Independence Day 2023: 77ನೇ ಸ್ವಾತಂತ್ರ್ಯ ದಿನಾಚರಣೆಗೆ ವೇದಿಕೆ ಸಜ್ಜು; ಪ್ರಧಾನಿ ನರೇಂದ್ರ ಮೋದಿ ನೇತೃತ್ವ Vistara News

ಕರ್ನಾಟಕ

Independence Day 2023: 77ನೇ ಸ್ವಾತಂತ್ರ್ಯ ದಿನಾಚರಣೆಗೆ ವೇದಿಕೆ ಸಜ್ಜು; ಪ್ರಧಾನಿ ನರೇಂದ್ರ ಮೋದಿ ನೇತೃತ್ವ

Independence Day 2023: ನವದೆಹಲಿಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಗಾಗಿ ಭರದ ಸಿದ್ಧತೆ ನಡೆಯುತ್ತಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಹೆಚ್ಚಿನ ಸಂಖ್ಯೆಯಲ್ಲಿ ಅತಿಥಿಗಳನ್ನು ಆಹ್ವಾನಿಸಲಾಗಿದೆ.

VISTARANEWS.COM


on

red fort in delhi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: 77ನೇ ಸ್ವಾತಂತ್ರ್ಯ ದಿನಾಚರಣೆಗೆ ಆಗಸ್ಟ್ 15ರಂದು ದೆಹಲಿಯ ಐತಿಹಾಸಿಕ ಕೆಂಪು ಕೋಟೆಯಲ್ಲಿ ವೇದಿಕೆ ಸಜ್ಜಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯೋತ್ಸವ (Independence Day 2023) ನೇತೃತ್ವ ವಹಿಸಲಿದ್ದು, ರಾಷ್ಟ್ರಧ್ವಜಾರೋಹಣ ಮಾಡಿದ ಬಳಿಕ ರಾಷ್ಟ್ರವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

2021ರ ಮಾರ್ಚ್‌ 12ರಂದು ಗುಜರಾತ್‌ನ ಅಹಮದಾಬಾದ್‌ನಲ್ಲಿರುವ ಸಬರಮತಿ ಆಶ್ರಮದಿಂದ ಪ್ರಧಾನಿಗಳು ಪ್ರಾರಂಭಿಸಿದ ‘ಆಜಾದಿ ಕಾ ಅಮೃತ ಮಹೋತ್ಸವ’ ಆಚರಣೆಯು ಈ ವರ್ಷದ ಸ್ವಾತಂತ್ರ್ಯ ದಿನದಂದು ಮುಕ್ತಾಯಗೊಳ್ಳುತ್ತದೆ. 77ನೇ ಸ್ವಾತಂತ್ರ್ಯ ದಿನಾಚರಣೆಗಾಗಿ ಹಲವಾರು ಹೊಸ ಉಪಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಹೆಚ್ಚಿನ ಸಂಖ್ಯೆಯಲ್ಲಿ ಅತಿಥಿಗಳನ್ನು ಆಹ್ವಾನಿಸಲಾಗಿದೆ.

1800 ವಿಶೇಷ ಅತಿಥಿಗಳಿಗೆ ಆಹ್ವಾನ

ಕೆಂಪು ಕೋಟೆಯಲ್ಲಿನ ಆಚರಣೆಯ ಭಾಗವಾಗಲು ದೇಶದಾದ್ಯಂತ ವಿವಿಧ ವೃತ್ತಿಗಳ ಸುಮಾರು 1,800 ಜನರನ್ನು ಅವರ ಕುಟುಂಬದೊಂದಿಗೆ ವಿಶೇಷ ಅತಿಥಿಗಳಾಗಿ ಆಹ್ವಾನಿಸಲಾಗಿದೆ. ಸರ್ಕಾರದ ʼಜನ ಭಾಗೀದಾರಿʼದೃಷ್ಟಿಕೋನಕ್ಕೆ ಅನುಗುಣವಾಗಿ ಈ ಉಪಕ್ರಮವನ್ನು ತೆಗೆದುಕೊಳ್ಳಲಾಗಿದೆ.

ಈ ವಿಶೇಷ ಅತಿಥಿಗಳಲ್ಲಿ 660ಕ್ಕೂ ಹೆಚ್ಚು ವಿವಿಧ ಗ್ರಾಮಗಳ 400ಕ್ಕೂ ಹೆಚ್ಚು ಗ್ರಾಪಂ ಅಧ್ಯಕ್ಷರು ಇದ್ದು, ರೈತ ಉತ್ಪಾದಕ ಸಂಸ್ಥೆಗಳ ಯೋಜನೆಯ 250, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಮತ್ತು ಪ್ರಧಾನ ಮಂತ್ರಿ ಕೌಶಲ ವಿಕಾಸ ಯೋಜನೆಯ ತಲಾ 50, ಹೊಸ ಸಂಸತ್ತಿನ ಕಟ್ಟಡ ಸೇರಿ ಸೆಂಟ್ರಲ್ ವಿಸ್ಟಾ ಯೋಜನೆಯ 50 ಶ್ರಮ ಯೋಗಿಗಳು (ನಿರ್ಮಾಣ ಕೆಲಸಗಾರರು), ಖಾದಿ ಕಾರ್ಮಿಕರು, ಗಡಿ ರಸ್ತೆಗಳ ನಿರ್ಮಾಣ, ಅಮೃತ್ ಸರೋವರ ಮತ್ತು ಹರ್ ಘರ್ ಜಲ ಯೋಜನೆಯ ತಲಾ 50 ಮತ್ತು ತಲಾ 50 ಪ್ರಾಥಮಿಕ ಶಾಲಾ ಶಿಕ್ಷಕರು, ದಾದಿಯರು ಮತ್ತು ಮೀನುಗಾರರು ವಿಶೇಷ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಇದನ್ನೂ ಓದಿ | Independence Day 2023 : 77ರ ಸ್ವಾತಂತ್ರ್ಯದಿನಕ್ಕೆ ಮಾಣಿಕ್‌ ಷಾ ಮೈದಾನ ಸಿದ್ಧ; ಇರಲಿದೆ ಸಾಹಸ ಪ್ರದರ್ಶನ

ಈ ವಿಶೇಷ ಅತಿಥಿಗಳಲ್ಲಿ ಕೆಲವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಲು ಮತ್ತು ದೆಹಲಿಯಲ್ಲಿ ತಮ್ಮ ವಾಸ್ತವ್ಯದ ಭಾಗವಾಗಿ ಕೇಂದ್ರ ರಕ್ಷಣಾ ಖಾತೆ ರಾಜ್ಯ ಸಚಿವ ಅಜಯ್ ಭಟ್ ಅವರನ್ನು ಭೇಟಿ ಮಾಡಲು ನಿರ್ಧರಿಸಿದ್ದಾರೆ. ಪ್ರತಿ ರಾಜ್ಯ, ಕೇಂದ್ರಾಡಳಿತ ಪ್ರದೇಶದಿಂದ 75 ದಂಪತಿಯನ್ನು ಅವರ ಸಾಂಪ್ರದಾಯಿಕ ಉಡುಗೆಯಲ್ಲಿ, ಕೆಂಪು ಕೋಟೆಯಲ್ಲಿ ಸಮಾರಂಭವನ್ನು ವೀಕ್ಷಿಸಲು ಆಹ್ವಾನಿಸಲಾಗಿದೆ.

PM Narendra Modi Speech at Independence Day

ಆ.15ರಿಂದ-20ರವರೆಗೆ ಆನ್‌ಲೈನ್ ಸೆಲ್ಫಿ ಸ್ಪರ್ಧೆ

ಆಚರಣೆಯ ಭಾಗವಾಗಿ ರಕ್ಷಣಾ ಸಚಿವಾಲಯವು ಆಗಸ್ಟ್ 15-20 ರಿಂದ MyGov ಪೋರ್ಟಲ್‌ ನಲ್ಲಿ ಆನ್‌ಲೈನ್ ಸೆಲ್ಫಿ ಸ್ಪರ್ಧೆಯನ್ನು ನಡೆಸುತ್ತಿದೆ. ಸ್ಪರ್ಧೆಯಲ್ಲಿ ಭಾಗವಹಿಸಲು 12 ಸ್ಥಾಪನೆ (Installation) ಗಳಲ್ಲಿ ಒಂದು ಅಥವಾ ಹೆಚ್ಚಿನ ಸೆಲ್ಫಿಗಳನ್ನು ತೆಗೆದುಕೊಳ್ಳಲು ಮತ್ತು ಅವುಗಳನ್ನು MyGov ಪ್ಲಾಟ್‌ ಫಾರ್ಮ್‌ನಲ್ಲಿ ಅಪ್‌ಲೋಡ್ ಮಾಡಲು ಜನರನ್ನು ಪ್ರೋತ್ಸಾಹಿಸಲಾಗುತ್ತದೆ. ಆನ್‌ಲೈನ್ ಸೆಲ್ಫಿ ಸ್ಪರ್ಧೆಯ ಆಧಾರದ ಮೇಲೆ ಪ್ರತಿ ಸ್ಥಾಪನೆಯಿಂದ ಒಬ್ಬರಂತೆ ಹನ್ನೆರಡು ವಿಜೇತರನ್ನು ಆಯ್ಕೆ ಮಾಡಲಾಗುತ್ತದೆ. ವಿಜೇತರಿಗೆ ತಲಾ 10,000 ರೂಪಾಯಿ ಬಹುಮಾನ ನೀಡಲಾಗುವುದು.

ಇ-ಆಮಂತ್ರಣಗಳು

ಎಲ್ಲಾ ಅಧಿಕೃತ ಆಹ್ವಾನಗಳನ್ನು ಆಮಂತ್ರಣ್ ಪೋರ್ಟಲ್ (http://www.aamantran.mod.gov.in) ಮೂಲಕ ಆನ್‌ಲೈನ್‌ನಲ್ಲಿ ಕಳುಹಿಸಲಾಗಿದೆ. ಪೋರ್ಟಲ್ ಮೂಲಕ 17,000 ಇ-ಆಮಂತ್ರಣ ಕಾರ್ಡ್‌ಗಳನ್ನು ನೀಡಲಾಗಿದೆ.‌

ಸಮಾರಂಭ ಹೇಗೆ ನಡೆಯಲಿದೆ?

ಕೆಂಪುಕೋಟೆಗೆ ಆಗಮಿಸುವ ಪ್ರಧಾನಿ ಅವರನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಖಾತೆ ರಾಜ್ಯ ಸಚಿವ ಅಜಯ್ ಭಟ್ ಮತ್ತು ರಕ್ಷಣಾ ಕಾರ್ಯದರ್ಶಿ ಗಿರಿಧರ್ ಅರಮನೆ ಅವರು ಬರಮಾಡಿಕೊಳ್ಳಲಿದ್ದಾರೆ. ರಕ್ಷಣಾ ಕಾರ್ಯದರ್ಶಿಯು ದೆಹಲಿ ಪ್ರದೇಶದ ಜನರಲ್ ಆಫೀಸರ್ ಕಮಾಂಡಿಂಗ್ (GoC), ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ಅವರನ್ನು ಪ್ರಧಾನಿಯವರಿಗೆ ಪರಿಚಯಿಸುತ್ತಾರೆ. ನಂತರ ದೆಹಲಿ ಪ್ರದೇಶದ ಜಿಒಸಿ ಅವರು ನರೇಂದ್ರ ಮೋದಿಯವರನ್ನು ಸೆಲ್ಯೂಟಿಂಗ್ ಬೇಸ್‌ಗೆ ಕರೆದೊಯ್ಯುತ್ತಾರೆ. ಅಲ್ಲಿ ಸಂಯೋಜಿತ ಇಂಟರ್-ಸರ್ವೀಸ್ ಮತ್ತು ದೆಹಲಿ ಪೊಲೀಸ್ ಗಾರ್ಡ್ ಪ್ರಧಾನಿಗೆ ಸಾಮಾನ್ಯ ಸೆಲ್ಯೂಟ್ ಸಲ್ಲಿಸುತ್ತಾರೆ. ಬಳಿಕ ಪ್ರಧಾನಿ ಗೌರವ ವಂದನೆ ಸ್ವೀಕರಿಸುತ್ತಾರೆ.

ಪ್ರಧಾನಿಗಳಿಗೆ ಗೌರವ ವಂದನೆ ಸಲ್ಲಿಸುವ ತಂಡವು ಸೇನೆ, ವಾಯುಪಡೆ ಮತ್ತು ದೆಹಲಿ ಪೊಲೀಸರ ತಲಾ 25 ಸಿಬ್ಬಂದಿ ಮತ್ತು ನೌಕಾಪಡೆಯ ಒಬ್ಬ ಅಧಿಕಾರಿ ಮತ್ತು 24 ಸಿಬ್ಬಂದಿಯನ್ನು ಒಳಗೊಂಡಿರುತ್ತದೆ. ಭಾರತೀಯ ಸೇನೆಯು ಈ ವರ್ಷ ಸಮನ್ವಯ ಸೇವೆಯಾಗಿದೆ. ಗಾರ್ಡ್ ಆಫ್ ಹಾನರ್‌ಗೆ ಮೇಜರ್ ವಿಕಾಸ್ ಸಾಂಗ್ವಾನ್ ಅವರು ಕಮಾಂಡರ್ ಆಗಿರುತ್ತಾರೆ. ಪ್ರಧಾನ ಮಂತ್ರಿಗಳ ಗಾರ್ಡ್‌ನಲ್ಲಿರುವ ಸೇನಾ ತುಕಡಿಗೆ ಮೇಜರ್ ಇಂದ್ರಜೀತ್ ಸಚಿನ್, ನೌಕಾದಳಕ್ಕೆ ಲೆಫ್ಟಿನೆಂಟ್ ಕಮಾಂಡರ್ ಎಂವಿ ರಾಹುಲ್ ರಾಮನ್ ಮತ್ತು ವಾಯುಪಡೆಯ ತುಕಡಿಗೆ ಸ್ಕ್ವಾಡ್ರನ್ ಲೀಡರ್ ಆಕಾಶ್ ಗಂಘಾಸ್ ಅವರು ಕಮಾಂಡರ್ ಆಗಿರುತ್ತಾರೆ. ದೆಹಲಿ ಪೊಲೀಸ್ ತುಕಡಿಗೆ ಹೆಚ್ಚುವರಿ ಡಿಸಿಪಿ ಸಂಧ್ಯಾ ಸ್ವಾಮಿ ಅವರು ಕಮಾಂಡರ್ ಆಗಿರುತ್ತಾರೆ.

ಇದನ್ನೂ ಓದಿ | Independence Day 2023 : ಆಗಸ್ಟ್‌ 15ಕ್ಕೆ ಬೆಂಗಳೂರಿನ ಈ ಮಾರ್ಗದಲ್ಲಿ ವಾಹನ ಸಂಚಾರ ನಿರ್ಬಂಧ

ಗೌರವ ವಂದನೆ ಸ್ವೀಕರಿಸಿದ ನಂತರ, ಪ್ರಧಾನಿ ಅವರು ಕೆಂಪು ಕೋಟೆಯ ಆವರಣಕ್ಕೆ ತೆರಳುತ್ತಾರೆ. ಅಲ್ಲಿ ಅವರನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಕ್ಷಣಾ ರಾಜ್ಯ ಮಂತ್ರಿ ಅಜಯ್ ಭಟ್, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಅನಿಲ್ ಚೌವ್ಹಾಣ್, ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ, ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಆರ್ ಹರಿಕುಮಾರ್ ಮತ್ತು ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ.ಆರ್ ಚೌಧರಿ ಸ್ವಾಗತಿಸುತ್ತಾರೆ. ದೆಹಲಿ ಪ್ರದೇಶದ ಜಿಒಸಿಯವರು ಪ್ರಧಾನ ಮಂತ್ರಿಯವರನ್ನು ರಾಷ್ಟ್ರಧ್ವಜಾರೋಹಣ ಮಾಡುವ ವೇದಿಕೆಗೆ ಕರೆದೊಯ್ಯುತ್ತಾರೆ.

ಧ್ಜಜಾರೋಹಣದ ನಂತರ, ತ್ರಿವರ್ಣ ಧ್ವಜವು ‘ರಾಷ್ಟ್ರೀಯ ಸೆಲ್ಯೂಟ್‌’ ಅನ್ನು ಸ್ವೀಕರಿಸುತ್ತದೆ. ಒಬ್ಬರು ಜೆಸಿಒ ಮತ್ತು 20 ಇತರ ಶ್ರೇಣಿಗಳನ್ನು ಒಳಗೊಂಡಿರುವ ಆರ್ಮಿ ಬ್ಯಾಂಡ್, ರಾಷ್ಟ್ರ ಧ್ವಜಾರೋಹಣ ಮತ್ತು ‘ರಾಷ್ಟ್ರೀಯ ಸೆಲ್ಯೂಟ್‌’ ಸಮಯದಲ್ಲಿ ರಾಷ್ಟ್ರಗೀತೆಯನ್ನು ನುಡಿಸುತ್ತದೆ. ನಾಯಕ್ ಸುಬೇದಾರ್ ಜತೀಂದರ್ ಸಿಂಗ್ ಅವರ ನೇತೃತ್ವದಲ್ಲಿ ಬ್ಯಾಂಡ್ ನಡೆಯಲಿದೆ.

ಮೇಜರ್ ನಿಕಿತಾ ನಾಯರ್ ಮತ್ತು ಮೇಜರ್ ಜಾಸ್ಮಿನ್ ಕೌರ್ ಅವರು ರಾಷ್ಟ್ರ ಧ್ವಜಾರೋಹಣದಲ್ಲಿ ಪ್ರಧಾನ ಮಂತ್ರಿಯವರಿಗೆ ಸಹಾಯ ಮಾಡುತ್ತಾರೆ. ಇದನ್ನು ಗಣ್ಯ 8711 ಫೀಲ್ಡ್ ಬ್ಯಾಟರಿ (ಸೆರೆಮೋನಿಯಲ್)ಯ ಧೀರ ಗನ್ನರ್‌ಗಳ 21 ಗನ್ ಸೆಲ್ಯೂಟ್‌ನೊಂದಿಗೆ ಮೇಳೈಸಲಾಗುತ್ತದೆ. ಸೆರೆಮೋನಿಯಲ್ ಬ್ಯಾಟರಿಯ‌ ನೇತೃತ್ವವನ್ನು ಲೆಫ್ಟಿನೆಂಟ್ ಕರ್ನಲ್ ವಿಕಾಸ್ ಕುಮಾರ್ ವಹಿಸಲಿದ್ದಾರೆ ಮತ್ತು ಗನ್ ಪೊಸಿಷನ್ ಆಫೀಸರ್ ನಾಯಕ್ ಸುಬೇದಾರ್ (ಎಐಜಿ) ಅನೂಪ್ ಸಿಂಗ್ ಆಗಿರುತ್ತಾರೆ.

ಐವರು ಅಧಿಕಾರಿಗಳು ಮತ್ತು ಸೇನೆ, ನೌಕಾಪಡೆ, ವಾಯುಪಡೆ ಮತ್ತು ದೆಹಲಿ ಪೊಲೀಸರ 128 ಇತರ ಶ್ರೇಣಿಗಳನ್ನು ಒಳಗೊಂಡಿರುವ ರಾಷ್ಟ್ರೀಯ ಧ್ವಜ ರಕ್ಷಕ ತಂಡವು ಪ್ರಧಾನಮಂತ್ರಿ ಅವರು ರಾಷ್ಟ್ರಧ್ವಜಾರೋಹಣ ಮಾಡುವ ಸಮಯದಲ್ಲಿ ರಾಷ್ಟ್ರೀಯ ಗೌರವವನ್ನು ಸಲ್ಲಿಸುತ್ತಾರೆ. ಸೇನೆಯ ಮೇಜರ್ ಅಭಿನವ್ ದೇಥಾ ಅವರು ಈ ಇಂಟರ್-ಸರ್ವೀಸ್ ಗಾರ್ಡ್ ಮತ್ತು ಪೊಲೀಸ್ ಗಾರ್ಡ್‌ ನ ಕಮಾಂಡ್ ಆಗಿರುತ್ತಾರೆ.

ರಾಷ್ಟ್ರೀಯ ಧ್ವಜ ರಕ್ಷಕ ತಂಡದಲ್ಲಿರುವ ಸೇನಾ ತುಕಡಿಗೆ ಮೇಜರ್ ಮುಖೇಶ್ ಕುಮಾರ್ ಸಿಂಗ್, ನೌಕಾ ತುಕಡಿಗೆ ಲೆಫ್ಟಿನೆಂಟ್ ಕಮಾಂಡರ್ ಹರ್‌ಪ್ರೀತ್ ಮಾನ್ ಮತ್ತು ವಾಯುಪಡೆಯ ತುಕಡಿಗೆ ಸ್ಕ್ವಾಡ್ರನ್ ಲೀಡರ್ ಶ್ರೇಯ್ ಚೌಧರಿ ಕಮಾಂಡರ್ ಆಗಿರುತ್ತಾರೆ. ದೆಹಲಿ ಪೊಲೀಸ್ ತುಕಡಿಗೆ ಹೆಚ್ಚುವರಿ ಡಿಸಿಪಿ ಶಶಾಂಕ್ ಜೈಸ್ವಾಲ್ ಅವರು ಕಮಾಂಡರ್ ಆಗಿರುತ್ತಾರೆ.

ಪ್ರಧಾನಮಂತ್ರಿಯವರು ರಾಷ್ಟ್ರಧ್ವಜವನ್ನು ಹಾರಿಸಿದ ತಕ್ಷಣ, ಲೈನ್ ಆಸ್ಟರ್ನ್ ಫಾರ್ಮೇಶನ್‌ (ಒಂದರ ಹಿಂದೆ ಒಂದರಂತೆ) ನಲ್ಲಿ ಭಾರತೀಯ ವಾಯುಪಡೆಯ ಎರಡು ಸುಧಾರಿತ ಲಘು ಹೆಲಿಕಾಪ್ಟರ್‌ಗಳಾದ ಮಾರ್ಕ್-III ಧ್ರುವ್ ಮೂಲಕ ಧ್ವಜಾರೋಹಣ ಸ್ಥಳದ ಮೇಲೆ ಪುಷ್ಪವೃಷ್ಟಿ ಮಾಡಲಾಗುವುದು. ವಿಂಗ್ ಕಮಾಂಡರ್ ಅಂಬರ್ ಅಗರ್ವಾಲ್ ಮತ್ತು ಸ್ಕ್ವಾಡ್ರನ್ ಲೀಡರ್ ಹಿಮಾಂಶು ಶರ್ಮಾ ಹೆಲಿಕಾಪ್ಟರ್‌ನ ಕ್ಯಾಪ್ಟನ್‌ಗಳಾಗಿರುತ್ತಾರೆ.

ಇದನ್ನೂ ಓದಿ | Independence Day 2023 : ಕರ್ನಾಟಕದಲ್ಲಿ ಸ್ವಾತಂತ್ರ್ಯ ಹೋರಾಟಕ್ಕೆ ಸಾಕ್ಷಿಯಾದ ಸ್ಥಳಗಳಿವು

ಪುಷ್ಪವೃಷ್ಟಿಯ ನಂತರ ಪ್ರಧಾನಿಯವರು ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಪ್ರಧಾನಮಂತ್ರಿಯವರ ಭಾಷಣದ ಕೊನೆಯಲ್ಲಿ, ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (ಎನ್‌ ಸಿ ಸಿ) ನ ಕೆಡೆಟ್‌ಗಳು ರಾಷ್ಟ್ರಗೀತೆಯನ್ನು ಹಾಡುತ್ತಾರೆ. ದೇಶದಾದ್ಯಂತ ವಿವಿಧ ಶಾಲೆಗಳ ಒಂದು ಸಾವಿರದ ನೂರು ಬಾಲಕ ಮತ್ತು ಬಾಲಕಿ ಎನ್‌ ಸಿ ಸಿ ಕೆಡೆಟ್‌ ಗಳು (ಸೇನೆ, ನೌಕಾಪಡೆ ಮತ್ತು ವಾಯುಪಡೆ) ಈ ರಾಷ್ಟ್ರೀಯ ಉತ್ಸವದಲ್ಲಿ ಭಾಗವಹಿಸಲಿದ್ದಾರೆ. ಜ್ಞಾನಪಥ್‌ನಲ್ಲಿ ಆಸನಗಳನ್ನು ಅಳವಡಿಸಲಾಗಿದ್ದು, ಕೆಡೆಡ್‌ಗಳು ಅಧಿಕೃತ ಬಿಳಿ ಉಡುಗೆಯಲ್ಲಿ ಇಲ್ಲಿ ಕುಳಿತುಕೊಳ್ಳುತ್ತಾರೆ.

ಇದರ ಜತೆಗೆ, ಸಮವಸ್ತ್ರದಲ್ಲಿರುವ ಎನ್‌ಸಿಸಿ ಕೆಡೆಟ್‌ಗಳನ್ನು ಆಚರಣೆಯ ಭಾಗವಾಗಿ ಜ್ಞಾನ ಪಥದಲ್ಲಿ ಕೂರಿಸಲಾಗುವುದು. ಇನ್ನೊಂದು ಪ್ರಮುಖ ಅಂಶವೆಂದರೆ ಜಿ-20 ಲೋಗೋ, ಇದು ಕೆಂಪು ಕೋಟೆಯಲ್ಲಿ ಹೂವಿನ ಅಲಂಕಾರದ ಭಾಗವಾಗಿರುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

Lokayukta Raid: ವಿಜಯೇಂದ್ರ ಪತ್ನಿಯ ಸಹೋದರನ ಮನೆ ಸೇರಿ ರಾಜ್ಯದೆಲ್ಲೆಡೆ ಲೋಕಾಯುಕ್ತ ದಾಳಿ

ಸುಮಾರು 13 ಅಧಿಕಾರಿಗಳಿಗೆ ಸೇರಿದ 63ಕ್ಕೂ ಹೆಚ್ಚು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ (Lokayukta raid) ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮೂರು ಕಡೆ ದಾಳಿ ಹಾಗೂ ಪರಿಶೀಲನೆ ನಡೆದಿದೆ.

VISTARANEWS.COM


on

lokayukta raid in channakeshava
ಬೆಸ್ಕಾಂ ಎಕ್ಸಿಕ್ಯೂಟಿವ್ ಇಂಜಿನಿಯರ್ ಚನ್ನಕೇಶವ ಮನೆಯಲ್ಲಿ ದೊರೆತ ವಸ್ತುಗಳು
Koo

ಬೆಂಗಳೂರು: ರಾಜಧಾನಿ ಸೇರಿ ರಾಜ್ಯದ ಹಲವೆಡೆ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ತಂಡಗಳು ಮಿಂಚಿನ ದಾಳಿ (Lokayukta Raid) ನಡೆಸಿವೆ. ರಾಜ್ಯದ 63ಕ್ಕೂ ಹೆಚ್ಚು ಕಡೆ ಮುಂಜಾನೆ ಅಧಿಕಾರಿಗಳು ಏಳುವ ಮೊದಲೇ ದಾಳಿ ನಡೆಸಿ ಶಾಕ್‌ ನೀಡಿದ್ದಾರೆ.

ಸುಮಾರು 13 ಅಧಿಕಾರಿಗಳಿಗೆ ಸೇರಿದ 63ಕ್ಕೂ ಹೆಚ್ಚು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮೂರು ಕಡೆ ದಾಳಿ ಹಾಗೂ ಪರಿಶೀಲನೆ ನಡೆದಿದೆ. ದಾಳಿಯಲ್ಲಿ ಸುಮಾರು 200ಕ್ಕೂ ಹೆಚ್ಚು ಸಿಬ್ಬಂದಿಗಳು ಪಾಲ್ಗೊಂಡಿದ್ದಾರೆ. ಆದಾಯಕ್ಕೂ ಮೀರಿದ ಅಧಿಕ ಆಸ್ತಿ ಸಂಗ್ರಹಿಸಿದ (corrupt officers) ಸಂಬಂಧ ದಾಳಿ ನಡೆಸಿ ದಾಖಲೆ ಹಾಗೂ ಆಸ್ತಿಗಳ ಪರಿಶೀಲನೆ ಮಾಡಲಾಗುತ್ತಿದೆ.

ಪ್ರಭುಲಿಂಗ ಮಾನಕರ್

ಕಲಬುರಗಿಯಲ್ಲಿ ಬಿಜೆಪಿ ರಾಜ್ಯಾದ್ಯಕ್ಷ ಬಿ.ವೈ ವಿಜಯೇಂದ್ರ ಅವರ ಪತ್ನಿಯ ಸಹೋದರನ ಮನೆ‌ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಯಾದಗಿರಿ ಡಿಎಚ್‌ಓ ಆಗಿರುವ ಡಾ. ಪ್ರಭುಲಿಂಗ್ ಮಾನಕರ್‌ ಅವರ ಕಲಬುರಗಿ ನಗರದ ಕರುಣೇಶ್ವರ ಕಾಲೋನಿಯಲ್ಲಿರುವ ನಿವಾಸದ ಮೇಲೆ, ಯಾದಗಿರಿ ನಗರದ ಬಾಡಿಗೆ ಮನೆ ಮೇಲೆ ಲೋಕಾಯುಕ್ತ DYSP ಹಣಮಂತರಾಯ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಅಕ್ರಮ ಆಸ್ತಿ ಗಳಿಕೆ ಆರೋಪ ಅವರ ಮೇಲಿದೆ.

ಬೆಂಗಳೂರಿನ ಮೂರು ಕಡೆ, ಕಲಬುರಗಿ, ಬೀದರ್-2 ಕಡೆ, ಬಳ್ಳಾರಿ, ಕೊಪ್ಪಳ, ಚಿಕ್ಕಬಳ್ಳಾಪುರ, ಮೈಸೂರು, ಕೋಲಾರ, ಧಾರವಾಡದಲ್ಲಿ ಒಂದೊಂದು ಕಡೆ ರೈಡ್‌ ಮಾಡಲಾಗಿದೆ.

ಚನ್ನಕೇಶವ

ಬೆಂಗಳೂರಿನ ಜಯನಗರದ ಬೆಸ್ಕಾಂ ಎಕ್ಸಿಕ್ಯೂಟಿವ್ ಇಂಜಿನಿಯರ್ ಚನ್ನಕೇಶವ ಅವರ ಜಕ್ಕೂರು ಸಮೀಪದ ಮನೆ ಮೇಲೆ‌ ದಾಳಿ ನಡೆಸಲಾಗಿದೆ. ಚನ್ನಕೇಶವರ ಅಮೃತ್ ಹಳ್ಳಿ ನಿವಾಸದ ಮೇಲೆ ದಾಳಿ ನಡೆಸಿದಾಗ ಚೆನ್ನಕೇಶವ ಮತ್ತು ಅವರ ಪತ್ನಿ ಹೆಸರಲ್ಲಿ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ. 6 ಲಕ್ಷ ನಗದು. ಚಿನ್ನ 3 ಕೆಜಿ, 28 ಕೆ.ಜಿ ಬೆಳ್ಳಿ, 25 ಲಕ್ಷ ಮೌಲ್ಯದ ವಜ್ರಾಭರಣ ಹಾಗೂ 5 ಲಕ್ಷ ಮೌಲ್ಯದ 7 ಪುರಾತನ ವಸ್ತುಗಳು ದೊರೆತಿವೆ. ಪತ್ತೆಯಾದ ವಸ್ತುಗಳ ಮೌಲ್ಯ ಸುಮಾರು ₹ 1.5 ಕೋಟಿ ಎನ್ನಲಾಗಿದೆ.

ಜಯನಗರ ಡಿವಿಷನ್‌ಗೆ ಬೆಸ್ಕಾಂ ಎಕ್ಸಿಕ್ಯೂಟಿವ್ ಇಂಜಿನಿಯರ್ ಆಗಿರುವ ಚನ್ನಕೇಶವ ಅಪಾರ್ಟ್ಮೆಂಟ್ ಹಾಗೂ ಕಮರ್ಷಿಯಲ್ ಬಿಲ್ಡಿಂಗ್‌ಗಳಿಗೆ ವಿದ್ಯುತ್ ಸಂಪರ್ಕ ನೀಡಲು ಲಕ್ಷ‌ಲಕ್ಷ ಲಂಚ ಪಡೆಯುತ್ತಿದ್ದರು ಎಂಬ ಆರೋಪವಿದೆ. ಹೆಚ್ಚು ಲಂಚಕ್ಕೆ ಬೇಡಿಕೆ ಇಡುತ್ತಿದ್ದ ಕಾರಣ ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು. ಚನ್ನಕೇಶವಗೆ ಸೇರಿದ ಏಳು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಈತ ಐಷಾರಾಮಿ ಅಪಾರ್ಟ್ಮೆಂಟ್‌ನಲ್ಲಿ ವಾಸ ಮಾಡುತ್ತಿದ್ದಾನೆ.

ಇನ್ನೂ ಯಾರ ಮೇಲೆ ದಾಳಿ?

  • ಕುಂಬಳಗೋಡಿನ ಕುಣಿಮಿಣಿಕೆ ಹಾಲು ಉತ್ಪಾದಕ ಕೋ ಆಪರೇಟಿವ್ ಸೊಸೈಟಿ ಚೀಫ್ ಎಕ್ಸಿಕ್ಯುಟಿವ್‌ ಹೆಚ್.ಎಸ್ ಕೃಷ್ಣಮೂರ್ತಿ
  • ಬೆಸ್ಕಾಂ ವಿಜಿಲೇನ್ಸ್ ಇಇ ಟಿ.ಎನ್ ಸುಧಾಕರ್ ರೆಡ್ಡಿ
  • ಕೊಪ್ಪಳ ಗಂಗಾವತಿ ಆನೆಗುಂಡಿ ಡಿವಿ ಆರ್‌ಎಫ್‌ಒ ಬಿ.ಮಾರುತಿ
  • ಬಳ್ಳಾರಿಯ ಹಿರಿಯ ಭೂವಿಜ್ಞಾನಿ ಚಂದ್ರಶೇಖರ ಹಿರೇಮನಿ
  • ಬೀದರ್‌ ಕರ್ನಾಟಕ ಪಶುವೈದ್ಯಕೀಯ ಮತ್ತು ಮೀನುಗಾರಿಕೆ ವಿಶ್ವವಿದ್ಯಾಲಯದ ನಿವೃತ್ತ ವೈಸ್ ಚಾನ್ಸಲರ್ ಎಚ್.ಡಿ ನಾರಾಯಣ ಸ್ವಾಮಿ
  • ಕರ್ನಾಟಕ ಪಶುವೈದ್ಯಕೀಯ ಮೀನುಗಾರಿಕೆ ವಿಶ್ವವಿದ್ಯಾಲಯದ ಹಣಕಾಸು ಕಚೇರಿಯ ನಿಯಂತ್ರಕ ಸುನೀಲ್ ಕುಮಾರ್
  • ನಂಜನಗೂಡು ಸರ್ಕಾರಿ 1ನೇ ಡಿವಿ ಕಾಲೇಜಿನ ಉಪನ್ಯಾಸಕ ಮಹದೇವ ಸ್ವಾಮಿ,
  • ತಿಮ್ಮರಾಜಪ್ಪ ಸ/ಓ ಲೇಟ್ ಗುರಪ್ಪ, ಎಕ್ಸಿಕ್ಯೂಟಿವ್ ಇಂಜಿನಿಯರ್, ಕೆಆರ್‌ಐಡಿಎಲ್, ವಿಜಯಪುರ ಜಿಲ್ಲೆ. ಪ್ರಸ್ತುತ ಬೆಳಗಾವಿಯಲ್ಲಿ ಇಇ
  • ಮುನೇಗೌಡ ಎನ್‌.ಎಸ್, ಓ ನಾರಾಯಣಸ್ವಾಮಿ ಸಿ ಪಿ, ಉಪನಿರ್ದೇಶಕರು, ತೋಟಗಾರಿಕೆ ಇಲಾಖೆ, ರಾಮನಗರ
  • ಬಸವರಾಜ ಸ/ಓ ಚನ್ನಬಸಯ್ಯ ಮಳಿಮಠ, ಸ್ಟೋರ್ ಕೀಪರ್, ಗ್ರೇಡ್-2, ಓ & ಎಂ ಸಿಟಿ ವಿಭಾಗ ಅಂಗಡಿ, ಹೆಸ್ಕಾಂ, ಹುಬ್ಬಳ್ಳಿ, (ನಿವೃತ್ತ)
  • ಯಾದಗಿರಿ ನಗರಸಭೆ ಆಯುಕ್ತ ಶರಣಪ್ಪ

ಇತ್ತೀಚೆಗೆ ತಾನೇ ಲೋಕಾಯುಕ್ತ ತಂಡಗಳು 11 ಅಧಿಕಾರಿಗಳ ಮನೆಗಳಿಗೆ ದಾಳಿ ನಡೆಸಿದ್ದವು. ಹಬ್ಬದ ವೇಳೆಯಲ್ಲಿ ಅಭರಣ ವ್ಯಾಪಾರಿಗಳು ಹಾಗೂ ಅಧಿಕಾರಿಗಳ ಮನೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಕೂಡ ದಾಳಿ ನಡೆಸಿತ್ತು.

ಇದನ್ನೂ ಓದಿ: Lokayukta Raid: ಬೆಂಗಳೂರಿನ 11 ಕಡೆ ಲೋಕಾಯುಕ್ತ ದಾಳಿ; ಭೂ ಮಾಪನ ಇಲಾಖೆ ಕಚೇರಿಗಳಲ್ಲಿ ಶೋಧ

Continue Reading

ಕರ್ನಾಟಕ

ವಿಜಯಪುರ ಗೋದಾಮು ದುರಂತ: ಮೃತರ ಸಂಖ್ಯೆ 7ಕ್ಕೆ, ಇನ್ನೂ ನಾಲ್ಕು ಶವ ಸಿಕ್ಕಿಲ್ಲ

ಇದುವರೆಗೆ ಮೂವರು ಮೃತ ಕಾರ್ಮಿಕರ ದೇಹಗಳನ್ನು ಹೊರಕ್ಕೆ ತೆಗೆಯಲಾಗಿದೆ. ಇನ್ನೂ ನಾಲ್ಕು ಕಾರ್ಮಿಕರನ್ನು ಹೊರತೆಗೆಯಲು ಕಾರ್ಯಾಚರಣೆ ಮುಂದುವರಿದಿದೆ.

VISTARANEWS.COM


on

Koo

ವಿಜಯಪುರ: ವಿಜಯಪುರ (Vijayapura news) ರಾಜಗುರು ಫುಡ್ಸ್ ಗೋದಾಮಿನಲ್ಲಿ ಭಾರಿ ಯಂತ್ರ ಕುಸಿದು (godown tragedy) ಅದರಡಿ ಬಿಹಾರ ಕಾರ್ಮಿಕರು ಸಿಲುಕಿದ (Labors death) ಪ್ರಕರಣದಲ್ಲಿ ಮೂವರ ಮೃತದೇಹಗಳು ದೊರೆತಿವೆ. ಇನ್ನೂ ನಾಲ್ಕು ಮಂದಿ ಕಾರ್ಮಿಕರು ಯಂತ್ರದಡಿ ಸಿಲುಕಿದ್ದು, ಅವರು ಬದುಕಿರುವ ಸಾಧ್ಯತೆ ಬಹುತೇಕ ಕ್ಷೀಣವಾಗಿದೆ.

ವಿಜಯಪುರ ಕೈಗಾರಿಕಾ ಪ್ರದೇಶದ (Vijayapura News) ರಾಜಗುರು ಇಂಡಸ್ಟ್ರೀಸ್‌ ಗೋದಾಮಿನಲ್ಲಿ ಮೆಕ್ಕೆ ಜೋಳದ ಮೂಟೆ ತುಂಬುವ ಯಂತ್ರ ಕುಸಿದು ಮೂಟೆಗಳಡಿ 10ಕ್ಕೂ ಹೆಚ್ಚು ಕಾರ್ಮಿಕರು ನಿನ್ನೆ ಸಿಲುಕಿದ್ದರು. ಫುಡ್ ಪ್ರೊಸೆಸಿಂಗ್ ಯುನಿಟ್‌ನಲ್ಲಿ ಕೆಲಸ ಮಾಡುತ್ತಿದ್ದ ಇವರು ಬಿಹಾರ ಮೂಲದ ಕಾರ್ಮಿಕರಾಗಿದ್ದರು. ಕಳೆದ ಹಲವು ವರ್ಷಗಳಿಂದ ರಾಜಗುರು ಇಂಡಸ್ಟ್ರೀಸ್‌ ಗೋದಾಮಿನಲ್ಲಿ ಕೆಲಸ ಮಾಡುತ್ತಿದ್ದರು.

ಕಾರ್ಮಿಕರನ್ನು ರಕ್ಷಿಸಲು ನಿರಂತರವಾಗಿ 15 ಗಂಟೆಗಳಿಂದ 4 ಕ್ರೇನ್‌ ಹಾಗೂ ಜೆಸಿಬಿಗಳ ಮೂಲಕ ಸಂಸ್ಕರಣಾ ಘಟಕವನ್ನು ಎತ್ತಿ, ಅದರಡಿ ಸಿಲುಕಿದ ಕಾರ್ಮಿಕರ ಮೃತದೇಹ ಹೊರತೆಗೆಯಲು ಕಾರ್ಯಾಚರಣೆ ನಡೆಸಲಾಗುತ್ತಿದೆ. ಎಸ್‌ಡಿಆರ್‌ಎಫ್ ತಂಡ, ಅಗ್ನಿಶಾಮಕ ದಳ ಸಿಬ್ಬಂದಿಯಿಂದ ಕಾರ್ಯಾಚರಣೆ ನಡೆದಿದೆ.

ಇದುವರೆಗೆ ಮೂವರು ಮೃತ ಕಾರ್ಮಿಕರ ದೇಹಗಳನ್ನು ಹೊರಕ್ಕೆ ತೆಗೆಯಲಾಗಿದೆ. ಇನ್ನೂ ನಾಲ್ಕು ಕಾರ್ಮಿಕರನ್ನು ಹೊರತೆಗೆಯಲು ಕಾರ್ಯಾಚರಣೆ ಮುಂದುವರಿದಿದೆ. ಅವರೆಲ್ಲಾ ಬಹುತೇಕ ಬದುಕಿರುವ ಸಾಧ್ಯತೆಗಳು ಕ್ಷೀಣ ಎನ್ನಲಾಗುತ್ತಿದೆ. ಒಟ್ಟು 11 ಕಾರ್ಮಿಕರು ಅವಘಡದಲ್ಲಿ ಸಿಲುಕಿದ್ದರು. ಘಟನಾ ಸಂದರ್ಭದಲ್ಲಿ ಮೂವರು ಬಚಾವ್ ಆಗಿದ್ದರು. ಕಾರ್ಯಾಚರಣೆ ವೇಳೆ ಓರ್ವನನ್ನು ಸಿಬ್ಬಂದಿ ರಕ್ಷಿಸಿದ್ದರು.

ಕಾರ್ಮಿಕರ ಪತ್ತೆಗೆ ಪುಣೆಯಿಂದ 30ಕ್ಕೂ ಅಧಿಕ ಸಿಬ್ಬಂದಿಗಳಿರುವ ಎನ್‌ಡಿಆರ್‌ಎಫ್‌ ತಂಡ ಆಗಮಿಸಿದೆ. ಸ್ಥಳಕ್ಕೆ ಎಸ್‌.ಪಿ. ಋಷಿಕೇಶ ಸೋನಾವಣೆ, ಡಿಸಿ ಟಿ.ಭೂಬಾಲನ್ ಭೇಟಿ ನೀಡಿ ಕಾರ್ಯಾಚರಣೆ ನೇತೃತ್ವ ವಹಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಯೂ ಭಾಗಿಯಾಗಿದ್ದಾರೆ.

ಇದನ್ನೂ ಓದಿ: ಗೋದಾಮಿನಲ್ಲಿ ಯಂತ್ರ ಕುಸಿತ; ಜೋಳದ ಮೂಟೆಗಳಡಿ ಸಿಲುಕಿದ 10 ಕಾರ್ಮಿಕರು

Continue Reading

ಕರ್ನಾಟಕ

CM Siddaramaiah: ಹುತಾತ್ಮ ಯೋಧ ಪ್ರಾಂಜಲ್‌ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ 50 ಲಕ್ಷ ರೂ. ಪರಿಹಾರ

ಕರ್ನಾಟಕದ ಹುತಾತ್ಮ ಯೋಧ ಪ್ರಾಂಜಲ್‌ (Captain Pranjal) ಅವರ ಕುಟುಂಬಕ್ಕೆ ರೂ. 50,00,000 (ಐವತ್ತು ಲಕ್ಷ) ಪರಿಹಾರಧನವನ್ನು ಸಿಎಂ ಸಿದ್ದರಾಮಯ್ಯ (CM Siddaramaiah) ಮಂಜೂರು ಮಾಡಿದ್ದಾರೆ.

VISTARANEWS.COM


on

cm siddaramaih respect captain pranjal
Koo

ಬೆಂಗಳೂರು: ಜಮ್ಮು ಕಾಶ್ಮೀರದ ರಜೌರಿಯಲ್ಲಿ ಪಾಕ್‌ ಮೂಲದ ಭಯೋತ್ಪಾದಕರ ಜತೆಗೆ ಗುಂಡಿನ ಕಾಳಗದಲ್ಲಿ (Rajouri Encounter) ಮಡಿದ ಕರ್ನಾಟಕದ ವೀರ ಯೋಧ ಪ್ರಾಂಜಲ್‌ (Captain Pranjal) ಅವರ ಕುಟುಂಬಕ್ಕೆ ರೂ. 50,00,000 (ಐವತ್ತು ಲಕ್ಷ) ಪರಿಹಾರಧನವನ್ನು ಸಿಎಂ ಸಿದ್ದರಾಮಯ್ಯ (CM Siddaramaiah) ಮಂಜೂರು ಮಾಡಿದ್ದಾರೆ.

ಈ ಬಗ್ಗೆ ತಮ್ಮ ಎಕ್ಸ್‌ (ಟ್ವಿಟರ್)‌ ಖಾತೆಯಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. “ಜಮ್ಮು – ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗಿನ ಕಾಳಗದ ವೇಳೆ ಹುತಾತ್ಮರಾದ ನಾಡಿನ ಹೆಮ್ಮೆಯ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ ರೂ. 50,00,000 ( ಐವತ್ತು ಲಕ್ಷ ) ಪರಿಹಾರಧನವನ್ನು ನಮ್ಮ ಸರ್ಕಾರದಿಂದ ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ. ದೇಶ ರಕ್ಷಣೆಗಾಗಿ ಪ್ರಾಣ ಪಣಕ್ಕಿಟ್ಟು ಶ್ರಮಿಸುವ ಪ್ರತಿಯೊಬ್ಬ ಯೋಧನ ಬಗ್ಗೆ ನಮಗೆ ಅಪಾರ ಗೌರವವಿದೆ. ಹುತಾತ್ಮ ಯೋಧ ಪ್ರಾಂಜಲ್ ಅವರ ತ್ಯಾಗ, ಬಲಿದಾನಕ್ಕೆ ಬೆಲೆಕಟ್ಟಲಾಗದು, ಆದರೆ ದೇಶದ ಕೋಟ್ಯಂತರ ಜನರ ಪರವಾಗಿ ಈ ಹೊತ್ತಿನಲ್ಲಿ ಅವರ ಕುಟುಂಬದ ಜೊತೆ ನಿಲ್ಲಬೇಕಾದುದ್ದು ನಮ್ಮ ಕರ್ತವ್ಯವೆಂದು ಭಾವಿಸಿದ್ದೇವೆ. ಪರಿಹಾರಧನದ ಚೆಕ್ ಅನ್ನು ಸಿದ್ಧಪಡಿಸಲಾಗಿದ್ದು ನಾಳೆ ಮೃತ ಯೋಧನ ಕುಟುಂಬಕ್ಕೆ ಹಸ್ತಾಂತರಿಸಲಾಗುವುದು. ಮತ್ತೊಮ್ಮೆ ಕ್ಯಾಪ್ಟನ್ ಪ್ರಾಂಜಲ್ ಅವರ ಅನನ್ಯ ದೇಶಸೇವೆ, ಸಮರ್ಪಣಾಭಾವವನ್ನು ಗೌರವದಿಂದ ಸ್ಮರಿಸುತ್ತಾ, ಗೌರವ ನಮನ ಸಲ್ಲಿಸುತ್ತೇನೆʼʼ ಎಂದು ಬರೆದಿದ್ದಾರೆ.

ಜಮ್ಮು ಕಾಶ್ಮೀರದ ರಜೌರಿಯಲ್ಲಿ ಪಾಕ್‌ ಮೂಲದ ಭಯೋತ್ಪಾದಕರ ಜತೆಗೆ ಗುಂಡಿನ ಕಾಳಗದಲ್ಲಿ (Rajouri Encounter) ಕರ್ನಾಟಕದ ವೀರ ಯೋಧ ಪ್ರಾಂಜಲ್‌ (Captain Pranjal) ಮೃತಪಟ್ಟಿದ್ದರು. ಇವರ ಮನೆ ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಜಿಗಣಿ ಸಮೀಪದ ನಿಸರ್ಗ ಬಡಾವಣೆಯಲ್ಲಿದೆ. ಯೋಧನ ಮನೆಯ ಆವರಣದಲ್ಲೇ ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧನ ಅಂತ್ಯಸಂಸ್ಕಾರ ನಡೆದಿತ್ತು. ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವಾರು ಗಣ್ಯರು ಅಲ್ಲಿಗೆ ಭೇಟಿ ನೀಡಿ, ಹುತಾತ್ಮ ಯೋಧನ ಅಂತಿಮ ದರ್ಶನ ಪಡೆದಿದ್ದರು. ಸಂಬಂಧಿಕರು ಹಾಗೂ ಸಹಸ್ರಾರು ಸಾರ್ವಜನಿಕರ ಉಪಸ್ಥಿತಿಯಲ್ಲಿ ಅಂತ್ಯಸಂಸ್ಕಾರ ನಡೆದಿತ್ತು.

ಉಗ್ರರ ಜತೆಗಿನ ಹೋರಾಟದಲ್ಲಿ ಮುಂಚೂಣಿಯಲ್ಲಿ ನಿಂತು ಬಡಿದಾಡಿ ಪ್ರಾಣ ತ್ಯಾಗ ಮಾಡಿದ ಕ್ಯಾಪ್ಟನ್‌ ಎಂ.ವಿ. ಪ್ರಾಂಜಲ್‌ ಅವರು ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್‌ನ (MRPL) ನಿವೃತ್ತ ಆಡಳಿತ ನಿರ್ದೇಶಕ ವೆಂಕಟೇಶ್ ಅವರ ಏಕೈಕ ಪುತ್ರ. (MRPL) ನ ಮಾಜಿ ನಿರ್ದೇಶಕ ಎಂ.ವೆಂಕಟೇಶ್ ಅವರ ಪುತ್ರ. ಎಂಆರ್‌ಪಿಎಲ್‌ನ ಬಳಿಯೇ ಇರುವ ದೆಹಲಿ ಪಬ್ಲಿಕ್ ಸ್ಕೂಲ್‌ನಲ್ಲೇ ಪ್ರಾಂಜಲ್‌ ವಿದ್ಯಾಭ್ಯಾಸ ಮಾಡಿದ್ದರು. ಕರಾವಳಿಯವರೇ ಆದ ವೆಂಕಟೇಶ್ ಅವರು ಮೇ 31ರಂದು ಸೇವಾ ನಿವೃತ್ತರಾಗಿದ್ದರು. ಕೆಲಕಾಲ ಮೈಸೂರಲ್ಲೂ ಇದ್ದರು. ತಂದೆಯ ನಿವೃತ್ತ ಸಮಾರಂಭಕ್ಕೆ ಪ್ರಾಂಜಲ್ ಆಗಮಿಸಿದ್ದರು. ನಿವೃತ್ತಿ ಬಳಿಕ ವೆಂಕಟೇಶ್ ಅವರು ಇದೀಗ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.

Continue Reading

ಉದ್ಯೋಗ

Teachers Recruitment : ಪ್ರಾಥಮಿಕ ಶಾಲೆಯಲ್ಲಿ 2120 ದೈಹಿಕ ಶಿಕ್ಷಕರ ಹುದ್ದೆ ಭರ್ತಿಗೆ ತೀರ್ಮಾನ

Teachers Recruitment : ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಪ್ರಸ್ತುತ ಖಾಲಿ ಇರುವ ಪೈಕಿ 2120 ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಸಂಬಂಧ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಗೆ ಸಲ್ಲಿಸಿದ್ದು, ಆ ಇಲಾಖೆಯ ಸಮಾಲೋಚನೆಯಲ್ಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

VISTARANEWS.COM


on

Physical Education Teacher
Koo

ಬೆಂಗಳೂರು: ಸತತ 15 ವರ್ಷದಿಂದ ನೇಮಕಾತಿಗಾಗಿ ಚಾತಕ ಪಕ್ಷಿಯಂತೆ ಕಾಯುತ್ತಿರುವ ದೈಹಿಕ ಶಿಕ್ಷಣ ಶಿಕ್ಷಕರಿಗೆ (Recruitment of Physical Education Teachers) ಈ ಸರ್ಕಾರದ ಅವಧಿಯಲ್ಲಿ ಗುಡ್‌ ನ್ಯೂಸ್‌ ಸಿಗಲಿದೆಯೇ? ಹೌದು ಎನ್ನುತ್ತದೆ ಶಿಕ್ಷಣ ಸಚಿವರ ಉತ್ತರ! ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಪ್ರಸ್ತುತ ಖಾಲಿ ಇರುವ ಪೈಕಿ 2120 ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳನ್ನು (Teachers Recruitment) ಭರ್ತಿ ಮಾಡುವ ಬಗ್ಗೆ ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಸಂಬಂಧ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಗೆ ಸಲ್ಲಿಸಿದ್ದು, ಆ ಇಲಾಖೆಯ ಸಮಾಲೋಚನೆಯಲ್ಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ (Education Minister Madhu Bangarappa) ಹೇಳಿದ್ದಾರೆ.

ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಪದವೀಧರ ಕ್ಷೇತ್ರದ ಪರಿಷತ್‌ ಸದಸ್ಯ ಎಸ್‌.ವಿ. ಸಂಕನೂರ ಅವರು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣಕ್ಕೆ ಸಂಬಂಧಪಟ್ಟಂತೆ ಕೇಳಲಾದ ಚುಕ್ಕೆ ಗುರುತಿನ ಪ್ರಶ್ನೆಗೆ ಶಿಕ್ಷಣ ಸಚಿವರು ಈ ಉತ್ತರ ನೀಡಿದ್ದಾರೆ.

ಇದನ್ನೂ ಓದಿ: Karnataka Live News : ಪಿಎಸ್‌ಐ ಪರೀಕ್ಷೆ ಮುಂದೂಡಿಕೆ; ಜ. 23ಕ್ಕೆ ಎಕ್ಸಾಂ ಎಂದ ಗೃಹ ಸಚಿವ ಪರಮೇಶ್ವರ್‌

ರಾಜ್ಯದಲ್ಲಿ ಸುಮಾರು 17 ವರ್ಷಗಳಿಂದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರನ್ನು ನೇಮಕಾತಿ ಮಾಡಿಲ್ಲ ಎಂದು ದೈಹಿಕ ಶಿಕ್ಷಣ ಶಿಕ್ಷಕರ ಸಂಘಟನೆಯವರು ಆರೋಪ ಮಾಡುತ್ತಿದ್ದಾರೆ. ಇದು ನಿಜವೇ ಎಂದು ಎಸ್‌.ವಿ. ಸಂಕನೂರ ಪ್ರಶ್ನೆ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ, ದ ಸರ್ಕಾರಿ ಪ್ರಾಥಮಿಕ ಶಾಲೆಗೆ ಸಂಬಂಧಿಸಿದಂತೆ 2008ನೇ ಸಾಲಿನಲ್ಲಿ ದೈಹಿಕ ಶಿಕ್ಷಣ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಪ್ರೌಢಶಾಲಾ ವಿಭಾಗಕ್ಕೆ ಸಂಬಂಧಿಸಿದಂತೆ 2014-15ನೇ ಸಾಲಿಗೆ 148 ಹುದ್ದೆಗಳಿಗೆ ನೇಮಿಸಿಕೊಳ್ಳಲಾಗಿದೆ ಎಂದು ಉತ್ತರಿಸಿದ್ದಾರೆ.

ರಾಜ್ಯದಲ್ಲಿ ಒಟ್ಟು 41913 ಪ್ರಾಥಮಿಕ ಶಾಲೆಗಳಿದ್ದು, ಅವುಗಳಲ್ಲಿ ಮಂಜೂರಾದ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳು 6772 ಆಗಿದೆ. ಆದರೆ, ಕಾರ್ಯನಿರತ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳು 4127 ಆಗಿದೆ. ಹೀಗಾಗಿ ಇದರಲ್ಲಿ 2120 ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಸಂಬಂಧ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಗೆ ಸಲ್ಲಿಸಿದ್ದು, ಆ ಇಲಾಖೆಯ ಸಮಾಲೋಚನೆಯಲ್ಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಪ್ರೌಢಶಾಲೆಯಲ್ಲಿ ನೇಮಕಕ್ಕೆ ಸಚಿವರು ಹೇಳಿದ್ದೇನು?

ಇನ್ನು ಪ್ರೌಢಶಾಲಾ ವಿಭಾಗಕ್ಕೆ ಸಂಬಂಧಪಟ್ಟಂತೆ ರಾಜ್ಯದಲ್ಲಿ 4844 ಸರ್ಕಾರಿ ಪ್ರೌಢ ಶಾಲೆಗಳು ಇವೆ. ಇದರಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಮಂಜೂರಾದ ಹುದ್ದೆ 5210 ಆಗಿದೆ. ರಾಜ್ಯ ಸರ್ಕಾರಿ ಪ್ರೌಢಶಾಲೆಗಳಲ್ಲಿರುವ ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್‌ 1 ಶಿಕ್ಷಕರ ಕಾರ್ಯನಿರತ ಹುದ್ದೆಗಳ ಸಂಖ್ಯೆ 3589 ಆಗಿದೆ.

ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿಯಿರುವ ವಿವಿಧ ವೃಂದದ ದೈಹಿಕ ಶಿಕ್ಷಣ ಶಿಕ್ಷಕರ 200 ಹುದ್ದೆಗಳು ಸೇರಿ ಒಟ್ಟು 2500 ಶಿಕ್ಷಕರುಗಳ ಹುದ್ದೆಗಳನ್ನು 15000 ಪದವೀಧರ ಪ್ರಾಥಮಿಕ ಶಾಲಾ ನೇಮಕಾತಿಯಲ್ಲಿ ಭರ್ತಿಯಾಗದೇ ಖಾಲಿ ಉಳಿದ ಹುದ್ದೆಗಳಿಗೆ ಹೊಂದಾಣಿಕೆ ಮಾಡಿಕೊಳ್ಳುವ ಷರತ್ತಿಗೆ ಒಳಪಟ್ಟು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರವು ಅನುಮತಿ ನೀಡಿರುತ್ತದೆ.

ಆದರೆ, ಸದರಿ 15000 ಹುದ್ದೆಗಳಲ್ಲಿ ಪ್ರೌಢಶಾಲಾ ಶಿಕ್ಷಕರುಗಳ ನೇಮಕಾತಿಗೆ 1648 ಹುದ್ದೆಗಳು ಮಾತ್ರ ಉಳಿದಿರುವ ಪ್ರಯುಕ್ತ ಪ್ರಸ್ತುತ ಸಾಲಿನಲ್ಲಿ 200 ದೈಹಿಕ ಶಿಕ್ಷಕರ ಹುದ್ದೆಯು ಸೇರಿದ್ದು ಒಟ್ಟು 2500 ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡುವ ಪ್ರಸ್ತಾವನೆಯ ಬಗ್ಗೆ ಆರ್ಥಿಕ ಇಲಾಖೆಯೊಂದಿಗೆ ಸಮಾಲೋಚಿಸಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಖಾಸಗಿ ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ನಿವೃತ್ತಿಯಿಂದ ತೆರವಾಗಿರುವ ದೈಹಿಕ ಶಿಕ್ಷಣ ಉಪನ್ಯಾಸಕರನ್ನು ಮಾಡಿಕೊಳ್ಳದಂತೆ ನೇಮಕಾತಿ ಆರ್ಥಿಕ ಇಲಾಖೆಯಿಂದ ಟಿಪ್ಪಣಿ ರೂಪದಲ್ಲಿ ಆದೇಶ ಬಂದಿದೆಯೇ? ಹಾಗಿದ್ದಲ್ಲಿ, ಈ ಕುರಿತು ಸರ್ಕಾರ ಕೈಗೊಂಡ ಕ್ರಮವೇನು? ಎಂದು ಪರಿಷತ್‌ ಸದಸ್ಯ ಎಸ್‌.ವಿ. ಸಂಕನೂರ ಪ್ರಶ್ನೆ ಮಾಡಿದ್ದರು.

ಇದನ್ನೂ ಓದಿ: Belagavi Winter Session: ಸದನದಲ್ಲಿ ಮುಟ್ಟಿನ ಶುಚಿತ್ವ ಚರ್ಚೆ; ಜನವರಿಯಿಂದ ಶಾಲೆಗಳಿಗೆ ನ್ಯಾಪ್‌ಕಿನ್‌

ಇಲ್ಲಿ ಪಿಡಿಎಫ್‌ ಪ್ರತಿಯನ್ನು ಲಗತ್ತಿಸಿದ್ದು, ಡೌನ್‌ಲೋಡ್‌ ಆಯ್ಕೆ ಮೇಲೆ ಕ್ಲಿಕ್‌ ಮಾಡಿ ಪಡೆದುಕೊಳ್ಳಬಹುದು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ, ದೈಹಿಕ ಶಿಕ್ಷಣ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳದಂತೆ ಆರ್ಥಿಕ ಇಲಾಖೆಯು ಯಾವುದೇ ನಿರ್ಬಂಧವನ್ನು ವಿಧಿಸಿರುವುದಿಲ್ಲ. ಆದರೆ, ಆರ್ಥಿಕ ಇಲಾಖೆಯು ದಿನಾಂಕ:14/06/2023ರಲ್ಲಿ ದೈಹಿಕ ಶಿಕ್ಷಣ ಉಪನ್ಯಾಸಕರ ಹುದ್ದೆಗೆ ಪ್ರಸ್ತುತ ಇರುವ 120 ವಿದ್ಯಾರ್ಥಿಗಳ ಕಾರ್ಯಭಾರದ ಮಾನದಂಡವನ್ನು 500 ವಿದ್ಯಾರ್ಥಿಗಳಿಗೆ ಹೆಚ್ಚಿಸಲು ನಿರ್ಣಯಿಸುವಂತೆ ಆರ್ಥಿಕ ಇಲಾಖೆಯು ಸಲಹೆ ನೀಡಿದ್ದು, ಈ ಬಗ್ಗೆ ಸರ್ಕಾರದಲ್ಲಿ ಪರಿಶೀಲನೆಯಲ್ಲಿರುತ್ತದೆ ಎಂದು ಹೇಳಿದ್ದಾರೆ.

Continue Reading
Advertisement
lokayukta raid in channakeshava
ಕರ್ನಾಟಕ12 mins ago

Lokayukta Raid: ವಿಜಯೇಂದ್ರ ಪತ್ನಿಯ ಸಹೋದರನ ಮನೆ ಸೇರಿ ರಾಜ್ಯದೆಲ್ಲೆಡೆ ಲೋಕಾಯುಕ್ತ ದಾಳಿ

David Warner
ಕ್ರಿಕೆಟ್21 mins ago

David Warner: ಮೋಸಗಾರನಿಗೆ ವಿದಾಯ ಪಂದ್ಯದ ಅಗತ್ಯವಿಲ್ಲ; ಮಿಚೆಲ್​ ಜಾನ್ಸನ್

sadghuru with students
ಅಂಕಣ1 hour ago

Prerane Column : ವಿದ್ಯಾಭ್ಯಾಸ ಎಂದರೆ ದುಡ್ಡು ಮಾಡುವ ದಂಧೆಯ ಅಡಿಪಾಯವೇ?

ಕರ್ನಾಟಕ1 hour ago

ವಿಜಯಪುರ ಗೋದಾಮು ದುರಂತ: ಮೃತರ ಸಂಖ್ಯೆ 7ಕ್ಕೆ, ಇನ್ನೂ ನಾಲ್ಕು ಶವ ಸಿಕ್ಕಿಲ್ಲ

cm siddaramaih respect captain pranjal
ಕರ್ನಾಟಕ2 hours ago

CM Siddaramaiah: ಹುತಾತ್ಮ ಯೋಧ ಪ್ರಾಂಜಲ್‌ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ 50 ಲಕ್ಷ ರೂ. ಪರಿಹಾರ

Canara Bank Ammembala Subbarao Pai
ಅಂಕಣ2 hours ago

Raja Marga Column: ಹಿಡಿಯಕ್ಕಿ ಸಂಗ್ರಹಿಸಿ ಕೆನರಾ ಬ್ಯಾಂಕ್ ಕಟ್ಟಿದ ಅಮ್ಮೆಂಬಳ ಸುಬ್ಬರಾವ್ ಪೈ

CBSE Board Exam 2024 and many more changes proposed implemented in this year
ದೇಶ2 hours ago

ಸಿಬಿಎಸ್‌ಇ ಬೋರ್ಡ್‌ ಎಕ್ಸಾಂಗೆ ಘೋಷಿಸಿದ ಪ್ರಮುಖ ಬದಲಾವಣೆಗಳೇನು?

Saurav Gangly
ಕ್ರಿಕೆಟ್2 hours ago

Virat Kohli : ಕೊಹ್ಲಿಯನ್ನು ನಾಯಕತ್ವದಿಂದ ಇಳಿಸಿದ್ದಕ್ಕೆ ಕಾರಣ ತಿಳಿಸಿದ ಸೌರವ್​ ಗಂಗೂಲಿ

Physical Education Teacher
ಉದ್ಯೋಗ2 hours ago

Teachers Recruitment : ಪ್ರಾಥಮಿಕ ಶಾಲೆಯಲ್ಲಿ 2120 ದೈಹಿಕ ಶಿಕ್ಷಕರ ಹುದ್ದೆ ಭರ್ತಿಗೆ ತೀರ್ಮಾನ

sufi
ಅಂಕಣ2 hours ago

ನನ್ನ ದೇಶ ನನ್ನ ದನಿ ಅಂಕಣ: ಸಯ್ಯಿದ್ ರಿಜ್ವಿ ಸ್ವತಃ ಹೇಳಿದ ಸೂಫಿಗಳ ನಿಜ ಕಥನ

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

dina bhavishya read your daily horoscope predictions for December 5 2023
ಪ್ರಮುಖ ಸುದ್ದಿ4 hours ago

Dina Bhavishya : ಈ ರಾಶಿಯವರ ಅದೃಷ್ಟ ಸಂಖ್ಯೆ 1, 3! ನಿಮ್ಮ ಲಕ್ಕಿ ನಂಬರ್‌ ಏನು?

ead your daily horoscope predictions for december 4th 2023
ಪ್ರಮುಖ ಸುದ್ದಿ1 day ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Police call off protest FIR against lawyer who slapped police
ಕರ್ನಾಟಕ2 days ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ2 days ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ3 days ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ3 days ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ4 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ4 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ5 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ5 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

ಟ್ರೆಂಡಿಂಗ್‌