SSLC ಫಲಿತಾಂಶ ಪ್ರಕಟ ಯಾವಾಗ? ತಡ ಆಗುತ್ತಿರುವುದು ಏಕೆ?; ಇಲ್ಲಿದೆ ಮಾಹಿತಿ - Vistara News

ಕರ್ನಾಟಕ

SSLC ಫಲಿತಾಂಶ ಪ್ರಕಟ ಯಾವಾಗ? ತಡ ಆಗುತ್ತಿರುವುದು ಏಕೆ?; ಇಲ್ಲಿದೆ ಮಾಹಿತಿ

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಏಪ್ರಿಲ್ 24ರಂದು ಬಿಡುಗಡೆಯಾಗುವುದು ಅನುಮಾನ ಮೂಡಿಸಿದೆ. ಹಿಂದಿ ಸೇರಿದಂತೆ ತೃತೀಯ ಭಾಷೆಗೆ ಗ್ರೇಡ್ ಕೊಡಬೇಕೆ? ಅಥವಾ ಅಂಕ ಕೊಡಬೇಕೆ ಎಂಬ ವಿಷಯ ನ್ಯಾಯಾಲಯದ ಅಂಗಳದಲ್ಲಿದ್ದು ರಿಸಲ್ಟ್‌ ಮುಂದೆ ಹೋಗುವಂತೆ ಮಾಡಿದೆ. ಪರೀಕ್ಷೆ ಬರೆದ ಸುಮಾರು 9 ಲಕ್ಷ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ.
ಈ ಪ್ರಕರಣದ ವಿಚಾರಣೆ ನಾಳೆ ಏಪ್ರಿಲ್ 21ರಂದು ನಡೆಯಲಿದ್ದು, ನ್ಯಾಯಾಲಯದ ತೀರ್ಪು ಪ್ರಕಟವಾದ ನಂತರ ಫಲಿತಾಂಶ ಬಿಡುಗಡೆಯಾಗಲಿದೆ ಎಂದು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯಮಾಪನ ಮಂಡಳಿ ಮಾಹಿತಿ ನೀಡಿದೆ.
ಮರುಪರಶೀಲನೆಗೆ ಸರ್ಕಾರ ಮೇಲ್ಮನವಿ
ರಾಜ್ಯ ಸರ್ಕಾರ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆ ಹಿಂದಿಗೆ ಅಂಕಗಳ ಬದಲಿಗೆ ಗ್ರೇಡ್ ನೀಡುವ ನಿರ್ಧಾರ ಪ್ರಕಟಿಸಿತ್ತು. ಈ ನಿರ್ಧಾರವನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಲಾಗಿತ್ತು. ತೃತೀಯ ಭಾಷೆಗೆ ಗ್ರೇಡ್ ಬದಲು ಮೊದಲಿನಂತೆ ಅಂಕಗಳನ್ನು ನೀಡಲು ಸೂಚಿಸಿತ್ತು. ನಂತರ ಈ ಆದೇಶವನ್ನು ಮರು ಪರಿಶೀಲಿಸುವಂತೆ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿದ್ದು ನಾಳೆ ವಿಚಾರಣೆ ನಡೆಯಲಿದೆ.
ತೃತೀಯ ಭಾಷೆಯ ಉತ್ತರ ಪತ್ರಿಕೆಗಳನ್ನು ಅಂಕಗಳ ಆಧಾರದಲ್ಲಿ ಮೌಲ್ಯಮಾಪನ ಮಾಡಲಾಗಿದೆ. ಕೋರ್ಟ್ ತೀರ್ಪಿನ ಮೇಲೆ ಫಲಿತಾಂಶ ಪ್ರಕಟವಾಗುತ್ತದೆ. ಈಗಾಗಲೇ ಸಿಬಿಎಸ್‌ಇ ಫಲಿತಾಂಶ ಹೊರ ಬಿದ್ದಿದೆ. ಎಸ್‌ಎಸ್‌ಎಲ್‌ಸಿ ಫಲಿತಾಂಶಕ್ಕಾಗಿಯೇ ಪದವಿ ಪೂರ್ವ ಕಾಲೇಜುಗಳು ಕಾಯುತ್ತಿವೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ನಡೆದಿದ್ದವು. ಈ ಪರೀಕ್ಷೆಯಲ್ಲಿ ಒಟ್ಟು 9,02,889 ಮಕ್ಕಳು ಪರೀಕ್ಷೆಗೆ ಹಾಜರಾಗಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Latest

ಪಿಎನ್‌ಎಸ್‌ ವಿಸ್ತಾರ ಮುಂಚೂಣಿ ಸುದ್ದಿವಾಹಿನಿಯಾಗಲಿ: ಬಿಜೆಪಿ ಮುಖಂಡ ಎನ್‌.ಆರ್‌. ರಮೇಶ್‌ ವಿಶ್ವಾಸ

VISTARANEWS.COM


on

ಬೆಂಗಳೂರು: ಪಿಎನ್‌ ಎಸ್‌ ವಿಸ್ತಾರ ಸುದ್ದಿವಾಹಿನಿಗೆ ಬೆಂಗಳೂರಿನ ಬಿಜೆಪಿ ಮುಖಂಡ, ಬಿಬಿಎಂಪಿ ಮಾಜಿ ಆಡಳಿತ ಪಕ್ಷದ ನಾಯಕ ಎನ್.‌ ಆರ್.‌ ರಮೇಶ್‌ ಶುಭ ಹಾರೈಸಿದ್ದಾರೆ.
ಇಂಡಿಯನ್‌ ಎಕ್ಸ್‌ ಪ್ರೆಸ್‌ ಕಟ್ಟಡದಲ್ಲಿರುವ ಚಾನೆಲ್‌ ನ ಕಚೇರಿಗೆ ಆಗಮಿಸಿ ಶುಭ ಕೋರಿದ ಅವರು, ಪಿಎನ್‌ ಎಸ್‌ ವಿಸ್ತಾರ ಚಾನೆಲ್‌ ಮುಂಚೂಣಿ ಸುದ್ದಿವಾಹಿನಿಯಾಗಿ ಪರಿವರ್ತನೆಯಾಗಲಿ ಎಂದು ಹಾರೈಸಿದರು.
ಚಾನೆಲ್‌ ಹೊಸ ಆಡಳಿತ ಮಂಡಳಿಯೊಂದಿಗೆ ಕಾರ್ಯಾರಂಭ ಮಾಡುತ್ತಿರುವುದು ಹೆಮ್ಮೆಯ ವಿಷಯ. ಈ ಚಾನೆಲ್‌ ನಿಷ್ಪಕ್ಷಪಾತ, ಸಮಾಜಮುಖಿ ಸುದ್ದಿಗಳನ್ನು ಯಾವುದೇ ಪೂರ್ವಾಗ್ರಹಪೀಡಿತವಾಗದೆ ಬಿತ್ತರಿಸಲಿ. ನೈಜ, ಸತ್ಯ ವರದಿಗಳನ್ನು ದಾಖಲೆಗಳ ಸಹಿತ ವೀಕ್ಷಕರಿಗೆ ಮುಟ್ಟಿಸಲಿ ಎಂದರು. ಮುಖ್ಯವಾಗಿ ವಿದ್ಯಾರ್ಥಿಗಳಿಗೆ ಪ್ರಯೋಜನವಾಗುವ, ಅವರ ಜೀವನಕ್ಕೆ ನೆರವಾಗುವ ಕಾರ್ಯಕ್ರಮಗಳನ್ನು ಪ್ರಸಾರ ಮಾಡುವಂತೆಯೂ ಅವರು ಕೋರಿದರು.
ಚಾನೆಲ್‌ ನ ಧ್ಯೇಯೋದ್ದೇಶಗಳನ್ನು ತಿಳಿದುಕೊಂಡ ರಮೇಶ್‌ ಅವರು ಮೆಚ್ಚುಗೆ ಸೂಚಿಸಿದರು.

Continue Reading

Latest

ಹುಬ್ಬಳ್ಳಿ ರನ್-ವೇ ಬದಲಿಗೆ ಬೆಂಗಳೂರಲ್ಲಿ ಲ್ಯಾಂಡ್ ಆದ ಫ್ಲೈಟ್: ಆಗಸದಲ್ಲಿ ವಿಮಾನ ಸುತ್ತಾಡಿದ್ದೇಕೆ?

VISTARANEWS.COM


on

ಹುಬ್ಬಳ್ಳಿ: ವಿಮಾನ ನಿಲ್ದಾಣದಲ್ಲಿ ನಡೆಯಲಿದ್ದ ಸಂಭವನೀಯ ದುರಂತವೊಂದು ಪೈಲಟ್ ಜಾಣ್ಮೆಯಿಂದ ತಪ್ಪಿದ್ದು, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೈದರಾಬಾದ್‌ನಿಂದ ಹುಬ್ಬಳ್ಳಿಗೆ ಹೊರಟಿದ್ದ Fly91 ಏರ್​​ಲೈನ್ಸ್ ವಿಮಾನವು ನಿಗದಿತ ಸಮಯಕ್ಕೆ ಲ್ಯಾಂಡ್ ಆಗಲು ಸಾಧ್ಯವಾಗದೆ, ಬರೋಬ್ಬರಿ 4 ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಡಿ ಕೊನೆಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿದಿದೆ.

ಮಧ್ಯಾಹ್ನ 3 ಗಂಟೆಗೆ ಹೈದರಾಬಾದ್‌ನಿಂದ ಟೇಕಾಫ್ ಆಗಿದ್ದ ವಿಮಾನ 4:30ಕ್ಕೆ ಹುಬ್ಬಳ್ಳಿಯಲ್ಲಿ ಇಳಿಯಬೇಕಿತ್ತು. ಆದರೆ ತಾಂತ್ರಿಕ ದೋಷ ಅಥವಾ ಹವಾಮಾನ ವೈಪರೀತ್ಯದಿಂದಾಗಿ ಹುಬ್ಬಳ್ಳಿಯಲ್ಲಿ ಲ್ಯಾಂಡಿಂಗ್ ಮಾಡಲು ಸಾಧ್ಯವಾಗಿಲ್ಲ. ಇದರಿಂದಾಗಿ ವಿಮಾನವು ಮುಂಡಗೋಡ, ದಾವಣಗೆರೆ ಹಾಗೂ ಶಿವಮೊಗ್ಗದ ಆಗಸದಲ್ಲಿ ಸುಮಾರು 4 ಗಂಟೆಗಳ ಕಾಲ ಹಾರಾಟ ನಡೆಸಬೇಕಾಯಿತು. ಈ ಅನಿಶ್ಚಿತತೆಯಿಂದಾಗಿ ವಿಮಾನದಲ್ಲಿದ್ದ ಪ್ರಯಾಣಿಕರು ತೀವ್ರ ಆತಂಕಕ್ಕೊಳಗಾಗಿ, ಪ್ರಾಣಭಯದಿಂದ ಕಣ್ಣೀರಿಟ್ಟ ಪ್ರಸಂಗವೂ ನಡೆಯಿತು.

ಕೊನೆಗೆ ಸಂಜೆ 7:30ರ ಸುಮಾರಿಗೆ ಬೆಂಗಳೂರಿನಲ್ಲಿ ವಿಮಾನವನ್ನು ತುರ್ತು ಲ್ಯಾಂಡಿಂಗ್ ಮಾಡಿಸಲಾಯಿತು. ಘಟನೆ ಸಂಭವಿಸಿದಾಗ ಏರ್‌ಲೈನ್ಸ್ ಸಿಬ್ಬಂದಿ ಸರಿಯಾದ ಮಾಹಿತಿ ನೀಡದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಪ್ರಯಾಣಿಕರ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹವಾಮಾನ ವೈಪರೀತ್ಯವೇ ಅಥವಾ ವಿಮಾನದ ತಾಂತ್ರಿಕ ದೋಷವೇ ಈ ಹೈಡ್ರಾಮಾಗೆ ಕಾರಣ ಎಂಬ ಬಗ್ಗೆ ಸದ್ಯ ತನಿಖೆ ನಡೆಯುತ್ತಿದೆ.

Continue Reading

Latest

ಕಾಂಗ್ರೆಸ್‌ ಶಾಸಕ ಹ್ಯಾರಿಸ್‌, ಪುತ್ರ ನಲಪಾಡ್‌ಗೆ ಇಡಿ ಶಾಕ್!

VISTARANEWS.COM


on

ಬೆಂಗಳೂರು: ಬೆಂಗಳೂರಿನ ಶಾಂತಿನಗರ ಕ್ಷೇತ್ರದ ಶಾಸಕ, ಬಿಡಿಎ ಅಧ್ಯಕ್ಷ ಎನ್.‌ ಎ. ಹ್ಯಾರಿಸ್‌ ಹಾಗೂ ಅವರ ಪುತ್ರ ಯುವ ಕಾಂಗ್ರೆಸ್‌ ಮುಖಂಡ ನಲಪಾಡ್‌ ಅವರ ನಿವಾಸ ಮತ್ತು ಮನೆಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದೆ. ಬಿಟ್‌ ಕಾಯಿನ್‌ ಪ್ರಕರಣದ ಹಿನ್ನಲೆಯಲ್ಲಿ ಈ ದಾಳಿ ನಡೆದಿದೆ. ಬಿಟ್‌ ಕಾಯಿನ್‌ ಆರೋಪಿ ಶ್ರೀಕಿ ಜೊತೆಯಲ್ಲಿ ವ್ಯವಹಾರ ನಡೆಸಿರುವ ಸಂಬಂಧ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ.
ನಲಪಾಡ್‌ ಶ್ರೀಕಿ ಜೊತೆ ಹಲವು ವರ್ಷಗಳಿಂದ ವ್ಯವಹಾರ ಹೊಂದಿರುವ ಆರೋಪ ಎದುರಿಸುತ್ತಿದ್ದಾರೆ. ಇವರಿಬ್ಬರ ನಡುವೆ ಅಂದಾಜು ರೂ.4.5 ಕೋಟಿ ವ್ಯವಹಾರ ವಹಿವಾಟು ನಡೆದಿರುವುದನ್ನು ಇಡಿ ಪತ್ತೆ ಹಚ್ಚಿದೆ.
ಇಂದು ಬೆಳ್ಳಂಬೆಳಗ್ಗೆ 14 ಇಡಿ ಅಧಿಕಾರಿಗಳು 4 ಕಾರುಗಳಲ್ಲಿ ಆಗಮಿಸಿ ದಾಳಿ ನಡೆಸಿದ್ದಾರೆ. ಈಗಲೂ ದಾಖಲೆಗಳ ಪರಿಶೀಲನೆ ಮುಂದುವರೆದಿದೆ. ಅಶೋಕ ನಗರದಲ್ಲಿರುವ ಹ್ಯಾರಿಸ್ ನಿವಾಸ ಸೇರಿದಂತೆ 17 ಕಡೆ ಶೋಧ ನಡೆದಿದೆ.

Continue Reading

Latest

ತ್ಯಾಜ್ಯದಿಂದ ಸಂಪತ್ತು ಸೃಷ್ಟಿ: ದೇಶದ ಅತಿದೊಡ್ಡ ಬಯೋ-ಗ್ಯಾಸ್ ಯೋಜನೆ ಅನುಷ್ಠಾನಕ್ಕೆ ಜಲಮಂಡಳಿ ಸಜ್ಜು

VISTARANEWS.COM


on

ಬೆಂಗಳೂರು: ಸುಸ್ಥಿರ ನಗರ ಜಲ ನಿರ್ವಹಣೆ ಮತ್ತು ಸರ್ಕ್ಯುಲರ್ ಎಕಾನಮಿ ನಿಟ್ಟಿನಲ್ಲಿ ಕ್ರಾಂತಿಕಾರಿ ಹೆಜ್ಜೆಯನ್ನಿಟ್ಟಿರುವ ಬೆಂಗಳೂರು ಜಲಮಂಡಳಿ ಕೊಳಚೆ ನೀರಿನ ತ್ಯಾಜ್ಯವನ್ನು (𝗦𝗲𝘄𝗮𝗴𝗲 𝗦𝗹𝘂𝗱𝗴𝗲) ಆದಾಯದ ಬೃಹತ್ ಮೂಲವಾಗಿ ಪರಿವರ್ತಿಸಲು ಸಜ್ಜಾಗಿದೆ.
ತನ್ನ ಐದು ಪ್ರಮುಖ ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳಲ್ಲಿ (𝗦𝗧𝗣𝘀) ಉತ್ಪತ್ತಿಯಾಗುವ ಕಚ್ಚಾ ಜೈವಿಕ ಅನಿಲವನ್ನು ಹೆಚ್ಚಿನ ಮೌಲ್ಯದ ಕಂಪ್ರೆಸ್ಡ್ ಬಯೋ-ಗ್ಯಾಸ್ (𝗖𝗼𝗺𝗽𝗿𝗲𝘀𝘀𝗲𝗱 𝗕𝗶𝗼-𝗚𝗮𝘀 – 𝗖𝗕𝗚) ಆಗಿ ಮೇಲ್ದರ್ಜೆಗೇರಿಸುವ ಮೂಲಕ, ಮಂಡಳಿಯು ಮುಂದಿನ ಎರಡು ದಶಕಗಳಲ್ಲಿ ಅಂದಾಜು 𝟭𝟮𝟬 ಕೋಟಿ ರೂ. (𝗜𝗡𝗥 𝟭𝟮𝟬 𝗖𝗿𝗼𝗿𝗲) ಹೆಚ್ಚುವರಿ ಆದಾಯವನ್ನು ಗಳಿಸಲಿದೆ. ಇದು ದೇಶದಲ್ಲೇ ತನ್ನದೇ ಮಾದರಿಯ ಮೊದಲ ಮತ್ತು ಅತಿದೊಡ್ಡ ಯೋಜನೆ ಆಗಿರುವುದರಿಂದ ಇದೊಂದು ಐತಿಹಾಸಿಕ ಮೈಲಿಗಲ್ಲಾಗಿದೆ ಎಂದು ಬೆಂಗಳೂರು ಜಲಮಂಡಲಿ ತಿಳಿಸಿದೆ.
ದೇಶದಲ್ಲಿ ಸೂರತ್‌ನಂತಹ ನಗರದಲ್ಲಿ ಕೇವಲ 𝟭𝟮𝟬 𝗠𝗟𝗗 ಸಾಮರ್ಥ್ಯದ ನೀರಿನ ಬಳಕೆಯೊಂದಿಗೆ ಇಂತಹ ಯೋಜನೆಗಳು ಕಾರ್ಯನಿರ್ವಹಿಸುತ್ತಿದ್ದರೆ, 𝗕𝗪𝗦𝗦𝗕 ಬರೋಬ್ಬರಿ 𝟱𝟱𝟬 𝗠𝗟𝗗 ಸಾಮರ್ಥ್ಯದ ತ್ಯಾಜ್ಯ ನೀರಿನ ಬಳಕೆಯೊಂದಿಗೆ ಈ ಬೃಹತ್ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದೆ. ಇದಲ್ಲದೆ, ಈ ಸಾಮರ್ಥ್ಯವನ್ನು ಗರಿಷ್ಠಗೊಳಿಸಲು, ನಗರದಾದ್ಯಂತ ಎಲ್ಲಿ 𝗦𝗧𝗣 ಗಳಲ್ಲಿ ಬಯೋ-ಡೈಜೆಸ್ಟರ್‌ಗಳಿವೆಯೋ (𝗕𝗶𝗼-𝗱𝗶𝗴𝗲𝘀𝘁𝗲𝗿𝘀) ಅಲ್ಲೆಲ್ಲಾ ಈ ಅತ್ಯಾಧುನಿಕ ಯೋಜನೆಯನ್ನು ವಿಸ್ತರಿಸಲು ಮತ್ತು ಸ್ಥಾಪಿಸಲು ಜಲಮಂಡಳಿ ಅಧ್ಯಕ್ಷರು ಸೂಚನೆ ನೀಡಿದ್ದಾರೆ.
ಪ್ರಸ್ತುತ, ಈ 𝗦𝗧𝗣 ಗಳಲ್ಲಿ ಉತ್ಪತ್ತಿಯಾಗುವ ಜೈವಿಕ ಅನಿಲವನ್ನು ಸ್ಥಳೀಯ ವಿದ್ಯುತ್ ಉತ್ಪಾದನೆಗೆ ಬಳಸಲಾಗುತ್ತಿದೆ, ಹಾಗೂ ಒಂದು ಘಟಕದಲ್ಲಿ ಮಾತ್ರ ಸುಟ್ಟುಹಾಕಲಾಗುತ್ತಿದೆ. ಈ ಯೋಜನೆಯು ಕಚ್ಚಾ ಜೈವಿಕ ಅನಿಲವನ್ನು ನಗರ ಅನಿಲ ವಿತರಣಾ ಜಾಲ (𝗖𝗶𝘁𝘆 𝗚𝗮𝘀 𝗗𝗶𝘀𝘁𝗿𝗶𝗯𝘂𝘁𝗶𝗼𝗻 𝗡𝗲𝘁𝘄𝗼𝗿𝗸) ಗೆ ಪೂರೈಸಲು ಅಥವಾ ಶುದ್ಧ ಸಾರಿಗೆ ಇಂಧನವಾಗಿ ಬಳಸಲು ರಾಷ್ಟ್ರೀಯ ಮಾನದಂಡಗಳನ್ನು ಪೂರೈಸುವ 𝗖𝗕𝗚 ಆಗಿ ಉನ್ನತೀಕರಿಸಲು ಉದ್ದೇಶಿಸಿದೆ. ಕೇವಲ ವಿದ್ಯುತ್ ವೆಚ್ಚವನ್ನು ಸರಿದೂಗಿಸುವ ಬದಲು ಆದಾಯ-ಉತ್ಪಾದಿಸುವ ಜೈವಿಕ ಅನಿಲ ಪರಿವರ್ತನೆಗೆ ಬದಲಾಗುವ ಮೂಲಕ, 𝗕𝗪𝗦𝗦𝗕 ಗೆ ಒಟ್ಟಾರೆ ಅಂದಾಜು 𝟭𝟮𝟬 ಕೋಟಿ ರೂ. ಹೆಚ್ಚುವರಿ ಆದಾಯ ಬರುವ ನಿರೀಕ್ಷೆಯಿದೆ.
ಸಾರ್ವಜನಿಕ-ಖಾಸಗಿ ಸಹಭಾಗಿತ್ವ (𝗣𝘂𝗯𝗹𝗶𝗰-𝗣𝗿𝗶𝘃𝗮𝘁𝗲 𝗣𝗮𝗿𝘁𝗻𝗲𝗿𝘀𝗵𝗶𝗽 – 𝗣𝗣𝗣) ಮಾದರಿಯಲ್ಲಿ ಈ ಯೋಜನೆಯನ್ನು ಕಾರ್ಯಗತಗೊಳಿಸಲಾಗುತ್ತಿದ್ದು, ಖಾಸಗಿ ಪಾಲುದಾರರು ಸಂಪೂರ್ಣ 𝟴𝟱 ಕೋಟಿ ರೂ. ಬಂಡವಾಳ ವೆಚ್ಚದ ಜೊತೆಗೆ ಎಲ್ಲಾ ಕಾರ್ಯಾಚರಣೆ ಮತ್ತು ನಿರ್ವಹಣಾ ವೆಚ್ಚಗಳನ್ನು ಭರಿಸಲಿದ್ದಾರೆ. ಮಂಡಳಿಯು ಯೋಜನಾ ಕಾರ್ಯಾಚರಣೆಗಳಿಗಾಗಿ 𝗦𝗧𝗣 ಆವರಣದಲ್ಲಿ ಸರಿಸುಮಾರು 𝟭𝟯,𝟬𝟬𝟬 𝘀𝗾. 𝗺 ಜಾಗವನ್ನು ಒದಗಿಸಲಿದ್ದು, ಜಮೀನಿನ ಮಾಲೀಕತ್ವ ಜಲಮಂಡಳಿಯದ್ದೇ ಆಗಿರಲಿದೆ.
ಆರ್ಥಿಕ ಲಾಭಗಳ ಆಚೆಗೆ, ಈ ಯೋಜನೆಯಿಂದಾಗಿ ಬೆಂಗಳೂರಿನ ಇಂಧನ ಭದ್ರತೆಗೆ ದೊಡ್ಡ ಉತ್ತೇಜನ ಸಿಗಲಿದೆ. ಪ್ರಸ್ತುತ ಭಾರತ ದೇಶದಲ್ಲಿ ಬಹುಪಾಲು ಬಳಸಲಾಗುವ ಎಲ್‌ಪಿಜಿಗಾಗಿ ಬೇರೆ ದೇಶಗಳ ಮೇಲೆ ಅವಲಂಬಿತವಾಗಿದೆ. ಸರ್ಕಾರದಿಂದ ಯಾವುದೇ ವೆಚ್ಚವಿಲ್ಲದೆ ಪೋಲಾಗುತ್ತಿರುವ ಅನಿಲವನ್ನು ಪರಿವರ್ತಿಸುವ ಮೂಲಕ ಉತ್ತಮ ಅದಾಯು ನೀರಿಕ್ಷಿಸುವ ಜೊತೆಯಲ್ಲಿಯೇ ದೇಶವನ್ನು ಸ್ವಾವಲಂಬಿಯನ್ನಾಗಿಸಬಹುದಾಗಿದೆ. ಈ ನಿಟ್ಟಿನಲ್ಲಿ ಬೆಂಗಳೂರಿನ ಈ ಯೋಜನೆಯು ಇತರ ಭಾರತೀಯ ನಗರಗಳು ಅನುಸರಿಸಲು ಒಂದು ರಾಷ್ಟ್ರೀಯ ಮಾದರಿ ಯೋಜನೆಯಾಗಿದೆ.
ಡಾ. ರಾಮ್ ಪ್ರಸಾತ್ ಮನೋಹರ್, ಅವರು ಪ್ರತಿಕ್ರಿಯಿಸಿ, “ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿರಂತರ ಮಾರ್ಗದರ್ಶನ ಮತ್ತು ನಾಯಕತ್ವದಲ್ಲಿ, ನಾವು ಅಕ್ಷರಶಃ ತ್ಯಾಜ್ಯವನ್ನು ಸಂಪತ್ತಿನ ಬೃಹತ್ ಮೂಲವಾಗಿ ಪರಿವರ್ತಿಸುತ್ತಿದ್ದೇವೆ. 𝟱𝟱𝟬 𝗠𝗟𝗗 ತ್ಯಾಜ್ಯ ನೀರನ್ನು ಬಳಸಿ ಮೌಲ್ಯದ ಕಂಪ್ರೆಸ್ಡ್ ಬಯೋ-ಗ್ಯಾಸ್ (𝗖𝗼𝗺𝗽𝗿𝗲𝘀𝘀𝗲𝗱 𝗕𝗶𝗼-𝗚𝗮𝘀 – 𝗖𝗕𝗚) ಆಗಿ ಮೇಲ್ದರ್ಜೆಗೇರಿಸುವ ಯೋಜನೆ ಇದು ಭಾರತದಲ್ಲೇ ಈ ರೀತಿಯ ಅತಿದೊಡ್ಡ ಮತ್ತು ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ಈ 𝗣𝗣𝗣 ಮಾದರಿಯು ಬಂಡವಾಳ ಅಥವಾ ಕಾರ್ಯಾಚರಣೆಗಳಲ್ಲಿ ಒಂದೇ ಒಂದು ರೂಪಾಯಿಯನ್ನು ಹೂಡಿಕೆ ಮಾಡದೆ 𝟭𝟮𝟬 ಕೋಟಿಗೂ ಅಧಿಕ ಹೊಸ ಆದಾಯವನ್ನು ಗಳಿಸಲು ಬೆಂಗಳೂರು ಜಲಮಂಡಳಿಗೆ ಅನುವು ಮಾಡಿಕೊಡುತ್ತದೆ. ಇದು ನಮ್ಮ ಆರ್ಥಿಕ ಸ್ಥಿತಿಯನ್ನು ಹೆಚ್ಚಿಸುವ, ನಮ್ಮ ನಗರದ ಇಂಧನ ಭದ್ರತೆಯನ್ನು ಬಲಪಡಿಸುವ ಮತ್ತು ದೇಶಕ್ಕೆ ಮಾದರಿಯಾದ ಯೋಜನೆಯಾಗಿದೆ,” ಎಂದು ತಿಳಿಸಿದ್ದಾರೆ.

Continue Reading
Advertisement
Latest3 ನಿಮಿಷಗಳು ago

ಪಿಎನ್‌ಎಸ್‌ ವಿಸ್ತಾರ ಮುಂಚೂಣಿ ಸುದ್ದಿವಾಹಿನಿಯಾಗಲಿ: ಬಿಜೆಪಿ ಮುಖಂಡ ಎನ್‌.ಆರ್‌. ರಮೇಶ್‌ ವಿಶ್ವಾಸ

ಫ್ಯಾಷನ್10 ನಿಮಿಷಗಳು ago

ದೇಶದ ಗಮನ ಸೆಳೆದ ಕಾರವಾರದ ಪ್ರತಿಭೆ: ಶಾಸಕ ಸತೀಶ್ ಸೈಲ್ ಪುತ್ರಿಗೆ ‘ಮಿಸ್ ಇಂಡಿಯಾ’ ಕಿರೀಟದ ಗರಿ.

Latest28 ನಿಮಿಷಗಳು ago

ಹುಬ್ಬಳ್ಳಿ ರನ್-ವೇ ಬದಲಿಗೆ ಬೆಂಗಳೂರಲ್ಲಿ ಲ್ಯಾಂಡ್ ಆದ ಫ್ಲೈಟ್: ಆಗಸದಲ್ಲಿ ವಿಮಾನ ಸುತ್ತಾಡಿದ್ದೇಕೆ?

ಕರ್ನಾಟಕ42 ನಿಮಿಷಗಳು ago

SSLC ಫಲಿತಾಂಶ ಪ್ರಕಟ ಯಾವಾಗ? ತಡ ಆಗುತ್ತಿರುವುದು ಏಕೆ?; ಇಲ್ಲಿದೆ ಮಾಹಿತಿ

Latest55 ನಿಮಿಷಗಳು ago

ಕಾಂಗ್ರೆಸ್‌ ಶಾಸಕ ಹ್ಯಾರಿಸ್‌, ಪುತ್ರ ನಲಪಾಡ್‌ಗೆ ಇಡಿ ಶಾಕ್!

Latest1 ಗಂಟೆ ago

ತ್ಯಾಜ್ಯದಿಂದ ಸಂಪತ್ತು ಸೃಷ್ಟಿ: ದೇಶದ ಅತಿದೊಡ್ಡ ಬಯೋ-ಗ್ಯಾಸ್ ಯೋಜನೆ ಅನುಷ್ಠಾನಕ್ಕೆ ಜಲಮಂಡಳಿ ಸಜ್ಜು

ರಾಜಕೀಯ1 ಗಂಟೆ ago

ದೇವರನ್ನು ನಂಬಿ, ಮೂಢನಂಬಿಕೆಗಳನ್ನು ತ್ಯಜಿಸಿ: ಸಿಎಂ ಸಿದ್ದರಾಮಯ್ಯ ಕರೆ

Latest1 ಗಂಟೆ ago

ಅಕ್ಷಯ ತೃತೀಯದ ದಿನ ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌

ಕರ್ನಾಟಕ22 ಗಂಟೆಗಳು ago

ಮಹಿಳಾ ಮೀಸಲಾತಿಗೆ ವಿರೋಧವಿಲ್ಲ: ಸಿಎಂ ಸಿದ್ದರಾಮಯ್ಯ

Latest1 ದಿನ ago

ಶ್ರೀ ಶ್ರೀ ಡಾ. ಪ್ರಕಾಶನಾಥ ಸ್ವಾಮೀಜಿ ಅವರಿಂದ PNS ವಿಸ್ತಾರ ನ್ಯೂಸ್ ಕಚೇರಿ ಉದ್ಘಾಟನೆ

galipata neetu
ಕಿರುತೆರೆ2 ವರ್ಷಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 ವರ್ಷಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 ವರ್ಷಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 ವರ್ಷಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 ವರ್ಷಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 ವರ್ಷಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ವರ್ಷಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ವರ್ಷಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ವರ್ಷಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ವರ್ಷಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ವರ್ಷಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ವರ್ಷಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ವರ್ಷಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ವರ್ಷಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ವರ್ಷಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌