ಕರ್ನಾಟಕದ ಜಲಿಯನ್‌ವಾಲಾಬಾಗ್‌ ಗೊರಟಾ; ಈ ಸ್ಮಾರಕದ ಹಿಂದಿದೆ ರಕ್ತಸಿಕ್ತ ಇತಿಹಾಸ - Vistara News

ಕರ್ನಾಟಕ

ಕರ್ನಾಟಕದ ಜಲಿಯನ್‌ವಾಲಾಬಾಗ್‌ ಗೊರಟಾ; ಈ ಸ್ಮಾರಕದ ಹಿಂದಿದೆ ರಕ್ತಸಿಕ್ತ ಇತಿಹಾಸ

ಬೀದರ್‌ ಜಿಲ್ಲೆಯ ಗೊರಟಾವನ್ನು ಕರ್ನಾಟಕದ ಜಲಿಯನ್‌ ವಾಲಾ ಬಾಗ್‌ ಎನ್ನುವುದೇಕೆ? ಅಲ್ಲಿನ ರಕ್ತಸಿಕ್ತ ಇತಿಹಾಸವೇನು? ಅಮಿತ್‌ ಶಾ ಅವರು ಲೋಕಾರ್ಪಣೆಗೊಳಿಸಿದ ಸ್ಮಾರಕದ ಹಿಂದಿನ ಕಥೆ ಇಲ್ಲಿದೆ.

VISTARANEWS.COM


on

gorata smaraka
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೀದರ್‌: ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗೊರಟಾ ಕಡೆಗೆ ಇಡೀ ದೇಶವೇ ನೋಡುತ್ತಿದೆ. ಕೇಂದ್ರ ಗೃಹ ಸಚಿವ ಅಮಿತ್‌ ಅವರು ಇಲ್ಲಿ ಲೋಕಾರ್ಪಣೆ ಮಾಡಿದ ಹುತಾತ್ಮರ ಸ್ಮಾರಕ ಮತ್ತು ವಲ್ಲಭಭಾಯ್‌ ಪಟೇಲ್‌ ಅವರ ಭವ್ಯ ಪ್ರತಿಮೆಗಳು ದೇಶದ ಗಮನ ಸೆಳೆದಿವೆ. ಹಾಗಿದ್ದರೆ ಗೊರಟಾ ಎಂಬ ಈ ಊರಿನಲ್ಲಿ ಇಂಥ ಸ್ಮಾರಕ, ಪ್ರತಿಮೆಗಳ ಸ್ಥಾಪನೆ ಯಾಕಾಗಿ ನಡೆದಿದೆ ಎಂಬ ಕುತೂಹಲ ಎಲ್ಲರಲ್ಲೂ ಇದೆ.

gorata smaraka
ಗೊರಟಾದಲ್ಲಿ ನಿರ್ಮಾಣಗೊಂಡಿರುವ ಸ್ಮಾರಕ ಮತ್ತು ಪಟೇಲರ ಪ್ರತಿಮೆ

ಗೊರಟಾ ಎನ್ನುವುದು ಸಾಮಾನ್ಯ ಗ್ರಾಮವಲ್ಲ. ಅದು ಕರ್ನಾಟಕದ ಜಲಿಯನ್‌ವಾಲಾಬಾಗ್.‌ ಇಲ್ಲಿ “ರಝಾಕಾರ” ಎಂಬ ಮುಸ್ಲಿಂ ಸೈನಿಕರು ನಡೆಸಿದ ರಕ್ತಪಾತದ ಕಥೆ ಭಯಾನಕ. ಇಡೀ ಗ್ರಾಮವನ್ನು ಸುತ್ತುವರೆದು ಮಾಡಿದ ನರಮೇಧ ಚರಿತ್ರೆಯ ಭಯಾನಕ ಅಧ್ಯಾಯ. ಹಾಗಂತ ಇದು ನಡೆದದ್ದು ಸ್ವಾತಂತ್ರ್ಯಪೂರ್ವದಲ್ಲೇನೂ ಅಲ್ಲ. ಸ್ವಾತಂತ್ರ್ಯಾನಂತರ ನಮ್ಮದೇ ದೇಶದಲ್ಲಿ ನಡೆದ ಭಯಾನಕ ಹತ್ಯಾಕಾಂಡದ ಸಮಗ್ರ ಹಿನ್ನೆಲೆ ಇಲ್ಲಿದೆ.

ಕ್ರಾಂತಿ ಭೂಮಿ ಗೊರಟಾ: ಇಲ್ಲಿಂದ ಶುರುವಾಗುತ್ತದೆ ಘೋರ ಕಥನ

ಆಗಸ್ಟ್ 15, 1947ರಂದು ದೇಶ ಸ್ವಾತಂತ್ರದ ಸಂಭ್ರಮದಲ್ಲಿದ್ದರೆ ಬೀದರ್, ಗುಲ್ಬರ್ಗಾ, ರಾಯಚೂರುಗಳು ಸೌಭಾಗ್ಯದಿಂದ ವಂಚಿತವಾದವು. ಯಾಕೆಂದರೆ, ಈ ಮೂರು ಜಿಲ್ಲೆಗಳು ಹೈದ್ರಾಬಾದ್ ನಿಜಾಮನ ಸಂಸ್ಥಾನದಲ್ಲಿದ್ದವು. ದೇಶಕ್ಕೆ ಸ್ವಾತಂತ್ರ ಬಂದರೂ ಕೂಡ ಇವುಗಳಿಗೆ ಬರಲಿಲ್ಲ. ಅದಕ್ಕಾಗಿ ಈ ಪ್ರದೇಶ ಒಂದು ವರ್ಷ ಕಾಯಬೇಕಾಯಿತು. ಇವರಿಗೆ ಅಯಾಚಿತವಾಗಿ ಎಲ್ಲರಂತೆ ಸ್ವಾತಂತ್ರ್ಯ ಸಿಗಲಿಲ್ಲ. ಬದಲಾಗಿ ಅಪಾರ ಬೆಲೆ ತೆತ್ತು, ಪಡೆಯಬೇಕಾಯಿತು. ಆಗ ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಮಾತ್ರ ಹೋರಾಟ ಮಾಡಬೇಕಾಯಿತು. ಹೀಗಾಗಿ ಹೈದ್ರಾಬಾದ್ ಕರ್ನಾಟಕ ಸ್ವಾತಂತ್ರ ಚಳುವಳಿ, ದೇಶದ ಸ್ವಾತಂತ್ರ್ಯ ಹೋರಾಟಕ್ಕಿಂತಲೂ ಒಂದು ಹೆಜ್ಜೆ ಹೆಚ್ಚಿನ ತೂಕ ಪಡೆದಿದೆ. ಭಾರತದ ಉಕ್ಕಿನ ಮನುಷ್ಯ ಸರದಾರ ವಲ್ಲಭಭಾಯಿ ಪಟೇಲರ ದೂರದೃಷ್ಟಿ ಹಾಗೂ ಅನೇಕ ಪ್ರಯತ್ನಗಳ ಫಲವಾಗಿ ಈ ಭಾಗಕ್ಕೆ ಸ್ವಾತಂತ್ರ್ಯ ಲಭಿಸಿತ್ತು. ಪಟೇಲರು ಹೈದ್ರಾಬಾದ್ ಕರ್ನಾಟಕದ ಸ್ವಾತಂತ್ರ ಶಿಲ್ಪಿಗಳೆಂದು ಗೌರವದಿಂದ ಕರೆಯಬೇಕು.

ಸ್ವಾತಂತ್ರ್ಯದ ಝೇಂಕಾರ

1942ರಲ್ಲಿ ಭಾರತಾದ್ಯಂತ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟ ತೀವ್ರತೆ ಮುಗಿಲು ಮುಟ್ಟಿತು. ಭಾರತ ಬಿಟ್ಟು ತೊಲಗಿ ಎಂಬ ಘೋಷ ದೇಶದ ತುಂಬಾ ಮಾರ್ದನಿಸಿತ್ತು. ಅದಕ್ಕೆ ಈ ಭಾಗವೂ ಹೊರತಾಗಿರಲಿಲ್ಲ. ಸ್ವಾಮಿ ರಮಾನಂದ ತೀರ್ಥರ ನೇತೃತ್ವದಲ್ಲಿ ಅಸಂಖ್ಯಾತ ದೇಶ ಭಕ್ತರು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಧುಮುಕಿದರು. ಆ ಹೊತ್ತಿನಲ್ಲಿ ಆರ್ಯ ಸಮಾಜದ ಸಂಘಟನೆ ಜೋರಾಗಿತ್ತು. “ವಂದೇ ಮಾತರಂ’ ಗೀತೆ ಸ್ವಾತಂತ್ರದ ಮೂಲ ಮಂತ್ರವಾಗಿತ್ತು. ಇದು ಹಳ್ಳಿ-ಪಟ್ಟಣದ ಮನೆ-ಮನೆಗಳಲ್ಲಿ ಸ್ವಾತಂತ್ರ ಜ್ಯೋತಿ ಹೊತ್ತಿಸಿತು.

“ವಂದೇ ಮಾತರಂ” ಸ್ವಾತಂತ್ರದ ರಣಕಹಳೆಯಾಗಿತ್ತು. ಸ್ವಾಭಿಮಾನ, ರಾಷ್ಟ್ರಭಕ್ತಿಯ ಚೈತನ್ಯವಾಗಿತ್ತು. ಅಸಂಖ್ಯಾತ ದೇಶಭಕ್ತರ ಅಪ್ರತಿಮ ಹೋರಾಟ, ಬಲಿದಾನದ ಫಲವಾಗಿ ಸ್ವಾತಂತ್ರ್ಯ ಲಭಿಸಿತ್ತು. ಆ ಒಂದು ದೇಶದ ತುಂಬಾ ಸಂತಸ ಸಡಗರ ಸಂಭ್ರಮ. ಸಂತೋಷವನ್ನು ಹಂಚಿಕೊಳ್ಳಲು ಹೈದ್ರಾಬಾದ್ ನಿಜಾಮನ ಸಂಸ್ಥಾನದಲ್ಲಿ ಅವಕಾಶವಿರಲಿಲ್ಲ. ನಿರಂಕುಶ ಪ್ರಭುತ್ವ ಬ್ರಿಟಿಷರ ಹಾಗೂ ಪಾಕಿಸ್ತಾನಿಗಳ ಕುತಂತ್ರದಿಂದ ಹೈದರಾಬಾದ್ ನಿಜಾಮ ಸ್ವತಂತ್ರ ರಾಷ್ಟ್ರ ನಿರ್ಮಾಣದ ಕನಸು ಕಾಣುತ್ತಿದ್ದ. ಇದು ಲಕ್ಷಾಂತರ ಹಿಂದೂಗಳ ಜೀವನಕ್ಕೆ ಕಂಟಕವಾಗಿ ಪರಿಣಮಿಸಿತ್ತು.

ತಿರಂಗಾ ಧ್ವಜ

ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ಸಂತಸದಲ್ಲಿ ಈ ಪ್ರದೇಶದ ಅನೇಕ ಸ್ವಾತಂತ್ರ್ಯ ಹೋರಾಟಗಾರರು ಅಲ್ಲಲ್ಲಿ ‘ತಿರಂಗಾ ಧ್ವಜʼ ಹಾರಿಸಿ ಸ್ವಾತಂತ್ರ್ಯದ ಸಂಭ್ರಮವನ್ನು ಆಚರಿಸುತ್ತಿದ್ದರು. ಇದನ್ನು ಹೈದರಾಬಾದ್ ನಿಜಾಮ ನಿಷೇಧಿಸಿ ಅಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸಿದ್ದ. ಆಗ ಈ ಯೋಧರು ಭೂಗತರಾಗಿ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದರು, ಸಂಘಟನೆ ಪ್ರಾರಂಭಿಸಿದರು. ಅಲ್ಲಲ್ಲಿ ನಿಜಾಮನ ದುರಾಡಳಿತವನ್ನು ಪ್ರತಿರೋಧಿಸಿದರು. ಇದರಿಂದ ಕ್ಷುದ್ರಗೊಂಡ ನಿಜಾಮನ ಸರ್ಕಾರ ಅಂತಹವರನ್ನು ಬಂಧಿಸತೊಡಗಿದರು.

ಅದು ಕಾಸಿಂ ರಜ್ಜಿ ನೇತೃತ್ವದಲ್ಲಿ “ರಝಾಕಾರ” ಎಂಬ ಭಯೋತ್ಪಾದಕರಿಂದ ನಿಜಾಮ ಆಡಳಿತ ಇಸ್ಲಾಮೀಕರಣವಾಗಿತ್ತು. ರಾಜಧರ್ಮ ಇಸ್ಲಾಂ ಆಗಿತ್ತು. ಭಾಷೆ ಉರ್ದು, ಹಿಂದೂ ಧರ್ಮದ ಸರ್ವನಾಶ ಮಾಡುವುದೇ ಅವರ ಉದ್ದೇಶವಾಗಿತ್ತು.

ಈಗ ಗೊರಟಾ ಎಂಬ ಊರಿನ ಕಥೆ ಕೇಳೋಣ

ಗೊರಟಾ ಇಂದಿನ ಜಿಲ್ಲೆ ಬಸವಕಲ್ಯಾಣ ತಾಲ್ಲೂಕಿನ ಒಂದು ಸುಸಂಸ್ಕೃತ ಗ್ರಾಮ. ಸಮೃದ್ಧ ಸಾಂಸ್ಕೃತಿಕ ಪರಂಪರೆ ಹೊಂದಿರುವ ಇದು ಕಲ್ಯಾಣ ಚಾಲುಕ್ಯರ ಸಾಂಸ್ಕೃತಿಕ ರಾಜಧಾನಿಯಾಗಿ ಹೆಸರು ಪಡೆದಿತ್ತು. ಇಲ್ಲಿರುವ ಪ್ರಾಚೀನ ರುದ್ರೇಶ್ವರ ದೇವರಿಗೆ ಕಲ್ಯಾಣ ಚಾಲುಕ್ಯರು ಅನನ್ಯವಾಗಿ ನಡೆದುಕೊಂಡು ಅದರ ನಿತ್ಯಸೇವೆಗೆಂದು ಅನೇಕ ಭೂಮಿ ಸೀಮೆಗಳನ್ನು ದತ್ತಿ ನೀಡಿದ್ದಾರೆ. ಶಾಸನಗಳಲ್ಲಿ ಇದನ್ನು “ಅಗ್ರಹಾರ ಗೋರಂಟಿ” ಎಂದು ಕರೆಯಲಾಗಿದೆ. ಗೋರಂಟಿ ಪ್ರಸಿದ್ದ ಘಟಿಕಾಸ್ಥಾನ (ಸಂಗೀತ ವಿಶ್ವವಿದ್ಯಾಲಯ) ವಾಗಿತ್ತೆಂದು ಶಾಸನದಲ್ಲಿ ಹೇಳಲಾಗಿದೆ. ಶಾಸನಗಳ ತಯಾರಿಸುವ ಕಾರ್ಯಾಗಾರವೇ ಇಲ್ಲಿತ್ತೆನ್ನುವ ಕುತೂಹಲ ಶಾಸನೋಕ್ತವಾಗಿದೆ. ಸಂಗತಿಯು ಇಂದಿಗೂ ಗೋರಟಾ ಕಲೆ-ಸಂಗೀತ, ಸಾಹಿತ್ಯದ ಬೀಡಾಗಿ ಜನಜನಿತವಾಗಿದೆ.

ಹಿಂದೂಗಳೇ ವಾಸವಾಗಿದ್ದ ಗೊರಟಾದಲ್ಲಿ ಮುಂದೆ ಬರೀದ ಷಾಯಿ (ಬೀದ)ಗಳ ಕಾಲದಲ್ಲಿ ಅಂದರೆ ಕ್ರಿ.ಶ. 1516 ಶತಮಾನದಲ್ಲಿ ಮುಸ್ಲಿಮರ ಆಗಮನವಾಗಿ ಗ್ರಾಮದಲ್ಲಿ ವಾಸಿಸತೊಡಗಿದರು. ಕಾಲಾನು ಚಕ್ರದಲ್ಲಿ ಹಿಂದೂ-ಮುಸ್ಲಿಂರ ಸಾಮರಸ್ಯದ ಬದುಕಿನಿಂದಾಗಿ ಗೋರಟಾ ಗ್ರಾಮ ಭಾವೈಕ್ಯತೆಗಳ ಸಂಗಮದಂತೆ ಶೋಭಿಸಿ ಮಾದರಿ ಗ್ರಾಮವಾಗಿತ್ತು. ಕರಿ ಮಣ್ಣಿನ ಭೂಮಿಯ ಕೃಷಿ ಸಂಪತ್ತಿನಿಂದ ಧನಲಕ್ಷ್ಮಿ ಅವಾಸವಾಗಿತ್ತು.

1928ರವರೆಗೆ ಗೋರಟಾದಲ್ಲಿ ಹಿಂದೂ-ಮುಸ್ಲಿಂ ಭ್ರಾತೃತ್ವದಲ್ಲಿ ಯಾವುದೇ ಧಕ್ಕೆ ಇರಲಿಲ್ಲ. ಮುಂದೆ ಸ್ವಾತಂತ್ರ ಸಂಗ್ರಾಮದ 3ನೇ ಘಟ್ಟದಲ್ಲಿ ಬ್ರಿಟೀಷರು ತಮ್ಮ ಒಡೆದು ಆಳುವ ನೀತಿಯಿಂದ ಹಿಂದೂ-ಮುಸ್ಲಿಮರಲ್ಲಿ ವಿರಸ ಮೂಡಿಸಿ ಒಡಕುಂಟು ಬ್ರಿಟಿಷರು ಮಾಡಿ ವೈರತ್ವ ತಂದಿಟ್ಟರು, ಓಲೈಸತೊಡಗಿದರು.

ನಿಜಾಮನು ಕೂಡಾ ಇಂಗ್ಲಿಷರನ್ನು ಓಲೈಸತೊಡಗಿದರು. ಇಲ್ಲಿದ್ದ ಪ್ರತಿಶತ 87ರಷ್ಟಿದ್ದ ಹಿಂದೂಗಳನ್ನು ವಿನಾಕಾರಣ ದ್ವೇಷಿಸತೊಡಗಿದರು. ಹಿಂದೂ ವಿರೋಧಿ ಆಡಳಿತ ಜಾರಿಗೆ ತಂದನು. ಇದುವೇ ಮುಂದಿನ ಎಲ್ಲ ಅನಾಹುತಕ್ಕೆ ನಾಂದಿಯಾಯಿತು. ಹೀಗಾಗಿ ಮುಸ್ಲಿಮರು ಹಿಂದೂಗಳ ಮೇಲೆ ದಬ್ಬಾಳಿಕೆ ನಡೆಸತೊಡಗಿದರು. ಹಿಂದೂಗಳು ಭಯಭೀತರಾದರು. ಹಿಂದೂಗಳ ಮೇಲೆ ವಿನಾಃಕಾರಣ ಕೊಲೆ, ಸುಲಿಗೆ, ಮಾನ ಹಗರಣದಂತ ಅನ್ಯಾಯಗಳು ನಡೆಯತೊಡಗಿದವು. ವಿರುದ್ಧ ಧ್ವನಿ ಎತ್ತುವುದಕ್ಕೂ ಸಾಧ್ಯವಿರಲಿಲ್ಲ. ಇದರ ಹಿಂದೂಗಳು ಬಹುಸಂಖ್ಯಾತರಾಗಿದ್ದರು ಅಸಹಾಯಕರಾಗಿ ನರಕ ಯಾತನೆ ಅನುಭವಿಸಿದರು. ಅವರ ಕ್ರೌರ್ಯ ಎಷ್ಟಿತ್ತೆಂದರೆ ಎಂತಹ ನೀಚ ಕಾರ್ಯಕ್ಕೂ ಅವರು ಕೈ ಹಾಕುತ್ತಿದ್ದರು.

ಮಸೀದಿ ಪ್ರಕರಣದಿಂದ ತಿರುವು

ನಿಜಾಮನ ಆಡಳಿತ ಇರುವುದರಿಂದ ದಬ್ಬಾಳಿಕೆಯಂತೂ ನಿರಂತರ ಆಕ್ರಮಣ ನಡೆದಿತ್ತು. ಹಿಂದೂಗಳ ಮೇಲೆ ಅನ್ಯಾಯಗಳು ನಡೆಯುತ್ತಿದ್ದವು. ಪ್ರಧಾನಿ ಮಿಶ್‌ರಾಯಕ್ ಅಲಿಯ ಬಲಗೈ ಬಂಟ ಖಾಸಿಂ ರಜ್ಜಿಯ ಕೃಪಾಪೋಷಿತ ರಝಾಕಾರರು ಹಿಂದೂಗಳ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದರು. ಖಾಸಿಂ ರಜ್ಜಿ ಇತ್ತೆ ಹಾಧುಲ್-ಮಿಸಲಿನ್ ಸಂಸ್ಥೆ ಹುಟ್ಟು ಹಾಕಿದ. ಇದು ರಝಾಕಾರರಿಗೆ ಜನ್ಮ ನೀಡಿತ್ತು. ರಝಾಕಾರ ದಂಗೆಕೋರರು ನಿರ್ವಹಿಸತೊಡಗಿದರು.

ಇವರು ಶ್ರೀಮಂತ ಹಿಂದೂಗಳನ್ನು ಉಗ್ರವಾಗಿ ಹಿಂಸಿಸುವುದು, ಕೊಲೆ, ಲೂಟಿ ಮಾಡುತ್ತಿದ್ದರು. ಹಿಂದೂ ಸ್ತ್ರೀಯರ ಮೇಲೆ ಅತ್ಯಾಚಾರವೆಸಗುತ್ತಿದ್ದರು. ಕೇಳಿದವರನ್ನು ನಿರ್ದಯವಾಗಿ ಹೊಡೆಯುತ್ತಿದ್ದರು. ಇವರ ಪಾಶವೀ ಕೃತ್ಯ ಕಂಡ ಜನತೆ ರಝಾಕಾರೆಂದರೆ ಭಯ ಬೀಳುತ್ತಿದ್ದರು.

ಗೊರಟಾದಲ್ಲಿ ಶ್ರಾವಣ ಮಾಸದಲ್ಲಿ ಯಥಾ ಪ್ರಕಾರ ಪ್ರತೀ ವರ್ಷದಂತೆ ಪುರಾಣದ ಕತೆಗಳ ನಾಟಕಗಳನ್ನು ಆಡುವ ಪರಂಪರೆ ಪ್ರಾರಂಭವಾಯಿತು. ಇದನ್ನು ಕೆಡಿಸಬೇಕೆಂದು ಮುಸ್ಲಿಂರು ಸಂಚು ನಡೆಸಿದರು. ಮಸೀದಿ ಹತ್ತಿರದ ದೇವಸ್ಥಾನದ ಆವರಣದಲ್ಲಿ ಪುರಾಣ ಕಥಾ ನಾಟಕ ನಿಶ್ಚಯವಾಗಿತ್ತು. ರಝಾಕಾರ ಬೆಂಬಲಿಗನೊಬ್ಬ ಮಸೀದಿ ಹತ್ತಿರ ಹೊಲಸು ಮಾಡಿ ಮಸೀದಿಯ ಕಲ್ಲು ಕೆಡವಿ ಹಾಕಿದ. ಮರುದಿನ ಇದನ್ನು ನೋಡಿದ ಕೆಲ ಮುಸ್ಲಿಮರು ಗಲಾಟೆ ಮಾಡಿದರು. ನಾಟಕ ನೋಡಲು ಜನಸಂದಣಿ ನೆರೆದಿತ್ತು.

ಇನ್ನೇನು ನಾಟಕ ಶುರುವಾಗಬೇಕಿತ್ತು. ನಾಟಕದ ಪರದೆಯ ಮೇಲೆ ‘ವಂದೇ ಮಾತರಂ’ ಎಂದು ಬರೆಯಲಾಗಿತ್ತು. ಆಗ ಮುಂದೆ ಬೆಂಬಲಿಗರೊಂದಿಗೆ ಕೂತಿದ್ದ ಇಸಾಮುದ್ದೀನ್ ಎದ್ದು ನಿಂತು “ವಂದೇ ಮಾತರಂ” ಬರೆದಿರುವುದನ್ನು ತೆಗೆಸಿದರೆ ಮಾತ್ರ ನಾಟಕವಾಡಲು ಬಿಡುತ್ತೇನೆಂದು ಗಲಾಟೆ ಮಾಡಿದ. ಇದರಿಂದ ಗದ್ದಲ ಪ್ರಾರಂಭವಾಯಿತು. ಇದನ್ನು ಬರೆಸಿದ ರಾಚಯ್ಯ ಸ್ವಾಮಿ ಅದನ್ನು ಪ್ರಾಣ ಹೋದರೂ ನಾನು ತೆಗೆಯುವುದಿಲ್ಲವೆಂದರು.

ಹೀಗಾಗಿ ಅರ್ಧಗಂಟೆ ವಾದಗಳು ನಡೆಯಿತು. ಪರಿಸ್ಥಿತಿ ವಿಕೋಪಕ್ಕೆ ಹೋದೀತೆಂದು ಭಯಗೊಂಡ ಸಂಘಟಕರು ರಾಚಯ್ಯಸ್ವಾಮಿಯವರ ಮನವೊಲಿಸಿ ತೆಗೆಸಿದರು. ಕೆಂಡಾಮಂಡಲವಾದ ರಾಚಯ್ಯ ಸ್ವಾಮಿ ನಾಟಕವೇ ಬೇಡವೆಂದರಂತೆ. ಆದರೆ ಅವರನ್ನು ಸಮಾಧಾನ ಪಡಿಸಲಾಯಿತು. ನಾಟಕ ಪ್ರಾರಂಭವಾಯಿತು.

ಕೆಲ ದೃಶ್ಯಗಳಾದ ಮೇಲೆ ರಾಚಯ್ಯ ಸ್ವಾಮಿ ಪಾತ್ರ ಬಂತು. ರಂಗದ ಮೇಲೆ ಬಂದ ತಕ್ಷಣ “ವಂದೇ ಮಾತರಂ, ವಂದೇ ಮಾತರಂ, ವಂದೇ ಮಾತರಂ,” ಎಂದು 3 ಸಾರಿ ಜೋರಾಗಿ ಹೇಳಿದರು. ಇದ ರಿಂದ ಇಸಾಮುದ್ದೀನ್ ಕ್ರುದ್ಧನಾದನು. ಜನ ರಾಚಯ್ಯನವರನ್ನು ಬೆಂಬಲಿಸಿದರು. ಇಸಾಮುದ್ದೀನ್ ಸುಮ್ಮನೆ ಕೂತರೂ ಆತನ ಮಕ್ಕಳು, ಆನುಯಾಯಿಗಳು ಸುಮ್ಮನಿರಲಿಲ್ಲ. ಅವರು ಮಧ್ಯೆ ಮಧ್ಯೆ ಗಲಾಟೆ ಮಾಡುವುದು, ಹೆಣ್ಣು ಮಕ್ಕಳನ್ನು ಚುಡಾಯಿಸುವುದು ನಡೆದಿತ್ತು. ನಾಟಕದಲ್ಲಿ ರೇಣುಕ-ಬಿಜ್ಜಳನ ಮಠಪತಿ ಇವರು, ಗಲಾಟೆ ಸಹಿಸದೇ ತನ್ನಲ್ಲಿದ್ದ ಖಡ್ಗವನ್ನು ಹೊರಗೆ ತೆಗೆದು ರಂಗದಿಂದ ಜಿಗಿದು ಇವರ ಮೇಲೆ “ವಂದೇ ಮಾತರಂ” ಎನ್ನುತ್ತ ಮುಗಿಬಿದ್ದರು. ಗಲಾಟೆಯಲ್ಲಿ ನಾಟಕವೇ ನಿಂತು ಹೋಯಿತು.

ತಿರಂಗ ಧ್ವಜ ಪ್ರಕರಣ

ದೇಶಕ್ಕೆ ಸ್ವಾತಂತ್ರ ಬಂದಿದ್ದರೂ ಹೈದ್ರಾಬಾದ್ ನಿಜಾಮ ಸಂಸ್ಥಾನದಲ್ಲಿ ತಿರಂಗ ಧ್ವಜ ಹಾರಿಸುವುದನ್ನು ನಿಷೇಧಿಸಲಾಯಿತು. ಹಾರಿಸುವವರನ್ನು ಕೊಂದು ಹಾಕುವ ಕಾನೂನು ಜಾರಿ ಮಾಡಿತು. ಇದರಿಂದ ವಿಚಲಿತರಾಗದ ಸ್ವಾತಂತ್ರ ಯೋಧರು ಅಲ್ಲಲ್ಲಿ ರಾಷ್ಟ್ರ ಧ್ವಜ ಹಾರಿಸುತ್ತಿದ್ದರು. ಇದನ್ನು ಸಹಿಸದ ನಿಜಾಮ ಸರ್ಕಾರ ಇಂಥವರ ಮೇಲೆ ಕೊಲೆ, ಸುಲಿಗೆ, ರಾಷ್ಟ್ರ ದ್ರೋಹ ಮೊಕದ್ದಮೆ ಹೊರಿಸಿ ಬಂಧಿಸತೊಡಗಿತ್ತು. ಸಮಾಜದ ಮುಖಂಡರು ಗುಂಪುಗಳನ್ನು ಕಟ್ಟಿಕೊಂಡು ಭೂಗತರಾಗಿ ಸೈನಿಕ ತರಬೇತಿ ಪಡೆಯಹತ್ತಿದರು.

ಹೊನ್ನಾಳಿಯ ಭಾವುರಾವ್ ಪಾಟೀಲರ ನಾಯಕತ್ವದಲ್ಲಿ ಗೋರಟಾ ಮುಚಳಂಬ, ಹಾಲಗೋರ್ಟಾದ ಕೆಲವು ಮಂದಿ ಯೋಧರು ತಿರಂಗಾ ತಿರಂಗಾ ಧ್ವಜ ಧ್ವಜ ಹಾರಿಸುತ್ತಿದ್ದರು. ಗೊರಟಾದ ನಾಗಪ್ಪ ಹಳೆಂಬರ, ಕಾಶೆಪ್ಪ ಭಾಲ್ಕಿ, ಮಾರುತಿ ಮಡಿವಾಳ, ವಿಠೋಬಾ ನಿರೋಡೆ ಕೋಳಿ, ಸ್ಯಾಮರಾಯ ಪಟ್ಟೆ, ಮಹಾರುದ್ರಪ್ಪ ಪಟ್ಟೆ, ನರಸಿಂಗರಾವ್ ಥೆಂಗಳೆ ಮುಂತಾದವರು ಮುಂಚೂಣಿಯಲ್ಲಿದ್ದರು.

ಮಾರುತಿ ಮಡಿವಾಳ ಪತಂಗ (ಗಾಳಿಪಟ)ದ ಮೇಲೆ “ವಂದೇ ಮಾತರಂ” ಎಂದು ಬರೆದು ಅದನ್ನು ಆಕಾಶದಲ್ಲಿ ಹಾರಿಸಿ ಮಾಳಿಗೆ ಮೇಲೆ ಕಟ್ಟಿದ್ದರು. ಇದನ್ನು ನೋಡಿ ಕೆಂಡಾ ಮಂಡಲವಾದ ಇಸಾಮುದ್ದೀನ್ ಇದನ್ನು ಯಾರು ಹಾರಿಸಿದ್ದಾರೆ ಎಂದು ಕೂಗಾಡಿ ಪತ್ತೆ ಹಚ್ಚಿ ಮಾರುತಿಯನ್ನು ಹಿಡಿದು ಅವರ ತಂದೆ ಹತ್ತಿರ ಒಯ್ದು ನಿನ್ನ ಮಗ ದೇಶದ್ರೋಹಿ ಇದ್ದಾನೆಂದು ಬೆದರಿಕೆ ಹಾಕಿ ಮಾರುತಿಯನ್ನು ಹಿಗ್ಗಾ ಮುಗ್ಗ ಬಡಿದ. ಗಾಳಿಪಟ ಇಳಿಸಿದ ಇಸಾಮುದ್ದೀನನ ಚೇರಾ ಫಕೀರ ಬಬಲ್ಯಾ ತಿರಂಗಾ ಧ್ವಜವನ್ನು ಬೆಂಕಿ ಹಚ್ಚಿ ಸುಟ್ಟು ಹಾಕಿದ. ಕುಪಿತನಾದ ಮಾರುತೇಪ್ಪ ಘಾಟಬೋರಾಳದಲ್ಲಿ ತಿರಂಗಾ ಧ್ವಜ ಹಾರಿಸಿದರು. ವಿರೋಧಿಸಿದ ಇವರನ್ನು ಸಿಕ್ಕಾಪಟ್ಟೆ ಹೊಡೆದು ನೆಲಕ್ಕುರುಳಿಸಿದರು.

ಮರುದಿನ ಹಾಲಗೋರಟಾದಲ್ಲಿ ಹೊನ್ನಳ್ಳಿ ಭಾವುರಾವ್ ಪಾಟೀಲ ಬೆಂಬಲದಿಂದ ಮಾಡ್ಕೊಬಾ ಘೋರವಾಡೆ, ದೌಲತರಾವ್ ಘೋರವಾಡೆ ಸಹೋದರರು ಊರ ಮಧ್ಯ ತಿರಂಗಾ ಧ್ವಜ ಹಾರಿಸಿದರು. ಸುದ್ದಿ ತಿಳಿದ ತಕ್ಷಣ ಕುಪಿತನಾದ ಇಸಾಮುದ್ದೀನ್ ಪೊಲೀಸರನ್ನು ಕರೆಸಿದ. ಹಾಲಗೋರ್ಟಾಕ್ಕೆ ಬಂದ ನಿಜಾಮನ ಪೊಲೀಸರು ಸಹೋದರರನ್ನು ಹೊಡೆದು ಬಂಧಿಸಿ, ಧ್ವಜಾ ಇಳಿಸಿ ಅವರನ್ನು ಎಳೆದುಕೊಂಡು ಹೊರಟ.

ಹಾಗೆ ಹೋಗುವಾಗ ಮನೆಯಲ್ಲಿದ್ದ ತಾಯಿಯೊಬ್ಬಳು ಗಂಡು ಗಚ್ಚಿ ಹಾಕಿಕೊಂಡು ಓಡಿಬಂದು ಸಿರ್ಸಿ ಅಮಿನ್‌ಸಾಬ್‌ನ ಕುದುರೆಯನ್ನು ಹಿಡಿದು ತಡೆದು, “ಧ್ವಜ ಇಳಿಸಿದಿಯಾ’ ಎಂದು ಕೇಳಿದಳು. ಕುಪಿತನಾದ ಅನಾನ್‌ಸಾಬ್ ಅವಳಿಗೂ ಏಟುಕೊಟ್ಟನು. ವಂದೇ ಮಾತರಂ ಎನ್ನುತ್ತ ಆ ವೀರ ವನಿತೆ ನೆಲಕ್ಕುರುಳಿದಳು. ಘೋವಾಡೆ ಸಹೋದರರನ್ನು ಜೈಲಿಗೆ ಹಾಕಿ ಇದಕ್ಕೆಲ್ಲ ಇಸಾಮುದ್ದೀನ್ ಮತ್ತು ಅವನ ಬೆಂಬಲಿಗರೇ ಕಾರಣ ಹಿಂಸಿಸಿದರು ಎಂದು ಜನಿಜನಿತವಾಯಿತು.

ಇದೆಲ್ಲಾ ಮಾಡಿಸಿದವನು ಭಾವುರಾವೇ ಎಂದ ಇಸಾಮುದ್ದೀನ್‌ನು ಅವನಿಗೆ ತಕ್ಕಪಾಠ ಕಲಿಸಬೇಕೆಂದು ನಿಶ್ಚಯ ಮಾಡಿಕೊಂಡು ಹೊಂಚು ಹಾಕಿ ಒಂದು ದಿನ ಬಾವುರಾವ್‌ನ ಮನೆಯನ್ನು ರಝಾಕಾರರಿಂದ ಲೂಟಿ ಮಾಡಿಸಿದನು. ಇದರಿಂದ ಕುಪಿತರಾದ ಆರ್ಯ ಸಮಾಜದವರು ಇದಕ್ಕೆ ಕಾರಣನಾದ ಇಸಾಮುದ್ದೀನನನ್ನು ಆರು ತಿಂಗಳ ಹೊಂಚು ಹಾಕಿ ಮುಚಳಂಭ-ಗೋರಟಾ ಮಧ್ಯ ಬುದ್ದೇವರ ಹಳ್ಳದಲ್ಲಿ ಹೋಳಿ ಹಬ್ಬದಂದು ಕೊಂದು ಹಾಕಿದರು. 40 ಬಂಡಿಗಾಡಿಗಳ ಬೆಂಗಾವಲಿನಲ್ಲಿ ಕಿರಾಣಿ ಸಾಮಾನು ತರಲು ಇಸಾಮುದ್ದೀನನು ಕಲ್ಯಾಣಕ್ಕೆ ಹೋಗಿ ಬರುತ್ತಿದ್ದನು. ಈ ಕೊಲೆಯೇ ಗೊರಾಟಾದ ರಝಾಕಾರರ ಹತ್ಯಾಕಾಂಡಕ್ಕೆ ಕಾರಣವಾಯಿತು.

ಇಸಾಮುದ್ದೀನನ ಕೊಲೆಯಾದ ನಂತರ ಗೊರಟಾದ ಹಿಂದೂಗಳಲ್ಲಿ ಭಯಭೀತಿ ವಾತಾವರಣ ನಿರ್ಮಾಣವಾಯಿತು. ಈತ ರಝಾಕಾರರ ನಾಯಕನಾಗಿದ್ದ. ಇದರಿಂದ ನಮ್ಮ ಮೇಲೆ ರಝಾಕಾರರು ಸೇಡು ತೀರಿಸಿಕೊಳ್ಳದೇ ಬಿಡುವವರಲ್ಲ ಎನ್ನುವುದು ಗ್ರಾಮಸ್ಥರ ಮಾತಾಗಿತ್ತು. ಊರಲ್ಲಿರುವ ಕೆಲ ಯೋಧರು ರಝಾಕಾರ ವಿರುದ್ಧ ಹೋರಾಡಲು ಸಿದ್ಧತೆಯೂ ನಡೆಸಿದ್ದರು. ಕೆಲದಿನ ಹುಸಿ ವಾರ್ತೆಗಳಿಂದ ಗ್ರಾಮಸ್ಥರ ಬದುಕು ದುಸ್ಥರವಾಗಿತ್ತು.

ರಝಾಕಾರರು ಯಾವಾಗ ಬಂದು ಎರಗುತ್ತಾರೋ ಎನ್ನುವ ಭಯ ಮನೆಮಾಡಿತ್ತು. ಆ ದಿನ ಬಂದೇ ಬಿಟ್ಟಿತು. ಮೇ 9, 1948 (ಚೈತ್ರ ವದ್ಯ ಅಮವಾಸ್ಯೆ) ರಂದು ಬೆಳಿಗ್ಗೆ 8 ಗಂಟೆಗೆ 3 ಸಾವಿರ ಜನ ರಝಾಕಾರರು ನಾಲ್ಕು ದಿಕ್ಕಿನಿಂದ ಘೋಷಣೆಗಳನ್ನು ಕೂಗುತ್ತಾ ಹಿಂದುಗಳ ಮೇಲೆ ದಾಳಿ ಮಾಡಿದರು. ಅಂದು ಸೂರ್ಯಗ್ರಹಣ ಬೇರೆ ಇತ್ತು.

ಬೆಳಿಗ್ಗೆ 8 ಗಂಟೆಗೆ ಘಾಟಬೋರಾಳ ಹಾದಿಗೆ ಎತ್ತುಗಳನ್ನು ತಗೊಂಡು ಹೋಗುತ್ತಿದ್ದು ಶಿವಪ್ಪಾ ಲಿಂಬಾಯಿ ಅವರನ್ನು ರಝಾಕಾರರು ಕೊಂದುಹಾಕಿದರು. ಇನ್ನೂ ಜೀವ ಇರುವಾಗಲೇ ಕಾಲಿಗೆ ಹಗ್ಗ ಕಟ್ಟಿ ಹುಲ್ಲಿನ ಬಣವೆಯೊಳಗೆ ಹಾಕಿ ಬೆಂಕಿ ಹಚ್ಚಿದರು. ಊರನ್ನು ಸುತ್ತುವರಿದು ಗೋಲಿಬಾರ್ ನಡೆಸಿದರು. ಈ ಭಯಂಕರವಾದ ಭೀಕರತೆಯಿಂದ ಕಂಗೆಟ್ಟು ಹೋದ ಜನರು ಪ್ರಾಣರಕ್ಷಣೆಗಾಗಿ ಎಲ್ಲೆಂದರಲ್ಲಿ ಚೆಲ್ಲಾಪಿಲ್ಲಿಯಾಗಿ ಅವಿತುಕೊಂಡರು. ನೂರಾರು ಜನರು ಹಿರೇಮಠದಲ್ಲಿ, ಸಾವಿರಾರು ಜನರು ಮಹಾದಪ್ಪ ಡುಮಣೆ ಅವರ ಮನೆಯಲ್ಲಿ ರಕ್ಷಣೆ ಪಡೆದರು. ಹಿರೇಮಠದ ಮಾಳಿಗೆ ಮೇಲಿಂದ ಯುವಕರು ಕಲ್ಲು, ಕಾವಣಿ ಮುಖಾಂತರ ರಝಾಕಾರರನ್ನು ಎದುರಿಸಿದರು. ಇದರಿಂದ ರೊಚ್ಚಿಗೆದ್ದ ರಝಾಕಾರರು ಮತ್ತಷ್ಟು ಗುಂಡಿನ ದಾಳಿ ಮಾಡಿದರು.

ಏಟು ತಿಂದ ಎಮ್ಮಿ ಮಸ್ತಾನನು ಮಠದ ಬಾಗಿಲಿಗೆ ಬಂದು ಒಳಗಿದ್ದ ರಾಚಯ್ಯ ಸ್ವಾಮಿ ಅವರನ್ನು ಮೋಸದಿಂದ ಬಾಗಿಲು ತೆರೆವಂತೆ ಮನವೊಲಿಸಿದ. ನಂಬಿದ ರಾಚಯ್ಯ ಸ್ವಾಮಿ ಬಾಗಿಲ ತೆರೆದ ತಕ್ಷಣ ಎಮ್ಮಿ ಮಸ್ತಾನ ರಾಚಯ್ಯನವರ ಹೊಟ್ಟೆಯಲ್ಲಿ ಬರ್ಚಿಯಿಂದ ತಿವಿದು ಕೊಂದು ಹಾಕಿದ. ರಾಚಯ್ಯ ಸ್ವಾಮಿ ತಾಯಿ ತಂದೆಗೆ ಒಬ್ಬನೇ ಮಗ ವಿದ್ವಾಂಸರಾಗಿದ್ದರು.

1948ರ ಮೇ 9, 10ರಂದು ನಡೆದ ರಝಾಕಾರರ ಹತ್ಯಾಕಾಂಡದ ದಳ್ಳುರಿಯಲ್ಲಿ ಇಡೀ ಗೊರಟಾ ಗ್ರಾಮವೇ ಹೊತ್ತಿ ಉರಿಯಿತು. ನಿರ್ದಯಿಗಳಾದ ರಝಾಕಾರರು ಮಕ್ಕಳು, ಹೆಂಗಸರು, ಮುದುಕರು ಎನ್ನದೇ ಎಲ್ಲರನ್ನು ಕ್ರೂರವಾಗಿ ಹಿಂಸಿಸಿದರು. ಕೈಗೆ ಸಿಕ್ಕವರನ್ನು ಬರ್ಬರವಾಗಿ ಕೊಂದು ಹಾಕಿದರು. ಒಂದೇ ದಿನದಲ್ಲಿ ನೂರಾರು ಜನ ಪ್ರಾಣ ಕಳೆದುಕೊಂಡರು. ಸಾವಿರಾರು ಜನ ಮನೆ-ಮಠಗಳನ್ನು ಕಳೆದುಕೊಂಡರು. ರಝಾಕಾರರ ಹಚ್ಚಿದ ಬೆಂಕಿಯಿಂದಾಗಿ ಇಡೀ ಊರಿಗೆ ಊರೇ ಹತ್ತಿ ಉರಿಯಿತು. ಜನ ಪ್ರಾಣ ಭಯಭೀತಿಯಿಂದ ಮನೆ-ಮಠಗಳನ್ನು ಬಿಟ್ಟು ರಾತ್ರೋರಾತ್ರಿ ಎತ್ತೆಂದರತ್ತ ಚದುರಿ ಹೋದರು. ಒಬ್ಬರ ಜನ-ದನಕರುಗಳ ಶವ ಇಲ್ಲದಂತಾಯಿತು. ಅವುಗಳ ಸುದ್ದಿ ಒಬ್ಬರಿಗಿಲ್ಲದಂತಾಯಿತು. ಸತ್ತ ಮಾಡಲು ಯಾರೂ ದುರ್ವಾಸನೆಯಿಂದ ಊರ ಮೇಲೆ ಹದ್ದು ಕಾಗೆಗಳು ಹಾರಾಡುವಂತಾಯಿತು. ಊರು ನಾಯಿ ನರಿಗಳ ಕೇರಿಯಾಯಿತು. ಹೀಗೆ ರಝಾಕಾರ ಭಯೋತ್ಪಾದಕರ ಕ್ರೌರ್ಯಕ್ಕೆ ಬಲಿಯಾಗಿ ಗೊರಟಾ ನಲುಗಿತು. ಈ ಹಿನ್ನೆಲೆಯಲ್ಲಿ ಗೊರಾಟಾ ಗ್ರಾಮವನ್ನು ‘ಕರ್ನಾಟಕದ ಜಲಿಯನ್ ವಾಲಾಬಾಗ್” ಎಂದೇ ಗುರುತಿಸಲಾಗುತ್ತಿದೆ.

ಇದಿಷ್ಟು ಕ್ರೌರ್ಯದ ಕಥೆ. ಇಲ್ಲೊಂದು ಸ್ಮಾರಕ ಕಟ್ಟಬೇಕು ಎಂದು ನಿರ್ಧರಿಸಿ 2014ರಲ್ಲಿ ಶಂಕುಸ್ಥಾಪನೆ ನೆರವೇರಿಸಲಾಯಿತು. ಅಂದು ಬಿಜೆಪಿ ಯುವಮೋರ್ಚಾದ ಒತ್ತಾಸೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಂಕುಸ್ಥಾಪನೆ ಮಾಡಿದವರು ಅಮಿತ್ ಶಾ. ಈಗ ಸ್ಮಾರಕವನ್ನು ಉದ್ಘಾಟಿಸಿದ್ದೂ ಅವರೇ. ದೇಶವನ್ನು ಜೋಡಿಸಿದ ಪಟೇಲರ ಪ್ರತಿಮೆಯೂ ಇದೇ ಜಾಗದಲ್ಲಿ ನಿರ್ಮಾಣವಾಗಿದೆ.

ಗೊರಟಾದಲ್ಲಿ ಅಮಿತ್‌ ಶಾ ಅವರಿಗೆ ಸ್ವಾಗತ ಕೋರಿದ್ದು ಹೀಗೆ..

ಇದನ್ನೂ ಓದಿ : Amit shah visit : ಅಭಿವೃದ್ಧಿಯ ಬಿಜೆಪಿ ಬೇಕಾ? ಭ್ರಷ್ಟಾಚಾರಿ ಕಾಂಗ್ರೆಸ್‌ ಬೇಕಾ?; ಅಮಿತ್‌ ಶಾ ಪ್ರಶ್ನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Soldier death: ಬಂದೂಕು ಆಕಸ್ಮಿಕವಾಗಿ ಸಿಡಿದು CISF ಯೋಧ ಸಾವು

Soldier death: ಕೇಂದ್ರೀಯ ಔದ್ಯಮಿಕ ಭದ್ರತಾ ಸಂಸ್ಥೆ (CISF) ಯೋಧರಾದ ರವಿಕಿರಣ್ ಕಲ್ಪಾಕ್ಕಂ ಪರಮಾಣು ವಿದ್ಯುತ್ ಸ್ಥಾವರದಲ್ಲಿ ಕೆಲಸ ಮಾಡುತ್ತಿದ್ದರು. ನೈಟ್ ಡ್ಯೂಟಿ ಮುಗಿಸಿ ಕ್ಯಾಂಪ್‌ನತ್ತ ಅವರು ತೆರಳುವ ವೇಳೆ ಅವಘಡ ಸಂಭವಿಸಿದೆ. ಬಸ್ಸಿನಲ್ಲಿ ಪ್ರಯಾಣ ಮಾಡುತ್ತಿದ್ದ ವೇಳೆ ಗನ್‌ ಆಕಸ್ಮಿಕವಾಗಿ ಸಿಡಿದಿದೆ.

VISTARANEWS.COM


on

cisf soldier death raichur
Koo

ರಾಯಚೂರು: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾಗ ಬಂದೂಕು ಆಕಸ್ಮಿಕವಾಗಿ (Gun misfire) ಸಿಡಿದು ರಾಯಚೂರು (Raichur news) ಮೂಲದ ಯೋಧರೊಬ್ಬರು (Soldier death) ಸಾವಿಗೀಡಾಗಿದ್ದಾರೆ. ಮಾನ್ವಿ ತಾಲೂಕಿನ ಆರ್.ಜಿ ಕ್ಯಾಂಪ್‌ನ ಯೋಧ ರವಿಕಿರಣ್ (37) ಮೃತಪಟ್ಟವರು. ಚೆನ್ನೈ ಏರ್‌ಪೋರ್ಟ್ ಸಮೀಪದ ಕಲ್ಪಾಕ್ಕಂ ಬಳಿ ಈ ದುರ್ಘಟನೆ ನಡೆದಿದೆ.

ಕೇಂದ್ರೀಯ ಔದ್ಯಮಿಕ ಭದ್ರತಾ ಸಂಸ್ಥೆ (CISF) ಯೋಧರಾದ ರವಿಕಿರಣ್ ಕಲ್ಪಾಕ್ಕಂ ಪರಮಾಣು ವಿದ್ಯುತ್ ಸ್ಥಾವರದಲ್ಲಿ ಕೆಲಸ ಮಾಡುತ್ತಿದ್ದರು. ನೈಟ್ ಡ್ಯೂಟಿ ಮುಗಿಸಿ ಕ್ಯಾಂಪ್‌ನತ್ತ ಅವರು ತೆರಳುವ ವೇಳೆ ಅವಘಡ ಸಂಭವಿಸಿದೆ. ಬಸ್ಸಿನಲ್ಲಿ ಪ್ರಯಾಣ ಮಾಡುತ್ತಿದ್ದ ವೇಳೆ ಗನ್‌ ಆಕಸ್ಮಿಕವಾಗಿ ಸಿಡಿದಿದೆ. ಇಂಡಿಯನ್ ಸ್ಮಾಲ್ ಆರ್ಮ್ಸ್ ಸಿಸ್ಟಮ್ ರೈಫಲ್‌ನ ಬುಲೆಟ್ ರವಿಕಿರಣ್ ಕುತ್ತಿಗೆಯ ಭಾಗಕ್ಕೆ ತಗುಲಿದೆ.

ಚೆನ್ನೈನಲ್ಲಿ ಯೋಧನ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ ಸಲ್ಲಿಸಲಾಗಿದೆ. ಇಂದು ಆರ್.ಜಿ ಕ್ಯಾಂಪ್‌ಗೆ ಯೋಧ ರವಿಕಿರಣ್‌ ಪಾರ್ಥಿವ ಶರೀರ ಬರಲಿದೆ.

Missing case: ಒಂದೇ ಕುಟುಂಬದ ಮೂವರು ನಿಗೂಢ ನಾಪತ್ತೆ

ದಾವಣಗೆರೆ: ಒಂದೇ ಕುಟುಂಬದ ಮೂವರು ನಿಗೂಢವಾಗಿ ನಾಪತ್ತೆಯಾದ (missing case) ಘಟನೆ ದಾವಣೆಗೆರೆಯಲ್ಲಿ ನಡೆದಿದೆ. ನಾಪತ್ತೆಯಾದವರು ದಾವಣಗೆರೆಯ ವಿನೋಬಾ ನಗರದ 7ನೇ ಕ್ರಾಸ್‌ನಲ್ಲಿರುವ ಮನೆಯ ನಿವಾಸಿಗಳಾಗಿದ್ದು, ಇವರ ಪತ್ತೆಗಾಗಿ ಕುಟುಂಬಸ್ಥರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಪತಿ, ಪತ್ನಿ, ಮಗಳು ನಾಪತ್ತೆಯಾದವರು. ಅಂಜನ್ ಬಾಬು (34) ನಾಗವೇಣಿ (24) ಹಾಗೂ ನಕ್ಷತ್ರ (1) ಏಪ್ರಿಲ್ 12ರಂದು ಮನೆಯಿಂದ ಹೋದವರು ಇದುವರೆಗೂ ಮನೆಗೆ ವಾಪಸ್ ಬಂದಿಲ್ಲ. ಯಾವ ಕಾರಣಕ್ಕೆ ಮನೆ ಬಿಟ್ಟು ಹೋಗಿದ್ದಾರೆ ಎನ್ನುವ ನಿಖರ ಕಾರಣ ತಿಳಿದು ಬಂದಿಲ್ಲ. ಬಂಧು ಬಾಂಧವರಿಗೆ ಯಾವುದೇ ಸೂಚನೆ, ಮಾಹಿತಿ ನೀಡಿಲ್ಲ. ಯಾವುದೇ ಪತ್ರ ಬರೆದಿಟ್ಟಿಲ್ಲ. ಹೀಗಾಗಿ ಇವರು ನಿಗೂಡವಾಗಿ ನಾಪತ್ತೆಯಾಗಿರುವ ಪ್ರಕರಣ ಕುತೂಹಲ ಕೆರಳಿಸಿದೆ. ನಾಪತ್ತೆ ಬಗ್ಗೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಡ್ಯದಲ್ಲಿ ನಿಲ್ಲದ ಹೆಣ್ಣು ಭ್ರೂಣ ಹತ್ಯೆ; ಗರ್ಭಪಾತ ಮಾಡುವಾಗಲೇ ದಾಳಿ, ಮೂವರ ಅರೆಸ್ಟ್‌!

ಮಂಡ್ಯ: 2023ರ ಡಿಸೆಂಬರ್‌ ತಿಂಗಳಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣ (Female Foeticide) ರಾಜ್ಯಾದ್ಯಂತ ಸದ್ದು ಮಾಡಿತ್ತು. ಆದರೆ, ದುಷ್ಕೃತ್ಯಗಳಿಗೆ ಕೇಂದ್ರ ತಾಣವಾಗಿದ್ದ ಮಂಡ್ಯದಲ್ಲಿ ಇನ್ನೂ ಈ ದಂಧೆ ನಿಂತಂತೆ ಕಾಣುತ್ತಿಲ್ಲ. ಪಾಂಡವಪುರದ ಹೆಲ್ತ್ ಕ್ವಾರ್ಟರ್ಸ್‌ನಲ್ಲಿ ಹೆಣ್ಣು ಭ್ರೂಣ ಹತ್ಯೆ ಮಾಡುತ್ತಿದ್ದಾಗಲೇ ಅಧಿಕಾರಿಗಳು ದಾಳಿ ನಡೆಸಿ, ಮೂವರನ್ನು ಬಂಧಿಸಿರುವ ಘಟನೆ ನಡೆದಿದೆ.

ಖಚಿತ ಮಾಹಿತಿ ಮೇರೆಗೆ ಪಾಂಡವಪುರದ ಹೆಲ್ತ್ ಕ್ವಾರ್ಟರ್ಸ್‌ ಮೇಲೆ ಭಾನುವಾರ ತಡರಾತ್ರಿ ಮಂಡ್ಯ ಡಿಎಚ್‌ಒ ಮೋಹನ್ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದರು. ಆ ವೇಳೆಗೆ ಗರ್ಭಪಾತ ಮಾಡಿಸಲು ಗರ್ಭಿಣಿಗೆ ಔಷಧ ನೀಡಲಾಗಿತ್ತು, ಇದರಿಂದ ವೈದ್ಯರು ಎಷ್ಟೇ ಪ್ರಯತ್ನಿಸಿದರೂ ಮಗುವನ್ನು ಉಳಿಸಲು ಸಾಧ್ಯವಾಗಿಲ್ಲ. ಮೈಸೂರು ಮೂಲದ ಮಹಿಳೆಗೆ ಈಗಾಗಲೇ 2 ಹೆಣ್ಣು ಮಗು ಜನಿಸಿತ್ತು. 3ನೇ ಮಗು ಹೆಣ್ಣು ಮಗು ಎಂದು ತಿಳಿದು ಗರ್ಭಪಾತ ಮಾಡಿಸಿಕೊಳ್ಳಲು ಪಾಂಡವಪುರಕ್ಕೆ ಆಗಮಿಸಿದ್ದರು. ಇದೀಗ ನಾಲ್ಕು ತಿಂಗಳ ಹೆಣ್ಣು ಭ್ರೂಣ ಹತ್ಯೆ ಮಾಡಲಾಗಿದೆ.

ಗರ್ಭಪಾತ ಮಾಡಿಸಿದ ಆನಂದ್ ಮತ್ತು ಅಶ್ವಿನಿ ದಂಪತಿ ಸೇರಿ ಮೂವರನ್ನು ಬಂಧಿಸಲಾಗಿದೆ. ಪಾಂಡವಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ದಂಪತಿ ಹೊರಗುತ್ತಿಗೆ ನೌಕರರಾಗಿದ್ದಾರೆ. ಅಶ್ವಿನಿ ಡಿ ದರ್ಜೆ ನೌಕರೆಯಾಗಿದ್ದರೆ, ಆನಂದ ಆಂಬ್ಯುಲೆನ್ಸ್ ಚಾಲಕನಾಗಿದ್ದ. ತಾಲುಕು ಆರೋಗ್ಯ ಅಧಿಕಾರಿಗಳ ಕಚೇರಿ ಬಳಿಯ ಮನೆಯಲ್ಲಿ ಕೃತ್ಯ ನಡೆಸುತ್ತಿದ್ದಾಗ ದಂಪತಿಗಳು ಸಿಕ್ಕಿಬಿದ್ದಿದ್ದಾರೆ. ಆರೋಗ್ಯ ಇಲಾಖೆಯಿಂದ ನೀಡಿರುವ ವಸತಿ ಗೃಹದಲ್ಲಿ ಕಳೆದ 9 ವರ್ಷಗಳಿಂದ ದಂಪತಿ ವಾಸವಿದ್ದರು.

ಇದನ್ನೂ ಓದಿ | Marriage Cancel : ಸಿಹಿ ತಿಂಡಿ ಕಿರಿಕ್‌ಗೆ ಮದುವೆ ಮುರಿದ ವರ; ಹೋಗೊಲೋ ಎಂದಳು ವಧು!

ಪ್ರಕರಣದ ಹಿನ್ನೆಲೆಯಲ್ಲಿ ಪಾಂಡವಪುರಕ್ಕೆ ಮಂಡ್ಯ ಡಿಸಿ ಕುಮಾರ್, ಎಸ್.ಪಿ. ಯತೀಶ್ ಅವರು ಸೋಮವಾರ ಬೆಳಗ್ಗೆ ಭೇಟಿ ನೀಡಿ ಭ್ರೂಣ ಹತ್ಯೆ ನಡೆಯುತ್ತಿದ್ದ ಮನೆ ಪರಿಶೀಲನೆ ನಡೆಸಿದ್ದಾರೆ. ಆರೋಗ್ಯ ಇಲಾಖೆಯಿಂದ ನೀಡಲಾಗಿರುವ ವಸತಿ ಗೃಹವನ್ನೇ ಆಸ್ಪತ್ರೆ ಸಿಬ್ಬಂದಿಯಾದ ದಂಪತಿ, ದುಷ್ಕೃತ್ಯಕ್ಕೆ ಬಳಸಿಕೊಂಡಿದ್ದಾರೆ.

ಭ್ರೂಣಹತ್ಯೆ ದಂಧೆಯನ್ನು ಸಿಐಡಿಗೆ ಒಪ್ಪಿಸಿದ್ದ ರಾಜ್ಯ ಸರ್ಕಾರ

ರಾಜ್ಯದಲ್ಲಿ 2023ರ ಡಿಸೆಂಬರ್‌ನಲ್ಲಿ ಬೆಳಕಿಗೆ ಬಂದಿದ್ದ ಹೆಣ್ಣ ಭ್ರೂಣ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ (CID Investigation) ರಾಜ್ಯ ಸರ್ಕಾರ ಒಪ್ಪಿಸಿತ್ತು. ರಾಮನಗರ ಮಂಡ್ಯ ಮತ್ತು ಮೈಸೂರು ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಕಡೆ ಭ್ರೂಣ ಹತ್ಯೆ ಜಾಲ ಸಕ್ರಿಯವಾಗಿತ್ತು. ಬೆಂಗಳೂರಿನ ಬೈಯಪ್ಪನಹಳ್ಳಿಯ ಪೊಲೀಸರು ಪ್ರಕರಣ ದಾಖಲಿಸಿ 9ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದರು.

ಆರೋಪಿಗಳು ಮೂರು ವರ್ಷಗಳ ಅವಧಿಯಲ್ಲಿ 900ಕ್ಕೂ ಅಧಿಕ ಹೆಣ್ಣು ಭ್ರೂಣಗಳ ಹತ್ಯೆ ನಡೆಸಿರುವುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿತ್ತು. ಈ ಜಾಲ ಇನ್ನಷ್ಟು ಪ್ರದೇಶಗಳಲ್ಲಿ ವಿಸ್ತರಿಸಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಅದೇ ರೀತಿ ಪ್ರಕರಣವು ರಾಜ್ಯದಲ್ಲಿ ದೊಡ್ಡ ಮಟ್ಟದ ಸಂಚಲನ ಮೂಡಿಸಿತ್ತು. ಆರೋಗ್ಯ ಇಲಾಖೆಯ ಅಧಿಕಾರಿಗಳ ಕಣ್ತಪ್ಪಿಸಿ ನಡೆಯುತ್ತಿದ್ದ ಜಾಲವನ್ನು ಮಟ್ಟ ಹಾಕುವಲ್ಲಿ ವ್ಯವಸ್ಥೆ ವೈಫಲ್ಯವಾಗಿರುವುದು ಕೂಡ ಬಹಿರಂಗೊಂಡಿತ್ತು. ಹೀಗಾಗಿ ತಕ್ಷಣವೇ ಕ್ರಮ ಕೈಗೊಳ್ಳಲು ಮುಂದಾಗಿದ್ದ ರಾಜ್ಯ ಸರ್ಕಾರ ತನಿಖೆಯನ್ನು ಸಿಐಡಿ ತನಿಖೆಗೆ ಒಪ್ಪಿಸಿತ್ತು.

Continue Reading

ಕ್ರೈಂ

Missing case: ಒಂದೇ ಕುಟುಂಬದ ಮೂವರು ನಿಗೂಢ ನಾಪತ್ತೆ

Missing case: ಏಪ್ರಿಲ್ 12ರಂದು ಮನೆಯಿಂದ ಹೋದವರು ಇದುವರೆಗೂ ಮನೆಗೆ ವಾಪಸ್ ಬಂದಿಲ್ಲ. ಯಾವ ಕಾರಣಕ್ಕೆ ಮನೆ ಬಿಟ್ಟು ಹೋಗಿದ್ದಾರೆ ಎನ್ನುವ ನಿಖರ ಕಾರಣ ತಿಳಿದು ಬಂದಿಲ್ಲ. ಬಂಧು ಬಾಂಧವರಿಗೆ ಯಾವುದೇ ಸೂಚನೆ, ಮಾಹಿತಿ ನೀಡಿಲ್ಲ. ಯಾವುದೇ ಪತ್ರ ಬರೆದಿಟ್ಟಿಲ್ಲ.

VISTARANEWS.COM


on

missing case davanagere
Koo

ದಾವಣಗೆರೆ: ಒಂದೇ ಕುಟುಂಬದ ಮೂವರು ನಿಗೂಢವಾಗಿ ನಾಪತ್ತೆಯಾದ (family missing Case) ಘಟನೆ ದಾವಣೆಗೆರೆಯಲ್ಲಿ (Davanagere crime news) ನಡೆದಿದೆ. ನಾಪತ್ತೆಯಾದವರು ದಾವಣಗೆರೆಯ ವಿನೋಬಾ ನಗರದ 7ನೇ ಕ್ರಾಸ್‌ನಲ್ಲಿರುವ ಮನೆಯ ನಿವಾಸಿಗಳಾಗಿದ್ದು, ಇವರ ಪತ್ತೆಗಾಗಿ ಕುಟುಂಬಸ್ಥರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಪತಿ, ಪತ್ನಿ, ಮಗಳು ನಾಪತ್ತೆಯಾದವರು. ಅಂಜನ್ ಬಾಬು (34) ನಾಗವೇಣಿ (24) ಹಾಗೂ ನಕ್ಷತ್ರ (1) ಏಪ್ರಿಲ್ 12ರಂದು ಮನೆಯಿಂದ ಹೋದವರು ಇದುವರೆಗೂ ಮನೆಗೆ ವಾಪಸ್ ಬಂದಿಲ್ಲ. ಯಾವ ಕಾರಣಕ್ಕೆ ಮನೆ ಬಿಟ್ಟು ಹೋಗಿದ್ದಾರೆ ಎನ್ನುವ ನಿಖರ ಕಾರಣ ತಿಳಿದು ಬಂದಿಲ್ಲ. ಬಂಧು ಬಾಂಧವರಿಗೆ ಯಾವುದೇ ಸೂಚನೆ, ಮಾಹಿತಿ ನೀಡಿಲ್ಲ. ಯಾವುದೇ ಪತ್ರ ಬರೆದಿಟ್ಟಿಲ್ಲ. ಹೀಗಾಗಿ ಇವರು ನಿಗೂಡವಾಗಿ ನಾಪತ್ತೆಯಾಗಿರುವ ಪ್ರಕರಣ ಕುತೂಹಲ ಕೆರಳಿಸಿದೆ. ನಾಪತ್ತೆ ಬಗ್ಗೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಲ ವಸೂಲಿಗೆ ಹೆಂಡತಿ- ಮಗನಿಗೆ ಗೃಹಬಂಧನ, ಅವಮಾನದಿಂದ ರೈತ ಆತ್ಮಹತ್ಯೆ, ಎಂಥ ರಾಕ್ಷಸಿ ಇವಳು!

ಬೆಳಗಾವಿ: ರೈತರೊಬ್ಬರು ಮಾಡಿದ ಸಾಲ ಕಟ್ಟಲಿಲ್ಲ (farmer loan) ಎಂದು ಸಾಲ ನೀಡಿದ ಮಹಿಳೆ ಆ ರೈತನ ಪತ್ನಿ ಹಾಗೂ ಪುತ್ರನಿಗೆ ಅನ್ನ ನೀರು ಕೊಡದೆ ಗೃಹಬಂಧನದಲ್ಲಿಟ್ಟ, ಇದರಿಂದ ನೊಂದ ರೈತ ಆತ್ಮಹತ್ಯೆ (farmer suicide, farmer self harming) ಮಾಡಿಕೊಂಡ ಮನ ಕಲಕುವ ಘಟನೆ ಬೆಳಗಾವಿ (belagavi news) ಜಿಲ್ಲೆಯ ಹುಕ್ಕೇರಿ ತಾಲೂಕಿನ ಇಸ್ಲಾಂಪುರ ಗ್ರಾಮದಲ್ಲಿ ನಡೆದಿದೆ.

ಸಚಿವ ಸತೀಶ್ ಜಾರಕಿಹೊಳಿ ಪ್ರತಿನಿಧಿಸುವ ಯಮಕನಮರಡಿ ಕ್ಷೇತ್ರದಲ್ಲಿ ಈ ಅಮಾನವೀಯ ಕೃತ್ಯ ನಡೆದಿದೆ. ಭೀಕರ ಬರಕ್ಕೆ ಕೈಕೊಟ್ಟ ಬೆಳೆಗಳಿಂದಾಗಿ ಉಪಜೀವನಕ್ಕೆ ರೈತ ಸಾಲದ ಮೊರೆ ಹೋಗಿದ್ದರು. ಸಾಲ ಮರುಪಾವತಿ ವಿಳಂಬವಾಗಿದ್ದಕ್ಕೆ ರೈತನ ಪತ್ನಿ, ಪುತ್ರನಿಗೆ ಗೃಹಬಂಧನದ ಶಿಕ್ಷೆಯನ್ನು ಸಾಲ ನೀಡಿದ ಮಹಿಳೆ ವಿಧಿಸಿದ್ದಳು. ಇದರಿಂದ ಮನನೊಂದ ರೈತ ರಾಜು ಖೋತಗಿ ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇಸ್ಲಾಂಪುರ ಗ್ರಾಮದ ಸಿದ್ದವ್ವ ಬಯ್ಯನವರ ಎಂಬ ಹೆಸರಿನ ವಿಕೃತ ಮಹಿಳೆಯಿಂದ ಈ ಕೃತ್ಯ ನಡೆದಿದೆ. ರಾಜು ಖೋತಗಿ ತಮ್ಮ ಜೀವನ ‌ನಿರ್ವಹಣೆಗೆ ಸಿದ್ದವ್ವ ಬಳಿ ಐದು ತಿಂಗಳ ಹಿಂದೆ ಒಂದೂವರೆ ಲಕ್ಷ ರೂ. ಸಾಲ ಪಡೆದಿದ್ದರು. ಪಡೆದಿದ್ದ ಸಾಲಕ್ಕೆ ಪ್ರತಿ ತಿಂಗಳು ಶೇ. 10ರಷ್ಟು ಬಡ್ಡಿ ಸಹ ತುಂಬುತ್ತಿದ್ದರು. ಎರಡು ದಿನಗಳ ಹಿಂದೆ ಏಕಾಏಕಿ ಮನೆಗೆ ಕರೆದು ಕೊಟ್ಟ ಸಾಲ ಮರಳಿಸುವಂತೆ ಸಿದ್ದವ್ವ ತಾಕೀತು ಮಾಡಿದ್ದಾಳೆ. ರಾಜು ಸಾಲ ಮರಳಿಸಲು ಒಂದೆರಡು ದಿನ ಕಾಲಾವಕಾಶ ಕೇಳಿದ್ದರು.

ಇದಕ್ಕೆ ಒಪ್ಪದೇ, ಸಾಲ ಮರಳಿಸುವವರೆಗೂ ಪುತ್ರ ಬಸವರಾಜ ಖೋತಗಿಯನ್ನು ತನ್ನ ಮನೆಯಲ್ಲಿ ಬಿಟ್ಟು ಹೋಗುವಂತೆ ಸಿದ್ದವ್ವ ತಾಕೀತು ಮಾಡಿದ್ದಳು. ಎರಡು ದಿನವಾದರೂ ಪುತ್ರನನ್ನು ಬಿಡದಾಗ ಸಿದ್ದವ್ವಳ ಮನೆಗೆ ಕೇಳಲು ರಾಜು-ದುರ್ಗವ್ವ ಹೋಗಿದ್ದರು. ಈ ವೇಳೆ ಬಸವರಾಜ್‌ನನ್ನು ಬಿಟ್ಟು ರಾಜು ಖೋತಗಿ, ಪತ್ನಿ ದುರ್ಗವ್ವರನ್ನು ಮನೆಯಲ್ಲಿ ಕೂರಿಸಿ ಶಿಕ್ಷೆ ವಿಧಿಸಿದ್ದಾಳೆ. ಮೂವರನ್ನೂ ಹನಿ ನೀರು, ತುತ್ತು ಅನ್ನ ನೀಡದೇ 2 ದಿನ ಗೃಹಬಂಧನದಲ್ಲಿಟ್ಟಿದ್ದಾಳೆ.

ಇದರಿಂದ ಮನನೊಂದು ಮನೆಗೆ ಬಂದ ರಾಜು ಖೋತಗಿ ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ದೂರು ನೀಡಲು ಹೋದರೆ, ಸಿದ್ದವ್ವಳ ಅನ್ಯಾಯದ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಳ್ಳದೇ ಸತಾಯಿಸಿದ್ದಾರೆ. ಬೆಳಗ್ಗೆಯಿಂದ ಠಾಣೆಯಲ್ಲಿ ಕೂರಿಸಿಕೊಂಡು ರಾತ್ರಿ ವೇಳೆ ದುರ್ಬಲ ಸೆಕ್ಷನ್‌ನಡಿ ದೂರು ದಾಖಲಿಸಿಕೊಂಡಿದ್ದಾರೆ ಎಂದು ಯಮಕನಮರಡಿ ಠಾಣೆ ಪೊಲೀಸರ ವಿರುದ್ಧ ಪತಿ ಕಳೆದುಕೊಂಡ ದುರ್ಗವ್ವ, ಪೋಷಕರು ಆರೋಪಿಸಿದ್ದಾರೆ.

ಮಂಡ್ಯದಲ್ಲಿ ನಿಲ್ಲದ ಹೆಣ್ಣು ಭ್ರೂಣ ಹತ್ಯೆ; ಗರ್ಭಪಾತ ಮಾಡುವಾಗಲೇ ದಾಳಿ, ಮೂವರ ಅರೆಸ್ಟ್‌!

ಮಂಡ್ಯ: 2023ರ ಡಿಸೆಂಬರ್‌ ತಿಂಗಳಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣ (Female Foeticide) ರಾಜ್ಯಾದ್ಯಂತ ಸದ್ದು ಮಾಡಿತ್ತು. ಆದರೆ, ದುಷ್ಕೃತ್ಯಗಳಿಗೆ ಕೇಂದ್ರ ತಾಣವಾಗಿದ್ದ ಮಂಡ್ಯದಲ್ಲಿ ಇನ್ನೂ ಈ ದಂಧೆ ನಿಂತಂತೆ ಕಾಣುತ್ತಿಲ್ಲ. ಪಾಂಡವಪುರದ ಹೆಲ್ತ್ ಕ್ವಾರ್ಟರ್ಸ್‌ನಲ್ಲಿ ಹೆಣ್ಣು ಭ್ರೂಣ ಹತ್ಯೆ ಮಾಡುತ್ತಿದ್ದಾಗಲೇ ಅಧಿಕಾರಿಗಳು ದಾಳಿ ನಡೆಸಿ, ಮೂವರನ್ನು ಬಂಧಿಸಿರುವ ಘಟನೆ ನಡೆದಿದೆ.

ಖಚಿತ ಮಾಹಿತಿ ಮೇರೆಗೆ ಪಾಂಡವಪುರದ ಹೆಲ್ತ್ ಕ್ವಾರ್ಟರ್ಸ್‌ ಮೇಲೆ ಭಾನುವಾರ ತಡರಾತ್ರಿ ಮಂಡ್ಯ ಡಿಎಚ್‌ಒ ಮೋಹನ್ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದರು. ಆ ವೇಳೆಗೆ ಗರ್ಭಪಾತ ಮಾಡಿಸಲು ಗರ್ಭಿಣಿಗೆ ಔಷಧ ನೀಡಲಾಗಿತ್ತು, ಇದರಿಂದ ವೈದ್ಯರು ಎಷ್ಟೇ ಪ್ರಯತ್ನಿಸಿದರೂ ಮಗುವನ್ನು ಉಳಿಸಲು ಸಾಧ್ಯವಾಗಿಲ್ಲ. ಮೈಸೂರು ಮೂಲದ ಮಹಿಳೆಗೆ ಈಗಾಗಲೇ 2 ಹೆಣ್ಣು ಮಗು ಜನಿಸಿತ್ತು. 3ನೇ ಮಗು ಹೆಣ್ಣು ಮಗು ಎಂದು ತಿಳಿದು ಗರ್ಭಪಾತ ಮಾಡಿಸಿಕೊಳ್ಳಲು ಪಾಂಡವಪುರಕ್ಕೆ ಆಗಮಿಸಿದ್ದರು. ಇದೀಗ ನಾಲ್ಕು ತಿಂಗಳ ಹೆಣ್ಣು ಭ್ರೂಣ ಹತ್ಯೆ ಮಾಡಲಾಗಿದೆ.

ಗರ್ಭಪಾತ ಮಾಡಿಸಿದ ಆನಂದ್ ಮತ್ತು ಅಶ್ವಿನಿ ದಂಪತಿ ಸೇರಿ ಮೂವರನ್ನು ಬಂಧಿಸಲಾಗಿದೆ. ಪಾಂಡವಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ದಂಪತಿ ಹೊರಗುತ್ತಿಗೆ ನೌಕರರಾಗಿದ್ದಾರೆ. ಅಶ್ವಿನಿ ಡಿ ದರ್ಜೆ ನೌಕರೆಯಾಗಿದ್ದರೆ, ಆನಂದ ಆಂಬ್ಯುಲೆನ್ಸ್ ಚಾಲಕನಾಗಿದ್ದ. ತಾಲುಕು ಆರೋಗ್ಯ ಅಧಿಕಾರಿಗಳ ಕಚೇರಿ ಬಳಿಯ ಮನೆಯಲ್ಲಿ ಕೃತ್ಯ ನಡೆಸುತ್ತಿದ್ದಾಗ ದಂಪತಿಗಳು ಸಿಕ್ಕಿಬಿದ್ದಿದ್ದಾರೆ. ಆರೋಗ್ಯ ಇಲಾಖೆಯಿಂದ ನೀಡಿರುವ ವಸತಿ ಗೃಹದಲ್ಲಿ ಕಳೆದ 9 ವರ್ಷಗಳಿಂದ ದಂಪತಿ ವಾಸವಿದ್ದರು.

ಇದನ್ನೂ ಓದಿ | Marriage Cancel : ಸಿಹಿ ತಿಂಡಿ ಕಿರಿಕ್‌ಗೆ ಮದುವೆ ಮುರಿದ ವರ; ಹೋಗೊಲೋ ಎಂದಳು ವಧು!

ಪ್ರಕರಣದ ಹಿನ್ನೆಲೆಯಲ್ಲಿ ಪಾಂಡವಪುರಕ್ಕೆ ಮಂಡ್ಯ ಡಿಸಿ ಕುಮಾರ್, ಎಸ್.ಪಿ. ಯತೀಶ್ ಅವರು ಸೋಮವಾರ ಬೆಳಗ್ಗೆ ಭೇಟಿ ನೀಡಿ ಭ್ರೂಣ ಹತ್ಯೆ ನಡೆಯುತ್ತಿದ್ದ ಮನೆ ಪರಿಶೀಲನೆ ನಡೆಸಿದ್ದಾರೆ. ಆರೋಗ್ಯ ಇಲಾಖೆಯಿಂದ ನೀಡಲಾಗಿರುವ ವಸತಿ ಗೃಹವನ್ನೇ ಆಸ್ಪತ್ರೆ ಸಿಬ್ಬಂದಿಯಾದ ದಂಪತಿ, ದುಷ್ಕೃತ್ಯಕ್ಕೆ ಬಳಸಿಕೊಂಡಿದ್ದಾರೆ.

ಭ್ರೂಣಹತ್ಯೆ ದಂಧೆಯನ್ನು ಸಿಐಡಿಗೆ ಒಪ್ಪಿಸಿದ್ದ ರಾಜ್ಯ ಸರ್ಕಾರ

ರಾಜ್ಯದಲ್ಲಿ 2023ರ ಡಿಸೆಂಬರ್‌ನಲ್ಲಿ ಬೆಳಕಿಗೆ ಬಂದಿದ್ದ ಹೆಣ್ಣ ಭ್ರೂಣ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ (CID Investigation) ರಾಜ್ಯ ಸರ್ಕಾರ ಒಪ್ಪಿಸಿತ್ತು. ರಾಮನಗರ ಮಂಡ್ಯ ಮತ್ತು ಮೈಸೂರು ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಕಡೆ ಭ್ರೂಣ ಹತ್ಯೆ ಜಾಲ ಸಕ್ರಿಯವಾಗಿತ್ತು. ಬೆಂಗಳೂರಿನ ಬೈಯಪ್ಪನಹಳ್ಳಿಯ ಪೊಲೀಸರು ಪ್ರಕರಣ ದಾಖಲಿಸಿ 9ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದರು.

ಆರೋಪಿಗಳು ಮೂರು ವರ್ಷಗಳ ಅವಧಿಯಲ್ಲಿ 900ಕ್ಕೂ ಅಧಿಕ ಹೆಣ್ಣು ಭ್ರೂಣಗಳ ಹತ್ಯೆ ನಡೆಸಿರುವುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿತ್ತು. ಈ ಜಾಲ ಇನ್ನಷ್ಟು ಪ್ರದೇಶಗಳಲ್ಲಿ ವಿಸ್ತರಿಸಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಅದೇ ರೀತಿ ಪ್ರಕರಣವು ರಾಜ್ಯದಲ್ಲಿ ದೊಡ್ಡ ಮಟ್ಟದ ಸಂಚಲನ ಮೂಡಿಸಿತ್ತು. ಆರೋಗ್ಯ ಇಲಾಖೆಯ ಅಧಿಕಾರಿಗಳ ಕಣ್ತಪ್ಪಿಸಿ ನಡೆಯುತ್ತಿದ್ದ ಜಾಲವನ್ನು ಮಟ್ಟ ಹಾಕುವಲ್ಲಿ ವ್ಯವಸ್ಥೆ ವೈಫಲ್ಯವಾಗಿರುವುದು ಕೂಡ ಬಹಿರಂಗೊಂಡಿತ್ತು. ಹೀಗಾಗಿ ತಕ್ಷಣವೇ ಕ್ರಮ ಕೈಗೊಳ್ಳಲು ಮುಂದಾಗಿದ್ದ ರಾಜ್ಯ ಸರ್ಕಾರ ತನಿಖೆಯನ್ನು ಸಿಐಡಿ ತನಿಖೆಗೆ ಒಪ್ಪಿಸಿತ್ತು.

ಇದನ್ನೂ ಓದಿ: Self Harming: ಕಬ್ಬಿಗೆರೆ ಗೊಲ್ಲರಹಟ್ಟಿಯಲ್ಲಿ ಸಾಲದ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ

Continue Reading

ಪ್ರಮುಖ ಸುದ್ದಿ

Corona Virus: ಸಿಂಗಾಪುರದಲ್ಲಿ ಕೋವಿಡ್‌-19 ಹೊಸ ಅಲೆ, ರಾಜ್ಯದಲ್ಲಿ ಅಲರ್ಟ್‌, ಇಂದು ಆರೋಗ್ಯ ಇಲಾಖೆ ಸಭೆ

Corona Virus: ಸಿಂಗಾಪುರದಲ್ಲಿ ಒಂದೇ ವಾರದಲ್ಲಿ 25 ಸಾವಿರ ಕೋವಿಡ್ ಕೇಸ್ ಖಚಿತವಾಗಿದ್ದು, ಇದರಿಂದ ಸಿಲಿಕಾನ್ ಸಿಟಿ ಬೆಂಗಳೂರು ಅಲರ್ಟ್‌ ಆಗಿದೆ. ಇದರ ಜೊತೆಗೆ ಮಹಾರಾಷ್ಟ್ರದಲ್ಲಿಯೂ ಕೋವಿಡ್ ಒಮಿಕ್ರಾನ್ ರೂಪಾಂತರಿ ವೈರಸ್‌ನ 91 ಕೇಸ್‌ ಪತ್ತೆಯಾಗಿವೆ. ಹೀಗಾಗಿ, ಮುನ್ನೆಚ್ಚರಿಕೆ ವಹಿಸಲು ಇಂದು ಕೇಂದ್ರ ಆರೋಗ್ಯ ಇಲಾಖೆಯ ಜೊತೆಗೆ ರಾಜ್ಯ ಆರೋಗ್ಯ ಇಲಾಖೆ ಸಭೆ ನಡೆಯುತ್ತಿದೆ.

VISTARANEWS.COM


on

corona virus wave in singapore
Koo

ಬೆಂಗಳೂರು: ಸಿಂಗಾಪುರದಲ್ಲಿ (Singapore) ಹೊಸ ಕೋವಿಡ್‌- 19 (Covid 19 wave) ಅಲೆ ಪತ್ತೆಯಾಗಿದೆ. ಒಂದೇ ವಾರದಲ್ಲಿ ಕೊರೊನಾ ವೈರಸ್‌ (Corona Virus) ಕೇಸುಗಳ ಸಂಖ್ಯೆ ದ್ವಿಗುಣಗೊಂಡಿದ್ದು, ಮತ್ತೆ ಮಾಸ್ಕ್‌ (Mask) ಧರಿಸಲು ಸಲಹೆ ನೀಡಲಾಗಿದೆ. ರಾಜ್ಯದಲ್ಲೂ ಆರೋಗ್ಯ ಇಲಾಖೆ (Health department) ಅಲರ್ಟ್‌ ಆಗಿದ್ದು, ಪರಿಸ್ಥಿತಿಯನ್ನು ಗಮನಿಸುತ್ತಿದೆ.

ಸಿಂಗಾಪುರದಲ್ಲಿ ಒಂದೇ ವಾರದಲ್ಲಿ 25 ಸಾವಿರ ಕೋವಿಡ್ ಕೇಸ್ ಖಚಿತವಾಗಿದ್ದು, ಇದರಿಂದ ಸಿಲಿಕಾನ್ ಸಿಟಿ ಬೆಂಗಳೂರು ಅಲರ್ಟ್‌ ಆಗಿದೆ. ಇದರ ಜೊತೆಗೆ ಮಹಾರಾಷ್ಟ್ರದಲ್ಲಿಯೂ ಕೋವಿಡ್ ಒಮಿಕ್ರಾನ್ ರೂಪಾಂತರಿ ವೈರಸ್‌ನ 91 ಕೇಸ್‌ ಪತ್ತೆಯಾಗಿವೆ. ಹೀಗಾಗಿ, ಮುನ್ನೆಚ್ಚರಿಕೆ ವಹಿಸಲು ಇಂದು ಕೇಂದ್ರ ಆರೋಗ್ಯ ಇಲಾಖೆಯ ಜೊತೆಗೆ ರಾಜ್ಯ ಆರೋಗ್ಯ ಇಲಾಖೆ ಸಭೆ ನಡೆಯುತ್ತಿದೆ.

ಸಿಂಗಾಪುರದಿಂದ ಬೆಂಗಳೂರು ಹಾಗೂ ಮುಂಬಯಿಗೆ ಆಗಮಿಸುವ ವಿಮಾನಯಾನಿಗಳ ಸಂಖ್ಯೆ ಹೆಚ್ಚು ಇದ್ದು, ಈ ಹಿನ್ನೆಲೆಯಲ್ಲಿ ಮುಂದಿನ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಚರ್ಚೆ ನಡೆಯಲಿದೆ. ಆಯ್ದ ಯಾನಿಗಳ ಆರೋಗ್ಯ ತಪಾಸಣೆ, ಮಾಸ್ಕ್‌ ಧಾರಣೆ ಸೇರಿದಂತೆ ಹಲವು ಕ್ರಮಗಳ ಬಗೆಗೆ ಚರ್ಚಿಸಲಾಗುತ್ತಿದೆ.

ಸಿಂಗಾಪುರದಲ್ಲಿ ಏನಾಗಿದೆ?

ಸಿಂಗಾಪುರದ ಆರೋಗ್ಯ ಸಚಿವ ಓಂಗ್ ಯೆ ಕುಂಗ್, ಸಾರ್ವಜನಿಕ ತಾಣಗಳಲ್ಲಿ ಮುಖವಾಡಗಳನ್ನು ಧರಿಸುವಂತೆ ಸಲಹೆ ನೀಡಿದ್ದಾರೆ. ಸಾಮಾಜಿಕ ನಿರ್ಬಂಧಗಳ ಕುರಿತು ಮಾತನಾಡಿದ ಸಚಿವ ಓಂಗ್, ಸದ್ಯಕ್ಕೆ ಯಾವುದೇ ರೀತಿಯ ಸಾಮಾಜಿಕ ನಿರ್ಬಂಧಗಳ ಯೋಚನೆಯಿಲ್ಲ ಎಂದಿದ್ದಾರೆ. ಏಕೆಂದರೆ ಸಿಂಗಾಪುರದಲ್ಲಿ ಕೋವಿಡ್ -19 ಅನ್ನು ಸ್ಥಳೀಯ ಕಾಯಿಲೆ ಎಂದು ಪರಿಗಣಿಸಲಾಗುತ್ತದೆ.

ಕೋವಿಡ್‌ನ ಹೊಸ ಅಲೆಯ ಪಥವನ್ನು ಸರ್ಕಾರವು ನಿಕಟವಾಗಿ ಗಮನಿಸುತ್ತಿದೆ ಎಂದು ಸಿಂಗಾಪುರದ ಆರೋಗ್ಯ ಸಚಿವಾಲಯ ಹೇಳಿದೆ. ಸಚಿವಾಲಯದ ಪ್ರಕಾರ, ಕೋವಿಡ್ -19 ಪ್ರಕರಣಗಳ ಅಂದಾಜು ಸಂಖ್ಯೆಯು ಹಿಂದಿನ ವಾರದಲ್ಲಿದ್ದ 13,700ರಿಂದ 25,900ಕ್ಕೆ ದ್ವಿಗುಣಗೊಂಡಿದೆ. ಅದೇ ಅವಧಿಯಲ್ಲಿ ಸರಾಸರಿ ದೈನಂದಿನ ಕೋವಿಡ್ -19 ಆಸ್ಪತ್ರೆಗೆ ದಾಖಲು ಕೇಸ್‌ಗಳು 181ರಿಂದ ಸರಿಸುಮಾರು 250ಕ್ಕೆ ಏರಿದೆ ಎಂದು ಸಚಿವಾಲಯ ವರದಿ ಮಾಡಿದೆ.

ಆಸ್ಪತ್ರೆಯ ಹಾಸಿಗೆ ಸಾಮರ್ಥ್ಯವನ್ನು ಸಂರಕ್ಷಿಸಲು, ಸಾರ್ವಜನಿಕ ಆಸ್ಪತ್ರೆಗಳಿಗೆ ತುರ್ತು-ಅಲ್ಲದ ಶಸ್ತ್ರಚಿಕಿತ್ಸೆಗಳನ್ನು ಕಡಿಮೆ ಮಾಡಲು ಮತ್ತು ಸೂಕ್ತವಾದ ರೋಗಿಗಳನ್ನು ಆರೈಕೆ ಸೌಲಭ್ಯಗಳಿಗೆ ವರ್ಗಾಯಿಸಲು ಸೂಚನೆ ನೀಡಲಾಗಿದೆ. “ನಾವು ಅಲೆಯ ಆರಂಭಿಕ ಭಾಗದಲ್ಲಿದ್ದೇವೆ. ಪ್ರಮಾಣ ಸ್ಥಿರವಾಗಿ ಏರುತ್ತಿದೆ” ಎಂದು ಆರೋಗ್ಯ ಸಚಿವ ಓಂಗ್ ಯೆ ಕುಂಗ್ ಹೇಳಿದ್ದಾರೆ.

ಕೋವಾಕ್ಸಿನ್‌ ಲಸಿಕೆ ಪಡೆದವರಿಗೂ ಬಿಗ್‌ ಶಾಕ್‌! ಆಘಾತಕಾರಿ ವರದಿ ಔಟ್‌

ನವದೆಹಲಿ: ಕೊರೋನಾ ವೈರಸ್‌(Corona Virus) ಎದುರಿಸಲು ತೆಗೆದುಕೊಂಡಿರುವ ಕೋವಿಶೀಲ್ಡ್‌(Covishield Vaccine) ಲಸಿಕೆ ಅಡ್ಡಪರಿಣಾಮ(Side Effects) ಹೊಂದಿದೆ ಎಂಬುದು ಬಯಲಾದ ಬೆನ್ನಲ್ಲಿ ಕೋವಾಕ್ಸಿನ್‌ (Covaxin) ತೆಗೆದುಕೊಂಡಿರುವ ಜನ ತಮಗೇನು ಅಪಾಯವಿಲ್ಲ ಎಂದು ನಿರಾಳವಾಗಿದ್ದರು. ಆದರೆ ಇದೀಗ ವರದಿಯೊಂದು ಹೊರಬಿದ್ದಿದ್ದು, ಕೋವಾಕ್ಸಿನ್‌ ಪಡೆದಿರುವ ಜನರಿಗೆ ಬಿಗ್‌ ಶಾಕ್‌ ಕೊಟ್ಟಿದೆ. ಕೋವಾಕ್ಸಿನ್‌ ಲಸಿಕೆಯೂ ಅಡ್ಡಪರಿಣಾಮ ಹೊಂದಿದೆ ಎಂಬುದು ಅಧ್ಯಯನದಲ್ಲಿ ಬಯಲಾಗಿದೆ.

ಇತ್ತೀಚೆಗೆ ಕೋವಿಶೀಲ್ಡ್ ಅನ್ನು ಅಭಿವೃದ್ಧಿಪಡಿಸಿದ ಬ್ರಿಟಿಷ್ ಕಂಪನಿಯಾದ ಅಸ್ಟ್ರಾಜೆನೆಕಾ ಇತ್ತೀಚೆಗೆ ಅಲ್ಲಿನ ನ್ಯಾಯಾಲಯದಲ್ಲಿ ಅದರ ಲಸಿಕೆ ಕೆಲವು ಜನರಲ್ಲಿ ಗಂಭೀರ ಕಾಯಿಲೆಗೆ ಕಾರಣವಾಗಬಹುದು ಎಂದು ಒಪ್ಪಿಕೊಂಡಿತ್ತು. ಇದೀಗ ಅದೇ ರೀತಿ ನಮ್ಮ ದೇಶದಲ್ಲಿ ಭಾರತ್ ಬಯೋಟೆಕ್ ಕಂಪನಿ ಅಭಿವೃದ್ಧಿಪಡಿಸಿರುವ ‘ಕೋವಾಕ್ಸಿನ್’ ಲಸಿಕೆಯ ಅಡ್ಡ ಪರಿಣಾಮಗಳ ಬಗ್ಗೆ ವರದಿ ಬಂದಿದೆ. ಈ ಲಸಿಕೆಯನ್ನು ಪಡೆದ ಸುಮಾರು ಒಂದು ವರ್ಷದ ನಂತರ, ಅದರ ಅಡ್ಡಪರಿಣಾಮಗಳು ಸಾಕಷ್ಟು ಜನರಲ್ಲಿ ಕಂಡುಬಂದಿದೆ ಎಂದು ಹೇಳಲಾಗಿದೆ.

BHU ಅಧ್ಯಯನ ವರದಿಯಲ್ಲಿ ಬಹಿರಂಗ

ಬನಾರಸ್‌ ಹಿಂದೂ ವಿಶ್ವವಿದ್ಯಾಲಯ ನಡೆಸಿದ ಅಧ್ಯಯನದಲ್ಲಿ ಈ ಅಂಶ ಬೆಳಕಿಗೆ ಬಂದಿದ್ದು, ಈ ವರದಿಯ ಪ್ರಕಾರ, ಕೊವಾಕ್ಸಿನ್‌ ತೆಗೆದುಕೊಂಡಿರುವ ಹದಿ ಹರೆಯದವರು ಮತು ಯುವಕರಲ್ಲಿ ಈ ಅಡ್ಡ ಪರಿಣಾಮ ಹೆಚ್ಚಾಗಿ ಕಂಡು ಬಂದಿದೆ. ಈ ಸಂಶೋಧನೆಗಾಗಿ ಒಟ್ಟು 1024 ಜನರನ್ನು ಅಧ್ಯಯನಕ್ಕೆ ಒಳಪಡಿಸಲಾಗಿತ್ತು. ಅವರಲ್ಲಿ 635 ಹದಿಹರೆಯದವರು ಮತ್ತು 391 ಯುವಕರು ಇದ್ದರು. 304 ಹದಿಹರೆಯದವರು ಅಥವಾ ಸುಮಾರು 48 ಪ್ರತಿಶತದಷ್ಟು ಜನರು ಶ್ವಾಸನಾಳದ ಸೋಂಕುಗೆ ತುತ್ತಾಗಿರುವುದು ಅಧ್ಯಯನದಲ್ಲಿ ಬಯಲಾಗಿದೆ.

ಇದನ್ನೂ ಓದಿ: CoWIN Certificates: ಕೋವಿಡ್‌ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಔಟ್‌; ಕೇಂದ್ರ ಹೇಳೋದೇನು?

Continue Reading

ಪ್ರಮುಖ ಸುದ್ದಿ

Board Exam: ಮಕ್ಕಳೇ ನೀವು ಪಾಸ್!‌ 5, 8 ಮತ್ತು 9ನೇ ತರಗತಿಯ ಎಲ್ಲ ಮಕ್ಕಳು ಉತ್ತೀರ್ಣ

Board Exam: ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಈಗಾಗಲೇ ಶಾಲೆಗಳಲ್ಲಿ ನಡೆದಿರುವ FA-1, FA-2, FA-3, FA-4, SA-1 ಗಳ ಮೌಲ್ಯಾಂಕನ ಆಧಾರದ ಮೇಲೆ ಮಕ್ಕಳನ್ನು ಮುಂದಿನ ಶೈಕ್ಷಣಿಕ ತರಗತಿಗೆ ಮುಂದುವರೆಸಲು ಅವಕಾಶ ಕಲ್ಪಿಸುವಂತೆ ಶಿಕ್ಷಣ ಇಲಾಖೆಯು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಗೆ ಸೂಚಿಸಿ ಆದೇಶ ಹೊರಡಿಸಿದೆ.

VISTARANEWS.COM


on

board exam public exam
Koo

ಬೆಂಗಳೂರು: 5, 8 ಮತ್ತು 9ನೇ ತರಗತಿಯ (5, 8, 9 class exam) ಎಲ್ಲ ಮಕ್ಕಳನ್ನು ಉತ್ತೀರ್ಣಗೊಳಿಸಿ ಶಿಕ್ಷಣ ಇಲಾಖೆ (Education department) ಆದೇಶ ನೀಡಿದೆ. ಈ ತರಗತಿಗಳ ಪಬ್ಲಿಕ್‌ ಪರೀಕ್ಷೆ ಫಲಿತಾಂಶ (board exam result) ಪ್ರಕಟಕ್ಕೆ ಸುಪ್ರೀಂ ಕೋರ್ಟ್ (supreme court) ತಡೆ ನೀಡಿರುವ ಹಿನ್ನೆಲೆಯಲ್ಲಿ ಈ ತರಗತಿಯ ಮಕ್ಕಳ ಮುಂದಿನ ಶೈಕ್ಷಣಿಕ ವರ್ಷದ (academic year) ಭವಿಷ್ಯ ಅತಂತ್ರಕ್ಕೆ ಸಿಲುಕಿತ್ತು. ಇಲಾಖೆಯ ನೂತನ ಆದೇಶದಂತೆ ಈ ಎಲ್ಲಾ ವಿದ್ಯಾರ್ಥಿಗಳು ಮುಂದಿನ ತರಗತಿಗೆ ಪ್ರವೇಶ ಪಡೆಯಲು ಅವಕಾಶ ಪಡೆದುಕೊಂಡಿದ್ದಾರೆ.

5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಈ ಸಂತಸದ ಸುದ್ದಿಯನ್ನು ನೀಡಿದೆ. ತರಗತಿವಾರು ಮೌಲ್ಯಾಂಕನದ ವಿಶ್ಲೇಷಣೆ ಮಾಡಿ, ವಿದ್ಯಾರ್ಥಿಗಳನ್ನು ಮುಂದಿನ ತರಗತಿಗಳಿಗೆ ದಾಖಲಿಸುವಂತೆ ಅವಕಾಶ ಕಲ್ಪಿಸಿ ಇಲಾಖೆ ಆದೇಶಿಸಿದೆ.

2023-24ನೇ ಸಾಲಿನ 5, 8 ಮತ್ತು 9ನೇ ತರಗತಿ SA-2 ಮೌಲ್ಯಾಂಕನ ಕಾರ್ಯ ಮುಗಿದಿದ್ದು, ರಾಜ್ಯದ ಎಲ್ಲ ಶಾಲೆಗಳಲ್ಲಿ 8.4.2024ರಂದು ಫಲಿತಾಂಶವನ್ನು ಪ್ರಕಟಿಸಲು ತಿಳಿಸಲಾಗಿತ್ತು. ನಂತರದಲ್ಲಿ ಫಲಿತಾಂಶವನ್ನು ಪ್ರಕಟಿಸಲು ಸರ್ವೋಚ್ಛ ನ್ಯಾಯಾಲಯವು ತಡೆಯಾಜ್ಞೆ ನೀಡಿತ್ತು. ಈ ಬಗ್ಗೆ ಅಂತಿಮ ತೀರ್ಪು ಬಾಕಿ ಇದೆ. ಇದರಿಂದಾಗಿ ಅತಂತ್ರಕ್ಕೆ ಸಿಲುಕಿದ್ದ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ರಿಲೀಫ್ ನೀಡಿದ್ದು, ಮುಂದಿನ ತರಗತಿಗಳಿಗೆ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಿದೆ.

ಪ್ರಸ್ತುತ 2023-24ನೇ ಸಾಲಿನ ಶೈಕ್ಷಣಿಕ ವರ್ಷ ಅಂತ್ಯಗೊಂಡಿದ್ದು, 29-05-2024ರಿಂದ 2024-25ನೇ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದೆ. 2023-24ನೇ ಸಾಲಿನಲ್ಲಿ ವ್ಯಾಸಂಗ ಮಾಡಿದ 5, 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸದೇ ಇದ್ದರೆ ಅವರನ್ನು ಮುಂದಿನ ಶೈಕ್ಷಣಿಕ ವರ್ಷಕ್ಕೆ/ತರಗತಿಗೆ ಶಾಲಾ ಪ್ರವೇಶ/ದಾಖಲಾತಿ ಮಾಡಲು, ಪ್ರವೇಶ ಶುಲ್ಕ ಪಾವತಿಸಲು ಹಾಗೂ ಬೇರೆ ಸ್ಥಳಗಳಿಗೆ ವರ್ಗಾವಣೆ ಹೊಂದಿರುವ ಪ್ರಯುಕ್ತ ಮಕ್ಕಳ ವರ್ಗಾವಣೆ ಪ್ರಮಾಣಪತ್ರ, ಪ್ರಗತಿ ಪತ್ರ ಮತ್ತು ವ್ಯಾಸಂಗ ಪ್ರಮಾಣಪತ್ರಗಳನ್ನು ವಿತರಿಸಲು ಸಾಧ್ಯವಾಗದು. ಈ ಹಿನ್ನೆಲೆಯಲ್ಲಿ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಅಗತ್ಯ ಕ್ರಮ ವಹಿಸುವಂತೆ ಪೋಷಕರು ಮನವಿ ಮಾಡಿದ್ದರು. ಅದರಂತೆ ಮಕ್ಕಳ ಶೈಕ್ಷಣಿಕ ಭವಿಷ್ಯ ಸುಗಮಗೊಳಿಸಲು ಕ್ರಮವಹಿಸಿ ಇಲಾಖೆ ಆದೇಶ ಹೊರಡಿಸಿದೆ.

ಸರ್ವೋಚ್ಛ ನ್ಯಾಯಾಲಯದ ಮಧ್ಯಂತರ ತೀರ್ಪಿನಂತೆ, 2023-24ನೇ ಸಾಲಿನ 5, 8 ಮತ್ತು 9ನೇ ತರಗತಿ SA-2 ಮೌಲ್ಯಾಂಕನವನ್ನು ತಡೆ ಹಿಡಿದಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಈಗಾಗಲೇ ಶಾಲೆಗಳಲ್ಲಿ ನಡೆದಿರುವ FA-1, FA-2, FA-3, FA-4, SA-1 ಗಳ ಮೌಲ್ಯಾಂಕನ ಆಧಾರದ ಮೇಲೆ ಮಕ್ಕಳನ್ನು ಮುಂದಿನ ಶೈಕ್ಷಣಿಕ ತರಗತಿಗೆ ಮುಂದುವರೆಸಲು ಅವಕಾಶ ಕಲ್ಪಿಸುವಂತೆ ಶಿಕ್ಷಣ ಇಲಾಖೆಯು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಗೆ ಸೂಚಿಸಿ ಆದೇಶ ಹೊರಡಿಸಿದೆ.

ಇದನ್ನೂ ಓದಿ: Public Exam: 5, 8, 9ನೇ ತರಗತಿ ಪಬ್ಲಿಕ್‌ ಪರೀಕ್ಷೆ ಮೌಲ್ಯಮಾಪನದಲ್ಲಿ ಲೋಪ; ವಿವರ ಸಲ್ಲಿಕೆಗೆ ಸರ್ಕಾರ ಸೂಚನೆ

Continue Reading
Advertisement
Prashant Kishor
Lok Sabha Election 20243 mins ago

Prashant Kishor: ಈ ಬಾರಿ ಮೋದಿಗೆ ಹಿನ್ನಡೆ ಆಗುತ್ತಾ? ಪ್ರಶಾಂತ್ ಕಿಶೋರ್ ಲೇಟೆಸ್ಟ್ ಲೆಕ್ಕಾಚಾರ ಹೀಗಿದೆ

Cannes 2024 Sonam Kapoor dubs this outfit the best at Cannes this year
ಬಾಲಿವುಡ್21 mins ago

Cannes 2024: ಇವರ ಫ್ಯಾಷನ್‌ ಮುಂದೆ ಐಶ್ವರ್ಯಾ ರೈ, ಕಿಯಾರಾನೂ ಇಲ್ಲ! ಸೋನಮ್ ಹೊಗಳಿದ್ದು ಯಾರನ್ನ?

cisf soldier death raichur
ಕ್ರೈಂ40 mins ago

Soldier death: ಬಂದೂಕು ಆಕಸ್ಮಿಕವಾಗಿ ಸಿಡಿದು CISF ಯೋಧ ಸಾವು

Viral Video
ವೈರಲ್ ನ್ಯೂಸ್46 mins ago

Viral Video: ಈಜುಕೊಳದಲ್ಲಿ ಭೀಕರ ದುರಂತ; ಸ್ಟಂಟ್‌ ಮಾಡಲು ಹೋಗಿ ಯುವಕನ ಪ್ರಾಣಕ್ಕೆ ಕುತ್ತು-ವಿಡಿಯೋ ನೋಡಿ

T20 World Cup 2024
ಕ್ರಿಕೆಟ್48 mins ago

T20 World Cup 2024: ಆಸ್ಟ್ರೇಲಿಯಾ ತಂಡ ಸೇರಿದ ಸ್ಫೋಟಕ ಬ್ಯಾಟರ್​ ಫ್ರೇಸರ್-ಮೆಕ್‌ಗುರ್ಕ್​

Crime News
ದೇಶ1 hour ago

ಕುಡಿದು ಕಾರು ಓಡಿಸಿ ಇಬ್ಬರ ಜೀವ ತೆಗೆದ ಅಪ್ರಾಪ್ತನ ತಂದೆಯನ್ನು ಬಂಧಿಸಿದ ಪೊಲೀಸರು; ಬಾರ್‌ ಮಾಲೀಕನ ವಿರುದ್ಧವೂ ಕ್ರಮ

missing case davanagere
ಕ್ರೈಂ1 hour ago

Missing case: ಒಂದೇ ಕುಟುಂಬದ ಮೂವರು ನಿಗೂಢ ನಾಪತ್ತೆ

Star Kids with Sanskrit Names From Yami Gautam to Priyanka Chopra
ಬಾಲಿವುಡ್1 hour ago

Star Kids with Sanskrit Names: ಮಕ್ಕಳಿಗೆ ಸಂಸ್ಕೃತ ಮೂಲದ ಹೆಸರನ್ನೇ ಇಟ್ಟ ಸ್ಟಾರ್ಸ್‌ಗಳಿವರು!

Rohit Sharma
ಕ್ರೀಡೆ1 hour ago

Rohit Sharma: ಖಾಸಗಿತನಕ್ಕೆ ಧಕ್ಕೆ ಆರೋಪ ಮಾಡಿದ ರೋಹಿತ್​ಗೆ ಸ್ಪಷ್ಟನೆ ನೀಡಿದ ಸ್ಟಾರ್‌ಸ್ಪೋರ್ಟ್ಸ್

corona virus wave in singapore
ಪ್ರಮುಖ ಸುದ್ದಿ2 hours ago

Corona Virus: ಸಿಂಗಾಪುರದಲ್ಲಿ ಕೋವಿಡ್‌-19 ಹೊಸ ಅಲೆ, ರಾಜ್ಯದಲ್ಲಿ ಅಲರ್ಟ್‌, ಇಂದು ಆರೋಗ್ಯ ಇಲಾಖೆ ಸಭೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ21 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌