BJP ರಾಜ್ಯ ಕಾರ್ಯಕಾರಿಣಿಗೆ ಸಂತೋಷ್‌ ಆತ್ಮಹತ್ಯೆ ನೆರಳು: ಒಂದೇ ದಿನವಿರುವಂತೆ ಮಾಜಿಯಾಗುವ ಈಶ್ವರಪ್ಪ - Vistara News

ಕರ್ನಾಟಕ

BJP ರಾಜ್ಯ ಕಾರ್ಯಕಾರಿಣಿಗೆ ಸಂತೋಷ್‌ ಆತ್ಮಹತ್ಯೆ ನೆರಳು: ಒಂದೇ ದಿನವಿರುವಂತೆ ಮಾಜಿಯಾಗುವ ಈಶ್ವರಪ್ಪ

ಏ.16-17ರಂದು ಕಾರ್ಯಕಾರಿಣಿ ನಡೆಯಲಿದೆ. ಹಿಜಾಬ್‌, ಹಲಾಲ್‌ ವಿಚಾರಗಳಲ್ಲಿ ಮುಂದೆ ನಿಂತು ಹೇಳಿಕೆ ನೀಡಿ ಪಕ್ಷವನ್ನು ಸಮರ್ಥನೆ ಮಾಡಿಕೊಳ್ಳುತ್ತಿದ್ದ ಈಶ್ವರಪ್ಪ ಅವರ ಕಾರಣಕ್ಕೇ ಈಗ ಪಕ್ಷ ಇಕ್ಕಟ್ಟಿಗೆ ಸಿಲುಕಿದೆ.

VISTARANEWS.COM


on

santosh santosh
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸಪೇಟೆ: ಮುಂದಿನ ವರ್ಷ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಯುವುದರಿಂದ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಶನಿವಾರ ಹಾಗೂ ಭಾನುವಾರ ನಡೆಯುವ ರಾಜ್ಯ ಬಿಜೆಪಿ (BJP) ಕಾರ್ಯಕಾರಿಣಿ ಮಹತ್ವ ಪಡೆದಿದೆ. ಆದರೆ ಮೂರು ದಿನದ ಹಿಂದಷ್ಟೆ ಘಟಿಸಿದ ಬಿಜೆಪಿ ಕಾರ್ಯಕರ್ತ ಮತ್ತು ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣ (Santosh Suicide Case) ಕರಿನೆರಳು ಕಾರ್ಯಕಾರಿಣಿಯನ್ನು ಬಾಧಿಸುವ ಸಾಧ್ಯತೆಯಿದೆ.

ಹೊಸಪೇಟೆಯ ಭಟ್ರಹಳ್ಳಿ ಆಂಜನೇಯ ದೇಗುಲದ ಬಯಲು ಸ್ಥಳದಲ್ಲಿ ಹಂಪಿ ಸ್ಮಾರಕಗಳ ಶೈಲಿಯಲ್ಲಿ ಬಯಲು ಜಾಗದಲ್ಲಿ ಹವಾನಿಯಂತ್ರಿತ ಜರ್ಮನ್ ಟೆಂಟ್ ನಿರ್ಮಿಸಲಾಗಿದೆ. ವೈಭವೋಪೇತ ಹಂಪಿ ಸಾಮ್ರಾಜ್ಯವನ್ನು ನೆನಪಿಸುವಂತೆ ಸಾಲುಕಂಬಗಳು, ಮುಖ್ಯ ಮಂಟಪ ನಿರ್ಮಿಸಲಾಗಿದೆ. ಮುಖ್ಯ ವೇದಿಕೆಗೆ ಅಂಜನಾದೇವಿ ಮಹಾದ್ವಾರ ಮತ್ತು ಮಹರ್ಷಿ ಮಾತಂಗಮುನಿ ಸಭಾ ಮಂಟಪ ಎಂದು ಹೆಸರಿಡಲಾಗಿದೆ.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್, ರಾಜ್ಯ ಪ್ರಭಾರಿ ಅರುಣ್ ಸಿಂಗ್, ರಾಜ್ಯ ಅಧ್ಯಕ್ಷ ನಳಿನ್‌ಕುಮಾರ್‌ ಕಟೀಲ್, ರಾಷ್ಟ್ರೀಯ ಮುಖಂಡರಾದ ಡಿ.ಕೆ. ಅರುಣಾ, ಸಿ.ಟಿ.ರವಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂಗಳಾದ ಬಿ.ಎಸ್.ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಡಿ.ವಿ. ಸದಾನಂದಗೌಡ, ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ರಾಜೀವ್ ಚಂದ್ರಶೇಖರ್, ಶೋಭಾ ಕರಂದ್ಲಾಜೆ, ನಾರಾಯಣಸ್ವಾಮಿ, ಭಗವಂತ್ ಖೂಬಾ ಅವರು ಭಾಗವಹಿಸಲಿದ್ದಾರೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆಗಮಿಸುವ ಸಾಧ್ಯತೆಯೂ ಇದೆ. ಕಾರ್ಯಕಾರಿಣಿಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧ್ಯಕ್ಷರು, ಜಿಲ್ಲಾ ಪ್ರತಿನಿಧಿಗಳು, ವಿಶೇಷ ಆಹ್ವಾನಿತರು ಸೇರಿ ಸುಮಾರು 650 ಜನ ಭಾಗವಹಿಸಲಿದ್ದಾರೆ.

ಸಂತೋಷ್‌ ಆತ್ಮಹತ್ಯೆ ಪ್ರಕರಣ

ಕಳೆದ ಕೆಲ ದಿನಗಳವರೆಗೂ ರಾಜ್ಯ ರಾಜಕಾರಣದಲ್ಲಿ ಬಿಜೆಪಿಯದ್ದೇ ಮೇಲುಗೈ ಆಗಿತ್ತು. ಉಡುಪಿಯ ಸರ್ಕಾರಿ ಕಾಲೇಜಿನ ಆರು ವಿದ್ಯಾರ್ಥಿನಿಯರಿಂದ ಆರಂಭವಾದ ಹಿಜಾಬ್‌ ಧಾರಣೆ ವಿಚಾರ, ವಿವಾದವಾಗಿ ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟಕ್ಕೂ ವಿಸ್ತರಿಸಿತು. ನ್ಯಾಯಾಲಯ ಸೇರಿ ಎಲ್ಲ ಹಂತದಲ್ಲೂ ಬಿಜೆಪಿಯದ್ದೇ ಮೇಲುಗೈ ಆಗಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಇಕ್ಕಟ್ಟಿಗೆ ಸಿಲುಕಿದವು. ಹಿಜಾಬ್‌ಗೆ ಬೆಂಬಲ ನೀಡಿದರೆ ನ್ಯಾಯಾಲಯಕಕೆ ವಿರುದ್ಧ, ಹಿಜಾಬ್‌ ವಿರೋಧಿಸಿದರೆ ಮುಸ್ಲಿಮರ ಧ್ವೇಷ ಎಂಬ ಆತಂಕವಿತ್ತು. ನಂತರದಲ್ಲಿ ಹಲಾಲ್‌ ಕಟ್‌ ಹಾಗೂ ಝಟ್ಕಾ ಕಟ್‌ ವಿವಾದ ತಲೆಯೆತ್ತಿತು. ಆನಂತರದಲ್ಲಿ ಮಸೀದಿಗಳಲ್ಲಿ ಆಜಾನ್‌ ಕೂಗುವ ವಿವಾದ, ವಕ್ಫ್‌ ಬೋರ್ಡ್‌ ರದ್ದು ಮಾಡುವವರೆಗೂ ಮಾತುಗಳು ವಿವಿಧ ಸಂಘಟನೆಗಳಿಂದ ಕೇಳಿಬಂದವು. ಎಲ್ಲ ಸಂದರ್ಭದಲ್ಲೂ ಬಿಜೆಪಿಯದ್ದೇ ಮೇಲುಗೈ ಆಗಿತ್ತು.

ಆದರೆ ಮಂಗಳವಾರ ಉಡುಪಿಯಲ್ಲಿ ಗುತ್ತಿಗೆದಾರ ಸಂತೋಷ್‌ ಆತ್ಮಹತ್ಯೆ ಮಾಡಿಕೊಂಡರು. ಈ ಹಿಂದೆಯೇ ಸುದ್ದಿಗೋಷ್ಠಿ ನಡೆಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ ವಿರುದ್ಧ 40% ಲಂಚದ ಆರೋಪ ಮಾಡಿದ್ದ ಸಂತೋಷ್‌ ಈ ನಿರ್ಧಾರ ಕೈಗೊಳ್ಳುತ್ತಾರೆ ಎಂಬುದನ್ನು ಯಾರೂ ಊಹಿಸಿರಲಿಲ್ಲ. ಆತ್ಮಹತ್ಯೆ ವಿಚಾರ ಹೊರಬೀಳುತ್ತಿದ್ದಂತೆಯೇ ಪ್ರತಿಪಕ್ಷಗಳಿಗೆ, ಅದರಲ್ಲೂ ಸೊರಗಿದ್ದ ಕಾಂಗ್ರೆಸ್‌ಗೆ ಟಾನಿಕ್‌ ಸಿಕ್ಕಂತಾಗಿದೆ. ಈಗಾಗಲೆ ಎರಡು ದಿನದಲ್ಲಿ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆದಿವೆ. ಸಂತೋಷ್‌ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪ ವಿರುದ್ಧವೇ ಎಫ್‌ಐಆರ್‌ ದಾಖಲಾಗಿದೆ. ಪ್ರತಿಪಕ್ಷಗಳು, ಮಾಧ್ಯಮ ಹಾಗೂ ಸಾರ್ವಜನಿಕರ ಒತ್ತಡಕ್ಕೆ ಮಣಿದ ಈಶ್ವರಪ್ಪ ಶುಕ್ರವಾರ ರಾಜೀನಾಮೆಯನ್ನು ಸಲ್ಲಿಸುವುದಾಗಿ ಗುರುವಾರ ಘೋಷಣೆ ಮಾಡಿದ್ದಾರೆ.

ಹಿಜಾಬ್‌, ಹಲಾಲ್‌ ಮುಂತಾದ ಹಿಂದುಪರ ವಿಚಾರಗಳಲ್ಲಿ ಮುಂಚೂಣಿಯಲ್ಲಿ ನಿಂತು ಹೇಳಿಕೆಗಳನ್ನು ನೀಡುತ್ತಿದ್ದವರಲ್ಲಿ ಈಶ್ವರಪ್ಪ ಪ್ರಮುಖರು. ಹಿಜಾಬ್‌ಗೆ ವಿರುದ್ಧವಾಗಿ ಹಿಂದು ಹುಡುಗರಿಗೆ ಕೇಸರಿ ಶಾಲು ನೀಡುವ ಕುರಿತಂತೆಯೇ ಈಶ್ವರಪ್ಪ ವಿವಾದಕ್ಕೀಡಾಗಿದ್ದರು. ಹಿಂದು ಸಂಘಟನೆಗಳ ಕಾರ್ಯಕರ್ತರ ಮೆಚ್ಚುಗೆಗೆ ಪಾತ್ರರಾಗಿದ್ದರು. ಇದೀಗ ಅದೇ ಈಶ್ವರಪ್ಪ ಅವರ ವಿಚಾರದಲ್ಲಿ ರಾಜ್ಯ ಬಿಜೆಪಿ ಇಕ್ಕಟ್ಟಿಗೆ ಸಿಲುಕಿದೆ.

ಚುನಾವಣೆ ಸಮಯದಲ್ಲಿ ಸರ್ಕಾರದ ಸಾಧನೆಗಳನ್ನು ಮುಂದಿಟ್ಟುಕೊಂಡು ಪ್ರಚಾರ ನಡೆಸಬೇಕಿದೆ. ಕೇಂದ್ರದಲ್ಲಿ ನರೇಮದ್ರ ಮೋದಿ ಸರ್ಕಾರದ ಜತೆಗೆ ಕರ್ನಾಟಕದಲ್ಲೂ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಡಬಲ್‌ ಎಂಜಿನ್‌ ಅಭಿವೃದ್ಧಿ ಆಗುತ್ತದೆ ಎಂಬುದು ಬಿಜೆಪಿ ಪ್ರಚಾರದ ಕೇಂದ್ರ ಬಿಂದು. ಇದೀಗ ಒಂದೆಡೆ ಕೋಮು ವಿಚಾರದಲ್ಲಿ ರಾಜ್ಯದ ಉದ್ಯಮ ವಲಯದಲ್ಲಿ ಬಿಜೆಪಿ ಕುರಿತು ನಕಾರಾತ್ಮಕ ಭಾವನೆ ಮೂಡಿದೆ ಎಂಬುದರ ನಡುವೆಯೇ ಭ್ರಷ್ಟಾಚಾರ ವಿಚಾರದಲ್ಲೂ ಮುಖಭಂಗವಾಗಿದೆ. ಇವೆರಡೂ ನಕಾರಾತ್ಮಕತೆಗಳಿಂದ ಹೊರಬಂದು ಚುನಾವಣೆಗೆ ಹೇಗೆ ಮುನ್ನುಗ್ಗಬೇಕು ಎಂಬ ತಂತ್ರವನ್ನು ರೂಪಿಸುವ ಸವಾಲು ರಾಜ್ಯ ಬಿಜೆಪಿ ಕಾರ್ಯಕಾರಿಣಿಗೆ ಒದಗಿಬಂದಿದೆ.

ಹೆಚ್ಚಿನ ಓದಿಗಾಗಿ: ರಾಜ್ಯದಲ್ಲೀಗ 150+ ಜಪ: BJP, CONGRESS ನಡುವೆ JDS ನಡೆ ವಿಭಿನ್ನ

ವೇದಿಕೆಗೆ ಹಂಪಿಯ ಟಚ್

ಭಟ್ರಹಳ್ಳಿ ಆಂಜನೇಯ ದೇಗುಲದ ಬಯಲು ಸ್ಥಳದಲ್ಲಿ ಹಂಪಿ ಸ್ಮಾರಕಗಳ ಶೈಲಿಯಲ್ಲಿ ಬಯಲು ಜಾಗದಲ್ಲಿ ಹವಾನಿಯಂತ್ರಿತ ಜರ್ಮನ್ ಟೆಂಟ್ ನಿರ್ಮಿಸಲಾಗಿದೆ. ಟೆಂಟ್ಆ‌ನಲ್ಸಲಿ 750 ಆಸನಗಳ ವ್ಯವಸ್ಥೆ ಮಾಡಲಾಗಿದೆ. ಕಾರ್ಯಕಾರಿಣಿಗಾಗಿ 80 ಅಡಿ ಉದ್ದ ಮತ್ತು 40 ಅಡಿ ಅಗಲದ ವೇದಿಕೆ ನಿರ್ಮಾಣಗೊಂಡಿದೆ. ಹಂಪಿಯ ಶ್ರೀವಿರೂಪಾಕ್ಷೇಶ್ವರ ಗೋಪುರ, ಕಲ್ಲಿನ ತೇರು, ಸಾಸಿವೆಕಾಳು ಗಣಪ, ಆನೆಗೊಂದಿಯ ಅಂಜನಾದ್ರಿ ಬೆಟ್ಟದ ಆಂಜನೇಯ, ವಿಜಯ ವಿಠ್ಠಲ ದೇಗುಲದ ಸಪ್ತಸ್ವರ ಹೊರಡಿಸುವ ಕಲ್ಲಿನ ಕಂಬಗಳು, ಉಗ್ರ ನರಸಿಂಹ, ಸಾಲುಮಂಟಪ ಸೇರಿದಂತೆ ನಾನಾ ಸ್ಮಾರಕಗಳ ಮಿಶ್ರಣದೊಂದಿಗೆ ವೇದಿಕೆ ಕಂಗೊಳಿಸುತ್ತಿದೆ‌.

ಹೆಚ್ಚಿನ ಓದಿಗಾಗಿ: ನಿರುದ್ಯೋಗಕ್ಕೆ ರಾಜಕಾರಣಿಗಳೇ ಕಾರಣ: ಡಿ.ಕೆ. ಶಿವಕುಮಾರ್‌ ಪ್ರಶ್ನೆಗೆ Twitterನಲ್ಲಿ ಸ್ವಾರಸ್ಯಕರ ಉತ್ತರಗಳು !

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Bengaluru Traffic: ಬೆಂಗಳೂರು ಟ್ರಾಫಿಕ್ ನಿರ್ವಹಣೆಗೆ ಹೊಸ ತಂತ್ರಜ್ಞಾನ; ಸಂಚಾರ ಇಲಾಖೆಯ ಪ್ಲಾನ್

ಬೆಂಗಳೂರಿನ ರಸ್ತೆಗಳಲ್ಲಿ ವಾಹನ ದಟ್ಟಣೆ ನಿರ್ವಹಿಸಲು ಸುಮಾರು 4 ಕೋಟಿ ರೂ. ವೆಚ್ಚದಲ್ಲಿ ನೂತನ ತಂತ್ರಜ್ಞಾನ ಅಳವಡಿಸಿಕೊಳ್ಳಲು ಸಂಚಾರ ಇಲಾಖೆ ಮುಂದಾಗಿದೆ. ಇದನ್ನು ಅಳವಡಿಸಿಕೊಂಡರೆ ಏನು ಪ್ರಯೋಜನ ಎನ್ನುವ ಕುರಿತು ಮಾಹಿತಿ ಇಲ್ಲಿದೆ.

VISTARANEWS.COM


on

By

Bengaluru Traffic
Koo

ಬೆಂಗಳೂರು: ನಗರದಲ್ಲಿ ವಾಹನ ದಟ್ಟಣೆ (Bengaluru Traffic) ನಿರ್ವಹಿಸಲು ಗುಣಾತ್ಮಕ ಸುಧಾರಣೆಗಾಗಿ ಸಾಫ್ಟ್‌ವೇರ್ ಆಧಾರಿತ ವ್ಯವಸ್ಥೆಯನ್ನು (software based system) ಪರಿಚಯಿಸುವ ಪ್ರಸ್ತಾವನೆಯೊಂದಿಗೆ ಸಂಚಾರ ಇಲಾಖೆ (traffic department) ರಾಜ್ಯ ಸರ್ಕಾರವನ್ನು ಸಂಪರ್ಕಿಸಿದೆ. ಉದ್ದೇಶಿತ ಈ ವ್ಯವಸ್ಥೆಯು ರಸ್ತೆಯ ಯಾವುದೇ ಸಂಕೀರ್ಣ ಪರಿಸ್ಥಿತಿಯನ್ನು ಅನುಕರಿಸಲು ಮತ್ತು ತಿಳುವಳಿಕೆಯುಳ್ಳ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಂಚಾರ ಪೊಲೀಸರಿಗೆ ಸಹಾಯ ಮಾಡುತ್ತದೆ ಎನ್ನಲಾಗಿದೆ.

ಸರ್ಕಾರವು ಈ ಪ್ರಸ್ತಾವನೆಗೆ ಒಪ್ಪಿಗೆ ನೀಡಿದರೆ ಬೆಂಗಳೂರು ‘ಟ್ರಾಫಿಕ್ ಮೈಕ್ರೋ ಸಿಮ್ಯುಲೇಶನ್ ಮಾಡೆಲಿಂಗ್’ ವ್ಯವಸ್ಥೆಯನ್ನು ಹೊಂದಿರುವ ಭಾರತದ ಮೊದಲ ನಗರವಾಗಲಿದೆ. ಅಧಿಕಾರಿಗಳ ಪ್ರಕಾರ, ಹೊಸ ತಂತ್ರಜ್ಞಾನ ಅಳವಡಿಸಿಕೊಳ್ಳಲು ಸುಮಾರು 4 ಕೋಟಿ ರೂಪಾಯಿ ವೆಚ್ಚವಾಗಲಿದೆ. ಇದಕ್ಕಾಗಿ ವಿದೇಶದಿಂದ ನೆರವು ಪಡೆಯಬೇಕಾಗಿದೆ ಎಂದು ತಿಳಿಸಿದ್ದಾರೆ.

ಕ್ರಿಯಾ ಯೋಜನೆ ಸಲ್ಲಿಕೆ

ಜಂಟಿ ಪೊಲೀಸ್ ಆಯುಕ್ತ (ಸಂಚಾರ) ಎಂ.ಎನ್.ಅನುಚೇತ್ ಮಾತನಾಡಿ, ನಾವು ಇತ್ತೀಚೆಗೆ ರಾಜ್ಯ ಸರ್ಕಾರಕ್ಕೆ ಈ ಕ್ರಿಯಾ ಯೋಜನೆ ಸಲ್ಲಿಸಿದ್ದು, ಹೊಸ ತಂತ್ರಜ್ಞಾನವನ್ನು ಸೇರಿಸುವ ಪ್ರಸ್ತಾವನೆಯು ಅದರಲ್ಲಿ ಪ್ರಮುಖ ಅಂಶವಾಗಿದೆ ಎಂದು ತಿಳಿಸಿದರು.

ಮೈಕ್ರೋ ಸಿಮ್ಯುಲೇಶನ್ ಮಾಡೆಲಿಂಗ್ ವ್ಯವಸ್ಥೆಯು ಸಾಫ್ಟ್‌ವೇರ್ ಮತ್ತು ಕೆಲವು ಐಟಿ ಉಪಕರಣಗಳನ್ನು ಒಳಗೊಂಡಿದೆ. ಇದಕ್ಕೆ ಸುಮಾರು 4 ಕೋಟಿ ರೂಪಾಯಿ ವೆಚ್ಚವಾಗುತ್ತದೆ. ನಾವು ಅವುಗಳನ್ನು ವಿದೇಶದಿಂದ ಪಡೆದುಕೊಳ್ಳಬೇಕಾಗುತ್ತದೆ. ಹೊಸ ತಂತ್ರಜ್ಞಾನವನ್ನು ಕಡಿಮೆ ಟ್ರಾಫಿಕ್ ಹೊಂದಿರುವ ದೇಶಗಳು ಅಳವಡಿಸಿಕೊಳ್ಳುತ್ತಿವೆ ಎಂದು ಹೇಳಿದರು.

ಹೊಸ ವ್ಯವಸ್ಥೆಯನ್ನು ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸೆಂಟರ್‌ನಲ್ಲಿ ಸ್ಥಾಪಿಸಲಾಗುವುದು ಮತ್ತು ಯಾವುದೇ ರೀತಿಯ ಟ್ರಾಫಿಕ್ ಪರಿಸ್ಥಿತಿಯನ್ನು ಅನುಕರಿಸಲು ಇದು ಸಹಾಯ ಮಾಡುತ್ತದೆ ಎಂದು ಅವರು ತಿಳಿಸಿದರು.

ಹೇಗೆ ಸಹಾಯ ಮಾಡುತ್ತದೆ?

ಯಾವುದೇ ರಸ್ತೆಯಲ್ಲಿ ಏಕಮುಖ ವ್ಯವಸ್ಥೆಯನ್ನು ಪರಿಚಯಿಸಲು ಯೋಜಿಸಿದರೆ ಅಧಿಕಾರಿಗಳು ಮೈಕ್ರೋ ಸಿಮ್ಯುಲೇಶನ್ ಮಾಡೆಲಿಂಗ್ ವ್ಯವಸ್ಥೆಯ ಮೂಲಕ ಸುತ್ತಮುತ್ತಲಿನ ರಸ್ತೆಗಳ ಮೇಲೆ ಅದರ ಪರಿಣಾಮವನ್ನು ನಿರ್ಣಯಿಸಬಹುದು ಮತ್ತು ಉತ್ತಮ ಕ್ರಮವನ್ನು ಮಾಡಬಹುದು ಎಂದು ಅನುಚೇತ್ ವಿವರಿಸಿದರು.

ಒಮ್ಮೆ ಹೊಸ ವ್ಯವಸ್ಥೆಯನ್ನು ಜಾರಿಗೆ ತಂದರೆ, ಯಾವುದೇ ಉದ್ದೇಶಿತ ನಿರ್ಧಾರವನ್ನು ನೇರವಾಗಿ ಅನುಷ್ಠಾನಗೊಳಿಸುವ ಮೊದಲು ಯಾವ ರಸ್ತೆಗಳ ಮೇಲೆ ಹೇಗೆ ಪರಿಣಾಮ ಬೀರಬಹುದು ಎಂಬುದನ್ನು ತಿಳಿದುಕೊಳ್ಳಬಹುದು ಎಂದರು.

ಇದನ್ನೂ ಓದಿ: Traffic Violation : ಪೆಟ್ರೋಲ್ ಖಾಲಿಯಾಗಿ ರಸ್ತೆಯಲ್ಲಿ ವಾಹನ ನಿಂತುಬಿಟ್ಟರೆ ಚಾಲಕನ ಮೇಲೆ ಕೇಸ್!

ಇದು ಟ್ರಾಫಿಕ್ ಅನ್ನು ನಿರ್ವಹಿಸುವಲ್ಲಿ ಗುಣಾತ್ಮಕ ಬದಲಾವಣೆಯನ್ನು ತರಬಹುದು. ನಾವು ಯಾವುದೇ ನಿರ್ದಿಷ್ಟ ಸ್ಥಳದಲ್ಲಿ ಭಾರಿ ದಟ್ಟಣೆಯನ್ನು ಗಮನಿಸಿದರೆ ಹತ್ತಿರದ ರಸ್ತೆಗಳ ಮೂಲಕ ವಾಹನಗಳನ್ನು ಹೇಗೆ ತಿರುಗಿಸುವುದು ಎಂಬುದನ್ನು ತ್ವರಿತವಾಗಿ ವಿಶ್ಲೇಷಿಸಿ ಅನುಷ್ಠಾನಗೊಳಿಸಲು ಸಾಧ್ಯವಾಗುತ್ತದೆ ಎಂದರು.

ಪ್ರತಿದಿನ 3,000 ಹೊಸ ವಾಹನ

2023ರ ಡಿಸೆಂಬರ್ 31ರ ಅಂಕಿ ಅಂಶಗಳ ಪ್ರಕಾರ ಬೆಂಗಳೂರಿನಲಿ 1.2 ಕೋಟಿ ವಾಹನಗಳು ನೋಂದಣಿಯಾಗಿವೆ. ಪ್ರತಿದಿನ ಸರಾಸರಿ 3,000 ಹೊಸ ವಾಹನಗಳು ರಸ್ತೆಗೆ ಇಳಿಯುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Continue Reading

ಕರ್ನಾಟಕ

Prajwal Revanna Case: ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

Prajwal Revanna Case: ಕೆ.ಆರ್.ನಗರ ಸಂತ್ರಸ್ಥ ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಆರೋಪ ಕೇಳಿಬಂದಿದ್ದರಿಂದ ಭವಾನಿ ರೇವಣ್ಣ ಅವರಿಗೂ ಬಂಧನ ಭೀತಿ ಎದುರಾಗಿತ್ತು. ಹೀಗಾಗಿ ಅವರು ಕೋರ್ಟ್‌ಗೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮೇ 29ರ ಬೆಳಗ್ಗೆ 11 ಗಂಟೆಗೆ ಮುಂದೂಡಿಕೆಯಾಗಿದೆ. ಹಾಸನ ಅಶ್ಲೀಲ ವಿಡಿಯೊ ಪ್ರಕರಣಕ್ಕೆ (Prajwal Revanna Case) ಸಂಬಂಧಿಸಿ ಕೆ.ಆರ್.ನಗರ ಸಂತ್ರಸ್ಥ ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಆರೋಪ ಕೇಳಿಬಂದಿದ್ದರಿಂದ ಭವಾನಿ ರೇವಣ್ಣ ಅವರಿಗೂ ಬಂಧನ ಭೀತಿ ಎದುರಾಗಿದೆ. ಹೀಗಾಗಿ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ನಾಳೆಗೆ ವಿಚಾರಣೆ ಮುಂದೂಡಿದೆ.

ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣ ಸೋಮವಾರ ಪ್ರತ್ಯಕ್ಷವಾದ ಬೆನ್ನಲ್ಲೇ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಭವಾನಿ ರೇವಣ್ಣ ಅರ್ಜಿ ಸಲ್ಲಿಕೆ ಮಾಡಿದ್ದರು. ಅರ್ಜಿ ವಿಚಾರಣೆ ನಡೆಸಿ ಎಸ್‌ಪಿಪಿಗೆ ಆಕ್ಷೇಪಣೆ ಸಲ್ಲಿಸಲು ನ್ಯಾಯಾಧೀಶರು ನೋಟೀಸ್ ನೀಡಿದ್ದರು. ಭವಾನಿ ರೇವಣ್ಣ ಪರ ಹಿರಿಯ ವಕೀಲ ಸಂದೇಶ್ ಚೌಟ ವಾದ ಮಂಡಿಸಿದರು. ಮತ್ತೊಂದೆಡೆ ಆಕ್ಷೇಪಣೆ ಸಲ್ಲಿಸಲು ಎಸ್ಐಟಿ ಕಾಲಾವಕಾಶ ಕೋರಿದ್ದರಿಂದ ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದೆ.

ಇದನ್ನೂ ಓದಿ | Arvind Kejriwal: ಕೇಜ್ರಿವಾಲ್‌ಗೆ ಮತ್ತೆ ಹಿನ್ನಡೆ; ಜಾಮೀನು ವಿಸ್ತರಣೆಗೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ

ಈ ಪ್ರಕರಣದಲ್ಲಿ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿ ಅರ್ಹವಾಗಿದೆ. ಅಕ್ಷೇಪಣೆ ಸಲ್ಲಿಸುವವರೆಗೂ ಬಂಧನದಿಂದ ರಕ್ಷಣೆ ನೀಡಬೇಕು. ಇವತ್ತು ಬಂಧನ ಮಾಡಿದರೆ ಏನು ಮಾಡಲು ಆಗುತ್ತೆ. ಹೀಗಾಗಿ ನನ್ನ ಕಕ್ಷಿದಾರರಿಗೆ ಕಾನೂನು ರಕ್ಷಣೆ ಕೊಡಬೇಕು ಎಂದು ಭವಾನಿ ಪರ ವಕೀಲರು ಮನವಿ ಮಾಡಿದ್ದಾರೆ. ಇನ್ನು ಪ್ರಕರಣದಲ್ಲಿ ದಿನೇ ದಿನೇ ಆರೋಪಿಗಳನ್ನು ಸೇರ್ಪಡೆ ಮಾಡಲಾಗುತ್ತಿದೆ. ಕೆಎಂಎಫ್ ಮಾಜಿ ಅಧ್ಯಕ್ಷರನ್ನು ಈ ಪ್ರಕರಣದಲ್ಲಿ 7ನೇ ಆರೋಪಿಯನ್ನಾಗಿ‌ ಸೇರಿಸಿದ್ದಾರೆ ಎಂದು ತಿಳಿಸಿದ್ದಾರೆ. ವಾದ-ಪ್ರತಿ ವಾದ ಆಲಿಸಿದ ಬಳಿಕ ನ್ಯಾಯಾಧೀಶರು ವಿಚಾರಣೆಯನ್ನು ನಾಳೆಗೆ ಮುಂದೂಡಿದ್ದಾರೆ.

4 ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ಜೂ.3ಕ್ಕೆ ವಿಚಾರಣೆ ಮುಂದೂಡಿಕೆ

ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಹಂಚಿಕೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿರುವ ನವೀನ್‌ ಗೌಡ, ಎಚ್.ಪಿ. ಪುಟ್ಟರಾಜು, ಕಾರ್ತಿಕ್‌ ಹಾಗೂ ಚೇತನ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜೂನ್ 3 ಕ್ಕೆ ವಿಚಾರಣೆ ಮುಂದೂಡಿಕೆ ಮಾಡಲಾಗಿದೆ.

ನಾಲ್ವರು ಆರೋಪಿಗಳ ಪೈಕಿ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಗೆಂದು ಮಂಗಳವಾರ ಹೈಕೋರ್ಟ್‌ಗೆ ಬಂದಿದ್ದ ಚೇತನ್‌ ಹಾಗೂ ನವೀನ್‌ಗೌಡನನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಕೋರ್ಟ್‌ಗೆ ಹಾಜರುಪಡಿಸಲು ಹಾಸನಕ್ಕೆ ಕರೆದೊಯ್ದಿದ್ದಾರೆ.

ಇದನ್ನೂ ಓದಿ | Gurmeet Ram Rahim: 22ವರ್ಷಗಳ ಹಳೆಯ ಕೊಲೆ ಕೇಸ್‌; ಗುರ್ಮೀತ್ ರಾಮ್​ ರಹೀಮ್​ ಖುಲಾಸೆ

ಹೈಕೋರ್ಟ್ ನ್ಯಾ. ಎಂ.ಜಿ. ಉಮಾ ಅವರಿದ್ದ ಪೀಠದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು,
ಎಸ್ಐಟಿ ಅಧಿಕಾರಿಗಳಿಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿ ವಿಚಾರಣೆಯನ್ನು ಜೂನ್ 3ಕ್ಕೆ ನ್ಯಾಯಾಧೀಶೆ ಮುಂದೂಡಿದ್ದಾರೆ.

Continue Reading

ದಕ್ಷಿಣ ಕನ್ನಡ

Assault Case : ರೊಚ್ಚಿಗೆದ್ದ ಸ್ಥಳೀಯರು; ಬೋರ್‌ವೆಲ್ ಕೊರೆಯುತ್ತಿದ್ದ ಲಾರಿ ಮೇಲೆ ಕಲ್ಲು ತೂರಾಟ

Assault Case : ಅನುಮತಿಯಿಲ್ಲದೇ ಕೊಳವೆ ಬಾವಿ ಕೊರೆಯಲಾಗುತ್ತಿದೆ ಎಂದು ರೊಚ್ಚಿ ಗೆದ್ದ ಸ್ಥಳೀಯರು ಸಂಸ್ಥೆಯೊಂದರ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ಪ್ರಕರಣ ಸಂಬಂಧ ಪರಸ್ಪರ ದೂರು ಪ್ರತಿ ದೂರು ದಾಖಲಿಸಿದ್ದಾರೆ.

VISTARANEWS.COM


on

By

assault case
Koo

ಮಂಗಳೂರು: ಬೋರ್‌ವೆಲ್ ಕೊರೆಯುತ್ತಿದ್ದ (Assault Case) ಲಾರಿ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪುರುಷರಕಟ್ಟೆ ಎಂಬಲ್ಲಿ ನಡೆದಿದೆ. ಪ್ರಸಿದ್ಧ ಬಿಂದು ನೀರಿನ ಫ್ಯಾಕ್ಟರಿ ಪುರುಷರಕಟ್ಟೆ ಎಂಬಲ್ಲಿ ಕಾರ್ಯಾಚರಿಸುತ್ತಿದೆ. ಈ ಫ್ಯಾಕ್ಟರಿಗೆ ಸೇರಿದ ಬೋರ್‌ವೆಲ್‌ಗಳನ್ನು ಫ್ಲಶ್ ಮಾಡುತ್ತಿದ್ದ ಸಂದರ್ಭದಲ್ಲಿ ಅನ್ಯಕೋಮಿನ ಸಂಘಟನೆಗೆ ಸೇರಿದ ಗುಂಪಿನಿಂದ ಕಲ್ಲು ತೂರಾಟ ನಡೆದಿದೆ ಎನ್ನಲಾಗಿದೆ. ಕಲ್ಲು ತೂರಾಟದಲ್ಲಿ ಸಣ್ಣ ಮಕ್ಕಳು ಕೂಡ ಭಾಗಿಯಾಗಿರುವ ವಿಡಿಯೋವೊಂದು ವೈರಲ್‌ ಆಗಿದೆ.

ಅನ್ಯಕೋಮಿನಿಂದ ಕಲ್ಲು ತೂರಾಟದ ಬಳಿಕ ಎರಡೂ ಕಡೆಯಿಂದಲೂ ಪರಸ್ಪರ ಕಲ್ಲು ತೂರಾಟ ನಡೆಸಿರುವ ಆರೋಪ ಕೇಳಿ ಬಂದಿದೆ. ಬೋರ್‌ವೆಲ್‌ಗಳನ್ನು ಫ್ಲಶ್ ಮಾಡುವ ಬದಲು ಹೊಸ ಬೋರ್‌ವೆಲ್ ಕೊರೆಯಲಾಗುತ್ತಿದೆ ಎಂದು ಆರೋಪಿಸಿ ಕಲ್ಲು ತೂರಾಟ ನಡೆಸಲಾಗಿದೆ. ಸದ್ಯ ಎರಡೂ ಗುಂಪುಗಳಿಂದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ದೂರು ದಾಖಲಾಗಿದೆ.

ದೂರಿನಲ್ಲಿ ಏನಿದೆ?

ನರಿಮೊಗರು ಗ್ರಾಮದ ಮೇಘಾ ಫ್ರುಟ್‌ ಪ್ರೊಸೆಸಿಂಗ್‌ ಪ್ರೈ ಲಿ. ನಲ್ಲಿ ಅನುಮತಿ ಇಲ್ಲದೇ ಕೊಳವೆ ಬಾವಿ ಶುದ್ದೀಕರಿಸಲಾಗುತ್ತಿತ್ತು. ಈ ವಿಚಾರ ತಿಳಿದ ಸ್ಥಳೀಯರು ಸಂಸ್ಥೆಯ ಒಳಗೆ ಹೋಗಿ ಗ್ರಾಮ ಪಂಚಾಯತ್ ಅಧಿಕಾರಿ ಬಂದ ಬಳಿಕ ಕೆಲಸ ಮುಂದುವರೆಸುವಂತೆ ತಿಳಿಸಿದ್ದಾರೆ. ಆದರೆ ಸಂಸ್ಥೆಯವರು ಕೊಳವೆ ಬಾವಿಯ ಶುದ್ಧೀಕರಣ ಕೆಲಸವನ್ನು ಮುಂದುವರೆಸಿದ್ದಾರೆ. ಹೀಗಾಗಿ ಕೂಡಲೇ ಗ್ರಾ.ಪಂ ಅಧಿಕಾರಿ ರವಿಚಂದ್ರರವರಿಗೆ ಕರೆ ಮಾಡಿ ವಿಚಾರವನ್ನು ತಿಳಿಸಿದ್ದಾರೆ.

ಇತ್ತ ಸಂಸ್ಥೆಯ ಒಳಗಡೆ ನಡೆಯುತ್ತಿರುವುದನ್ನು ವಿಡಿಯೋ ಮಾಡಲು ಪ್ರಯತ್ನಿಸುತ್ತಿದ್ದಾಗ ಕೆಲಸಗಾರರೊಬ್ಬರು ಅವಾಚ್ಯ ಶಬ್ಧಗಳಿಂದ ಬೈದು ಜೀವ ಬೆದರಿಕೆಯನ್ನು ಹಾಕಿದ್ದರಂತೆ. ಮಾತ್ರವಲ್ಲದೆ ಕೆಲವರು ಒಳಗಿನಿಂದ ಸ್ಥಳೀಯರ ಮೇಲೆ ಕಲ್ಲು ಬಿಸಾಡಿದ್ದರಿಂದ ಗಾಯಗೊಂಡಿದ್ದಾರೆ. ಕೆಲಸ ನಿರ್ವಹಿಸುವ ಸಂಸ್ಥೆಯಲ್ಲಿ ಹೊಸ ಕೊಳವೆ ಬಾವಿಯನ್ನು ಅನುಮತಿಯಿಲ್ಲದೇ ನಿರ್ಮಾಣ ಮಾಡುತ್ತಿರುವ ಬಗ್ಗೆ ಪ್ರಶ್ನಿಸಿದಕ್ಕೆ ಈ ಕೃತ್ಯವನ್ನು ಎಸಗಿದ್ದಾರೆ ದೂರು ನೀಡಿದ್ದಾರೆ.

ಇದನ್ನೂ ಓದಿ: Traffic Violation : ಪೆಟ್ರೋಲ್ ಖಾಲಿಯಾಗಿ ರಸ್ತೆಯಲ್ಲಿ ವಾಹನ ನಿಂತುಬಿಟ್ಟರೆ ಚಾಲಕನ ಮೇಲೆ ಕೇಸ್!

ಸಂಸ್ಥೆಯವರು ಹೇಳೋದು ಏನು?

ಮೇಘಾ ಫ್ರುಟ್‌ ಪ್ರೊಸೆಸಿಂಗ್‌ ಪ್ರೈ ಲಿ. ನಲ್ಲಿ ಮೆನೇಜರ್‌ ಆಗಿರುವ ಲಕ್ಷ್ಮಿನಾರಾಯಣ ಎಂಬುವವರು ಪ್ರತಿದೂರು ನೀಡಿದ್ದಾರೆ. ಆ ಪ್ರಕಾರ ಸಂಸ್ಥೆಯ ಕೊಳವೆ ಬಾವಿ ಶುದ್ದೀಕರಿಸುವ ಬಗ್ಗೆ ಭೂ ವಿಜ್ಞಾನ ಇಲಾಖೆ ಮತ್ತು ಗ್ರಾಮ ಪಂಚಾಯತ್‌ನಿಂದ ಅನುಮತಿ ಪಡೆದು ಕೊಂಡಿದ್ದೇವೆ. ಮೇ 27ರ ಸಂಜೆ ಸಂಸ್ಥೆಯ ಆವರಣದಲ್ಲಿ ಕೊಳವೆ ಬಾವಿ ಶುದ್ದೀಕರಿಸುವ ಸಮಯ ಸ್ಥಳೀಯ ನಿವಾಸಿಗಳಾಸ ಸಲೀಂ ಮತ್ತು ಇತರರು ಸೇರಿಕೊಂಡು ಸಂಸ್ಥೆಯ ಆವರಣದ ಒಳಗೆ ಅಕ್ರಮ ಪ್ರವೇಶ ಮಾಡಿದ್ದಾರೆ.

ಬೋರ್‌ವೆಲ್‌ ಲಾರಿ ಹಾಗೂ ಅದರಲ್ಲಿದ್ದ ಕಾರ್ಮಿಕರ ಮೇಲೆ ಕಲ್ಲು ಬಿಸಾಡಿದ್ದಾರೆ. ಇದರಿಂದ ಕಾರ್ಮಿಕರಾದ ಸಾಂಗ್‌ಲಾಲ್‌ ಮತ್ತು ಶೇಖರ್‌ ಎಂಬವರಿಗೆ ಗಾಯವಾಗಿದೆ. ಲಾರಿಗೆ ಕಲ್ಲು ಬಿದ್ದು ಲಾರಿಯ ಗಾಜು ಪುಡಿಯಾಗಿದೆ. ಇದರಿಂದ ಸುಮಾರು ರೂ 10,000 ರೂ. ನಷ್ಟ ಉಂಟಾಗಿದೆ ಎಂದು ದೂರು ನೀಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದಕ್ಷಿಣ ಕನ್ನಡ

Namaz: ಸಾರ್ವಜನಿಕ ನಮಾಜ್‌ ನಿಲ್ಲಿಸದಿದ್ದರೆ ಹನುಮಾನ್‌ ಚಾಲೀಸಾ ಪಠನ: ವಿಹಿಂಪ ಎಚ್ಚರಿಕೆ

ಮೊನ್ನೆ ಶುಕ್ರವಾರ ಮಂಗಳೂರಿನ ಕಂಕನಾಡಿಯಲ್ಲಿ ಮಸೀದಿ ಮುಂಭಾಗ ಇರುವ ರಸ್ತೆಯಲ್ಲೇ ನಮಾಜ್ (Namaz) ಮಾಡಲಾಗಿತ್ತು. ರಸ್ತೆಯಲ್ಲಿ ನಡೆದ ನಮಾಜ್ ವೀಡಿಯೋ ವೈರಲ್ ಆಗಿದ್ದು, ರಸ್ತೆಯಲ್ಲಿ ಹೋಗುತ್ತಿದ್ದ ವಾಹನಗಳು ನಮಾಜ್ ಗಮನಿಸಿ ಯೂಟರ್ನ್ ಮಾಡಿಕೊಂಡಿದ್ದವು. ಕದ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ಈ ಬೆಳವಣಿಗೆ ಬಗ್ಗೆ ವಿಹಿಂಪ ಆಕ್ಷೇಪಿಸಿದೆ.‌

VISTARANEWS.COM


on

namaz in road mangalore
Koo

ಮಂಗಳೂರು: ಮಂಗಳೂರಿನ ಕಂಕನಾಡಿ ಬಳಿ ರಸ್ತೆಯಲ್ಲೇ ನಮಾಜ್ (Namaz in road) ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ವಿಶ್ವ ಹಿಂದೂ ಪರಿಷತ್ತು (Vishwa Hindu Parishad) ಆಕ್ಷೇಪ ವ್ಯಕ್ತಪಡಿಸಿದ್ದು, ರಸ್ತೆ, ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ತಡೆಯುವಂತೆ ಜಿಲ್ಲಾಡಳಿತಕ್ಕೆ ಮನವಿ ಮಾಡಿದೆ. ನಿಲ್ಲಿಸದಿದ್ದರೆ ಸಾಮೂಹಿಕವಾಗಿ ಹನುಮಾನ್ ಚಾಲೀಸಾ (Hanuman Chalisa) ಪಠಿಸಿ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದೆ.

ಮೊನ್ನೆ ಶುಕ್ರವಾರ ಮಂಗಳೂರಿನ ಕಂಕನಾಡಿಯಲ್ಲಿ ಮಸೀದಿ ಮುಂಭಾಗ ಇರುವ ರಸ್ತೆಯಲ್ಲೇ ನಮಾಜ್ ಮಾಡಲಾಗಿತ್ತು. ರಸ್ತೆಯಲ್ಲಿ ನಡೆದ ನಮಾಜ್ ವೀಡಿಯೋ ವೈರಲ್ ಆಗಿದ್ದು, ರಸ್ತೆಯಲ್ಲಿ ಹೋಗುತ್ತಿದ್ದ ವಾಹನಗಳು ನಮಾಜ್ ಗಮನಿಸಿ ಯೂಟರ್ನ್ ಮಾಡಿಕೊಂಡಿದ್ದವು. ಕದ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ಈ ಬೆಳವಣಿಗೆ ಬಗ್ಗೆ ವಿಹಿಂಪ ಆಕ್ಷೇಪಿಸಿದೆ.‌

“ಕೆಲವು ಕಡೆ ರಸ್ತೆ ಮತ್ತು ಸಾರ್ವಜನಿಕ ಜಾಗದಲ್ಲಿ ನಮಾಜ್ ಮಾಡುತ್ತಿರುವ ಘಟನೆಗಳು ನಡೆಯುತ್ತಿರುವುದು ಜಿಲ್ಲೆಯಲ್ಲಿ ಅಶಾಂತಿ ನಿರ್ಮಿಸಲು ಸಂಚು ರೂಪಿಸುತ್ತಿದ್ದಾರೆ. ತಕ್ಷಣ ಜಿಲ್ಲಾಡಳಿತ ಇವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸುತ್ತೇವೆ. ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆ ಮರುಕಳಿಸಿದರೆ ಅದೇ ಸ್ಥಳದಲ್ಲಿ ಸಾಮೂಹಿಕ ಹನುಮಾನ್ ಚಾಲೀಸಾ ಪಠಣ ಮಾಡುವುದರ ಮೂಲಕ ತಡೆಯುತ್ತೇವೆ ಎಂಬ ಎಚ್ಚರಿಕೆ ಕೊಡುತ್ತೇವೆ” ಎಂದು ವಿಶ್ವ ಹಿಂದೂ ಪರಿಷದ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪವೆಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದು ಪಾಕಿಸ್ತಾನವಲ್ಲ, ಹಿಂದೂಸ್ತಾನ: ಈಶ್ವರಪ್ಪ

“ರಸ್ತೆಯಲ್ಲಿ ನಮಾಜ್‌ ಮಾಡಲು, ಮುಸಲ್ಮಾನರು ಏನು ಬೇಕಾದರೂ ಮಾಡಬಹುದು ಎನ್ನಲು ಇದು ಪಾಕಿಸ್ತಾನ ಅಲ್ಲ, ಹಿಂದೂಸ್ತಾನ” ಎಂದು ಕೆ.ಎಸ್‌ ಈಶ್ವರಪ್ಪ ಗುಡುಗಿದ್ದಾರೆ. “ಮಂಗಳೂರು ಪಾಕಿಸ್ತಾನದ ಜಿಲ್ಲೆಯಲ್ಲ. ಮಂಗಳೂರು ಹಿಂದುತ್ವ ವೀರರ ಭೂಮಿ. ಇಲ್ಲಿ ರಸ್ತೆಯಲ್ಲಿ ನಮಾಜ್ ಮಾಡಲು ದುಷ್ಟ ಶಕ್ತಿಗಳು ಯಶಸ್ವಿಯಾಗಿದ್ದು ನೋವಾಗಿದೆ. ಕರ್ನಾಟಕದಲ್ಲಿ ಮುಖ್ಯಮಂತ್ರಿಗಳು, ಗೃಹ ಸಚಿವರು, ಸರಕಾರ ಸತ್ತಿದೆಯೋ ಬದುಕಿದೆಯೋ ಗೊತ್ತಾಗ್ತಿಲ್ಲ. ಒಬ್ಬ ಇದು ನಮ್ಮ ಸರ್ಕಾರ ಟಿಪ್ಪು ಸುಲ್ತಾನ್ ರಾಜ್ಯ ಅಂತಾನೆ. ಬಿಟ್ಟರೆ ಸಿಎಂ, ಗೃಹ ಸಚಿವರು, ಹಿಂದುಗಳ ಮನೆಗೆ ಬಂದು ನಮಾಜ್ ಮಾಡುತ್ತಾರೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನಿಮ್ಮ ಮನೆಯಲ್ಲಿ ನಜಾಮ್ ಮಾಡಿಸಿ ಬೇಡ ಅನ್ನಲ್ಲ. ಎಲ್ಲ ಮುಸ್ಲಿಮರನ್ನು ಟೀಕೆ ಮಾಡುತ್ತಿಲ್ಲ, ಅರ್ಥ ಮಾಡಿಕೊಳ್ಳಿ. ಇವರು ಯಾರೋ ರಾಷ್ಟ್ರದ್ರೋಹಿಗಳು ಮಾಡುತ್ತಿರುವ ಕುತಂತ್ರ. ಇಂತಹವರನ್ನು ಒಳಗೆ ಹಾಕಿದರೆ ಇತರ ಮುಸ್ಲಿಮರಿಗೂ ಸಂತೋಷ ಆಗುತ್ತದೆ. ಮುಸ್ಲಿಂ ಸಮುದಾಯಕ್ಕೆ ಅಪಮಾನ ಆಗುತ್ತಿದೆ ಅಂತ ಅವರೂ ಹೇಳುತ್ತಿದ್ದಾರೆ. ತುಷ್ಟೀಕರಣ ನೀತಿ ಸರ್ಕಾರವನ್ನು ಸುಡುತ್ತೆ, ಭಸ್ಮ ಮಾಡುತ್ತೆ. ರಸ್ತೆಯಲ್ಲಿ ನಮಾಜ್ ಮಾಡಿದವರನ್ನು ತಕ್ಷಣ ಅರೆಸ್ಟ್ ಮಾಡಿ. ರಾಷ್ಟ್ರದ್ರೋಹದ ಕೃತ್ಯ ಕೇಸ್ ಹಾಕಿ” ಎಂದು ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: Viral Video: ನಡು ರಸ್ತೆಯಲ್ಲಿ ಪಿಸ್ತೂಲ್‌ ತೋರಿಸಿ ವ್ಯಕ್ತಿ ಮೇಲೆ ಹಲ್ಲೆ; ಅಂತಾರಾಷ್ಟ್ರೀಯ ಮಟ್ಟದ ಶೂಟರ್‌ನಿಂದ ದಾಂಧಲೆ

Continue Reading
Advertisement
Bengaluru Traffic
ಬೆಂಗಳೂರು2 mins ago

Bengaluru Traffic: ಬೆಂಗಳೂರು ಟ್ರಾಫಿಕ್ ನಿರ್ವಹಣೆಗೆ ಹೊಸ ತಂತ್ರಜ್ಞಾನ; ಸಂಚಾರ ಇಲಾಖೆಯ ಪ್ಲಾನ್

car care tips
ಆಟೋಮೊಬೈಲ್20 mins ago

Car Care Tips : ಕಾಸು ಉಳಿಸಿ ಎಂಜಿನ್ ಬೆಳಗಿಸಿ, ಕಾರಿನ ಎಂಜಿನ್ ನೀವೇ ​ಕ್ಲೀನ್ ಮಾಡಲು ಇಲ್ಲಿವೆ ಟಿಪ್ಸ್​​​

Viral Video
ವೈರಲ್ ನ್ಯೂಸ್42 mins ago

Viral Video: ದಿಗಂಬರ ಜೈನ ಮುನಿಗಳಿಗೆ ಈ ಪಾಪಿ ಮಾಡಿದ್ದೇನು ಗೊತ್ತಾ? ಶಾಕಿಂಗ್‌ ವಿಡಿಯೋ ವೈರಲ್‌

Prajwal Revanna Case
ಕರ್ನಾಟಕ44 mins ago

Prajwal Revanna Case: ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

assault case
ದಕ್ಷಿಣ ಕನ್ನಡ53 mins ago

Assault Case : ರೊಚ್ಚಿಗೆದ್ದ ಸ್ಥಳೀಯರು; ಬೋರ್‌ವೆಲ್ ಕೊರೆಯುತ್ತಿದ್ದ ಲಾರಿ ಮೇಲೆ ಕಲ್ಲು ತೂರಾಟ

T20 World Cup 2024
ಕ್ರೀಡೆ1 hour ago

T20 World Cup 2024: 2ನೇ ಬ್ಯಾಚ್​ನಲ್ಲಿ ನ್ಯೂಯಾರ್ಕ್​ಗೆ ತೆರಳಿದ ಭಾರತದ ಮೂವರು ಆಟಗಾರರು

namaz in road mangalore
ದಕ್ಷಿಣ ಕನ್ನಡ1 hour ago

Namaz: ಸಾರ್ವಜನಿಕ ನಮಾಜ್‌ ನಿಲ್ಲಿಸದಿದ್ದರೆ ಹನುಮಾನ್‌ ಚಾಲೀಸಾ ಪಠನ: ವಿಹಿಂಪ ಎಚ್ಚರಿಕೆ

Veer Savarkar
ದೇಶ1 hour ago

Veer Savarkar: ಸ್ವಾತಂತ್ರ್ಯ ಯೋಧ ವೀರ್ ಸಾವರ್ಕರ್ ಜೀವನದ ಕುತೂಹಲಕರ ಸಂಗತಿಗಳಿವು

Drain pipe collapse
ದೇಶ1 hour ago

Drain Pipe collapse: 700 ಮೀಟರ್‌ ಉದ್ದದ ಕಬ್ಬಿಣದ ಪೈಪ್ ಕುಸಿತ; ವಾಹನಗಳು ಸಂಪೂರ್ಣ ಜಖಂ; ವಿಡಿಯೋ ವೈರಲ್‌

Umar Khalid
ದೇಶ1 hour ago

Umar Khalid: ದೆಹಲಿ ಗಲಭೆಯ ‘ಮಾಸ್ಟರ್‌ ಮೈಂಡ್‌ʼ ಉಮರ್ ಖಾಲಿದ್ ಜಾಮೀನು ಅರ್ಜಿ ವಜಾ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ23 hours ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ2 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು2 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ5 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ6 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು1 week ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 week ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಟ್ರೆಂಡಿಂಗ್‌