Site icon Vistara News

ರಾಜ್ಯ ಬಿಜೆಪಿ ಮಾಧ್ಯಮ ವಕ್ತಾರ ಟಿ. ಎಸ್‌. ಚಂದ್ರಶೇಖರ್‌ ಇನ್ನಿಲ್ಲ

ಚಂದ್ರಶೇಖರ್

ಬೆಂಗಳೂರು: ರಾಜ್ಯ ಬಿಜೆಪಿ ಮಾಧ್ಯಮ ವಕ್ತಾರ ಟಿ.ಎಸ್.(ಕೊರಿಯ) ಚಂದ್ರಶೇಖರ್‌ ಅವರು ಹೃದಯಾಘಾತದಿಂದ ನಗರದಲ್ಲಿ ಸೋಮವಾರ ನಿಧನರಾಗಿದ್ದಾರೆ.

ಬಿಎಂಟಿಸಿ ಬಸ್‌ನಲ್ಲಿ ಕೆ.ಆರ್‌.ಮಾರ್ಕೆಟ್‌ ಬಳಿ ಪ್ರಯಾಣಿಸುತ್ತಿದ್ದಾಗ ಅವರಿಗೆ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ ಎಂದು ಬಿಜೆಪಿ ತಿಳಿಸಿದೆ. ಅವರ ಪಾರ್ಥಿವ ಶರೀರವನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇರಿಸಲಾಗಿದೆ.

ಜಾಗತಿಕ ಮತ್ತು ರಾಷ್ಟ್ರೀಯ ವಿಷಯಗಳ ಕುರಿತು ಪಾಂಡಿತ್ಯ ಹೊಂದಿದ್ದ ಚಂದ್ರಶೇಖರ್‌ ವಿವಿಧ ಮಾಧ್ಯಮಗಳಲ್ಲಿ ನಡೆಯುವ ಚರ್ಚೆಗಳಲ್ಲಿ ತಜ್ಞರಾಗಿ ಭಾಗವಹಿಸುತ್ತಿದ್ದರು. ವಿದೇಶಾಂಗ ವ್ಯವಹಾರಕ್ಕೆ ಸಂಬಂಧಿಸಿದ ವಿಷಯಗಳನ್ನು ಅಧ್ಯಯನ ಮಾಡಿಕೊಂಡಿದ್ದರು.

ಸಂಘಪರಿವಾರದ ಹಿನ್ನೆಲೆಯಿಂದ ಬಂದಿದ್ದ ಅವರು ಪಕ್ಷದ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದರು. ಸದ್ಯ ಮಾಧ್ಯಮ ವಕ್ತಾರರಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರ ಹಠಾತ್‌ ಮರಣಕ್ಕೆ ಬಿಜೆಪಿ ನಾಯಕರು ಸಂತಾಪ ಸೂಚಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಆಘಾತ ವ್ಯಕ್ತಪಡಿಸಿದ್ದಾರೆ.

ವಿದೇಶಾಂಗ ವ್ಯವಹಾರಕ್ಕೆ ಸಂಬಂಧಿಸಿ ತಜ್ಞರಾಗಿದ್ದ ಅವರು, ವಿವಿಧ ಟಿ.ವಿ. ಚಾನೆಲ್‍ಗಳಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಸಂವಾದಗಳಲ್ಲಿ ವಿಷಯ ತಜ್ಞರಾಗಿ ಚರ್ಚೆಗಳಲ್ಲಿ ಭಾಗವಹಿಸುತ್ತಿದ್ದರು. ಪಕ್ಷವನ್ನು ಸಮರ್ಥಿಸಿ ಮಾತನಾಡುತ್ತಿದ್ದರು. ಸಂಘ ಪರಿವಾರದ ಹಿನ್ನೆಲೆಯವರಾದ ಅವರು ಹಲವಾರು ವರ್ಷಗಳಿಂದ ಪಕ್ಷದಲ್ಲಿ ಕೆಲಸ ಮಾಡಿದ್ದರು ಎಂದು ತಿಳಿಸಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಲಭಿಸಲಿ, ದುಃಖತಪ್ತ ಕುಟುಂಬಕ್ಕೆ ಈ ನೋವನ್ನು ಸಹಿಸುವ ಶಕ್ತಿಯನ್ನು ಪರಮಾತ್ಮ ನೀಡಲಿ ಎಂದು ನಳಿನ್‍ಕುಮಾರ್ ಕಟೀಲ್ ಪ್ರಾರ್ಥಿಸಿದ್ದಾರೆ.

ಇದನ್ನೂ ಓದಿ | ಮುಂಬಯಿ ಏರ್‌ಪೋರ್ಟ್‌ನಲ್ಲಿ ಜುಲೈ 3ಕ್ಕೆ ಜಮಾವಣೆಗೊಳ್ಳಲು ಪಕ್ಷದ ಕಾರ್ಯಕರ್ತರಿಗೆ ಬಿಜೆಪಿ ಕರೆ

Exit mobile version