Site icon Vistara News

Suicide Case : ಗೌರಿಬಿದನೂರಿನಲ್ಲಿ ರೈಲಿಗೆ ಸಿಲುಕಿ ಮೂವರ ಸಾವು; ಆತ್ಮಹತ್ಯೆಗೆ ಶರಣಾಯ್ತಾ ಒಂದೇ ಕುಟುಂಬ?

Suicide Case

ಚಿಕ್ಕಬಳ್ಳಾಪುರ: ಗೌರಿಬಿದನೂರಿನ ತೊಂಡೇಬಾವಿ ಬಳಿ ರೈಲ್ವೇ ಹಳಿ ಬಳಿ ಮೂವರು ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ. ಒಂದೇ ಕುಟುಂಬದವರು ಆತ್ಮಹತ್ಯೆ (Suicide Case) ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಚಲಿಸುವ ರೈಲಿಗೆ ಸಿಲುಕಿ ಮೂವರ ದುರ್ಮರಣ ಸಂಭವಿಸಿದೆ. ಬೆಂಗಳೂರು-ಹಿಂದೂಪುರಕ್ಕೆ ಹೋಗುವ ಮಾರ್ಗ ಮಧ್ಯೆ ಘಟನೆ ಸಂಭವಿಸಿದೆ. ರೈಲಿಗೆ ಸಿಲುಕಿ ದೇಹಗಳು ಛಿದ್ರ ಛಿದ್ರವಾಗಿವೆ. ವಿಷಯ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿರುವ ರೈಲ್ವೇ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಒಂದೇ ಕುಟುಂಬದವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬಂದಿರಬಹುದು ಎಂದು ಅಂದಾಜಿಸಲಾಗಿದೆ. ಆದರೆ, ಮೃತರ ವಿವರಗಳು ಇನ್ನೂ ಲಭ್ಯವಾಗಿಲ್ಲ. ಮೃತರ ಗುರುತು ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಈ ಮೂಲಕ ಇದು ಆಕಸ್ಮಿಕ ಸಾವೋ ಅಥವಾ ಆತ್ಮಹತ್ಯೆಯೋ ಎಂಬುದನ್ನು ತಿಳಿಯಲು ಮುಂದಾಗಿದ್ದಾರೆ.

ಇದನ್ನೂ ಓದಿ | Moral education : ಕೊನೇ ಘಳಿಗೆಯಲ್ಲಿ ಮುಸ್ಲಿಂ, ಕ್ರೈಸ್ತ ಧರ್ಮಗುರುಗಳಿಗೆ ಆಹ್ವಾನ; ಮೌಲ್ಯ ಶಿಕ್ಷಣ ಸಮಾಲೋಚನಾ ಸಭೆ ಆರಂಭ

Exit mobile version