎಚ್ಎಎಲ್ 600ಕ್ಕೂ ಹೆಚ್ಚು ಎಲ್ಯುಎಚ್ಗಳನ್ನು ನಾಗರಿಕ ಬಳಕೆಗೆ ಪೂರೈಸಲಿದೆ. ಆರಂಭದಲ್ಲಿ ಈ ಬಳಕೆದಾರರು ಭಾರತೀಯರೇ ಆಗಿರಲಿದ್ದು, ಪ್ರವಾಸೋದ್ಯಮ, ವಾಯು ಆಂಬ್ಯುಲೆನ್ಸ್, ಇತ್ಯಾದಿ ಕ್ಷೇತ್ರಗಳಲ್ಲಿ ಬಳಕೆಯಾಗಲಿವೆ. 6-7 ಆಸನಗಳ ಸಾಮರ್ಥ್ಯ ಹೊಂದಿರುವ ಈ ಹೆಲಿಕಾಪ್ಟರ್ಗಳನ್ನು ನಾಲ್ಕು ಆಸನಗಳ ವಿಐಪಿ ಹೆಲಿಕಾಪ್ಟರ್ ಆಗಿಯೂ ಬಳಸಬಹುದಾಗಿದೆ.
ಎಲ್ಯುಎಚ್ ಹೆಲಿಕಾಪ್ಟರ್ಗಳನ್ನು 200-250 ಗಂಟೆಗಳ ಹಾರಾಟ ನಡೆಸಿ, ಸರ್ವಿಸ್ ನಡೆಸಿದ ಬಳಿಕ ಅದರ ಪ್ರಮುಖ ಮೂರು ಘಟಕಗಳಾದ ಗೇರ್ಬಾಕ್ಸ್, ಇಂಜಿನ್ ಹಾಗೂ ರೋಟಾರ್ಗಳು ಅತ್ಯುತ್ತಮ ಸ್ಥಿತಿಯಲ್ಲಿದ್ದವು.
ಏಳೇ ನಿಮಿಷದಲ್ಲಿ ರೆಕ್ಕೆ ಮಡಚಿ ಇಡಬಹುದು!
ಎಲ್ಯುಎಚ್ನ ರೋಟರ್ ವ್ಯವಸ್ಥೆಯಲ್ಲಿ ಇದೇ ಮೊದಲ ಬಾರಿಗೆ ‘ಟೂ ಸೆಗ್ಮೆಂಟ್ ಬ್ಲೇಡ್’ ವ್ಯವಸ್ಥೆಯನ್ನು ಅಳವಡಿಸಲಾಗಿದ್ದು, ಇದು ಕಾಂಪ್ಯಾಕ್ಟ್ ಫೋಲ್ಡಿಂಗ್ ಆಯಾಮ ಒದಗಿಸುತ್ತದೆ. ಅಂದರೆ, ಏಳು ನಿಮಿಷಗಳ ಒಳಗೆ ಹೆಲಿಕಾಪ್ಟರ್ ರೆಕ್ಕೆಗಳನ್ನು ಮಡಚಬಹುದಾಗಿದ್ದು, ವಿಮಾನ ವಾಹಕ ನೌಕೆಗಳಲ್ಲಿ ಬಳಸಬಹುದಾಗಿದೆ.
ಎಲ್ಯುಎಚ್ ನಲ್ಲಿ ಎಮರ್ಜೆನ್ಸಿ ಫ್ಲೋಟಿಂಗ್ ಗೇರ್ (ಇಎಫ್ಜಿ) ಅಳವಡಿಸಲಾಗಿದ್ದು, ಇದು ತುರ್ತು ಪರಿಸ್ಥಿತಿಯಲ್ಲಿ ನೀರಿನ ಮೇಲೆ ಭೂಸ್ಪರ್ಶ ಮಾಡಲು ಅನುಕೂಲಕರವಾಗಿದೆ. ಅದರೊಡನೆ, ಇದು ಹೆಲಿಕಾಪ್ಟರ್ ನೀರಿನ ಮೇಲೆ ಕಾರ್ಯಾಚರಣೆ ನಡೆಸಲು ಪೂರಕವಾಗಿದೆ. ಇಎಫ್ಜಿ ಉದ್ದೇಶಪೂರ್ವಕವಾಗಿ ನೀರಿನ ಮೇಲೆ ಭೂಸ್ಪರ್ಶ ನಡೆಸುವ ‘ಫ್ಲೋಟ್ ಲ್ಯಾಂಡಿಂಗ್ ಗೇರ್’ ನಿಂದ ವಿಭಿನ್ನವಾಗಿದೆ.
ಇದರ ಹಿಂದಿರುವುದು ಯೋಧರ ಪತ್ನಿಯರ ಮನವಿ
ಭಾರತೀಯ ಸೇನಾ ಯೋಧರ ಪತ್ನಿಯರ ಸಂಘದ ಸದಸ್ಯೆಯರು ಪ್ರಧಾನಿ ನರೇಂದ್ರ ಮೋದಿಯವರ ಬಳಿ ಹಳೆಯದಾಗಿರುವ ಚೀತಾ ಮತ್ತು ಚೇತಕ್ ಹೆಲಿಕಾಪ್ಟರ್ಗಳ ಬಳಕೆಯ ಮೂಲಕ ಸೇನೆ ತನ್ನ ಯೋಧರನ್ನು ಬಲಿ ಕೊಡುತ್ತಿದೆ ಎಂದಿದ್ದರು.
ತಾವು ಬರೆದ ಪತ್ರದಲ್ಲಿ ಇಂಡಿಯನ್ ಆರ್ಮಿ ವೈವ್ಸ್ ಅಜಿಟೇಷನ್ ಗ್ರೂಪ್ ಸದಸ್ಯೆಯರು 31 ಮಿಲಿಟರಿ ಪೈಲಟ್ಗಳು 2017ರ ಬಳಿಕ ಪ್ರಾಣಾರ್ಪಣೆ ಮಾಡಿದ್ದಾರೆ. ದುರದೃಷ್ಟವಶಾತ್ ಇವರು ಯಾರೂ ಶತ್ರುಗಳ ದಾಳಿಯಿಂದ ಬಲಿಯಾಗಿಲ್ಲ. ಬದಲಿಗೆ ಚೀತಾ ಮತ್ತು ಚೇತಕ್ ಹೆಲಿಕಾಪ್ಟರ್ಗಳ ಬಳಕೆಯ ವೇಳೆ ನಡೆದ ಅಪಘಾತದಲ್ಲಿ ಬಲಿಯಾಗಿದ್ದಾರೆ ಎಂದಿದ್ದಾರೆ.
ಚೀತಾ ಮತ್ತು ಚೇತಕ್ ಹೆಲಿಕಾಪ್ಟರ್ಗಳು 1960ರ ಕಾಲದ ವಿನ್ಯಾಸ ಹೊಂದಿದ್ದು, ಅದೇ ವಿನ್ಯಾಸದ ಆಧಾರದಲ್ಲಿ ನಿರ್ಮಾಣಗೊಳ್ಳುತ್ತಿವೆ. ಇಂದಿನ ಪರಿಸ್ಥಿತಿಗೆ ಹಳತಾಗಿರುವ ಈ ಮಾದರಿಯ 400 ಹೆಲಿಕಾಪ್ಟರ್ಗಳು ಭಾರತದಲ್ಲಿ ಕಾರ್ಯಾಚರಿಸುತ್ತಿವೆ. ಅವುಗಳ ಬದಲಿಗೆ ಸೇನೆ ನೂತನ ಎಲ್ಯುಎಚ್ ಗಳನ್ನು ಪಡೆದುಕೊಳ್ಳಲಿದೆ.
ಹೆಚ್ಚಲಿದೆ ಉದ್ಯೋಗಾವಕಾಶಗಳು
ತುಮಕೂರು ಜಿಲ್ಲೆಯಲ್ಲಿ 7 ಇಂಜಿನಿಯರಿಂಗ್ ಕಾಲೇಜುಗಳು, 60 ಐಟಿಐಗಳು, ಹಾಗೂ 16 ಪಾಲಿಟೆಕ್ನಿಕ್ ಕಾಲೇಜುಗಳಿವೆ. ಎಚ್ಎಎಲ್ನಲ್ಲಿ ಉದ್ಯೋಗಾವಕಾಶಗಳನ್ನು ಪಡೆಯಲು ಪದವಿ ಪ್ರಮಾಣ ಪತ್ರಕ್ಕಿಂತಲೂ ಕೌಶಲ್ಯ ಹೆಚ್ಚು ಮುಖ್ಯವಾಗುತ್ತದೆ. ಆದ್ದರಿಂದ ಇಂಜಿನಿಯರಿಂಗ್ ಪದವಿ ಪಡೆದಿರುವ ವಿದ್ಯಾರ್ಥಿಗಳಿಗೆ ಅಪ್ರೆಂಟಿಸ್ ಕಾರ್ಯಕ್ರಮ ಆಯೋಜಿಸಲಾಗುತ್ತದೆ. ಈ ತರಬೇತಿ ಪಡೆದ ಬಳಿಕ, ರಾಷ್ಟ್ರ ಮಟ್ಟದಲ್ಲಿ ಪರೀಕ್ಷೆಯನ್ನು ಎದುರಿಸಿ, ಅವರು ಎಚ್ಎಎಲ್ನಲ್ಲಿ ಉದ್ಯೋಗ ಪಡೆಯಬಹುದು.
ಪಾಲಿಟೆಕ್ನಿಕ್ ವಿದ್ಯಾರ್ಥಿಗಳೂ ಇದೇ ಮಾದರಿಯನ್ನು ಅನುಸರಿಸಿ ಉದ್ಯೋಗ ಪಡೆಯಬೇಕಾಗುತ್ತದೆ. ಅದೇ ರೀತಿ ಐಟಿಐ ವಿದ್ಯಾರ್ಥಿಗಳಿಗೂ ಅವಕಾಶ ಸೃಷ್ಟಿಸಲಾಗುತ್ತಿದೆ. ಒಟ್ಟಿನಲ್ಲಿ ಈ ತರಬೇತಿ ಪಡೆದವರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಪ್ರಸ್ತುತ ಟಾಟಾ ಟೆಕ್ನಾಲಜಿ ಸಂಸ್ಥೆ ಏಳು ಐಟಿಐಗಳೊಡನೆ ಸಹಯೋಗ ಹೊಂದಿ, ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ.
ಎಚ್ಎಎಲ್ ಚಳ್ಳಕೆರೆಯಲ್ಲಿ ಈಗಾಗಲೇ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ಜೊತೆಗೂಡಿ, 75,000 ಚದರ ಅಡಿಗಳ ಕಟ್ಟಡ ನಿರ್ಮಾಣಗೊಳಿಸಿ, 250 ಜನರಿಗೆ ಏರೋಸ್ಪೇಸ್ ಮತ್ತು ಅಲೈಡ್ ಸೇವೆಗಳ ತರಬೇತಿ ಒದಗಿಸುತ್ತಿದೆ. ಈ ತರಬೇತಿಯೂ ಉದ್ಯೋಗಾವಕಾಶಗಳನ್ನು ಪಡೆಯಲು ಅನುಕೂಲಕರವಾಗಿದೆ.
ಗುಬ್ಬಿಯಲ್ಲಿ ೪೦೦೦ ಜನರಿಗೆ ಉದ್ಯೋಗ
ಗುಬ್ಬಿಯ ಹೆಲಿಕಾಪ್ಟರ್ ಘಟಕದಿಂದ ನೇರವಾಗಿ 4,000 ಜನರಿಗೆ ಉದ್ಯೋಗ ಲಭ್ಯವಾಗಲಿದೆ ಎನ್ನಲಾಗುತ್ತಿದೆ. ಗಮನಿಸಬೇಕಾದ ಅಂಶವೆಂದರೆ, 4,000 ಅತಿಸಣ್ಣ ಉದ್ಯಮಗಳು, 700 ಸಣ್ಣ ಉದ್ಯಮಗಳು ಹಾಗೂ 7 ಮಧ್ಯಮ ಗಾತ್ರದ ಉದ್ಯಮಗಳಿವೆ. ಈ ಉದ್ಯಮಗಳಲ್ಲಿ ಎಚ್ಎಎಲ್ಗೆ ಅಗತ್ಯವಿರುವ ಉತ್ಪಾದನೆ ನಡೆಸುವ ಸಂಸ್ಥೆಗಳು ಹೆಚ್ಚಿನ ಉತ್ಪಾದನೆ ಆರಂಭಿಸುತ್ತವೆ. ಆ ಮೂಲಕವೂ ಪರೋಕ್ಷವಾಗಿ ಉದ್ಯೋಗ ಸೃಷ್ಟಿಯಾಗುತ್ತದೆ. ಜೊತೆಗೆ ವಸಂತ ನರಸಾಪುರದಲ್ಲಿ ನಾಲ್ಕನೇ ಹಂತದ ಅಭಿವೃದ್ಧಿಯಾಗುತ್ತಿದ್ದು, ಅಲ್ಲೂ ಎಚ್ಎಎಲ್ನ್ನು ಗಮನದಲ್ಲಿಟ್ಟುಕೊಂಡು 3-4,000 ಉದ್ಯಮಗಳು ಬರಲಿದ್ದು, ಉದ್ಯೋಗ ಸೃಷ್ಟಿಯಾಗಲಿದೆ.
ಹೀಗೆ ಉದ್ಯೋಗ ಸೃಷ್ಟಿ ಹೆಚ್ಚಾದಾಗ, ಆ ಹೆಚ್ಚಿನ ಜನರಿಗೆ ಪೂರಕ ಸೇವೆಗಳಾದ ಟ್ಯಾಕ್ಸಿ, ಹೋಟೆಲ್ ಹಾಗೂ ರಿಯಲ್ ಎಸ್ಟೇಟ್ ಉದ್ಯಮಗಳೂ ಬೆಳೆಯುತ್ತವೆ. ಆ ಮೂಲಕ ತುಮಕೂರು ಮತ್ತು ಗುಬ್ಬಿ ಸುತ್ತಮುತ್ತಲಿನ ಪ್ರದೇಶಗಳು ಅಭಿವೃದ್ಧಿಯಾಗುತ್ತವೆ.
ಇದನ್ನೂ ಓದಿ : India energy week 2023: ಪರಿಸರಕ್ಕೆ ಹಾನಿ ಮಾಡುವ ಪ್ಲಾಸ್ಟಿಕ್ ಬಾಟಲಿಗಳಿಂದ ಬಟ್ಟೆ! ಹೇಗೆ ತಯಾರಿಸುತ್ತಾರೆ?
ದಕ್ಷಿಣ ಕನ್ನಡ
Road Accident: ಆಟೋಗೆ ಶಾಲಾ ಬಸ್ ಡಿಕ್ಕಿ, ಐವರ ದುರ್ಮರಣ
ಬಸ್ ಡಿಕ್ಕಿಯಾದ ರಭಸಕ್ಕೆ ಆಟೋ ಸಂಪೂರ್ಣ ಛಿದ್ರವಾಗಿದ್ದು, ಆಟೋದಲ್ಲಿದ್ದ ಇಬ್ಬರು ಪುರುಷರು ಹಾಗೂ ಮೂವರು ಮಹಿಳೆಯರು ಸಾವಿಗೀಡಾಗಿದ್ದಾರೆ.
ಮಂಗಳೂರು: ಶಾಲಾ ಬಸ್ ಹಾಗೂ ಆಟೋ ನಡುವೆ (bus auto accident) ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಪ್ರಯಾಣಿಕರು ದುರ್ಮರಣ ಹೊಂದಿದ ಘಟನೆ (Road Accident) ಕೇರಳ- ಕರ್ನಾಟಕ ಗಡಿಭಾಗದಲ್ಲಿ ನಡೆದಿದೆ.
ಕೇರಳದ ಕಾಸರಗೋಡು ಜಿಲ್ಲೆಯ ಬದಿಯಡ್ಕ ಸಮೀಪ ಈ ದುರ್ಘಟನೆ ನಿನ್ನೆ ಸಂಜೆ ವೇಳೆ ನಡೆದಿದೆ. ಕಾಸರಗೋಡಿನ ಮೊಗ್ರಾಲ್ ಪುತ್ತೂರು ಎಂಬಲ್ಲಿನ ಆಟೋ ರಿಕ್ಷಾಗೆ ಪೆರ್ಲ ಸಮೀಪದ ಆಂಗ್ಲ ಮಾಧ್ಯಮ ಶಾಲೆಯ ಬಸ್ ಡಿಕ್ಕಿ ಹೊಡೆದಿದೆ. ಬಸ್ ಡಿಕ್ಕಿಯಾದ ರಭಸಕ್ಕೆ ಆಟೋ ಸಂಪೂರ್ಣ ಛಿದ್ರವಾಗಿದ್ದು, ಆಟೋದಲ್ಲಿದ್ದ ಇಬ್ಬರು ಪುರುಷರು ಹಾಗೂ ಮೂವರು ಮಹಿಳೆಯರು ಸಾವಿಗೀಡಾಗಿದ್ದಾರೆ. ಬದಿಯಡ್ಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬಸ್ ಪಲ್ಟಿಯಾಗಿ 10 ಜನರಿಗೆ ಗಾಯ
ವಿಜಯನಗರ: ಖಾಸಗಿ ಬಸ್ ಪಲ್ಟಿಯಾಗಿ 10ಕ್ಕೂ ಹೆಚ್ಚು ಜನರಿಗೆ ಗಾಯವಾದ ಘಟನೆ ವಿಜಯನಗರದ MB ಅಯ್ಯನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಗಾಯಗೊಂಡ ಡ್ರೈವರ್ ಸ್ಥಿತಿ ಗಂಭೀರವಾಗಿದೆ.
ಬೆಂಗಳೂರಿನಿಂದ ಕಲ್ಬುರ್ಗಿಗೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅದೃಷ್ಟವಶಾತ್ ದೊಡ್ಡ ಅನಾಹುತ ತಪ್ಪಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರಗೆ ದಾಖಲು ಮಾಡಲಾಗಿದೆ. ಕಾನಾಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: Road Accident: ಬಿಬಿಎಂಪಿ ಕಸದ ಲಾರಿಗೆ ಬೈಕ್ ಡಿಕ್ಕಿ, ಸವಾರ ಸಾವು
Live News
Bangalore Bandh Live: ಬೆಂಗಳೂರು ಬಂದ್ ಆರಂಭ; ಎಲ್ಲೆಲ್ಲಿ ಏನೇನಾಗ್ತಿದೆ?
ಕಾವೇರಿ ನೀರಿನಲ್ಲಾದ ಅನ್ಯಾಯ ಪ್ರತಿಭಟಿಸಿ ಹಲವು ಸಂಘಟನೆಗಳು ನೀಡಿರುವ ಬೆಂಗಳೂರು ಬಂದ್ಗೆ (Bangalore bandh) ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಎಲ್ಲೆಲ್ಲಿ ಏನಾಗುತ್ತಿದೆ ಎಂಬುದರ ಅಪ್ಡೇಟ್ ಇಲ್ಲಿದೆ. .
ಬೆಂಗಳೂರು: ಕಾವೇರಿ ನೀರಿನಲ್ಲಾದ ಅನ್ಯಾಯ ಪ್ರತಿಭಟಿಸಿ ಹಲವು ಸಂಘಟನೆಗಳು ನೀಡಿರುವ ಬೆಂಗಳೂರು ಬಂದ್ಗೆ (Bangalore bandh) ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಎಲ್ಲೆಲ್ಲಿ ಏನಾಗುತ್ತಿದೆ ಎಂಬುದರ ಅಪ್ಡೇಟ್ ಇಲ್ಲಿದೆ. .
ಕರ್ನಾಟಕ
ವಿಸ್ತಾರ ಸಂಪಾದಕೀಯ: ಜನತಾ ದರ್ಶನ ಪ್ರಶಂಸಾರ್ಹ, ಪರಿಹಾರವೂ ದೊರೆಯಲಿ
Vistara Editorial: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನತಾ ದರ್ಶನಕ್ಕೆ ಹೊಸ ಆಯಾಮ ನೀಡುತ್ತಿರುವುದು ಸ್ವಾಗತಾರ್ಹ. ಈ ಹಿಂದಿನ ಜನತಾ ದರ್ಶನಗಳ ಅರ್ಜಿಗಳ ಕತೆ ಏನಾಗಿದೆ ಎಂಬುದನ್ನೂ ಗಮನಿಸಬೇಕಿದೆ. ಜನತಾ ದರ್ಶನಗಳು ಕೇವಲ ತೋರಿಕೆಯ ಕಾರ್ಯಕ್ರಮ ಆಗದೆ ಜನರ ಸಂಕಷ್ಟ ಪರಿಹಾರ ಆಗುವಂತಾಗಲಿ.
ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಸೂಚನೆಯಂತೆ ಇದೇ ಮೊದಲ ಬಾರಿಗೆ ರಾಜ್ಯಾದ್ಯಂತ ಏಕಕಾಲಕ್ಕೆ ಎಲ್ಲಾ ಜಿಲ್ಲೆಗಳಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆದಿದೆ. ಸಾರ್ವಜನಿಕರಿಂದ ಅತ್ಯುತ್ತಮ ಸ್ಪಂದನೆ ಮತ್ತು ಪ್ರಶಂಸೆ ವ್ಯಕ್ತವಾಗಿದೆ. ಗದಗ ಮತ್ತು ಬೆಳಗಾವಿ ಎರಡು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಲ್ಲೂ ಜನತಾ ದರ್ಶನ ನಡೆದಿದೆ. ರಾಜ್ಯಾದ್ಯಂತ 6684 ಅಹವಾಲು ಮತ್ತು ಮನವಿಗಳು ಸ್ವೀಕೃತಗೊಂಡು 21ಕ್ಕೆ ಸ್ಥಳದಲ್ಲೇ ಪರಿಹಾರ ಒದಗಿಸಲಾಗಿದೆ. ಉಳಿದಂತೆ 6663 ಅರ್ಜಿ, ಅಹವಾಲುಗಳು ದಾಖಲಾಗಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ರವಾನೆಯಾಗಿವೆ ಎಂದು ಸರ್ಕಾರದ ಅಂಕಿ ಅಂಶಗಳು ತಿಳಿಸಿವೆ. ʼʼನಾವು ನಿರೀಕ್ಷಿಸಿದ್ದಕ್ಕಿಂತ ಹೆಚ್ಚಿನ ರೀತಿಯ ಪ್ರತಿಕ್ರಿಯೆ ಸಾರ್ವಜನಿಕರಿಂದ ಸಿಕ್ಕಿದೆ. ಅಧಿಕಾರಿಗಳ ಸ್ಪಂದನೆ ಕೂಡ ಸಮಾಧಾನಕರವಾಗಿದೆ. ಇವತ್ತಿನ ಅನುಭವದ ಹಿನ್ನೆಲೆಯಲ್ಲಿ ಮುಂದಿನ ಜನತಾ ದರ್ಶನದ ಗುಣಮಟ್ಟವನ್ನು ಇನ್ನಷ್ಟು ಹೆಚ್ಚಿಸುವ ಪ್ರಯತ್ನ ಮಾಡುತ್ತೇವೆʼʼ ಎನ್ನುವ ಅಭಿಪ್ರಾಯ ಕಾರ್ಯದರ್ಶಿಗಳ ಮಟ್ಟದ ಅಧಿಕಾರಿಗಳಿಂದ ವ್ಯಕ್ತವಾಗಿದೆ(Vistara Editorial).
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಡಿಪಿ ಸಭೆಗಳನ್ನು ಅತ್ಯಂತ ಗಂಭೀರವಾಗಿ ನಡೆಸುತ್ತಿದ್ದಾರೆ. ಅವರು ಜಿಲ್ಲೆಗಳಿಗೆ ಭೇಟಿ ನೀಡುವಾಗ ಹಲವಾರು ಮಂದಿ ಅವರ ಮುಂದೆ ಅಹವಾಲು ಹೇಳಿಕೊಳ್ಳಲು ಬರುತ್ತಿದ್ದಾರೆ. ಇದನ್ನು ಗಮನಿಸಿದ ಅವರು ಸಿಎಂ ಬಂದಾಗ ಜನರ ದೂರು ನೀಡಲು ಬರುತ್ತಾರೆ ಎಂದರೆ ಅವರಿಗೆ ಹೇಳಿಕೊಳ್ಳಲು ಇದೆ ಎಂದಾಯಿತು. ಹೀಗಾಗಿ ಎಲ್ಲಾ ಜಿಲ್ಲಾಧಿಕಾರಿಗಳು, ಜಿಪಂ ಸಿಇಒಗಳು ಜಿಲ್ಲಾ ಮಟ್ಟದಲ್ಲಿ ಮತ್ತು ತಾಲೂಕು ಮಟ್ಟದಲ್ಲೂ ಜನತಾ ದರ್ಶನ ನಡೆಸಬೇಕು ಎಂಬ ಸೂಚನೆಯನ್ನು ನೀಡಿದ್ದರು. ಇತ್ತೀಚೆಗೆ ನಡೆದ ಜಿಲ್ಲಾಧಿಕಾರಿಗಳು ಮತ್ತು ಜಿಪಂ ಸಿಇಒಗಳ ಮೀಟಿಂಗ್ನಲ್ಲಿ ಈ ಸೂಚನೆ ನೀಡಲಾಗಿತ್ತು. ಇದು ಸಫಲವಾಗಿದೆ ಎನ್ನುವುದಕ್ಕೆ ಇವತ್ತಿನ ದೃಶ್ಯವೇ ಸಾಕ್ಷಿ. ಸ್ವೀಕರಿಸಲಾಗಿರುವ ಅಹವಾಲುಗಳಲ್ಲಿ ಕಂದಾಯ ಇಲಾಖೆಯದ್ದೇ ಸಿಂಹಪಾಲು. ನಂತರದ ಸ್ಥಾನದಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸೇರಿದ ಅಹವಾಲುಗಳಿವೆ. ಮೂರನೇ ಅತಿ ಹೆಚ್ಚು ಅಹವಾಲುಗಳು ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ್ದಾಗಿವೆ. ಒಟ್ಟು ಅರ್ಜಿ ರೂಪದಲ್ಲಿ ಬಂದ ಅಹವಾಲುಗಳನ್ನು ದಾಖಲಿಸಿಕೊಳ್ಳುವ ಮತ್ತು ಸ್ಥಳದಲ್ಲೇ ಪರಿಹಾರಕ್ಕೆ ಪ್ರಯತ್ನಿಸುವ ಪ್ರಕ್ರಿಯೆ ಒಂದು ಕಡೆ ನಡೆದಿದೆ. ಮತ್ತೊಂದು ಕಡೆ ಅರ್ಜಿ ಇಲ್ಲದೆ ಮೌಖಿಕವಾಗಿ ಬಂದ ಅಹವಾಲುಗಳನ್ನೂ ದಾಖಲಿಸಿಕೊಳ್ಳುವ ಜತೆಗೆ ಸ್ಥಳದಲ್ಲೇ ಪರಿಹಾರ ಒದಗಿಸಲಾಗಿದೆ.
ಜನರಿಗೆ ದೂರುಗಳಿದ್ದೇ ಇರುತ್ತವೆ. ಜನ ಯಾವಾಗ ಮಂತ್ರಿಗಳ ಬಳಿಗೆ ಬರುತ್ತಾರೆ ಎಂಬುದನ್ನೂ ಗಮನಿಸಬೇಕು. ತಾಲೂಕು ಪಂಚಾಯತಿ, ಜಿಲ್ಲಾ ಪಂಚಾಯತಿ, ನೋಂದಣಿ, ಕಂದಾಯ ಹೀಗೆ ವಿಭಾಗವಾರು ಇಲಾಖೆಗಳಲ್ಲಿ ಕೇಸ್ ವರ್ಕರ್ಗಳು ತಮ್ಮ ಅರ್ಜಿಗಳ ವಿಲೇವಾರಿ ಮಾಡಲು ವಿಫಲರಾದಾಗ, ಮೇಲಧಿಕಾರಿಗಳತ್ತ ಜನ ಎಡತಾಕುವುದು ಸಾಮಾನ್ಯ. ಆದರೆ ಮೇಲಧಿಕಾರಿಗಳು ಇಂಥ ಅರ್ಜಿಗಳನ್ನು ʼಸರಿಯಾದ ರೀತಿಯಲ್ಲಿʼ (through proper channel) ಬರಲಿ ಎಂದು ಮತ್ತೆ ಅದನ್ನು ಕೆಳಗಿನ ಮೇಜುಗಳ ಕಡೆಗೆ ತಳ್ಳುವುದೂ ಸಾಮಾನ್ಯ. ಹೀಗೆ ಪ್ರಭಾವಿಗಳಲ್ಲದ ಜನಸಾಮಾನ್ಯರು ಮೇಜಿನಿಂದ ಮೇಜಿಗೆ ಅಲೆದಾಡುವುದು, ನಾಳೆ ಬಾ ಎಂದು ಹೇಳಿಸಿಕೊಳ್ಳುವುದು ಅತಿ ಸಾಮಾನ್ಯ ದೃಶ್ಯ. ಅನೇಕ ಮಂದಿಯ ಬದುಕು ಹೀಗೆ ಸರ್ಕಾರಿ ಕಚೇರಿಗಳಿಗೆ ಅಲೆದಾಡುತ್ತಲೇ ʼತಬರನ ಕಥೆʼಯಂತೆ ಮುಗಿದುಹೋಗುತ್ತದೆ. ಇದೊಂದು ದಃಸ್ವಪ್ನವೇ ಸರಿ. ಇದರಿಂದ ಪಾರಾಗಲು ಸಣ್ಣ ಸಣ್ಣ ವಿಚಾರಗಳಿಗೂ ಜನ ಪುಢಾರಿಗಳ ಮೊರೆ ಹೋಗುತ್ತಾರೆ; ಅಥವಾ ದಲ್ಲಾಳಿಗಳನ್ನು ಹಿಡಿದುಕೊಳ್ಳುತ್ತಾರೆ. ಇವರ ಮೂಲಕ ಕೆಲಸ ಮಾಡಿಸಿಕೊಳ್ಳುವುದಕ್ಕೆ ಪ್ರಯತ್ನಿಸುತ್ತಾರೆ.
ಹೀಗೆ ಸರ್ಕಾರಿ ಕೆಲಸದ ಕೆಂಪು ಪಟ್ಟಿಯ ವಿಳಂಬ ನರಕದಿಂದ ಬೇಸತ್ತ ಜನಸಾಮಾನ್ಯನಿಗೆ, ಪಾರಾಗುವ ಒಂದು ಕಿಂಡಿಯಂತೆ ಜನತಾ ದರ್ಶನ ಕಾಣಿಸಿದರೆ ಆಶ್ಚರ್ಯವಿಲ್ಲ. ನೇರವಾಗಿ ಜಿಲ್ಲಾಧಿಕಾರಿ ಅಥವಾ ಮಂತ್ರಿಗಳಿಗೆ ಅರ್ಜಿ ಸಲ್ಲಿಸಿದರೆ ತಮ್ಮ ಕೆಲಸ ಕೂಡಲೇ ಆಗಬಹುದು ಎಂಬ ಆಸೆ ಅವರಲ್ಲಿ ಮೂಡುವುದು ಸಹಜ. ಹೀಗಾಗಿಯೇ ಇಂಥ ಕಾರ್ಯಕ್ರಮಗಳಿಗೆ ಜನಸ್ಪಂದನ ದೊಡ್ಡ ಪ್ರಮಾಣದಲ್ಲಿ ವ್ಯಕ್ತವಾಗುತ್ತದೆ. ಜನ ಸರ್ಕಾರಿ ಕಚೇರಿಗಳ ಬಾಗಿಲಿಗೆ ಅಲೆದಾಡುವ ಬದಲು, ಜನತಾ ದರ್ಶನದ ಮೂಲಕ ಸರ್ಕಾರವೇ ಜನರ ಬಳಿ ಹೋಗುವುದು ಆಶಾದಾಯಕ. ಈ ಹಿಂದಿನ ಮುಖ್ಯಮಂತ್ರಿಗಳೂ ಇಂಥದೊಂದು ಪ್ರಯತ್ನ ಮಾಡಿದ್ದುಂಟು. ಆದರೆ ಇಷ್ಟೊಂದು ವ್ಯಾಪಕವಾಗಿ ಎಲ್ಲ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಮಾಡಿರಲಿಲ್ಲ. ಆ ನಿಟ್ಟಿನಿಂದ ಇದು ಸ್ವಾಗತಾರ್ಹ.
ಈ ಸಂಪಾದಕೀಯವನ್ನೂ ಓದಿ: ವಿಸ್ತಾರ ಸಂಪಾದಕೀಯ: ವಂದೇ ಭಾರತ್; ಭಾರತದಲ್ಲಿ ರೈಲು ಕ್ರಾಂತಿ
ಈ ಹಿಂದಿನ ಜನತಾ ದರ್ಶನಗಳ ಅರ್ಜಿಗಳ ಕತೆ ಏನಾಗಿದೆ ಎಂಬುದನ್ನೂ ಗಮನಿಸಬೇಕಿದೆ. ಜನತಾ ದರ್ಶನಗಳು ಕೇವಲ ತೋರಿಕೆಯ ಕಾರ್ಯಕ್ರಮ ಆಗದೆ ಜನರ ಸಂಕಷ್ಟ ಪರಿಹಾರ ಆಗುವಂತಾಗಲಿ. ಸ್ವಲ್ಪ ಆಳವಾಗಿ ವಿಮರ್ಶೆ ಮಾಡಿದರೆ, ಜನತಾ ದರ್ಶನಗಳು ಸರ್ಕಾರಗಳ ವೈಫಲ್ಯವನ್ನು ಕಾಣಿಸುವ ಕಾರ್ಯಕ್ರಮವೇ ಹೊರತು ಸಾಫಲ್ಯವನ್ನಲ್ಲ. ಸರ್ಕಾರಿ ಕಚೇರಿಗಳಲ್ಲಿ ಸಾಮಾನ್ಯ ಸಮಯದಲ್ಲಿ ಕೆಲಸ ಆಗುತ್ತಿಲ್ಲ ಅನ್ನುವ ಕಾರಣಕ್ಕಾಗಿ ತಾನೇ ಜನತಾ ದರ್ಶನದ ಸಮಯದಲ್ಲಿ ಅಷ್ಟೊಂದು ಪ್ರಮಾಣದ ಅಹವಾಲುಗಳು ಬರುವುದು? ಮೊದಲು ಗ್ರಾಮ ಮಟ್ಟದಲ್ಲಿ, ತಾಲೂಕು ಮಟ್ಟದಲ್ಲಿ ಅಧಿಕಾರಿಗಳು ಜನತೆಗೆ ತಮ್ಮ ಕಚೇರಿಯಲ್ಲಿಯೇ ದರ್ಶನ ಕೊಡಬೇಕು. ಕೆಳಹಂತದ ಅಧಿಕಾರಿಗಳ ಜನತಾ ದರ್ಶನ ಮೊದಲಾಗಲಿ. ಅವರ ಮೇಲೆ ಮೇಲಧಿಕಾರಿಗಳು ನಿಗೂ ಇಡುವುದೂ ಆಗಲಿ. ಹಾಗೇ ಜಿಲ್ಲಾ ಮಟ್ಟದಲ್ಲೇ ಜನತಾ ದರ್ಶನ ಪರಿಣಾಮಕಾರಿಯಾಗಿ ನಡೆದಿದ್ದೇ ಆದಲ್ಲಿ ಜನ ದೂರದ ವಿಧಾನ ಸೌಧದವರೆಗೆ ದೂರುದುಮ್ಮಾನ ಹಿಡಿದುಕೊಂಡು ಮುಖ್ಯಮಂತ್ರಿಗಳನ್ನು ಹುಡುಕಿಕೊಂಡು ಬರುವ ಪ್ರಶ್ನೆಯೇ ಬರುವುದಿಲ್ಲ. ಜನತಾ ದರ್ಶನದ ಅರ್ಜಿಗಳನ್ನೇ ಕಾಲಕಾಲಕ್ಕೆ ವಿಲೇವಾರಿ ಮಾಡುವ ಒಂದು ವ್ಯವಸ್ಥೆ ರೂಪುಗೊಳ್ಳಬೇಕು. ಆಗ ಮಾತ್ರ ಜನತಾ ದರ್ಶನದ ಬಗ್ಗೆ ಜನತೆಯಲ್ಲಿ ವಿಶ್ವಾಸ ಮೂಡಬಹುದು. ಇಲ್ಲದಿದ್ದಲ್ಲಿ ಇದೂ ಹತ್ತರಲ್ಲಿ ಇನ್ನೊಂದು ಎಂಬಂತಾಗುತ್ತದೆ.
ಇನ್ನಷ್ಟು ಸಂಪಾದಕೀಯಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಕರ್ನಾಟಕ
Bangalore rain : ಮನೆ ಮುಂದೆ ವಾಕ್ ಮಾಡುತ್ತಿದ್ದಾಗ ಉರುಳಿದ ಮರ; ತಾಯಿ ಮೃತ್ಯು, 5 ವರ್ಷದ ಮಗು ಗಂಭೀರ
Bangalore rain: ಬೆಂಗಳೂರಿನಲ್ಲಿ ಸಂಭವಿಸಿದ ಮಳೆ ದುರಂತದಲ್ಲಿ ತಾಯಿ ಮೃತಪಟ್ಟು, ಪುಟ್ಟ ಕಂದಮ್ಮ ಗಾಯಗೊಂಡಿದ್ದಾಳೆ. ಮರ ಬಿದ್ದು ಈ ದುರಂತ ಸಂಭವಿಸಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ಸೋಮವಾರ ಸಂಜೆ ಸುರಿದ ಮಳೆಗೆ (Bangalore rain) ಮರವೊಂದು ಧರೆಗುರುಳಿ (Tree Falls on mother and daughter) ವಾಕ್ ಮಾಡುತ್ತಿದ್ದ ತಾಯಿ ಮತ್ತು ಮಗುವನ್ನು ಗಾಯಗೊಳಿಸಿದೆ. ತಾಯಿ ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟರೆ (Mothrer dead at Hospital), ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ವಿಲ್ಸನ್ ಗಾರ್ಡನ್ 7 ಕ್ರಾಸ್ ನಲ್ಲಿ ಸಂಜೆ ವೇಳೆ ಈ ದುರ್ಘಟನೆ ಸಂಭವಿಸಿದೆ. ಮೃತಪಟ್ಟವರನ್ನು ವಿಲ್ಸನ್ ಗಾರ್ಡನ್ (Wilson garden) ನಿವಾಸಿ ಹೇಮಾವತಿ (35) ಎಂದು ಗುರುತಿಸಲಾಗಿದೆ. ಅವರ ಪುಟ್ಟ ಕಂದಮ್ಮ ಐದು ವರ್ಷದ ರಚಿತಾ ಗಂಭೀರವಾಗಿ ಗಾಯಗೊಂಡಿದ್ದಾಳೆ.
ಹೇಮಾವತಿ ಮತ್ತು ಮಗಳು ರಚಿತಾ ಸಂಜೆಯ ಹೊತ್ತು ಮನೆಯ ಮುಂದೆ ಪುಟ್ ಪಾತ್ ಮೇಲೆ ತಾಯಿ ಮಗಳು ವಾಕ್ ಮಾಡುತ್ತಿದ್ದಾಗ ಬೃಹತ್ ಮರ ಉರುಳಿದೆ. ಒಂದು ಕಡೆ ಮರದ ಕೊಂಬೆ ಇನ್ನೊಂದು ಕಡೆ ವಿದ್ಯುತ್ ಕಂಬವೂ ಅವರ ಮೇಲೆ ಬಿದ್ದಿದೆ.
ಕೂಡಲೇ ಹೇಮಾವತಿ ಅವರನ್ನು ಸಂಜಯ್ ಗಾಂಧಿ ಆಸ್ಪತ್ರೆಗೆ ಒಯ್ಯಲಾಯಿತು. ರಚಿತಾಗೆ ತಲೆಗೆ ಗಾಯವಾಗಿದ್ದು ನಿಮಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಯಿತು.
ಈ ನಡುವೆ, ಚಿಕಿತ್ಸೆ ಫಲಕಾರಿಯಾಗದೇ ತಾಯಿ ಹೇಮಾವತಿ ನಿಧನರಾಗಿದ್ದಾರೆ. ಅವರು ಸಂಜಯಗಾಂಧಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಬೆಳಗ್ಗೆ ಮರಣೋತ್ತರ ಪರೀಕ್ಷೆ ನಂತರ ಮೃತದೇಹ ಕುಟುಂಬಕ್ಕೆ ಹಸ್ತಾಂತರ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.
ದಶಪಥ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೂವರ ಸಾವು
ರಾಮನಗರ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ದೇವರಹೊಸಹಳ್ಳಿ ಬಳಿ ಭೀಕರ ಅಪಘಾತ ಸಂಭವಿಸಿ ಮೂವರು ಮೃತಪಟ್ಟಿದ್ದಾರೆ. ಮೃತರಲ್ಲಿ ಇಬ್ಬರು ಮಹಿಳೆಯರಾಗಿದ್ದು, ಮೃತರಾದವರ ಗುರುತು ಪತ್ತೆಯಾಗಿಲ್ಲ.
ಮೈಸೂರು ಕಡೆಗೆ ಹೋಗುತ್ತಿದ್ದ ಫಾರ್ಚುನರ್ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಬೆಂಗಳೂರು ಕಡೆಗೆ ಬರುವ ರಸ್ತೆಗೆ ನುಗ್ಗಿ ಸ್ಯಾಂಟ್ರೋ ಕಾರು ಮತ್ತು ಇತರ ಮೂರು ವಾಹನಗಳಿಗೆ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ.
ಡಿಕ್ಕಿಯ ರಭಸಕ್ಕೆ ಸ್ಯಾಂಟ್ರೋ ಚಲಾಯಿಸುತ್ತಿದ್ದ ವ್ಯಕ್ತಿ ಮತ್ತು ಅವರ ಪತ್ನಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಬ್ಬ ಮಹಿಳೆಗೂ ಗಂಭೀರ ಗಾಯಗಳಾಗಿದ್ದು ಅವರು ಆಸ್ಪತ್ರೆಗೆ ಸಾಗಿಸುವ ಪ್ರಾಣ ಕಳೆದುಕೊಂಡರು.
ಸಂಜೆ ಸುಮಾರು 5.30ರ ಹೊತ್ತಿಗೆ ಅಪಘಾತ ಸಂಭವಿಸಿದ್ದು, ಮೃತರು ಹಾಸನ ಮೂಲದವರೆಂದು ಹೇಳಲಾಗುತ್ತಿದೆ. ಎರಡೂ ಕಾರುಗಳ ಮುಂಭಾಗ ನಜ್ಜುಗುಜ್ಜಾಗಿದೆ. ಇತರ ವಾಹನಗಳಿಗೂ ಹಾನಿಯಾಗಿದೆ.
ಅಪಘಾತದಿಂದಾಗಿ ಹೆದ್ದಾರಿಯಲ್ಲಿ ತುಂಬಾ ಹೊತ್ತು ಟ್ರಾಫಿಕ್ ಜಾಮ್ ಆಗಿತ್ತು.
-
ವಿದೇಶ18 hours ago
Akshardham : ವಿದೇಶದಲ್ಲಿನ ಅತೀ ದೊಡ್ಡ ದೇವಾಲಯ ಉದ್ಘಾಟನೆಗೆ ಸಜ್ಜು; ಏನಿದರ ವಿಶೇಷ?
-
ಕರ್ನಾಟಕ16 hours ago
PSI Scam : ಪಿಎಸ್ಐ ನೇಮಕಾತಿ ಅಕ್ರಮ; ಕೊನೆಗೂ ಅಮೃತ್ ಪಾಲ್ಗೆ ಜಾಮೀನು
-
ದೇಶ11 hours ago
Swara Bhasker: ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಸ್ವರಾ ಭಾಸ್ಕರ್, ಮಗಳ ಹೆಸರು ‘ರಾಬಿಯಾ’
-
ಕರ್ನಾಟಕ12 hours ago
Weather Update: ಭಾರತದಲ್ಲಿ ಮುಗೀತು ಮಳೆಗಾಲ! ಎಷ್ಟು ಮಳೆ ಕೊರತೆ, ಬರಗಾಲ ಪಕ್ಕಾ?
-
South Cinema15 hours ago
Darshan Thoogudeepa: ನಟ ದರ್ಶನ್ ವಿರುದ್ಧ ಮಂಡ್ಯದಲ್ಲಿ ರೈತರ ಆಕ್ರೋಶ; ಕ್ಷಮೆಗೆ ಆಗ್ರಹ
-
ಅಂಕಣ19 hours ago
ವಿಧಾನಸೌಧ ರೌಂಡ್ಸ್: ಜೆಡಿಎಸ್ಗೆ ಸಂಜೀವಿನಿಯಾದ ಬಿಜೆಪಿ ಮೈತ್ರಿ; ಬೆಂಗಳೂರು ದಕ್ಷಿಣದಿಂದ ಕಾಂಗ್ರೆಸ್ ಅಚ್ಚರಿ ಅಭ್ಯರ್ಥಿ?
-
ದೇಶ16 hours ago
Army Jawan: ಯೋಧನ ಮೇಲೆ ಹಲ್ಲೆ ನಡೆಸಿ, ಬೆನ್ನಿನ ಮೇಲೆ ‘ಪಿಎಫ್ಐ’ ಎಂದು ಬರೆದ ದುರುಳರು!
-
ದೇಶ9 hours ago
Lawyer Sara Sunny: ಸುಪ್ರೀಂ ಕೋರ್ಟ್ನಲ್ಲಿ ಮೊದಲ ಬಾರಿಗೆ ಸಂಜ್ಞೆ ಭಾಷೆಯಲ್ಲಿ ವಾದ ಮಂಡನೆ! ಇತಿಹಾಸ ಸೃಷ್ಟಿಸಿದ ಸಾರಾ