Site icon Vistara News

CM Siddaramaiah: ಪ್ರತಿಭೆ ಯಾವುದೇ ಒಂದು ಜಾತಿ-ಸಮುದಾಯದ ಸ್ವತ್ತಲ್ಲ: ಸಿಎಂ ಸಿದ್ದರಾಮಯ್ಯ

Talent is not the property of any caste community says CM Siddaramaiah

ಚಿತ್ರದುರ್ಗ: ಪ್ರತಿಭೆ ಯಾವುದೇ ಒಂದು ಜಾತಿ-ಸಮುದಾಯದ ಸ್ವತ್ತಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅಭಿಪ್ರಾಯಪಟ್ಟರು.

ಚಿತ್ರದುರ್ಗದಲ್ಲಿ ಎಚ್. ಆಂಜನೇಯ ಚಾರಿಟಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಉತ್ಯಮ ಅಂಕ ಗಳಿಸಿದ ಶ್ರಮಿಕ ಸಂಸ್ಕೃತಿಯ ಮಕ್ಕಳಿಗೆ ಸನ್ಮಾನಿಸಿ, ಪ್ರೋತ್ಸಾಹಿಸಿ ಅವರು ಮಾತನಾಡಿದರು.

ಚತುವರ್ಣ ವ್ಯವಸ್ಥೆಯಲ್ಲಿ ಮೇಲಿನವರಿಗೆ ಮಾತ್ರ ಎಲ್ಲಾ ಅವಕಾಶಗಳು ಹೆಚ್ಚು ಸಿಗುತ್ತಿತ್ತು. ಶೂದ್ರರು, ಶೋಷಿತರು, ಪರಿಶಿಷ್ಟ ಜಾತಿಗಳವರು ಮತ್ತು ಮೇಲ್ಜಾತಿಯ ಮಹಿಳೆಯರೂ ಕೂಡ ಶಿಕ್ಷಣದಿಂದ ವಂಚಿತರಾಗಿದ್ದರು ಎಂದು ತಿಳಿಸಿದರು.

ಇದನ್ನೂ ಓದಿ: Chenab Bridge: ಐಫೆಲ್ ಟವರ್‌ಗಿಂತ ಎತ್ತರದ ಚೆನಾಬ್ ಸೇತುವೆ ಆಗಸ್ಟ್ 15ರಂದು ಉದ್ಘಾಟನೆಗೆ ಸಜ್ಜು!

ಶಿಕ್ಷಣ ಸ್ವಾಭಿಮಾನ ಬೆಳೆಸುತ್ತದೆ. ವೈಜ್ಞಾನಿಕ ಮತ್ತು ವೈಚಾರಿಕವಾದ ಶಿಕ್ಷಣ ಅಗತ್ಯ. ಹಣೆಬರಹ, ಗ್ರಹಚಾರ ಎನ್ನುವ ಮೌಢ್ಯವನ್ನು ವಿದ್ಯಾವಂತರೇ ನಂಬುತ್ತಾರೆ. ಇಂಥಾ ಶಿಕ್ಷಣ ಪಡೆದು ಪ್ರಯೋಜನ ಏನು ಎಂದು ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ ಅವರು, ಕುವೆಂಪು ಅವರ ಆಶಯದ ವೈಚಾರಿಕ ಶಿಕ್ಷಣ ಅಗತ್ಯ ಎಂದರು.

ಯಾವ ವ್ಯವಸ್ಥೆಯಲ್ಲಿ ಚಲನೆ ಇರುವುದಿಲ್ಲವೋ ಆ ಸಮಾಜದಲ್ಲಿ ಪ್ರಗತಿ ಸಾಧ್ಯವಿಲ್ಲ. ಮಾದಿಗ ಸಮುದಾಯದ 90 ಕ್ಕೂ ಹೆಚ್ಚು ವಿದ್ಯಾರ್ಥಿಗಳು 90% ಗಿಂತ ಹೆಚ್ಚು ಗಳಿಸಿ ಇಂದು ಸನ್ಮಾನಿತರಾದರು. ಇದು ಅತ್ಯಂತ ಖುಷಿಯ ವಿಷಯ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಶೇ.98 ರಷ್ಟು ಅಂಕ ಪಡೆದು ರಾಜ್ಯಕ್ಕೆ 8ನೇ ರ‍್ಯಾಂಕ್ ಗಳಿಸಿದ ಸನ್ಮಾನಿತ ಪಿಯುಸಿ ವಿದ್ಯಾರ್ಥಿನಿಯೊಬ್ಬರಿಗೆ , ನೀನು ಐಎಎಸ್‌ ಮಾಡು. ಬೇಕಾದ ಎಲ್ಲಾ ಸಹಾಯವನ್ನು ನಾನು ಮಾಡುತ್ತೇನೆ ಎಂದು ಭರವಸೆ ನೀಡಿದರು.

ಅಂಬೇಡ್ಕರ್ ಆಶಯ ಮತ್ತು ನಿಲುವುಗಳೇ ನನ್ನ ನಿಲುವುಗಳು

ನಾನು ಅಂಬೇಡ್ಕರ್ ಆಗಲು ಯಾವತ್ತೂ ಸಾಧ್ಯವಿಲ್ಲ. ಆದರೆ ಅಂಬೇಡ್ಕರ್ ಅವರ ಆಶಯ ಮತ್ತು ನಿಲುವುಗಳೇ ನನ್ನ ನಿಲುವುಗಳು ಆಗಿವೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸಿರಿಗೆರೆ ಮಠದ ಪೀಠಾಧ್ಯಕ್ಷ ಡಾ. ಶಿವಮೂರ್ತಿ ಶಿವಾಚಾರ್ಯ ಶ್ರೀಗಳು ಕಾರ್ಯಕ್ರಮದಲ್ಲಿ ದಿವ್ಯ ಸಾನ್ನಿಧ್ಯ ವಹಿಸಿದ್ದರು.

ಇದನ್ನೂ ಓದಿ: Union Budget 2024: ಷೇರು ಮಾರುಕಟ್ಟೆ ಮೇಲೆ ಬಜೆಟ್ ದಿನದ ಎಫೆಕ್ಟ್‌ ಏನು? ಇಲ್ಲಿದೆ 10 ವರ್ಷಗಳ ಹಿನ್ನೋಟ

ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಶಾಸಕರಾದ ವೀರೇಂದ್ರ ಪಪ್ಪಿ, ರಘುಮೂರ್ತಿ, ಬಸವಂತಪ್ಪ, ಮಾಜಿ ಸಚಿವ ಎಚ್.ಆಂಜನೇಯ, ಮಾಜಿ ಸಂಸದ ಚಂದ್ರಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.

Exit mobile version