Site icon Vistara News

Suicide Case : ಕೊಪ್ಪಳದ ಗ್ರಾಪಂ ಮಾಜಿ ಸದಸ್ಯ ಹೊಸಪೇಟೆ ಲಾಡ್ಜ್‌ನಲ್ಲಿ ಆತ್ಮಹತ್ಯೆಗೆ ಶರಣು

Suicide

ವಿಜಯನಗರ: ಕೊಪ್ಪಳ ಜಿಲ್ಲೆಯ ಇಂದರಗಿಯ ವ್ಯಕ್ತಿಯೊಬ್ಬರು ಹೊಸಪೇಟೆಗೆ ಬಂದು ಲಾಡ್ಜ್‌ವೊಂದರಲ್ಲಿ ತಂಗಿದ್ದರು. ಈ ವೇಳೆ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ (Suicide Case) ಶರಣಾಗಿದ್ದಾರೆ. ಇವರು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಎಂದು ಹೇಳಲಾಗಿದೆ.

ರವಿ (28) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಹೊಸಪೇಟೆಯ ಪುಷ್ಪಕ್ ಲಾಡ್ಜ್‌ನಲ್ಲಿ‌ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ. ಕೊಪ್ಪಳದ ಇಂದರಗಿಯವರಾಗಿದ್ದು, ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

ಸ್ಥಳಕ್ಕೆ ಹೊಸಪೇಟೆ ಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ರವಿ ಮನೆಯವರಿಗೆ ಮಾಹಿತಿ ನೀಡಿದ್ದಾರೆ. ಪ್ರಕರಣವನ್ನು ದಾಖಲು ಮಾಡಿಕೊಂಡಿರುವ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ | IT Raid : ಸಚಿವ ಶ್ರೀರಾಮುಲು, ಮಾಜಿ ಶಾಸಕ ಸುರೇಶ್ ಬಾಬು ಆಪ್ತರಿಗೆ ಐಟಿ ಶಾಕ್; 2 ದಿನದಿಂದ ಪರಿಶೀಲನೆ

Exit mobile version