Site icon Vistara News

Suicide Case: ಜೀವನದಲ್ಲಿ ಜಿಗುಪ್ಸೆಗೊಂಡು ಆಟೋ ಚಾಲಕ ಆತ್ಮಹತ್ಯೆ

Auto Driver Suicide ripponpet

#image_title

ರಿಪ್ಪನ್‌ಪೇಟೆ: ಜೀವನದಲ್ಲಿ ಜಿಗುಪ್ಸೆಗೊಂಡ ಆಟೋ ಚಾಲಕರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ (Suicide Case) ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಬೆಳಕೋಡು ಗ್ರಾಮದಲ್ಲಿ ನಡೆದಿದೆ.

ಬೆಳಕೋಡು ನಿವಾಸಿ ಬಿನೋಯ್ ಸ್ಕರಿಯಾ (52) ಆತ್ಮಹತ್ಯೆ ಮಾಡಿಕೊಂಡವರು. ರಿಪ್ಪನ್‌ಪೇಟೆ ಪಟ್ಟಣದಲ್ಲಿ ಹಲವಾರು ವರ್ಷಗಳಿಂದ ಆಟೋ ಚಾಲಕನಾಗಿದ್ದ ಬಿನೋಯ್ ಸ್ಕರಿಯಾ ಜೀವನದಲ್ಲಿ ಜಿಗುಪ್ಸೆಗೊಂಡು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಆಟೋ ಓಡಿಸುವುದನ್ನು ಒಂದು ವರ್ಷದಿಂದ ನಿಲ್ಲಿಸಿದ್ದರು ಎನ್ನಲಾಗಿದೆ.

ಅವರು ಬೆಳಕೋಡು ಗ್ರಾಮದಲ್ಲಿರುವ ತಮ್ಮ ಮನೆಯಲ್ಲಿ ಭಾನುವಾರ (ಮಾ.19) ರಾತ್ರಿ ಕಳೆನಾಶಕ ವಿಷ ಪದಾರ್ಥವನ್ನು ಸೇವಿಸಿ ಅಸ್ವಸ್ಥಗೊಂಡಿದ್ದರು. ಅವರನ್ನು ತಕ್ಷಣ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ (ಮಾ.20) ಮೃತಪಟ್ಟಿದ್ದಾರೆ.

ಇದನ್ನೂ ಓದಿ: Yuva Kranti: ಕಮಲ ಕೆಸರಲ್ಲಿದ್ದರೆ ಚೆಂದ; ತೆನೆ ಹೊಲದಲ್ಲಿದ್ದರೆ ಚೆಂದ; ಕೈ ಅಧಿಕಾರದಲ್ಲಿದ್ದರೆ ಚೆಂದ: ಡಿ.ಕೆ. ಶಿವಕುಮಾರ್‌

ಟೈಪಿಂಗ್ ಸೆಂಟರ್ ನಡೆಸುತ್ತಿದ್ದ ವ್ಯಕ್ತಿ ಆತ್ಮಹತ್ಯೆ

ಸಾಗರ: ಇಲ್ಲಿನ ಕೋರ್ಟ್ ಮುಂಭಾಗದಲ್ಲಿ ಟೈಪಿಂಗ್ ಸೆಂಟರ್ ನಡೆಸುತ್ತಿದ್ದ ನಿತ್ಯಾನಂದ (65) ಭಾನುವಾರ (ಮಾ.19) ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಲೂಕಿನ ಕೆಳದಿ ಕೆರೆ ಏರಿ ಮೇಲೆ ಬೈಕ್ ನಿಲ್ಲಿಸಿ, ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದರು. ಸ್ಥಳೀಯರು ನಿತ್ಯಾನಂದ ಅವರ ಬೈಕ್ ಹಾಗೂ ಚಪ್ಪಲಿ ಗಮನಿಸಿ ಪೊಲೀಸರಿಗೆ ವಿಷಯ ತಿಳಿಸಿದ್ದರು. ಸ್ಥಳಕ್ಕೆ ಬಂದ ಸಾಗರ ಗ್ರಾಮಾಂತರ ಠಾಣೆಯ ಪೊಲೀಸರು, ಅಗ್ನಿಶಾಮಕದಳದ ಸಹಾಯದಿಂದ ಸೋಮವಾರ (ಮಾ.20) ಬೆಳಗ್ಗೆ ನಿತ್ಯಾನಂದ ಅವರ ಶವವನ್ನು ಕೆರೆಯಿಂದ ಮೇಲಕ್ಕೆತ್ತಿದ್ದಾರೆ.

Exit mobile version