Site icon Vistara News

Suraj Revanna Case: ಅಸಹಜ ಲೈಂಗಿಕ ದೌರ್ಜನ್ಯ ಕೇಸ್‌; ಎಂಎಲ್‌ಸಿ ಸೂರಜ್‌ ರೇವಣ್ಣ ಅರೆಸ್ಟ್‌

Suraj Revanna Case

Suraj Revanna Case

ಬೆಂಗಳೂರು: ಲೈಂಗಿಕ ದೌರ್ಜನ್ಯ ಹಗರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಬಂಧನವಾಗಿ ವಿಚಾರಣೆ ನಡೆಯುತ್ತಿರುವ ನಡುವೆಯೇ ಎಚ್‌.ಡಿ.ರೇವಣ್ಣ ಕುಟುಂಬದ ಮತ್ತೊಬ್ಬರ ಬಂಧನವಾಗಿದೆ. ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ (Unnatural sexual abuse)ದ ಆರೋಪದ ಮೇಲೆ ಪ್ರಜ್ವಲ್‌ ಸಹೋದರ, ವಿಧಾನ ಪರಿಷತ್ ಸದಸ್ಯ ಸೂರಜ್‌ ರೇವಣ್ಣ (Suraj Revanna Case) ಅವರನ್ನು ಹಾಸನದ ಸೆನ್ ಪೊಲೀಸ್ ಠಾಣೆಯಲ್ಲಿ ಬಂಧಿಸಲಾಗಿದೆ.

ಪ್ರಕರಣದ ಸಂಬಂಧ ಸೂರಜ್‌ ರೇವಣ್ಣ ಅವರನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳ ಪಡಿಸಿದರು. ಶನಿವಾರ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಹಿನ್ನೆಲೆಯಲ್ಲಿ ತಡರಾತ್ರಿವರೆಗೂ ವಿಚಾರಣೆ ನಡೆಯಿತು. ಭಾನುವಾರ ಮುಂಜಾನೆ 4 ಗಂಟೆವರೆಗೂ ಸೂರಜ್‌ನನ್ನು ತನಿಖಾಧಿಕಾರಿಗಳು ವಿಚಾರಣೆಗೆ ಒಳಪಡಿಸಿದರು.

ಏನಿದು ಪ್ರಕರಣ?

ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯಿಸಿ ದೌರ್ಜನ್ಯ ಎಸಗಿದ್ದು, ನನ್ನ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಸೂರಜ್‌ ರೇವಣ್ಣ ವಿರುದ್ಧ ಅರಕಲಗೂಡಿನ ಜೆಡಿಎಸ್ ಕಾರ್ಯಕರ್ತರೊಬ್ಬರು ಆರೋಪ ಮಾಡಿದ್ದರು. ಈ ಬಗ್ಗೆ ಡಿಜಿಪಿ, ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಮುಖ್ಯಮಂತ್ರಿ ಹಾಗೂ ಗೃಹ ಮಂತ್ರಿಗಳಿಗೆ ದೂರು ಸಲ್ಲಿಸಿದ್ದಾರೆ ಎನ್ನಲಾಗಿದೆ.

ಖಾಸಗಿ ಫೈನಾನ್ಸ್‌ ಕಂಪನಿಯಲ್ಲಿ ಉದ್ಯೋಗಿಯಾದ ಜೆಡಿಎಸ್ ಕಾರ್ಯಕರ್ತ, ಜೂನ್ 16ರಂದು ಸೂರಜ್ ತನಗೆ ವಾಟ್ಸ್‌ಆ್ಯಪ್ ಮೂಲಕ ಸಂದೇಶ ಕಳುಹಿಸಿ, ಗನ್ನಿಕಡ ತೋಟದ ಮನೆಗೆ ಆಹ್ವಾನಿಸಿದ್ದರು. ಉದ್ಯೋಗ ನೀಡುವ ಭರವಸೆ ನೀಡಿ ತನ್ನನ್ನು ಕರೆಸಿಕೊಂಡು, ಸಲಿಂಗಕಾಮಕ್ಕೆ ಒತ್ತಾಯಿಸಿ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಇದರಿಂದ ನನ್ನ ದೇಹದ ಮೇಲೆ ಗಾಯಗಳಾಗಿದ್ದು, ಈ ಬಗ್ಗೆ ಎಲ್ಲಾದರೂ ಬಹಿರಂಗಪಡಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಕೂಡ ಹಾಕಿದ್ದಾರೆ ಎಂದು ಆರೋಪಿಸಿದ್ದರು.

ಪ್ರತಿ ದೂರು

ಇತ್ತ ಸಂತ್ರಸ್ತ ದೂರು ದಾಖಲಿಸುತ್ತಿದ್ದಂತೆ ಅವರ ವಿರುದ್ಧವೇ ಎಫ್‌ಐಆರ್‌ ದಾಖಲಿಸಲಾಗಿದೆ. ಸುಳ್ಳು ಆರೋಪ ಮಾಡಿ ಹಣಕ್ಕಾಗಿ ಪೀಡಿಸಿದ್ದಾರೆ ಎಂದು ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ನೀಡಿದ ದೂರಿನ ಮೇರೆಗೆ ಹೊಳೆನರಸೀಪುರ ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಸೂರಜ್ ರೇವಣ್ಣ ವಿರುದ್ಧ ದೂರುದಾರ ಲೈಂಗಿಕ ಕಿರುಕುಳ ದೂರು ನೀಡುವುದಾಗಿ ಬೆದರಿಕೆ ಹಾಕಿದ್ದ. ಐದು ಕೋಟಿ ರೂ. ಹಣ ನೀಡದಿದ್ದರೆ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ. ಸುಳ್ಳು ದೂರು ನೀಡಿ ಬೆದರಿಕೆ ಹಾಕಿರುವ ಬಗ್ಗೆ ಉಲ್ಲೇಖಿಸಿ ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ದೂರು ಸಲ್ಲಿಕೆ ಮಾಡಿದ್ದರಿಂದ ಐಪಿಸಿ ಸೆಕ್ಸೆನ್ 384, 506 ರ ಅಡಿಯಲ್ಲಿ 168/2024 ರಡಿ ಕೇಸ್ ದಾಖಲಾಗಿದೆ.

ಇದನ್ನೂ ಓದಿ | Prajwal Revanna Case: ರೇವಣ್ಣ ಜಾಮೀನು ರದ್ದು ಕೋರಿ ಎಸ್‌ಐಟಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ

ನಿಮ್ಮ ಬಾಸ್ ಬಳಿ ಕೆಲಸ ಕೊಡಿಸು ಎಂದು ಅರಕಲಗೂಡು ಮೂಲದ ಯುವಕ ಕೇಳಿಕೊಂಡಿದ್ದ. ನೀನೇ ಹೋಗಿ ಬಾಸ್ ಭೇಟಿ ಮಾಡು ಎಂದು ಫೊನ್ ನಂಬರ್ ಕೊಟ್ಟಿದ್ದೆ. ಜೂನ್ 16ರಂದು ಗನ್ನಿಕಡದ ತೋಟದ ಮನೆಗೆ ಕೆಲಸ ಕೇಳಲು ಸಂತ್ರಸ್ತ ಹೋಗಿದ್ದ. ಕೆಲಸ ಕೇಳಿ ವಾಪಸ್ ಬಂದ ಬಳಿಕ ಬ್ಲ್ಯಾಕ್ ಮೇಲ್ ಮಾಡಿರೋದಾಗಿ ಆರೋಪಿಸಲಾಗಿದೆ. ನೀನು ಕೆಲಸ ಕೊಡಿಸಲ್ಲ, ನಿಮ್ಮ ಬಾಸೂ ಕೆಲಸ ಕೊಡಿಸ್ತಿಲ್ಲ. ನನಗೆ ತುಂಬಾ ಕಷ್ಟ ಇದೆ, ನನಗೆ ಹಣ ಬೇಕು. ನೀನು, ನಿಮ್ಮ ಬಾಸ್‌ನಿಂದ ಐದು ಕೋಟಿ ಹಣ ಕೊಡಿಸದಿದ್ದರೆ, ಅವರ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸುತ್ತೇನೆ ಎಂದು ಸಂತ್ರಸ್ತ ಬೆದರಿಕೆ ಹಾಕಿದ್ದಾನೆ ಎಂದು ದೂರುದಾರ ಶಿವಕುಮಾರ್‌ ಹೇಳಿದ್ದಾರೆ.

Exit mobile version