Site icon Vistara News

Suicide | ಜೀವನದಲ್ಲಿ ಜಿಗುಪ್ಸೆಗೊಂಡು ರೈಲಿಗೆ ತಲೆಕೊಟ್ಟ ವ್ಯಕ್ತಿ; ಮೋಸ ಹೋಗಿದ್ದಕ್ಕೆ ಉಪನ್ಯಾಸಕಿ ಆತ್ಮಹತ್ಯೆ

Suicide Case

ವಿಜಯಪುರ/ಬೀದರ್‌: ಜೀವನದಲ್ಲಿ ಜಿಗುಪ್ಸೆಯಾಗಿ ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ವಿಜಯಪುರ ‌ನಗರದ ಗಣೇಶ ನಗರದ ಬಳಿ ನಡೆದಿದೆ.

ಗಡಗಿ ಲೇಔಟ್ ನಿವಾಸಿ ಗುರುರಾಜ ಪುರೋಹಿತ್ (45) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಮುಂಬೈ- ಗದಗ ಮಾರ್ಗ ಮಧ್ಯೆ ಸಂಚರಿಸುವ ರೈಲಿಗೆ ತಲೆ ಕೊಟ್ಟು ಸಾವಿಗೆ ಶರಣಾಗಿದ್ದಾರೆ. ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿದ್ದು, ಪ್ರಕರಣವನ್ನು ದಾಖಲು ಮಾಡಿಕೊಂಡಿದ್ದಾರೆ.

ಹಣ ಕೊಟ್ಟು ಮೋಸ ಹೋಗಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಉಪನ್ಯಾಸಕಿ
ಆನ್‌ಲೈನ್ ಮೂಲಕ ಪರಿಚಿತನಾದ ವ್ಯಕ್ತಿಗೆ ಹಣ ಹಾಕಿ ಮೋಸ ಹೋದ ಕಾರಣಕ್ಕೆ ಉಪನ್ಯಾಸಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್‌ನ ಬಸವಕಲ್ಯಾಣ ತಾಲೂಕಿನ ಇಸ್ಲಾಂಪೂರ ಗ್ರಾಮದಲ್ಲಿ ನಡೆದಿದೆ.

ಇಸ್ಲಾಂಪೂರ ಗ್ರಾಮದ ಆರತಿ ಕನಾಟೆ (28) ಎಂಬಾಕೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಗರದ ಖಾಸಗಿ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಆರತಿಗೆ ಆನ್‌ಲೈನ್ ಮೂಲಕ ವ್ಯಕ್ತಿಯೊಬ್ಬ ಪರಿಚಯವಾಗಿದ್ದಾನೆ.

ಕೈಯಲ್ಲಿದ್ದ ಹಣ ಸೇರಿದಂತೆ ಸಾಲ ಮಾಡಿ ಹಂತ-ಹಂತವಾಗಿ ಸುಮಾರು 2 ಲಕ್ಷಕ್ಕೂ ಅಧಿಕ ಹಣವನ್ನು ಆ ವ್ಯಕ್ತಿಗೆ ಹಾಕಿ ಹಣ ಹೂಡಿಕೆ ಮಾಡಿದ್ದಾರೆ. ಇನ್ನೂ 82 ಸಾವಿರ ಹಣ ಹಾಕಿದರೆ ನಿಮ್ಮ ಎಲ್ಲ ಹಣ ವಾಪಸ್ ಬರುತ್ತವೆ ಎಂದು ಆ ವ್ಯಕ್ತಿ ನಂಬಿಸಿದ್ದಾನೆ. ಹೀಗಾಗಿ ಹಣ ಭರಿಸಲಾಗದೇ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೂ ಮುನ್ನ ಡೆತ್‌ನೋಟ್ ಬರೆದಿಟ್ಟು, ಬಾವಿಗೆ ಹಾರಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಅಗ್ನಿಶಾಮಕ ದಳದ ಸಿಬ್ಬಂದಿ, ಬಾವಿಯಿಂದ ಶವ ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಆರತಿ ಅವರ ತಂದೆ ಶಿವರಾಜ ಕನಾಟೆ ನೀಡಿದ ದೂರಿನ ಮೇರೆಗೆ ಇಲ್ಲಿಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Sexual harrassment | ಶಾಲೆಯಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ: ಪೋಕ್ಸೊ ಕಾಯಿದೆಯಡಿ ದೈಹಿಕ ಶಿಕ್ಷಕ ಅರೆಸ್ಟ್‌

Exit mobile version