Site icon Vistara News

Suicide Case: ಕಿರಾಣಿ ಅಂಗಡಿಯಲ್ಲಿ ನೇಣು ಬಿಗಿದುಕೊಂಡ ವ್ಯಾಪಾರಿ; ಆತ್ಮಹತ್ಯೆಗೆ ಏನು ಕಾರಣ?

Suicide Case

ರಾಯಚೂರು: ಇಲ್ಲಿನ ಸಿಂಧನೂರು ಪಟ್ಟಣದಲ್ಲಿ ಕಿರಾಣಿ ಅಂಗಡಿಯಲ್ಲೇ ವ್ಯಾಪಾರಸ್ಥರೊಬ್ಬರು ಆತ್ಮಹತ್ಯೆ (Suicide Case) ಮಾಡಿಕೊಂಡಿರುವ ಘಟನೆ ನಡೆದಿದೆ. ಹನುಮಾನ್ ಚೌದರಿ (38) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ.

ಹನುಮಾನ್‌ ಕಳೆದ ಹಲವು ವರ್ಷಗಳಿಂದ ಕಿರಾಣಿ ಅಂಗಡಿ ನಡೆಸುತ್ತಿದ್ದರು. ಗುರುವಾರ ಎಂದಿನಂತೆ ಬೆಳಗ್ಗೆ ಕಿರಾಣಿ ಅಂಗಡಿಗೆ ಹೋಗಿ ಬರುವುದಾಗಿ ಹನುಮಾನ್‌ ಹೇಳಿದ್ದರು. ಆದರೆ, ಎಷ್ಟೊತ್ತಾದರೂ ಅಂಗಡಿ ಬಾಗಿಲು ತೆರೆಯದೇ ಇದ್ದಾಗ ಅಕ್ಕ-ಪಕ್ಕದ ಅಂಗಡಿಯವರು ಅನುಮಾನಗೊಂಡು ಹನುಮಾನ್‌ ಸಹೋದರನಿಗೆ ಪೋನ್‌ ಕರೆ ಮಾಡಿದ್ದಾರೆ.

ಕುಟುಂಬಸ್ಥರು ಅಂಗಡಿಗೆ ಬಂದು ನೋಡಿದಾಗ ಆತ್ಮಹತ್ಯೆ ವಿಷಯ ಬೆಳಕಿಗೆ ಬಂದಿದೆ. ಹನುಮಾನ್‌ ಅಂಗಡಿಯಲ್ಲಿ ನೇಣು ಹಾಕಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಈ ನಿಟ್ಟಿನಲ್ಲಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಆತ್ಮಹತ್ಯೆ ವಿಷಯ ತಿಳಿಯುತ್ತಿದ್ದಂತೆ ಸುತ್ತಮುತ್ತ ನೂರಾರು ಜನರು ಸೇರಿದ್ದರು. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: Contaminated Water: ಕಲುಷಿತ ನೀರು ಸೇವನೆ: ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ

ಸ್ಥಳಕ್ಕೆ ಸಿಂಧನೂರು ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

Exit mobile version