ಶಬ್ದ ಮಾಲಿನ್ಯ ನಿಯಂತ್ರಣ ಕಾನೂನಿನ ಕಟ್ಟುನಿಟ್ಟಿನ ಜಾರಿಗೆ ಕ್ರಮ: ಆರಗ ಜ್ಞಾನೇಂದ್ರ - Vistara News

ಕರ್ನಾಟಕ

ಶಬ್ದ ಮಾಲಿನ್ಯ ನಿಯಂತ್ರಣ ಕಾನೂನಿನ ಕಟ್ಟುನಿಟ್ಟಿನ ಜಾರಿಗೆ ಕ್ರಮ: ಆರಗ ಜ್ಞಾನೇಂದ್ರ

ಚರ್ಚುಗಳು, ಮಸೀದಿಗಳು ಹಾಗೂ ದೇವಸ್ಥಾನಗಳನ್ನು ಒಳಗೊಂಡಂತೆ ಯಾವುದೇ ತಾರತಮ್ಯ ಇಲ್ಲದಂತೆ ಶಬ್ದ ಮಾಲಿನ್ಯ ನಿಯಂತ್ರಣ ಕಾನೂನನ್ನು ಜಾರಿಗೊಳಿಸಲಾಗುವುದು

VISTARANEWS.COM


on

ಆರಗ ಜ್ಞಾನೇಂದ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಶಬ್ದ ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿ ರಾಜ್ಯ ಸರಕಾರ ಸುಪ್ರೀಂಕೋರ್ಟ್‌ನ ಆದೇಶ ಪಾಲನೆಗೆ ಬದ್ಧವಾಗಿದೆ, ಕಟ್ಟುನಿಟ್ಟಿನ ಕಾನೂನು ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಸುಪ್ರೀಂ ಕೋರ್ಟಿನ ಆದೇಶದಂತೆ, ರಾಜ್ಯದಲ್ಲಿ ಮಾರ್ಗದರ್ಶಿ ಸೂತ್ರಗಳನ್ನು ಈಗಾಗಲೇ ಪ್ರಕಟಿಸಲಾಗಿದೆ.  ರಾತ್ರಿ 10 ಗಂಟೆಯಿಂದ ಬೆಳಗಿನ ಜಾವ 6 ಗಂಟೆಯವರೆಗೆ ಯಾವುದೇ ದ್ವನಿವರ್ಧಕಗಳ ಉಪಯೋಗಕ್ಕೆ ಅವಕಾಶವಿಲ್ಲ. ಈ ಸೂಚನೆಯನ್ನು ಎಲ್ಲರೂ ಪಾಲಿಸಲೇಬೇಕು. ಇಲ್ಲವಾದರೆ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಬೇರೆ ಸಮಯದಲ್ಲಿ ದ್ವನಿವರ್ಧಕ ಗಳಿಂದ ಉತ್ಪತ್ತಿಯಾಗುವ ಶಬ್ದದ ಪ್ರಮಾಣ ಯಾವ ಸಾಂದ್ರತೆಯಲ್ಲಿರಬೇಕು, ಎಂಬುದರ ಬಗ್ಗೆ, ಮಾರ್ಗಸೂಚಿಯಲ್ಲಿ ಹೇಳಲಾಗಿದೆ. ಯಾವ ದರ್ಜೆಯ ಅಧಿಕಾರಿಗಳು, ದ್ವನಿವರ್ಧಕಗಳಿಗೆ ಅನುಮತಿ ನೀಡಬಹುದು ಹಾಗೂ ಕಾನೂನು ಬಾಹಿರವಾಗಿ ಇರುವ ದ್ವನಿವರ್ಧಕಗಳನ್ನು ತೆಗೆದು ಹಾಕಬಹುದು ಎಂಬುದರ ಬಗ್ಗೆಯೂ, ಮಾರ್ಗಸೂಚಿ ಗಳು ಸ್ಪಷ್ಟವಾಗಿ ಉಲ್ಲೇಖಿಸುತ್ತವೆ ಎಂದಿದ್ದಾರೆ.

ಕೈಗಾರಿಕಾ ವಲಯ, ವಸತಿ ಪ್ರದೇಶಗಳು, ವಾಣಿಜ್ಯ ವಲಯ ಹಾಗೂ ನಿಶಬ್ದ ವಲಯ ಗಳಲ್ಲಿ ಯಾವ ಪ್ರಮಾಣದಲ್ಲಿ ಶಬ್ದ ಸಾಂದ್ರತೆ ಇರಬಹುದು ಎಂದೂ ಮಾರ್ಗಸೂಚಿಯಲ್ಲಿ ಈಗಾಗಲೇ ಹೇಳಲಾಗಿದೆ.

ಇದನ್ನೂ ಓದಿ | ಆಜಾನ್‌ V/s ಭಜನೆ:‌ 15 ದಿನ ಮೊದಲು ಅನುಮತಿ ಪಡೆಯದಿದ್ದರೆ ಧ್ವನಿವರ್ಧಕ ಎತ್ತಂಗಡಿ

ಅನುಮತಿ ಇಲ್ಲದೆ ಧ್ವನಿವರ್ಧಕಗಳನ್ನು ಉಪಯೋಗಿಸುತ್ತಿರುವವರು ಇನ್ನು 15 ದಿನದ ಒಳಗೆ, ಸಂಬಂಧ ಪಟ್ಟ ಸಕ್ಷಮ ಅಧಿಕಾರಿಗಳಿಂದ ಅನುಮತಿ ಪಡೆದುಕೊಳ್ಳಬೇಕು. ಇದಕ್ಕೆ ತಪ್ಪಿದ್ದಲ್ಲಿ, ಸಂಬಂಧ ಪಟ್ಟ ಅಧಿಕಾರಿಗಳು, ದ್ವನಿವರ್ಧಕ ಗಳನ್ನು ತೆಗೆಸಿ ಹಾಕುತ್ತಾರೆ. ಇದರಿಂದ ಯಾರಿಗೂ ವಿನಾಯಿತಿ ಇಲ್ಲ. ಚರ್ಚುಗಳು, ಮಸೀದಿಗಳು ಹಾಗೂ ದೇವಸ್ಥಾನಗಳನ್ನು ಒಳಗೊಂಡಂತೆ ಯಾವುದೇ ತಾರತಮ್ಯ ಇಲ್ಲದಂತೆ ಕಾನೂನನ್ನು ಜಾರಿಗೊಳಿಸಲಾಗುವುದು. ಶಬ್ದ ಮಾಲಿನ್ಯ ಉಂಟುಮಾಡುವ ಹಾಗೂ ಅನುಮತಿ ಇಲ್ಲದ ದ್ವನಿವರ್ಧಕ ಗಳನ್ನು, ತೆಗೆದು ಹಾಕುವ ಪ್ರಕ್ರಿಯೆ, ಇಡೀ ರಾಜ್ಯದಲ್ಲಿ ನಡೆಯಲಿದೆ ಎಂದು ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಇದನ್ನೂ ಓದಿ |ಆಜಾನ್‌ ಸ್ಥಗಿತಗೊಳಿಸದಿದ್ದರೆ ಹನುಮಾನ್‌ ಚಾಲೀಸಾ ಪಠಣ: ವಿಶ್ವ ಹಿಂದು ಪರಿಷತ್‌ ಎಚ್ಚರಿಕೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮೈಸೂರು

Suspicious Case : ಮೈಸೂರಿನಲ್ಲಿ ದಂಪತಿ ಅನುಮಾನಾಸ್ಪದ ಸಾವು; ಕೊಲೆಯೋ.. ಆತ್ಮಹತ್ಯೆಯೋ?

Suspicious Case : ಮೈಸೂರಿನಲ್ಲಿ ಮನೆಯೊಂದರಲ್ಲಿ ದಂಪತಿ ಶವ ಪತ್ತೆಯಾಗಿದೆ. ಶವದ ಮೇಲೆ ಯಾವುದೇ ಗಾಯದ ಗುರುತು ಪತ್ತೆಯಾಗಿಲ್ಲ. ಹೀಗಾಗಿ ದಂಪತಿಯ ಅನುಮಾನಾಸ್ಪದ ಸಾವಿನ ಸಂಬಂಧ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

VISTARANEWS.COM


on

By

Suspicious Case in Mysuru
Koo

ಮೈಸೂರು: ಮನೆಯಲ್ಲೇ ದಂಪತಿ ಅನುಮಾನಾಸ್ಪದವಾಗಿ (Suspicious Case) ಮೃತಪಟ್ಟಿದ್ದಾರೆ. ಮೈಸೂರಿನ ಪಿರಿಯಾಪಟ್ಟಣದ ಗೊಲ್ಲರ ಬೀದಿಯಲ್ಲಿ ಘಟನೆ ನಡೆದಿದೆ. ಪ್ರಕಾಶ್ (51), ಯಶೋಧ (48) ಮೃತಪಟ್ಟವರು.

ಪ್ರಕಾಶ್‌ ಅವರು ರಸ್ತೆ ಬದಿ ಕ್ಯಾಂಟಿನ್ ನಡೆಸುತ್ತಿದ್ದರೆ, ಯಶೋಧಾ ಪ್ಲೋರ್ ಮಿಲ್ ನಡೆಸುತ್ತಿದ್ದರು. ಭಾನುವಾರ ಇಬ್ಬರು ಮನೆಯಲ್ಲೇ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇನ್ನೂ ದೇಹದ ಮೇಲೂ ಯಾವುದೇ ಗಾಯದ ಗುರುತು ಇಲ್ಲ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದನ್ನು ತಿಳಿಯಲು ಎಲ್ಲ ಆಯಾಮದಲ್ಲೂ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ. ಮೃತರ ಮೊಬೈಲ್‌ಗಳನ್ನು ವಶಕ್ಕೆ ಪಡೆದು, ಅಕ್ಕ-ಪಕ್ಕದ ಸಿಸಿಟಿವಿಯನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Yelahanka flyover : ಯುವತಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಯುವಕನ ಡೆಡ್ಲಿ ಬೈಕ್‌ ರೈಡಿಂಗ್‌!

ಕಲ್ಲಿನಿಂದ ಜಜ್ಜಿ ಯುವಕನ ಬರ್ಬರ ಹತ್ಯೆ; ಕೆಆರ್‌ ಮಾರ್ಕೆಟ್‌ನಲ್ಲಿ ಶವ ಪತ್ತೆ

ವಿಜಯಪುರ: ಕಲ್ಲಿನಿಂದ ಜಜ್ಜಿ ಯುವಕನ ಬರ್ಬರ ಹತ್ಯೆ (Murder Case) ಆಗಿದೆ. ವಿಜಯಪುರ ನಗರದ ಎಪಿಎಂಸಿ ಮೇಕೆ ಹಾಗೂ ಕುರಿ ಮಾರುಕಟ್ಟೆಯ ಬಳಿ (Vijayapura Murder Case) ಘಟನೆ ನಡೆದಿದೆ. ರೋಹಿತ್ ಸುಭಾಶ ಪವಾರ (22) ಕೊಲೆಯಾದವನು.

ವಿಜಯಪುರ ನಗರದ ಕಂಬಾರ ಓಣಿ ನಿವಾಸಿ ರೋಹಿತ್‌ನನ್ನು ಕಲ್ಲಿನಿಂದ ಜಜ್ಜಿ ಕೊಲೆಗೈದು ಬಳಿಕ ಮುಳ್ಳುಕಂಟಿಯಲ್ಲಿ ಶವ ಬಿಸಾಡಿದ್ದಾರೆ. ಸ್ಥಳದಲ್ಲಿ ಬಿಯರ್ ಬಾಟಲ್, ಚಿಪ್ಸ್ ಪ್ಯಾಕೇಟ್ ಪತ್ತೆಯಾಗಿದೆ. ಹೀಗಾಗಿ ಕುಡಿದ ಮತ್ತಿನಲ್ಲಿ ಪರಿಚಯಸ್ಥರಿಂದ ಕೊಲೆ ಆಗಿರಬಹುದೆಂದು ಶಂಕಿಸಲಾಗಿದೆ.

ಖಾಲಿದ್ ಇನಾಂದಾರ್ ಎಂಬಾತ ರೋಹಿತ್ ಪೋಷಕರಿಗೆ ನಿನ್ನೆ ಭಾನುವಾರ ತಡರಾತ್ರಿ 2.21ಕ್ಕೆ ಕರೆ ಮಾಡಿ ರೋಹಿತ್ ಕೊಲೆಯಾಗಿದೆ ಎಂದು ಮಾಹಿತಿ ನೀಡಿದ್ದ. ಕರೆ ಅನ್ವಯ ರೋಹಿತ್ ಮನೆಯವರು ಆತನಿಗಾಗಿ ಹುಡುಕಾಡಿದ್ದರು. ಖಾಲೀದ್ ಮನೆಗೆ ಹೋದರೂ ಆತ ಅಲ್ಲಿರಲಿಲ್ಲ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ನಂತರ ರೋಹಿತ್‌ಗಾಗಿ ಹುಡುಕಾಡಿದಾಗ ಆತನ ಶವ ಎಪಿಎಂಸಿ ಆವರಣದಲ್ಲಿ ಕಂಡು ಬಂದಿದೆ.

ಇದನ್ನೂ ಓದಿ: IPL 2024 : ಐಪಿಎಲ್‌ ಬೆಟ್ಟಿಂಗ್‌ಗಾಗಿ ಮೈ ತುಂಬಾ ಸಾಲ; ನೇಣಿಗೆ ಶರಣಾದ ಯುವಕ

ಕೂಡಲೇ ರೋಹಿತ್‌ ಕುಟುಂಬಸ್ಥರು ಎಪಿಎಂಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ವಿಜಯಪುರ ಡಿವೈಎಸ್‌ಪಿ ಬಸವರಾಜ ಯಲಿಗಾರ ಹಾಗೂ ಇತರೆ ಅಧಿಕಾರಿಗಳು ಪ್ರಾಥಮಿಕ ತನಿಖೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದ್ದಾರೆ. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿ‌ ಘಟನೆ ನಡೆದಿದೆ. ಕೊಲೆಗಾರರಿಗಾಗಿ ಹುಡುಕಾಟ ನಡೆಸಿದ್ದಾರೆ.

ಬೆಂಗಳೂರು ಸಿಟಿ ಮಾರ್ಕೆಟ್‌ನಲ್ಲಿ ಅಪರಿಚಿತ ಶವ ಪತ್ತೆ

ಬೆಂಗಳೂರಿನಲ್ಲಿ ಅಪರಿಚಿತ ವ್ಯಕ್ತಿಯ ಕೊಲೆಯಾಗಿದೆ. ಸಿಟಿ ಮಾರ್ಕೆಟ್ ಕಾಂಪ್ಲೆಕ್ಸ್ ಹಿಂಭಾಗದಲ್ಲಿ ಮೃತದೇಹ ಪತ್ತೆಯಾಗಿದೆ. ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತುಹಾಕಿ ಕೊಲೆ ಮಾಡಿದ್ದಾರೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ಸಿಟಿ ಮಾರ್ಕೆಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಪ್ರಕರಣ ಸಂಬಂಧ ತನಿಖೆಯನ್ನು ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Yelahanka flyover : ಯುವತಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಯುವಕನ ಡೆಡ್ಲಿ ಬೈಕ್‌ ರೈಡಿಂಗ್‌!

Yelahanka flyover : ಬೆಂಗಳೂರಿನ ಯಲಹಂಕ ಫ್ಲೈಓವರ್‌ನಲ್ಲಿ ಜೋಡಿಯೊಂದರ ಡೆಡ್ಲಿ ಬೈಕ್ ರೈಡಿಂಗ್ (Bike Riding) ವಿಡಿಯೊ ವೈರಲ್‌ ಆಗಿದೆ. ಯುವತಿಯನ್ನು ತೊಡೆಯ ಮೇಲೆ ಕೂರಿಸಿಕೊಂಡ ಯುವಕ ಫ್ಲೈಓವರ್‌ನಲ್ಲಿ ಜಾಲಿ ರೈಡ್‌ ಮಾಡಿದ್ದಾನೆ. ಇದನ್ನೂ ಇತರೆ ಸವಾರರು ತಮ್ಮ ಮೊಬೈಲ್‌ನಲ್ಲಿ ಸೆರೆಯಿಡಿದ್ದಾರೆ.

VISTARANEWS.COM


on

By

yelahanka flyover
Koo

ಬೆಂಗಳೂರು: ಇತ್ತೀಚೆಗೆ ಜೋಡಿಗಳು ಬೈಕ್​ನಲ್ಲಿ ಹೋಗುತ್ತಲೇ ರೊಮ್ಯಾನ್ಸ್ (Romance in bike riding) ಮಾಡುವ ಪ್ರಕರಣಗಳು ಹೆಚ್ಚಾಗುತ್ತಿದೆ. ಹುಚ್ಚು ಸಾಹಸವೂ, ಪ್ರೇಮದ ಉನ್ಮಾದವೋ ಗೊತ್ತಿಲ್ಲ. ಇದು ಅಪಾಯಕಾರಿ ಎಂದು ಗೊತ್ತಿದ್ದರೂ ಪರಸ್ಪರ ಎದುರುಬದುರು ಕುಳಿತುಕೊಂಡು ಮುದ್ದಾಡಿಕೊಂಡು ಹೋಗುವುದು, ಯುವತಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಡೆಡ್ಲಿ ರೈಡಿಂಗ್‌ ಮಾಡುವುದು ಹೆಚ್ಚುತ್ತಿದೆ. ಸದ್ಯ ಬೆಂಗಳೂರಲ್ಲಿ (Yelahanka flyover) ಜೋಡಿಯೊಂದರ ಬೈಕ್ ರೈಡಿಂಗ್ (Bike Riding ವಿಡಿಯೊ ವೈರಲ್‌ ಆಗಿದೆ.

ಯುವತಿಯನ್ನು ತೊಡೆಯ ಮೇಲೆ ಕೂರಿಸಿಕೊಂಡು ಯುವಕ ಬೈಕ್‌ ರೈಡ್ ಮಾಡಿದ್ದಾನೆ. ಬೆಂಗಳೂರಿನ ಏರ್‌ಪೋರ್ಟ್ ರಸ್ತೆಯ ಯಲಹಂಕ ಫ್ಲೈ‌ಓವರ್‌ನಲ್ಲಿ ಮೇ 17ರ ರಾತ್ರಿ‌ ಈ ಘಟನೆ ನಡೆದಿದೆ. ಯುವ ಜೋಡಿಗಳು ಹೆಲ್ಮೆಟ್ ಧರಿಸದೇ ಅಜಾಗರೂಕತೆಯಿಂದ ಬೈಕ್ ಚಾಲನೆ ಮಾಡಿದ್ದಾರೆ. ಜೋಡಿಗಳ ಜಾಲಿ‌ ರೈಡ್‌ನ ದೃಶ್ಯ ಕಾರಿನಲ್ಲಿ ಹೋಗುತ್ತಿದ್ದ ಪ್ರಯಾಣಿಕರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಿಡಿದ್ದಾರೆ.

ಇದನ್ನೂ ಓದಿ: Viral Video: ಐಸ್ ಕ್ರೀಮ್‌ನಲ್ಲಿ ಚಿನ್ನದ ಉಂಗುರ ಅಡಗಿಸಿಕೊಟ್ಟ ಪ್ರಿಯತಮ! ಮುಂದೇನಾಯ್ತು?

ಇತ್ತ ಸೋಶಿಯಲ್‌ ಮೀಡಿಯಾದಲ್ಲಿ ಈ ವಿಡಿಯೊ ವೈರಲ್‌ ಆಗಿದ್ದು, ಸಾರ್ವಜನಿಕ ಸುರಕ್ಷತೆ ಅಪಾಯಗಳ ಬಗ್ಗೆ ವ್ಯಾಪಕ ಕಳವಳ ಹುಟ್ಟುಹಾಕಿದೆ. ಹೆಲ್ಮೆಟ್ ಧರಿಸದೆ ಇರುವುದು ಜತೆಗೆ ಯುವತಿ ಪೆಟ್ರೋಲ್‌ ಟ್ಯಾಂಕ್ ಮೇಲೆ ಕುಳಿತು ತನ್ನ ಸಂಗಾತಿಯನ್ನು ಅಪ್ಪಿಕೊಂಡಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.

ಅಜಾಗರೂಕ ಮತ್ತು ಅನುಚಿತ ವರ್ತನೆಗಾಗಿ ದಂಡ ವಿಧಿಸಿ ಎಂದು ನೆಟ್ಟಿಗರು ಕಾಮೆಂಟ್‌ ಹಾಕಿದ್ದಾರೆ. ರಸ್ತೆ ಸುರಕ್ಷತೆಯ ಬಗ್ಗೆ ಮತ್ತು ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಅಗತ್ಯತೆಯ ಬಗ್ಗೆ ಚರ್ಚಿಸಿದ್ದಾರೆ. ಯಲಹಂಕ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: Murder Case : ಕಲ್ಲಿನಿಂದ ಜಜ್ಜಿ ಯುವಕನ ಬರ್ಬರ ಹತ್ಯೆ; ಕೆಆರ್‌ ಮಾರ್ಕೆಟ್‌ನಲ್ಲಿ ಶವ ಪತ್ತೆ

ಛೀ…ಈತನೆಂಥಾ ಕಾಮುಕ! ಸಾರ್ವಜನಿಕ ಸ್ಥಳದಲ್ಲಿ ಈ ಪಾಪಿ ಬಾಲಕಿಗೆ ಮಾಡಿದ್ದೇನು ಗೊತ್ತಾ?

ನವದೆಹಲಿ: ಕಾಮುಕನೋರ್ವ ಸಾರ್ವಜನಿಕ ಸ್ಥಳದಲ್ಲಿ ಅಪ್ರಾಪ್ತ ಬಾಲಕಿ(Minor Girl)ಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣ(Social Media)ದಲ್ಲಿ ವೈರಲ್‌ (Viral Video) ಆಗಿದ್ದು, ಈ ಹೇಯ ಕೃತ್ಯಕ್ಕೆ ನೆಟ್ಟಿಗರು ಕಿಡಿ ಕಾರಿದ್ದಾರೆ. ಜನನಿಬಿಡ ಪ್ರದೇಶದಲ್ಲಿ ತನ್ನ ತಾಯಿಯೊಂದಿಗೆ ನಿಂತಿದ್ದ ಬಾಲಕಿಯ ಹಿಂದೆ ಹೋಗಿ ನಿಲ್ಲುವ ಕಾಮುಕ ತನ್ನ ಕುಚೇಷ್ಠೆ ಶುರು ಮಾಡುತ್ತಾನೆ. ಆಕೆಯ ಹಿಂಬಂದಿಯನ್ನು ಅನುಚಿತವಾಗಿ ಮುಟ್ಟಿ ವಿಕೃತಿ ಮೆರೆಯುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ದೆಹಲಿಯ ಸಾದರ್‌ ಬಜಾರ್‌ನಲ್ಲಿ ಈ ಘಟನೆ ನಡೆದಿದ್ದು, ಕಾಮುಕನ ಕುಚೇಷ್ಠೆಯನ್ನು ಅಲ್ಲೇ ಇದ್ದ ವ್ಯಕ್ತಿಯೊಬ್ಬ ರೆಕಾರ್ಡ್‌ ಮಾಡಿದ್ದಾನೆ. ವಿಡಿಯೋ ಮಾಡುತ್ತಿರುವುದು ಗೊತ್ತಾಗುತ್ತಿದ್ದಂತೆ ಆ ವ್ಯಕ್ತಿ ಸ್ಥಳದಿಂದ ಎಸ್ಕೇಪ್‌ ಆಗಿದ್ದಾನೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್‌ ವೈರಲ್‌ ಆಗಿದ್ದು, ಪೊಲೀಸರು ಸ್ವಯಂಪ್ರೇರಿತ ಕೇಸ್‌ ದಾಖಲಿಸಿಕೊಂಡು ತನಿಖೆ ನಡೆಸಬೇಕೆಂದು ನೆಟ್ಟಿಗರು ಆಗ್ರಹಿಸಿದ್ದಾರೆ.

ಇನ್ನು ಪತ್ತೆಯಾಗದ ಕಿಡಿಗೇಡಿ

ಇನ್ನು ಘಟನೆಗೆ ಸಂಬಂಧಿಸಿದಂತೆ ಈ ನೀಚ ಕೃತ್ಯ ಎಸಗಿರುವ ಕಾಮುಕ ಇನ್ನೂ ಪತ್ತೆಯಾಗಿಲ್ಲ. ಪೊಲೀಸ್‌ ದೂರು ಕೂಡ ದಾಖಲಾಗಿಲ್ಲ. ಇನ್ನು ಅಪ್ರಾಪ್ತ ಬಾಲಕಿಗೆ ಈ ನೀಚ ಕೃತ್ಯದ ಬಗ್ಗೆ ಅರಿವಾಗಿಲ್ಲ ಎಂಬಂತೆ ವಿಡಿಯೋದಲ್ಲಿ ಭಾಸವಾಗುತ್ತಿದೆ. ಇನ್ನು ಮತ್ತೊಂದು ವರದಿ ಪ್ರಕಾರ ಪೊಲೀಸರಿಗೆ ಈ ಬಗ್ಗೆ ದೂರು ನೀಡಲಾಗಿದ್ದು, ಕಿಡಿಗೇಟಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಆರೋಪಿಗಾಗಿ ಪೊಲೀಸರ ತೀವ್ರ ಶೋಧ ನಡೆಸುತ್ತಿದ್ದಾರೆ ಎನ್ನಲಾಗಿದೆ.

ನೆಟ್ಟಿಗರಿಂದ ಆಕ್ರೋಶ:

ಇನ್ನು ಈ ಹೇಯ ಕೃತ್ಯದ ವಿಡಿಯೋ ಎಲ್ಲೆಡೆ ವೈರಲ್‌ ಆಗುತ್ತಿದ್ದಂತೆ ನೆಟ್ಟುಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕ್ರಿಮಿನಲ್ ಬಾಲಕಿ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ. ಈತ ನಿಮ್ಮ ಕಣ್ಣಿಗೆ ಬಿದ್ದರೆ ಪೊಲೀಸರಿಗೆ ಒಪ್ಪಿಸಬೇಡಿ..ನಿಮಗೇನು ಮಾಡಬೇಕು ಅಂತ ಅನಿಸುತ್ತದೆಯೋ ಅದನ್ನೇ ಮಾಡಿ ಎಂದು ಒಬ್ಬರು ಕಮೆಂಟ್‌ ಮಾಡಿದ್ದಾರೆ. ಇವರೆಲ್ಲ ಅತ್ಯಾಚಾರಿಗಳು..ಇವರು ಅಷ್ಟು ಸುಲಭವಾಗಿ ಕೈಗೆ ಸಿಗುವುದಿಲ್ಲ. ಇವನನ್ನು ತಕ್ಷಣ ಅರೆಸ್ಟ್‌ ಮಾಡಿ, ಕಠಿಣ ಶಿಕ್ಷೆ ವಿಧಿಸಿ ಎಂದು ಬರೆದುಕೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Bomb Threat: ಏರ್‌ಪೋರ್ಟ್‌ನಲ್ಲಿ ಬಾಂಬ್‌ ಇದೆ ಎಂದು ತಮಾಷೆ ಮಾಡಲು ಹೋಗಿ ಜೈಲು ಪಾಲಾದ

Bomb Threat: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್‌ ಇಟ್ಟಿರುವುದಾಗಿ ಹೇಳಿ ಜೋಕ್‌ ಮಾಡಲು ಹೋಗಿ ವ್ಯಕ್ತಿಯೊಬ್ಬ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಏರ್‌ಪೋರ್ಟ್‌ ಬೋರ್ಡಿಂಗ್ ವೇಳೆ ಬ್ಯಾಗ್‌ನಲ್ಲಿ ಬಾಂಬ್ ಇದೆ ಎಂದು ಹೇಳಿ ಹರಿಯಾಣ ಮೂಲದ ರಾಜೇಶ್ ಕುಮಾರ್ ಕೆಲ ಕಾಲ ಆತಂಕ ಸೃಷ್ಟಿಸಿದ್ದ. ಬೆಂಗಳೂರಿನಿಂದ ಪುಣೆಗೆ ವಿಮಾನ ಟಿಕೆಟ್ ಬುಕ್ ಮಾಡಿ ಏರ್‌ಪೋರ್ಟ್‌ಗೆ ಆಗಮಿಸಿದ್ದ ಆತ ಟರ್ಮಿಟನ್ 2 ಬೋರ್ಡಿಂಗ್ ತಪಾಸಣೆ ವೇಳೆ ಹುಚ್ಚಾಟ ಮೆರೆದಿದ್ದ. ತಪಾಸಣೆ ವೇಳೆ ಯಾವುದೇ ಬಾಂಬ್‌ ಪತ್ತೆಯಾಗಿಲ್ಲ. ಸದ್ಯ ರಾಜೇಶ್‌ ಕುಮಾರ್‌ನನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

Bomb Threat
Koo

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಹುಸಿ ಬಾಂಬ್‌ ಬೆದರಿಕೆ (Bomb Threat) ಕರೆ ಹೆಚ್ಚಾಗುತ್ತಿದೆ. ವಿಮಾನ ನಿಲ್ದಾಣ, ರೈಲು ನಿಲ್ದಾಣ, ಶಾಲೆ, ಆಸ್ಪತ್ರೆ ಮುಂತಾದೆಡೆ ಬಾಂಬ್‌ ಇಟ್ಟಿರುವುದಾಗಿ ಅನೇಕ ಕರೆಗಳು ಬಂದಿವೆ. ಇದರಿಂದ ಪೊಲೀಸರೂ ಜಾಗೃತರಾಗಿದ್ದು, ಸಾಕಷ್ಟು ಮುನ್ನೆಚ್ಚರಿಕೆ ವಹಿಸಿದ್ದಾರೆ. ಈ ಮಧ್ಯೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್‌ ಇಟ್ಟಿರುವುದಾಗಿ ಹೇಳಿ ಜೋಕ್‌ ಮಾಡಲು ಹೋಗಿ ವ್ಯಕ್ತಿಯೊಬ್ಬ ಈಗ ಪೊಲೀಸರ ಅತಿಥಿಯಾಗಿದ್ದಾನೆ.

ಏರ್‌ಪೋರ್ಟ್‌ ಬೋರ್ಡಿಂಗ್ ವೇಳೆ ಬ್ಯಾಗ್‌ನಲ್ಲಿ ಬಾಂಬ್ ಇದೆ ಎಂದು ಹೇಳಿ ಹರಿಯಾಣ ಮೂಲದ ರಾಜೇಶ್ ಕುಮಾರ್ ಕೆಲ ಕಾಲ ಆತಂಕ ಸೃಷ್ಟಿಸಿದ್ದ. ಬೆಂಗಳೂರಿನಿಂದ ಪುಣೆಗೆ ವಿಮಾನ ಟಿಕೆಟ್ ಬುಕ್ ಮಾಡಿ ಏರ್‌ಪೋರ್ಟ್‌ಗೆ ಆಗಮಿಸಿದ್ದ ಆತ ಟರ್ಮಿಟನ್ 2 ಬೋರ್ಡಿಂಗ್ ತಪಾಸಣೆ ವೇಳೆ ಹುಚ್ಚಾಟ ಮೆರೆದಿದ್ದ. ತಪಾಸಣೆ ವೇಳೆ ಯಾವುದೇ ಬಾಂಬ್‌ ಪತ್ತೆಯಾಗಿಲ್ಲ. ಇದೀಗ ಹುಸಿ ಬಾಂಬ್‌ ಬೆದರಿಕೆ ಹಾಕಿ ಆತಂಕದ ವಾತಾವರಣ ಸೃಷ್ಟಿಸಿದ್ದ ರಾಜೇಶ್‌ ಕುಮಾರ್‌ನನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣದ ಹಿನ್ನೆಲೆ

ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ರಾಜೇಶ್‌ ಕುಮಾರ್‌ ತನ್ನ ಬ್ಯಾಗ್‌ನಲ್ಲಿ ಬಾಂಬ್‌ ಇದೆ ಎಂದು ಹೇಳಿಕೊಂಡಿದ್ದ. ಏರ್‌ಪೋರ್ಟ್‌ ಬೋರ್ಡಿಂಗ್ ವೇಳೆ ಸಹಪ್ರಯಾಣಿಕರ ಜತೆಗೂ ಇದನ್ನೇ ಹೇಳಿದ್ದ. ಆತನ ಮಾತು ಕೇಳಿ ದಂಗಾಗಿ ಹೋಗಿದ್ದ ಏರ್‌ಪೋರ್ಟ್‌ ಭದ್ರತಾ ಸಿಬ್ಬಂದಿ ಕೂಡಲೇ ಆತನ ಬಳಿಯಿದ್ದ ಬ್ಯಾಗ್ ವಶಕ್ಕೆ ಪಡೆದು ತಪಾಸಣೆ ನಡೆಸಿದ್ದರು.

ಜತೆಗೆ ಬಾಂಬ್ ಸ್ಕ್ವಾಡ್ ಹಾಗೂ ಏರ್‌ಪೋರ್ಟ್‌ ಠಾಣೆ ಪೊಲೀಸರಿಗೂ ಮಾಹಿತಿ ನೀಡಿದ್ದರು. ತಪಾಸಣೆ ವೇಳೆ ಯಾವುದೇ ಬಾಂಬ್ ಪತ್ತೆಯಾಗಿಲ್ಲ. ವಿಚಾರಣೆ ವೇಳೆ ರಾಜೇಶ್‌ ಕುಮಾರ್‌, ʼʼಥ್ರಿಲ್‌ಗಾಗಿ ಈ ರೀತಿ ಹೇಳಿಕೆ ನೀಡಿದ್ದೆ. ತಮಾಷೆ ಮಾಡಿದ್ದೆʼʼ ಎಂದು ರಾಜೇಶ್‌ ಕುಮಾರ್‌ ಬಾಯಿ ಬಿಟ್ಟಿದ್ದಾನೆ. ಇದರಿಂದ ಕೆಲ ಕಾಲ ಮೂಡಿದ್ದ ಆತಂಕದ ವಾತಾವರಣ ತಿಳಿಯಾಗಿ ಎಲ್ಲರೂ ಸಮಾಧಾನದ ನಿಟ್ಟುಸಿರು ಬಿಟ್ಟಿದ್ದಾರೆ. ಸದ್ಯ ಪೊಲೀಸರು ವಶದಲ್ಲಿರುವ ರಾಜೇಶ್‌ ಕುಮಾರ್‌ನ ವಿಚಾರಣೆ ಮುಂದುವರಿದಿದೆ.

ಏರ್‌ ಇಂಡಿಯಾ ವಿಮಾನದಲ್ಲಿ ಮತ್ತೆ ಅವಘಡ

ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣದಿಂದ ಕೊಚ್ಚಿಗೆ ಹೊರಟಿದ್ದ ಏರ್ ಇಂಡಿಯಾ(Air India) ವಿಮಾನ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶ(Emergency Landing) ಮಾಡಿದೆ. ಬೆಂಗಳೂರಿನಿಂದ ಕೇರಳದ ಕೊಚ್ಚಿಗೆ ಹೊರಟಿದ್ದ ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿತ್ತು. ಹೀಗಾಗಿ ತುರ್ತು ಭೂ ಸ್ಪರ್ಶ ಮಾಡಲಾಗಿದ್ದು, ಭಾರೀ ಅವಘಡವೊಂದು ತಪ್ಪಿದೆ.

AI 1132 ಏರ್​ ಇಂಡಿಯಾ ವಿಮಾನ ರಾತ್ರಿ 11.20ಕ್ಕೆ ಬೆಂಗಳೂರಿನಿಂದ ಕೊಚ್ಚಿಗೆ ತೆರಳಲು ಟೇಕ್​​ ಆಫ್ ಆಗಿತ್ತು. ಆದರೆ ವಿಮಾನದಲ್ಲಿ ಏಕಾಏಕಿ ಬೆಂಕಿ ಹೊಗೆ ಕಾಣಿಸಿಕೊಂಡಿದೆ. ಕೂಡಲೆ ಪೈಲಟ್​​ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೇ ಎಮರ್ಜೆನ್ಸಿ ಲ್ಯಾಂಡ್​ ಮಾಡಿದರು. ಇದರಿಂದ ಭಾರಿ ಅನಾಹುತ ತಪ್ಪಿದೆ. ವಿಮಾನ ಭೂ ಸ್ಪರ್ಶವಾಗುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಕೂಡಲೆ ಬೆಂಕಿಯನ್ನು ನಂದಿಸಿದ್ದಾರೆ. ವಿಮಾನದಲ್ಲಿದ್ದ ಸಿಬ್ಬಂದಿ ಸೇರಿ 170 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಅದೃಷ್ಟವಶಾತ್‌ ಯಾವುದೆ ಪ್ರಾಣಾಪಾಯ ಸಂಭವಿಸಿಲ್ಲ.

ಇದನ್ನೂ ಓದಿ: Cyber Crime: ಸೈಬರ್ ಕ್ರೈಂ ಜಾಲ ಪತ್ತೆ; ಬಲೆಗೆ ಬಿದ್ದ ಸಿಮ್ ಕಾರ್ಡ್ ಪೂರೈಸುತ್ತಿದ್ದ ವ್ಯಕ್ತಿ

Continue Reading

ಕರ್ನಾಟಕ

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನ, ಬೆಳ್ಳಿ ದರ

Gold Rate Today:ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,840ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹54,720 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹68,400 ಮತ್ತು ₹6,84,000 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,462 ಆಗಿದ್ದರೆ, ಎಂಟು ಗ್ರಾಂ ಬೆಲೆ ₹59,696 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹74,620 ಮತ್ತು ₹7,46,200 ವೆಚ್ಚವಾಗಲಿದೆ.

VISTARANEWS.COM


on

Gold Rate Today
Koo

ಬೆಂಗಳೂರು: ಅಕ್ಷಯ ತದಿಗೆಯ ಬಳಿಕ ಚಿನ್ನದ ಮಾರುಕಟ್ಟೆಯಲ್ಲಿ ದಿನೇ ದಿನೆ ಏರಿಳಿಕೆ ಸಾಮಾನ್ಯವಾಗಿದೆ. ನಿನ್ನೆ ದರ ಏರಿಕೆ ಆಗಿತ್ತು. ಬೆಲೆ ಯಥಾಸ್ಥಿತಿ ಕಾಪಾಡಿಕೊಂಡಿದೆ. ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ ನಿನ್ನೆ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಕ್ರಮವಾಗಿ ₹80 ಹಾಗೂ ₹87 ಏರಿಕೆಯಾಗಿತ್ತು. ಇಂದು ನಿನ್ನೆಯಷ್ಟೇ ಬೆಲೆ ಯಥಾಸ್ಥಿತಿ ಕಾಪಾಡಿಕೊಂಡಿದೆ.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,840ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹54,720 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹68,400 ಮತ್ತು ₹6,84,000 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,462 ಆಗಿದ್ದರೆ, ಎಂಟು ಗ್ರಾಂ ಬೆಲೆ ₹59,696 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹74,620 ಮತ್ತು ₹7,46,200 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹89, ಎಂಟು ಗ್ರಾಂ ₹712 ಮತ್ತು 10 ಗ್ರಾಂ ₹890ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹8,900 ಮತ್ತು 1 ಕಿಲೋಗ್ರಾಂಗೆ ₹89,000 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ68,55074,770
ಮುಂಬಯಿ68,40074,620
ಬೆಂಗಳೂರು68,40074,620
ಚೆನ್ನೈ68,50074,730

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

1) ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

2) ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

3) ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

ಇದನ್ನೂ ಓದಿ: Karnataka Weather : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ; ಆರೆಂಜ್‌, ಯೆಲ್ಲೋ ಎಚ್ಚರಿಕೆ

4) ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

Continue Reading
Advertisement
Suspicious Case in Mysuru
ಮೈಸೂರು5 mins ago

Suspicious Case : ಮೈಸೂರಿನಲ್ಲಿ ದಂಪತಿ ಅನುಮಾನಾಸ್ಪದ ಸಾವು; ಕೊಲೆಯೋ.. ಆತ್ಮಹತ್ಯೆಯೋ?

IPL 2024 The people paid revenge for the controversial post ashwini Puneeth Rajkumar
ಸ್ಯಾಂಡಲ್ ವುಡ್6 mins ago

IPL 2024 : ʻಅಶ್ವಿನಿ ದೊಡ್ಮನೆಯ ಅದೃಷ್ಟ ದೇವತೆ’: ತುಚ್ಛ ಪದ ಬಳಸಿದವರಿಗೆ ಭಾರೀ ತಿರುಗೇಟು!

Kattappa To Turn Modi Sathyaraj To Play Biopic On Prime Minister
ಬಾಲಿವುಡ್14 mins ago

Kattappa To Turn Modi: ಮೋದಿ ಪಾತ್ರದಲ್ಲಿ `ಬಾಹುಬಲಿ’ ಕಟ್ಟಪ್ಪ!

yelahanka flyover
ಬೆಂಗಳೂರು29 mins ago

Yelahanka flyover : ಯುವತಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಯುವಕನ ಡೆಡ್ಲಿ ಬೈಕ್‌ ರೈಡಿಂಗ್‌!

Bomb Threat
ಕರ್ನಾಟಕ31 mins ago

Bomb Threat: ಏರ್‌ಪೋರ್ಟ್‌ನಲ್ಲಿ ಬಾಂಬ್‌ ಇದೆ ಎಂದು ತಮಾಷೆ ಮಾಡಲು ಹೋಗಿ ಜೈಲು ಪಾಲಾದ

Gold Rate Today
ಕರ್ನಾಟಕ36 mins ago

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನ, ಬೆಳ್ಳಿ ದರ

viral video
ವೈರಲ್ ನ್ಯೂಸ್57 mins ago

Viral Video: ಅಬ್ಬಾ..ಹಸುಗಳ ಫೈಟ್‌ಗೆ ಬಾಲಕಿ ಅಪ್ಪಚ್ಚಿ! ಶಾಕಿಂಗ್‌ ವಿಡಿಯೋ ವೈರಲ್‌

Murder case
ಕ್ರೈಂ59 mins ago

Murder Case : ಕಲ್ಲಿನಿಂದ ಜಜ್ಜಿ ಯುವಕನ ಬರ್ಬರ ಹತ್ಯೆ; ಕೆಆರ್‌ ಮಾರ್ಕೆಟ್‌ನಲ್ಲಿ ಶವ ಪತ್ತೆ

Sobhita Dhulipala golden new look from Cannes Film Festival
ಬಾಲಿವುಡ್1 hour ago

Cannes 2024: ಆಸ್ಕರ್‌ ಪ್ರಶಸ್ತಿಯ ಆಕಾರದಂತೆ ಕಂಡ ಶೋಭಿತಾ ಧೂಲಿಪಾಲ!

IPL 2024 Man commits suicide after taking loan for IPL betting
ರಾಯಚೂರು1 hour ago

IPL 2024 : ಐಪಿಎಲ್‌ ಬೆಟ್ಟಿಂಗ್‌ಗಾಗಿ ಮೈ ತುಂಬಾ ಸಾಲ; ನೇಣಿಗೆ ಶರಣಾದ ಯುವಕ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ5 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20245 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌