Site icon Vistara News

Suicide Case‌ | ಪ್ರೀತಿಸಿ ಮದುವೆಯಾಗಿದ್ದ ಪತ್ರಕರ್ತ ಪತ್ನಿ ಸಮೇತ ನೇಣಿಗೆ ಶರಣು

suicide case2

ವಿಜಯಪುರ: ಇಲ್ಲಿನ ಮುದ್ದೇಬಿಹಾಳ ಪಟ್ಟಣದ ಎಪಿಎಂಸಿ ಬಳಿ ಯುವ ಪತ್ರಕರ್ತ ತಿಪ್ಪಣ್ಣ ಸಿದ್ದಪ್ಪ ಹೊಸಮನಿ (34) ಮತ್ತು ಆತನ ಪತ್ನಿ ಸುಜಾತಾ (30) ಅಕ್ಕಪಕ್ಕದ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide Case‌ ) ಮಾಡಿಕೊಂಡಿದ್ದಾರೆ.

ತಿಪ್ಪಣ್ಣ ಸಿದ್ದಪ್ಪ ಹೊಸಮನಿ

ತಿಪ್ಪಣ್ಣ ಖಾಸಗಿ ಸುದ್ದಿ ವಾಹಿನಿ (ಪವರ್ ಟವಿ) ಬೆಂಗಳೂರಿನಲ್ಲಿ ಕ್ಯಾಮರಾಮ್ಯಾನ್ ಆಗಿದ್ದರು. ಕೆಲ ತಿಂಗಳ ಹಿಂದೆ ಕೆಲಸ ಬಿಟ್ಟಿದ್ದರು. ಮುದ್ದೇಬಿಹಾಳ ತಾಲೂಕಿನ ಕೊಣ್ಣೂರು ಗ್ರಾಮದ ತಿಪ್ಪಣ್ಣ 4-5 ತಿಂಗಳ ಹಿಂದಷ್ಟೇ ಮುದ್ದೇಬಿಹಾಳ ತಾಲೂಕಿನ ಕೆಸಾಪೂರ ಗ್ರಾಮದ ಸುಜಾತಾ ಎಂಬುವವರನ್ನು ವಿವಾಹವಾಗಿದ್ದರು. ಸುಜಾತಾ ಅವರನ್ನು ಪ್ರೀತಿಸಿದ್ದ ತಿಪ್ಪಣ್ಣ ಮನೆಯವರ ಒಪ್ಪಿಗೆ ಪಡೆದು ಮದುವೆಯಾಗಿದ್ದರು. ಇಬ್ಬರೂ ಪಟ್ಟಣದಲ್ಲಿ ಮನೆ ಮಾಡಿಕೊಂಡು ವಾಸವಿದ್ದರು.

ಆದರೆ, ಈ ವೇಳೆ ಇಬ್ಬರ ನಡುವೆ ಮನಸ್ಥಾಪವಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಘಟನೆ ಮಾಹಿತಿ ಪಡೆದು ಪಿಎಸ್‌ಐ ಆರೀಫ್‌ ಮುಷಾಪುರಿ ಮತ್ತು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಭಾನುವಾರ ತಡರಾತ್ರಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Suicide | ವಿಷ ಸೇವಿಸಿ ಶಿಕ್ಷಕ ಆತ್ಮಹತ್ಯೆ

Exit mobile version