ತತ್ತ್ವ ಶಂಕರ: ಭವತಿ ಭಿಕ್ಷಾಂ ದೇಹಿ ಎಂದು ಹೊರಟ ಶಂಕರ ಮಾಡಿದ್ದೇನು? - Vistara News

ಕರ್ನಾಟಕ

ತತ್ತ್ವ ಶಂಕರ: ಭವತಿ ಭಿಕ್ಷಾಂ ದೇಹಿ ಎಂದು ಹೊರಟ ಶಂಕರ ಮಾಡಿದ್ದೇನು?

“ಭವತಿ ಭಿಕ್ಷಾಂ ದೇಹಿ” ಎನ್ನುತ್ತಾ ಶಂಕರನು ಹೊರಟನು. ಒಂದು ಮನೆಯ ಮುಂದೆ ಬಂದು ಭವತಿ ಭಿಕ್ಷಾಂ ದೇಹಿ ಎಂದನು. ಮನೆಯಿಂದ ಏನೂ ಉತ್ತರ ಬರಲಿಲ್ಲ. ಮತ್ತೊಮ್ಮೆ “ಭವತಿ ಭಿಕ್ಷಾಂ ದೇಹಿ” ಎಂದು ಕರೆದನು. ಆಗ…

VISTARANEWS.COM


on

Tattva Shankara: What did Shankara do when he went out as Bhavati Bhiksham Dehi?
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

| ತಪಸ್ವಿ
ಐದನೇ ವಯಸ್ಸಿನಲ್ಲಿ ಉಪನಯನ ಸಂಸ್ಕಾರವನ್ನು ಮಾಡಿಸಿಕೊಂಡ ಶಂಕರನು (Tattva Shankara) ಗುರುಕುಲಕ್ಕೆ ಹೊರಟನು. ಗುರುಕುಲದಲ್ಲಿ ಶಂಕರನು ಇತರ ವಿದ್ಯಾರ್ಥಿಗಳಂತೆ ಅಲ್ಲ. ಅವನು ತೀಕ್ಷ್ಣ ಬುದ್ಧಿಯುಳ್ಳನಾಗಿದ್ದ. ಅವನ ಪ್ರೌಢಿಮೆ ನೋಡಿ ಗುರುಗಳೇ ಬೆರಗಾಗುತ್ತಿದ್ದರು. ಶಂಕರನು ಸದ್ಗುಣಗಳ ನಿಧಿಯಾಗಿದ್ದ. ಅವನು ಎಲ್ಲರ ಮನಸನ್ನು ಸೂರೆಗೊಳಿಸಿದ್ದ. ಹೀಗಿರಲು ಅಂದು ಈಗಿನಂತೆ ಅಡುಗೆ ಮಾಡುವುದಕ್ಕಾಗಿ ಯಾರೂ ಇರುತ್ತಿರಲಿಲ್ಲ. ವಿದ್ಯಾರ್ಥಿಗಳು ಭಿಕ್ಷೆ ಬೇಡಿ ತಂದು ಗುರುಗಳಿಗೆ ಒಪ್ಪಿಸಿ ಅವರು ಕೊಟ್ಟಿದ್ದನ್ನು ಸೇವಿಸಬೇಕು ಎಂಬ ನಿಯಮವಿತ್ತು. ಭಿಕ್ಷೆ ಬೇಡುವುದು ಯಾಕೆ ಎಂದರೆ ಹೊಟ್ಟೆ ಪಾಡು ಎಂಬ ಯೋಚನೆ ಬರಬಾರದು. ಕಲಿಯುವ ವಯಸ್ಸಿನಲ್ಲಿ ಜ್ಞಾನವೊಂದೇ ಗುರಿಯಾಗಿರಬೇಕು. ಅಡುಗೆಯವರು ಇದ್ದರೆ ದಿನವೂ ಮೃಷ್ಟಾನ್ನ ಭೋಜನ ಸಿಗುತ್ತದೆ. ಅಥವಾ ಹಸಿವಾದರೆ ಏನೋ ತಿನ್ನಲಿಕ್ಕೆ ಸಿಗುತ್ತದೆ. ಆಗ ವಿದ್ಯಾರ್ಥಿಗಳ ಮನಸ್ಸು ಕಲಿಕೆಯಿಂದ ವಿಮುಖವಾಗುತ್ತದೆ ಎಂದು ಹಿಂದೆ ಗುರುಕುಲಗಳಲ್ಲಿ ಆ ನಿಯಮವಿತ್ತು. ಅವರಿಗೆ ಸಿಕ್ಕಷ್ಟೇ ಆಹಾರದಲ್ಲಿ ಬದುಕುವ ರೀತಿ, ತಿನ್ನುವುದರ ಮೇಲೆ ನಿರ್ಬಯಕೆ, ಇದು ಗುರುಕುಲಗಳಲ್ಲಿನ ಬೋಧನೆಯಾಗಿತ್ತು.

ಇದನ್ನೂ ಓದಿ | ತತ್ತ್ವ ಶಂಕರ : ಭಾರತದ ಮಣ್ಣನ್ನು ಪಾವನಗೊಳಿಸಿದ ಶಂಕರರು

ಭಿಕ್ಷೆ ಬೇಡಲು ಹೊರಟ ಶಂಕರ

ಹೀಗೆ ಭಿಕ್ಷೆಯನ್ನು ಬೇಡಲು ಶಂಕರನು ಹೊರಟ. “ಭವತಿ ಭಿಕ್ಷಾಂ ದೇಹಿ” ಎನ್ನುತ್ತಾ ಹೊರಟನು. ಒಂದು ಮನೆಯ ಮುಂದೆ ಬಂದು ಭವತಿ ಭಿಕ್ಷಾಂ ದೇಹಿ ಎಂದನು. ಮನೆಯಿಂದ ಏನೂ ಉತ್ತರ ಬರಲಿಲ್ಲ. ಮತ್ತೊಮ್ಮೆ ಶಂಕರನು “ಭವತಿ ಭಿಕ್ಷಾಂ ದೇಹಿ” ಎಂದು ಕರೆದನು. ಕಿಟಕಿಯಿಂದ ಒಬ್ಬಳು ಇಣುಕಿ ನೋಡಿದಳು. ಹೊರಗೆ ಬರಲು ಆಗದಷ್ಟು ಅವಳು ಅಶಕ್ತಳಾಗಿದ್ದಳು. ಅವಳು ಹೊರಗೆ ಬಂದಳು. ಅವಳನ್ನು ಕಂಡು ಶಂಕರನು “ ಭಿಕ್ಷೆ ನೀಡು ತಾಯಿʼʼ ಎಂದನು. ಅದಕ್ಕೆ ಅವಳು “ಪುಟ್ಟಾ ನಿನ್ನಂಥ ವಟುವಿಗೆ ಭಿಕ್ಷೆ ನೀಡುವ ಭಾಗ್ಯ ನನಗಿಲ್ಲʼʼ ಎಂದು ಕಣ್ಣೀರು ಸುರಿಸಿದಳು. ಶಂಕರನು “ಯಾಕೆ ತಾಯಿʼʼ ಎಂದು ಕುತೂಹಲದಿಂದ ಕೇಳಿದ. ಅದಕ್ಕೆ ಅವಳು “ಈ ಮುರುಕು ಮನೆಯನ್ನು ನೋಡು ಈಗಲೋ ಆಗಲೋ ಎನ್ನುವಂತಿದೆ. ನಾನಂತೂ ಊಟ ಮಾಡಿ ಮೂರು ದಿನಗಳಾಗಿವೆ. ಯಜಮಾನರು ಭಿಕ್ಷೆಗೆಂದು ಪಕ್ಕದ ಊರಿಗೆ ಹೋದವರು ಇನ್ನೂ ಬಂದಿಲ್ಲ. ಇಂತಹ ಪರಿಸ್ಥಿಯಲ್ಲಿ ನಾನು ನಿನಗೆ ಏನು ಭಿಕ್ಷೆ ನೀಡಲಿ ಮಗುʼʼ ಎಂದು ಕಣ್ಣೀರು ಸುರಿಸಿದಳು.

adi shankaracharya

ಇದನ್ನೂ ಓದಿ | ತತ್ತ್ವ ಶಂಕರ: ಶಂಕರ; ಲೋಕ ಕಲ್ಯಾಣಕ್ಕಾಗಿ ಬಂದ ಅವತಾರ ಪುರುಷ

ಆಕೆ ಕಣ್ಣೀರು ಸುರಿಸಿದಳು

ಶಂಕರನು ಒಂದು ಕ್ಷಣ ಯೋಚಿಸಿದ. ಅವತಾರ ಪುರುಷರೆಂದರೆ ಹಾಗೆ. ಅವರಿಗೆ ನಿಜವಾದ ಸಜ್ಜನರು ಎಲ್ಲಿರುವರು ಎಂದು ತಿಳಿದಿರುತ್ತದೆ. ಆ ಸಜ್ಜನರಿಗೆ ಏನಾದರೂ ತೊಂದರೆ ಆದರೆ ಏನೋ ಒಂದು ಕಾರ್ಯವನ್ನು ನಿಮಿತ್ತ ಮಾಡಿಕೊಂಡು ಅವರಿಗೆ ಪೂರ್ಣ ಕೃಪೆದೋರುತ್ತಾರೆ. ತಮ್ಮನ್ನೂ ಮರೆತು ಅವರ ಕಷ್ಟಕ್ಕೆ ಸ್ಪಂದಿಸುತ್ತಾರೆ. ಹೀಗಿರುವಾಗ ಶಂಕರನು, ಹಾಗಾದರೆ ನಾನಿನ್ನೂ ಹೊರಡುವೆ ಎಂದು ಹೊರಡಲು ಸಿದ್ಧನಾಗುತ್ತಾನೆ. ಆಗ ಅವಳು ನಿಲ್ಲು ಪುಟ್ಟಾ ಎನ್ನುತ್ತಾ ದಡಕ್ಕನೆ ಒಳಕ್ಕೆ ಓಡಿದಳು. ನಂತರ ಹೊರಕ್ಕೆ ಬಂದು ಪುಟ್ಟಾ ನಿನ್ನ ಭಿಕ್ಷಾ ಪಾತ್ರೆಯನ್ನು ಹಿಡಿ. ಹಿತ್ತಲಲ್ಲಿ ಬಿಟ್ಟಿದ್ದ ಒಂದೇ ಒಂದು ನೆಲ್ಲಿಕಾಯಿಯನ್ನು ನಿನಗೆ ಭಿಕ್ಷೆ ಹಾಕುತ್ತೇನೆಂದು ತಂದು ಹಾಕಿದಳು. ಆಗ ಬಾಲ ಶಂಕರನ ಹೃದಯವು ಕರಗಿ ನೀರಾಯಿತು. ಅವನು ಇವಳಿಗೆ ಏನಾದರೂ ದಾರಿ ಮಾಡಬೇಕೆಂದು ಅಲ್ಲಿಯೇ ಲಕ್ಷ್ಮೀ ದೇವಿಯ ಸ್ತುತಿ ಮಾಡಿದನು. ಅದಕ್ಕೆ ದೇವಿಯು ಪ್ರತ್ಯಕ್ಷಳಾದಳು. ಆಗ ಶಂಕರನು ದೇವಿಗೆ ನಮಿಸಿ ಅವಳಿಗೆ ಸಿರಿಯನ್ನು ಅನುಗ್ರಹಿಸಲು ದೇವಿಯನ್ನು ಕೇಳಿದನು. ಅದಕ್ಕೆ ದೇವಿಯು “ಶಂಕರಾ ಇವಳು ಹಿಂದಿನ ಜನ್ಮದಲ್ಲಿ ಯಾವುದೇ ದಾನವನ್ನು ಮಾಡಿಲ್ಲ. ಹಾಗಾಗಿ ಇವಳಿಗೆ ಸಿರಿಯು ಸಿಗುವುದಿಲ್ಲ” ಎಂದಳು. ಆಗ ಶಂಕರನು “ಈಕೆ ಇಂತಹ ಕಷ್ಟದಲ್ಲೂ ಒಂದು ನೆಲ್ಲಿಕಾಯಿಯನ್ನು ನನಗೆ ಭಿಕ್ಷೆ ನೀಡಿದ್ದಾಳೆ. ಆದ್ದರಿಂದ ನೀನು ಅವಳಿಗೆ ಕೃಪೆ ತೋರು ಎಂದನು. ಹೀಗೆಯೇ, ದೇವರು ಭುವಿಗೆ ಇಳಿದು ಬಂದಾಗ ದೀನರ ಮೇಲೆ ತೋರುವ ದೃಷ್ಟಿಯೇ ದಯೆ. ಆ ದೃಷ್ಟಿಯು ಮಾನವನ ಪೂರ್ಣ ಏಳಿಗೆಯನ್ನು ನೀಡುವ ಕರುಣಾ ಸಾಗರ. ಈ ರೀತಿ ಶಂಕರನ ಕೋರಿಕೆಗೆ ದೇವಿಯು ಕನಕದ ಧಾರೆಯನ್ನೆ ಸುರಿಸಿದಳು. ಆ ಪ್ರಸಿದ್ಧ ಸ್ತೋತ್ರವೇ ಕನಕ ಧಾರಾ ಸ್ತೋತ್ರ. ಮುಂದೆ ಆ ಮಹಿಳೆಯು ಸಿರಿವಂತಳಾದಳು. ಇಂದಿಗೂ ಕಾಲಟಿಯ ಪುಣ್ಯ ಭೂಮಿಯಲ್ಲಿ ಈ ಸ್ವರ್ಣ ಗೃಹವನ್ನು ನಾವು ಕಂಡು ಬಾಲ ಶಂಕರನ ಅವತಾರವನ್ನು ಕಣ್ತುಂಬಿಕೊಳ್ಳಬಹುದಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Mayank Agarwal: ಕುಕ್ಕೆಯಲ್ಲಿ ಸರ್ಪಸಂಸ್ಕಾರ ಸೇವೆ ನೆರವೇರಿಸಿದ ಕ್ರಿಕೆಟಿಗ ಮಯಾಂಕ್‌ ಅಗರ್ವಾಲ್‌

Mayank Agarwal: ಅಗರ್ವಾಲ್‌ ಅವರು ಕುಟುಂಬ ಸಮೇತರಾಗಿ ಮಂಗಳವಾರ ರಾತ್ರಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ಮತ್ತು ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು.

VISTARANEWS.COM


on

mayank agarwal
Koo

ಮಂಗಳೂರು: ಟೀಮ್​ ಇಂಡಿಯಾ ಕ್ರಿಕೆಟಿಗ, ಕನ್ನಡಿಗ ಮಯಾಂಕ್‌ ಅಗರ್ವಾಲ್‌(Mayank Agarwal) ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ(Kukke Shri Subrahmanya) ದೇವಸ್ಥಾನದಲ್ಲಿ ಇಂದು(ಬುಧವಾರ) ಸರ್ಪಸಂಸ್ಕಾರ ಸೇವೆಯನ್ನು ನೆರವೇರಿಸಿದ್ದಾರೆ. ಸೋಮವಾರದಂದು ಅಗರ್ವಾಲ್‌ ಅವರು ಪತ್ನಿ ಆಶಿತಾ ಸೂದ್‌(Aashita Sood) ಮತ್ತು ಕುಟುಂಬದೊಂದಿಗೆ ಇಲ್ಲಿಗೆ ಆಗಮಿಸಿ ಖಾಸಗಿ ಹೊಟೇಲ್‌ನಲ್ಲಿ ತಂಗಿದ್ದರು. ಈ ವೇಳೆ ಅವರನ್ನು ಹೊಟೇಲ್‌ನಲ್ಲಿ ಆರತಿ ಬೆಳಗಿ ತಿಲಕವಿಟ್ಟು ಸ್ವಾಗತಿಸಲಾಗಿತ್ತು.

ಮಂಗಳವಾರ ಬೆಳಗ್ಗೆ ಕುಟುಂಬ ಸಮೇತರಾಗಿ ದೇವಳದಲ್ಲಿ ಸರ್ಪಸಂಸ್ಕಾರ ಸೇವೆ ಆರಂಭಿಸಿದ್ದರು. ಅಲ್ಲದೇ, ಸೇವೆಯ ವೈದಿಕ ವಿಧಿ-ವಿಧಾನಗಳನ್ನು ನೆರವೇರಿಸಿದ್ದರು. ಬುಧವಾರ ಗೋಪೂಜೆ, ಬ್ರಹ್ಮಚಾರಿ ಆರಾಧನೆ ಮತ್ತು ನಾಗಪ್ರತಿಷ್ಠೆ ನೆರವೇರಿಸಿ ಸರ್ಪಸಂಸ್ಕಾರ ಸೇವೆಯನ್ನು ಸಮಾಪ್ತಿಗೊಳಿಸಲಿ ದೇವರ ದರ್ಶನ ಪಡೆದು ದೇವಾಲಯದಲ್ಲಿ ಭೋಜನ ಸ್ವೀಕರಿಸಿದ್ದಾರೆ.

ಇದಕ್ಕೂ ಮುನ್ನ ಅಗರ್ವಾಲ್‌ ಅವರು ಕುಟುಂಬ ಸಮೇತರಾಗಿ ಮಂಗಳವಾರ ರಾತ್ರಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ಮತ್ತು ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು. ಜೂನ್​ 9 ರಂದು ಅಗರ್ವಾಲ್​ ಕುಟುಂಬ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿತ್ತು.

ಅಗರ್ವಾಲ್ ದೇಶಿಯ ಕ್ರಿಕೆಟ್​ನಲ್ಲಿ ಉತ್ತಮ ಸಾಧನೆ ತೋರಿದರೂ ಅವರಿಗೆ ಭಾರತ ತಂಡದಲ್ಲಿ ಸರಿಯಾದ ಅವಕಾಶ ಸಿಗಲೇ ಇಲ್ಲ. ಈಗಾಗಲೇ ಹಲವು ಬಾರಿ ಭಾರತ ಟೆಸ್ಟ್​ ತಂಡದ ಪರ ಮಯಾಂಕ್​ ಆಡಿದ್ದರೂ ಅವರ ಸ್ಥಾನ ಮಾತ್ರ ಗಟ್ಟಿಯಾಗಿರಲಿಲ್ಲ. ಆರಂಭಿಕ ಆಟಗಾರರು ಗಾಯಗೊಂಡರೆ ಮಾತ್ರ ಅವರಿಗೆ ಅವಕಾಶ ನೀಡಲಾಗುತ್ತಿತ್ತು. ಆದರೆ ಅವರು ಸಿಕ್ಕ ಅನೇಕ ಅವಕಾಶದಲ್ಲಿ ಉತ್ತಮ ಪ್ರದರ್ಶನ ತೋರುವ ಮೂಲಕ ತಂಡಕ್ಕೆ ಕೊಡುಗೆ ನೀಡಿದ್ದಾರೆ. ಅವರು ಇದುವರೆಗೆ 21 ಟೆಸ್ಟ್​ ಪಂದ್ಯಗಳನ್ನು ಆಡಿದ್ದು 4 ಶತಕ, 2 ದ್ವಿಶತಕ ಮತ್ತು 6 ಅರ್ಧಶತಕ ಬಾರಿಸಿದ್ದಾರೆ. 243 ರನ್​ ಅವರ ವೈಯಕ್ತಿಕ ಗರಿಷ್ಠ ಮೊತ್ತವಾಗಿದೆ.

ಇದನ್ನೂ ಓದಿ Mayank Agarwal: ನೀರಿನ ಬಾಟಲ್ ಫೋಟೊ ಹಂಚಿಕೊಂಡು ರಿಸ್ಕ್​​ ತೆಗೆದುಕೊಳ್ಳಲಾರೆ ಎಂದ ​​ ಅಗರ್ವಾಲ್

ಇತ್ತೀಗೆಚೆ ಅಗರ್ವಾಲ್​ ಅವರು ರಣಜಿ ಕ್ರಿಕೆಟ್ ಪಂದ್ಯವನ್ನಾಡಲು ಅಗರ್ತಲಾದಿಂದ ಸೂರತ್‌ಗೆ ವಿಮಾನದಲ್ಲಿ ತೆರಳುವಾಗ ನೀರು ಎಂದು ಭಾವಿಸಿ ರಾಸಾಯನಿಕ ದ್ರಾವಣವೊಂದನ್ನು ಸೇವಿಸಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ತಮ್ಮ ಸೀಟಿನ ಮುಂಭಾಗದಲ್ಲಿದ್ದ ಬಾಟಲಿಯೊಂದನ್ನು ತೆಗೆದು, ಅದರಲ್ಲಿದ್ದ ಪಾನೀಯವನ್ನು ನೀರು ಎಂದು ಭಾವಿಸಿ ಕುಡಿದಿದ್ದರು. ಅದು ಶೌಚಾಲಯವನ್ನು ಸ್ವತ್ಛಗೊಳಿಸುವ ದ್ರಾವಣವಾಗಿತ್ತು. ವಿಮಾನ ಟೇಕ್‌ ಆಫ್ ಆಗದ ಕಾರಣ ಅಗರ್ವಾಲ್‌ ಅವರನ್ನು ತುರ್ತಾಗಿ ಆಸ್ಪತ್ರೆಗೆ ದಾಖಲಿಸಲು ಸಾಧ್ಯವಾಗಿತ್ತು. ಆರಂಭದಲ್ಲಿ ಅಗರ್ವಾಲ್​ಗೆ ವಿಶಪ್ರಾಶನ ಮಾಡಲಾಗಿದೆ ಎಂದು ವರದಿಯಾಗಿತ್ತು. ಬಳಿಕ ಸತ್ಯಾಂಶ ಬೆಳಕಿಗೆ ಬಂದಿತ್ತು.

Continue Reading

ಪ್ರಮುಖ ಸುದ್ದಿ

Teachers Recruitment: ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು, ಮುಖ್ಯ ಶಿಕ್ಷಕರ ನೇಮಕಾತಿ: ಕೌನ್ಸೆಲಿಂಗ್‌ಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

Teachers Recruitment: ರಾಜ್ಯದ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕೌನ್ಸೆಲಿಂಗ್‌ ನಡೆಸಿ, ಸ್ಥಳ ನಿಯುಕ್ತಿಗೊಳಿಸಲು ಪರಿಷ್ಕೃತ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ.

VISTARANEWS.COM


on

Teachers Recruitment
Koo

ಬೆಂಗಳೂರು: 2023-24ನೇ ಸಾಲಿಗೆ ರಾಜ್ಯದ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ (Specified Post) ಲಿಖಿತ ಪರೀಕ್ಷೆ ನಡೆಸುವ ಮೂಲಕ ಭರ್ತಿ ಮಾಡಲು (Teachers Recruitment) ಶಾಲಾ ಶಿಕ್ಷಣ ಇಲಾಖೆ ಪರಿಷ್ಕೃತ ಆದೇಶ ಹೊರಡಿಸಿತ್ತು. ಇದೀಗ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕೌನ್ಸೆಲಿಂಗ್‌ ನಡೆಸಿ, ಸ್ಥಳ ನಿಯುಕ್ತಿಗೊಳಿಸಲು ಪರಿಷ್ಕೃತ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ.

ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕರ ಹುದ್ದೆಗಳ ಭರ್ತಿಗೆ ಲಿಖಿತ ಪರೀಕ್ಷೆ ನಡೆಸಲು ಇತ್ತೀಚೆಗೆ ಅಧಿಸೂಚನೆ ಹೊರಡಿಸಲಾಗಿತ್ತು. ಲೋಕಸಭಾ ಚುನಾವಣಾ ಮಾದರಿ ನೀತಿ ಸಹಿತೆ ಹಿನ್ನೆಲೆ ಕೌನ್ಸೆಲಿಂಗ್ ದಿನಾಂಕ ಪ್ರಕಟಿಸಿರಲಿಲ್ಲ. ಆದ್ದರಿಂದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕೌನ್ಸಿಲಿಂಗ್‌ ನಡೆಸಲು ಇದೀಗ ಪರಿಷ್ಕೃತ ವೇಳಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ನಡೆದ ಪರೀಕ್ಷೆಯ ಫಲಿತಾಂಶ ಪಟ್ಟಿ ಪ್ರಕಟಣೆ (ಪರೀಕ್ಷಾ ಅಂಕಗಳ ಜತೆಗೆ ಅಭ್ಯರ್ಥಿಗಳ ಸೇವಾ ಅನುಭವ ಹಾಗೂ ಹೆಚ್ಚಿನ ವಿದ್ಯಾರ್ಹತೆಗೆ ನಿಗದಿಪಡಿಸಿರುವ ಅಂಕಗಳ ಕ್ರೋಡೀಕರಣದೊಂದಿಗೆ) ಮಾಡಲು ಜೂನ್‌ 11 ನಿಗದಿ ಮಾಡಲಾಗಿದೆ. ಪ್ರಕಟಿತ ಫಲಿತಾಂಶ ಪಟ್ಟಿಗೆ ಸೇವಾನುಭವ ಹಾಗೂ ವಿದ್ಯಾರ್ಹತೆ ಸಂಬಂಧ ಅಂಕಗಳ ಬಗ್ಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಜೂನ್‌ 11ರಿಂದ 14ರವರೆಗೆ ಅವಕಾಶ ನೀಡಲಾಗಿದೆ.

ಇನ್ನು ಆಕ್ಷೇಪಣೆಗಳನ್ನು ಪರಿಶೀಲಿಸಿ ತಂತ್ರಾಂಶದಲ್ಲಿ ಸರಿಪಡಿಸಿ ಸರಿಪಡಿಸಲು ಜೂನ್‌ 15ರಿಂದ 19ರವರೆಗೆ ಅವಕಾಶ ನೀಡಲಾಗಿದೆ. ಅದೇ ರೀತಿ ಜೂನ್‌ 24ರಂದು ಅಂತಿಮ ಅರ್ಹತಾ ಪಟ್ಟಿ ಪ್ರಕಟಿಸಲು ಸೂಚಿಸಲಾಗಿದೆ.

ಇದನ್ನೂ ಓದಿ | University Grants Commission : ಇನ್ನು ಮುಂದೆ ವಿಶ್ವವಿದ್ಯಾಲಯಗಳಲ್ಲಿ ವರ್ಷಕ್ಕೆ ಎರಡು ಬಾರಿ ಅಡ್ಮಿಷನ್​

Continue Reading

ಪ್ರಮುಖ ಸುದ್ದಿ

Actor Darshan Arrested: ರೇಣುಕಾಸ್ವಾಮಿಗೆ ದರ್ಶನ್‌ ಗ್ಯಾಂಗ್‌ನಿಂದ ಕ್ರೂರ ಹಿಂಸೆ; ಪೋಸ್ಟ್‌ಮಾರ್ಟಂ ವರದಿಯಲ್ಲಿದೆ ಭಯಾನಕ ಡಿಟೇಲ್ಸ್‌

Actor Darshan Arrested: ಮರಣೋತ್ತರ ಪರೀಕ್ಷೆಯ ವರದಿಯ ಆಧಾರದ ಮೇಲೆ ಪೊಲೀಸರು ತನಿಖಾ ವರದಿ ರಚಿಸಲಿದ್ದಾರೆ. ಆರೋಪಿಗಳ ಬಾಯಿ ಬಿಡಿಸಲಿದ್ದಾರೆ. ಆರೋಪಿಗಳು ಪ್ರಕರಣದಿಂದ ತಪ್ಪಿಸಿಕೊಳ್ಳಲು ಹೇಳಬಹುದಾದ ಸುಳ್ಳುಗಳನ್ನು ಆ ಕ್ಷಣದಲ್ಲೇ ತಡೆಯಲಿದ್ದಾರೆ. ಸಾಂದರ್ಭಿಕ ಪ್ರಶ್ನೆಗಳನ್ನು ಹಾಕುವ ಮೂಲಕ ನೈಜ ಉತ್ತರವನ್ನು ಪಡೆಯಲಿದ್ದಾರೆ. ಇವೆಲ್ಲವೂ ತನಿಖೆಯ ಪ್ರಗತಿಗೆ ನೆರವಾಗಲಿದೆ.

VISTARANEWS.COM


on

Actor Darshan Arrested
Koo

ಬೆಂಗಳೂರು: ದರ್ಶನ್ ಮತ್ತು ಆತನ ಗ್ಯಾಂಗ್​ನ(Actor Darshan Arrested ) ಕೈಗೆ ಸಿಕ್ಕಿ ಅಮಾನುಷವಾಗಿ ಕೊಲೆಯಾದ ಚಿತ್ರದುರ್ಗದ ರೇಣುಕಾ ಸ್ವಾಮಿಯ ಮರಣೋತ್ತರ ಪರೀಕ್ಷೆಯ ವರದಿ ಪ್ರಕಟವಾಗಿದೆ. ವರದಿಯ ಪ್ರಕಾರ ಆರೋಪಿಗಳು ಅತ್ಯಂತ ಹೀನಾಯವಾಗಿ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ರೇಣುಕಾ ಸ್ವಾಮಿಯ ದೇಹದ ಸರ್ವ ಅಂಗಗಳ ಮೇಲೂ ಕೊಲೆಗಾರರ ಗ್ಯಾಂಗ್​ ಪ್ರಹಾರ ಮಾಡಿದೆ. ಕೈಗೆ ಸಿಕ್ಕಿದ್ದ ವಸ್ತುಗಳಿಂದೆಲ್ಲ ಹೊಡೆದು ಆಘಾತ ಮಾಡಿದ್ದಾರೆ. ರಕ್ತ ಹೆಪ್ಪುಗಟ್ಟಿಸಿ ಕೊಲೆ ಮಾಡಿದ್ದಾರೆ.

ಮರಣೋತ್ತರ ಪರೀಕ್ಷೆಯ ವರದಿಯ ಆಧಾರದ ಮೇಲೆ ಪೊಲೀಸರು ತನಿಖಾ ವರದಿ ರಚಿಸಲಿದ್ದಾರೆ. ಆರೋಪಿಗಳ ಬಾಯಿ ಬಿಡಿಸಲಿದ್ದಾರೆ. ಆರೋಪಿಗಳು ಪ್ರಕರಣದಿಂದ ತಪ್ಪಿಸಿಕೊಳ್ಳಲು ಹೇಳಬಹುದಾದ ಸುಳ್ಳುಗಳನ್ನು ಆ ಕ್ಷಣದಲ್ಲೇ ಭೇದಿಸಲಿದ್ದಾರೆ. ಸಾಂದರ್ಭಿಕ ಪ್ರಶ್ನೆಗಳನ್ನು ಹಾಕುವ ಮೂಲಕ ಆರೋಪಿಗಳಿಂದ ನೈಜ ಉತ್ತರವನ್ನು ಕಕ್ಕಿಸಲಿದ್ದಾರೆ. ಇವೆಲ್ಲವೂ ತನಿಖೆಯ ಪ್ರಗತಿಗೆ ನೆರವಾಗಲಿದೆ.

ರೇಣುಕಾಸ್ವಾಮಿ ದೇಹದ ಎಲ್ಲೆಲ್ಲಿ ಗಾಯವಾಗಿತ್ತು?

ಮರಣೋತ್ತರ ಪರಿಕ್ಷೆ ವರದಿಯ ಆಧಾರದಲ್ಲಿ ರೇಣುಕಾ ಸ್ವಾಮಿಯ ಮರ್ಮಾಂಗದ ಮೇಲೆ ಗಂಭೀರವಾಗಿ ಹಲ್ಲೆ ಮಾಡಿದ್ದಾರೆ. ಇದು ಮನುಷ್ಯನಿಗೆ ಅತೀವವಾದ ನೋವು ತರುವ ಆಘಾತವಾಗಿದೆ. ಕೊಲೆಗಾರರ ಹೊಡೆತಕ್ಕೆ ರೇಣುಕಾ ಅವರ ಮರ್ಮಾಂಗದಲ್ಲಿ ಆಂತರಿಕ ಹಾಗೂ ಬಾಹ್ಯ ರಕ್ತ ಸ್ರಾವ ಉಂಟಾಗಿದೆ.

ರೇಣುಕಾ ಅವರ ಹೊಟ್ಟೆ ಭಾಗದಲ್ಲೂ ರಕ್ತ ಸೋರಿಕೆಯಾಗಿದೆ. ಒಳ ಭಾಗದಲ್ಲೂ ರಕ್ತ ಹೆಪ್ಪುಗಟ್ಟಿದೆ. ಹೊರಗಿನಿಂದ ಅಪ್ಪಳಿಸಿರುವ ಬಾಹ್ಯ ವಸ್ತುಗಳಿಂದ ಈ ಗಾಯಗಳು ಉಂಟಾಗಿವೆ. ಅಂದರೆ ಮರದ ದೊಣ್ಣೆಗಳಿಂದ ಅವರ ಮುಖ, ಮೂತಿ ನೋಡದೆ ಹಲ್ಲೆ ಮಾಡಿರುವುದು ಖಾತರಿಯಾಗಿದೆ.

ರೇಣುಕಾ ಅವರ ತಲೆ ಭಾಗಕ್ಕೆ ಒಳಗಿನಿಂದ ಗಂಭೀರವಾಗಿ ಪೆಟ್ಟು ಬಿದ್ದಿದೆ. ತಲೆ ಭಾಗದಲ್ಲಿ ರಕ್ತ ಸೋರಿಕೆ ಆಗಿಲ್ಲ. ಆದರೆ, ಯಾವುದೋ ವಸ್ತುವಿನಿಂದ ಅಪ್ಪಳಿಸಿರುವ ಆಘಾತ ತಲೆಗೆ ಆಗಿದೆ.

ಇದನ್ನೂ ಓದಿ: Renuka Swamy Murder Case: ಚಿತ್ರದುರ್ಗದಲ್ಲಿ ಮೌನ ಪ್ರತಿಭಟನೆ; ದರ್ಶನ್‌ ಸೇರಿ ಇತರ ಆರೋಪಿಗಳಿಗೆ ಜೀವಾವಧಿ ಶಿಕ್ಷೆಗೆ ಆಗ್ರಹ

ಕೈ ಮತ್ತು ಕಾಲುಗಳು ಹಾಗೂ ಬೆನ್ನಿನಲ್ಲಿ ಸಿಕ್ಕಾಪಟ್ಟೆ ರಸ್ತ ಸ್ರಾವ ಉಂಟಾಗಿದೆ. ಪದೇ ಪದೇ ಆಗಿರುವ ಪ್ರಹಾರದಿಂದ ಚರ್ಮ ಕಿತ್ತು ಬಂದು ರಕ್ತ ಸ್ರಾವ ಉಂಟಾಗಿದೆ. ರೇಣುಕಾ ಅವರ ಸಾವಿನ ಆರ್ತನಾದವನ್ನೂ ಕೇಳದೆ ಆರೋಪಿಗಳು ಹಲ್ಲೆ ಮಾಡಿರುವುದು ಈ ವರದಿಯಿಂದ ಖಚಿತವಾಗಿದೆ. ಎದೆ ಭಾಗಕ್ಕೂ ಪೆಟ್ಟು ಬಿದ್ದಿದ್ದು ಹೃದಯ ಹಾಗೂ ಶ್ವಾಸಕೋಶಗಳಿರುವ ಪ್ರದೇಶಗಳು ಜರ್ಜರಿತಗೊಂಡಿದೆ.

ಹಲ್ಲೆಗೆ ಬಳಸಿರಬಹುದಾದ ವಸ್ತುಗಳು


ಮರದ ಪೀಸ್​ಗಳಿಂದಲೇ ಹಲ್ಲೆ ಮಾಡಿರುವುದು ಗಾಯದ ಆಳ ಮತ್ತು ತೀವ್ರತೆಯಿಂದ ಗೊತ್ತಾಗಿದೆ. ಚರ್ಮ ಸುಲಿದು ಹೋಗುವ ರೀತಿಯಲ್ಲಿ ಬಾರಿಸಿದ್ದನ್ನು ಗಮನಿಸಿದ್ದರೆ ಚರ್ಮದ ಬೆಲ್ಟ್ ಕೂಡ ಬಳಸಿರಬಹುದು. ಗಂಟೆಗಟ್ಟೆ ರೇಣುಕಾ ಸ್ವಾಮಿ ಮೇಲೆ ಹಲ್ಲೆ ನಡೆಸಲಾಗಿದ್ದು ಏಟಿನ ಆಘಾತಕ್ಕೆ ಅವರು ಮೂರ್ಛೆ ತಪ್ಪಿರಬಹುದು. ಅದೇ ರೀತಿ ಅವರ ತಲೆಯನ್ನು ಹಿಡಿದು ಯಾವುದೇ ಗಟ್ಟಿ ವಸ್ತುವಿಗೆ ಅಪ್ಪಳಿಸಿದ ಸೂಚನೆಯೂ ಇದೆ. ದೇಹದಲ್ಲಿ ಒಟ್ಟಾರೆಯಾಗಿ ಕೊಲೆಗಾರರ ಗ್ಯಾಂಗ್​ 15 ಕಡೆ ಗಾಯ ಮಾಡಿದೆ. ಶವವನ್ನು ಎಸೆದು ಹೋದ ಬಳಿಕ ಮುಖ ಹಾಗೂ ದವಡೆಯನ್ನು ನಾಯಿಗಳು ಕಿತ್ತು ಎಳೆದಿರುವುದು ಕೂಡ ಮರಣೋತ್ತರ ಪರೀಕ್ಷೆಯಲ್ಲಿ ಗೊತ್ತಾಗಿದೆ.

ಲಾರಿಗೆ ತಲೆ ಅಪ್ಪಳಿಸಿದ್ದನ್ನು ಒಪ್ಪಿಕೊಂಡ ಕೊಲೆಗಾರರು

ದರ್ಶನ್ ಗ್ಯಾಂಗ್​ನ (Actor Darshan) ಅಮಾನುಷ ಕೃತ್ಯಕ್ಕೆ ಬಲಿಯಾದ ರೇಣುಕಾ ಸ್ವಾಮಿ ಪ್ರಕರಣ ಥೇಟ್‌ ಸಿನಿಮಾ ಮಾದರಿಯಲ್ಲಿಯೇ ನಡೆದಿದೆ. ಪೊಲೀಸರ ಮುಂದೆ ಆರೋಪಿಗಳು ಕೊಲೆ ಮಾಡಿದ್ದು ಹೇಗೆ ಎಂಬುದನ್ನು ವಿವರಸಿದ್ದಾರೆ. ಪೊಲೀಸರು ಸತತ ಪ್ರಶ್ನೆಗಳು ಹಾಗೂ ಕೆಂಗಣ್ಣನ್ನು ಎದುರಿಸಲಾಗದ ಆರೋಪಿಗಳು ಕೊಲೆ ಮಾಡಿರುವ ಪ್ರತಿ ಕ್ಷಣವನ್ನೂ ವಿವರಿಸಿದ್ದಾರೆ.

ಪೊಲೀಸರ ಲಾಠಿ ಏಟು ರುಚಿ ತಿನ್ನುತ್ತಿದ್ದಂತೆ ಆರೋಪಿಗಳು ಹೇಳಿಕೆ ನೀಡಿದ್ದು ಹೀಗೆ. ʻʻಮೊದಲಿಗೆ ದರ್ಶನ್‌ ಅವರು ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿದ್ದಾರೆ. ದರ್ಶನ್‌ ಅವರು ರೇಣುಕಾ ಸ್ವಾಮಿಯನ್ನು ಜೋರಾಗಿ ತಳ್ಳಿದ್ದರು. ಇದರಿಂದಾಗಿ ಶೆಡ್‌ನಲ್ಲಿದ್ದ ಲಾರಿಗೆ ರೇಣುಕಾಸ್ವಾಮಿ ತಲೆ ತಾಗಿ ಆತ ಅಲ್ಲಿಯೇ ಪ್ರಜ್ಞೆ ತಪ್ಪಿ ಬಿದ್ದಿದ್ದ. ಆಗ ದರ್ಶನ್‌ ಹಾಗೂ ಪವಿತ್ರಾ ಇಬ್ಬರೂ ಅಲ್ಲಿದ್ದರು. ಆ ಬಳಿಕ ದರ್ಶನ್‌ ಮತ್ತು ಪವಿತ್ರಾ ಮನೆಗೆ ಹೋಗಿದ್ದರು. ನಾವು ಮತ್ತೆ ರೇಣುಕಾ ಸ್ವಾಮಿಗೆ ಹೊಡೆದೆವು. ರೇಣುಕಾ ಸ್ವಾಮಿ ಕಾಲು ಹಿಡಿದು ಕಾಂಪೌಂಡ್‌ಗೆ ಬಡಿದೆವು. ಆಗ ರೇಣುಕಾಸ್ವಾಮಿ ಸ್ಥಳದಲ್ಲೇ ಮೃತಪಟ್ಟರು. ತಕ್ಷಣ ನಮ್ಮ ದರ್ಶನ್‌ ಅವರಿಗೆ ಕರೆ ಮಾಡಿದೆವು. ಬಾಡಿನ ಏನಾದ್ರು ಮಾಡಿ ಮುಚ್ಚಾಕಿ ಅಂದರು. ಭಯದಲ್ಲಿ ಏನ್ಮಾಡಬೇಕು ಅಂತಾ ಗೊತ್ತಾಗದೆ ಮೋರಿಗೆ ಬಿಸಾಕಿ ಮನೆಗೆ ಹೋಗಿದ್ವಿʼʼಎಂದು ಹೇಳಿಕೆ ನೀಡಿದ್ದಾರೆ.

Continue Reading

ಕರ್ನಾಟಕ

Actor Darshan: ದರ್ಶನ್‌ ಹೀರೋ ಅಲ್ಲ ಖಳನಾಯಕ, ಆತನಿಗೆ ಶಿಕ್ಷೆ ಆಗಲೇಬೇಕು: ರೇಣುಕಾ ಸ್ವಾಮಿ ತಂದೆ ಕಿಡಿ

Actor Darshan: ದರ್ಶನ್ ಬರೀ ತೆರೆ ಮೇಲೆ ಮಾತ್ರ ಹೀರೋ ತರ ನಾಟಕವಾಡುತ್ತಾನೆ. ಅವನಿಗೆ ಮಾನವೀಯತೆ ಅನ್ನೋದೇ ಗೊತ್ತಿಲ್ಲ, ಮನಷ್ಯ ಅಲ್ಲ, ಆತ ಪಶು‌ ಎಂದು ರೇಣುಕಾ ಸ್ವಾಮಿ ತಂದೆ ಕಾಶಿನಾಥ ಶಿವನಗೌಡ ಆಕ್ರೋಶ ಹೊರಹಾಕಿದ್ದಾರೆ.

VISTARANEWS.COM


on

Actor Darshan
Koo

ಚಿತ್ರದುರ್ಗ: ನನ್ನ ಮಗ ಯಾವುದೇ ತಪ್ಪು ಮಾಡಿಲ್ಲ, ಅವನಿಗೆ ಇಂತಹ ಶಿಕ್ಷೆಯಾ? ಏನು ಮಾಡದ ತಪ್ಪಿಗೆ ನನ್ನ ಮಗ ಬಲಿ ಆದ. ಅವನ ಪಾಡಿಗೆ ಅವನು ಇದ್ದ, ಏನೂ ಮಾಡಿಲ್ಲ. ಯಾವುದೇ ಗಲಾಟೆ ಗೋಜಿಗೆ ಹೋಗಿರಲಿಲ್ಲ. ನಟ ದರ್ಶನ್‌ಗೆ ಶಿಕ್ಷೆ ಆಗಲೇಬೇಕು, ಅವನು ಹೀರೋ ಅಲ್ಲ ಖಳನಾಯಕ. ಬರೀ ತೆರೆ ಮೇಲೆ ಮಾತ್ರ ಹೀರೋ ತರ ನಾಟಕವಾಡುತ್ತಾನೆ. ಅವನಿಗೆ ಮಾನವೀಯತೆ ಅನ್ನೋದೇ ಗೊತ್ತಿಲ್ಲ, ಮನಷ್ಯ ಅಲ್ಲ, ಆತ ಪಶು ಎಂದು ರೇಣುಕಾ ಸ್ವಾಮಿ ತಂದೆ ಕಾಶಿನಾಥ ಶಿವನಗೌಡ ಕಿಡಿಕಾರಿದ್ದಾರೆ.

ನಗರದಲ್ಲಿ ವಿಸ್ತಾರ ನ್ಯೂಸ್‌ಗೆ ಪ್ರತಿಕ್ರಿಯಿಸಿರುವ ಅವರು, ಏನು ಮಾಡದ ತಪ್ಪಿಗೆ ನನ್ನ ಮಗ ಬಲಿಯಾಗಿದ್ದಾನೆ, ನಟ ದರ್ಶನ್‌ ಸೇರಿ ಇತರ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

ನನ್ನ ಮಗ ಹಾಗೂ ಪವಿತ್ರ ಗೌಡ ನಡುವೆ ಚಾಟಿಂಗ್ ನಡೆದಿತ್ತು

ನನ್ನ ಮಗ ಹಾಗೂ ಪವಿತ್ರಾ ಗೌಡ ನಡುವೆ ಚಾಟಿಂಗ್ ನಡೆಯುತ್ತಿತ್ತು ಎಂದು ಪೊಲೀಸರು ಹೇಳಿದ್ದಾರೆ. ನಿರಂತರ ಚಾಟಿಂಗ್ ಮಾಡುತ್ತಿದ್ದರು ಎಂದು ಮಾಹಿತಿ ಕೊಟ್ಟಿದ್ದಾರೆ ಎಂದು ರೇಣುಕಾ ಸ್ವಾಮಿ ತಾಯಿ ಹೇಳಿದ್ದಾರೆ. ಹಾಗಾದರೆ ಮೊದಲಿನಿಂದಲೂ ಪವಿತ್ರಾ ಹಾಗೂ ರೇಣುಕಾ ಮಧ್ಯೆ ಪರಿಚಯ ಇತ್ತೇ? ಕುಟುಂಬಕ್ಕೆ ಹೇಳದೆ ರೇಣುಕಾ ಸ್ವಾಮಿ ವಿಷಯ ಮುಚ್ಚಿಟ್ಟಿದ್ದರಾ? ಹಾಗಾದರೆ ಇಬ್ಬರ ಮಧ್ಯೆ ಏನು ಚಾಟಿಂಗ್‌ ನಡೆದಿತ್ತು ಎಂಬುವುದು ಕುತೂಹಲ ಮೂಡಿಸಿದ್ದು, ರೇಣುಕಾಸ್ವಾಮಿ ತಾಯಿ ಹೇಳಿಕೆ ಕೂಡ ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಇದನ್ನೂ ಓದಿ Renuka Swamy Murder Case: ಚಿತ್ರದುರ್ಗದಲ್ಲಿ ಮೌನ ಪ್ರತಿಭಟನೆ; ದರ್ಶನ್‌ ಸೇರಿ ಇತರ ಆರೋಪಿಗಳಿಗೆ ಜೀವಾವಧಿ ಶಿಕ್ಷೆಗೆ ಆಗ್ರಹ

ಲಾರಿಗೆ ತಲೆಯನ್ನು ಬಡಿದು ಸಿನಿಮಾ ಶೈಲಿಯಲ್ಲೇ ರೇಣುಕಾ ಸ್ವಾಮಿ ಕೊಲೆ ಮಾಡಿದ್ದ ದರ್ಶನ್ ಗ್ಯಾಂಗ್​!

ಬೆಂಗಳೂರು: ದರ್ಶನ್ ಗ್ಯಾಂಗ್​ನ (Actor Darshan) ಅಮಾನುಷ ಕೃತ್ಯಕ್ಕೆ ಬಲಿಯಾದ ರೇಣುಕಾ ಸ್ವಾಮಿ ಪ್ರಕರಣ ಥೇಟ್‌ ಸಿನಿಮಾ ಮಾದರಿಯಲ್ಲಿಯೇ ನಡೆದಿದೆ. ಪೊಲೀಸರ ಮುಂದೆ ಆರೋಪಿಗಳು ಕೊಲೆ ಮಾಡಿದ್ದು ಹೇಗೆ ಎಂಬುದನ್ನು ವಿವರಸಿದ್ದಾರೆ. ಪೊಲೀಸರು ಸತತ ಪ್ರಶ್ನೆಗಳು ಹಾಗೂ ಕೆಂಗಣ್ಣನ್ನು ಎದುರಿಸಲಾಗದ ಆರೋಪಿಗಳು ಕೊಲೆ ಮಾಡಿರುವ ಪ್ರತಿ ಕ್ಷಣವನ್ನೂ ವಿವರಿಸಿದ್ದಾರೆ.

ಪೊಲೀಸರ ಲಾಠಿ ಏಟು ರುಚಿ ತಿನ್ನುತ್ತಿದ್ದಂತೆ ಆರೋಪಿಗಳು ಹೇಳಿಕೆ ನೀಡಿದ್ದು ಹೀಗೆ. ʻʻಮೊದಲಿಗೆ ದರ್ಶನ್‌ ಅವರು ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿದ್ದಾರೆ. ದರ್ಶನ್‌ ಅವರು ರೇಣುಕಾ ಸ್ವಾಮಿಯನ್ನು ಜೋರಾಗಿ ತಳ್ಳಿದ್ದರು. ಇದರಿಂದಾಗಿ ಶೆಡ್‌ನಲ್ಲಿದ್ದ ಲಾರಿಗೆ ರೇಣುಕಾಸ್ವಾಮಿ ತಲೆ ತಾಗಿ ಆತ ಅಲ್ಲಿಯೇ ಪ್ರಜ್ಞೆ ತಪ್ಪಿ ಬಿದ್ದಿದ್ದ. ಆಗ ದರ್ಶನ್‌ ಹಾಗೂ ಪವಿತ್ರಾ ಇಬ್ಬರೂ ಅಲ್ಲಿದ್ದರು. ಆ ಬಳಿಕ ದರ್ಶನ್‌ ಮತ್ತು ಪವಿತ್ರಾ ಮನೆಗೆ ಹೋಗಿದ್ದರು. ನಾವು ಮತ್ತೆ ರೇಣುಕಾ ಸ್ವಾಮಿಗೆ ಹೊಡೆದೆವು. ರೇಣುಕಾ ಸ್ವಾಮಿ ಕಾಲು ಹಿಡಿದು ಕಾಂಪೌಂಡ್‌ಗೆ ಬಡಿದೆವು. ಆಗ ರೇಣುಕಾಸ್ವಾಮಿ ಸ್ಥಳದಲ್ಲೇ ಮೃತಪಟ್ಟರು. ತಕ್ಷಣ ನಮ್ಮ ದರ್ಶನ್‌ ಅವರಿಗೆ ಕರೆ ಮಾಡಿದೆವು. ಬಾಡಿನ ಏನಾದ್ರು ಮಾಡಿ ಮುಚ್ಚಾಕಿ ಅಂದರು. ಭಯದಲ್ಲಿ ಏನ್ಮಾಡಬೇಕು ಅಂತಾ ಗೊತ್ತಾಗದೆ ಮೋರಿಗೆ ಬಿಸಾಕಿ ಮನೆಗೆ ಹೋಗಿದ್ವಿʼʼಎಂದು ಹೇಳಿಕೆ ನೀಡಿದ್ದಾರೆ.

Continue Reading
Advertisement
Kiran Bedi announces her biopic by director Kushaal Chawla
ಬಾಲಿವುಡ್6 mins ago

Kiran Bedi: ಮಾಜಿ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಬಯೋಪಿಕ್ ಅನೌನ್ಸ್‌: ಕುಶಾಲ್ ಚಾವ್ಲಾ ಆ್ಯಕ್ಷನ್‌ ಕಟ್‌!

mayank agarwal
ಕ್ರೀಡೆ6 mins ago

Mayank Agarwal: ಕುಕ್ಕೆಯಲ್ಲಿ ಸರ್ಪಸಂಸ್ಕಾರ ಸೇವೆ ನೆರವೇರಿಸಿದ ಕ್ರಿಕೆಟಿಗ ಮಯಾಂಕ್‌ ಅಗರ್ವಾಲ್‌

Rahul Gandhi
ದೇಶ7 mins ago

Rahul Gandhi: ನನ್ನ ಮೇಲೆ ಮೋದಿಗಿರುವಷ್ಟು ದೇವರ ಕೃಪೆ ಇಲ್ಲ ಎಂದ ರಾಹುಲ್‌ ಗಾಂಧಿ; ಏಕಿಂಥ ಮಾತು?

Narendra Modi
ದೇಶ34 mins ago

Narendra Modi: ಜೂನ್‌ 21ರ ಯೋಗ ದಿನದಂದು ವಿಶೇಷ ಸ್ಥಳದಲ್ಲಿ ಮೋದಿ ಯೋಗ; ಯಾವುದದು?

Kuwait fire
ಪ್ರಮುಖ ಸುದ್ದಿ42 mins ago

Kuwait fire : ಕುವೈತ್ ನಲ್ಲಿ ಅಗ್ನಿ ಅವಘಡ: 5 ಭಾರತೀಯರು ಸೇರಿ 35 ಮಂದಿ ಸಾವು

IND vs USA
ಕ್ರಿಕೆಟ್43 mins ago

IND vs USA: ಇಂದಿನ ಪಂದ್ಯಕ್ಕೆ ಟೀಮ್​ ಇಂಡಿಯಾದಲ್ಲಿ 2 ಮಹತ್ವದ ಬದಲಾವಣೆ; ಯಾರಿಗೆ ಕೊಕ್​?

Kathua Terror Attack
ದೇಶ46 mins ago

Kathua Terror Attack: ಯೋಧನ ಹತ್ಯೆಗೆ ಪ್ರತಿಕಾರ; ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ

Teachers Recruitment
ಪ್ರಮುಖ ಸುದ್ದಿ49 mins ago

Teachers Recruitment: ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು, ಮುಖ್ಯ ಶಿಕ್ಷಕರ ನೇಮಕಾತಿ: ಕೌನ್ಸೆಲಿಂಗ್‌ಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

Dolly Dhananjay mana manakke Kotee Movie release
ಸ್ಯಾಂಡಲ್ ವುಡ್57 mins ago

Dolly Dhananjay: ಬಿಡುಗಡೆಗೂ ಮುನ್ನ ‘ಕೋಟಿ’ ಪೇಯ್ಡ್ ಪ್ರೀಮಿಯರ್ ಶೋ: ಜೂನ್‌ 14ಕ್ಕೆ ತೆರೆಗೆ!

AUS vs NAM
ಕ್ರೀಡೆ1 hour ago

AUS vs NAM: 17 ವರ್ಷಗಳ ಹಿಂದಿನ ಅನಗತ್ಯ ಟಿ20 ದಾಖಲೆ ಮುರಿದ ಗೆರ್ಹಾರ್ಡ್ ಎರಾಸ್ಮಸ್

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ23 hours ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ24 hours ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ1 day ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ1 day ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ1 day ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ5 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ5 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌