Site icon Vistara News

Suicide Case : ವಿವಾಹಿತ ಪುರುಷ-ಮಹಿಳೆ ಆತ್ಮಹತ್ಯೆ; ಅನೈತಿಕ ಸಂಬಂಧ ಕಾರಣವೇ?

mysore t narasipura suicide case ವಿವಾಹಿತ ಪುರುಷ ಮಹಿಳೆ

ಮೈಸೂರು: ಟಿ.ನರಸೀಪುರ ಪಟ್ಟಣದ ಕಾವೇರಿ ಸೇತುವೆ ಬಳಿ ವಿವಾಹಿತ ಪುರುಷ ಹಾಗೂ ಮಹಿಳೆಯು ನದಿಗೆ ಹಾರಿ ಆತ್ಮಹತ್ಯೆ (Suicide Case) ಮಾಡಿಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ಗುಂಡ್ಲುಪೇಟೆ ತಾಲೂಕಿನ ಲಕ್ಕೂರು ಗ್ರಾಮದ ಮಣಿ (30), ಮೈಸೂರಿನ ರಮಾಬಾಯಿ ನಗರ ನಿವಾಸಿ ವಸಂತ (35) ಆತ್ಮಹತ್ಯೆಗೆ ಶರಣಾದವರು ಎಂದು ಗುರುತಿಸಲಾಗಿದೆ. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಪರಿಶೀಲನೆ ಮಾಡಿದ್ದಾರೆ. ಈಗಾಗಲೇ ಮಣಿ ಶವ ದೊರೆತಿದ್ದು, ವಸಂತ ಅವರ ಶವಕ್ಕಾಗಿ ಶೋಧ ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಅನೈತಿಕ ಸಂಬಂಧಕ್ಕೆ ಬಲಿಯಾದರೇ ಎಂಬ ಚರ್ಚೆಗಳೂ ಶುರುವಾಗಿದ್ದು, ಪೊಲೀಸರು ಈ ನಿಟ್ಟಿನಲ್ಲಿ ತನಿಖೆ ಕೈಗೊಂಡಿದ್ದಾರೆ. ತಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ. ಅಲ್ಲದೆ, ಎರಡೂ ಕುಟುಂಬದವರ ವಿಚಾರಣೆಯನ್ನು ಪೊಲೀಸರು ನಡೆಸುತ್ತಿದ್ದಾರೆ.

ಇದನ್ನೂ ಓದಿ | Ahimsa Chetan : ಬಿಜೆಪಿಯವರದ್ದು ಹಿಂದು ಅಜೆಂಡಾ; ಧರ್ಮದ ಪರ ಇದ್ದೇನೆನ್ನುವುದೇ ಭಯೋತ್ಪಾದನೆ: ಅಹಿಂಸಾ ಚೇತನ್‌

Exit mobile version