ರಾಜ್ಯ ಬಿಜೆಪಿ ಅಧ್ಯಕ್ಷರ ಮಾತನ್ನೇ ಆಕ್ಷೇಪಿಸಿದ ಮಾಜಿ ಸಚಿವ ಎಸ್‌. ಸುರೇಶ್‌ ಕುಮಾರ್‌ ! - Vistara News

ಕರ್ನಾಟಕ

ರಾಜ್ಯ ಬಿಜೆಪಿ ಅಧ್ಯಕ್ಷರ ಮಾತನ್ನೇ ಆಕ್ಷೇಪಿಸಿದ ಮಾಜಿ ಸಚಿವ ಎಸ್‌. ಸುರೇಶ್‌ ಕುಮಾರ್‌ !

ಜನಸ್ಪಂದನ ಸೇರಿ ವಿವಿಧ ಸಂದರ್ಭದಲ್ಲಿ ನಳಿನ್‌ ಕುಮಾರ್‌ ಕಟೀಲ್‌ ಅವರು, “ಭ್ರಷ್ಟಾಚಾರದ ಗಂಗೋತ್ರಿ ಕಾಂಗ್ರೆಸ್‌” ಎಂದು ಟೀಕಿಸಿದ್ದಾರೆ.

VISTARANEWS.COM


on

suresh kumar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಭ್ರಷ್ಟಾಚಾರದ ಕುರಿತು ಟೀಕೆ ಮಾಡುವಾಗ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ಅವರ ಮಾತನ್ನು ಮಾಜಿ ಸಚಿವ ಎಸ್‌. ಸುರೇಶ್‌ ಕುಮಾರ್‌ ಆಕ್ಷೇಪಿಸಿದ್ದಾರೆ.

ರಾಜ್ಯ ಸರ್ಕಾರದ ಮೂರನೇ ವರ್ಷದ ಪ್ರಯುಕ್ತ ದೊಡ್ಡಬಳ್ಳಾಪುರದಲ್ಲಿ ಸೆಪ್ಟೆಂಬರ್‌ 10ರಂದು ಆಯೋಜನೆ ಮಾಡಿದ್ದ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದ್ದ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ಕಾಂಗ್ರೆಸ್‌ ಎಂದರೆ ಭ್ರಷ್ಟಾಚಾರದ ಗಂಗೋತ್ರಿ ಎಂದಿದ್ದರು. ಆನಂತರವೂ ಅನೇಕ ಸಂದರ್ಭಗಳಲ್ಲಿ ಕಟೀಲ್‌ ಅವರು ಇದೇ ಮಾತನ್ನು ಉಲ್ಲೇಖಿಸಿದ್ದರು.

ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಪರಿವರ್ತನೆಯ ಯುಗ ಆರಂಭವಾಗಿದೆ. ವಿದ್ಯಾನಿಧಿಯನ್ನು ಬೊಮ್ಮಾಯಿಯವರ ಆರಂಭಿಸಿದ್ದಾರೆ. ಕಿಸಾನ್ ಸಮ್ಮಾನ್‍ಗೆ ಹೆಚ್ಚುವರಿ ಮೊತ್ತ ಸೇರಿಸಿ ಕೊಡಲಾಗುತ್ತಿದೆ ಎಂದರಲ್ಲದೆ, ಭ್ರಷ್ಟಾಚಾರದ ಗಂಗೋತ್ರಿ ಕಾಂಗ್ರೆಸ್ ಎಂದು ಟೀಕಿಸಿದ್ದರು.

ಈ ಕುರಿತು ಎಸ್‌. ಸುರೇಶ್‌ ಕುಮಾರ್‌ ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. “ಭ್ರಷ್ಟಾಚಾರವನ್ನು ಖಂಡಿಸುವಾಗ “ಭ್ರಷ್ಟಾಚಾರದ ಗಂಗೋತ್ರಿ” ಎಂದು ಹೇಳಿ “ಪವಿತ್ರ ಗಂಗೋತ್ರಿ” ಯನ್ನೇ ಭ್ರಷ್ಟ ಮಾಡುವುದು ಸರಿಯಲ್ಲ” ಎಂದಿದ್ದಾರೆ. ಆದರೆ ಎಲ್ಲಿಯೂ ರಾಜ್ಯ ಬಿಜೆಪಿ ಅಧ್ಯಕ್ಷರ ಹೆಸರನ್ನು ಸುರೇಶ್‌ ಕುಮಾರ್‌ ಉಲ್ಲೇಖ ಮಾಡಿಲ್ಲ.

ಇದನ್ನೂ ಓದಿ | BJP ಜನಸ್ಪಂದನ| ಯಡಿಯೂರಪ್ಪ ಕೃಷ್ಣ, ಬೊಮ್ಮಾಯಿ ಅರ್ಜುನ: ದಿಗ್ವಿಜಯ ಯಾತ್ರೆ ಹೊರಟಿದೆ, ಸಾಧ್ಯವಿದ್ದರೆ ತಡೆಯಿರಿ: ನಳಿನ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Kundapura Kannada Habba 2024: ಕುಂದಾಪ್ರ ಕನ್ನಡ ಅಧ್ಯಯನ ಪೀಠಕ್ಕೆ ಸದ್ಯದಲ್ಲೇ ಸಮಿತಿ ರಚನೆ: ಜಯಪ್ರಕಾಶ ಹೆಗ್ಡೆ

Kundapura Kannada Habba 2024: ಬೆಂಗಳೂರು ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ 2 ದಿನಗಳ ‘ಕುಂದಾಪ್ರ ಕನ್ನಡ ಹಬ್ಬ’ದ ಸಮಾರೋಪ ಸಮಾರಂಭದಲ್ಲಿ ಮಾಜಿ ಸಚಿವ ಕೆ.ಜಯಪ್ರಕಾಶ ಹೆಗ್ಡೆ ಮಾತನಾಡಿದ್ದಾರೆ.

VISTARANEWS.COM


on

Kundapura Kannada Habba 2024
Koo

ಬೆಂಗಳೂರು: ಕುಂದಾಪ್ರ ಕನ್ನಡ ಅಧ್ಯಯನ ಪೀಠಕ್ಕೆ ಸಂಬಂಧಿಸಿದಂತೆ ಅನುದಾನ ಬಿಡುಗಡೆಯಾಗಿದೆ. ಮಂಗಳೂರು ವಿಶ್ವವಿದ್ಯಾಲಯದಲ್ಲಿ ಸದ್ಯದಲ್ಲೇ ಸಮಿತಿ ರಚನೆಯಾಗಲಿದೆ. ಮುಂದಿನ ಕುಂದಾಪ್ರ ಕನ್ನಡ ಹಬ್ಬದ (Kundapura Kannada Habba) ಸಂದರ್ಭದಲ್ಲಿ ಕುಂದಾಪ್ರ ಕನ್ನಡ ಭಾಷೆಯ ಅಧ್ಯಯನ ಪೀಠ ತನ್ನ ಕೆಲಸ ಪ್ರಾರಂಭಿಸಲಿದೆ ಎಂದು ಮಾಜಿ ಸಚಿವ ಕೆ.ಜಯಪ್ರಕಾಶ ಹೆಗ್ಡೆ ತಿಳಿಸಿದರು.

‘ಕುಂದಾಪ್ರ ಕನ್ನಡ ಪ್ರತಿಷ್ಠಾನ’ದಿಂದ ಬೆಂಗಳೂರು ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ 2 ದಿನಗಳ ‘ಕುಂದಾಪ್ರ ಕನ್ನಡ ಹಬ್ಬ’ದ ಸಮಾರೋಪ ಸಮಾರಂಭದಲ್ಲಿ ಭಾನುವಾರ ಪಾಲ್ಗೊಂಡು ಮಾತನಾಡಿ, ಮಾತೃ ಭಾಷೆಯ ಮೇಲೆ ಅಭಿಮಾನ ಬೆಳೆಸಿಕೊಳ್ಳುವುದರ ಜತೆಗೆ ಇತರೆ ಭಾಷೆಗಳ ಮೇಲೂ ಗೌರವ ಇರಬೇಕು. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಆಡಳಿತಾತ್ಮಕವಾಗಿ ಬೇರೆಯಾಗಿದ್ದರೂ, ಭಾವನಾತ್ಮಕವಾಗಿ ಇಂದಿಗೂ ತನ್ನ ನಂಟನ್ನು ಉಳಿಸಿಕೊಂಡಿದೆ. ಇಲ್ಲಿನ ಭಾಷೆ, ಸಂಸ್ಕೃತಿ ವಿಚಾರದಲ್ಲಿ ಭಿನ್ನತೆ ಇರಬಹುದು. ಆದರೆ ನಾವೆಲ್ಲರೂ ಒಂದೇ ಎನ್ನುವುದನ್ನು ಯಾರೂ ಮರೆಯಬಾರದು. ಮಕ್ಕಳಿಗೆ ಮೊದಲು ಮಾತೃಭಾಷೆ ಕಲಿಸಿಕೊಡಬೇಕು. ಉಳಿದದ್ದನ್ನು ಅವರೇ ಕಲಿತುಕೊಳ್ಳುತ್ತಾರೆ ಎಂದರು.

ನಟ-ನಿರ್ದೇಶಕ ರಾಜ್ ಬಿ. ಶೆಟ್ಟಿ ಮಾತನಾಡಿ, ಕುಂದಾಪುರದ ಜನರು ಯಾವುದನ್ನೂ ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ. ಎಷ್ಟೇ ಗಂಭೀರವಾಗಿ ತೆಗೆದುಕೊಂಡರೂ, ಅದನ್ನು ಅಷ್ಟೇ ಆರಾಮವಾಗಿ ನೋಡುತ್ತಾರೆ. ಅಜ್ಜನಿಂದ, ತಂದೆಯವರೆಗೂ ಎಲ್ಲರನ್ನೂ ತಮಾಷೆ ಮಾಡುವ ಭಾಷೆ ಇದ್ದರೆ ಅದು ಕುಂದಾಪುರ ಕನ್ನಡ ಭಾಷೆ. ಇದು ಭಾಷೆಯ ಗರಿಮೆ. ಈ ಒಂದು ಕಾರಣದಿಂದ ನಾವೆಲ್ಲರೂ ಸಮಾನರು ಎಂಬ ಭಾವನೆ ವ್ಯಕ್ತವಾಗುತ್ತದೆ. ಸಮಾನತೆ ಕುಂದಾಪುರ ಭಾಷೆಯಲ್ಲಿದೆ. ಬದುಕನ್ನು ಸುಂದರವಾಗಿ ಕಾಣುವ ದೃಷ್ಟಿಕೋನ ಕುಂದಾಪುರದ ಜನರಲ್ಲಿದೆ. ಹೀಗಾಗಿ ಜೀವನದಲ್ಲಿ ಎಷ್ಟೇ ದೊಡ್ಡ ಸೋಲಾದರೂ ಬೇಗನೆ ಪುಟಿದೇಳುತ್ತಾರೆ ಎಂದು ಹೇಳಿದರು.

ಬಸ್ರೂರು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಬಿ. ಅಪ್ಪಣ್ಣ ಹೆಗ್ಡೆ ಮಾತನಾಡಿ, ಕುಂದಾಪುರದವರು ತಮ್ಮ ಭಾಷೆ ಉಳಿಸಿ ಬೆಳೆಸುತ್ತಿದ್ದಾರೆ. ಮಕ್ಕಳಿಗೆ ಇಂಗ್ಲಿಷ್​ ಭಾಷೆ ಕಲಿಸುವುದು ತಪ್ಪಲ್ಲ. ನಮ್ಮತನ ಉಳಿಯಬೇಕೆಂದಾದರೆ ಮನೆಯಲ್ಲಿ ಮಕ್ಕಳೊಂದಿಗೆ ಆಡುಭಾಷೆಯಲ್ಲೇ ಮಾತನಾಡಿ. ಕುಂದಾಪುರ ಭಾಷೆಯಲ್ಲಿ ವಿಶಿಷ್ಟ ಶಕ್ತಿ ಇದೆ. ಭಾಷೆಯನ್ನು ಉಳಿಸಿಕೊಂಡರೆ ನಾವು ಉಳಿಯುತ್ತೇವೆ. ನಾವು ಉಳಿಯಬೇಕಾದರೆ ಭಾಷೆ ಉಳಿಯಬೇಕು ಎಂದು ಹೇಳಿದರು.

ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಎಂ.ಆರ್.ಜಿ. ಸಮೂಹದ ಅಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿ, ಬಸ್ರೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಅಪ್ಪಣ್ಣ ಹೆಗ್ಡೆ, ಎ.ಎಸ್.ಕೇಟರರ್ಸ್‌ನ ಸತೀಶ್ ಶೆಟ್ಟಿ, ಸೌತ್‌ ಫೀಲ್ಡ್ ಪೇಂಟ್ಸ್ ಪ್ರೈ. ಲಿ. ಎಂಡಿ ಶಿವರಾಮ ಹೆಗ್ಡೆ, ಚೆಪ್ ಟಾಕ್‌ನ ಗೋವಿಂದಬಾಬು ಪೂಜಾರಿ, ಯುನಿವರ್ಸಲ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌ನ ಉಪೇಂದ್ರ ಶೆಟ್ಟಿ, ‘ಕುಂದಾಪ್ರ ಕನ್ನಡ ಪ್ರತಿಷ್ಠಾನ’ದ ಗೌರವಾಧ್ಯಕ್ಷ ಉದಯ ಹೆಗ್ಡೆ, ಅಧ್ಯಕ್ಷ ಡಾ.ದೀಪಕ್ ಶೆಟ್ಟಿ, ಉಪಾಧ್ಯಕ್ಷ ನರಸಿಂಹ ಬೀಜಾಡಿ, ಕಾರ್ಯದರ್ಶಿ ರಾಘವೇಂದ್ರ ಕಾಂಚನ್, ಕೋಶಾಧಿಕಾರಿ ವಿಜಯ್ ಶೆಟ್ಟಿ ಹಾಲಾಡಿ, ಜಂಟಿ ಕಾರ್ಯದರ್ಶಿ ಅಜಿತ್ ಶೆಟ್ಟಿ ಉಳ್ತೂರು ಮುಂತಾದವರು ಉಪಸ್ಥಿತರಿದ್ದರು.

‘ಹುಟ್ಟೂರ ಗೌರವ’ ಸನ್ಮಾನ

ದೇಶ ವಿದೇಶದಲ್ಲಿ ಎಷ್ಟೇ ಗೌರವ ಸನ್ಮಾನ ಬಂದಿದ್ದರೂ, ಹುಟ್ಟೂರ ಸನ್ಮಾನಕ್ಕೆ ಯಾವುದೂ ಸರಿಸಾಟಿ ಇಲ್ಲ. 14 ತಿಂಗಳ ಮಗುವಾಗಿದ್ದಾಗ ಪೋಲಿಯೂ ರೋಗಕ್ಕೆ ತುತ್ತಾದೆ. ಹೆತ್ತವರ ಪರಿಶ್ರಮ, ಆಶೀರ್ವಾದದ ಫಲವಾಗಿ ಸಾಧನೆ ಸಾಧ್ಯವಾಗಿದೆ. ನಾನಿಂದು ವ್ಹೀಲ್‌ಚೇರ್​ನಲ್ಲಿ ಕೂತಿಲ್ಲ, ಇದು ನನ್ನ ರಥ, ಇದರಲ್ಲಿ ರಾಣಿಯಂತೆ ಕೂತಿದ್ದೇನೆ ಎಂದು ಭಾವಿಸುತ್ತೇನೆ. ಕನಸು ಕಾಣಬೇಕು. ಆ ಕನಸು ಒಂದಲ್ಲ ಒಂದು ದಿನ ನನಸಾಗುತ್ತದೆ. ಕೆಲವು ಬಾರಿ ಸ್ವಲ್ಪ ತಡವಾಗುತ್ತದೆ. ಇದಕ್ಕೆ ನಾನೇ ಉದಾಹರಣೆ. ದೇವರು ನನಗೆ ಸಣ್ಣ ನೋವು ಕೊಟ್ಟರೂ, ನೂರರಷ್ಟು ಗೌರವ ಕೊಟ್ಟಿದ್ದಾನೆ. ಅಂಗವೈಕಲ್ಯ ಇದೆ ಅಂತ ಅಂಜಬೇಕಿಲ್ಲ. ಮನಸ್ಸಿದ್ದರೆ ಎಲ್ಲವನ್ನೂ ಗೆಲ್ಲಬಹುದು ಎಂದು ಪದ್ಮಶ್ರೀ, ಅರ್ಜುನ ಪ್ರಶಸ್ತಿ ಪುರಸ್ಕೃತೆ ಡಾ.ಕೆ.ಮಾಲತಿ ಹೊಳ್ಳ ‘ಊರ ಗೌರವ’ ಸ್ವೀಕರಿಸಿ ಮಾತನಾಡಿದರು.

ಹಿಂದೆ ಕುಂದಾಪುರ ಭಾಷೆ ಮಾತನಾಡಿದರೆ ‘ಸರಿಯಾಗಿ ಮಾತನಾಡು’ ಎನ್ನುತ್ತಿದ್ದರು. ಈ ಭಾಷೆ ಸರಿಯಾಗಿಲ್ಲ ಎಂದವರು ಯಾರು? ಇಂದಿಗೆ ಭಾಷೆಯ ಮೇಲಿನ ಕೀಳರಿಮೆ ಕಳೆದು ಹೋಗಿದೆ. ಬೆಂಗಳೂರಿನಲ್ಲಿರುವ ವಿವಿಧ ಜಿಲ್ಲೆಗಳ ಜನರು ಕುಂದಾಪುರ ಭಾಷೆ ಮಾತನಾಡಲು ಪ್ರಯತ್ನಿಸುತ್ತಿದ್ದಾರೆ. ಪ್ರಭಾವ ಬೀರಿದಂತೆ ಭಾಷೆ ಬೆಳೆಯುತ್ತ ಹೋಗುತ್ತದೆ.
| ಗುರುರಾಜ ಗಂಟಿಹೊಳೆ, ಶಾಸಕ, ಬೈಂದೂರು ಕ್ಷೇತ್ರ

ಕುಂದಾಪುರ ನನ್ನಿಷ್ಟದ ಊರು. ಕೊಟ್ಟೆ ಕಡುಬು ನೆಚ್ಚಿನ ತಿನಿಸು. ಅತ್ತೆ-ಮಾವನ ಮೂಲಕ ಕನ್ನಡ ಕಲಿತುಕೊಂಡಿದ್ದೇನೆ. ಮದುವೆ ನಂತರ ಆನೆಗುಡ್ಡೆ ದೇವಸ್ಥಾನಕ್ಕೆ ಹೋಗಿದ್ದೆ. ‘ಕುಂದಾಪ್ರ ಕನ್ನಡ’ ಎಂದಾಗ ಮನೆಯಲ್ಲಿ ಮಾವ ‘ಹಾಯ್​ ಪದವನ್ನು ಹ್ವಾಯ್​ ಮಾಡು ಅಷ್ಟೇ..’ಎಂದಿದ್ದರು.
| ಪ್ರಿಯಾಂಕ ಉಪೇಂದ್ರ, ನಟಿ

Continue Reading

ಕರ್ನಾಟಕ

Physical Abuse: ಕಿಡ್ನ್ಯಾಪ್ ಮಾಡಿ ಮಹಿಳೆ ಮೇಲೆ ಅತ್ಯಾಚಾರ, ಮಗನ ಮೇಲೂ ಹಲ್ಲೆ; 9 ಆರೋಪಿಗಳ ಅರೆಸ್ಟ್‌

Physical Abuse: ಹಣ ವಸೂಲಿ ಮಾಡಲು ಯುವಕ ಹಾಗೂ ಆತನ ತಾಯಿಯನ್ನು ಆರೋಪಿಗಳು ಅಪಹರಿಸಿ, ಕಿರುಕುಳ ನೀಡಿದ್ದರು. ಹೀಗಾಗಿ 9 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

Physical Abuse
ತಾಯಿ-ಮಗನನ್ನು ಕಿಡ್ನ್ಯಾಪ್‌ ಮಾಡಿ ಕಿರುಕುಳ ನೀಡಿದ ಆರೋಪದಲ್ಲಿ ಬಂಧನವಾಗಿರುವ ಆರೋಪಿಗಳು.
Koo

ಬೆಂಗಳೂರು: ತಾಯಿ-ಮಗನನ್ನು ಕಿಡ್ನ್ಯಾಪ್‌ ಮಾಡಿ ಕಿರುಕುಳ ನೀಡಿದ ಆರೋಪದಲ್ಲಿ 9 ಆರೋಪಿಗಳನ್ನು ಚಂದ್ರಲೇಔಟ್ ಪೊಲೀಸರು ಬಂಧಿಸಿದ್ದಾರೆ. ಕಿಡ್ನ್ಯಾಪ್‌ ಆಗಿದ್ದ ಯುವಕನ ಮೇಲೆ ಕಳ್ಳತನ ಪ್ರಕರಣಗಳಿದ್ದವು. ಹೀಗಾಗಿ ಹಣ ವಸೂಲಿ ಮಾಡಲು ಯುವಕ ಹಾಗೂ ಆತನ ತಾಯಿಯನ್ನು ಆರೋಪಿಗಳು ಅಪಹರಿಸಿ, ಕಿರುಕುಳ (Physical Abuse) ನೀಡಿದ್ದರು. ಹೀಗಾಗಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ವರುಣ್ ಮತ್ತು ಆತನ ತಾಯಿಯನ್ನು ಅಪಹರಣ ಮಾಡಲಾಗಿತ್ತು. ರೌಡಿ ಶೀಟರ್‌ಗಳಾದ ಜೋಸೆಫ್, ಶ್ರೀನಿವಾಸ್ @ ಪಾಗಲ್ ಸೀನಾ, ಸೌಮ್ಯಾ, ಪ್ರತಾಪ್, ಜತಿನ್, ವಿಘ್ನೇಶ್, ಸೈಯದ್ ಶಹಬುದ್ದೀನ್, ಸ್ವಾತಿ, ಮಾದೇಶ ಬಂಧಿತ ಆರೋಪಿಗಳು.

ವರುಣ್ ಹಾಗೂ ತಾಯಿ ಇಬ್ಬರು ಸೇರಿ ಕಳ್ಳತನ ಮಾಡಿರುವ ವಿಚಾರ ಆರೋಪಿಗಳಿಗೆ ತಿಳಿದಿತ್ತು. ಹಾಗಾಗಿ ಕಳ್ಳತನ ಮಾಡಿರುವ ಹಣ ನೀಡುವಂತೆ ತಾಯಿ-ಮಗನನ್ನು ಆರೋಪಿಗಳು ಬೆದರಿಸಿದ್ದರು. ಆದರೆ, ಅವರು ಹಣ ನೀಡದ ಹಿನ್ನೆಲೆ ತಾಯಿ- ಮಗನನ್ನು ಆರೋಪಿಗಳು ಕಿಡ್ನ್ಯಾಪ್ ಮಾಡಿದ್ದರು.

ಆ. 13ರಂದು ತಾಯಿ-ಮಗನನ್ನು ಆರೋಪಿಗಳಾದ ಜೋಸೇಫ್ ಮತ್ತು ಶ್ರೀನಿವಾಸ್@ಪಾಗಲ್ ಸೀನಾ ಕಿಡ್ನ್ಯಾಪ್‌ ಮಾಡಿದ್ದರು. ನಂತರ ಪರಿಚಯಸ್ಥ ಪ್ರತಾಪ್ ಮನೆಯಲ್ಲಿ ಅಕ್ರಮವಾಗಿ ಇರಿಸಿ ಟಾರ್ಚರ್ ನೀಡಲಾಗಿದೆ. ಈ ವೇಳೆ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನಲಾಗಿದೆ. ಘಟನೆ ಸಂಬಂಧ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿತ್ತು.

2 ಲಕ್ಷ ರೂ. ಕೊಡುವಂತೆ ಆರೋಪಿಗಳಿಂದ ಕಿರುಕುಳ ನೀಡಲಾಗಿದೆ. ಇಬ್ಬರ ಬಳಿಯೂ ಹಣ ಇಲ್ಲ ಎಂದು ಗೊತ್ತಾದಾಗ ಬಿಟ್ಟು ಕಳಿಸಿದ್ದಾರೆ. ನಂತರ ಮಹಿಳೆ ಚಂದ್ರಲೇಔಟ್ ಠಾಣೆಗೆ ದೂರು ನೀಡಿದ್ದರಿಂದ ಪ್ರಕರಣ ಸಂಬಂದ 9 ಆರೋಪಿಗಳ ಬಂಧನವಾಗಿದೆ.

ಆರೋಪಿಗಳಾದ ಜೋಸೆಫ್ ಮತ್ತು ಪಾಗಲ್ ಸೀನ ಚಂದ್ರಾ ಲೇಔಟ್ ರೌಡಿ ಶೀಟರ್‌ಗಳಾಗಿದ್ದು, ಶಹಬುದ್ದೀನ್ ಮತ್ತು ವಿಘ್ನೇಶ್ ವಿರುದ್ಧ ಈ ಹಿಂದೆ ಹಲ್ಲೆ ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ | Food Poisoning: ಶಾಲೆಯಲ್ಲಿ ಕೊಟ್ಟ ಬಿಸ್ಕೇಟ್‌ ಸೇವಿಸಿ ಬರೋಬ್ಬರಿ 80 ವಿದ್ಯಾರ್ಥಿಗಳು ಅಸ್ವಸ್ಥ

ಮನೆಯಲ್ಲಿ ಆಟವಾಡುತ್ತಿದ್ದ ಬಾಲಕಿಗೆ ಮೊಬೈಲ್‌ ಆಸೆ ತೋರಿಸಿ ಅತ್ಯಾಚಾರವೆಸಗಿದ ಕಾಮುಕ

ಕೋಲಾರ: ಕೋಲಾರದಲ್ಲಿ ಬಾಲಕಿಯ ಮೇಲೆ ಯುವಕನೊಬ್ಬ (POCSO Case) ಅತ್ಯಾಚಾರವೆಸಗಿದ್ದಾನೆ. ಕೋಲಾರದ ಮುಳಬಾಗಿಲು ತಾಲೂಕಿನ ಮುಷ್ಟೂರು ಗ್ರಾಮದಲ್ಲಿ ಘಟನೆ ನಡೆದಿದೆ. 7 ವರ್ಷದ ಬಾಲಕಿಯ ಮೇಲೆ 21ರ ಸಂದೀಪ್‌ ಎಂಬಾತ ಈ ಕೃತ್ಯ ನಡೆಸಿದ್ದಾನೆ.

ನಿನ್ನೆ ಶನಿವಾರ ಬಾಲಕಿ ಮನೆಯಲ್ಲಿ ಆಡುವಾಡುತ್ತಿದ್ದಳು. ಈ ವೇಳೆ ಬಾಲಕಿಯ ತಂದೆ ಜತೆಗೆ ಮಾತನಾಡುವ ನೆಪದಲ್ಲಿ ಬಂದಿದ್ದ ಈ ಸಂದೀಪ್‌, ಬಳಿಕ ಮೊಬೈಲ್‌ ಆಸೆ ತೋರಿಸಿ ಕರೆದಿದ್ದಾನೆ. ಸಂದೀಪ್‌ ಪರಿಚಯಸ್ಥನೇ ಆಗಿದ್ದರಿಂದ ಬಾಲಕಿ‌ ಮೊಬೈಲ್‌ ನೋಡಲು ಆತನೊಂದಿಗೆ ಹೋಗಿದ್ದಾಳೆ.

ಮನೆಯ ಮಹಡಿ ಮೇಲೆ ಕರೆದುಕೊಂಡು ಹೋದ ಸಂದೀಪ್‌ ಅತ್ಯಾಚಾರವೆಸಗಿದ್ದಾನೆ. ಈ ವೇಳೆ ಬಾಲಕಿ ನೋವಿನಿಂದ ಕೂಗಿಕೊಂಡಾಗ ಆಕೆಯ ಬಾಯಿಮುಚ್ಚಿ ದೌರ್ಜನ್ಯ ನಡೆಸಿದ್ದಾನೆ. ಅತ್ಯಾಚಾರ ನಡೆಸಿ ಅಲ್ಲಿಂದ ಕಾಲ್ಕಿತ್ತಿದ್ದಾನೆ.

ವಾಪಸ್‌ ಮನೆಗೆ ಬಂದ ಬಾಲಕಿ ಮಂಕಾಗಿದ್ದಾಳೆ. ಆಕೆ ನೋವಿನಿಂದ ಒದ್ದಾಡುತ್ತಿದ್ದನ್ನು ಗಮನಿಸಿದ ಬಾಲಕಿ ತಾಯಿ ವಿಚಾರಿಸಿದ್ದಾರೆ. ಆಗ ಬಾಲಕಿ ನಡೆದಿದ್ದನ್ನು ಹೇಳಿದ್ದಾಳೆ. ಕೂಡಲೇ ಅಸ್ವಸ್ಥಳಾಗಿದ್ದ ಮಗಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದಾರೆ.

ಇದನ್ನೂ ಓದಿ: Heart Attack : ಬೈಕ್‌ನಲ್ಲಿ ತೆರಳುತ್ತಿದ್ದಾಗಲೇ ಬಡಿತ ನಿಲ್ಲಿಸಿದ ಹೃದಯ; ಯೋಧನ ಸಾವಿನ ಕೊನೆ ಕ್ಷಣ ಸೆರೆ

ಸದ್ಯ ಕೃತ್ಯದ ಸಂಬಂಧ ಸಂತ್ರಸ್ತೆಯ ಪೋಷಕರು ಮುಳಬಾಗಿಲು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ದೌರ್ಜನ್ಯ ನಂತರ ಪರಾರಿಯಾಗಿರುವ ಆರೋಪಿಗಾಗಿ ತಲಾಶೆ ಹಾಕಿದ್ದಾರೆ.

Continue Reading

ಕರ್ನಾಟಕ

Zika Virus: ಡೆಂಗ್ಯೂ ಮಧ್ಯೆ ಝಿಕಾ ವೈರಸ್‌ ಆತಂಕ; ಸೋಂಕು ತಡೆಗೆ ಮಾರ್ಗಸೂಚಿ ಪ್ರಕಟ

Zika Virus Case: ಡೆಂಗ್ಯೂ, ಚಿಕನ್ ಗುನ್ಯಾ ಹಾಗೂ ಝಿಕಾ ವೈರಸ್ ಸೋಂಕು ಹರಡುವಿಕೆ ನಿಯಂತ್ರಿಸಲು ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಝಿಕಾ ವೈರಸ್ ಸೋಂಕಿಗೆ ನಿರ್ದಿಷ್ಟ ಚಿಕಿತ್ಸೆ ಇಲ್ಲದಿರುವುದರಿಂದ, ಡೆಂಗ್ಯೂ ಜ್ವರದ ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆ ಹಾಗೂ ನಿರ್ವಹಣೆ ಮಾಡಲಾಗುತ್ತದೆ. ಹೀಗಾಗಿ ಮುನ್ನೆಚ್ಚರಿಕೆ ವಹಿಸಲು ಆರೋಗ್ಯ ಇಲಾಖೆ ಸೂಚಿಸಿದೆ.

VISTARANEWS.COM


on

Zika Virus Case
Koo

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಜ್ವರ ಪ್ರಕರಣಗಳ ಏರಿಕೆಯೊಂದಿಗೆ, ಝಿಕಾ ವೈರಸ್ ಸೋಂಕಿನ ಪ್ರಕರಣಗಳು (Zika Virus Case) ವರದಿಯಾಗುತ್ತಿರುವುದು (7 ಪ್ರಕರಣಗಳು) ಜನರಲ್ಲಿ ಆತಂಕ ಮೂಡಿಸಿದೆ. ಈಡಿಸ್ ಸೊಳ್ಳೆಗಳಲ್ಲಿ ಝಿಕಾ ವೈರಸ್ ಪತ್ತೆಯಾಗಿರುವುದು (2 ಜಿಲ್ಲೆಗಳಲ್ಲಿ) ಆತಂಕದ ವಿಷಯವಾಗಿದೆ. ಈಡಿಸ್ ಲಾರ್ವಾ ನಿರ್ಮೂಲನೆಯು ಸಮರ್ಪಕವಾಗಿ ನಡೆದಲ್ಲಿ ಡೆಂಗ್ಯೂ, ಚಿಕನ್ ಗುನ್ಯಾ ಹಾಗೂ ಝಿಕಾ ವೈರಸ್ ಸೋಂಕು ಹರಡುವಿಕೆ ನಿಯಂತ್ರಿಸಬಹುದು. ಹೀಗಾಗಿ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.

ಈ ಬಗ್ಗೆ ಆರೋಗ್ಯ ಇಲಾಖೆ ಆಯುಕ್ತ ಡಿ. ರಂದೀಪ್‌ ಅವರು ಸುತ್ತೋಲೆ ಹೊರಡಿಸಿದ್ದಾರೆ. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ನಿಗದಿತವಾಗಿ ಮತ್ತು ಪ್ರತಿ ಶುಕ್ರವಾರ ಲಾರ್ವಾ ನಿರ್ಮೂಲನಾ ದಿನವೆಂದು ಘೋಷಿಸಿ, ಸಮರೋಪಾದಿಯಲ್ಲಿ ಲಾರ್ವಾ ನಿರ್ಮೂಲನೆಯನ್ನು ಫಲಿತಾಂಶ ಆಧಾರಿತ ಚಟುವಟಿಕೆಯನ್ನಾಗಿ ಕೈಗೊಳ್ಳಲು ಈಗಾಗಲೇ ಸಲಹಾ ಪತ್ರಗಳು, ಸುತ್ತೋಲೆಗಳು, ನಿರ್ದೇಶನಗಳನ್ನು ನೀಡಿದ್ದರೂ, ಈ ಚಟುವಟಿಕೆಯು ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳದ ಹಿನ್ನೆಲೆ ಝಿಕಾ ವೈರಸ್ ಪ್ರಸರಣವೂ ಕಂಡುಬಂದಿದೆ.

ಝಿಕಾ ವೈರಸ್ ಸೋಂಕಿಗೆ ನಿರ್ದಿಷ್ಟ ಚಿಕಿತ್ಸೆ ಇಲ್ಲದಿರುವುದರಿಂದ, ಡೆಂಗ್ಯೂ ಜ್ವರದ ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆ ಹಾಗೂ ನಿರ್ವಹಣೆ ಮಾಡಲಾಗುತ್ತದೆ. ಮುಂದುವರಿದು, ಗರ್ಭಿಣಿಯರು ಝಿಕಾ ವೈರಸ್ ಸೋಂಕಿತರಾದಲ್ಲಿ ಹುಟ್ಟುವ ಮಗುವಿನಲ್ಲಿ ಮೈಕ್ರೋಸೆಫಾಲಿ ಹಾಗೂ ಇನ್ನಿತರ ನರಸಂಬಂಧಿ ಅಂಗವೈಕಲ್ಯ (Neurological Anomalies) ಗಳು ಮತ್ತು ದೃಷ್ಟಿ ದೋಷ ಉಂಟಾಗುವ ಸಾಧ್ಯತೆಯು ಅಧಿಕವಾಗಿರುತ್ತದೆ. ಆದ್ದರಿಂದ, ಝಿಕಾ ವೈರಸ್ ಸೋಂಕಿನ ನಿಯಂತ್ರಣಕ್ಕಾಗಿ ಈ ಕೆಳಕಂಡ ಕ್ರಮಗಳನ್ನು ಆಯಾ ಜಿಲ್ಲಾಡಳಿತದ ಮೇಲ್ವಿಚಾರಣೆಯಲ್ಲಿ, ಕಟ್ಟುನಿಟ್ಟಾಗಿ ಕೈಗೊಳ್ಳಲು ಸೂಚಿಸಿದೆ.

ಜಿಲ್ಲಾಡಳಿಗಳಿಗೆ ಮಾರ್ಗಸೂಚಿ

  • ಝಿಕಾ ವೈರಸ್ ಸೋಂಕಿತ ಈಡಿಸ್ ಸೊಳ್ಳೆ ಕಚ್ಚುವುದರಿಂದ ಹರಡುತ್ತದೆ. ಆದ್ದರಿಂದ, ಎಲ್ಲೆಡೆಯಲ್ಲಿ ಅಂದರೆ, ಗ್ರಾಮೀಣ, ಅರೆ-ನಗರ ಪ್ರದೇಶ, ವಲಸೆ ಕಾರ್ಮಿಕರ ವಾಸಸ್ಥಳಗಳು ಹಾಗೂ ನಗರ ಪ್ರದೇಶಗಳಲ್ಲಿನ ಮನೆಗಳು, ಅಪಾರ್ಟ್ ಮೆಂಟ್‌ಗಳು, ವಾಣಿಜ್ಯ ಸಂಕೀರ್ಣಗಳು, ಅಂಗಡಿ-ಮುಂಗಟ್ಟುಗಳು, ಟೈರ್ ಪಂಕ್ಚರ್ ಸರಿಪಡಿಸುವ ಅಂಗಡಿಗಳು, ಕಚೇರಿಗಳು, ಶಾಲಾ ಕಾಲೇಜು, ಅಂಗನವಾಡಿ, ಹಾಸ್ಟೆಲ್, ಆಸ್ಪತ್ರೆಗಳು, ಧಾರ್ಮಿಕ ಸ್ಥಳಗಳು, ಬಹು ಮಹಡಿ ಕಟ್ಟಡಗಳು, ಕಟ್ಟಡ ನಿರ್ಮಾಣ ಪ್ರದೇಶಗಳು, ಘನತ್ಯಾಜ್ಯ ಸಂಗ್ರಹಣಾ ಸ್ಥಳಗಳು, ಖಾಲಿ ನಿವೇಶನಗಳು, ಸಂತೆ / ದೈನಂದಿನ ಮಾರ್ಕೆಟ್ ನಡೆಯುವ ಸ್ಥಳಗಳು, ಧಾರ್ಮಿಕ ಸ್ಥಳಗಳು, ಹೊಟೇಲ್, ಸಭೆ ಸಮಾರಂಭಗಳು ನಡೆಯುವ ಛತ್ರಗಳು, ಇತ್ಯಾದಿಗಳ ಒಳಾಂಗಣ, ಹೊರಾಂಗಣದಲ್ಲಿರುವ ನೀರಿನ ಸಂಗ್ರಹಣಾ ಪರಿಕರಗಳು ಹಾಗೂ ಮೇಲ್ಮಾವಣಿಯಲ್ಲಿ ಬಿಸಾಡಿದ ಘನತ್ಯಾಜ್ಯ ವಸ್ತುಗಳಲ್ಲಿ ಸಂಗ್ರಹವಾದ ಮಳೆನೀರಿನಲ್ಲಿ ಉತ್ಪತ್ತಿಯಾಗುವ ಈಡಿಸ್ ಲಾರ್ವಾಗಳನ್ನು ನಿರ್ಮೂಲನೆ ಮಾಡುವುದು ಕಡ್ಡಾಯವಾಗಿದೆ.
  • ಝಿಕಾ ವೈರಸ್ ಸೋಂಕಿನ ಲಕ್ಷಣಗಳು: ಜ್ವರ, ಕೆಂಪಾದ ಕಣ್ಣುಗಳು, ತಲೆನೋವು ಗಂಧೆಗಳು, ಸ್ನಾಯು ಮತ್ತು ಕೀಲುಗಳಲ್ಲಿ ನೋವು ಇವು 2-7 ದಿನಗಳ ಅವಧಿಗೆ ಕಾಣಿಸಿಕೊಳ್ಳುತ್ತವೆ. ಆದ್ದರಿಂದ ಇಂತಹ ಲಕ್ಷಣಗಳನ್ನು ಹೊಂದಿರುವವರ ಸೀರಂ ಮಾದರಿಯನ್ನು ಬೆಂಗಳೂರು ಎನ್‌ಐವಿ ಸಂಸ್ಥೆಗೆ ಜಿಕಾ ವೈರಸ್ ಪರೀಕ್ಷೆಗೆ ರವಾನಿಸಬೇಕು.
  • ಸೀರಂ ಮಾದರಿ ಪರೀಕ್ಷೆಯಿಂದ ಝಿಕಾ ವೈರಸ್ ಸೋಂಕು ದೃಢಪಟ್ಟ ಪ್ರಕರಣದ ಕುಟುಂಬದ ಎಲ್ಲಾ ಸದಸ್ಯರ ಸೀರಂ ಮಾದರಿಗಳನ್ನೂ ಸಹ ಎನ್ ಐ ವಿಗೆಗೆ ಜಿಕಾ ವೈರಸ್ ಪರೀಕ್ಷೆಗೆ ರವಾನಿಸಬೇಕು.
  • ಸೀರಂ ಮಾದರಿಯಲ್ಲಿ ಅಥವಾ ಈಡಿಸ್ ಸೊಳ್ಳೆಗಳಲ್ಲಿ ಝಿಕಾ ವೈರಸ್ ಸೋಂಕು ದೃಢಪಟ್ಟಲ್ಲಿ ಸುತ್ತಲಿನ 3 ಕಿ ಮೀ ವ್ಯಾಪ್ತಿಯ (Diameter) ಪ್ರದೇಶವನ್ನು ‘ಕಂಟೋನ್ಮೆಂಟ್ ವಲಯ’ವೆಂದು ಗುರುತಿಸಬೇಕು.
  • ಕಂಟೋನ್ಮೆಂಟ್ ವಲಯದಲ್ಲಿರುವ ಎಲ್ಲಾ ಗರ್ಭಿಣಿಯರ ಸೀರಂ ಹಾಗೂ ಮೂತ್ರದ ಮಾದರಿಗಳನ್ನು ಝಿಕಾ ಪರೀಕ್ಷೆಗಾಗಿ ಎನ್‌ಐವಿಗೆ ರವಾನಿಸಬೇಕು.
  • ಕಂಟೋನ್ಮೆಂಟ್ ವಲಯ’ ವ್ಯಾಪ್ತಿಯಿಂದ 1 ಕಿಮೀ (Diameter) ಪ್ರದೇಶವನ್ನು Risk Zone ಎಂದು ಗುರುತಿಸಿ ಲಾರ್ವಾ ಸಮೀಕ್ಷೆಯನ್ನು ತೀವ್ರಗೊಳಿಸುವುದು ಕಡ್ಡಾಯವಾಗಿದೆ. ಹಾಗೂ ಶಂಕಿತ ಜಿಕಾ ಜ್ವರ ಪ್ರಕರಣಗಳ ಮಾದರಿಯನ್ನು ಪರೀಕ್ಷೆಗೆ ಕಳುಹಿಸುವುದು.
  • ಶಂಕಿತ ಪ್ರಕರಣಗಳ ಹಾಗೂ ಗರ್ಭಿಣಿಯರ ಮಾದರಿ ಸಂಗ್ರಹಣೆ, ಪರೀಕ್ಷೆಗಾಗಿ ಸಲ್ಲಿಕೆ ಹಾಗು ಲೈನ್ ಲಿಸ್ಟ್ ನಿರ್ವಹಣೆಯ ಜವಾಬ್ದಾರಿಯು ಆಯಾ ಜಿಲ್ಲಾ ಸರ್ವೇಕ್ಷಣಾ ಘಟಕದ್ದಾಗಿದ್ದು, ಉಳಿದಂತೆ. ಈಡಿಸ್ ಲಾರ್ವಾ ನಿರ್ಮೂಲನೆ ಸೇರಿದಂತೆ, ರೋಗವಾಹಕ ನಿಯಂತ್ರಣ ಕ್ರಮಗಳ ಅನುಷ್ಠಾನವು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳದ್ದಾಗಿದೆ.
  • ಕಂಟೋನ್ಮೆಂಟ್ ವಲಯದ ಎಲ್ಲಾ ಮನೆಗಳಿಗೆ ಆರೋಗ್ಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು (Incubation period of ZVD is 3-14 days, hence double the incubation period) ಪ್ರತಿ ದಿನ ಭೇಟಿ ನೀಡಿ ಜ್ವರ ಸಮೀಕ್ಷೆ ನಡೆಸುವುದು ಹಾಗೂ ಶಂಕಿತ ಪ್ರಕರಣಗಳು ಕಂಡುಬಂದಲ್ಲಿ ಆರೋಗ್ಯ ಸಂಸ್ಥೆಗೆ ತೆರಳಲು ತಿಳಿಸುವುದು ಸ್ವಯಂ ರಕ್ಷಣಾ ವಿಧಾನಗಳನ್ನು ಅಳವಡಿಸಿಕೊಳ್ಳುವಂತೆ ಆರೋಗ್ಯ ಶಿಕ್ಷಣ ನೀಡುವುದು ಮತ್ತು ಈಡಿಸ್ ಲಾರ್ವಾ ನಿರ್ಮೂಲನೆ ಮಾಡುವುದು ಕಡ್ಡಾಯವಾಗಿದೆ.
  • ಸಿಬ್ಬಂದಿ ಕೊರತೆ ಇದ್ದಲ್ಲಿ ನೆರೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸಿಬ್ಬಂದಿ, ಆಶಾ, ಅರೆ – ವೈದ್ಯಕೀಯ ವಿದ್ಯಾರ್ಥಿಗಳು, ಸ್ವಯಂಸೇವಕರ ಸೇವೆಯನ್ನು ಬಳಸಿಕೊಳ್ಳುವುದು.
  • ಕಂಟೋನ್ಮೆಂಟ್ ವಲಯ ವ್ಯಾಪ್ತಿಯ ಎಲ್ಲಾ ಆರೋಗ್ಯ ಸಂಸ್ಥೆಯ ವೈದ್ಯಕೀಯ ಹಾಗೂ ಅರೆ-ವೈದ್ಯಕೀಯ ಸಿಬ್ಬಂದಿಗೆ ಅಗತ್ಯ ತರಬೇತಿಯನ್ನು ನೀಡುವುದು.
  • ಗ್ರಾಮವಾರು, ಪ್ರದೇಶವಾರು ವರದಿಯಾಗುವ (House index, Container Index Beetran Indes ಗಳನ್ನು ಪ್ರತಿದಿನ ವಿಶ್ಲೇಷಿಸಿ, ಅಗತ್ಯ ಸೂಚನೆಗಳನ್ನು ನೀಡುವುದು.
  • ರೋಗವಾಹಕ ಈಡಿಸ್ ಸೊಳ್ಳೆಗಳ ಸಾಂದ್ರತೆಯನ್ನು ತಗಿಸಲು ತುರ್ತು ಕ್ರಮವಾಗಿ Pyrethrum 2% Extract ಅನ್ನು ಬಳಸಿ Indoor space spray ಯನ್ನು ಕೈಗೊಳ್ಳಬಹುದಾಗಿದೆ.
  • ಕಳೆದ 3 ತಿಂಗಳ ಅವಧಿಯಲ್ಲಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿನ ಹೆರಿಗೆಗಳ ಮಾಹಿತಿಯನ್ನು ಪಡೆದು, ಅವುಗಳ ಪೈಕಿ ಮೈಕ್ರೋಸೆಫಾಲಿ ಪ್ರಕರಣಗಳಿದ್ದಲ್ಲಿ ತಕ್ಷಣವೇ ವರದಿ ಮಾಡುವುದು.
  • ಖಾಸಗಿ ಆಸ್ಪತ್ರೆಗಳಲ್ಲಿನ ವೈದ್ಯರಿಗೆ ಜಿಕಾ ವೈರಸ್ ಸೋಂಕು ಹಾಗೂ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮಾಹಿತಿ, ತರಬೇತಿಯನ್ನು ನೀಡುವುದು.
  • ಝಿಕಾ ವೈರಸ್ ಸೋಂಕಿನ ನಿಯಂತ್ರಣದ ಸಂಬಂಧ ಅಂತರ-ಇಲಾಖಾ ಸಮನ್ವಯ ಸಮಿತಿ ಸಭೆಯನ್ನು ನಡೆಸುವುದು ಹಾಗೂ ಲಭ್ಯ ಮಾಧ್ಯಮಗಳ ಮೂಲಕ ಜಿಕಾ ವೈರಸ್ ಮುಂಜಾಗ್ರತಾ ಕ್ರಮಗಳನ್ನು ಸಾರ್ವಜನಿಕ ಮಾಹಿತಿಗಾಗಿ ಪ್ರಚುರ ಪಡಿಸುವುದು.

ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ಮನವಿ

  • ಸಾರ್ವಜನಿಕರು ಝಿಕಾ ವೈರಸ್ ಸೋಂಕು ಹಾಗೂ ನಿಯಂತ್ರಣದ ಕುರಿತು ಮಾಹಿತಿಯರನ್ನು ಹೊಂದಿರಬೇಕು ಹಾಗೂ ಅನಗತ್ಯ ಭಯದಿಂದ ದೂರವಿದ್ದು, ಈ ಕೆಳಕಂಡ ಕ್ರಮಗಳನ್ನು ಪಾಲಿಸುವುದು ಅಗತ್ಯವಾಗಿದೆ.
  • ಝಿಕಾ ಸೋಂಕಿನ ಲಕ್ಷಣಗಳು ಸಾಮಾನ್ಯವಾಗಿ ಸೌಮ್ಯ ಸ್ವರೂಪದ್ದಾಗಿದ್ದು, ತೀವ್ರ ಸ್ವರೂಪದ ಸೋಂಕಿನ ಲಕ್ಷಣಗಳೊಂದಿಗೆ ಆಸ್ಪತ್ರೆಗೆ ದಾಖಲಾಗುವ ಪ್ರಕರಣಗಳು ಹಾಗೂ ಸೋಂಕಿನಿಂದ ಮರಣ ಪ್ರಕರಣಗಳು ಅತಿ ವಿರಳ.
  • ಆದಾಗ್ಯೂ ಜ್ವರ, ಕೆಂಪಾದ ಕಣ್ಣುಗಳು, ತಲೆನೋವು, ಗಂಧೆಗಳು, ಸ್ನಾಯು ಮತ್ತು ಕೀಲುಗಳಲ್ಲಿ ನೋವು, ಈ ಲಕ್ಷಣಗಳನ್ನು ಹೊಂದಿದವರು ಹತ್ತಿರದ ಆರೋಗ್ಯ ಸಂಸ್ಥೆಗೆ ಭೇಟಿ ನೀಡಿ ಅಗತ್ಯ ಚಿಕಿತ್ಸೆಯನ್ನು ಪಡೆದುಕೊಳ್ಳಬೇಕು. ಸದರಿ ಸೋಂಕಿಗೆ ನಿರ್ದಿಷ್ಟ ಚಿಕಿತ್ಸೆ ಇಲ್ಲದಿರುವುದರಿಂದ, ರೋಗ ಲಕ್ಷಣಗಳಿಗನುಗುಣವಾಗಿ ನಿರ್ವಹಣೆ ಮಾಡಲಾಗುವುದು.
  • ಶಂಕಿತ/ ದೃಢ ಝಿಕಾ ಸೋಂಕಿನ ಪ್ರಕರಣಗಳು ಪ್ರತ್ಯೇಕವಾಗಿದ್ದು, ಅಗತ್ಯ ವಿಶ್ರಾಂತಿಯನ್ನು ಪಡೆಯಬೇಕು. ದ್ರವರೂಪದ ಆಹಾರವನ್ನು ಹೆಚ್ಚಿಗೆ ಸೇವಿಸಬೇಕು ಹಾಗೂ ಮಲಗುವಾಗ, ವಿಶ್ರಾಂತಿ ಪಡೆಯುವಾಗ (ಹಗಲು ಹೊತ್ತಿನಲ್ಲಿಯೂ ಸಹ) ಸೊಳ್ಳೆ ಪರದೆಯನ್ನು ಬಳಸಬೇಕು.
  • ಗರ್ಭಿಣಿಯರು ಈಡಿಸ್ ಸೊಳ್ಳೆ ಕಡಿತದಿಂದ ಪಾರಾಗಲು ಸ್ವಯಂ ರಕ್ಷಣಾ ವಿಧಾನಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು.
  • ಕಂಟೋನ್ಮೆಂಟ್ ವಲಯದಲ್ಲಿರುವ ಗರ್ಭಿಣಿಯರು ಸೀರಂ ಮತ್ತು ಮೂತ್ರದ ಮಾದರಿಯನ್ನು ಝಿಕಾ ವೈರಸ್ ಪರೀಕ್ಷೆಗೆ ಸಲ್ಲಿಸಬೇಕು ಹಾಗೂ ಸ್ಕ್ಯಾನಿಂಗ್ ವರದಿಯನ್ನು ತಜ್ಞರಿಂದ ವಿಶ್ಲೇಷಿಸಬೇಕು.
  • ದೇಹವನ್ನು ಸಂಪೂರ್ಣವಾಗಿ ಮುಚ್ಚುವಂತೆ ಬಟ್ಟೆಯನ್ನು ಭರಿಸುವುದು, ಸೊಳ್ಳೆ ವರದೆಯ ಬಳಕೆಯೂ ಸೇರಿದಂತೆ ಇತರ ಸ್ವಯಂ ರಕ್ಷಣಾ ವಿಧಾನಗಳನ್ನು ಸಾರ್ವಜನಿಕರು ಪಾಲಿಸುವುದು ಅಗತ್ಯವಾಗಿದೆ.
  • ಸಾರ್ವಜನಿಕರು ತಮ್ಮ ಮನೆಯ ಹಾಗೂ ಸಿಬ್ಬಂದಿಗಳು ತಮ್ಮ ಕಚೇರಿಗಳ ಒಳಾಂಗಣ ಹಾಗೂ ಸುತ್ತ-ಮುತ್ತಲಿರುವ ಈಡಿಸ್ ಸೊಳ್ಳೆಗಳ ಉತ್ಪತ್ತಿ ತಾಣಗಳನ್ನು ನಿರ್ಮೂಲನೆ ಮಾಡುವುದು ಹಾಗೂ ಆರೋಗ್ಯ ಸಿಬ್ಬಂದಿ / ಆಶಾ ನೀಡುವ ಸಲಹೆ-ಸೂಚನೆಗಳನ್ನು ಪಾಲಿಸುವುದು ಅಗತ್ಯವಾಗಿದೆ.

ಒಟ್ಟಾರೆಯಾಗಿ, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ, ಜಿಕಾ ವೈರಸ್ ನಿಯಂತ್ರಣಕ್ಕಾಗಿ ಬಿಬಿಎಂಪಿ ಹಾಗೂ ಜಿಲ್ಲಾಡಳಿತಗಳು ಈ ಮೇಲಿನ ಸೂಚನೆಗಳನ್ನು ಪಾಲಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಆಯುಕ್ತ ರಂದೀಪ್ ಡಿ. ಸೂಚಿಸಿದ್ದಾರೆ.

ಇದನ್ನೂ ಓದಿ | Zika Virus : ಆನೇಕಲ್‌ನಲ್ಲಿ ಆರು ಮಂದಿಗೆ ಝಿಕಾ ವೈರಸ್ ಪತ್ತೆ; 3 ಕಿ.ಮೀ ರೇಡಿಯಸ್ ಕಂಟೋನ್ಮೆಂಟ್ ಜೋನ್‌

Continue Reading

ಕರ್ನಾಟಕ

CM Siddaramaiah: ಆ.23ಕ್ಕೆ ಸಿಎಂ ಸಿದ್ದರಾಮಯ್ಯ ದೆಹಲಿಗೆ; ಕಾನೂನು ಹೋರಾಟಕ್ಕೆ ಹೈ ‌ಕಮಾಂಡ್ ಬೆಂಬಲ ಕೋರಲು ಭೇಟಿ

CM Siddaramaiah: ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ‌ಅನುಮತಿ ಕೊಟ್ಟ ಬಳಿಕ ಮೊದಲ ಬಾರಿ ದೆಹಲಿಗೆ ಸಿಎಂ ಸಿದ್ದರಾಮಯ್ಯ ತೆರಳುತ್ತಿದ್ದಾರೆ. ಕರ್ನಾಟಕ ರಾಜ್ಯಪಾಲರ ನಡೆ ವಿರುದ್ಧವಾಗಿ ದೆಹಲಿ ಮಟ್ಟದಲ್ಲಿ ಹೋರಾಟ ನಡೆಸುವ ಕುರಿತು ವರಿಷ್ಠರ ಜತೆ ಚರ್ಚೆ ನಡೆಸಲು ಸಿಎಂ ಸಿದ್ದರಾಮಯ್ಯ ಹೋಗುತ್ತಿದ್ದಾರೆ.

VISTARANEWS.COM


on

CM Siddaramaiah
Koo

ಬೆಂಗಳೂರು: ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಪ್ರಕರಣದಲ್ಲಿ ಕಾನೂನು ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ (CM Siddaramaiah) ಮುಂದಾಗಿದ್ದಾರೆ. ಈಗಾಗಲೇ ಸಿಎಂ ಬೆಂಬಲಕ್ಕೆ ನಿಲ್ಲಲು ಸಚಿವರು ಹಾಗೂ ಶಾಸಕರಿಗೆ ಹೈ ಕಮಾಂಡ್ ಸೂಚನೆ ಕೊಟ್ಟಿರುವ ಹಿನ್ನೆಲೆಯಲ್ಲಿ ಆ.23ರಂದು ಕೈ ವರಿಷ್ಠರ ಭೇಟಿಯಾಗಲು ಸಿಎಂ, ನವ ದೆಹಲಿಗೆ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ‌ಅನುಮತಿ ಕೊಟ್ಟ ಬಳಿಕ ಮೊದಲ ಬಾರಿ ದೆಹಲಿಗೆ ಸಿಎಂ ಸಿದ್ದರಾಮಯ್ಯ ತೆರಳುತ್ತಿದ್ದಾರೆ. ಕರ್ನಾಟಕ ರಾಜ್ಯಪಾಲರ ನಡೆ ವಿರುದ್ಧವಾಗಿ ದೆಹಲಿ ಮಟ್ಟದಲ್ಲಿ ಹೋರಾಟ ನಡೆಸುವ ಕುರಿತು ವರಿಷ್ಠರ ಜತೆ ಚರ್ಚೆ ನಡೆಸಲು ಸಿಎಂ ತೆರಳುತ್ತಿದ್ದಾರೆ.

ಇದನ್ನೂ ಓದಿ | Manipur Bomb Blast: ಮಾಜಿ ಶಾಸಕನ ಮನೆಯಲ್ಲಿ ಬಾಂಬ್‌ ಬ್ಲಾಸ್ಟ್‌; ಮಣಿಪುರದಲ್ಲಿ ನಿಲ್ಲದ ಹಿಂಸಾಚಾರ

ದೇಶದಲ್ಲಿ ಬಿಜೆಪಿಯೇತರ ಹಾಗೂ ಕಾಂಗ್ರೆಸ್ ಪರವಿರುವ ಸರ್ಕಾರದ ಸಿಎಂಗಳ ಬೆಂಬಲದೊಂದಿಗೆ ರಾಷ್ಟ್ರಪತಿಗೆ ದೂರು ನೀಡುವ ಕುರಿತು ಸಿಎಂ ಚರ್ಚೆ ನಡೆಸಲಿದ್ದಾರೆ. ಕರ್ನಾಟಕದಲ್ಲಿ ಆಗುತ್ತಿರುವ ರಾಜಕೀಯ ಬೆಳವಣಿಗೆ ಹಾಗೂ ವರಿಷ್ಠರ ಭೇಟಿ ವೇಳೆ ಮತ್ತೊಮ್ಮೆ ಮುಡಾದಲ್ಲಿ ನನ ಪಾತ್ರವಿಲ್ಲ ಎಂದು ಮನವರಿಕೆ ಮಾಡಿಕೊಡಲು ಸಿಎಂ ದೆಹಲಿಗೆ ತೆರಳುತ್ತಿದ್ದಾರೆ ಎನ್ನಲಾಗಿದೆ.

ಪ್ರಾಸಿಕ್ಯೂಷನ್‌ ಸಂಕಷ್ಟ; ಸಿಎಂ ನಾಳಿನ ಬಳ್ಳಾರಿ, ಮಂತ್ರಾಲಯ ಪ್ರವಾಸ ರದ್ದು

ಬೆಂಗಳೂರು: ಆ. 19ರಂದು ನಿಗದಿಯಾಗಿದ್ದ ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ಬಳ್ಳಾರಿ ಜಿಲ್ಲಾ ಪ್ರವಾಸ ಮತ್ತು ಮಂತ್ರಾಲಯ ಭೇಟಿ ಕಾರ್ಯಕ್ರಮಗಳು ರದ್ದಾಗಿದೆ. ಮುಡಾ ಹಗರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಮುಂದಿನ ಕಾನೂನು ಹೋರಾಟದ ಕುರಿತು ಚರ್ಚೆ ನಡೆಸಲು ನಾಳಿನ ಕಾರ್ಯಕ್ರಮಗಳನ್ನು ಸಿಎಂ ರದ್ದು ಮಾಡಿದ್ದಾರೆ.

ಇದನ್ನೂ ಓದಿ | V Somanna : ರಾಜ್ಯ ಸರ್ಕಾರಕ್ಕೆ ಸೆಡ್ಡು ಹೊಡೆದು ಸಂಸದರ ಕಚೇರಿ ಉದ್ಘಾಟಿಸಿದ ವಿ ಸೋಮಣ್ಣ

ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವುದರಿಂದ ಸಿಎಂ ಮುಂದಿನ ಕಾನೂನು ಹೋರಾಟದ ಕುರಿತು ಚರ್ಚೆ ನಡೆಸುತ್ತಿದ್ದಾರೆ. ಅಲ್ಲದೇ ನಾಳೆ ಹೈಕೋರ್ಟ್‌ನಲ್ಲಿ ಸಿಎಂ ಪರವಾಗಿ ಅಭಿಷೇಕ್ ‌ಮನು ಸಿಂಘ್ವಿ, ಕಪಿಲ್ ಸಿಬಲ್ ಅರ್ಜಿ ಸಲ್ಲಿಕೆ ಸಾಧ್ಯತೆ ಇದೆ. ನಾಳೆ ಬೆಳಗ್ಗೆ ಬೆಂಗಳೂರಿಗೆ ಸಿಂಘ್ವಿ ಮತ್ತು ಸಿಬಲ್ ಆಗಮಿಸಲಿದ್ದಾರೆ. ಸೋಮವಾರ ಬೆಳಗ್ಗೆ ವಕೀಲರ ಜೊತೆಗೆ ಸಿಎಂ‌ ಸಿದ್ದರಾಮಯ್ಯ ಸುದೀರ್ಘ ಚರ್ಚೆ ಹಿನ್ನೆಲೆಯಲ್ಲಿ ನಾಳಿನ ಬಳ್ಳಾರಿ ಜಿಲ್ಲೆ ಮತ್ತು ಮಂತ್ರಾಲಯ ಭೇಟಿಯನ್ನು ಸಿಎಂ ರದ್ದು ಮಾಡಿದ್ದಾರೆ.

Continue Reading
Advertisement
Viral Video
ವೈರಲ್ ನ್ಯೂಸ್4 hours ago

Viral Video: ಪಬ್ಲಿಕ್‌ನಲ್ಲೇ ಲಂಚದ ಹಣ ಹಂಚಿಕೊಂಡ ಟ್ರಾಫಿಕ್‌ ಪೊಲೀಸರು; ಖಾಕಿಯ ಲಂಚಾವತಾರ ಸಿಸಿಟಿವಿಯಲ್ಲಿ ಸೆರೆ

Viral Video
ವೈರಲ್ ನ್ಯೂಸ್4 hours ago

Viral Video: ಅಬ್ಬಾ.. ಸಾವು ಹೀಗೂ ಬರುತ್ತಾ? ಸ್ನೇಹಿತನೊಂದಿಗೆ ಮಾತಾಡ್ತಾ ನಿಂತಿದ್ದವನ ಮೇಲೆ ದೊಪ್ಪೆಂದು ಬಿದ್ದ ಎಸಿ-ವಿಡಿಯೋ ಇದೆ

Rakesh pal
ಪ್ರಮುಖ ಸುದ್ದಿ5 hours ago

Rakesh Pal: ಭಾರತೀಯ ನೌಕಾಪಡೆಯ ಮಹಾನಿರ್ದೇಶಕ ರಾಕೇಶ್ ಪಾಲ್ ಹೃದಯಾಘಾತದಿಂದ ವಿಧಿವಶ

Viral Video
ದೇಶ5 hours ago

Viral News: ಒಂಟಿಯಾಗಿದ್ದಾಗ ಮೈ ಮುಟ್ಟೋಕೆ ಬಂದೋನ ಖಾಸಗಿ ಅಂಗಕ್ಕೆ ಸಟ್ಟುಗದಲ್ಲೇ ಚುಚ್ಚಿದ್ಳು!

Health Tips
ಆರೋಗ್ಯ6 hours ago

Health Tips: ಮಾನಸಿಕ ಒತ್ತಡ ನಿವಾರಿಸಿಕೊಳ್ಳುವುದು ಹೇಗೆ? ಇಲ್ಲಿದೆ ಸುಲಭೋಪಾಯ!

Madurai Tour
Latest6 hours ago

Madurai Tour: ಮಧುರೈಗೆ ಹೋದಾಗ ನೋಡಲೇಬೇಕಾದ 6 ರಮಣೀಯ ಸ್ಥಳಗಳು

Vastu Tips
ಧಾರ್ಮಿಕ6 hours ago

Vastu Tips: ಮಲಗುವ ದಿಕ್ಕು ಸತಿಪತಿ ನಡುವಿನ ವಿರಸಕ್ಕೆ ಕಾರಣ ಆಗಬಹುದು!

Kundapura Kannada Habba 2024
ಕರ್ನಾಟಕ6 hours ago

Kundapura Kannada Habba 2024: ಕುಂದಾಪ್ರ ಕನ್ನಡ ಅಧ್ಯಯನ ಪೀಠಕ್ಕೆ ಸದ್ಯದಲ್ಲೇ ಸಮಿತಿ ರಚನೆ: ಜಯಪ್ರಕಾಶ ಹೆಗ್ಡೆ

Physical Abuse
ಕರ್ನಾಟಕ6 hours ago

Physical Abuse: ಕಿಡ್ನ್ಯಾಪ್ ಮಾಡಿ ಮಹಿಳೆ ಮೇಲೆ ಅತ್ಯಾಚಾರ, ಮಗನ ಮೇಲೂ ಹಲ್ಲೆ; 9 ಆರೋಪಿಗಳ ಅರೆಸ್ಟ್‌

Champai Soren
ದೇಶ7 hours ago

Champai Soren: ನನ್ನ ಎದುರು ಮೂರು ಆಯ್ಕೆಗಳಿವೆ; ಬಿಜೆಪಿ ಸೇರ್ಪಡೆ ಬಗ್ಗೆ ಚಂಪೈ ಸೊರೆನ್‌ ಹೇಳಿದ್ದೇನು? ಇಲ್ಲಿದೆ ಡಿಟೇಲ್ಸ್‌

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌