BJP ರಾಜ್ಯ ಕಾರ್ಯಕಾರಿಣಿಗೆ ಸಂತೋಷ್‌ ಆತ್ಮಹತ್ಯೆ ನೆರಳು: ಒಂದೇ ದಿನವಿರುವಂತೆ ಮಾಜಿಯಾಗುವ ಈಶ್ವರಪ್ಪ Vistara News

ಕರ್ನಾಟಕ

BJP ರಾಜ್ಯ ಕಾರ್ಯಕಾರಿಣಿಗೆ ಸಂತೋಷ್‌ ಆತ್ಮಹತ್ಯೆ ನೆರಳು: ಒಂದೇ ದಿನವಿರುವಂತೆ ಮಾಜಿಯಾಗುವ ಈಶ್ವರಪ್ಪ

ಏ.16-17ರಂದು ಕಾರ್ಯಕಾರಿಣಿ ನಡೆಯಲಿದೆ. ಹಿಜಾಬ್‌, ಹಲಾಲ್‌ ವಿಚಾರಗಳಲ್ಲಿ ಮುಂದೆ ನಿಂತು ಹೇಳಿಕೆ ನೀಡಿ ಪಕ್ಷವನ್ನು ಸಮರ್ಥನೆ ಮಾಡಿಕೊಳ್ಳುತ್ತಿದ್ದ ಈಶ್ವರಪ್ಪ ಅವರ ಕಾರಣಕ್ಕೇ ಈಗ ಪಕ್ಷ ಇಕ್ಕಟ್ಟಿಗೆ ಸಿಲುಕಿದೆ.

VISTARANEWS.COM


on

santosh santosh
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸಪೇಟೆ: ಮುಂದಿನ ವರ್ಷ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಯುವುದರಿಂದ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಶನಿವಾರ ಹಾಗೂ ಭಾನುವಾರ ನಡೆಯುವ ರಾಜ್ಯ ಬಿಜೆಪಿ (BJP) ಕಾರ್ಯಕಾರಿಣಿ ಮಹತ್ವ ಪಡೆದಿದೆ. ಆದರೆ ಮೂರು ದಿನದ ಹಿಂದಷ್ಟೆ ಘಟಿಸಿದ ಬಿಜೆಪಿ ಕಾರ್ಯಕರ್ತ ಮತ್ತು ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣ (Santosh Suicide Case) ಕರಿನೆರಳು ಕಾರ್ಯಕಾರಿಣಿಯನ್ನು ಬಾಧಿಸುವ ಸಾಧ್ಯತೆಯಿದೆ.

ಹೊಸಪೇಟೆಯ ಭಟ್ರಹಳ್ಳಿ ಆಂಜನೇಯ ದೇಗುಲದ ಬಯಲು ಸ್ಥಳದಲ್ಲಿ ಹಂಪಿ ಸ್ಮಾರಕಗಳ ಶೈಲಿಯಲ್ಲಿ ಬಯಲು ಜಾಗದಲ್ಲಿ ಹವಾನಿಯಂತ್ರಿತ ಜರ್ಮನ್ ಟೆಂಟ್ ನಿರ್ಮಿಸಲಾಗಿದೆ. ವೈಭವೋಪೇತ ಹಂಪಿ ಸಾಮ್ರಾಜ್ಯವನ್ನು ನೆನಪಿಸುವಂತೆ ಸಾಲುಕಂಬಗಳು, ಮುಖ್ಯ ಮಂಟಪ ನಿರ್ಮಿಸಲಾಗಿದೆ. ಮುಖ್ಯ ವೇದಿಕೆಗೆ ಅಂಜನಾದೇವಿ ಮಹಾದ್ವಾರ ಮತ್ತು ಮಹರ್ಷಿ ಮಾತಂಗಮುನಿ ಸಭಾ ಮಂಟಪ ಎಂದು ಹೆಸರಿಡಲಾಗಿದೆ.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್, ರಾಜ್ಯ ಪ್ರಭಾರಿ ಅರುಣ್ ಸಿಂಗ್, ರಾಜ್ಯ ಅಧ್ಯಕ್ಷ ನಳಿನ್‌ಕುಮಾರ್‌ ಕಟೀಲ್, ರಾಷ್ಟ್ರೀಯ ಮುಖಂಡರಾದ ಡಿ.ಕೆ. ಅರುಣಾ, ಸಿ.ಟಿ.ರವಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂಗಳಾದ ಬಿ.ಎಸ್.ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಡಿ.ವಿ. ಸದಾನಂದಗೌಡ, ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ರಾಜೀವ್ ಚಂದ್ರಶೇಖರ್, ಶೋಭಾ ಕರಂದ್ಲಾಜೆ, ನಾರಾಯಣಸ್ವಾಮಿ, ಭಗವಂತ್ ಖೂಬಾ ಅವರು ಭಾಗವಹಿಸಲಿದ್ದಾರೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆಗಮಿಸುವ ಸಾಧ್ಯತೆಯೂ ಇದೆ. ಕಾರ್ಯಕಾರಿಣಿಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧ್ಯಕ್ಷರು, ಜಿಲ್ಲಾ ಪ್ರತಿನಿಧಿಗಳು, ವಿಶೇಷ ಆಹ್ವಾನಿತರು ಸೇರಿ ಸುಮಾರು 650 ಜನ ಭಾಗವಹಿಸಲಿದ್ದಾರೆ.

ಸಂತೋಷ್‌ ಆತ್ಮಹತ್ಯೆ ಪ್ರಕರಣ

ಕಳೆದ ಕೆಲ ದಿನಗಳವರೆಗೂ ರಾಜ್ಯ ರಾಜಕಾರಣದಲ್ಲಿ ಬಿಜೆಪಿಯದ್ದೇ ಮೇಲುಗೈ ಆಗಿತ್ತು. ಉಡುಪಿಯ ಸರ್ಕಾರಿ ಕಾಲೇಜಿನ ಆರು ವಿದ್ಯಾರ್ಥಿನಿಯರಿಂದ ಆರಂಭವಾದ ಹಿಜಾಬ್‌ ಧಾರಣೆ ವಿಚಾರ, ವಿವಾದವಾಗಿ ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟಕ್ಕೂ ವಿಸ್ತರಿಸಿತು. ನ್ಯಾಯಾಲಯ ಸೇರಿ ಎಲ್ಲ ಹಂತದಲ್ಲೂ ಬಿಜೆಪಿಯದ್ದೇ ಮೇಲುಗೈ ಆಗಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಇಕ್ಕಟ್ಟಿಗೆ ಸಿಲುಕಿದವು. ಹಿಜಾಬ್‌ಗೆ ಬೆಂಬಲ ನೀಡಿದರೆ ನ್ಯಾಯಾಲಯಕಕೆ ವಿರುದ್ಧ, ಹಿಜಾಬ್‌ ವಿರೋಧಿಸಿದರೆ ಮುಸ್ಲಿಮರ ಧ್ವೇಷ ಎಂಬ ಆತಂಕವಿತ್ತು. ನಂತರದಲ್ಲಿ ಹಲಾಲ್‌ ಕಟ್‌ ಹಾಗೂ ಝಟ್ಕಾ ಕಟ್‌ ವಿವಾದ ತಲೆಯೆತ್ತಿತು. ಆನಂತರದಲ್ಲಿ ಮಸೀದಿಗಳಲ್ಲಿ ಆಜಾನ್‌ ಕೂಗುವ ವಿವಾದ, ವಕ್ಫ್‌ ಬೋರ್ಡ್‌ ರದ್ದು ಮಾಡುವವರೆಗೂ ಮಾತುಗಳು ವಿವಿಧ ಸಂಘಟನೆಗಳಿಂದ ಕೇಳಿಬಂದವು. ಎಲ್ಲ ಸಂದರ್ಭದಲ್ಲೂ ಬಿಜೆಪಿಯದ್ದೇ ಮೇಲುಗೈ ಆಗಿತ್ತು.

ಆದರೆ ಮಂಗಳವಾರ ಉಡುಪಿಯಲ್ಲಿ ಗುತ್ತಿಗೆದಾರ ಸಂತೋಷ್‌ ಆತ್ಮಹತ್ಯೆ ಮಾಡಿಕೊಂಡರು. ಈ ಹಿಂದೆಯೇ ಸುದ್ದಿಗೋಷ್ಠಿ ನಡೆಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ ವಿರುದ್ಧ 40% ಲಂಚದ ಆರೋಪ ಮಾಡಿದ್ದ ಸಂತೋಷ್‌ ಈ ನಿರ್ಧಾರ ಕೈಗೊಳ್ಳುತ್ತಾರೆ ಎಂಬುದನ್ನು ಯಾರೂ ಊಹಿಸಿರಲಿಲ್ಲ. ಆತ್ಮಹತ್ಯೆ ವಿಚಾರ ಹೊರಬೀಳುತ್ತಿದ್ದಂತೆಯೇ ಪ್ರತಿಪಕ್ಷಗಳಿಗೆ, ಅದರಲ್ಲೂ ಸೊರಗಿದ್ದ ಕಾಂಗ್ರೆಸ್‌ಗೆ ಟಾನಿಕ್‌ ಸಿಕ್ಕಂತಾಗಿದೆ. ಈಗಾಗಲೆ ಎರಡು ದಿನದಲ್ಲಿ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆದಿವೆ. ಸಂತೋಷ್‌ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪ ವಿರುದ್ಧವೇ ಎಫ್‌ಐಆರ್‌ ದಾಖಲಾಗಿದೆ. ಪ್ರತಿಪಕ್ಷಗಳು, ಮಾಧ್ಯಮ ಹಾಗೂ ಸಾರ್ವಜನಿಕರ ಒತ್ತಡಕ್ಕೆ ಮಣಿದ ಈಶ್ವರಪ್ಪ ಶುಕ್ರವಾರ ರಾಜೀನಾಮೆಯನ್ನು ಸಲ್ಲಿಸುವುದಾಗಿ ಗುರುವಾರ ಘೋಷಣೆ ಮಾಡಿದ್ದಾರೆ.

ಹಿಜಾಬ್‌, ಹಲಾಲ್‌ ಮುಂತಾದ ಹಿಂದುಪರ ವಿಚಾರಗಳಲ್ಲಿ ಮುಂಚೂಣಿಯಲ್ಲಿ ನಿಂತು ಹೇಳಿಕೆಗಳನ್ನು ನೀಡುತ್ತಿದ್ದವರಲ್ಲಿ ಈಶ್ವರಪ್ಪ ಪ್ರಮುಖರು. ಹಿಜಾಬ್‌ಗೆ ವಿರುದ್ಧವಾಗಿ ಹಿಂದು ಹುಡುಗರಿಗೆ ಕೇಸರಿ ಶಾಲು ನೀಡುವ ಕುರಿತಂತೆಯೇ ಈಶ್ವರಪ್ಪ ವಿವಾದಕ್ಕೀಡಾಗಿದ್ದರು. ಹಿಂದು ಸಂಘಟನೆಗಳ ಕಾರ್ಯಕರ್ತರ ಮೆಚ್ಚುಗೆಗೆ ಪಾತ್ರರಾಗಿದ್ದರು. ಇದೀಗ ಅದೇ ಈಶ್ವರಪ್ಪ ಅವರ ವಿಚಾರದಲ್ಲಿ ರಾಜ್ಯ ಬಿಜೆಪಿ ಇಕ್ಕಟ್ಟಿಗೆ ಸಿಲುಕಿದೆ.

ಚುನಾವಣೆ ಸಮಯದಲ್ಲಿ ಸರ್ಕಾರದ ಸಾಧನೆಗಳನ್ನು ಮುಂದಿಟ್ಟುಕೊಂಡು ಪ್ರಚಾರ ನಡೆಸಬೇಕಿದೆ. ಕೇಂದ್ರದಲ್ಲಿ ನರೇಮದ್ರ ಮೋದಿ ಸರ್ಕಾರದ ಜತೆಗೆ ಕರ್ನಾಟಕದಲ್ಲೂ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಡಬಲ್‌ ಎಂಜಿನ್‌ ಅಭಿವೃದ್ಧಿ ಆಗುತ್ತದೆ ಎಂಬುದು ಬಿಜೆಪಿ ಪ್ರಚಾರದ ಕೇಂದ್ರ ಬಿಂದು. ಇದೀಗ ಒಂದೆಡೆ ಕೋಮು ವಿಚಾರದಲ್ಲಿ ರಾಜ್ಯದ ಉದ್ಯಮ ವಲಯದಲ್ಲಿ ಬಿಜೆಪಿ ಕುರಿತು ನಕಾರಾತ್ಮಕ ಭಾವನೆ ಮೂಡಿದೆ ಎಂಬುದರ ನಡುವೆಯೇ ಭ್ರಷ್ಟಾಚಾರ ವಿಚಾರದಲ್ಲೂ ಮುಖಭಂಗವಾಗಿದೆ. ಇವೆರಡೂ ನಕಾರಾತ್ಮಕತೆಗಳಿಂದ ಹೊರಬಂದು ಚುನಾವಣೆಗೆ ಹೇಗೆ ಮುನ್ನುಗ್ಗಬೇಕು ಎಂಬ ತಂತ್ರವನ್ನು ರೂಪಿಸುವ ಸವಾಲು ರಾಜ್ಯ ಬಿಜೆಪಿ ಕಾರ್ಯಕಾರಿಣಿಗೆ ಒದಗಿಬಂದಿದೆ.

ಹೆಚ್ಚಿನ ಓದಿಗಾಗಿ: ರಾಜ್ಯದಲ್ಲೀಗ 150+ ಜಪ: BJP, CONGRESS ನಡುವೆ JDS ನಡೆ ವಿಭಿನ್ನ

ವೇದಿಕೆಗೆ ಹಂಪಿಯ ಟಚ್

ಭಟ್ರಹಳ್ಳಿ ಆಂಜನೇಯ ದೇಗುಲದ ಬಯಲು ಸ್ಥಳದಲ್ಲಿ ಹಂಪಿ ಸ್ಮಾರಕಗಳ ಶೈಲಿಯಲ್ಲಿ ಬಯಲು ಜಾಗದಲ್ಲಿ ಹವಾನಿಯಂತ್ರಿತ ಜರ್ಮನ್ ಟೆಂಟ್ ನಿರ್ಮಿಸಲಾಗಿದೆ. ಟೆಂಟ್ಆ‌ನಲ್ಸಲಿ 750 ಆಸನಗಳ ವ್ಯವಸ್ಥೆ ಮಾಡಲಾಗಿದೆ. ಕಾರ್ಯಕಾರಿಣಿಗಾಗಿ 80 ಅಡಿ ಉದ್ದ ಮತ್ತು 40 ಅಡಿ ಅಗಲದ ವೇದಿಕೆ ನಿರ್ಮಾಣಗೊಂಡಿದೆ. ಹಂಪಿಯ ಶ್ರೀವಿರೂಪಾಕ್ಷೇಶ್ವರ ಗೋಪುರ, ಕಲ್ಲಿನ ತೇರು, ಸಾಸಿವೆಕಾಳು ಗಣಪ, ಆನೆಗೊಂದಿಯ ಅಂಜನಾದ್ರಿ ಬೆಟ್ಟದ ಆಂಜನೇಯ, ವಿಜಯ ವಿಠ್ಠಲ ದೇಗುಲದ ಸಪ್ತಸ್ವರ ಹೊರಡಿಸುವ ಕಲ್ಲಿನ ಕಂಬಗಳು, ಉಗ್ರ ನರಸಿಂಹ, ಸಾಲುಮಂಟಪ ಸೇರಿದಂತೆ ನಾನಾ ಸ್ಮಾರಕಗಳ ಮಿಶ್ರಣದೊಂದಿಗೆ ವೇದಿಕೆ ಕಂಗೊಳಿಸುತ್ತಿದೆ‌.

ಹೆಚ್ಚಿನ ಓದಿಗಾಗಿ: ನಿರುದ್ಯೋಗಕ್ಕೆ ರಾಜಕಾರಣಿಗಳೇ ಕಾರಣ: ಡಿ.ಕೆ. ಶಿವಕುಮಾರ್‌ ಪ್ರಶ್ನೆಗೆ Twitterನಲ್ಲಿ ಸ್ವಾರಸ್ಯಕರ ಉತ್ತರಗಳು !

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

Ayodhya Ram Mandir: ರಾಮಮಂದಿರ ನಿರ್ಮಾಣಕ್ಕೆ ತೆರಳಿದ ಗದಗದ ಯುವ ಶಿಲ್ಪಿ

Ayodhya Ram Mandir: ಗದಗ ಜಿಲ್ಲೆಯ ಮುಂಡರಗಿಯಿಂದ ಅಯೋಧ್ಯೆಗೆ ತೆರಳಿದ ಯುವ ಶಿಲ್ಪಿಯನ್ನು ಪಟ್ಟಣದ ಹಿರಿಯ ಶಿಕ್ಷಕರ ಬಳಗ ಹಾಗೂ ಸ್ಥಳೀಯರು ಗೌರವಿಸಿ ಬೀಳ್ಕೊಟ್ಟಿದ್ದಾರೆ.

VISTARANEWS.COM


on

Nagamurthy Swamy
Koo

ಗದಗ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಶಿಲ್ಪಿಗಳು ಅವಶ್ಯಕತೆ ಇರುವ ಹಿನ್ನೆಲೆಯಲ್ಲಿ ಜಿಲ್ಲೆಯ ಯುವ ಶಿಲ್ಪಿಯೊಬ್ಬರು ತೆರಳಿದ್ದಾರೆ. ಈಗಾಗಲೇ ದೇಶದೆಲ್ಲೆಡೆಯಿಂದ ಹೋಗಿರುವ ಹಿರಿಯ ಶಿಲ್ಪಿಗಳು ಮಂದಿರ (Ayodhya Ram Mandir) ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದಾರೆ. ಇದೀಗ ಜಿಲ್ಲೆಯಿಂದ ತೆರಳಿದ ಯುವ ಶಿಲ್ಪಿಯನ್ನು ಮುಂಡರಗಿ ಪಟ್ಟಣದ ಹಿರಿಯ ಶಿಕ್ಷಕ ಬಳಗ ಹಾಗೂ ಸ್ಥಳೀಯರು ಗೌರವಿಸಿ ಬೀಳ್ಕೊಟ್ಟಿದ್ದಾರೆ.

ಹೌದು,‌ ಗದಗ ಜಿಲ್ಲೆ ಮುಂಡರಗಿ ಪಟ್ಟಣದಲ್ಲಿ ಜಗತ್ ಸೃಷ್ಟಿ ಶಿಲ್ಪಕಲಾ ಕೇಂದ್ರ ತೆರೆದು ಶಿಲ್ಪಿ ಕೆಲಸ ಮಾಡುತ್ತಿರುವ ನಾಗಮೂರ್ತಿಸ್ವಾಮಿ ಪಂಚಾನನ ಗುರು ಅವರು ರಾಮಮಂದಿರ ನಿರ್ಮಾಣದಲ್ಲಿ ತಮ್ಮ ಸೇವೆ ಸಲ್ಲಿಸಲು ತೆರಳಿದ್ದಾರೆ.

ಹಿರಿಯ‌‌ ಶಿಲ್ಪಿಯೊಬ್ಬರ ಸಹಾಯ, ಸಂಪರ್ಕದಿಂದ ಯುವಶಿಲ್ಪಿ ನಾಗಮೂರ್ತಿ ಅವರೂ ರಾಮಮಂದಿರ ನಿರ್ಮಾಣದಲ್ಲಿ ಸೇವೆ ಸಲ್ಲಿಸಲು ಅಣಿಯಾಗಿದ್ದು, ಅಯೋಧ್ಯೆಗೆ ತೆರಳುವುದಕ್ಕೂ ಮುನ್ನ, ಮುಂಡರಗಿ ಪಟ್ಟಣದ ಹಿರಿಯ ಶಿಕ್ಷಕರ ಬಳಗ ಹಾಗೂ ಸ್ಥಳಿಯರು ಕೂಡಿಕೊಂಡು ಅವರನ್ನು ಗೌರವಿಸಿ ಬೀಳ್ಕೊಟ್ಟಿದ್ದಾರೆ.

ಇದನ್ನೂ ಓದಿ | Ram Mandir: ಅಯೋಧ್ಯೆ ರಾಮಮಂದಿರದ ಗರ್ಭಗುಡಿ ಹೇಗಿದೆ? ಇಲ್ಲಿವೆ ನೂತನ ಫೋಟೊಗಳು

ಜನವರಿ 22ಕ್ಕೆ ರಾಮ ಮಂದಿರ ಉದ್ಫಾಟನೆ

ನವದೆಹಲಿ: ಉತ್ತರ ಪ್ರದೇಶದ (Uttar Pradesh) ಅಯೋಧ್ಯೆಯಲ್ಲಿ (Ayodhya) ನಿರ್ಮಾಣವಾಗುತ್ತಿರುವ ರಾಮ ಮಂದಿರ (Ram Mandir) ಉದ್ಘಾಟನೆಯು 2024ರ ಜನವರಿ 22ರಂದು ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರಿಗೆ ಆಹ್ವಾನ ನೀಡಲಾಗಿದೆ.

ಜನವರಿ 22ರಂದು ಗರ್ಭಗೃಹದಲ್ಲಿ ರಾಮ ದೇವರ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುತ್ತದೆ ಎಂಬ ಸುದ್ದಿಯನ್ನು ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರು ಖಚಿತಪಡಿಸಿದ್ದಾರೆ. ಈ ಉದ್ಘಾಟನೆಯ ಸಮಾರಂಭಕ್ಕೆ ಹಾಜರಾಗುವಂತೆ ನೀಡಲಾಗಿರುವ ಆಹ್ವಾನವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸ್ವೀಕರಿಸಿದ್ದಾರೆ ಎಂದು ಅವರು ತಿಳಿಸಿದ್ದರು.

ಪ್ರಾಣ-ಪ್ರತಿಷ್ಠಾ ಸಮಾರಂಭದ ವೈದಿಕ ವಿಧಿವಿಧಾನಗಳು ಜನವರಿ 16 ರಂದು ಮುಖ್ಯ ಸಮಾರಂಭಕ್ಕೆ ಒಂದು ವಾರ ಮುಂಚಿತವಾಗಿ ಪ್ರಾರಂಭವಾಗುತ್ತವೆ. ಮಹಾಮಸ್ತಕಾಭಿಷೇಕ ಸಮಾರಂಭದಲ್ಲಿ ಲಕ್ಷ್ಮೀಕಾಂತ ದೀಕ್ಷಿತ್ ಮುಖ್ಯ ವಿಧಿವಿಧಾನಗಳನ್ನು ನೆರವೇರಿಸಲಿದ್ದಾರೆ.

ಇನ್ನು ವಿಜಯ ದಶಮಿಯ ದಿನದಂದು ದಿಲ್ಲಿಯ ರಾಮಲೀಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ ದಸರಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ಮುಂದಿನ ವರ್ಷದಿಂದ ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರದಲ್ಲೇ ವಿಜಯ ದಶಮಿ ಆಚರಿಸಲಾಗುವುದು ಎಂದು ಪ್ರಕಟಿಸಿದ್ದರು.

ಇದನ್ನೂ ಓದಿ | Ayodhya Ram Mandir : ಡೆಲ್ಲಿಯಿಂದ ಅಯೋಧ್ಯೆಗೆ 635 ಕಿ. ಮೀ ಎತ್ತಿನಗಾಡಿಯಲ್ಲಿ ಸಾಗಲಿದೆ ಇಸ್ಕಾನ್​​ ರಥ

ಉತ್ತರ ಪ್ರದೇಶದ (Uttar Pradesh) ಅಯೋಧ್ಯೆಯಲ್ಲಿ ನಿರ್ಮಿಸಲಾಗುತ್ತಿರುವ ರಾಮ ಮಂದಿರ (Ayodhya Ram Mandir) ಬಹುತೇಕ ಸಿದ್ಧವಾಗಿದೆ. ಹೀಗಾಗಿ ಇತ್ತೀಚೆಗೆ ರಾಮ ಮಂದಿರ ಗರ್ಭಗಡಿ (Sanctum Sanctorum) ಹಾಗೂ ದೇವಾಲಯ ಒಳಗಿರುವ ಅದ್ಭುತ, ಮನಮೋಹಕ ಕಲಾಕೃತಿಗಳ (carvings) ಫೋಟೋಗಳನ್ನು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಬಿಡುಗಡೆ ಮಾಡಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Raichur News: ಮಾನ್ವಿ ಹಾಸ್ಟೆಲ್‌ನಲ್ಲಿ ಊಟ ಸೇವಿಸಿ 14 ವಿದ್ಯಾರ್ಥಿನಿಯರು ಅಸ್ವಸ್ಥ

Raichur News: ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಮೆಟ್ರಿಕ್ ಪೂರ್ವ ಹಾಸ್ಟೆಲ್‌ನಲ್ಲಿ ಊಟ ಸೇವಿಸಿ 14 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದಾರೆ.

VISTARANEWS.COM


on

girl students fall ill
Koo

ರಾಯಚೂರು: ಹಾಸ್ಟೆಲ್‌ನಲ್ಲಿ ಊಟ ಸೇವಿಸಿದ ಬಳಿಕ 14 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ (Raichur News) ಮಾನ್ವಿ ಪಟ್ಟಣದಲ್ಲಿ ಭಾನುವಾರ ನಡೆದಿದೆ. ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಯರ ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದು ಅವರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಧ್ಯಾಹ್ನ ಪಲಾವ್ ಸೇವಿಸಿದ್ದ ವಿದ್ಯಾರ್ಥಿನಿಯರಿಗೆ ಸಂಜೆ ಏಕಾಏಕಿ ವಾಂತಿ-ಭೇದಿ ಕಾಣಿಸಿಕೊಂಡಿದೆ. ಹೀಗಾಗಿ ಅಸ್ವಸ್ಥಗೊಂಡ 14 ವಿದ್ಯಾರ್ಥಿಯರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಪರಿಸ್ಥಿತಿ ಗಂಭೀರವಾಗಿದ್ದ ಒಬ್ಬಳು ವಿದ್ಯಾರ್ಥಿಯನ್ನು ರಾಯಚೂರಿನ ರಿಮ್ಸ್‌ಗೆ ರವಾನಿಸಲಾಗಿದೆ.

ಘಟನೆ ನಡೆದ ಬಳಿಕ ಹಾಸ್ಟೆಲ್‌ಗೆ ಬಾರದ ವಾರ್ಡನ್ ಪಾರ್ವತಿ ವಿರುದ್ಧ ವಿದ್ಯಾರ್ಥಿನಿಯರು ಹಾಗೂ ಪಾಲಕರು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ | Shakti Scheme: ಒಂದೇ ಆಧಾರ್‌ ಕಾರ್ಡ್‌ ಬಳಸಿ ಇಬ್ಬರ ಪ್ರಯಾಣ; ಸಿಕ್ಕಿಬಿದ್ದ ಬುರ್ಕಾಧಾರಿ ಮಹಿಳೆಯರು!

4 ಸಾವಿರ ಅಡಿ ಪ್ರಪಾತದಿಂದ ಯುವಕನ ಮೃತದೇಹ ಹೊರತಂದ ರಕ್ಷಣಾ ತಂಡ

ಚಿಕ್ಕಮಗಳೂರು: ನಾಪತ್ತೆಯಾಗಿದ್ದ ಬೆಂಗಳೂರು ಮೂಲದ ಯುವಕನ ಮೃತದೇಹವನ್ನು 4 ಸಾವಿರ ಅಡಿ ಪ್ರಪಾತದಿಂದ ರಕ್ಷಣಾ ತಂಡ ಹೊರತಂದಿದೆ. ಮೂಡಿಗೆರೆ ತಾಲೂಕಿನ ರಾಣಿಝರಿ ಪ್ರಪಾತದ ಬಳಿ ಅರಣ್ಯ, ಪೊಲೀಸ್, ಧರ್ಮಸ್ಥಳ ವಿಪತ್ತು ನಿರ್ವಹಣಾ ತಂಡ ಕಾರ್ಯಚರಣೆ ನಡೆಸಿ, ಯುವಕನ ಮೃತದೇಹವನ್ನು ಹೊರತಂದಿದೆ.

ನಾಪತ್ತೆಯಾಗಿದ್ದ ಬೆಂಗಳೂರು ಮೂಲದ ಭರತ್ ಮೃತದೇಹ ಸಿಕ್ಕಿದ್ದು, ಹಗ್ಗಗಳನ್ನ ಬಳಸಿ ಗುಡ್ಡಗಾಡಿನಿಂದ ಮೃತದೇಹವನ್ನು ಸಿಬ್ಬಂದಿ ಹೊರತಂದಿದ್ದಾರೆ. ದುರ್ಗದಹಳ್ಳಿ ರಾಣಿಝರಿ ಬಳಿ ಬೈಕ್, ಐಡಿ, ಮೊಬೈಲ್ ಬಿಟ್ಟು ಯುವಕ ಹೋಗಿದ್ದ. ಕಾಫಿನಾಡಿಗೆ ಬಂದು ನಾಪತ್ತೆಯಾಗಿದ್ದ ಭರತ್‌ ಪತ್ತೆಗಾಗಿ ಸುಮಾರು 25ಕ್ಕೂ ಹೆಚ್ಚು ಮಂದಿ ಕಾರ್ಯಚರಣೆಯಲ್ಲಿ ಭಾಗಿಯಾಗಿದ್ದರು.

ಮೂವರು ಅಂತಾರಾಜ್ಯ ಕಳ್ಳಿಯರ ಬಂಧನ

ಚಿತ್ರದುರ್ಗ: ಮೂವರು ಅಂತಾರಾಜ್ಯ ಸುಲಿಗೆಕೋರ ಮಹಿಳೆಯರನ್ನು ಬಂಧಿಸಿ, 2 ಲಕ್ಷ ರೂ.ಗೂ ಅಧಿಕ ಮೌಲ್ಯದ ಒಡವೆ, 50 ಸಾವಿರ ರೂ. ನಗದನ್ನು ಚಿತ್ರದುರ್ಗ ಬಡಾವಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಹೇಶ್ವರಿ (26), ಸಂಜನಾ (25), ಅಕಿಲಾ (35) ಬಂಧಿತರು. ಬಂಧಿತ ಮಹಿಳೆಯರು ಬೆಳಗಾವಿ ಮೂಲದವರಾಗಿದ್ದು, ಬಸ್ ನಿಲ್ದಾಣ, ಮೆರವಣಿಗೆ, ಜಾತ್ರೆಗಳಲ್ಲಿ ಜನರ ಗಮನ ಬೇರೆಡೆ ಸೆಳೆದು ಕಳ್ಳತನ ಮಾಡುತ್ತಿದ್ದರು. ಬಡಾವಣೆ ಠಾಣೆ CPI ನಹಿಂ ಅಹಮದ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದು, ಎಫ್‌ಐಆರ್‌ ದಾಖಲಾಗಿದೆ.

ನರೇಗಾದಲ್ಲಿ 150 ಕೋಟಿ ರೂ. ಭ್ರಷ್ಟಾಚಾರ; ನಾಲ್ವರು ಪಿಡಿಒಗಳ ಅಮಾನತು

pdo new

ರಾಯಚೂರು: ನರೇಗಾದಲ್ಲಿ ವ್ಯಾಪಕ ಭ್ರಷ್ಟಾಚಾರ ಕಂಡುಬಂದ ಹಿನ್ನೆಲೆಯಲ್ಲಿ ದೇವದುರ್ಗ ತಾಲೂಕಿನ ನಾಲ್ವರು ಪಿಡಿಒಗಳನ್ನು ಅಮಾನತು ಮಾಡಲಾಗಿದೆ. 33 ಗ್ರಾಮ‌ ಪಂಚಾಯತಿಗಳಲ್ಲಿ 150 ಕೋಟಿ ರೂ. ಮೊತ್ತದ ಭ್ರಷ್ಟಾಚಾರ ಸಂಬಂಧ ರಾಜ್ಯ ಸಾಮಾಜಿಕ ಲೆಕ್ಕ ಪರಿಶೋಧನಾ ಸಮಿತಿ ದೂರು ನೀಡಿದ್ದರಿಂದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ಅಮಾನತು ಮಾಡಿ ಜಿಲ್ಲಾ ಪಂಚಾಯತಿ ಸಿಇಒ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ | Moral Policing: ಉಪ್ಪಿನಂಗಡಿಯಲ್ಲಿ ಮುಸ್ಲಿಂ ವಿದ್ಯಾರ್ಥಿ ಜೋಡಿಗೆ ತಡೆದು ಧಮಕಿ!

ಜಾಲಹಳ್ಳಿ ಪಿಡಿಒ ಪತ್ತೆಪ್ಪ ರಾಠೋಡ, ಶಾವಂತಗೇರ ಪಿಡಿಒ ಗುರುಸ್ವಾಮಿ, ಕ್ಯಾದಿಗೇರ ಪಿಡಿಒ ಸಿ.ಬಿ.ಪಾಟೀಲ್, ಗಾಣದಾಳ ಪಿಡಿಒ ಮಲ್ಲಪ್ಪ ಅಮಾನತುಗೊಂಡವರು. ಇಲಾಖೆ ವಿಚಾರಣೆ ಕಾಯ್ದಿರಿಸಿ ನಾಲ್ವರನ್ನು ಜಿಲ್ಲಾ ಪಂಚಾಯಿತಿ ಸಿಇಒ ಪಾಂಡ್ವೆ ರಾಹುಲ್ ತುಕಾರಾಮ ಅಮಾನತು ಮಾಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Shakti Scheme: ಒಂದೇ ಆಧಾರ್‌ ಕಾರ್ಡ್‌ ಬಳಸಿ ಇಬ್ಬರ ಪ್ರಯಾಣ; ಸಿಕ್ಕಿಬಿದ್ದ ಬುರ್ಕಾಧಾರಿ ಮಹಿಳೆಯರು!

Shakti Scheme: ಹುಬ್ಬಳ್ಳಿಯಲ್ಲಿ ಬುರ್ಕಾ ಧರಿಸಿದ್ದ ಇಬ್ಬರು ಮಹಿಳೆಯರು ಒಂದೇ ಆಧಾರ್ ಕಾರ್ಡ್‌ ತೋರಿಸಿ ಸಾರಿಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ನಿರ್ವಾಹಕನ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

VISTARANEWS.COM


on

Shakti Scheme
Koo

ಹುಬ್ಬಳ್ಳಿ: ಶಕ್ತಿ ಯೋಜನೆಯಲ್ಲಿ (Shakti Scheme) ಉಚಿತ ಪ್ರಯಾಣ ಸೌಲಭ್ಯವಿದ್ದರೂ ಮೋಸ ಮಾಡಲು ಹೋಗಿ ಇಬ್ಬರು ಮಹಿಳೆಯರು ಸಿಕ್ಕಿಬಿದ್ದಿರುವ ಘಟನೆ ನಗರದಲ್ಲಿ ನಡೆದಿದೆ. ಬುರ್ಕಾ ಧರಿಸಿದ್ದ ಇಬ್ಬರು ಮಹಿಳೆಯರು ಒಂದೇ ಆಧಾರ್ ಕಾರ್ಡ್‌ ತೋರಿಸಿ ಸಾರಿಗೆ ಬಸ್‌ನಲ್ಲಿ ಓಡಾಟ ನಡೆಸುತ್ತಿದ್ದಾಗ ನಿರ್ವಾಹಕನ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ಹುಬ್ಬಳ್ಳಿಯ ನೇಕಾರ ನಗರದಿಂದ ಕಿಮ್ಸ್‌ಗೆ ಹೋಗುತ್ತಿದ್ದ ಬಸ್‌ನಲ್ಲಿ ಒಂದೇ ಆಧಾರ್ ಕಾರ್ಡ್‌ ತೋರಿಸಿ ಇಬ್ಬರು ಮಹಿಳೆಯರು ಓಡಾಟ ಮಾಡುತ್ತಿದ್ದರು. ಮೊದಲಿಗೆ ನಿರ್ವಾಹಕನಿಗೆ ಒಂದೇ ಆಧಾರ್‌ ಎಂದು ಗೊತ್ತಾಗಿಲ್ಲ. ನಂತರ ಪರಿಶೀಲಿಸಿದಾಗ ಒಂದೇ ಕಾರ್ಡ್‌ನ ಎರಡು ಪ್ರತಿಗಳು ಎಂಬುವುದಾಗಿ ತಿಳಿದುಬಂದಿದೆ. ಈ ವೇಳೆ ಪ್ರಯಾಣಿಕರು ದೇವರು ಏನು ಮಾಡಿದರೂ ನಡೆಯತ್ತೆ ಎಂದು ನಿರ್ವಾಹಕ ಅಳಲು ತೋಡಿಕೊಂಡಿರುವುದು ಕಂಡುಬಂದಿದೆ. ಈ ಘಟನೆಯ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ.

ಮಹಿಳಾ ಸಬಲೀಕರಣ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿ ಮಾಡಿರುವ ಶಕ್ತಿಯೋಜನೆಯಿಂದ ಕೋಟ್ಯಂತರ ಮಹಿಳೆಯರಿಗೆ ಉಪಯೋಗವಾಗುತ್ತಿದೆ. ಆದರೆ, ಪ್ರಯಾಣ ಉಚಿತವಿದ್ದರೂ ಗುರುತಿನ ಚೀಟಿ ಇಲ್ಲದ ಕಾರಣ ಕೆಲವರು ಮೋಸ ಮಾಡುತ್ತಿರುವುದು ಕಂಡುಬಂದಿದೆ. ಹುಬ್ಬಳ್ಳಿ ಪ್ರಕರಣದ ಬಗ್ಗೆ ನಿರ್ವಾಹಕ, ಮೇಲಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ | Moral Policing: ಉಪ್ಪಿನಂಗಡಿಯಲ್ಲಿ ಮುಸ್ಲಿಂ ವಿದ್ಯಾರ್ಥಿ ಜೋಡಿಗೆ ತಡೆದು ಧಮಕಿ!

ಅನಿಮಲ್‌ ಸಿನಿಮಾ ನೋಡಿ ಪರ್ಸ್‌ ಬಿಟ್ಟು ಬಂದಳು; ವಾಪಸ್‌ ತರಲು ಹೋದಾಗ ಸೆಕ್ಯುರಿಟಿ ಗಾರ್ಡ್‌ಗೆ ಒದ್ದಳು!

ಬೆಂಗಳೂರು: ಅನಿಮಲ್‌ ಸಿನಿಮಾ ವೀಕ್ಷಣೆಗೆ ಮಾಲ್‌ಗೆ ಬಂದಿದ್ದ ಮಹಿಳೆಯೊಬ್ಬರು ಸೆಕ್ಯುರಿಟಿ ಗಾರ್ಡ್ ಮೇಲೆ ಹಲ್ಲೆ (assault case) ನಡೆಸಿದ್ದಾರೆ. ಮರೆತು ಹೋಗಿದ್ದ ವ್ಯಾಲೆಟ್ ಹಿಂಪಡೆಯುವ ವಿಚಾರಕ್ಕೆ ಶುರುವಾದ ಕಿರಿಕ್ ಠಾಣೆ ಮೆಟ್ಟಿಲೇರಿದೆ. ಗರುಡಾ ಮಾಲ್​ನ (garuda mall) ಪಿವಿಆರ್ ಐನಾಕ್ಸ್ ಚಿತ್ರಮಂದಿರದ ಬಳಿ ನಡೆದಿದೆ.

ಅನಿಮಲ್ ಸಿನಿಮಾ ವೀಕ್ಷಿಸಲು ತಡರಾತ್ರಿ 10:30ರ ಸುಮಾರಿಗೆ ಪಿವಿಆರ್​ ಐನಾಕ್ಸ್ ಚಿತ್ರಮಂದಿರಕ್ಕೆ ಮಹಿಳೆ ಬಂದಿದ್ದರು. ಸಿನಿಮಾ ಮುಗಿಸಿ ಹೊರ ಬಂದಾಗ ಸಿನಿಮಾ ಹಾಲ್‌ನಲ್ಲೇ ವ್ಯಾಲೆಟ್‌ ಮರೆತು ಹೋಗಿದ್ದರು. ಹೌಸ್ ಕೀಪಿಂಗ್ ಸಿಬ್ಬಂದಿ ಸ್ವಚ್ಚತಾ ಕಾರ್ಯದ ಸಂದರ್ಭದಲ್ಲಿ ವ್ಯಾಲೆಟ್‌ ಗಮನಿಸಿದ್ದರು. ಬಳಿಕ ವ್ಯಾಲೆಟ್‌ ಅನ್ನು ಸೆಕ್ಯೂರಿಟಿಗೆ ಒಪ್ಪಿಸಿದ್ದರು.

ಮರೆತು ಹೋಗಿದ್ದ ವ್ಯಾಲೆಟ್‌ಗಾಗಿ ಮಹಿಳೆ ಪುನಃ ತಡರಾತ್ರಿ 3 ಗಂಟೆಯ ಸುಮಾರಿಗೆ ಮಾಲ್ ಬಳಿ ಬಂದಿದ್ದಾಳೆ. ಈ ವೇಳೆ ಸೆಕ್ಯೂರಿಟಿ ಗಾರ್ಡ್ ನಿಯಮಾನುಸಾರ ಐಡೆಂಟಿಟಿ ಮಾಹಿತಿ ಕೇಳಿದ್ದಾರೆ. ಅಷ್ಟಕ್ಕೆ ಕೋಪಗೊಂಡ ಮಹಿಳೆ ಅವಾಚ್ಯವಾಗಿ ನಿಂದಿಸಿ ವ್ಯಾಲೆಟ್ ಕಿತ್ತುಕೊಂಡು, ಸೆಕ್ಯುರಿಟಿ ಗಾರ್ಡ್ ಮೇಲೆ ಹಲ್ಲೆ ನಡೆಸಿದ್ದಾಳೆ. ಕುತ್ತಿಗೆ ಪಟ್ಟಿ ಹಿಡಿದುಕೊಂಡು ಹೊಡೆದಿದ್ದು, ಕಾಲಿನಲ್ಲಿ ಒದ್ದು, ಕಪಾಳಕ್ಕೆ ಬಾರಿಸಿದ್ದಾಳೆ.

ಇದನ್ನೂ ಓದಿ | Road Accident : ಸಾವಿನಲ್ಲೂ ಒಂದಾದ ಪ್ರೇಮಿಗಳು; ರಸ್ತೆ ಅಪಘಾತದಲ್ಲಿ ಮೃತ್ಯು

Woman assaults staff of Garuda Mall in Bengaluru

ಇತ್ತ ಮಾಲ್ ಸಿಬ್ಬಂದಿ ಸಮಾಧಾನಪಡಿಸಲು ಮುಂದಾದರೂ ಮಾತು ಕೇಳದೇ ಮಹಿಳೆ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ. ಮಾತ್ರವಲ್ಲದೇ ತಪ್ಪಾಯ್ತು ಕ್ಷಮಿಸಿ ಎಂದು ಸಿಬ್ಬಂದಿ ಮಹಿಳೆಯ ಕಾಲಿಗೂ ಬಿದ್ದಿದ್ದಾಳೆ. ಆದರೂ ಬಿಡದೇ ಮಹಿಳೆ ಕುತ್ತಿಗೆ ಪಟ್ಟಿ ಹಿಡಿದುಕೊಂಡು ಹಲ್ಲೆ ಮಾಡಿದ್ದಾಳೆ. ಜತೆಗೆ ಇವರಿಬ್ಬರ ಗಲಾಟೆ ಬಿಡಿಸಲು ಬಂದಿದ್ದ ಸಿಬ್ಬಂದಿಗೂ ಅವಾಚ್ಯವಾಗಿ ನಿಂದಿಸಿದ್ದಾಳೆ.

ಇಷ್ಟಲ್ಲ ಘಟನೆ ಬಳಿಕ ಮಾಲ್‌ ಸಿಬ್ಬಂದಿ ಪೊಲೀಸರನ್ನು ಕರೆಸಿದ್ದಾರೆ. ಈ ವೇಳೆ ತನ್ನ ವ್ಯಾಲೆಟ್‌ನಲ್ಲಿ ಎಂಟು ಸಾವಿರ ರೂ. ಕಳ್ಳತನವಾಗಿದೆ ಎಂದು ದೂರು ನೀಡಿದ್ದಾಳೆ. ಆದರೆ ಸಿಸಿಟಿವಿ ಕ್ಯಾಮೆರಾದಲ್ಲಿ ಪರಿಶೀಲಿಸಿದಾಗ ವ್ಯಾಲೆಟ್‌ನಲ್ಲಿ ಹಣ ಹಾಗೂ ಯಾವುದೇ ವಸ್ತು ಕಳ್ಳತನವಾಗಿಲ್ಲ ಎಂದು ತಿಳಿದು ಬಂದಿದೆ. ಸದ್ಯ ಘಟನೆ ಸಂಬಂಧ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಮಹಿಳೆ ಹಾಗೂ ಸಿಬ್ಬಂದಿ ಇಬ್ಬರ ಮೇಲೂ ದೂರು ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದಕ್ಷಿಣ ಕನ್ನಡ

ಹೈಪರ್ ಲೋಕಲ್ ಸುದ್ದಿಗೂ ಅಭ್ಯುದಯ ಪತ್ರಿಕೋದ್ಯಮಕ್ಕೂ ಅವಿನಾಭಾವ ಸಂಬಂಧ: ನವೀನ್ ಅಮ್ಮೆಂಬಳ

ಈಗಿನ ಸಾಮಾಜಿಕ ಜಾಲತಾಣಗಳು‌ ಮಹತ್ವದ ತೀರಾ ಸ್ಥಳೀಯ ಅಥವಾ ಬೇರುಮಟ್ಟದ ಸುದ್ದಿ, ಬೆಳವಣಿಗೆಗಳನ್ನು ಜಗತ್ತಿಗೆ ತಲುಪಿಸುತ್ತಿವೆ. ಇಂತಹ ಕಾಲಘಟ್ಟದಲ್ಲಿ ಸ್ಥಳೀಯ ಹೈಪರ್ ಲೋಕಲ್ ಸುದ್ದಿಗಾರರಿಗೆ ವಿಪುಲ ಅವಕಾಶಗಳಿವೆ ಎಂದು ಮಾಮ್ ಸಂಘಟನೆ ಅಧ್ಯಕ್ಷ ನವೀನ್ ಅಮ್ಮೆಂಬಳ ತಿಳಿಸಿದ್ದಾರೆ.

VISTARANEWS.COM


on

Naveen Ammembala
Koo

ಬೆಳ್ತಂಗಡಿ: ಹೈಪರ್ ಲೋಕಲ್ ಸುದ್ದಿಗಳಿಗೂ ಅಭ್ಯುದಯ ಪತ್ರಿಕೋದ್ಯಮಕ್ಕೂ ಅವಿನಾಭಾವ ಸಂಬಂಧವಿದೆ ಎಂದು ಮಂಗಳೂರಿನ ಮೀಡಿಯಾ ಅಲ್ಯೂಮ್ನಿ ಅಸೋಸಿಯೇಷನ್ ಆಫ್ ಮಂಗಳ ಗಂಗೋತ್ರಿ (ಮಾಮ್) ಸಂಘಟನೆಯ ಅಧ್ಯಕ್ಷ ನವೀನ್ ಅಮ್ಮೆಂಬಳ ಅಭಿಪ್ರಾಯಪಟ್ಟರು.

ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಮತ್ತು ಪದವಿ ಅಧ್ಯಯನ ವಿಭಾಗ ಮಾಮ್ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ‘ಹೈಪರ್ ಲೋಕಲ್ ಮಾಧ್ಯಮ: ಕಾರ್ಯನಿರ್ವಹಣೆ ಮತ್ತು ಸುಸ್ಥಿರತೆ’ ಕುರಿತ ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

ಬೆಳ್ತಂಗಡಿಯ ದಿಡುಪೆ ಎಂಬ ಕುಗ್ರಾಮವನ್ನು ಅದರ ಸುದ್ದಿಗಳನ್ನು ದಶಕಗಳ‌ ಹಿಂದೆ ರಾಜ್ಯ ಮಟ್ಟಕ್ಕೆ ಉದಯವಾಣಿ ಪತ್ರಿಕೆಯ ಮೂಲಕ ಪರಿಚಯಿಸಿದವರು ಅಭ್ಯುದಯ ಪತ್ರಕರ್ತ ಈಶ್ವರ ದೈತೋಟ ಅವರು. ಆ ಮೂಲಕ ಅಭಿವೃದ್ಧಿ ಕಂಡ ದಿಡುಪೆ ಜಗತ್ತಿನ ಗಮನ ಸೆಳೆಯಿತು. ತೀರಾ ಸ್ಥಳೀಯ ಮಹತ್ವವನ್ನು ಪಸರಿಸಿದ ಕರ್ನಾಟಕದ‌‌‌ ಮೊದಲ ಪ್ರಯೋಗ ಅಭ್ಯುದಯ ಪತ್ರಿಕೋದ್ಯಮದ ಮಾದರಿ. ಹಾಗಾಗಿ ಅಭ್ಯುದಯ ಪತ್ರಿಕೋದ್ಯಮಕ್ಕೂ ಹೈಪರ್ ಲೋಕಲ್ ಸುದ್ದಿಗಳಿಗೂ ಅವಿನಾಭಾವತೆ ಇದೆ ಎಂದು ಅವರು ಹೇಳಿದರು.

ಹೈಪರ್ ಅಂದರೆ ಗತಿಶೀಲ, ಚಲನಶೀಲ, ಕ್ರಿಯಾತ್ಮಕ ಎಂದೆಲ್ಲಾ ಅರ್ಥೈಸಬಹುದು. ತೀರಾ‌ ಸ್ಥಳೀಯ ಸುದ್ದಿಗೆ ಹೆಚ್ಚಿನ ಮಹತ್ವ‌ ನೀಡಿ ಜಾಗತಿಕ ಅಥವಾ ಗ್ಲೋಬಲ್ ಮಟ್ಟಕ್ಕೆ ಒಯ್ಯುವ ಸಾಧ್ಯತೆ ಹೇರಳವಾಗಿದೆ. ‘ ಹೈಪರ್ ಲೋಕಲ್ ‘ ಸುದ್ದಿಗಳೇ ಹೈಪರ್ ಗ್ಲೋಬಲ್ ಸುದ್ದಿಗಳಾಗಿ ಪರಿವರ್ತನೆಯಾಗುವುದಕ್ಕೆ ನಿದರ್ಶನಗಳಿವೆ. ರಾಷ್ಟ್ರಮಟ್ಟದ ಮಾಧ್ಯಮಗಳೂ ಪುತ್ತೂರು ಅಥವಾ ರಾಯಚೂರಿನ ಹಳ್ಳಿಯ ಸುದ್ದಿಗೂ ಪ್ರಾಮುಖ್ಯತೆ ಕೊಡುತ್ತಿರುವುದನ್ನು ಗಮನಿಸಬಹುದು ಎಂದು ಅಮ್ಮೆಂಬಳ ಅಭಿಪ್ರಾಯಿಸಿದರು‌.

ಈಗಿನ ಸಾಮಾಜಿಕ ಜಾಲತಾಣಗಳು‌ ಮಹತ್ವದ ತೀರಾ ಸ್ಥಳೀಯ ಅಥವಾ ಬೇರುಮಟ್ಟದ ಸುದ್ದಿ, ಬೆಳವಣಿಗೆಗಳನ್ನು ಜಗತ್ತಿಗೆ ತಲುಪಿಸುತ್ತಿವೆ. ಇಂತಹ ಕಾಲಘಟ್ಟದಲ್ಲಿ ಸ್ಥಳೀಯ ಹೈಪರ್ ಲೋಕಲ್ ಸುದ್ದಿಗಾರರಿಗೆ ವಿಪುಲ ಅವಕಾಶಗಳಿವೆ ಎಂದರು.

ಜಾಗತಿಕ ಮಟ್ಟದ ಪತ್ರಿಕೆಗಳಿಗಿಂತ ಸ್ಥಳೀಯ ಪತ್ರಿಕೆಗಳಿಗೆ ಪ್ರಾಮುಖ್ಯತೆ ಹೆಚ್ಚು. ಏಕೆಂದರೆ ಇವು ಸ್ಥಳೀಯ ಆಸಕ್ತಿಗೆ ಸಂಬಂಧಿಸಿದ ಸೂಕ್ಷ್ಮ ವಿಚಾರಗಳನ್ನು ಜಾಗತಿಕ ನೆಲೆಗಟ್ಟಿನಲ್ಲಿ ತಿಳಿಸುವ ಪ್ರಯತ್ನವನ್ನು ಮಾಡುತ್ತವೆ. ಪ್ರಸ್ತುತ ಕ್ರಿಯಾಶೀಲ ಸ್ಥಳೀಯ ಪತ್ರಿಕೆಗಳಿಗೆ ಹೊಸ ಮಾಧ್ಯಮ ಲೋಕದಲ್ಲಿ ವ್ಯಾಪಕ ಅವಕಾಶಗಳು ಲಭ್ಯವಾಗುತ್ತಿವೆ ಎಂದರು.

ಇದನ್ನೂ ಓದಿ | ವಿಸ್ತಾರ ಅಂಕಣ: ಮನಮೋಹನ್‌ ಸಿಂಗ್‌ ಮಾದರಿ ಅಥವಾ ನರೇಂದ್ರ ಮೋದಿ ಮಾದರಿ: ಮುಸ್ಲಿಂ ಕಲ್ಯಾಣಕ್ಕೆ ಯಾವುದು ಸರಿ?

ವಿಭಾಗದ ಮುಖ್ಯಸ್ಥ ಡಾ. ಭಾಸ್ಕರ ಹೆಗಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಸುದ್ದಿ ಬಿಡುಗಡೆ ಪತ್ರಿಕೆಯ ಸಂಪಾದಕ ಡಾ. ಯು ಪಿ ಶಿವಾನಂದ, ಎಸ್ ಡಿ ಎಂ ಕಾಲೇಜಿನ ಪ್ರಾಂಶುಪಾಲ ಡಾ. ಕುಮಾರ ಹೆಗ್ಡೆ, ಮಾಮ್ ಸಂಘಟನೆ ಗೌರವಾಧ್ಯಕ್ಷ ವೇಣು ಶರ್ಮ, ಕಾರ್ಯಾಗಾರದ ಸಂಚಾಲಕಿ, ಸಹಾಯಕ ಪ್ರಾಧ್ಯಾಪಕಿ ಡಾ. ಗೀತಾ ಎ.ಜೆ. ಉಪಸ್ಥಿತರಿದ್ದರು.

Continue Reading
Advertisement
Congress Mp old tweet resurfaces about black money
ದೇಶ2 mins ago

ಇಷ್ಟೊಂದು ಕಪ್ಪು ಹಣ ಎಲ್ಲಿಡುತ್ತಾರೋ ಎಂದು ಕೇಳಿದ್ದ ಕೈ ಸಂಸದನ ಬಳಿ 300 ಕೋಟಿ ರೂ. ಬ್ಲ್ಯಾಕ್ ಮನಿ!

pro kabaddi
ಕ್ರೀಡೆ6 mins ago

Pro Kabaddi: ಜಿದ್ದಾಜಿದ್ದಿನ ಪಂದ್ಯದಲ್ಲಿ ಬೆಂಗಾಲ್​, ಹರ್ಯಾಣಗೆ ಒಲಿದ ಗೆಲುವು

Nagamurthy Swamy
ಕರ್ನಾಟಕ28 mins ago

Ayodhya Ram Mandir: ರಾಮಮಂದಿರ ನಿರ್ಮಾಣಕ್ಕೆ ತೆರಳಿದ ಗದಗದ ಯುವ ಶಿಲ್ಪಿ

Saika Ishaque ran through the England middle order
ಕ್ರಿಕೆಟ್42 mins ago

ENGW vs INDW; ಅಂತಿಮ ಪಂದ್ಯದಲ್ಲಿ ಗೆದ್ದು ನಿಟ್ಟುಸಿರು ಬಿಟ್ಟ ಭಾರತ ಮಹಿಳಾ ಕ್ರಿಕೆಟ್​ ತಂಡ

CLAT Result 2024 announced
ದೇಶ43 mins ago

CLAT Result 2024: ಕಾನೂನು ಪ್ರವೇಶ ಪರೀಕ್ಷೆ ಸಿಎಲ್ಎಟಿ ರಿಸಲ್ಟ್ ಪ್ರಕಟ

girl students fall ill
ಕರ್ನಾಟಕ1 hour ago

Raichur News: ಮಾನ್ವಿ ಹಾಸ್ಟೆಲ್‌ನಲ್ಲಿ ಊಟ ಸೇವಿಸಿ 14 ವಿದ್ಯಾರ್ಥಿನಿಯರು ಅಸ್ವಸ್ಥ

Fans brave the dampness, waiting for India's tour of South Africa to kick off
ಕ್ರಿಕೆಟ್1 hour ago

IND vs SA: ಮಳೆಗೆ ಕೊಚ್ಚಿ ಹೋದ ಭಾರತ-ದಕ್ಷಿಣ ಆಫ್ರಿಕಾ ಮೊದಲ ಟಿ20 ಪಂದ್ಯ

Gautam Gambhir
ಕ್ರಿಕೆಟ್2 hours ago

Gautam Gambhir: ಮತ್ತೆ ಪಾಕ್​ ಆಟಗಾರನ ಬೆಂಬಲಕ್ಕೆ ನಿಂತ ಗೌತಮ್​ ಗಂಭೀರ್

Shakti Scheme
ಕರ್ನಾಟಕ2 hours ago

Shakti Scheme: ಒಂದೇ ಆಧಾರ್‌ ಕಾರ್ಡ್‌ ಬಳಸಿ ಇಬ್ಬರ ಪ್ರಯಾಣ; ಸಿಕ್ಕಿಬಿದ್ದ ಬುರ್ಕಾಧಾರಿ ಮಹಿಳೆಯರು!

Supreme Court verdict on Article 370 and Know about this article
ದೇಶ3 hours ago

ನಾಳೆ ಆರ್ಟಿಕಲ್ 370 ರದ್ದು ತೀರ್ಪು; ಅದಕ್ಕೂ ಮೊದಲು ಈ ಸಂಗತಿ ತಿಳಿದುಕೊಂಡಿರಿ

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ2 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ1 week ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

DCC Bank Recruitment 2023
ಉದ್ಯೋಗ11 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ3 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Actor Shivarajkumar rejects DKS offer
ಕರ್ನಾಟಕ8 hours ago

Shiva Rajkumar: ಲೋಕಸಭೆಗೆ ಸ್ಪರ್ಧಿಸಿ ಎಂದ ಡಿಕೆಶಿ; ನಾನು ರಾಜಕೀಯಕ್ಕೆ ಬರಲ್ಲ ಎಂದ ಶಿವರಾಜ್‌ಕುಮಾರ್!

HD Kumaraswamy attack on congress
ಕರ್ನಾಟಕ10 hours ago

HD Kumaraswamy: ಬಿಜೆಪಿಗೆ ‌50 ಶಾಸಕರ ಕರ್ಕೊಂಡು ಬರ್ತೇವೆ ಎಂದಿರುವ ಕಾಂಗ್ರೆಸ್‌ ನಾಯಕ!

Dina Bhavishya
ಪ್ರಮುಖ ಸುದ್ದಿ18 hours ago

Dina Bhavishya : ಈ ರಾಶಿಯವರ ಲೆಕ್ಕಾಚಾರವು ಇಂದು ಉಲ್ಟಾ ಪಲ್ಟಾ!

read your daily horoscope predictions for december 9 2023
ಪ್ರಮುಖ ಸುದ್ದಿ2 days ago

Dina bhavishya: ಗೌಪ್ಯ ವಿಷಯ ಹೇಳುವಾಗ ಈ ರಾಶಿಯವರು ಎಚ್ಚರ!

Actress Leelavathi felicitated
South Cinema2 days ago

Actress Leelavathi: ನಮ್ಮಮ್ಮ ಲೀಲಮ್ಮ-ನಿಮ್ಮೊಳಗೆ ನಾವಮ್ಮ ಪ್ರಶಸ್ತಿ ನೀಡಿ ಗೌರವಿಸಿದ್ದ ಫಿಲ್ಮ್‌ ಚೇಂಬರ್

Actress Leelavati and Rajkumar film
South Cinema2 days ago

Actress Leelavathi: ಲೀಲಾವತಿಗೆ ಸಂದ ಪ್ರಶಸ್ತಿಗಳ ಗರಿ; ಇಲ್ಲಿದೆ ಸಿನಿ ಜರ್ನಿ ಲಿಸ್ಟ್‌

Actress Leelavati and Rajkumar film
South Cinema2 days ago

Actress Leelavathi: ತೆರೆಯಲ್ಲಿ ಮೋಡಿ ಮಾಡಿದ್ದ ಡಾ.ರಾಜ್‌ಕುಮಾರ್‌-ಲೀಲಾವತಿ ಜೋಡಿ!

PM Narenda modi and Moulvi thanveer Peera
ಕರ್ನಾಟಕ2 days ago

CM Siddaramaiah: ಮೌಲ್ವಿ ಫೋಟೊ ಹಾಕಿ ಮೋದಿ ಟಾರ್ಗೆಟ್‌ ಮಾಡಿದ ಯತ್ನಾಳ್‌ ಎಂದ ಸಿದ್ದರಾಮಯ್ಯ

Dina Bhavishya
ಪ್ರಮುಖ ಸುದ್ದಿ3 days ago

Dina Bhavishya: ಇಂದು ಈ ರಾಶಿಯವರು ತುಂಬಾ ಎಚ್ಚರ ವಹಿಸಬೇಕು!

Madhu Bangarappa in Belagavi Winter Session
ಕರ್ನಾಟಕ3 days ago

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

ಟ್ರೆಂಡಿಂಗ್‌