Sumalatha Ambarish : ನಾನು ಬಿಜೆಪಿ ಸದಸ್ಯೆಯಲ್ಲ, ಕಾಂಗ್ರೆಸ್‌ನಿಂದ ಆಹ್ವಾನ ಬಂದಿಲ್ಲ; ಸುಮಲತಾ ಮಾತಿನ ಅರ್ಥವೇನು? - Vistara News

ಕರ್ನಾಟಕ

Sumalatha Ambarish : ನಾನು ಬಿಜೆಪಿ ಸದಸ್ಯೆಯಲ್ಲ, ಕಾಂಗ್ರೆಸ್‌ನಿಂದ ಆಹ್ವಾನ ಬಂದಿಲ್ಲ; ಸುಮಲತಾ ಮಾತಿನ ಅರ್ಥವೇನು?

Sumalatha Ambarish : ಮಂಡ್ಯದ ಸಂಸದೆ ಸುಮಲತಾ ಅವರು ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿ ಬಿಜೆಪಿ ಕರೆದಿದ್ದ ಸಭೆಯಲ್ಲಿ ಭಾಗವಹಿಸಿದ್ದರು. ಆದರೆ, ನನಗೂ ಬಿಜೆಪಿಗೂ ಸಂಬಂಧವಿಲ್ಲ ಎಂಬರ್ಥದಲ್ಲಿ ಮಾತನಾಡಿದ್ದಾರೆ. ಜತೆಗೆ ಆಪರೇಷನ್‌ ಹಸ್ತದ ವಿಚಾರವೂ ಚರ್ಚೆಯಾಗಿದೆ.

VISTARANEWS.COM


on

Sumalatha Ambarish says her views are not connected with BIP
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಡ್ಯ: ನಾನು ಬಿಜೆಪಿ ಸಂಸದೆ ಅಲ್ಲ, ಸದಸ್ಯೆಯೂ ಅಲ್ಲ. ಸ್ವತಂತ್ರಳಾಗಿ ಸಂಸತ್ತಿಗೆ (I am Independent MP) ಆಯ್ಕೆಯಾದವಳು. ನಾನು ಬಿಜೆಪಿಗೆ ಬೆಂಬಲ ನೀಡಿರುವುದು. ನೀಡುತ್ತಿರುವುದು ನಿಜ. ಹಾಗಂತ ಪಕ್ಷದ ನಿರ್ಧಾರಗಳಿಗೂ ನನಗೂ ಸಂಬಂಧ ಇಲ್ಲ. ಹೀಗೆಂದು ಸ್ಪಷ್ಟವಾಗಿ ಹೇಳಿದ್ದಾರೆ ಮಂಡ್ಯ ಸಂಸದೆ ಸುಮಲತಾ ಅಂಬರೀಷ್‌ (Sumalatha Ambarish). ಇದೇ ಹೊತ್ತಿಗೆ ಅವರು ತನಗೆ ಕಾಂಗ್ರೆಸ್‌ನಿಂದ ಆಹ್ವಾನ ಬಂದಿಲ್ಲ (No invitation from Congress says Sumalatha) ಎಂದು ಹೇಳಿದ್ದಾರೆ. ಅವರ ಈ ಎರಡೂ ಹೇಳಿಕೆಗಳನ್ನು ಇಟ್ಟುಕೊಂಡು ರಾಜಕೀಯ ವಲಯದಲ್ಲಿ ಚರ್ಚೆ ನಡೆದಿದೆ.

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುತ್ತಿರುವುದನ್ನು ಪ್ರತಿಭಟಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ ಅವರು, ರೈತರ ಸಮಸ್ಯೆಗಳು, ನೀರಿನ ಸಮಸ್ಯೆಗಳ ವಿಚಾರದಲ್ಲಿ ರಾಜಕಾರಣ ಮಾಡಬಾರದು ಎಂದು ಹೇಳಿದರು. ಹಾಗಂತ ತಾನು ಬಿಜೆಪಿಯ ಸದಸ್ಯೆಯಲ್ಲ ಎನ್ನುವುದನ್ನು ಒತ್ತಿ ಹೇಳಿದರು.

ಬಿಜೆಪಿ ನಾಯಕರು ಮಾಡಿರುವ ಆರೋಪಗಳ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅದಕ್ಕೂ ನನಗೂ ಸಂಬಂಧವಿಲ್ಲ. ಯಾರು ಆರೋಪ ಮಾಡಿದ್ದಾರೆಯೋ ಅವರೇ ಅದಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ. ಹೀಗಿರುವಾಗ ಆ ವಿಚಾರವಾಗಿ ಪ್ರತಿಕ್ರಿಯಿಸುವುದಿಲ್ಲ ಎಂದು ಹೇಳಿದ್ದಾರೆ. ನಾನು ಸ್ವತಂತ್ರ ಸಂಸದೆ ಮಾತ್ರವಲ್ಲ, ಸ್ವತಂತ್ರವಾಗಿ ನನ್ನದೇ ಆದ ಅನಿಸಿಕೆಗಳನ್ನು ವ್ಯಕ್ತಪಡಿಸಲು ಸ್ವಾತಂತ್ರ್ಯವಿದೆ. ನನ್ನ ನಿಲುವು ಏನು ಎಂಬುದನ್ನು ನಾನು ಸ್ಪಷ್ಟಪಡಿಸುತ್ತೇನೆ. ಪಕ್ಷದ ನಿಲುವಿನ ಬಗ್ಗೆ ಸಂಬಂಧಪಟ್ಟವರಲ್ಲಿ ಅಥವಾ ಪಕ್ಷದ ವಕ್ತಾರರ ಬಳಿ ಕೇಳಿ ಎಂದರು.

ಬಿಜೆಪಿಯ ನಿರ್ಧಾರಗಳಿಗೆ ಬೆಂಬಲ ನೀಡುವುದಿಲ್ಲ ಎಂದು ಹೇಳಲಾರೆ. ಹಾಗೆಂದು ನನ್ನ ಸ್ವಂತ ಅಭಿಪ್ರಾಯ ನನ್ನದು. ಪಕ್ಷದ ನಿಲುವನ್ನು ನನ್ನ ಬಳಿ ತಿಳಿಸಿ, ಅದರ ಬಗ್ಗೆ ನನಗೆ ಸಹಮತ ಮೂಡಿದರೆ ಖಂಡಿತಾ ಬೆಂಬಲಿಸುತ್ತೇನೆ ಎಂದರು.

ಆಪರೇಷನ್‌ ಹಸ್ತದ ಬಗ್ಗೆ ಸುಮಲತಾ ಹೇಳಿದ್ದೇನು?

ರಾಜ್ಯದಲ್ಲಿ ಲೋಕಸಭಾ ಚುನಾವಣೆಗೂ ಮುನ್ನವೇ ಆಪರೇಷನ್‌ ಹಸ್ತ ಮಾಡಲಾಗುತ್ತಿದೆ ಎಂಬ ಬಗ್ಗೆ ಕೇಳಿದಾಗ, ಈ ವಿಚಾರದಲ್ಲಿ, ಯಾರೂ ನನಗೆ ಕಾಂಗ್ರೆಸ್‌ಗೆ ಆಹ್ವಾನ ನೀಡಿಲ್ಲ ಎಂದರು. ಕಾಂಗ್ರೆಸ್ ನಿಂದ ಆಫರ್ ವಿಚಾರವೆಲ್ಲವೂ ಊಹಾಪೋಹ ಎಂದರು. ರಾಜಕೀಯ ಅನ್ನೋದು ನನಗೆ ಅನಿವಾರ್ಯ ಅಲ್ಲ, ಆಕಸ್ಮಿಕ. ಎಲ್ಲವೂ ಸರಿ ಎನಿಸಿದ್ರೆ ಮಾತ್ರ ಮುಂದಿನ ಹೆಜ್ಜೆ ಇಡುತ್ತೇನೆ ಎಂದರು.

ಸುಮಲತಾ ಹಾಜರಾದ ಸಭೆಗೆ ಪ್ರತಾಪ್‌ ಸಿಂಹ ಗೈರು

ಮಂಡ್ಯದಲ್ಲಿ ನಡೆದ ಕಾವೇರಿ ವಿಚಾರದಲ್ಲಿ ಬಿಜೆಪಿ ಆಯೋಜಿಸಿದ ಸಭೆಯಲ್ಲಿ ಸಂಸದೆ ಸುಮಲತಾ ಹಾಜರಾಗಿದ್ದರೆ, ಮೈಸೂರು ಸಂಸದ ಪ್ರತಾಪ್‌ ಸಿಂಹ ಗೈರುಹಾಜರಾಗಿದ್ದರು. ಮಾಜಿ ಶಾಸಕ ರಾಮದಾಸ್, ಸಿ ಪಿ ಯೋಗೇಶ್ವರ್ ಕೂಡಾ ಬಂದಿಲ್ಲ.

ಸಭೆಯಲ್ಲಿ ಮಂಡ್ಯ ಸಂಸದೆ ಸುಮಲತಾ, ಮಾಜಿ ಶಾಸಕ ಎಲ್ ನಾಗೇಂದ್ರ, ನಿರಂಜನ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಶ್ವತ್ಥ ನಾರಾಯಣ್ ಭಾಗಿಯಾಗಿದ್ದಾರೆ. ಕಾವೇರಿ ವಿಚಾರದಲ್ಲೂ ಇಬ್ಬರು ಮುಖಂಡರ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದೆಯೇ ಎಂಬ ಪ್ರಶ್ನೆ ಎದುರಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Valmiki Corporation Scam: ವಾಲ್ಮೀಕಿ ನಿಗಮ ಹಗರಣ; ಹಣ ಹಿಂತಿರುಗಿಸಲು ತೆಲಂಗಾಣ ಸಿಎಂಗೆ ಪತ್ರ ಬರೆದ ಕನ್ನಡಿಗರು

Valmiki Corporation Scam: ನಿಮ್ಮ ನಾಯಕ ರಾಹುಲ್ ಗಾಂಧಿ ಆಣತಿಯಂತೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ, ತೆಲಂಗಾಣದ ಕಾಂಗ್ರೆಸ್ ಚುನಾವಣಾ ಖರ್ಚಿಗೆ ಹಣ ಸಾಗಿಸಿದೆ. ಹೀಗಾಗಿ ಹಣವನ್ನು ಹಿಂತಿರುಗಿಸಬೇಕು ಎಂದು ಪತ್ರದಲ್ಲಿ ತೆಲಂಗಾಣ ಸಿಎಂ ರೇವಂತ್‌ ರೆಡ್ಡಿಗೆ ಮನವಿ ಮಾಡಲಾಗಿದೆ.

VISTARANEWS.COM


on

Valmiki Corporation Scam
Koo

ಬೆಂಗಳೂರು: ವಾಲ್ಮೀಕಿ ನಿಗಮ ಹಗರಣದಲ್ಲಿ (Valmiki Corporation Scam) ಕೋಟ್ಯಂತರ ರೂಪಾಯಿ ತೆಲಂಗಾಣ ಕಂಪನಿಗಳಿಗೆ ವರ್ಗಾವಣೆಯಾಗಿದೆ ಎಂಬ ಆರೋಪಗಳು ಕೇಳಿಬಂದಿರುವುದರಿಂದ ಹಣ ವಾಪಸ್ ನೀಡುವಂತೆ ನೆರೆ ರಾಜ್ಯದ ಸಿಎಂಗೆ ಕನ್ನಡಿಗರು ಪತ್ರ ಬರೆದಿರುವುದು ಕಂಡುಬಂದಿದೆ. ಕರ್ನಾಟಕದ ಹಣವನ್ನು ತೆಲಂಗಾಣ ಚುನಾವಣೆಗೆ ಬಳಸಲಾಗಿದೆ. ಹೀಗಾಗಿ ಅಕ್ರಮವಾಗಿ ವರ್ಗಾವಣೆಯಾದ ಹಣವನ್ನು ಹಿಂತಿರುಗಿಸಬೇಕು ಎಂದು ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ ಅವರಿಗೆ ಮನವಿ ಮಾಡಲಾಗಿದೆ.

ತೆಲಂಗಾಣ ಸಿಎಂಗೆ ಕನ್ನಡಿಗರ ಹೆಸರಿನಲ್ಲಿ ಪತ್ರ ಬರೆದಿರುವ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್‌ ಹಂಚಿಕೊಂಡಿದೆ. ಕರ್ನಾಟಕದ ವಾಲ್ಮೀಕಿ ಸಮುದಾಯಕ್ಕೆ ಸೇರಬೇಕಾಗಿದ್ದ ಸುಮಾರು 187 ಕೋಟಿ ರೂ. ಹಣವನ್ನು ನಿಮ್ಮ ನಾಯಕ ರಾಹುಲ್ ಗಾಂಧಿ ಅವರ ಆಣತಿಯಂತೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ, ಸಚಿವ ನಾಗೇಂದ್ರ ಅವರ ಮೂಲಕ ತೆಲಂಗಾಣದ ಕಾಂಗ್ರೆಸ್ ಚುನಾವಣಾ ಖರ್ಚಿಗೆ ಸಾಗಿಸಿದ್ದಾರೆ.

ಇದನ್ನೂ ಓದಿ | Congress Guarantee: ʼಸ್ಯಾಡಿಸ್ಟ್‌ʼ ಜನರಿಗೆ ಕಾಂಗ್ರೆಸ್ ಗ್ಯಾರಂಟಿ ಇಷ್ಟವಾಗಿಲ್ಲ, ನಿಲ್ಲಿಸೋದೇ ಒಳಿತು ಎಂದ ಲಕ್ಷ್ಮಣ್‌!

ನಿಮ್ಮಲ್ಲಿ ಕನ್ನಡಿಗರು ಕೇಳಿಕೊಳ್ಳುವುದೇನೆಂದರೆ ನಮ್ಮ ರಾಜ್ಯಕ್ಕೆ ಸೇರಬೇಕಾಗಿದ್ದ ಹಣವನ್ನು ದಯಮಾಡಿ ಹಿಂತಿರುಗಿಸಿ ಕೊಡಿ. ಈ ಹಣ ವಾಲ್ಮೀಕಿ ಸಮುದಾಯದ ಏಳಿಗೆಗಾಗಿ ಬಳಕೆ ಆಗಬೇಕಿತ್ತು ಈ ನೀಚ ಸರ್ಕಾರ ಉಂಡು ಹೋದ ಕೊಂಡು ಹೋದ ಎಂಬಂತೆ ತಮ್ಮ ಸ್ವಾರ್ಥಕ್ಕಾಗಿ ಇಲ್ಲಿ ಲೂಟಿ ಹೊಡೆದದ್ದಲ್ಲದೆ, ಮಿಕ್ಕ ಹಣವನ್ನೂ ಬೇರೆ ಬೇರೆ ರಾಜ್ಯಗಳ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಖರ್ಚಿಗೆ ಸಾಗಿಸಿದ್ದಾರೆ.

ಗುಂಡಿಗೆ ಹೋದ ಹೆಣ, ಕಾಂಗ್ರೆಸ್ ನುಂಗಿದ ಹಣ ಎಂದಿಗೂ ವಾಪಸ್ ಬರುವುದಿಲ್ಲ ಎಂಬುದು ನಮಗೆ ತಿಳಿದಿದೆ ಆದ್ರೆ ಕೊನೆ ಪ್ರಯತ್ನವಾಗಿ ನಿಮ್ಮಲ್ಲಿ ಈ ಮನವಿ ಮಾಡುತ್ತಿದ್ದೇವೆ, ಹಣ ಹಿಂತಿರುಗಿಸಿ ವಿಶ್ವಾಸ ಉಳಿಸಿಕೊಳ್ಳಿ ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ. ಸದ್ಯ ಈ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.

ಇದನ್ನೂ ಓದಿ | ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಪ್ರಕರಣದಲ್ಲಿ ಸಚಿವ ಶರಣ ಪ್ರಕಾಶ್‌ ಪಾಟೀಲ್‌ ಹೆಸರು; ಡಾ. ಜಿ.ಪರಮೇಶ್ವರ್‌ ಹೇಳಿದ್ದೇನು?

ತೆಲಂಗಾಣ ಸಹಕಾರ ಬ್ಯಾಂಕ್‌ ಅಧ್ಯಕ್ಷನನ್ನು ಬಂಧಿಸಿದ್ದ ಎಸ್‌ಐಟಿ

ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್‌ನ ಸಹಕಾರ ಬ್ಯಾಂಕ್‌ ಅಧ್ಯಕ್ಷ ಸತ್ಯನಾರಾಯಣ ಇಟಕಾರಿ ಎಂಬುವವರನ್ನು ಸಿಐಡಿ ಎಸ್‌ಐಟಿ ಜೂನ್‌ 4ರಂದು ಬಂಧಿಸಿತ್ತು. ಆರೋಪಿ ಸತ್ಯನಾರಾಯಣ ಹೈದರಾಬಾದ್‌ನ ನಲ್ಲಕುಂಟ ಪ್ರದೇಶದಲ್ಲಿರುವ ಫಸ್ಟ್‌ ಫೈನಾನ್ಸ್‌ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿ ಲಿಮಿಟೆಡ್‌ನ ಅಧ್ಯಕ್ಷ ಹಾಗೂ ವ್ಯವಸ್ಥಾಪಕರಾಗಿದ್ದಾರೆ.

ವಾಲ್ಮೀಕಿ ನಿಗಮದ 94.73 ಕೋಟಿ ರೂ. ಅಕ್ರಮ ವರ್ಗಾವಣೆಯಲ್ಲಿ ಸತ್ಯನಾರಾಯಣ ಪ್ರಧಾನ ಸೂತ್ರಧಾರ ಆರೋಪಿಯಾಗಿದ್ದಾರೆ. ಯೂನಿಯನ್‌ ಬ್ಯಾಂಕ್‌ನಲ್ಲಿರುವ ವಾಲ್ಮೀಕಿ ನಿಗಮದ ಖಾತೆಯಿಂದ 18 ನಕಲಿ ಬ್ಯಾಂಕ್‌ ಖಾತೆಗಳಿಗೆ ಹಣ ವರ್ಗಾವಣೆ ಆಗಿತ್ತು. ತನಿಖೆ ವೇಳೆ ಫೈನಾನ್ಸ್‌ ಕಂಪನಿ ಸತ್ಯನಾರಾಯಣ ಅವರೇ 18 ನಕಲಿ ಖಾತೆಗಳನ್ನು ಸೃಷ್ಟಿಸಿ ಹಣ ವರ್ಗಾವಣೆ ಮಾಡಿಸಿಕೊಂಡಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿತ್ತು. ಹೀಗಾಗಿ ಅವರನ್ನು ಎಸ್‌ಐಟಿ ಬಂಧಿಸಿತ್ತು.

Continue Reading

ಕೊಡಗು

NSS Camp : ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನ 7 ದಿನಗಳ ಎನ್‌ಎಸ್‌ಎಸ್‌ ಶಿಬಿರಕ್ಕೆ ತೆರೆ

NSS Camp : ಏಳು ದಿನಗಳ ಎನ್‌ಎಸ್‌ಎಸ್‌ ಶಿಬಿರಕ್ಕೆ ತೆರೆಬಿದ್ದಿದೆ. ಸರ್ವರನ್ನೂ ಸಮಾನವಾಗಿ ಕಾಣುವ ಮನೋಭಾವವನ್ನು ಹುಟ್ಟು ಹಾಕುವ ಎನ್‌ಎಸ್‌ಎಸ್‌ ಶಿಬಿರಗಳು ನಡೆಯುತ್ತಲೇ ಇರಬೇಕು ಎಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಮೇ. ಪ್ರೊ. ಬಿ.ರಾಘವ ಅಭಿಪ್ರಾಯಪಟ್ಟರು.

VISTARANEWS.COM


on

By

NSS Camp
Koo

ಕೊಡಗು: ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ 2024ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರದ (NSS Camp) ಸಮಾರೋಪ ಸಮಾರಂಭ ಮಡಿಕೇರಿ ಹೊರವಲಯದ ಗಾಳಿಬೀಡು ಜವಾಹರ್ ನವೋದಯ ಶಾಲೆಯಲ್ಲಿ ಅರ್ಥಪೂರ್ಣವಾಗಿ ನಡೆಯಿತು.

ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದಲ್ಲಿ ಏಳು ದಿನಗಳು ರಾಷ್ಟ್ರೀಯ ಸೇವಾಯ ಯೋಜನೆಯ ಕಾರ್ಯಕ್ರಮಗಳು ನಡೆದಿದ್ದು, 2024ನೇ ಸಾಲಿನ ಶಿಬಿರಕ್ಕೆ ತೆರೆಬಿದ್ದಿದೆ. ರಾಷ್ಟ್ರೀಯ ಸೇವಾ ಯೋಜನೆಯ ಎಲ್ಲಾ ಸ್ವಯಂ ಸೇವಕ ವಿದ್ಯಾರ್ಥಿಗಳು ಶ್ರದ್ಧೆಯಿಂದ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಅನಾವರಣ ಮಾಡಲು ಇದೊಂದು ಉತ್ತಮ ವೇದಿಕೆಯಾಗಿತ್ತು.

ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲ ಓ.ಎಂ. ಪಂಕಜಾಕ್ಷನ್, ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಮಾತ್ರವಲ್ಲದೆ, ಜೀವನದ ಸಾರವನ್ನು ತಿಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಇಲ್ಲಿ ಎಲ್ಲರೂ ಒಂದೇ, ನಾನು ನೀನು ಎನ್ನುವ ಭೇದ-ಭಾವಕ್ಕೆ ಅವಕಾಶವಿಲ್ಲ. ಪರಸ್ಪರ ಸಹಕಾರಿ ಮನೋಭಾವ ರೂಪಿಸಿಕೊಳ್ಳಲು ಬಹಳ ಮುಖ್ಯವಾದ ಶಿಬಿರ ಎಂದು ಸ್ವಯಂಸೇವಕರಿಗೆ ತಿಳಿ ಹೇಳಿದರು.

ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಮೇ. ಪ್ರೊ. ಬಿ.ರಾಘವ ಮಾತಾನಾಡಿ, ನಮ್ಮ ಕಾಲೇಜಿನಿಂದ ಪ್ರತಿ ವರ್ಷವೂ ವಿಶೇಷ ವಾರ್ಷಿಕ ಶಿಬಿರ ನಡೆಯುತ್ತದೆ. ಎನ್ಎಸ್ಎಸ್ ವಿದ್ಯಾರ್ಥಿಗಳಿಗೆ ಗ್ರಾಮೀಣ ಜೀವನ, ಹೊಂದಾಣಿಕೆಯ ಜೀವನ ಹಾಗು ಸರಳ ಜೀವನದ ಮಹತ್ವವನ್ನು ತಿಳಿಸುತ್ತದೆ. ವಿದ್ಯಾರ್ಥಿಗಳು ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ಕಳೆಯುವ ದಿನಗಳು ಬಹಳ ಮುಖ್ಯವಾದದ್ದು. ನನಗಲ್ಲ ನಿನಗೆ ಎನ್ನುವ ಧ್ಯೇಯದೊಡನೆ ಸರ್ವರನ್ನೂ ಸಮಾನವಾಗಿ ಕಾಣುವ ಮನೋಭಾವವನ್ನು ಹುಟ್ಟು ಹಾಕುವ ಇಂತಹ ಶಿಬಿರಗಳು ನಡೆಯುತ್ತಲೇ ಇರಬೇಕು. ವಿದ್ಯಾರ್ಥಿಗಳು ಶೈಕ್ಷಣಿಕ ವಿಚಾರಗಳ ಜತೆಗೆ ಇಂತಹ ಸಹಪಠ್ಯ ಚಟುವಟಿಕೆಗಳಲ್ಲಿ ಭಾಗವಹಿಸಲು ಮನಸ್ಸು ಮಾಡಬೇಕು ಎಂದು ನುಡಿದರು.

ಇದನ್ನೂ ಓದಿ: Karnataka Weather : ಉತ್ತರ ಒಳನಾಡು, ಕರಾವಳಿಯಲ್ಲಿ ವ್ಯಾಪಕ ಮಳೆ; ಶಾಲೆಗೆ ನುಗ್ಗಿದ ನೀರು, ಮಕ್ಕಳಿಗೆ ರಜೆ

ಧನಾತ್ಮಕ ಮಾನಸಿಕ ದೃಢತೆಗೆ ಸರಿಸಾಟಿ ಬೇರೆಯಿಲ್ಲ

ಗಾಳಿಬೀಡು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಶಿಕಿರಣ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ, ನಮ್ಮ ಗ್ರಾಮದಲ್ಲಿ ಹೀಗೊಂದು ಶಿಬಿರ ನಡೆಯುತ್ತಿರುವುದು ನಮಗೆ ಹೆಮ್ಮೆಯ ವಿಚಾರ. ರಾಷ್ಟ್ರೀಯ ಸೇವಾ ಯೋಜನೆಯ ವಿಚಾರಧಾರೆಗಳು ಪ್ರತಿಯೊಬ್ಬ ಮನುಷ್ಯನಿಗೂ ಬಹಳ ಅಗತ್ಯ. ವಿದ್ಯಾರ್ಥಿ ದೆಸೆಯಲ್ಲೇ ಎನ್.ಎಸ್.ಎಸ್ ವಿಚಾರಗಳು ಮನದಲ್ಲಿ ಬೇರೂರಿದರೆ, ಆ ಧನಾತ್ಮಕ ಮಾನಸಿಕ ದೃಢತೆಗೆ ಸರಿಸಾಟಿ ಬೇರೆಯಿಲ್ಲ ಎಂದರು.

ಕಾರ್ಯಕ್ರಮದಲ್ಲಿ‌ ಜವಾಹರ್ ನವೋದಯ ವಿದ್ಯಾಲಯದ ಉಪ ಪ್ರಾಂಶುಪಾಲೆ ಶೋಭಾಮಣಿ, ಯೋಜನಾಧಿಕಾರಿಗಳಾದ ಡಾ. ಗಾಯತ್ರಿ, ಡಾ. ಮಹದೇವಯ್ಯ ಸೇರಿ ಶಿಬಿರಾಧಿಕಾರಿಗಳಾದ ಅಲೋಕ್ ಬಿಜೈ, ಖುರ್ಷಿದಾ ಭಾನು ಭಾಗಿಯಾಗಿದ್ದರು. ಜತೆಗೆ ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜಿನ ಹಿಂದಿ ಉಪನ್ಯಾಸಕ ತಳವಾರ್, ಸ್ಥಳೀಯರಾದ ಕೋಚನ ಡಿಶಾಂತ್, ರಾಷ್ಟ್ರೀಯ ಸೇವಾ ಯೋಜನೆಯ ನಾಯಕರು ಹಾಗೂ ಸ್ವಯಂ ಸೇವಕರು ಸೇರಿದಂತೆ ಹಲವರು‌ ಉಪಸ್ಥಿತರಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಉತ್ತರ ಒಳನಾಡು, ಕರಾವಳಿಯಲ್ಲಿ ವ್ಯಾಪಕ ಮಳೆ; ಶಾಲೆಗೆ ನುಗ್ಗಿದ ನೀರು, ಮಕ್ಕಳಿಗೆ ರಜೆ

Karnataka Weather Forecast : ರಾಜ್ಯಾದ್ಯಂತ ಮಳೆಯ (Rain News) ಅಬ್ಬರ ಮುಂದುವರಿದಿದೆ. ಭಾರಿ ಮಳೆಯಿಂದಾಗಿ ಉಡುಪಿಯ ಶಾಲೆಗೆ ನೀರು ನುಗ್ಗಿದ್ದರಿಂದ ಮಕ್ಕಳಿಗೆ ರಜೆ ನೀಡಲಾಗಿತ್ತು. ಕೆಲವೆಡೆ ರಸ್ತೆಗಳು ಕೆರೆಯಂತೆ ಮಾರ್ಪಾಡಾಗಿತ್ತು. ಎಲ್ಲೆಲ್ಲಿ ಏನೆಲ್ಲ ಅವಾಂತರಗಳು ಆಗಿವೆ. ಇನ್ನೂ ಎಷ್ಟು ದಿನ ಮಳೆಯಾಟ ಇರಲಿದೆ ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

By

Karnataka weather Forecast
Koo

ಉಡುಪಿ: ಉತ್ತರ ಒಳನಾಡು, ಕರಾವಳಿ ಸೇರಿ ಮಲೆನಾಡು ಭಾಗದ ವಿವಿಧೆಡೆ ಭಾರಿ ವರ್ಷಧಾರೆಗೆ ಜನರು ತತ್ತರಿಸಿಹೋಗಿದ್ದಾರೆ. ನಾಲ್ಕೈದು ದಿನಗಳು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka weather Forecast) ನೀಡಿದೆ. ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ (Rain News) ಉಡುಪಿಯ ಬೈಂದೂರು ತಾಲೂಕಿನ ಯಡ್ತರೆ ಸಮೀಪ ರಾಹುತನಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನೀರು ನುಗ್ಗಿದೆ. ತರಗತಿ ಕೋಣೆಗಳು ಜಲಾವೃತಗೊಂಡ ಪರಿಣಾಮ ಶಾಲಾ ಮಕ್ಕಳಿಗೆ ಶನಿವಾರ ರಜೆ ನೀಡಲಾಗಿತ್ತು. ಶಾಲೆ ಸಮೀಪ ಸಮರ್ಪಕವಾದ ಚರಂಡಿ ವ್ಯವಸ್ಥೆಯಿಲ್ಲದೇ ರಾಷ್ಟ್ರೀಯ ಹೆದ್ದಾರಿಯಿಂದ ಹರಿದ ನೀರು ನೇರ ಶಾಲೆಗೆ ನುಗ್ಗುತ್ತಿದೆ. ಕಳೆದ ಹಲವು ವರ್ಷಗಳಿಂದ ಮಳೆಗಾಲದಲ್ಲಿ ಇದೇ ಸಮಸ್ಯೆ ಆಗುತ್ತಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ದಾವಣಗೆರೆಯಲ್ಲಿ ಕೆರೆಯಂತಾದ ಜಮೀನುಗಳು

ದಾವಣಗೆರೆಯ ಜಗಳೂರು ತಾಲೂಕಿನಲ್ಲಿ ಶನಿವಾರ ಭರ್ಜರಿ ಮಳೆಯಾಗಿದೆ. ಹನುಮಂತಪುರ, ದಿದ್ದಗಿ , ಹುಚ್ಚವನಹಳ್ಳಿ ಪಲ್ಲಾಗಟ್ಟೆ, ಮೇದಕೇರನಹಳ್ಳಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಭಾರಿ ಮಳೆಯಾಗಿದೆ. ಧಾರಾಕಾರವಾಗಿ ಸುರಿದ ಮಳೆಯಿಂದ ಜಮೀನುಗಳು ಕೆರೆಯಂತಾಗಿದೆ.

ಧಾರವಾಡದ ಆಯಟ್ಟಿ ಬ್ರಿಡ್ಜ್ ಬಂದ್‌

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಆಯಟ್ಟಿ ಬ್ರಿಡ್ಜ್ ಮಳೆಗೆ ಮುಳುಗಡೆಯಾಗಿದ್ದು, ಸಂಚಾರ ಬಂದ್‌ ಮಾಡಲಾಗಿದೆ. ಹಲವಾರು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆಯು ಮಳೆ ಬಂದರೆ ಸಾಕು ನೀರಿನಲ್ಲಿ ಮುಳುಗಡೆಯಾಗುತ್ತದೆ. ಹೀಗಾಗಿ ಸೇತುವೆ ಮೇಲೆ ನೀರು ತಗ್ಗುವವರೆಗೂ ಜನರ ಓಡಾಟ ಸಂಪೂರ್ಣ ಬಂದ್ ಮಾಡಲಾಗಿದೆ. ಇನ್ನೂ ಸೇತುವೆ ಎತ್ತರ ಮಾಡಬೇಕೆಂದು ಗ್ರಾಮಸ್ಥರು ಮನವಿ ಮಾಡಿದರೂ ಅಧಿಕಾರಿಗಳು ಮಾತ್ರ ಕ್ಯಾರೆ ಎನ್ನುತಿಲ್ಲ. ಇತ್ತ ಹೊಸ ಬ್ರಿಡ್ಜ್ ನಿರ್ಮಾಣ ಮಾಡುವವರೆಗೂ ಜನರ ಸಮಸ್ಯೆ ತಪ್ಪಿದ್ದಲ್ಲ. ಬ್ರಿಡ್ಜ್ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಮುಗಿದರೂ ಸಹ ಕೆಲಸ ಮಾತ್ರ ಶುರುವಾಗಿಲ್ಲ.

karnataka weather Forecast

ಇದನ್ನೂ ಓದಿ: Murder Case : ತಂಗಿಗೆ ವರದಕ್ಷಿಣೆ ಟಾರ್ಚರ್‌; ಬಾಮೈದನ ಕೊಲೆ ಮಾಡಿದ ಬಾವ

ವಿಜಯಪುರದ ದೋಣಿ ನದಿ ಸೇತುವೆ ಜಲಾವೃತ

ವಿಜಯಪುರದ ಯಾಳವಾರ ಗ್ರಾಮದ ಸೇತುವೆ ಸಂಪೂರ್ಣ ಜಲಾವೃತಗೊಂಡಿದೆ. ಭಾರಿ ಮಳೆಗೆ ಸಂಪೂರ್ಣ ದೋಣಿ ನದಿ ಸೇತುವೆ ಜಲಾವೃತದಿಂದ ರಸ್ತೆ ಸಂಪರ್ಕ ಕಡಿತವಾಗಿದೆ. ಸೇತುವೆ ಜಲಾವೃತದಿಂದ ಹೊಲಗಳಿಗೆ ತೆರಳುವ ರೈತರಿಗೂ ಸಂಕಷ್ಟ ಎದುರಾಗಿದೆ. ಡೋಣಿ ನದಿಗೆ ಕಟ್ಟಿರುವ ಹಳೆಯ ನೆಲ ಸೇತುವೆ ಜಲಾವೃತಗೊಂಡಿದೆ. ಹೊಸ ಸೇತುವೆ ಕಳಪೆ‌ ಕಾಮಗಾರಿಯಿಂದ ಶಿಥಿಲಗೊಂಡಿದೆ. ಹೀಗಾಗಿ ಜಲಾವೃತವಾದ ಹಳೆಯ ಸೇತುವೆಯ‌ ಮೇಲೆಯೇ ವಾಹನಗಳು ಸಂಚಾರಿಸುತ್ತಿದೆ. ಹೊಸ ಸೇತುವೆ ಅಲ್ಲಲ್ಲಿ ಬಿರುಕು ಬಿಟ್ಟು ಬೀಳುವ ಹಂತ ತಲುಪಿದೆ. ಹೀಗಾಗಿ ಹೊಸ ಸೇತುವೆ ಮೇಲೆ ಕಳೆದ ಎರಡು ವರ್ಷಗಳಿಂದ ಸಂಚಾರ‌ ನಿಷೇಧಿಸಲಾಗಿದೆ. ಬ್ರಿಟಿಷರ ಕಾಲದಲ್ಲಿ ನಿರ್ಮಾಣವಾಗಿರುವ ನೆಲ ಮಟ್ಟದ ಸೇತುವೆ ಮೇಲೆ ಓಡಾಟ ನಡೆಸುತ್ತಿದ್ದಾರೆ.

ಗ್ರಾಮಕ್ಕೆ ನುಗ್ಗಿದ ಹಳ್ಳದ ನೀರು

ವಿಜಯನಗರ ಜಿಲ್ಲೆಯ ಗುಡೇಕೋಟೆ ಹೋಬಳಿಯ ಮಹದೇವಪುರ ಗ್ರಾಮದಲ್ಲಿ ಮಳೆಯಿಂದಾಗಿ ಭಾರಿ ಪ್ರಮಾಣದ ಹಳ್ಳದ ನೀರು ಗ್ರಾಮಕ್ಕೆ ನುಗ್ಗಿದೆ. ಗ್ರಾಮದ ಬೀದಿಗಳಲ್ಲಿ ರಭಸವಾಗಿ ಹರಿದು ಮನೆ ಒಳಗೆ ನುಗ್ಗಿದೆ. ಮಹದೇವಪುರ ಗ್ರಾಮದ ಮಾರಿಗುಡ್ಡ ಏರಿಯಾದಿಂದ ಗ್ರಾಮಕ್ಕೆ ನೀರು ನುಗ್ಗುತ್ತಿದೆ. ಮಹದೇವಪುರ ಗ್ರಾಮದಲ್ಲಿ ದಲಿತ ಕೇರಿ ತಗ್ಗು ಪ್ರದೇಶದಲ್ಲಿ ಇದೆ.

ಚಿಕ್ಕಮಗಳೂರು, ಉತ್ತರ ಕನ್ನಡದಲ್ಲಿ ಮಳೆಯ ಅಬ್ಬರ

ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಮುಂದುವರಿದಿದೆ. ಕರಾವಳಿಯ ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದೆ. ಇನ್ನೂ ಚಿಕ್ಕಮಗಳೂರಿನ ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಬಣಕಲ್, ಬಾಳೂರು ಸುತ್ತಮುತ್ತ ಭಾರೀ ಮಳೆಯಾಗಿದೆ. ಚಾರ್ಮಾಡಿ ಘಾಟಿಯಲ್ಲಿ ಭಾರೀ ಮಳೆಗೆ ವಾಹನ ಸವಾರರು ಪರದಾಡಿದರು. ಮಳೆ ರಭಸಕ್ಕೆ ರಸ್ತೆ ಕಾಣದೆ ಇರುವುದರಿಂದ ಸವಾರರು ಕೊಟ್ಟಿಗೆಹಾರದಲ್ಲೇ ವಾಹನ ನಿಲ್ಲಿಸಿಕೊಂಡಿರುವುದು ಕಂಡು ಬಂತು.

ಗದಗದಲ್ಲಿ ಕೊಚ್ಚಿ ಹೋದ ಕಿರುಸೇತುವೆ

ಸತತ ಮಳೆಯಿಂದಾಗಿ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಧರ್ಮಾಪುರ ಗ್ರಾಮದ ಗಣಪತಿ ಕೆರೆಯ ಕಿರುಸೇತುವೆ ಕೊಚ್ಚಿ ಹೋದೆ. ಜಮೀನುಗಳಿಗೆ ಸಂಪರ್ಕ ಕಲ್ಪಿಸಲು ನಿರ್ಮಾಣ ಮಾಡಿದ್ದ ಕಿರುಸೇತುವೆ ನೀರುಪಾಲಾಗಿದೆ. ಕಳೆದ ವರ್ಷವಷ್ಟೇ ರೈತರು ತಮ್ಮ ಜಮೀನುಗಳಿಗೆ ತೆರಳಲು ನಿರ್ಮಿಸಲಾಗಿತ್ತು. ನಿರಂತರ ಮಳೆಯಿಂದಾಗಿ ಕಿರುಸೇತುವೆ ರಸ್ತೆ ಕೊಚ್ಚಿ ಹೋಗಿದ್ದು, ರೈತರು ಪರದಾಡುತ್ತಿದ್ದಾರೆ. ರಸ್ತೆ ಇಲ್ಲದ ಹಿನ್ನೆಲೆ ಇದೀಗ ರೈತರು ಕೃಷಿ ಚಟುವಟಿಕೆ ನಡೆಸಲು ಸಮಸ್ಯೆಯಾಗಿದೆ.

ಬೆಳಗಾವಿಯಲ್ಲಿ ಕೆರೆಯಂತಾದ ರಸ್ತೆಗಳು

ಮಳೆರಾಯನ ಅರ್ಭಟಕ್ಕೆ ಬೆಳಗಾವಿ ಕ್ಯಾಂಪ್‌ ಪ್ರದೇಶದ ಹತ್ತಿರ ರಸ್ತೆಗಳು ಕೆರೆಯಂತೆ ಮಾರ್ಪಾಟ್ಟಿವೆ. ಬೆಳಗಾವಿಯ ವಿವಿಧೆಡೆ ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿದೆ. ವಾಹನ ಸಂಚಾರಕ್ಕೆ ಅಡೆತಡೆ ಉಂಟಾಯಿತು. ಬೆಳಗಾವಿಯ ಖಾನಾಪುರ ರಸ್ತೆಯಲ್ಲಿ ಎರಡು ‌ಅಡಿ ನೀರು ನಿಂತು ಅವಾಂತರವೇ ಸೃಷ್ಟಿಯಾಗಿತ್ತು. ಬೆಳಗಾವಿಯ ಗ್ಲೋಬ್ ಥೀಯೇಟರ್‌ ಅಂಗಳಕ್ಕೆ ನೀರು ನುಗ್ಗಿತ್ತು. ಟಿಕೆಟ್ ಕೌಂಟರ್ ಸಂಪೂರ್ಣ ಜಲಾವೃತಗೊಂಡಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Wheelchair Cricket Tournament: ವಿಶೇಷಚೇತನರ ಗಾಲಿಕುರ್ಚಿಯ ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸಿದ ರವಿಶಂಕರ್ ಗುರೂಜಿ

Wheelchair Cricket Tournament: ಜೀವನದಲ್ಲಿ ಕ್ರೀಡಾಪಟುತ್ವದ ಸ್ಫೂರ್ತಿಯನ್ನು ಹೊಂದಿರಬೇಕು. ಬಲವಾದ, ಸಂತೋಷವಾದ ಮನಸ್ಸನ್ನು ಹೊಂದುವುದು ಮುಖ್ಯ ಎಂದು ಖ್ಯಾತ ಆಧ್ಯಾತ್ಮಿಕ ಗುರು ರವಿಶಂಕರ್‌ ಗುರೂಜಿ ಅವರು ತಿಳಿಸಿದ್ದಾರೆ.

VISTARANEWS.COM


on

Koo

ಬೆಂಗಳೂರು: ಪರಿಶ್ರಮ ದಿವ್ಯಾಂಗ ಕ್ರೀಡಾ ಅಕಾಡೆಮಿಯು ಆಯೋಜಿಸಿದ್ದ ವಿಶೇಷಚೇತನರ ಗಾಲಿಕುರ್ಚಿಯ ಕ್ರಿಕೆಟ್ ಪಂದ್ಯಾವಳಿಯನ್ನು (Wheelchair Cricket Tournament) ಆರ್ಟ್ ಆಫ್ ಲಿವಿಂಗ್‌ನ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ಖ್ಯಾತ ಆಧ್ಯಾತ್ಮಿಕ ಗುರುಗಳಾದ ಗುರುದೇವ್‌ ಶ್ರೀ ಶ್ರೀ ರವಿಶಂಕರ್‌ ಹಾಗೂ ಇತರ ಗಣ್ಯರು ಉದ್ಘಾಟಿಸಿದರು. ಪಂದ್ಯಾವಳಿಯಲ್ಲಿ, 35 ಪುರುಷರು, 25 ಮಹಿಳಾ ಕ್ರೀಡಾಪಟುಗಳು ಹಾಗೂ 10 ಸಹಚರರು ಭಾಗಿಯಾಗಿದ್ದರು.

ಕ್ರೀಡೆಗಳಲ್ಲಿ ನೈತಿಕತೆಯ ಬೆಂಬಲ ನೀಡಲು ದನಿಯಾಗಿರುವ ಗುರುದೇವ್ ಶ್ರೀ ಶ್ರೀ ರವಿಶಂಕರರು ಮಾತನಾಡಿ, “ಈ ಅಕಾಡೆಮಿಯು ಎಲ್ಲರಿಗೂ ಆಶಾಕಿರಣವನ್ನು ಮೂಡಿಸುತ್ತಿದೆ. ಇಂದಿನ ದಿನಗಳಲ್ಲಿ ಒತ್ತಡಕ್ಕೆ ಒಳಗಾಗುತ್ತಿರುವ ಯುವಕರಿಗೆ ಇದು ದಾರಿಯನ್ನು ತೋರಿಸುತ್ತಿದೆ. ಏನೇ ಆದರೂ ಜೀವನದಲ್ಲಿ ಕ್ರೀಡಾಪಟುತ್ವದ ಸ್ಫೂರ್ತಿಯನ್ನು ಹೊಂದಿರಬೇಕು. ಬಲವಾದ, ಸಂತೋಷವಾದ ಮನಸ್ಸನ್ನು ಹೊಂದುವುದು ಮುಖ್ಯ. ಇಂದು ಪ್ರತಿ 40 ಸೆಕೆಂಡುಗಳಿಗೊಮ್ಮೆ ಒಬ್ಬರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ನೀವು ಆಶಾಕಿರಣವನ್ನು ನೀಡಿ, ಜೀವನವನ್ನು ಸನ್ಮಾನಿಸಿ, ಕ್ರೀಡಾಪಟುತ್ವದ ಸ್ಫೂರ್ತಿಯನ್ನು ಹೊಂದುವಂತೆ ಹೇಳುತ್ತಿರುವಿರಿ. ಕ್ರೀಡೆಗಳನ್ನು ಆಡಲು ಉತ್ಸಾಹ, ಸ್ಫೂರ್ತಿ ಮತ್ತು ಧ್ಯಾನ ಬೇಕು” ಎಂದು ಸಲಹೆ ನೀಡಿದರು.

wheelchair cricket tournament

ಇದನ್ನೂ ಓದಿ | IND vs PAK: ಭಾರತ-ಪಾಕ್​ ಪಂದ್ಯಕ್ಕೆ 4 ಹಂತದ ಭದ್ರತಾ ವ್ಯವಸ್ಥೆ; ಮೈದಾನಕ್ಕೆ ನುಗ್ಗಿದರೆ ಜೈಲೂಟ ಖಚಿತ!

ಈ ಪಂದ್ಯಾವಳಿಯನ್ನು, ಜಾಗತಿಕ ಆಧ್ಯಾತ್ಮಿಕ ಗುರುಗಳಾದ ಗುರುದೇವ ಶ್ರೀ ಶ್ರೀ ರವಿಶಂಕರ್, ಪ್ಯಾರಾ ಒಲಿಂಪಿಕ್ ಕಮಿಟಿ ಆಫ್ ಇಂಡಿಯಾ ಕ್ರೀಡಾಪಟುಗಳ ವಿಭಾಗದ ಅಧ್ಯಕ್ಷರಾದ ಶ್ರೀ ಸತ್ಯನಾರಾಯಣ, ಮಾಜಿ ಯೋಧರು, ಮುಖ್ಯ ಕ್ಲಸಿಫೈಯರ್ ಹಾಗೂ ಟೋಕ್ಯೋ ಪಾರಾ ಒಲಿಂಪಿಕ್ಸ್‌ನ ವೈದ್ಯಕೀಯ ನಿರ್ದೇಶಕರು ಡಾ. ಅಮೇಯ, ಮಾಜಿ ಕೆಪಿಎಸ್‌ಇ ಸದಸ್ಯರು, ಬಿಬಿಎಂಪಿ ಕಾರ್ಪೊರೇಟರ್ ಡಾ.ಮಂಗಳಾ ಶ್ರೀಧರ್, ಸುಮಧುರ ಗ್ರೂಪ್ ಸಿಒಒ ಗಿರಿಧರ್ ಕುಮಾರ್. ಬಿ, ಸುಮಧುರ ಗ್ರೂಪ್‌ನ ಸಸ್ಟೇಪಬಿಲಿಟಿ ಮತ್ತು ಸಿಎಸ್ ಆರ್ನ ಮುಖ್ಯಸ್ಥೆ ಜೀವನ ಕಲಾಕುಂದಲ, ಟಿಸಿಎಫ್ಎಂ-ಎಂಬಸ್ಸಿ ಗ್ರೂಪ್ ಸಿಇಒ ಅಶ್ವಿನಿ ವಲಾವಲ್ಕರ್ ಉದ್ಘಾಟಿಸಿದರು.

ಪ್ಯಾರಾ ಒಲಿಂಪಿಕ್ ಕಮಿಟಿ ಆಫ್ ಇಂಡಿಯಾದ ಕ್ರೀಡಾಪಟುಗಳ ಅಧ್ಯಕ್ಷರಾದ ಸತ್ಯನಾರಾಯಣ ಅವರು ಗುರುದೇವರನ್ನು ಕುರಿತು ಮಾತನಾಡಿ, “ತಮ್ಮ ಆಶ್ರಮದಲ್ಲಿ ಅನೇಕ ವರ್ಷಗಳಿಂದಲೂ, ಗುರುದೇವ ಶ್ರೀ ಶ್ರೀ ರವಿಶಂಕರರು ಈ ಕ್ರೀಡೆಯನ್ನು ಪ್ರೋತ್ಸಾಹಿಸುತ್ತಲೇ ಬಂದಿದ್ದಾರೆ. ಇಂದು ಎಲ್ಲೆಡೆಯೂ ಪ್ಯಾರಾ ಒಲಿಂಪಿಕ್ ಕ್ರೀಡೆಗಳಿಗೆ ಬಹಳ ಪ್ರೋತ್ಸಾಹ ದೊರಕುತ್ತಿದೆ. ಹಿಂದೆ ಈ ರೀತಿಯ ಪ್ರೋತ್ಸಾಹ ಇರಲಿಲ್ಲ. ಈಗ ಸರ್ಕಾರವೂ ಸಹ ಬಹಳ ಪ್ರೋತ್ಸಾಹವನ್ನು ನೀಡುತ್ತಿದೆ. ಈಗ ಬೇಕಾಗಿರುವುದೆಂದರೆ, ದಿವ್ಯಾಂಗ ಪಟುಗಳು ಪ್ರತಿ ದಿನ ಅಭ್ಯಾಸ ಮಾಡುವುದು” ಎಂದರು.

ಇದನ್ನೂ ಓದಿ | Norway Chess: 3ನೇ ಸ್ಥಾನಕ್ಕೆ ತೃಪ್ತಿಪಟ್ಟ ಪ್ರಜ್ಞಾನಂದ; ಸಹೋದರಿ ವೈಶಾಲಿಗೆ 4ನೇ ಸ್ಥಾನ

ಜೂನ್ 8 ಮತ್ತು 9ರಂದು ಎಸ್‌ಎಸ್ಆರ್‌ವಿಎಮ್‌ ಗ್ರೌಂಡ್ಸ್‌ನಲ್ಲಿ ಪುರುಷರ ಪಂದ್ಯಾವಳಿ ನಡೆಯಲಿದ್ದು, ವಿರಾಮದ ಸಮಯದಲ್ಲಿ ಮಹಿಳೆಯರ ಟಿ20 ಪಂದ್ಯಾವಳಿಯೂ ನಡೆಯಲಿದೆ.

Continue Reading
Advertisement
Narendra Modi
ದೇಶ12 mins ago

ಚುನಾವಣೆಯಲ್ಲಿ ಬಿಜೆಪಿ ಗೆದ್ದಿದ್ದಕ್ಕೆ ತನ್ನ ಬೆರಳನ್ನೇ ಕತ್ತರಿಸಿ ದೇವಿಗೆ ಅರ್ಪಿಸಿದ ಮೋದಿ ‘ಭಕ್ತ’!

IND vs PAK
ಕ್ರೀಡೆ51 mins ago

IND vs PAK: ಬಾಬರ್‌ ಪಡೆಯನ್ನು ಬೆಂಡೆತ್ತಲಿ ರೋಹಿತ್​ ಸಾರಥ್ಯದ ಟೀಮ್​ ಇಂಡಿಯಾ

Valmiki Corporation Scam
ವೈರಲ್ ನ್ಯೂಸ್59 mins ago

Valmiki Corporation Scam: ವಾಲ್ಮೀಕಿ ನಿಗಮ ಹಗರಣ; ಹಣ ಹಿಂತಿರುಗಿಸಲು ತೆಲಂಗಾಣ ಸಿಎಂಗೆ ಪತ್ರ ಬರೆದ ಕನ್ನಡಿಗರು

Mamata Banerjee
ದೇಶ1 hour ago

Mamata Banerjee: 15 ದಿನಗಳಲ್ಲೇ ಮೋದಿ ಸರ್ಕಾರ ಪತನ; ಸ್ಫೋಟಕ ಭವಿಷ್ಯ ನುಡಿದ ಮಮತಾ ಬ್ಯಾನರ್ಜಿ!

NSS Camp
ಕೊಡಗು1 hour ago

NSS Camp : ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನ 7 ದಿನಗಳ ಎನ್‌ಎಸ್‌ಎಸ್‌ ಶಿಬಿರಕ್ಕೆ ತೆರೆ

sonia gandhi
ದೇಶ2 hours ago

Sonia Gandhi: ಮತ್ತೆ ಸೋನಿಯಾ ಗಾಂಧಿಗೆ ಮಣೆ; ಕಾಂಗ್ರೆಸ್‌ ಸಂಸದೀಯ ಪಕ್ಷದ ಅಧ್ಯಕ್ಷೆಯಾಗಿ ಮರು ಆಯ್ಕೆ!

IND vs PAK
ಕ್ರೀಡೆ2 hours ago

IND vs PAK: ಪಾಕ್​ ವಿರುದ್ಧದ ಪಂದ್ಯದಲ್ಲಿ ವಿಶ್ವ ದಾಖಲೆ ನಿರ್ಮಿಸಲು ಕೊಹ್ಲಿ ಸಜ್ಜು; ಯಾವುದು ಈ ದಾಖಲೆ?

Karnataka weather Forecast
ಮಳೆ2 hours ago

Karnataka Weather : ಉತ್ತರ ಒಳನಾಡು, ಕರಾವಳಿಯಲ್ಲಿ ವ್ಯಾಪಕ ಮಳೆ; ಶಾಲೆಗೆ ನುಗ್ಗಿದ ನೀರು, ಮಕ್ಕಳಿಗೆ ರಜೆ

ಬೆಂಗಳೂರು2 hours ago

Wheelchair Cricket Tournament: ವಿಶೇಷಚೇತನರ ಗಾಲಿಕುರ್ಚಿಯ ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸಿದ ರವಿಶಂಕರ್ ಗುರೂಜಿ

Ambani Family Fashion
ಫ್ಯಾಷನ್3 hours ago

Ambani Family Fashion: ಅಂಬಾನಿ ಕುಟುಂಬದ ಮಹಿಳೆಯರ ಜ್ಯುವೆಲರಿ ಡಿಸೈನ್ಸ್ ಕಾಪಿ ಮಾಡಿ ಟ್ರೆಂಡಿಯಾದ ಜ್ಯುವೆಲರಿಗಳಿವು!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ1 day ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ1 day ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ5 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ5 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ5 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌