Site icon Vistara News

Suicide Case | ಚಿತ್ರದುರ್ಗದಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆ?

Suicide Case

ಚಿತ್ರದುರ್ಗ: ಮೂರು ವರ್ಷದ ಹಿಂದಷ್ಟೇ ವಿವಾಹವಾಗಿದ್ದ ಗೃಹಿಣಿಯೊಬ್ಬರು ಐಯುಡಿಪಿ ಬಡಾವಣೆಯಲ್ಲಿ ಭಾನುವಾರ (ಡಿ. ೪) ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂಬ (Suicide Case) ಆರೋಪ ಕೇಳಿಬಂದಿದೆ.

ಆದರೆ, ಆಕೆಯ ಪತಿ ಕಿರಣ್ ಕೊಲೆ ಮಾಡಿ ಹೀಗೆ ನೇಣುಹಾಕಿದ್ದಾರೆಂದು ಮೃತಳ ಸಂಬಂಧಿಕರು ಆರೋಪ ಮಾಡಿದ್ದಾರೆ. ವಿನುತಾಗೆ ಗಂಡ ಕಿರಣ್‌ ವರದಕ್ಷಿಣೆ ಕಿರುಕುಳ ನೀಡುತ್ತಿದ್ದ. ಈ ಹಿನ್ನೆಲೆಯಲ್ಲಿಯೇ ಕೊಲೆ ಮಾಡಿದ್ದಾರೆ ಎಂದು ವಿನುತಾ ಪೋಷಕರು ಆರೋಪ ಮಾಡಿದರು.

ಚಿತ್ರದುರ್ಗ ಬಡಾವಣೆ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ | Tiger Attack | ಗುಂಡ್ಲುಪೇಟೆ ಸುತ್ತಮುತ್ತ ಹುಲಿ ಹಾವಳಿ; ಜಾನುವಾರುಗಳು ಬಲಿ, ಜನರಲ್ಲಿ ಹೆಚ್ಚಿದ ಆತಂಕ

Exit mobile version