Site icon Vistara News

Burnt to death| ಕರ್ಣಾಟಕ ಬ್ಯಾಂಕ್‌ ಲೀಗಲ್‌ ಆಫೀಸರ್‌ ಸಜೀವದಹನ, ಆತ್ಮಹತ್ಯೆನಾ? ಬೆಂಕಿ ಆಕಸ್ಮಿಕನಾ?

karnataka bank

ಉಡುಪಿ: ನಗರದ ವಾದಿರಾಜ ರಸ್ತೆಯ ಮನೆಯೊಂದರಲ್ಲಿ ಬೆಂಕಿ ಹೊತ್ತಿಕೊಂಡು ಸುಟ್ಟ ಸ್ಥಿತಿಯಲ್ಲಿದ್ದ ಮೃತದೇಹ ಪತ್ತೆಯಾಗಿದೆ.‌ ನಿವೃತ್ತ ಪೊಲೀಸ್ ಅಧಿಕಾರಿ ಕೃಷ್ಣ ಸಾಮಗ ಅವರ ಮಗ, ಕರ್ಣಾಟಕ ಬ್ಯಾಂಕ್‌ನ ಲೀಗಲ್ ಆಫೀಸರ್ ರಾಜು ಗೋಪಾಲ್ ಸಾಮಗ(42) ಮೃತಪಟ್ಟವರು.

ಹೈದರಾಬಾದ್‌ನ ಶಾಖೆಯಲ್ಲಿ ಹಲವು ವರ್ಷ ದುಡಿಯುತ್ತಿದ್ದ ರಾಜ್ ಗೋಪಾಲ್ ಅವರು ಒಂದು ತಿಂಗಳ ಹಿಂದೆ ಮಂಗಳೂರಿಗೆ ವರ್ಗಾವಣೆಯಾಗಿದ್ದರು. ಸೋಮವಾರ ಕೋಣೆಯಿಂದ ದಟ್ಟವಾದ ಹೊಗೆ ಬರುತ್ತಿರುವುದನ್ನು ಕಂಡು ನೆರೆ ಮನೆಯವರು ಮನೆಯವರಿಗೆ ಮಾಹಿತಿ ನೀಡಿದ್ದಾರೆ.

ತಕ್ಷಣ ಪೊಲೀಸರಿಗೆ ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಬಂದ ಉಡುಪಿ ಅಗ್ನಿಶಾಮಕ ದಳ ಹಾಗೂ ನಗರ ಠಾಣೆಯ ಪೊಲೀಸರು ಲಾಕ್ ಆಗಿದ್ದ ಕೋಣೆ ಬಾಗಿಲು ಒಡೆದು ಪರಿಶೀಲಿಸಿದಾಗ ರಾಜು ಗೋಪಾಲ್ ಸಾಮಗ ಅವರ ಮೃತ ದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಕೋಣೆಯನ್ನು ಪರಿಶೀಲಿಸಿದ ಪೊಲೀಸರು, ಗೋಪಾಲ ಸಾಮಗ, ಲ್ಯಾಪ್ ಟಾಪ್ ಹಾಗೂ ಮೊಬೈಲ್ ನಲ್ಲಿ ಕೆಲಸ ಮಾಡುತ್ತಿದ್ದ ಕಾರಣ ಮೊಬೈಲ್ ಸ್ಫೋಟಗೊಂಡು ಬೆಂಕಿ ಹತ್ತಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಮೃತರು ತಂದೆ, ತಾಯಿ, ಪತ್ನಿ ಹಾಗೂ ಒಬ್ಬ ಪುತ್ರನನ್ನು ಅಗಲಿದ್ದಾರೆ.

ಇದನ್ನೂ ಓದಿ | Suicide | ಸ್ಕೂಲ್‌ನಲ್ಲಿ ಎಲ್ಲರೆದುರು ಟೀಚರ್‌ ಬೈದರೆಂದು ನೇಣಿಗೆ ಶರಣಾದ ವಿದ್ಯಾರ್ಥಿನಿ!

Exit mobile version