Govt Employees Strike: ಅನುಮತಿ ಪಡೆಯದೆ ಗೈರಾದರೆ ಕಠಿಣ ಕ್ರಮ, ಸರ್ಕಾರಿ ನೌಕರರಿಗೆ ಸರ್ಕಾರ ಖಡಕ್ ಎಚ್ಚರಿಕೆ - Vistara News

ಕರ್ನಾಟಕ

Govt Employees Strike: ಅನುಮತಿ ಪಡೆಯದೆ ಗೈರಾದರೆ ಕಠಿಣ ಕ್ರಮ, ಸರ್ಕಾರಿ ನೌಕರರಿಗೆ ಸರ್ಕಾರ ಖಡಕ್ ಎಚ್ಚರಿಕೆ

Govt Employees Strike: ಬುಧವಾರದಿಂದ ಅನಿರ್ದಿಷ್ಟ ಅವಧಿಗೆ ಮುಷ್ಕರ ಕೈಗೊಳ್ಳಲು ಮುಂದಾಗಿರುವ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಮತ್ತೊಂದು ಸುತ್ತೋಲೆ ಮೂಲಕ ಎಚ್ಚರಿಕೆ ನೀಡಿದೆ.

VISTARANEWS.COM


on

Government Order
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಏಳನೇ ವೇತನ ಆಯೋಗದ ವರದಿ ಜಾರಿ ಹಾಗೂ ಎನ್‌ಪಿಎಸ್‌ ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಬುಧವಾರದಿಂದ ಮುಷ್ಕರ ಕೈಗೊಳ್ಳುತ್ತಿರುವ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಖಡಕ್‌ ಎಚ್ಚರಿಕೆ ನೀಡಿದೆ. ಸರ್ಕಾರಿ ನೌಕರರ ನಡೆಗೆ ಸುತ್ತೋಲೆಯ ಮೂಲಕ ಸರ್ಕಾರ ಎಚ್ಚರಿಕೆ ನೀಡಿದ್ದು, ಕೆಲಸಕ್ಕೆ ಅನುಮತಿ ಇರದೆ ಗೈರಾದರೆ, ಅಂತಹವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದೆ.

ಸರ್ಕಾರಿ ನೌಕರರು ಅನಿವಾರ್ಯ ಕಾರಣಗಳಿಂದಾಗಿ ಕಚೇರಿಗೆ ಹಾಜರಾಗದರೆ ಇದ್ದರೆ ಪೂರ್ವ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಹಾಗೊಂದು ವೇಳೆ ಸೂಚನೆ ನೀಡದೆ ಕೆಲಸಕ್ಕೆ ಗೈರಾದರೆ Dies Non ಎಂಬುದಾಗಿ ಪರಿಗಣಿಸಿ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸರ್ಕಾರ ಎಚ್ಚರಿಕೆ ನೀಡಿದೆ. ಯಾವುದೇ ಸರ್ಕಾರದ ಅಧಿಕೃತ ಕೆಲಸ ನಡೆದಿಲ್ಲ ಎಂದು ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದೂ ಸರ್ಕಾರ ವಿಶೇಷಾಧಿಕಾರಿ ಹಾಗೂ ಸಕ್ಷಮ ಪ್ರಾಧಿಕಾರಿಯವರ ಕಚೇರಿಯಿಂದ ಆದೇಶ ಹೊರಡಿಸಿದೆ.

ಇದನ್ನೂ ಓದಿ: Govt Employees Strike: ವೇತನ ಆಯೋಗ ವರದಿ ಜಾರಿಯಿಂದ ರಾಜ್ಯ ಬೊಕ್ಕಸಕ್ಕೆ ಹೊರೆ ಎನ್ನುವುದು ಸುಳ್ಳು: ಷಡಾಕ್ಷರಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Liquor ban: ಜೂ. 1ರಿಂದ ಐದು ದಿನ ಮದ್ಯ ಮಾರಾಟ ನಿಷೇಧ; ಖರೀದಿಗೆ ಮುಗಿಬಿದ್ದ ಎಣ್ಣೆ ಪ್ರಿಯರು!

Liquor ban: ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣೆ ಮತ್ತು ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬೀಳಲಿರುವ ಕಾರಣ ಬೆಂಗಳೂರು ಜಿಲ್ಲಾಡಳಿತ ಜೂನ್ ಮೊದಲನೇ ವಾರದಲ್ಲಿ ಮದ್ಯ ಮಾರಾಟವನ್ನು ಬಂದ್ ಮಾಡುವಂತೆ ಆದೇಶ ನೀಡಿದೆ.

VISTARANEWS.COM


on

Liquor ban
Koo

ಬೆಂಗಳೂರು: ಮದ್ಯಪ್ರಿಯರಿಗೆ ಕಹಿ ಸುದ್ದಿ ಹೊರಬಿದ್ದಿದೆ. ಲೋಕಸಭಾ ಚುನಾವಣೆ ಹಾಗೂ ವಿಧಾನ ಪರಿಷತ್‌ ಚುನಾವಣೆಯ ಫಲಿತಾಂಶ ಹೊರಬೀಳಲಿರುವ ಕಾರಣ ರಾಜಧಾನಿಯಲ್ಲಿ ಒಂದು ವಾರದ ಕಾಲ ಮದ್ಯ ಮಾರಾಟದ ಮೇಲೆ ನಿಷೇಧ ಹೇರಲಾಗಿದೆ. ಒಂದು ವಾರದ ಕಾಲ ಮದ್ಯದಂಗಡಿಗಳು ಕ್ಲೋಸ್‌‌ ಆಗುವ ಹಿನ್ನೆಲೆ ಮದ್ಯಪ್ರಿಯರು ಈಗಿನಿಂದಲೇ ಎಣ್ಣೆ ಸ್ಟಾಕ್‌ ಇಟ್ಟುಕೊಳ್ಳು ಮುಗಿಬೀಳುತ್ತಿದ್ದಾರೆ.

ಜೂನ್ 3 ರಂದು ಪದವೀಧರ ಕ್ಷೇತ್ರ ಚುನಾವಣೆಗೆ ಮತದಾನ ನಡೆಯುವುದರಿಂದ ಜೂನ್ 1ರ ಸಂಜೆ 4 ಗಂಟೆಯಿಂದಲೇ ಬಾರ್ ಬಂದ್ ಆಗಲಿದ್ದು, ಜೂನ್ 3 ರವರೆಗೆ ಬಂದ್ ಮಾಡಬೇಕಾಗುತ್ತದೆ. ಅದೇ ರೀತಿ, ಜೂನ್ 4 ರಂದು ದೇಶದ್ಯಾಂತ ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆಯಲಿದೆ. ಹಾಗಾಗಿ ಅಂದೂ ಸಹ ಮದ್ಯ ಮಾರಾಟ ಸಂಪೂರ್ಣ ಬಂದ್ ಆಗಲಿದೆ.

ಇದನ್ನೂ ಓದಿ | D‌rinking Water: ಅಧಿಕಾರಿಗಳೇ ಹುಷಾರ್! ನೀರಿನಿಂದ ಆರೋಗ್ಯ ಕೈಕೊಟ್ರೆ ಶಿಸ್ತು ಕ್ರಮ: ಡಿಕೆಶಿ ವಾರ್ನಿಂಗ್

ಇನ್ನು ಜೂನ್ 6 ರಂದು ವಿಧಾನ ಪರಿಷತ್ತಿನ ಚುನಾವಣೆ ಮತ ಎಣಿಕೆ ಇರುವ ಕಾರಣ ಅಂದೂ ಬಾರ್ ಬಂದ್ ಮಾಡುವಂತೆ ಬೆಂಗಳೂರು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ. ಹೀಗಾಗಿ ಜೂನ್ ತಿಂಗಳ ಮೊದಲ ವಾರ ಮದ್ಯ ಪ್ರಿಯರಿಗೆ ಎಣ್ಣೆ ಸಿಗುವುದು ಕಷ್ಟವಾಗಿದೆ. ಹೀಗಾಗಿ ಮದ್ಯಪ್ರಿಯರು ಈಗಿನಿಂದಲೇ ಎಣ್ಣೆ ಸ್ಟಾಕ್‌ ಇಟ್ಟುಕೊಳ್ಳೋಕೆ ಮುಗಿಬೀಳುತ್ತಿದ್ದಾರೆ.

ಇದು ಎಣ್ಣೆ ಮಹಿಮೆ! ಟಾರ್ಗೆಟ್‌ ಮೀರಿ ಹೋದ ಅಬಕಾರಿ ಇಲಾಖೆ; 15 ಪರ್ಸೆಂಟ್‌ ಹೆಚ್ಚು ವರಮಾನ

Excise revenue excise department went beyond the target and 15 percent more income

ಬೆಂಗಳೂರು: ಈ ಬೇಸಿಗೆಯಲ್ಲಿ ಬೇಡಿಕೆಗೆ ತಕ್ಕಂತೆ ಸರಬರಾಜು ಇಲ್ಲದ ಕಾರಣ ರಾಜ್ಯದಲ್ಲಿ ಬಿಯರ್ ಅಭಾವ (Beer Shortage) ತೀವ್ರವಾಗಿ ಕಾಡಿತ್ತು. ಅಂದರೆ ಬೇಡಿಕೆಗೆ ತಕ್ಕಂತೆ ಪೂರೈಕೆ ಸಾಧ್ಯವಾಗಿರಲಿಲ್ಲ. ಆದರೂ ರಾಜ್ಯದಲ್ಲಿ ಬಂಪರ್ ಮದ್ಯ (Excise revenue) ಮಾರಾಟವಾಗಿದೆ. ಮದ್ಯ ದರ ಏರಿಕೆಯ ನಡುವೆ ಅಬಕಾರಿ ವರಮಾನ ಶೇ. 15ರಷ್ಟು ಹೆಚ್ಚಳವಾಗಿದೆ.

ಸರ್ಕಾರದ ಬೊಕ್ಕಸಕ್ಕೆ ಮದ್ಯಪ್ರಿಯರು ಭರ್ಜರಿ ಕಿಕ್ ಕೊಟ್ಟಿದ್ದಾರೆ. ರಾಜ್ಯದಲ್ಲಿ ದರ ಏರಿಕೆ ನಡುವೆಯೂ ಮದ್ಯ ಮಾರಾಟ ಬಾರಿ ಹೆಚ್ಚಳ ಕಂಡಿದೆ. 2023-24ನೇ ಸಾಲಿನಲ್ಲಿ ಸಾವಿರಾರು ಕೋಟಿ ರೂಪಾಯಿ ರಾಜ್ಯ ಸರ್ಕಾರದ ಖಜಾನೆ ಸೇರಿದೆ.

ಅಬಕಾರಿ ಇಲಾಖೆಗೆ ವಾರ್ಷಿಕ 34,500 ಕೋಟಿ ರೂಪಾಯಿ ಟಾರ್ಗೆಟ್ ಅನ್ನು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನೀಡಿತ್ತು. ಈಗ 2023-24ನೇ ಸಾಲಿನಲ್ಲಿ ಅಬಕಾರಿ ಇಲಾಖೆಯು ಟಾರ್ಗೆಟ್ ರೀಚ್ ಮಾಡಿದೆ. ಕಳೆದ ಏಪ್ರಿಲ್‌ನಿಂದ ಮಾರ್ಚ್‌ವರೆಗೆ ಹೆಚ್ಚುವರಿ 128 ಕೋಟಿ ರೂಪಾಯಿಗೂ ಹೆಚ್ಚು ಆದಾಯ ಸಂಗ್ರಹವಾಗಿದೆ.

2023-24ನೇ ಸಾಲಿನಲ್ಲಿ 34,628 ಕೋಟಿ ರೂಪಾಯಿ ಆದಾಯವು ಅಬಕಾರಿ ಇಲಾಖೆಗೆ ಹರಿದುಬಂದಿದೆ. ಕಳೆದ ವರ್ಷ 29,920 ಕೋಟಿ ರೂಪಾಯಿಯನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಸಂಗ್ರಹ ಮಾಡಿದ್ದರು. ಕಳೆದ ಒಂದು ವರ್ಷದಲ್ಲಿ ಮೂರು ಬಾರಿ ಮದ್ಯ ದರ ಪರಿಷ್ಕರಣೆ ಮಾಡಲಾಗಿದೆ. ಆದರೂ, ತಲೆಕೆಡಿಸಿಕೊಳ್ಳದೆ ಮದ್ಯ ಪ್ರಿಯರು ಮದ್ಯ ಖರೀದಿ ಮಾಡಿದ್ದಾರೆ.

ಸೃಷ್ಟಿಯಾಗಿತ್ತು ಮದ್ಯದ ಅಭಾವ

ಬೇಸಿಗೆಯಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ಝಳ ಹೆಚ್ಚುತ್ತಿದ್ದಂತೆ ರಾಜ್ಯದಲ್ಲಿ ಬಿಯರ್ ಮಾರಾಟ ಕೂಡ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿತ್ತು. ಆದರೆ, ಬೇಡಿಕೆಗೆ ತಕ್ಕಂತೆ ಬಿಯರ್ ಸರಬರಾಜು ಆಗುತ್ತಿರಲಿಲ್ಲ. ಹೀಗಾಗಿ ಎರಡು ತಿಂಗಳ ಕಾಲ ಬಿಯರ್‌ ಅಭಾವ ಮುಂದುವರಿದಿತ್ತು.

ರಾಜ್ಯದಲ್ಲಿ ಬೇಸಿಗೆ ವೇಳೆ ಅಂದರೆ ಏಪ್ರಿಲ್‌, ಮೇ ವೇಳೆ ನಿತ್ಯ 11.50 ಲಕ್ಷ ಲೀಟರ್ ಬಿಯರ್ ಮಾರಾಟವಾಗುತ್ತಿತ್ತು. ಬೇಸಿಗೆ‌ಗೆ ಮುನ್ನ ನಿತ್ಯ 8 ಲಕ್ಷ ಲೀಟರ್ ಬಿಯರ್ ಸೇಲ್‌ ಆಗುತ್ತಿತ್ತು. ಹೀಗಾಗಿ ಬೇಸಿಗೆ ವೇಳೆ ನಿತ್ಯ ಸರಿ ಸುಮಾರು ಮೂರೂವರೆ ಲಕ್ಷ ಲೀಟರ್‌ ಬಿಯರ್‌ ಹೆಚ್ಚುವರಿಯಾಗಿ ಬೇಕಿತ್ತು. ಆದರೆ, ಬೇಡಿಕೆಗೆ ತಕ್ಕಂತೆ ಬಿಯರ್ ಸರಬರಾಜು ಸಿಗುತ್ತಿರಲಿಲ್ಲ.

ಈ ವರ್ಷದ ಆರಂಭದ ತಿಂಗಳಲ್ಲಿ ಬಿಯರ್ ಮಾರಾಟ ಕುಸಿತ ಕಂಡಿತ್ತು. ಕಳೆದ ವರ್ಷದ ಬೇಸಿಗೆಗೆ ಹೋಲಿಸಿದರೆ ಈ ವರ್ಷದಲ್ಲಿ ಶೇ.30 ಮಾರಾಟ ಹೆಚ್ಚಳವಾಗಿತ್ತು. ಅಗತ್ಯ ಇರುವಷ್ಟು ಬಿಯರ್ ಸಂಗ್ರಹ ಇದೆ ಎಂದು ಅಬಕಾರಿ ಇಲಾಖೆ ಮೂಲಗಳು ಹೇಳಿದ್ದವಾದರೂ ಬೇಸಿಗೆ ತೀವ್ರ ಅಭಾವ ಉಂಟಾಗಿತ್ತು.

ಬೇಸಿಗೆಯಲ್ಲಿ ನೀರಿನ ಸಮಸ್ಯೆ ಕೂಡ ಬಿಯರ್‌ ಉತ್ಪಾದನೆ ಕುಸಿಯಲು ಕಾರಣವಾಗಿತ್ತು. ಇನ್ನು ಸಾರಿಗೆ ಸಮಸ್ಯೆ, ಚುನಾವಣೆ ಸಮಯದಲ್ಲಿ ಮಳಿಗೆಗಳಲ್ಲಿ ಹೆಚ್ಚುವರಿ ಮದ್ಯ, ಬಿಯರ್‌ ಸಂಗ್ರಹಣೆ ಮೇಲೆ ನಿರ್ಬಂಧ ಹೇರಿರುವುದು ಕೂಡ ಬಿಯರ್‌ ಪೂರೈಕೆ ಕುಸಿಯಲು ಕಾರಣವಾಗಿತ್ತು.

ಇದನ್ನೂ ಓದಿ: Rave party: ಬೆಂಗಳೂರು ರೇವ್‌ ಪಾರ್ಟಿ ಕೇಸ್‌; ಬಿಲ್ಡಪ್‌ ಕೊಡಲು ಹೋಗಿ ಲಾಕ್‌ ಆದ ತೆಲುಗು ನಟಿ ಹೇಮಾ!

ಬಿಸಿಲಿನ ಝಳದಿಂದ ಹೊರಬರಲು ಜನರು ಹಾಟ್ ಡ್ರಿಂಕ್ಸ್‌ಗಳಿಗಿಂತ ಬೇಸಿಗೆಯಲ್ಲಿ ಬಿಯರ್ ಹೆಚ್ಚು ಕುಡಿಯುತ್ತಾರೆ. ಜತೆಗೆ ಈ ವರ್ಷ ಮಾರಾಟ ಹೆಚ್ಚಳವಾಗಲು ಲೋಕಸಭಾ ಚುನಾವಣೆಯ ಕೊಡುಗೆಯೂ ಇದೆ. ಬಿಯರ್ ಕುಡಿದರೆ ಬಿಸಿಲ ಧಗೆಯಿಂದ ಹೊರಬರಬಹುದು ಎಂದು ನಂಬಲಾಗಿದ್ದು, ಇದು ಬಿಯರ್ ಬಳಕೆ ಹೆಚ್ಚಳವಾಗಲು ಕಾರಣವಾಗಿದೆ. ಇನ್ನು ಮದ್ಯ ಮಾರಾಟದಿಂದ ಈ ವರ್ಷ ರಾಜ್ಯ ಸರ್ಕಾರ 36 ಸಾವಿರ ಕೋಟಿ ರೂ. ಆದಾಯ ನಿರೀಕ್ಷಿಸಿದೆ. ಆರಂಭದಲ್ಲಿಯೇ ಉತ್ತಮ ಮಾರಾಟ ಕಂಡು ಬಂದಿರುವುದರಿಂದ ಆದಾಯ ಹೆಚ್ಚುವ ನಿರೀಕ್ಷೆ ಇದೆ.

Continue Reading

ರಾಜಕೀಯ

HD Kumaraswamy: ರಾಕೇಶ್‌ನನ್ನು ವಿದೇಶಿ ಪಾರ್ಟಿಗೆ ನೀವೇ ಕಳಿಸಿ ಸಾವಿಗೆ ಕಾರಣರಾದಿರಿ ಎಂದರೆ ಹೇಗೆ? ಸಿದ್ದರಾಮಯ್ಯಗೆ ಎಚ್‌ಡಿಕೆ ಪ್ರಶ್ನೆ

HD Kumaraswamy: ಪ್ರಜ್ವಲ್‌ ರೇವಣ್ಣ ಅವರನ್ನು ವಿದೇಶಕ್ಕೆ ಕಳುಹಿಸಿದ್ದೇ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಎಂದು ಹೇಳಿಕೆ ನೀಡಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ನಿಮ್ಮ ಪುತ್ರನನ್ನು Tomorrow Land ಪಾರ್ಟಿಗೆ ನೀವೇ ಕಳುಹಿಸಿ ಅವರ ಸಾವಿಗೆ ಕಾರಣರಾದಿರಿ ಎಂದು ಕೇಳಿದರೆ ಹೇಗೆ?ಇಂಟೆಲಿಜೆನ್ಸ್ ಇಟ್ಟುಕೊಂಡಿರುವ ನಿಮಗೇನೂ ಗೊತ್ತಿಲ್ಲವೇ? ಶೋಕದ ಮನೆಯಲ್ಲಿ ರಾಜಕೀಯ ಮಾಡುವ ಜಾಯಮಾನ ನಮ್ಮದಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

VISTARANEWS.COM


on

HD Kumaraswamy slams CM Siddaramaiah about devegowda statement
Koo

ಬೆಂಗಳೂರು: ಪ್ರಜ್ವಲ್ ರೇವಣ್ಣನನ್ನು ವಿದೇಶಕ್ಕೆ ಕಳಿಸಿರುವುದೇ ಅವರ ತಾತ. ವಿದೇಶಕ್ಕೆ ಕಳುಹಿಸಿ ಈಗ ಪತ್ರ ಬರೆದು ಏನು ಮಾಡುತ್ತಾರೆ? ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೆಗೌಡರ (HD Devegowda) ಬಗ್ಗೆ ಹೇಳಿಕೆ ನೀಡಿದ್ದ ಸಿಎಂ ಸಿದ್ದರಾಮಯ್ಯ (CM Siddaramaiah) ಅವರಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ (HD Kumaraswamy) ತಿರುಗೇಟು ನೀಡಿದ್ದಾರೆ. ನಿಮ್ಮ ಪುತ್ರನನ್ನು Tomorrow Land ಪಾರ್ಟಿಗೆ ನೀವೇ ಕಳುಹಿಸಿ ಅವರ ಸಾವಿಗೆ ಕಾರಣರಾದಿರಿ ಎಂದು ಕೇಳಿದರೆ ಹೇಗೆ? ಎಂದು ಪ್ರಶ್ನೆ ಮಾಡಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಎಚ್.ಡಿ. ಕುಮಾರಸ್ವಾಮಿ, ನಿಮ್ಮ ಆತ್ಮಸಾಕ್ಷಿ ಎನ್ನುವುದು ಅಸ್ತಿತ್ವದಲ್ಲಿ ಇದೆಯಾ? ಎಂದು ಪ್ರಶ್ನಿಸಿದ್ದಾರೆ.

ದಯಮಾಡಿ ವಕೀಲಿಕೆ ಮಾಡಬೇಡಿ

ನಾನು ವಕೀಲನಾಗಿದ್ದೆ, ಹಿಂದೆ ನಾನೂ ವಕೀಲಿಕೆ ಮಾಡುತ್ತಿದ್ದೆ ಎಂದು ಪದೇಪದೆ ಹೇಳಬೇಡಿ. ನಿಮ್ಮ ವಕೀಲಿ ಜ್ಞಾನದ ಮೇಲೆ ಅಗೌರವ ಬರುವಂತೆ ಮಾತನಾಡಬೇಡಿ. ಎಷ್ಟೋ ಮಹಾನುಭಾವರು ಈ ವೃತ್ತಿಗೆ ಕಳಶಪ್ರಾಯರಾಗಿದ್ದಾರೆ. ದಯಮಾಡಿ ಅವರೆಲ್ಲರನ್ನು ಅಪಮಾನಿಸಬೇಡಿ. “ಅತ್ಯಾಚಾರದ ವಿಡಿಯೊ ಹರಿದಾಡಿತು ಎನ್ನುವುದಕ್ಕಿಂತ, ಅತ್ಯಾಚಾರ ಘೋರ ಅಪರಾಧ” ಎನ್ನುವ ಆಣಿಮುತ್ತು ಉದುರಿಸಿದ್ದೀರಿ. ನಿಮ್ಮ ವಕೀಲಿಕೆಯ ಪಾಂಡಿತ್ಯದ ಬಗ್ಗೆ ಈ ನಿಮ್ಮ ಮಾತು ನನ್ನಲ್ಲಿ ಅನೇಕ ಪ್ರಶ್ನೆಗಳನ್ನು ಉಂಟು ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಎಚ್.ಡಿ. ಕುಮಾರಸ್ವಾಮಿ ಕುಟುಕಿದ್ದಾರೆ.

ಅತ್ಯಾಚಾರ ಅಮಾನುಷ ಸರಿ, ವಿಡಿಯೊ ಹಂಚುವುದೇನು?

ಅತ್ಯಾಚಾರ ಅಮಾನುಷ ಎನ್ನುವುದರಲ್ಲಿ ಎರಡನೇ ಮಾತಿಲ್ಲ. ಆದರೆ, ಆ ಅಮಾನುಷಕ್ಕೆ ತುತ್ತಾದ ಹೆಣ್ಮಕ್ಕಳ ವಿಡಿಯೊಗಳನ್ನು ಹಂಚಿ ವಿಕೃತಾನಂದ ಅನುಭವಿಸುವುದು ಮಾನುಷವೇ? ಮನುಷ್ಯರು ಹೇಳುವ ಮಾತೇ ಇದು? ದಯಮಾಡಿ ನೀವು ಇನ್ನೆಂದೂ ನಾನು ವಕೀಲಿಕೆ ಮಾಡುತ್ತಿದ್ದೆ ಎನ್ನಬೇಡಿ. ನಿಮ್ಮ ಪಕ್ಕದಲ್ಲಿ ಪೆನ್ ಡ್ರೈವ್ ಹಂಚಿಕೆದಾರ ಕೂತಿದ್ದಾರೆ. ಆ CD ಶಿವು (‌ಡಿಸಿಎಂ ಡಿ.ಕೆ. ಶಿವಕುಮಾರ್) ಚುನಾವಣಾ ಸ್ವಾರ್ಥಕ್ಕಾಗಿ ಹೆಣ್ಮಕ್ಕಳ ಮಾನವನ್ನು ಪೆನ್ ಡ್ರೈವ್‌ಗಳಿಗೆ ತುಂಬಿಸಿ ಹಾದಿಬೀದಿಯಲ್ಲಿ ಮಾರಿಕೊಂಡಿದ್ದು ನಿಮಗೆ ಗೊತ್ತಿಲ್ಲವೇ? ಸ್ವಯಂ ಘೋಷಿತ ಸಂವಿಧಾನ ತಜ್ಞ ಬಿರುದಾಂಕಿತರಾದ ನೀವು, ಇಂಥ ಮಾನದ್ರೋಹಿಯನ್ನು ಪಕ್ಕದಲ್ಲೇ ಕೂರಿಸಿಕೊಳ್ಳಲು ನಿಮ್ಮ ಆತ್ಮಸಾಕ್ಷಿ ಒಪ್ಪುತ್ತದೆಯೇ? ಪ್ರಶ್ನೆ ಮಾಡಿಕೊಳ್ಳಿ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ನಿಮ್ಮ ಡಿಸಿಎಂ ಅನ್ನು ಪ್ರಶ್ನಿಸಿದ್ದೀರಾ?

ನಿಮ್ಮ ಉಪ ಮುಖ್ಯಮಂತ್ರಿ ಮಹಾಶಯ ಪೆನ್ ಡ್ರೈವ್ ಹಂಚಿಕೆಯಲ್ಲಿ ಶಾಮೀಲಾಗಿಲ್ಲವೇ? ದೇವರಾಜೆಗೌಡ, ಬ್ರೋಕರ್ ಶಿವರಾಮೇಗೌಡ, ಡಿ.ಕೆ.ಶಿವಕುಮಾರ್ ನಡುವಿನ ಮೊಬೈಲ್ ಸಂಭಾಷಣೆ ನಿಮ್ಮ ಸರ್ಕಾರದ ಮಾನವನ್ನು ಹಾಸನದಲ್ಲಿ ಪೆನ್ ಡ್ರೈವ್ ರೂಪದಲ್ಲಿ ವೋಟಿಗೆ ಹರಾಜಾಗಲಿಲ್ಲವೇ? ಚಾಲಕ ಕಾರ್ತಿಕ್ ಗೌಡ ಆ ನೊಂದ ಮಹಿಳೆಯರ ಅಶ್ಲೀಲ ವಿಡಿಯೊಗಳನ್ನು ತುಂಬಿದ್ದ ಮೊದಲ ಪೆನ್ ಡ್ರೈವ್‌ ಅನ್ನು ನಿಮಗೆ ತಂದು ಕೊಡಲಿಲ್ಲವೇ? ಎಂದು ನಿಮ್ಮ ಉಪ ಮುಖ್ಯಮಂತ್ರಿಯನ್ನು ಒಮ್ಮೆಯಾದರೂ ಕೇಳಿದ್ದೀರಾ ಮುಖ್ಯಮಂತ್ರಿಗಳೇ..? ಎಂದು ಅವರು ಪ್ರಶ್ನಿಸಿದ್ದಾರೆ.

ಪ್ರಜ್ವಲ್ ರೇವಣ್ಣ ಅವರನ್ನು ನಾನೆಂದೂ ಸಮರ್ಥನೆ ಮಾಡಿಲ್ಲ, ಮಾಡುವುದೂ ಇಲ್ಲ. ಪ್ರಕರಣ ಹೊರಬಂದ ಮೊದಲ ದಿನವೇ ‘ಈ ನೆಲದ ಕಾನೂನಿಗೆ ಎಲ್ಲರೂ ತಲೆ ಬಾಗಲೇಬೇಕು. ಉಪ್ಪು ತಿಂದವರು ನೀರು ಕುಡಿಯಲೇ ಬೇಕು’ ಎಂದು ಹೇಳಿದ್ದೇನೆ. ನನ್ನ ಹೇಳಿಕೆ ನಿಮಗೆ ಗೊತ್ತಾಗಲಿಲ್ಲವೇ? ನಿಮಗೆ ಪತ್ರಿಕೆ ಓದುವ ಅಭ್ಯಾಸ ಇಲ್ಲದಿದ್ದರೆ ನಾನೇನು ಮಾಡಲಿ? ಎಂದು ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ನಿಮ್ಮ ಆತ್ಮಸಾಕ್ಷಿ ಎನ್ನುವುದು ಅಸ್ತಿತ್ವದಲ್ಲಿ ಇದೆಯಾ?

ದೇವೇಗೌಡರ ಬಗ್ಗೆ ನೀವು ಕಾರಿಕೊಂಡ ವಿಷದ ಬಗ್ಗೆ ಹೇಳುವುದಾದರೆ, ನನ್ನ ಮಾತಿಗೆ ಗೌರವ ಕೊಟ್ಟು ಪ್ರಜ್ವಲ್ ವಾಪಸ್ ಬಂದು SIT ಮುಂದೆ ಹಾಜರಾಗದಿದ್ದರೆ ಕುಟುಂಬದಿಂದ ಹೊರ ಹಾಕುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ. ಅವರ ಮಾತೇ ನಮ್ಮ ಕುಟುಂಬದ ಮಾತು. ಆದರೆ, ನೀವು ಹೇಳಿದ್ದೇನು? ಪ್ರಜ್ವಲ್‌ನನ್ನು ವಿದೇಶಕ್ಕೆ ಕಳಿಸಿರುವುದೇ ಅವರ ತಾತ. ವಿದೇಶಕ್ಕೆ ಕಳಿಸಿ ಈಗ ಪತ್ರ ಬರೆದು ಏನು ಮಾಡುತ್ತಾರೆ? ಎಂದಿದ್ದೀರಿ! ನಿಮ್ಮ ಆತ್ಮಸಾಕ್ಷಿ ಎನ್ನುವುದು ಅಸ್ತಿತ್ವದಲ್ಲಿ ಇದೆಯಾ? ಎಂದು ಎಚ್.ಡಿ. ಕುಮಾರಸ್ವಾಮಿ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

ನಮ್ಮ ಮನೆಗಳ ಮೇಲೆ ಕಳ್ಳಕಿವಿ ಇಟ್ಟಿದ್ದೀರಿ

ಅವನು ದೇವೇಗೌಡರಿಗೆ ಹೇಳಿಯೇ ವಿದೇಶಕ್ಕೆ ಹೋಗಿದ್ದಾನೆ ಎಂದು ಹೇಳಿದ್ದೀರಿ. ನಿಮಗೆ ಹೇಗೆ ಗೊತ್ತು? ನಿಮ್ಮ ಪಕ್ಷದಲ್ಲೇ ಕೂರುವ CD ಶಿವು ಮಾಡುತ್ತಿರುವ ಮಾನಗೇಡಿ ಕೃತ್ಯಗಳು ಗೊತ್ತಾಗೋದಿಲ್ಲ ನಿಮಗೆ!? ಆದರೆ, ದೇವೆಗೌಡರ ಮನೆಯಲ್ಲಿ ನಡೆಯೋದೆಲ್ಲ ನಿಮಗೆ ಗೊತ್ತಾಗುತ್ತದೆಯೇ!? ಅದು ಹೇಗೆ? ನನ್ನ ಮತ್ತು ದೇವೆಗೌಡರ ಮನೆಗೆ ಕಳ್ಳಕಿವಿ ಇಟ್ಟಿದ್ದೀರಿ ಎನ್ನುವ ನನ್ನ ಆರೋಪ ಸತ್ಯ ಎಂದ ಹಾಗಾಯಿತು.. ಅಲ್ಲವೇ? ಅಸತ್ಯ ಹೇಳುವ ಅಗತ್ಯ ನಮಗಿಲ್ಲ. ಅವನು ಕುಟುಂಬದ ಸಂಪರ್ಕದಲ್ಲಿ ಇಲ್ಲ. ಹಿಂದೆಯೂ ಹೇಳಿದ್ದೆ, ಈಗಲೂ ಹೇಳುತ್ತಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: Excise revenue: ಇದು ಎಣ್ಣೆ ಮಹಿಮೆ! ಟಾರ್ಗೆಟ್‌ ಮೀರಿ ಹೋದ ಅಬಕಾರಿ ಇಲಾಖೆ; 15 ಪರ್ಸೆಂಟ್‌ ಹೆಚ್ಚು ವರಮಾನ

ಇಂಟೆಲಿಜೆನ್ಸ್ ಇಟ್ಟುಕೊಂಡಿರುವ ನಿಮಗೇನೂ ಗೊತ್ತಿಲ್ಲವೇ?

ಪಕ್ಷದ ಅಧ್ಯಕ್ಷನಾಗಿ ಆತನ ವಿರುದ್ಧ ಕ್ರಮ ಕೈಗೊಂಡಿದ್ದೇನೆ. ಆತನ ಮೇಲಿರುವ ಆರೋಪ ಸಾಬೀತಾದರೆ ಪಕ್ಷದಲ್ಲಿ ಆತನಿಗೆ ಸ್ಥಾನವಿಲ್ಲ. ನಿಮಗೆ ಸಂಶಯ ಸಲ್ಲ. ಇನ್ನು, ಎಸ್‌ಐಟಿ ತನಿಖೆ ಅಂತೀರಾ? ಎಸ್‌ಐಟಿ ಹೆಸರಿನಲ್ಲಿ ಎಷ್ಟು ಸ್ಲೀಪರ್ ಸೆಲ್‌ಗಳು ತನಿಖೆ ಮಾಡುತ್ತಿವೆ ಎಂದು ಬಿಚ್ಚಿಟ್ಟರೆ ನಿಮ್ಮ ಸರ್ಕಾರ ಕಥೆ ಮುಗಿದೇ ಹೋಗುತ್ತದೆ. CD ಶಿವು ಆದೇಶದ ಮೇರೆಗೆ ಪೆನ್ ಡ್ರೈವ್‌ಗಳನ್ನು ಹಂಚಿದ ಕಿರಾತಕರೆಲ್ಲ ದಿನ ಬೆಳಗಾದರೆ ಯಾರ ಮನೆಯಲ್ಲಿ ಪ್ರತ್ಯಕ್ಷರಾಗುತ್ತಾರೆ? ವಿಧಾನಸೌಧದಲ್ಲಿ ಯಾರ ಕಚೇರಿಯೊಳಕ್ಕೆ ನುಸುಳುತ್ತಾರೆ ಎನ್ನುವುದು ಇಂಟೆಲಿಜೆನ್ಸ್ ಅನ್ನು ಇಟ್ಟುಕೊಂಡಿರುವ ನಿಮಗೇ ಗೊತ್ತಿಲ್ಲದಿದ್ದರೆ ಹೇಗೆ? ಎಂದು ಸಿಎಂಗೆ ಎಚ್.ಡಿ. ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ.

ಶೋಕದ ಮನೆಯಲ್ಲಿ ರಾಜಕೀಯ ಮಾಡುವ ಜಾಯಮಾನ ನಮ್ಮದಲ್ಲ

ನಿಮ್ಮ ಸುಪುತ್ರ, ದಿವಂಗತ ರಾಕೇಶ್ ಸಿದ್ದರಾಮಯ್ಯ ಅವರನ್ನು ಟುಮಾರೋ ಲ್ಯಾಂಡ್ ( Tomorrow Land) ಎನ್ನುವ ಅಮಲಿನ ಪಾರ್ಟಿಗೆ ನೀವೇ ಕಳಿಸಿದ್ದೀರಿ, ಅಲ್ಲಿ ಅವರ ಸಾವಿಗೆ ನೀವೇ ಕಾರಣರಾದಿರಿ ಎಂದು ಯಾರಾದರೂ ನಿಮ್ಮನ್ನು ಕೇಳಿದರೆ ನಿಮ್ಮ ಮನಸ್ಸಿಗೆ ಹೇಗಾಗಬೇಡ? ದೇವೇಗೌಡರ ಬಗ್ಗೆ ನೀವು ಕೇಳಿದ್ದು ಕೂಡ ಹಾಗೆಯೇ ಅಲ್ಲವೇ ಮಾನ್ಯ ಮುಖ್ಯಮಂತ್ರಿಗಳೇ? ಶೋಕದ ಮನೆಯಲ್ಲಿ ರಾಜಕೀಯ ಮಾಡುವ ಜಾಯಮಾನ ನಮ್ಮದಲ್ಲ. ದಯಮಾಡಿ ಅರ್ಥ ಮಾಡಿಕೊಳ್ಳಿ ಎಂದು ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

Continue Reading

ಕ್ರೈಂ

Rameshwaram Cafe Blast: ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣದ 5ನೇ ಆರೋಪಿಗೆ ಲಷ್ಕರ್–ಎ–ತಯ್ಬಾ ಜತೆ ಲಿಂಕ್‌!

Rameshwaram Cafe Blast: ದಿ ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎನ್‌ಐಎ ಅಧಿಕಾರಿಗಳು ದಿನೇ ದಿನೆ ತಮ್ಮ ತನಿಖೆಯನ್ನು ಚುರುಕುಗೊಳಿಸುತ್ತಾ ಬಂದಿದ್ದರು. ಮೂರು ದಿನಗಳ ಹಿಂದೆ ಎನ್.ಐ.ಎ ಅಧಿಕಾರಿಗಳು ಹುಬ್ಬಳ್ಳಿಯಲ್ಲಿ ನಡೆಸಿದ್ದ ದಾಳಿಯಲ್ಲಿ ಇಬ್ಬರು ಆರೋಪಿಗಳು ಲಾಕ್ ಆಗಿದ್ದರು. ಅವರಲ್ಲಿ ಹುಬ್ಬಳ್ಳಿ ಮೂಲದ ಶೋಯಬ್‌ ಅಹ್ಮದ್ ಮಿರ್ಜಾ @ಛೋಟು ಬಂಧಿತ ಆರೋಪಿಯಾಗಿದ್ದಾನೆ. ಈತ ಈಗ ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣದ 5ನೇ ಆರೋಪಿಯಾಗಿದ್ದಾನೆ.

VISTARANEWS.COM


on

Koo

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ (Rameshwaram Cafe Blast) ಸಂಬಂಧ ಹುಬ್ಬಳ್ಳಿ ನಗರದಲ್ಲಿ ಮೂರು ದಿನಗಳ ಹಿಂದೆ ಇಬ್ಬರು ಆರೋಪಿಗಳನ್ನು ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಈ ಇಬ್ಬರ ವಿಚಾರಣೆ ವೇಳೆ ಆಘಾತಕಾರಿ ವಿಚಾರವೊಂದು ಬಯಲಾಗಿದೆ. ವಶಕ್ಕೆ ಪಡೆದವರಲ್ಲಿ ಒಬ್ಬ ಈ ಹಿಂದೆ ಲಷ್ಕರ್‌ ಇ ತೋಯ್ಬಾ (Lashkar-e-Taiba) ಪ್ರಕರಣದಲ್ಲಿ ಬಂಧಿತನಾಗಿ ಬಿಡುಗಡೆಯಾಗಿದ್ದ ಎಂಬುದು ಗೊತ್ತಾಗಿದೆ.

ದಿ ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎನ್‌ಐಎ ಅಧಿಕಾರಿಗಳು ದಿನೇ ದಿನೆ ತಮ್ಮ ತನಿಖೆಯನ್ನು ಚುರುಕುಗೊಳಿಸುತ್ತಾ ಬಂದಿದ್ದರು. ಮೂರು ದಿನಗಳ ಹಿಂದೆ ಎನ್.ಐ.ಎ ಅಧಿಕಾರಿಗಳು ಹುಬ್ಬಳ್ಳಿಯಲ್ಲಿ ನಡೆಸಿದ್ದ ದಾಳಿಯಲ್ಲಿ ಇಬ್ಬರು ಆರೋಪಿಗಳು ಲಾಕ್ ಆಗಿದ್ದರು. ಅವರಲ್ಲಿ ಹುಬ್ಬಳ್ಳಿ ಮೂಲದ ಶೋಯಬ್‌ ಅಹ್ಮದ್ ಮಿರ್ಜಾ @ಛೋಟು ಬಂಧಿತ ಆರೋಪಿಯಾಗಿದ್ದಾನೆ. ಈತ ಈಗ ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣದ 5ನೇ ಆರೋಪಿಯಾಗಿದ್ದಾನೆ.

ಅಲ್ಲದೆ, ಶೋಯಬ್‌ ಅಹ್ಮದ್ ಮಿರ್ಜಾನನ್ನು ಈ ಹಿಂದೆ ಲಷ್ಕರ್–ಎ–ತಯ್ಬಾಕ್ಕೆ (ಎಲ್‌ಇಟಿ) ಸಂಬಂಧಪಟ್ಟಂತೆ ಪ್ರಕರಣವೊಂದರಲ್ಲಿ ಬಂಧಿಸಿ, ಸೂಕ್ತ ಸಾಕ್ಷ್ಯಾಧಾರಗಳಿಲ್ಲದೆ ಬಿಡುಗಡೆ ಮಾಡಲಾಗಿತ್ತು ಎಂದು ತಿಳಿದುಬಂದಿದೆ.

ಬ್ಲಾಸ್ಟ್ ಪ್ರಕರಣದ ಮಾಸ್ಟರ್‌ ಮೈಂಡ್‌ ಅಬ್ದುಲ್‌ ಮತೀನ್ ತಾಹನ ಸ್ನೇಹಿತನಾಗಿದ್ದ ಶೋಯೆಬ್‌ ಅಹ್ಮದ್ ರಾಮೇಶ್ವರಂ ಕೆಫೆ ಬ್ಲಾಸ್ಟ್‌ಗೆ ಸಹಕರಿಸಿದ್ದ. ಈತ ವಿದೇಶಿ ಮೂಲದ ಹ್ಯಾಂಡ್ಲರ್‌ಗಳನ್ನು ಪರಿಚಯಿಸಿದ್ದ ಎಂದು ತಿಳಿದುಬಂದಿದೆ. ಹ್ಯಾಂಡ್ಲರ್ ಮತ್ತು ಮತೀನ್ ತಾಹ ನಡುವೆ ಇ-ಮೇಲ್‌ ಮುಖಾಂತರ ಸಂಪರ್ಕಿಸುತ್ತಿದ್ದ ಎಂದು ತಿಳಿದುಬಂದಿದೆ.

ಇನ್ನೊಬ್ಬ ಅಜೀಜ್ ಅಹಮದ್ ಮಿರ್ಜಾ

ಕಸಬಾಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶೋಯಬ್ ಮಿರ್ಜಾನನ್ನು ಬಂಧಿಸಲಾಗಿದ್ದ, ಆತನ ಜತೆಗಿದ್ದ ಸಹೋದರ ಅಜೀಜ್ ಅಹಮದ್ ಮಿರ್ಜಾ ಎಂಬಾತನನ್ನೂ ವಶಕ್ಕೆ ಪಡೆಯಲಾಗಿತ್ತು. ಈಗ ಈತನ ಪಾತ್ರ ಏನಿದೆ ಎಂಬ ಬಗ್ಗೆಯೂ ತೀವ್ರವಾಗಿ ವಿಚಾರಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ: Excise revenue: ಇದು ಎಣ್ಣೆ ಮಹಿಮೆ! ಟಾರ್ಗೆಟ್‌ ಮೀರಿ ಹೋದ ಅಬಕಾರಿ ಇಲಾಖೆ; 15 ಪರ್ಸೆಂಟ್‌ ಹೆಚ್ಚು ವರಮಾನ

ಹುಬ್ಬಳ್ಳಿ ಸೇರಿ 4 ರಾಜ್ಯಗಳ ಹಲವೆಡೆ ದಾಳಿ ನಡೆಸಿ 11 ಶಂಕಿತ ಉಗ್ರರು ವಶಕ್ಕೆ ಪಡೆದಿದ್ದ ಎನ್‌ಐಎ

ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳವು ಮಂಗಳವಾರ (ಮೇ 21) ಕರ್ನಾಟಕ ಸೇರಿ 4 ರಾಜ್ಯಗಳ 11 ಸ್ಥಳಗಳಲ್ಲಿ ದಾಳಿ ನಡೆಸಿ, 11 ಶಂಕಿತ ಉಗ್ರರನ್ನು ವಶಕ್ಕೆ ಪಡೆದಿತ್ತು. ಈ ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಸಂಚುಕೋರರನ್ನು ಪತ್ತೆ ಮಾಡಲು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಲಾಗಿದೆ.

ಕರ್ನಾಟಕ, ತಮಿಳುನಾಡು, ತೆಲಂಗಾಣ ಮತ್ತು ಆಂಧ್ರಪ್ರದೇಶದ 11 ಸ್ಥಳಗಳಲ್ಲಿ ಶೋಧ ನಡೆಸಲಾಗಿತ್ತು. ಮಂಗಳವಾರ ಪತ್ತೆಯಾದ 11 ಮಂದಿ ಶಂಕಿತರಲ್ಲಿ ಬೆಂಗಳೂರು ಮತ್ತು ಹುಬ್ಬಳ್ಳಿ ಜಿಲ್ಲೆಗಳಲ್ಲಿ 2012ರ ಲಷ್ಕರ್–ಎ–ತಯ್ಬಾ (ಎಲ್‌ಇಟಿ) ಪಿತೂರಿ ಪ್ರಕರಣದಲ್ಲಿ ಶಿಕ್ಷೆಗೊಳಗಾದ ವ್ಯಕ್ತಿಗಳೂ ಸೇರಿದ್ದಾರೆ. ದಾಳಿ ವೇಳೆ ಡಿಜಿಟಲ್ ಪರಿಕರಗಳು ಮತ್ತು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಇನ್ನು ಎನ್‌ಐಎ ಈ ಕೇಸ್‌ ಸಂಬಂಧ ದೇಶಾದ್ಯಂತ 29 ಸ್ಥಳಗಳಲ್ಲಿ ಶೋಧ ನಡೆಸಿದೆ.

Continue Reading

ಕರ್ನಾಟಕ

Hosanagara News: ಹೊಸನಗರದಲ್ಲಿ ಬಿಎಸ್‌ಎನ್‌ಎಲ್‌ ನೆಟ್‌ವರ್ಕ್‌ ಸಮಸ್ಯೆ; ಟವರ್‌ ಏರಿ ಪ್ರತಿಭಟನೆಗೆ ಮುಂದಾದ ವಕೀಲ!

Hosanagara News: ಹೊಸನಗರ ತಾಲೂಕಿನ ಬಿಎಸ್ಎನ್ಎಲ್ ಮೊಬೈಲ್ (BSNL Mobile) ಗ್ರಾಹಕರ ಸಂಕಷ್ಟಕ್ಕೆ ಪರಿಹಾರವೆಂಬುದು ದಶಕಗಳಿಂದ ಮರೀಚಿಕೆಯಾಗಿಯೇ ಉಳಿದಿದೆ. ನೆಟ್ವರ್ಕ್ ಸಮಸ್ಯೆ ಪರಿಹಾರಕ್ಕಾಗಿ ಒತ್ತಾಯಿಸಿ, ಮೇ 27ರಂದು ಮತ್ತಿಮನೆ ಗ್ರಾಮದಲ್ಲಿನ ಬಿಎಸ್ಎನ್ಎಲ್ ಟವರ್ ಏರಿ ಪ್ರತಿಭಟನೆ ನಡೆಸಲಾಗುವುದು ಎಂದು ವಕೀಲ ಮೋಹನ್ ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ.

VISTARANEWS.COM


on

BSNL network problem in Hosanagara The lawyer decided to climb the tower and protest
Koo

ಹೊಸನಗರ: ತಾಲೂಕಿನ ಬಿಎಸ್ಎನ್ಎಲ್ ಮೊಬೈಲ್ (BSNL Mobile) ಗ್ರಾಹಕರ ಸಂಕಷ್ಟಕ್ಕೆ ಪರಿಹಾರವೆಂಬುದು ದಶಕಗಳಿಂದ ಮರೀಚಿಕೆಯಾಗಿಯೇ ಉಳಿದಿದೆ. ನೆಟ್‌ವರ್ಕ್ ಸಮಸ್ಯೆ ಪರಿಹಾರಕ್ಕಾಗಿ ಒತ್ತಾಯಿಸಿ, ಮೇ 27ರಂದು ಮತ್ತಿಮನೆ ಗ್ರಾಮದಲ್ಲಿನ (Hosanagara News) ಬಿಎಸ್ಎನ್ಎಲ್ ಟವರ್ ಏರಿ ಪ್ರತಿಭಟನೆ ನಡೆಸಲಾಗುವುದು ಎಂದು ವಕೀಲ ಮೋಹನ್ ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಪಟ್ಟಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹೊಸನಗರ ತಾಲೂಕಿನ ಮತ್ತಿಮನೆ, ಸಂಪೆಕಟ್ಟೆ, ನಿಟ್ಟೂರು, ನಗರ, ಮಾಸ್ತಿಕಟ್ಟೆ, ಯಡೂರು ಭಾಗದಲ್ಲಿ ಸಾವಿರಾರು ಗ್ರಾಹಕರು ಬಿಎಸ್ಎನ್ಎಲ್ ಸಿಮ್ ಪಡೆದುಕೊಂಡಿದ್ದಾರೆ. ಪ್ರತಿ ತಿಂಗಳು 250 ರಿಂದ 499 ರೂ. ತನಕ ರೀಚಾರ್ಜ್ ಮಾಡಿಕೊಳ್ಳುತ್ತಾರೆ ಆದರೆ ಬಿಎಸ್‌ಎನ್‌ಎಲ್‌ನ ನೆಟ್‌ವರ್ಕ್ ಸರಿಯಾಗಿ ಇಲ್ಲದೆ ಗ್ರಾಹಕರು ವಂಚಿತರಾಗುತ್ತಿದ್ದಾರೆ. ಮಲೆನಾಡಿನ ಭಾಗದಲ್ಲಿ ಬಿಎಸ್ಎನ್ಎಲ್ ಸಂಸ್ಥೆ ಸಾರ್ವಜನಿಕ ಸೇವೆ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಅವರು ಆರೋಪಿಸಿದರು.

ಇದನ್ನೂ ಓದಿ: Indian 2: ಜು.12ಕ್ಕೆ ಕಮಲ್ ಹಾಸನ್ ಅಭಿನಯದ ‘ಇಂಡಿಯನ್ 2’ ಚಿತ್ರ ರಿಲೀಸ್‌

ಸರ್ಕಾರಿ ಕಚೇರಿಯಲ್ಲಿ ಸರ್ವರ್ ಇಲ್ಲದೆ ಪ್ರತಿನಿತ್ಯ ಸಾರ್ವಜನಿಕರ ಸಮಯ ಮತ್ತು ಹಣ ವ್ಯರ್ಥವಾಗುತ್ತಿದೆ. ಈ ಎಲ್ಲ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಪ್ರತಿಭಟನೆ ನಡೆಸಲು ತೀರ್ಮಾನಿರುವುದಾಗಿ ಅವರು ತಿಳಿಸಿದರು.

ತಾಲೂಕಿನ ಕುಗ್ರಾಮಗಳಾದ ಮತ್ತಿಮನೆ, ಬಸವಾಪುರ, ಬೇಗದಳ್ಳಿ, ಬೇಳೂರು, ಬ್ರಾಹ್ಮಣತರುವೆ, ಬೈದೂರು, ದೊಬ್ಯಾಳು, ಗಿಣಿಕಲ್, ಗುಬ್ಬಿಗ, ಗುಡೋಡಿ, ರಿಪ್ಪನ್ ಪೇಟೆ, ಹೆದ್ದಾರಿಪುರ, ಗರ್ತಿ ಕೆರೆ, ಹುಂಚಹೊಳಗೋಡು, ಹೊರೊಯತಿಗೆ, ಕಳಸೆ, ಕಾನಗೋಡು, ಕರಿಗಲ್ಲು, ಕಟ್ಟೆಕೊಪ್ಪ, ಕಟ್ಟಿನಹೊಳೆ, ಕೆ.ಹೊನ್ನೆಕೊಪ್ಪ, ಕಿಲಂದೂರು ಜಂಗಲ್, ಕೊಳವಾಡಿ, ಕೊರನಕೋಟೆ, ಮಾಗೋಡಿ, ಮಳಲಿ, ಮನಸೆಟ್ಟೆ, ಮಸ್ಕಾನಿ, ನೀಲಕಂಠನ ತೋಟ, ನೆಲಗಳಲೆ, ಪಿ.ಕಲ್ಲುಕೊಪ್ಪ, ರಾವೆ, ತೋಟದ ಕೊಪ್ಪ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಬಿಸ್ಎಸ್‌ಎನ್‌ಎಲ್ ನೆಟ್‌ವರ್ಕ್ ಅತ್ಯಂತ ಕಳಪೆಯಾಗಿದೆ.

ಇದನ್ನೂ ಓದಿ: Kannada New Movie: ಸಿನಿಮಾ ಆಗುತ್ತಿದೆ ʼಪೆನ್‌ಡ್ರೈವ್ʼ! ಕುತೂಹಲಭರಿತ ಪೋಸ್ಟರ್

ಈ ಭಾಗದ ಗ್ರಾಹಕರನ್ನು ಹಲವು ದಶಕಗಳಿಂದ ಬಿಎಸ್‌ಎನ್‌ಎಲ್‌ ವಂಚಿಸುತ್ತಾ ಬಂದಿದೆ. ತಾಲೂಕಿನ ಶೇ.60 ರಷ್ಟು ಗ್ರಾಮ ಪಂಚಾಯಿತಿಗಳಲ್ಲಿ ಇಂಟರ್ನೆಟ್ ಸಂಪರ್ಕ ಸಮರ್ಪಕವಾಗಿಲ್ಲ ಇದರಿಂದ ಗ್ರಾಮ ಪಂಚಾಯಿತಿ ಕಾರ್ಯಕ್ಷಮತೆಗೆ ಸಮಸ್ಯೆ ಉಂಟಾಗುತ್ತಿದೆ. ಈ ಬಗ್ಗೆ ಇಲಾಖೆಗೆ ಹಲವು ಬಾರಿ ಮನವಿ ಮಾಡಿದರೂ ಸ್ಪಂದಿಸುತ್ತಿಲ್ಲ ಎಂದು ವಕೀಲ ಮೋಹನ್ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದರು.

Continue Reading
Advertisement
Phalodi Satta Bazar
ದೇಶ14 mins ago

Phalodi Satta Bazar: ಚುನಾವಣೆಯಲ್ಲಿ ಮೋದಿ ಹ್ಯಾಟ್ರಿಕ್ ಖಚಿತ; ಸಟ್ಟಾ ಬಜಾರ್‌ ಸಮೀಕ್ಷಾ ವರದಿ ಇಲ್ಲಿದೆ

Sara Tendulkar
ಕ್ರಿಕೆಟ್21 mins ago

Sara Tendulkar: ಲಂಡನ್​ ಯೂನಿವರ್ಸಿಟಿಯಿಂದ ಪದವಿ ಪಡೆದ ಸಾರಾ ತೆಂಡೂಲ್ಕರ್​; ಮಗಳ ಸಾಧನೆ ಕೊಂಡಾಡಿದ ಸಚಿನ್​

Liquor ban
ಕರ್ನಾಟಕ46 mins ago

Liquor ban: ಜೂ. 1ರಿಂದ ಐದು ದಿನ ಮದ್ಯ ಮಾರಾಟ ನಿಷೇಧ; ಖರೀದಿಗೆ ಮುಗಿಬಿದ್ದ ಎಣ್ಣೆ ಪ್ರಿಯರು!

Narendra Modi
ದೇಶ49 mins ago

Narendra Modi: 2047ರವರೆಗೆ ದೇಶಕ್ಕಾಗಿ ನನ್ನ ಸೇವೆ; ಇದು ದೇವರ ಆದೇಶ ಎಂದ ಮೋದಿ

HD Kumaraswamy slams CM Siddaramaiah about devegowda statement
ರಾಜಕೀಯ54 mins ago

HD Kumaraswamy: ರಾಕೇಶ್‌ನನ್ನು ವಿದೇಶಿ ಪಾರ್ಟಿಗೆ ನೀವೇ ಕಳಿಸಿ ಸಾವಿಗೆ ಕಾರಣರಾದಿರಿ ಎಂದರೆ ಹೇಗೆ? ಸಿದ್ದರಾಮಯ್ಯಗೆ ಎಚ್‌ಡಿಕೆ ಪ್ರಶ್ನೆ

Former DGP Arrested
ಕ್ರೈಂ1 hour ago

Former DGP Arrested: ವಿಚ್ಛೇದಿತ ಪತ್ನಿಯ ದೂರು; ಮಾಜಿ ಡಿಜಿಪಿ ಜೈಲು ಪಾಲು

ಕ್ರೈಂ1 hour ago

Rameshwaram Cafe Blast: ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣದ 5ನೇ ಆರೋಪಿಗೆ ಲಷ್ಕರ್–ಎ–ತಯ್ಬಾ ಜತೆ ಲಿಂಕ್‌!

CSK vs RC
ಕ್ರೀಡೆ1 hour ago

CSK vs RCB: ಮತ್ತೆ ಆರ್​ಸಿಬಿ, ಕೊಹ್ಲಿಯ ಬಗ್ಗೆ ಕಿಡಿಕಾರಿದ ಚೆನ್ನೈ ತಂಡದ ಮಾಜಿ ಆಟಗಾರ

BSNL network problem in Hosanagara The lawyer decided to climb the tower and protest
ಕರ್ನಾಟಕ1 hour ago

Hosanagara News: ಹೊಸನಗರದಲ್ಲಿ ಬಿಎಸ್‌ಎನ್‌ಎಲ್‌ ನೆಟ್‌ವರ್ಕ್‌ ಸಮಸ್ಯೆ; ಟವರ್‌ ಏರಿ ಪ್ರತಿಭಟನೆಗೆ ಮುಂದಾದ ವಕೀಲ!

union minister pralhad joshi spoke in North East Graduate Constituency Electoral Convention at ballari
ಕರ್ನಾಟಕ1 hour ago

MLC Election: ಜಗತ್ತು ತೆವಳುತ್ತಿದ್ದರೆ ಮೋದಿ ಭಾರತ ಓಡುತ್ತಿದೆ; ಸಚಿವ ಪ್ರಲ್ಹಾದ್‌ ಜೋಶಿ ವ್ಯಾಖ್ಯಾನ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ2 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ3 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು3 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು3 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ4 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ5 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ5 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ5 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ1 week ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌