Site icon Vistara News

Suicide Case | ಭದ್ರಾವತಿಯಲ್ಲಿ ರೈಲಿಗೆ ತಲೆ ಕೊಟ್ಟು ಯುವಕ ಆತ್ಮಹತ್ಯೆ

Suicide Case

ಶಿವಮೊಗ್ಗ: ರೈಲಿಗೆ ತಲೆ ಕೊಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಭದ್ರಾವತಿಯ ಜೇಡಿಕಟ್ಟೆಯಲ್ಲಿ ನಡೆದಿದೆ. ಚಲಿಸುತ್ತಿದ್ದ ರೈಲಿಗೆ ಯುವಕ ತಲೆ ಕೊಟ್ಟಿದ್ದರಿಂದ ದುರಂತ (Suicide Case) ಸಂಭವಿಸಿದೆ. ರೈಲು ಬರುವಾಗ ಹಳಿಯ ಮೇಲೆ ಯುವಕ ಮಲಗಿದ್ದರಿಂದ ಯುವಕನ ರುಂಡ-ಮುಂಡ ಬೇರ್ಪಟ್ಟಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಟ್ರ್ಯಾಕ್ಟರ್ ಡಿಕ್ಕಿಯಾಗಿ ಬೈಕ್ ಸವಾರ ಸಾವು
ಶಿವಮೊಗ್ಗ ತಾಲೂಕಿನ ಕುಂಚೇನಹಳ್ಳಿ ಬಳಿ ಟ್ರ್ಯಾಕ್ಟರ್ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟಿದ್ದಾನೆ. ರಟ್ಟೆಹಳ್ಳಿಯ ರಾಜಣ್ಣ ಅವರ ಪುತ್ರ ರಾಘವೇಂದ್ರ (24) ಮೃತ ದುರ್ದೈವಿ. ಗಾರೆ ಕೆಲಸ ಮಾಡುತ್ತಿದ್ದ ರಾಘವೇಂದ್ರ, ಶಿವಮೊಗ್ಗದಿಂದ ರಟ್ಟೆಹಳ್ಳಿಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಿಳೆ ಮೇಲೆ ದೊಣ್ಣೆಯಿಂದ ಹಲ್ಲೆ
ಹೊಸನಗರ: ರಸ್ತೆ ಮೇಲೆ ಹಾಕಿದ್ದ ಅಡಕೆ ಸಿಪ್ಪೆ ತೆಗೆದಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ಮಹಿಳೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ದೊಣ್ಣೆಯಿಂದ ತಲೆಗೆ ಹಲ್ಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಇಟ್ಟಕ್ಕಿ ಗ್ರಾಮದಲ್ಲಿ ಬುಧವಾರ ನಡೆದಿದೆ. ಭಾಗೀರಥಿ ಕೋಂ ಶ್ರೀನಿವಾಸ (45) ಗಾಯಾಳು. ಸುಲಿದ ಅಡಕೆ ಸಿಪ್ಪೆಯನ್ನು ಮನೆಯ ಮುಂದಿನ ರಸ್ತೆಯಲ್ಲಿ ಹರಡಿದ್ದಾರೆ ಎಂದು ಧರ್ಮರಾವ್ ಎಂಬಾತ ಹಲ್ಲೆ ಮಾಡಿದ್ದಾನೆ.

ಹಲ್ಲೆ ಮಾಡಿದಾಗ ಅಡುಗೆ ತಯಾರಿಕೆಗಾಗಿ ರುಬ್ಬಿದ್ದ ಖಾರವನ್ನು ಮಹಿಳೆ, ಆರೋಪಿ ಮುಖಕ್ಕೆ ಎಸೆದಿದ್ದಾರೆ. ಅಷ್ಟರಲ್ಲಿ ಗಲಾಟೆ ಸದ್ದು ಕೇಳಿ ಸ್ಥಳೀಯರು ಸ್ಥಳಕ್ಕೆ ಆಗಮಿಸಿ ಗಾಯಾಳು ಮಹಿಳೆಯನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳು ನೀಡಿದ ದೂರಿನ ಮೇರೆಗೆ ಹೊಸನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಆರೋಪಿ ಧರ್ಮರಾವ್ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಇದನ್ನೂ ಓದಿ | Suicide Case | ಗೋಳಗುಮ್ಮಟದ ಮೇಲಿಂದ ಜಿಗಿದು ಯುವತಿ ಆತ್ಮಹತ್ಯೆ

Exit mobile version