Site icon Vistara News

Suicide Case : ಪತಿ ಆತ್ಮಹತ್ಯೆ ಬೆನ್ನಲ್ಲೇ ಪತ್ನಿಯೂ ನೇಣಿಗೆ ಶರಣು, ಗಂಡನ ಸಾವಿಗೆ ಕಾರಣ ಎಂಬ ಆರೋಪಕ್ಕೆ ನೊಂದ ಮಹಿಳೆ

chikkamagaluru suicide

#image_title

ಚಿಕ್ಕಮಗಳೂರು: ಗಂಡ ಆತ್ಮಹತ್ಯೆ ಮಾಡಿಕೊಂಡ ಬೆನ್ನಿಗೇ ಮಹಿಳೆಯೂ ಸಾವಿಗೆ ಶರಣಾದ ಘಟನೆಯೊಂದು (Suicide Case) ಮೂಡಿಗೆರೆ ತಾಲೂಕಿನ ಉಗ್ಗೆಹಳ್ಳಿಯಲ್ಲಿ ನಡೆದಿದೆ. ಜಗದೀಶ್‌ ಎಂಬವರು ಎರಡು ದಿನಗಳ ಹಿಂದೆ ಮೃತಪಟ್ಟಿದ್ದರು. ಅವರ ಪತ್ನಿ ನೇತ್ರಾವತಿ ಈಗ ಶವವಾಗಿ ಪತ್ತೆಯಾಗಿದ್ದಾರೆ.

ಏನಿದು ಪ್ರಕರಣ?

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಉಗ್ಗೆಹಳ್ಳಿ ನಿವಾಸಿಯಾಗಿರುವ ಜಗದೀಶ್‌ ಎಂಬವರು ಎರಡು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರು ವಿಷ ಸೇವಿಸಿ ಪ್ರಾಣ ಕಳೆದುಕೊಂಡ ಘಟನೆಗೆ ಪತ್ನಿ ನೇತ್ರಾವತಿ ಅವರೇ ಕಾರಣ ಎಂದು ಆರೋಪಿಸಲಾಗಿತ್ತು. ಹೆಂಡತಿಯ ಅನೈತಿಕ ಸಂಬಂಧದಿಂದ ನೊಂದು ಆತ ಪ್ರಾಣ ಕಳೆದುಕೊಂಡಿದ್ದಾನೆ ಎಂದು ಮನೆಯವರು ಪೊಲೀಸರಿಗೆ ದೂರು ನೀಡಿದ್ದರು.

ಪೊಲೀಸ್ ಠಾಣೆಯಲ್ಲಿ ಈ ರೀತಿ ದೂರು ದಾಖಲಾಗುತ್ತಿದ್ದಂತೆಯೇ ನೇತ್ರಾವತಿ ಕಾಣೆಯಾಗಿದ್ದರು. ಇದೀಗ ಆಕೆ ಮನೆಯ ಸಮೀಪದ ಕಾಫಿ ತೋಟದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ. ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ನೇತ್ರಾವತಿ ವಿರುದ್ಧ ಪ್ರಕರಣ ದಾಖಲಾಗಿತ್ತು.

ರಾಜ್ಯಮಟ್ಟದ ಯುವ ಕಬಡ್ಡಿ ಆಟಗಾರ ಎನ್‌. ಸತೀಶ್‌ ಅಪಘಾತದಲ್ಲಿ ಮೃತ್ಯು

ವಿಜಯನಗರ: ರಾಜ್ಯ ಮಟ್ಟದ ಕಬಡ್ಡಿ ಆಟಗಾರರೊಬ್ಬರು (Kabaddi player) ಬೈಕ್‌ ಅಪಘಾತದಲ್ಲಿ (Bike accident) ಮೃತಪಟ್ಟಿದ್ದಾರೆ. ಹೊಸಪೇಟೆ ತಾಲೂಕಿನ ಚಿಲಕನಹಟ್ಟಿ ಗ್ರಾಮದ ಎನ್ ಸತೀಶ್ (22) ಎಂಬವರೇ ಮೃತಪಟ್ಟವರು. ಅವರು ಕಬಡ್ಡಿ ಆಟ ಮುಗಿಸಿ, ಊಟಕ್ಕೆ ಹೊರಡುವಾಗ ಬೈಕ್ ಅಪಘಾತ ಸಂಭವಿಸಿ ಮೃತಪಟ್ಟಿದ್ದಾರೆ.

ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಪುತ್ರ ಸಿದ್ದಾರ್ಥ ಸಿಂಗ್ ಅವರು ಕಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದರು ಸತೀಶ್‌. ಊಟಕ್ಕೆಂದು ಹೋಗುತ್ತಿದ್ದಾಗ ಬೈಕ್‌ ಅಪಘಾತಕ್ಕೆ ಒಳಗಾಗಿತ್ತು. ರಾತ್ರಿ ಅಪಘಾತ ಸಂಭವಿಸುತ್ತಿದ್ದಂತೆಯೇ ಕೂಡಲೇ ಅವರನ್ನು ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಕೊಪ್ಪಳ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರು ಅಲ್ಲೇ ಸೋಮವಾರ ಬೆಳಗ್ಗೆ ಮೃತಪಟ್ಟಿದ್ದಾರೆ.

ಕಲ್ಯಾಣ ಕರ್ನಾಟಕದ ಪುರುಷರ ಮತ್ತು ಮಹಿಳೆಯರ ಹೊನಲು ಬೆಳಕು ಪಂದ್ಯಾವಳಿ ಇದಾಗಿದ್ದು, ಸತೀಶ್‌ ಅವರು, ಮರಿಯಮ್ಮನಹಳ್ಳಿ ತಂಡದ ಪರವಾಗಿ ಆಡುತ್ತಿದ್ದರು. ಹೊಸಪೇಟೆಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : Suicide Case: ಪತಿಯಿಂದ ವರದಕ್ಷಿಣೆ ಕಿರುಕುಳ; ಡೆತ್‌ ನೋಟ್‌ ಬರೆದಿಟ್ಟು ಗೃಹಿಣಿ ಆತ್ಮಹತ್ಯೆ

Exit mobile version