Site icon Vistara News

suicide death | 3 ತಿಂಗಳ ಹಿಂದೆ ಪರಿಚಯವಾದ ಪ್ರಿಯಕರ ಮದುವೆಗೆ ನಿರಾಕರಿಸಿದ್ದಕ್ಕೆ ನೊಂದು ಯುವತಿ ಆತ್ಮಹತ್ಯೆ

suicide

ಯುವತಿಯ ಪೋಷಕರಿಂದ ದೂರು ದಾಖಲು

ರಿಪ್ಪನ್‌ಪೇಟೆ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಪಟ್ಟಣದ ಸಮೀಪದ ಹಾಲುಗುಡ್ಡೆ ಗ್ರಾಮದ ಕ್ಯಾಂಪ್ ನಲ್ಲಿ ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಹಾಲುಗುಡ್ಡೆ ಕ್ಯಾಂಪ್ ನಲ್ಲಿ ಅನುಷಾ (19) ಎಂಬ ಯುವತಿ ನಿನ್ನೆ ಮನೆಯಲ್ಲಿದ್ದಾಗ ಕೀಟ ನಾಶಕ ಕುಡಿದು ತನ್ನ ಪ್ರಿಯಕರನಿಗೆ ಕರೆ ಮಾಡಿ ವಿಷ ಸೇವಿಸಿರುವುದಾಗಿ ತಿಳಿಸಿದ್ದಾಳೆ. ತಕ್ಷಣ ಪ್ರಿಯಕರ ಮಂಜುನಾಥ್ ಬಂದು ಯುವತಿಯನ್ನು ಆನಂದಪುರ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದಾನೆ. ನಂತರ ಹೆಚ್ಚಿನ ಚಿಕಿತ್ಸೆಗೆ ಯುವತಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಅನುಷಾ ಅಸುನೀಗಿದ್ದಾಳೆ.

ಅನುಷಾ (18) ಕೂಲಿ ಕೆಲಸ ಮಾಡಿಕೊಂಡಿದ್ದು, 8ನೇ ತರಗತಿವರೆಗೆ ಓದಿಕೊಂಡಿದ್ದಾಳೆ. ನೆವಟೂರು ಗ್ರಾಮದ ಮಂಜುನಾಥ್ ಗಾರೆ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದಾನೆ. ಮೂರು ತಿಂಗಳ ಹಿಂದೆ ಹುಡುಗಿ ಅಣ್ಣನ ಮನೆಗೆ ಗಾರೆ ಕೆಲಸಕ್ಕೆ ಹೋಗಿದ್ದ ಮಂಜುನಾಥನಿಗೆ ಅನುಷಾ ಪರಿಚಯವಾಗಿದ್ದಳು. ಪರಿಚಯ ಪ್ರೀತಿಗೆ ತಿರುಗಿತ್ತು.

ಪರಸ್ಪರ ಫೋನ್ ನಂಬರ್ ಪಡೆದುಕೊಂಡಿದ್ದ ಜೋಡಿಹಕ್ಕಿಗಳು ಮದುವೆಯ ವಿಚಾರದಲ್ಲಿ ಜಗಳವಾಡಿಕೊಂಡಿದ್ದಾರೆ.
ಮದುವೆಯಾಗಲು ಒಪ್ಪದ ಯುವಕನ ಕಿರುಕುಳದಿಂದ ಬೇಸತ್ತು ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಯುವತಿ ತಂದೆ ಬಂಗಾರಪ್ಪ ದೂರು ದಾಖಲಿಸಿದ್ದಾರೆ.
ನಿನ್ನೆ ಯುವತಿಯನ್ನ ಮೆಗ್ಗಾನ್ ಗೆ ದಾಖಲಿಸುವವರೆಗೂ ಜೊತೆಗೆ ಇದ್ದ ಯುವಕ ಇಂದು ಬೆಳಿಗ್ಗೆ 7 ಗಂಟೆಗೆ ಯುವತಿ ಪ್ರಾಣ ಬಿಟ್ಟಾಗಿನಿಂದ ನಾಪತ್ತೆಯಾಗಿದ್ದಾನೆ.

ಇದನ್ನೂ ಓದಿ | ಪ್ರೀತಿಸಿದವನ ಮೇಲೆ ರೇಪ್‌ ದೂರು, ಅಂಗದಾನ ಮಾಡಿಕೊಂಡು ಯುವಕ ಆತ್ಮಹತ್ಯೆ

Exit mobile version