Site icon Vistara News

Suicide Case: ವಿಜಯಪುರದಲ್ಲಿ ಕೃಷ್ಣಾ ನದಿಗೆ ಜಿಗಿದು ಅಪರಿಚಿತ ಆತ್ಮಹತ್ಯೆಗೆ ಶರಣು; ಬಂಗಾರಪೇಟೆ ಚರಂಡಿಯಲ್ಲಿ ಮಹಿಳೆ ಶವ ಪತ್ತೆ

Unidentified man commits suicide by jumping into Krishna river in Vijayapur Woman's body found in Bangarpet drain

Unidentified man commits suicide by jumping into Krishna river in Vijayapur Woman's body found in Bangarpet drain

ವಿಜಯಪುರ/ಕೋಲಾರ: ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ವ್ಯಕ್ತಿಯೊಬ್ಬರು ಕೃಷ್ಣಾ ನದಿಗೆ ಜಿಗಿದು ಆತ್ಮಹತ್ಯೆ (Suicide Case) ಮಾಡಿಕೊಂಡಿದ್ದಾರೆ. ಮೃತಪಟ್ಟವರು ಯಾರು ಎಂಬ ಮಾಹಿತಿ ಲಭ್ಯವಾಗಿಲ್ಲ. ವಿಜಯಪುರದಿಂದ ಬಾಡಿಗೆ ವಾಹನ ಮಾಡಿಕೊಂಡು ಬಂದಿರುವುದಾಗಿ ಪ್ರಾಥಮಿಕ ಮಾಹಿತಿ ಸಿಕ್ಕಿದೆ.

ಕೊಲ್ಹಾರ ಬ್ರಿಡ್ಜ್ ಮೇಲೆ ವಾಹನ ನಿಲ್ಲಿಸಿ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಕ್ಕಾಗಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಕೊಲ್ಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಹಿಳೆ ಶವ ಪತ್ತೆ ಹಿನ್ನೆಲೆ ಸ್ಥಳಕ್ಕಾಗಮಿಸಿದ ಪೊಲೀಸರು

ಚರಂಡಿಯಲ್ಲಿ ಮಹಿಳೆ ಶವ ಪತ್ತೆ

ಬಂಗಾರಪೇಟೆ ತಾಲೂಕಿನ ಅನಿಗಾನಹಳ್ಳಿ ಗೇಟ್ ಬಳಿಯ ಚರಂಡಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆ ಆಗಿದೆ. ವಾರದ ಹಿಂದೆ ಮಹಿಳೆಯನ್ನು ಹತ್ಯೆ ಮಾಡಿ ಮೋರಿಯಲ್ಲಿ ಬಿಸಾಕಿ ಹೋಗಿರಬಹುದೆಂದು ಅಂದಾಜಿಸಲಾಗಿದೆ. ಮೃತದೇಹ ದುರ್ನಾತ ಬೀರುತ್ತಿದುದನ್ನು ಗಮನಿಸಿ ಸ್ಥಳೀಯರು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಇದನ್ನೂ ಓದಿ: Bengaluru Murder case: ಅಪ್ಪನ ಕೊಲೆಗೆ 1 ಕೋಟಿ ರೂ. ಸುಪಾರಿ ಕೊಟ್ಟ ಮಗ ಸೇರಿ ಆರೋಪಿಗಳು ಅರೆಸ್ಟ್‌

ರಾಮಲಿಂಗಾಪುರ ಗ್ರಾಮದ ಪ್ರಮಿಳಾ (38) ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಕೆಜಿಎಫ್ ಎಸ್‌ಪಿ ಡಾ.ಧರಣೀದೇವಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ತನಿಖೆಯನ್ನು ಕೈಗೊಂಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version