Site icon Vistara News

Stabbing Case: ಕುಡಿದ ಅಮಲಿನಲ್ಲಿ ಭುಜ ತಗುಲಿದ್ದಕ್ಕೆ ಕಿರಿಕ್; ವ್ಯಕ್ತಿಗೆ ಚೂರಿಯಿಂದ ಮನಸೋ ಇಚ್ಛೆ ಇರಿದ ಯುವಕರು

Stabbing Case

ಚಿಕ್ಕಬಳ್ಳಾಪುರ: ಬಾರ್‌ನೊಳಗೆ ಕುಡಿದ ಅಮಲಿನಲ್ಲಿ ಭುಜ ತಗುಲಿದ್ದಕ್ಕೆ ಕಿರಿಕ್ ತೆಗೆದ ಯುವಕರು, ವ್ಯಕ್ತಿಯೊಬ್ಬರಿಗೆ ಮನಸೋ ಇಚ್ಛೆ ಇರಿದಿರುವ ಘಟನೆ (Stabbing Case) ಜಿಲ್ಲೆಯ ಗೌರಿಬಿದನೂರು ನಗರದ ಸೆವೆನ್ ಹಿಲ್ಸ್ ಬಾರ್ ಆ್ಯಂಡ್ ರೆಸ್ಟೋರೆಂಟ್‌ನಲ್ಲಿ ನಡೆದಿದೆ. ಸದ್ಯ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ತರಕಾರಿ ವ್ಯಾಪಾರಿ ರಮೇಶ್ ಎಂಬುವವರ ಮೇಲೆ ಗಂಭೀರ ಹಲ್ಲೆ ನಡೆಸಲಾಗಿದೆ. ಚಾಲಕ ಮಣಿಕಂಠ ಹಾಗೂ ಸ್ನೇಹಿತ ಪವನ್‌ ಹಲ್ಲೆ ಆರೋಪಿಗಳು. ಬಾರ್‌ನಲ್ಲಿ ಭುಜ ತಗುಲಿದ್ದಕ್ಕೆ ರಮೇಶ್‌ ಹಾಗೂ ಯುವಕರ ನಡುವೆ ಮಾತಿಗೆ ಮಾತು ಬೆಳೆದು ಜಗಳ ನಡೆದಿದೆ. ಈ ವೇಳೆ ಆರೋಪಿಗಳು ಚಾಕುವಿನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರಿಂದ ವ್ಯಾಪಾರಿಗೆ ಗಂಭೀರ ಗಾಯಗಳಾಗಿವೆ. ರಮೇಶ್‌ಗೆ ಬೆಂಗಳೂರಿನ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಟಾಟಾ ಏಸ್-ಬೈಕ್ ನಡುವೆ ಅಪಘಾತ; ಸವಾರ ಸಾವು

ಚಿಕ್ಕಬಳ್ಳಾಪುರ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬಾಗೇಪಲ್ಲಿ ತಾಲೂಕಿನ ಚೇಳೂರಿನ ಹೊರವಲಯದಲ್ಲಿ ನಡೆದಿದೆ. ಚೇಳೂರು ಮೂಲದ ಪವನ್ ಕುಮಾರ್ (35) ಮೃತ. ಟಾಟಾ ಏಸ್ ಚಾಲಕನ ಅಜಾಗರೂಕತೆಯ ಚಾಲನೆಯಿಂದ ಅಪಘಾತ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ | Bomb Threat: ದಿಲ್ಲಿಯ ನಾಲ್ಕು ಆಸ್ಪತ್ರೆಗಳಿಗೆ ಬಾಂಬ್‌ ಬೆದರಿಕೆ; ಇ-ಮೇಲ್‌ ಮೂಲಕ ಸಂದೇಶ ರವಾನೆ

ಪ್ರೀತಿಸಿದ ಹುಡುಗಿ ಕೈಕೊಟ್ಟಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ

Love Failure

ದೊಡ್ಡಬಳ್ಳಾಪುರ: ಪ್ರೀತಿಸಿದ ಹುಡುಗಿ (Love Failure) ಕೈ ಕೊಟ್ಟಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾನೆ. ಕಾಳುಮಾತ್ರೆ ಸೇವಿಸಿ ದೊಡ್ಡಬಳ್ಳಾಪುರ ತಾಲೂಕಿನ ಕೊಡಿಗೇಹಳ್ಳಿ ನಿವಾಸಿ ಬಾಲಾಜಿ (23) ಮೃತಪಟ್ಟಿದ್ದಾನೆ.

ಬಾಲಾಜಿಗೆ ಒಂದು ವರ್ಷದ ಹಿಂದೆ ಇನ್ಸ್ಟಾಗ್ರಾಮ್‌ನಲ್ಲಿ ಯುವತಿಯೊಬ್ಬಳು ಪರಿಚಯವಾಗಿದ್ದಳು. ಕನಕಪುರ ಮೂಲದ ಯುವತಿ ಜತೆಗೆ ಪರಿಚಯವು ಪ್ರೀತಿಗೆ ತಿರುಗಿತ್ತು. ಪ್ರೀತಿ- ಪ್ರೇ‌ಮದ ಗುಂಗಿನಲ್ಲಿ ಇಬ್ಬರು ಒಟ್ಟೊಟ್ಟಿಗೆ ಸುತ್ತಾಡಿದ್ದಾರೆ. ಎಲ್ಲ ಕಡೆ ಜತೆಯಾಗಿ ಸುತ್ತಾಡಿ ಕೊನೆಗೆ ಬೇರೊಬ್ಬನ ಜತೆ ಲವ್‌ನಲ್ಲಿರುವುದಾಗಿ ಹೇಳಿ ಕೈಕೊಟ್ಟಿದ್ದಾಳೆ ಎಂಬ ಆರೋಪವಿದೆ.

ಯುವತಿ ಕೈಕೊಟ್ಟ ಪರಿಣಾಮ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಮದುವೆ ಮಾಡಿಕೊಳ್ಳೋಣ ಅಂದಿದ್ದಕ್ಕೆ ಮನೆಯಲ್ಲಿ ಒಪ್ಪಲ್ಲ ಎಂದಿದ್ದಾಳಂತೆ. ಜತೆಗೆ ಬೇರೆ ಯುವಕನ ಜತೆ ಲವ್‌ನಲ್ಲಿರುವುದಾಗಿ ಹೇಳಿದ್ದಳಂತೆ. ಈ ಕಾರಣಕ್ಕೆ ಮನನೊಂದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇದನ್ನೂ ಓದಿ: Davanagere News : ಇಳಿ ವಯಸ್ಸಿನಲ್ಲಿ ಕೂಡಿ ಬಂದ ಕಂಕಣ ಭಾಗ್ಯ; ದೂರಾಯಿತು ಒಂಟಿತನ

ಆಮೆಜಾನ್‌ನಲ್ಲಿ ಡೆಲವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಬಾಲಾಜಿ ಬಡ ಕುಟುಂಬಕ್ಕೆ ಆಧಾರವಾಗಿದ್ದ. ಆದರೆ ಇದೀಗ ಮಗನ ದುರಂತ ಅಂತ್ಯ ಕಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಯುವತಿ ವಿರುದ್ಧ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಮೃತ ಕುಟುಂಬಸ್ಥರು ದೂರು ನೀಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕೊಡಿಗೇಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

Exit mobile version