TB Jayachandra granddaughter writes letter to rahul gandhi regarding karnataka cabinet Karnataka Cabinet: ತಾತನನ್ನು ಮಿನಿಸ್ಟರ್‌ ಮಾಡಿ ಪ್ಲೀಸ್‌: ರಾಹುಲ್‌ ಗಾಂಧಿಗೆ ಪತ್ರ ಬರೆದ ಟಿ.ಬಿ. ಜಯಚಂದ್ರ ಮೊಮ್ಮಗಳು - Vistara News

ಕರ್ನಾಟಕ

Karnataka Cabinet: ತಾತನನ್ನು ಮಿನಿಸ್ಟರ್‌ ಮಾಡಿ ಪ್ಲೀಸ್‌: ರಾಹುಲ್‌ ಗಾಂಧಿಗೆ ಪತ್ರ ಬರೆದ ಟಿ.ಬಿ. ಜಯಚಂದ್ರ ಮೊಮ್ಮಗಳು

ತಮ್ಮ ತಾತ ಸಚಿವರಾಗದೇ ಇದ್ದದ್ದಕ್ಕೆ ಬೇಸರವಾಗಿದೆ. ನನ್ನ ತಾತ ಬಹಳ ಕರುಣಾಮಯಿ, ಸಾಮರ್ಥ್ಯ ಇರುವವರು ಹಾಗೂ ಪರಿಶ್ರಮಿಯಾಗಿದ್ದಾರೆ ಎಂದು ಆರ್ನ ತಿಳಿಸಿದ್ದಾಳೆ.

VISTARANEWS.COM


on

TB Jayachandra granddaughter with letter to rahul gandhi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದಲ್ಲಿ ಸಚಿವರಾಗುವಲ್ಲಿ ಹಿರಿಯ ಕಾಂಗ್ರೆಸಿಗ ಟಿ.ಬಿ. ಜಯಚಂದ್ರ ಸಫಲರಾಗಿಲ್ಲ. ತಮ್ಮನ್ನು ಆಯ್ಕೆ ಮಾಡದೇ ಇರುವ ಕುರಿತು ಮಾಧ್ಯಮಗಳ ಎದುರು ಅಸಮಾಧಾನ ಹೊರಹಾಕಿದ್ದಾರೆ. ಇದೀಗ ಜಯಚಂದ್ರ ಅವರ ಮೊಮ್ಮಗಳೂ ಬೇಸರಗೊಂಡಿದ್ದು, ಈ ಬಗ್ಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯವರಿಗೆ ಪತ್ರ ಬರೆದಿದ್ದಾಳೆ.

ಇಂಗ್ಲಿಷ್‌ನಲ್ಲಿ ಪತ್ರ ಬರೆದಿರುವ ಆರ್ನಾ ಸಂದೀಪ್‌, ಕೊನೆಯಲ್ಲಿ ಒಂದು ಸ್ಮೈಲಿಯನ್ನೂ ಅಂಟಿಸಿದ್ದಾಳೆ. Dear Rahu Gandhi, I Am TB Jayachandras Granddaughter. I Am sad that my grandfather did not become minister. I want him to become minister because he is kind, capable and hardworking. Please. ಎಂದು ಬರೆದಿದ್ದಾಳೆ.

TB Jayachandra granddaughter with letter to rahul gandhi
#image_title

ತಮ್ಮ ತಾತ ಸಚಿವರಾಗದೇ ಇದ್ದದ್ದಕ್ಕೆ ಬೇಸರವಾಗಿದೆ. ನನ್ನ ತಾತ ಬಹಳ ಕರುಣಾಮಯಿ, ಸಾಮರ್ಥ್ಯ ಇರುವವರು ಹಾಗೂ ಪರಿಶ್ರಮಿಯಾಗಿದ್ದಾರೆ, ಅವರು ಸಚಿವರಾಗಬೇಕೆಂದು ನಾನು ಬಯಸುತ್ತೇನೆ. ದಯಮಾಡಿ ಎಂದು ಪತ್ರದಲ್ಲಿ ತಿಳಿಸಿ ಕೊನೆಯಲ್ಲಿ ಒಂದು ಸ್ಮೈಲಿಯನ್ನೂ ಹಾಕಿದ್ದಾಳೆ. ಸ್ವಯಂಸ್ಫೂರ್ತಿಯಿಂದ ಮೊಮ್ಮಗಳು ಪತ್ರ ಬರೆದಿರುವುದನ್ನು ಕಂಡು ಜಯಚಂದ್ರ ಅಚ್ಚರಿಪಟ್ಟರು.

ಇದನ್ನೂ ಓದಿ: ‌Electricity Bill: ಇವತ್ತಿಂದ ಕರೆಂಟ್‌ ಬಿಲ್‌ ಕಟ್ಟಂಗಿಲ್ಲ; ಇದು ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ ಆರ್ಡರ್!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ವರ್ಷಾಘಾತಕ್ಕೆ ಉತ್ತರ ಕರ್ನಾಟಕ ಸುಸ್ತು; ರಾತ್ರಿಯೆಲ್ಲ ಗಾಳಿ ಸಹಿತ ಮಳೆಯಾರ್ಭಟ

Rain News : ಹಲವೆಡೆ ಸುರಿಯುತ್ತಿರುವ ಬಿರುಗಾಳಿ ಮಳೆಯು ನಾನಾ ಅನಾಹುತಗಳನ್ನು ಸೃಷ್ಟಿ ಮಾಡಿದೆ. ಗಾಳಿ ಮಳೆಗೆ ಮನೆಯ ಚಾವಣಿ ಹಾರಿ ಹೋಗಿದೆ. ಮತ್ತೊಂದು ಕಡೆಗೆ ಸಿಡಿಲಿಗೆ ಜಾನುವಾರು ಹಾಗೂ ತೆಂಗಿನ ಮರ ಸುಟ್ಟು ಕರಕಲಾಗಿದೆ. ಮುಂದಿನ 3 ಗಂಟೆಯಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಬೇಸಿಗೆ ಮಳೆ (Rain News) ಅಬ್ಬರ ಜೋರಾಗಿದೆ. ಬೆಂಗಳೂರು ಗ್ರಾಮಾಂತರದ ದೊಡ್ಡಬಳ್ಳಾಪುರ ಹಾಗೂ ಯಲಹಂಕದಲ್ಲಿ ವರ್ಷದ ಮೊದಲ ಮಳೆಯಾಗಿದೆ. ಕಾದ ಕೆಂಡದಂತಾಗಿದ್ದ ಧರೆಗೆ ಶುಕ್ರವಾರ ಮಧ್ಯಾಹ್ನ ಕೆಲಕಾಲ ಸುರಿದ ಮಳೆಯು ಜನರಲ್ಲಿ ಸಂತಸ (Karnataka weather Forecast) ಮೂಡಿಸಿತ್ತು.

ಶುಕ್ರವಾರ ಸಂಜೆ ನಂತರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಕಲಬುರಗಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಮೇಲ್ಮೈ ಗಾಳಿಯೊಂದಿಗೆ ಲಘು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ಬಳ್ಳಾರಿ, ಬೀದರ್‌, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗದ ಒಂದೆರಡು ಕಡೆಗಳಲ್ಲಿ ಗಾಳಿ ಸಹಿತ ಮಳೆಯಾಗಿದೆ.

ಇನ್ನೂ ತುಮಕೂರಿನ ಕುಣಿಗಲ್ ತಾಲೂಕು ಡಿ.ಹೊಸಹಳ್ಳಿ, ರಾಜೇಂದ್ರಪುರ ಭಾಗದಲ್ಲಿ ಗಾಳಿ- ಮಳೆಯ ಅಬ್ಬರಕ್ಕೆ ಮನೆಯ ಮೇಲ್ಛಾವಣಿಗಳು ಹಾರಿಹೋಗಿದ್ದವು. ಜತೆಗೆ ಮರಗಳೆಲ್ಲವೂ ಧರೆಗುರುಳಿದ್ದವು. ಕುಣಿಗಲ್ ತಾಲೂಕಿನ ಹಲವೆಡೆ ನಿನ್ನೆ ತುಂತುರು ಮಳೆಯೊಂದಿಗೆ ಬಿರುಗಾಳಿ ಬೀಸಿದೆ. ಬಿರುಗಾಳಿಯ ರಭಸಕ್ಕೆ 30ಕ್ಕೂ ಹೆಚ್ಚು ಮರಗಳು ನೆಲಸಮವಾಗಿತ್ತು. ಡಿ.ಹೊಸಹಳ್ಳಿಯಲ್ಲಿ ಶಾಲಾ ಕಟ್ಟಡದ ಮೇಲೆ ಬೃಹತ್ ಗಾತ್ರದ ಮರವೊಂದು ಬಿದ್ದಿತ್ತು. ಇನ್ನು ರಾಜೇಂದ್ರಪುರ ಗ್ರಾಮದಲ್ಲಿ ಕಲ್ಲೂರಯ್ಯ, ಬರಿಯಯ್ಯ, ಚಿಕ್ಕಕೂರಲಯ್ಯ ಎಂಬುವವರ ಮನೆಗಳ ಮೇಲ್ಛಾವಣಿಯೇ ಹಾರಿಹೋಗಿತ್ತು. ಸ್ಥಳಕ್ಕೆ ಕುಣಿಗಲ್ ಶಾಸಕ ಡಾ.ರಂಗನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ: Fraud Case : ಉದ್ಯಮಿಗೆ ಚಮತ್ಕಾರಿ ಚೆಂಬು ಕೊಟ್ಟವರು ಅರೆಸ್ಟ್‌; 22 ಬ್ಯಾಂಕ್‌ಗಳಿಗೆ ಟೋಪಿ ಹಾಕಿದ ಫ್ಯಾಮಿಲಿ ಲಾಕ್‌

ಸಿಡಿಲು ಬಿಡಿದು ಹೊತ್ತಿ ಉರಿದ ತೆಂಗಿನ ಮರ

ಚಿಕ್ಕಮಗಳೂರಿನ ಬಾಳೆಹೊನ್ನುರು-ಕೊಪ್ಪ ರಸ್ತೆಯಲ್ಲಿ ಮಧ್ಯರಾತ್ರಿ ಸಿಡಿಲು ಬಡಿದು ತೆಂಗಿನ ಮರವೊಂದು ಹೊತ್ತಿ ಉರಿದಿತ್ತು. ಕೊಪ್ಪ ರಸ್ತೆಯ ಇಸಾಕ್ ಎಂಬುವರ ಮನೆಯ ತೆಂಗಿನ ಮರ ಹೊತ್ತಿ ಉರಿದಿತ್ತು. ಸಿಡಿಲು ಬಡಿದು ಸಂಪೂರ್ಣ ಸುಟ್ಟುಹೋಗಿತ್ತು. ಕಳೆದ ರಾತ್ರಿ ಬಾಳೆಹೊನ್ನೂರು ಸುತ್ತಮುತ್ತ ಗಾಳಿ-ಮಳೆ ಸುರಿದಿತ್ತು.

karnataka weather Forecast

ಸಿಡಿಲಿಗೆ ಮುರಿದು ಬಿದ್ದ ದೇವಾಲಯದ ಗರುಡುಗಂಬ

ಸಿಡಿಲು ಬಡಿದು ದೇವಾಲಯದ ಗರುಡುಗಂಬ ಮುರಿದು ಬಿದ್ದಿತ್ತು. ವಿಜಯನಗರ ಜಿಲ್ಲೆಯ ಹಡಗಲಿ ತಾಲೂಕಿನ ಹಗರನೂರಿನಲ್ಲಿ ಘಟನೆ ನಡೆದಿತ್ತು. ನಿನ್ನೆ ತಡರಾತ್ರಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗಿತ್ತು. ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಸೇರಿದ ಗರಡುಗಂಬಕ್ಕೆ ಸಿಡಿಲು ಬಡಿದ ಪರಿಣಾಮ ಮುರಿದು ಬಿದ್ದಿತ್ತು. ಅಲ್ಲದೆ ಹಿರೇಹಡಗಲಿಯಲ್ಲಿ ರೈತ ಬಂದ್ರಕಳ್ಳಿ ಲಂಕೆಪ್ಪ ಎಂಬವರ ಹಸುವು ಸಿಡಿಲಿಗೆ ಬಲಿಯಾಗಿತ್ತು. ಹಿರೇಕೊಳಚಿ, ಚಿಕ್ಕಕೊಳಚಿ, ನಾಗತಿಬಸಾಪುರ ಹಿರೇಹಡಗಲಿ ಸೇರಿ ಹತ್ತಾರು ಗ್ರಾಮಗಳಲ್ಲಿ ಮಳೆಯಾಗಿದೆ. ಹಗರನೂರು ಗ್ರಾಮದ ರಸ್ತೆ ಮೇಲೆ ಮರಗಳು ಬಿದ್ದು ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ವಾಸದ ಮನೆ, ದನದ ಕೊಟ್ಟಿಗೆ ಮೇಲೆ ಹಾಕಲಾಗಿದ್ದ ತಗಡುಗಳು ಬಿರುಗಾಳಿಗೆ ಹಾರಿಹೋಗಿದ್ದವು.

ಉತ್ತರ ಕರ್ನಾಟಕದಲ್ಲಿ ಮಳೆ ಅಬ್ಬರ

ಗುರುವಾರದಂದು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಕರಾವಳಿ, ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಅಥಣಿ ಹಾಗೂ ನಿಪ್ಪಾಣಿಯಲ್ಲಿ ತಲಾ 6 ಸೆಂ.ಮೀ ಮಳೆಯಾಗಿದೆ. ಮಹಾಲಿಂಗಪುರ 4, ಹೊನ್ನಾವರ, ಲೋಕಾಪುರ, ಗದಗ, ಚಿಕ್ಕೋಡಿ, ಸೇಡಬಾಳ, ಟಿಕ್ಕೋಟ, ಹುಂಚದಕಟ್ಟೆ, ಬೇಲೂರು, ತ್ಯಾಗರ್ತಿಯಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ.

ಮುಂಡಗೋಡು, ಹಾವೇರಿ, ಹಾವೇರಿ ಎಪಿಎಂಸಿ , ರಬಕವಿ , ಕುಂದಗೋಳ , ಸಂಕೇಶ್ವರ, ಕಲಘಟಗಿ , ಯಡವಾಡ, ಪೊನ್ನಂಪೇಟೆ, ಕೊಡಗು, ಹರಪನಹಳ್ಳಿಯಲ್ಲಿ ತಲಾ 2 ಸೆಂ.ಮೀ ಹಾಗೂ ಹಳಿಯಾಳ, ಸಿದ್ದಾಪುರ, ಗೋಕಾಕ್‌ , ರಾಣೆಬೆನ್ನೂರು, ಧಾರವಾಡ, ಮಂಡ್ಯದಲ್ಲಿ 1 ಸೆಂ.ಮೀ ಮಳೆಯಾಗಿದೆ. ರಾಜ್ಯದಲ್ಲಿ ಗರಿಷ್ಠ ಉಷ್ಣಾಂಶ 41.4 ಡಿ.ಸೆ ಕಲಬುರಗಿ ಮತ್ತು ರಾಯಚೂರಿನಲ್ಲಿ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Road Accident: ಮುದ್ಗಲ್‌ ಬಳಿ ಬೈಕ್‌ – ಬುಲೇರೋ ನಡುವೆ ಅಪಘಾತ; ಸ್ಥಳದಲ್ಲೇ ಇಬ್ಬರು ಸಾವು

Road Accident: ತಾವರಗೇರಾದಿಂದ ಮಲ್ಲಾಪೂರಿನತ್ತ ಬೈಕ್‌ನತ್ತ ವಾಪಾಸಾಗುವಾಗ ಇನ್ನೊಂದು ಕಡೆಯಿಂದ ಬರುತ್ತಿದ್ದ ಬುಲೇರೋ ವಾಹನ ಡಿಕ್ಕಿಯಾಗಿದೆ. ಈ ವೇಳೆ ಶಿವಬಸವ ಹಾಗೂ ಹೊನ್ನಮ್ಮ ಕೆಳಗೆ ಬಿದ್ದಿದ್ದಾರೆ. ಶಿವಬಸವ ಅವರ ತಲೆ ಮೇಲೆಯೇ ವಾಹನ ಹರಿದಿದ್ದರಿಂದ ಅವರ ತಲೆ ಛಿದ್ರವಾಗಿದೆ. ಇನ್ನು ಹೊನ್ನಮ್ಮ ಸಹ ಗಂಭೀರವಾಗಿ ಗಾಯಗೊಂಡಿದ್ದರಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

VISTARANEWS.COM


on

Road accident between bike and Bolero near Mudgal Two dead
Koo

ರಾಯಚೂರು: ಮುದ್ಗಲ್‌ ಪಟ್ಟಣದ ಹೊರವಲಯದಲ್ಲಿ ದ್ವಿಚಕ್ರ ವಾಹನ ಹಾಗೂ ಬುಲೇರೋ ವಾಹನದ ನಡುವೆ ಮುಖಾಮುಖಿ ಡಿಕ್ಕಿ (Road Accident) ಸಂಭವಿಸಿದ್ದು, ಬೈಕ್‌ ಸವಾರರಿಬ್ಬರೂ ಸ್ಥಳದಲ್ಲಿಯೇ ದುರ್ಮರಣ ಹೊಂದಿದ್ದಾರೆ.

ಶಿವಬಸವ (37) ಹೊನ್ನಮ್ಮ ( 33) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಇವರು ಲಿಂಗಸುಗೂರು ತಾಲೂಕಿನ ಹತ್ತಿಚಿನ್ನದಗಣಿ ಸಮೀಪದ ಮಲ್ಲಾಪೂರು ಗ್ರಾಮದವರಾಗಿದ್ದಾರೆ. ತಾವರಗೇರಾದಲ್ಲಿ ಮದುವೆಗೆಂದು ಹೋದವರು ಅಲ್ಲಿಂದ ವಾಪಸ್‌ ಬರುತ್ತಿದ್ದರು. ಆ ವೇಳೆ ಅಪಘಾತ ಸಂಭವಿಸಿದೆ.

ತಾವರಗೇರಾದಿಂದ ಮಲ್ಲಾಪೂರಿನತ್ತ ಬೈಕ್‌ನತ್ತ ವಾಪಾಸಾಗುವಾಗ ಇನ್ನೊಂದು ಕಡೆಯಿಂದ ಬರುತ್ತಿದ್ದ ಬುಲೇರೋ ವಾಹನ ಡಿಕ್ಕಿಯಾಗಿದೆ. ಈ ವೇಳೆ ಶಿವಬಸವ ಹಾಗೂ ಹೊನ್ನಮ್ಮ ಕೆಳಗೆ ಬಿದ್ದಿದ್ದಾರೆ. ಶಿವಬಸವ ಅವರ ತಲೆ ಮೇಲೆಯೇ ವಾಹನ ಹರಿದಿದ್ದರಿಂದ ಅವರ ತಲೆ ಛಿದ್ರವಾಗಿದೆ. ಇನ್ನು ಹೊನ್ನಮ್ಮ ಸಹ ಗಂಭೀರವಾಗಿ ಗಾಯಗೊಂಡಿದ್ದರಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಮುದಗಲ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುದ್ಗಲ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

ಉದ್ಯಮಿಗೆ ಚಮತ್ಕಾರಿ ಚೆಂಬು ಕೊಟ್ಟವರು ಅರೆಸ್ಟ್‌; 22 ಬ್ಯಾಂಕ್‌ಗಳಿಗೆ ಟೋಪಿ ಹಾಕಿದ ಫ್ಯಾಮಿಲಿ ಲಾಕ್‌

ಬೆಂಗಳೂರು: ಆ ನಯವಂಚಕರು ದೊಡ್ಡ ದೊಡ್ಡ ಉದ್ಯಮಿಗಳನ್ನೇ (Fraud Case) ಟಾರ್ಗೆಟ್‌ ಮಾಡುತ್ತಿದ್ದರು. ಅದರಲ್ಲೂ ದೇವರು, ಆಧ್ಯಾತ್ಮದ ನಂಬಿಕೆ ಇತ್ತು ಅಂದರೆ ಮುಗಿತು ವಂಚನೆಯ ಬಲೆಗೆ ಬೀಳಿಸಿಕೊಳ್ಳುತ್ತಿದ್ದರು. ಚಮತ್ಕಾರಿ ಪಾತ್ರೆ ಎಂದು ನಂಬಿಸಿ ಉದ್ಯಮಿಯೊಬ್ಬರನ್ನು ವಂಚಿಸಲು ಮುಂದಾಗಿದ್ದ ಗ್ಯಾಂಗ್ ಜಯನಗರ ಪೊಲೀಸರ ಅತಿಥಿಗಳಾಗಿದ್ದಾರೆ.

ಅದೃಷ್ಟದ ಚೆಂಬಿನ ಹಿಂದೆ ಬಿದ್ದ ಉದ್ಯಮಿಯೊಬ್ಬ ಲಕ್ಷ ಲಕ್ಷ ಕಳೆದುಕೊಂಡಿದ್ದ. ಆದರೆ ಪೊಲೀಸರ ಕ್ಷಿಪ್ರ ಕಾರ್ಯಾಚರಣೆಯಿಂದ ಕಳೆದುಕೊಂಡ ಹಣ ವಾಪಸ್‌ ಸಿಕ್ಕಿದ್ದು, ಅಂತರರಾಜ್ಯ ವಂಚಕ ಶಿವಶಂಕರ್, ಅಬ್ದುಲ್ ಸುಕ್ಕುರ್ ಹಾಗೂ ಸನ್ನಿ ಗಿಲ್ ಎಂಬುವವರು ಸಿಕ್ಕಿಬಿದ್ದಿದ್ದಾರೆ.

ಈ ಮೂವರು ತಮ್ಮ ಬಳಿ ಅದೃಷ್ಟ ಖುಲಾಯಿಸುವ ಚಮತ್ಕಾರಿ ಪಾತ್ರೆ ಇದೆ. ಅದನ್ನೂ ಮನೆಯಲ್ಲಿ ಇಟ್ಟರೆ ನಿಮ್ಮ ಅದೃಷ್ಟವೇ ಬದಲಾಗುತ್ತದೆ. ಇದಕ್ಕೆ ವಿದೇಶಿ ಮಾರ್ಕೆಟ್‌ನಲ್ಲಿ ಕೋಟಿ ಕೋಟಿ ಬೆಲೆ ಇದೆ ಎಂದು ಬಣ್ಣ ಬಣ್ಣದ ಮಾತುಗಳನ್ನು ಹೇಳಿ ನಂಬಿಸುತ್ತಿದ್ದರು. ಅದೇ ರೀತಿ ಬೆಂಗಳೂರಿನ ಉದ್ಯಮಿಯೊಬ್ಬರನ್ನು ಟಾರ್ಗೆಟ್ ಮಾಡಿ, ಒಂದೂವರೆ ಕೋಟಿ ಕೊಟ್ಟರೆ ಈ ಅದೃಷ್ಟದ ಪಾತ್ರೆ ಕೊಡುವುದಾಗಿ ನಂಬಿಸಿದ್ದಾರೆ. ಕೊನೆಗೆ 70 ಲಕ್ಷ ರೂಪಾಯಿಗೆ ಡೀಲ್ ಮುಗಿಸಿದ್ದರು.

Fraud Case in bengaluru

ವಿಡಿಯೊದಲ್ಲಿ ತೋರಿಸಿದ್ದ ಅದೃಷ್ಟ ಚೆಂಬನ್ನು ಕೊಡುತ್ತೇವೆ ದುಡ್ಡು ರೆಡಿ ಮಾಡಿಕೊಳ್ಳಿ ಎಂದಿದ್ದರು. ತಾಮ್ರದ ಪಾತ್ರೆ ತೆಗೆದುಕೊಂಡು ಯಡಿಯೂರು ಕೆರೆ ಬಳಿ ಬಂದು ಹಣ ತೆಗೆದುಕೊಳ್ಳಲು ವ್ಯವಹಾರ ನಡೆಸಿದ್ದರು. ಈ ಬಗ್ಗೆ ಮಾಹಿತಿ ತಿಳಿದ ಜಯನಗರ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಆರೋಪಿಗಳನ್ನು ವಶಕ್ಕೆ ಪಡೆದಿದ್ದರು. ಉದ್ಯಮಿಗೆ ವಂಚಿಸಿ ಪಡೆದಿದ್ದ 70 ಲಕ್ಷ ರೂ. ಹಣವನ್ನು ಸೀಜ್ ಮಾಡಿದ್ದಾರೆ. ಸದ್ಯ ಆರೋಪಿಗಳನ್ನು ವಿಚಾರಣೆಗೊಳಪಡಿಸಿದಾಗ ಬೆಂಗಳೂರಿನಲ್ಲಿರುವ ಸುಮಾರು 20 ಉದ್ಯಮಿಗಳನ್ನು ಟಾರ್ಗೆಟ್ ಮಾಡಿಕೊಂಡು ವಂಚಿಸುವುದಕ್ಕೆ ಪ್ಲಾನ್ ಮಾಡಿದ್ದರು ಎನ್ನಲಾಗಿದೆ. ಆದರೆ ಅದಕ್ಕೂ ಮೊದಲೇ ಪೊಲೀಸರ ಬಲೆಗೆ ಸಿಕ್ಕಿ ಬಿದ್ದಿದ್ದಾರೆ.

ಇದನ್ನೂ ಓದಿ: Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

ನಕಲಿ ದಾಖಲೆ ಕೊಟ್ಟು 22 ಬ್ಯಾಂಕ್‌ಗಳಿಗೆ ವಂಚನೆ

ನಕಲಿ ದಾಖಲೆ ಸೃಷ್ಟಿಸಿ ಸಾಲ ಪಡೆದು ಬ್ಯಾಂಕ್‌ಗಳಿಗೆ ವಂಚಿಸಿದ್ದ ಖತರ್ನಾಕ್‌ ಫ್ಯಾಮಿಲಿಯ ಬಂಧನವಾಗಿದೆ. ಒಂದೇ ಕುಟುಂಬದ ಐವರು ಆರೋಪಿಗಳು ‌ಸೇರಿ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಸುಮಾರು 22 ಬ್ಯಾಂಕ್‌ಗಳಿಗೆ ವಂಚಿಸಿ, ಬರೋಬ್ಬರಿ 10 ಕೋಟಿ ರೂ. ಸಾಲ ಪಡೆದಿದ್ದರು.

Fraud Case in Bengaluru

ನಾಗೇಶ್‌, ಸತೀಶ್‌, ವೇದ, ಶೋಭಾ, ಸುಮ, ಶೇಷಗಿರಿ ಬಂಧಿತ ಆರೋಪಿಗಳಾಗಿದ್ದಾರೆ. ಒಂದೇ ಸ್ವತ್ತಿಗೆ ಸಂಬಂಧಿಸಿದಂತೆ ನಕಲಿ ದಾಖಲೆ ಸೃಷ್ಟಿಸಿ ಸಾಲ ಪಡೆಯುತ್ತಿದ್ದರು. ನಕಲಿ ದಾಖಲೆಗಳನ್ನು ಡೀಡ್ ಮಾಡಿಸಿ, ಸಬ್ ರಿಜಿಸ್ಟರ್ ಕಚೇರಿಯಲ್ಲಿ ನೊಂದಣಿ ಮಾಡಿಸುತ್ತಿದ್ದರು. ಬಳಿಕ ರಾಷ್ಟ್ರೀಕೃತ ಬ್ಯಾಂಕ್, ಸಹಕಾರಿ ಬ್ಯಾಂಕ್‌ಗಳಲ್ಲಿ ಕಂತು ಸಾಲ ಹಾಗೂ ಯಂತ್ರೋಪಕರಣ ಸಾಲ ಪಡೆಯುತ್ತಿದ್ದರು. ಹೀಗೆ ಒಟ್ಟು 22 ಬ್ಯಾಂಕ್‌ಗಳಲ್ಲಿ ಹತ್ತು ಕೋಟಿ ರೂ.ಗೂ ಅಧಿಕ ಸಾಲ‌ ಪಡೆದು ವಂಚನೆ ಮಾಡಿದ್ದಾರೆ. ಸದ್ಯ ಪತಿ, ಪತ್ನಿ ಹಾಗೂ ಈಕೆ ಸೋದರಿ, ಭಾವ ಹಾಗೂ ಅವರ ಸ್ನೇಹಿತೆ ಬಂಧಿತರಾಗಿದ್ದಾರೆ. ಬಂಧಿತ ಆರೋಪಿಗಳನ್ನು ಹತ್ತು ದಿನ ಕಸ್ಟಡಿಗೆ ಪಡೆದು ಜಯನಗರ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Continue Reading

ಶಿವಮೊಗ್ಗ

Book Release: ರಾಮನೇನು ದೇವನೇ? ಪುಸ್ತಕ ಲೋಕಾರ್ಪಣೆ ಮಾಡಿದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ

Book Release: ಶಿವಮೊಗ್ಗ ಜಿಲ್ಲೆಯ ಹೊಸನಗರ ಶ್ರೀರಾಮಚಂದ್ರಾಪುರ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೇಖಕ ಡಾ. ಕೆ. ಎಸ್. ಕಣ್ಣನ್ ಅವರ ʼರಾಮನೇನು ದೇವನೇ?ʼ ಪುಸ್ತಕವನ್ನು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳು ಲೋಕಾರ್ಪಣೆಗೊಳಿಸಿದರು.

VISTARANEWS.COM


on

Koo

ಶಿವಮೊಗ್ಗ: ಶ್ರೀ ಭಾರತೀ ಪ್ರಕಾಶನ ಪ್ರಕಟಿಸಿರುವ, ಲೇಖಕ ಡಾ. ಕೆ. ಎಸ್. ಕಣ್ಣನ್ ಅವರ ʼರಾಮನೇನು ದೇವನೇ?ʼ ಪುಸ್ತಕವನ್ನು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳು ಹೊಸನಗರ ಶ್ರೀರಾಮಚಂದ್ರಾಪುರ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಕಾರ್ಪಣೆಗೊಳಿಸಿದರು. ಈ ವೇಳೆ ಪುಸ್ತಕದ (Book Release) ಲೇಖಕರಾದ ಡಾ. ಕೆ. ಎಸ್. ಕಣ್ಣನ್, ಶ್ರೀ ಭಾರತೀ ಪ್ರಕಾಶನದ ಕವಿತಾ ಜೋಯ್ಸ್, ನಾಗೇಂದ್ರ ಕೊಪ್ಪಲು ಉಪಸ್ಥಿತರಿದ್ದರು.

ಆದಿಕಾವ್ಯವೆಂದೇ ಪ್ರಸಿದ್ಧವಾದ ಕಾವ್ಯ ವಾಲ್ಮೀಕಿ ರಾಮಾಯಣ. ಅದು ಚಿತ್ರಿಸುವುದು ರಾಮನ ಕಥೆಯನ್ನು, ಅರ್ಥಾತ್ ರಾಮನು ನಡೆದ ಹಾದಿಯನ್ನು. ರಾಮನು ಎಲ್ಲಿಂದ ಎಲ್ಲಿಗೆ ನಡೆದದ್ದು? ಅಯೋಧ್ಯೆಯಿಂದ ಹೊರಟು ಕೊನೆಗೆ ಅಯೋಧ್ಯೆಗೇ ಬಂದು ಸೇರಿದನಲ್ಲವೇ? ಅದುವೇ ರಾಮಾಯಣವಾಯಿತು. ಇನ್ನೂ ಮುಖ್ಯವಾದ ರಾಮಾಯನವೊಂದಿದೆ. ದಿವಿಯಿಂದ ಹೊರಟು ಭುವಿಯಲ್ಲಿ ಇದ್ದು ಮತ್ತೆ ದಿವಿಗೆ ಬಂದು ಸೇರಿದನಲ್ಲವೇ? ಅದುವೇ ನಿಜವಾದ ರಾಮಾಯಣ! ನಾವೂ ನಮ್ಮ ಮೂಲವನ್ನು ಸೇರಿಕೊಳ್ಳಲು ಹಿಡಿಯಬೇಕಾದ ಹಾದಿಯನ್ನು ಅರುಹುವ ಅಮರಕೃತಿ ʼರಾಮನೇನು ದೇವನೇ?ʼ ಪುಸ್ತಕವಾಗಿದೆ.

‘ರಾಮನೂ ನಮ್ಮ-ನಿಮ್ಮಂತೆ ಮನುಷ್ಯ, ನಮಗಿಂತ ಹೆಚ್ಚು ಸಾಧನೆ ಮಾಡಿ ಪುರುಷೋತ್ತಮನಾದವ’ ಎನ್ನುವ ವಾದವೊಂದು ಪ್ರಚಲಿತವಾಗಿದೆ. ಈ ವಾದ ಮಾಡುವವರು ‘ರಾಮಾಯಣದಲ್ಲಿ ವಾಲ್ಮೀಕಿಗಳು ರಾಮ ದೇವರು ಎಂದಿಲ್ಲ’ ಎಂದು ಹೇಳುತ್ತಾರೆ. ಆದರೆ ವಸ್ತುಸ್ಥಿತಿ ಹಾಗಿಲ್ಲ. ರಾಮಾಯಣ, ಹೆಜ್ಜೆ ಹೆಜ್ಜೆಗೆ ರಾಮನ ದಿವ್ಯತೆಯನ್ನು ಗುರುತಿಸುತ್ತದೆ. ಕೆಲವೊಮ್ಮೆ ಪ್ರತ್ಯಕ್ಷವಾಗಿ, ಇನ್ನು ಕೆಲವೊಮ್ಮೆ ಪರೋಕ್ಷವಾಗಿ ಅದು ಕಾಣಸಿಗುತ್ತದೆ. ಅದನ್ನು ಸಾಧಿಸುವ ಸತ್ಕಾರ್ಯವನ್ನು ಈ ಕೃತಿ ಮಾಡಿದೆ.

ರಾಮಾಯಣದ ಶ್ಲೋಕಗಳನ್ನು ಉಲ್ಲೇಖಿಸುತ್ತಾ, ಅದರ ಆಶಯವನ್ನು ವಿವರಿಸುತ್ತಾ, ತರ್ಕಬದ್ಧವಾಗಿ ಸಾಗುವ ಈ
ಕೃತಿ, ಶಾಸ್ತ್ರೀಯ ಕ್ರಮದ ನಿರೂಪಣೆಯಿಂದ ಗಮನ ಸೆಳೆಯುತ್ತದೆ. ಇಲ್ಲಿ ಕಲ್ಪನೆಯಿಲ್ಲ, ಮನಸ್ಸಿಗೆ ಅನ್ನಿಸಿದ್ದನ್ನೆಲ್ಲ ರಾಮಾಯಣದಲ್ಲಿದೆ ಎನ್ನುವ ಅಪಭ್ರಂಶವಿಲ್ಲ, ತನಗನ್ನಿಸಿದ್ದೇ ಸತ್ಯ ಎಂದುಕೊಳ್ಳುವ ಅಹಂಕಾರವೂ ಇಲ್ಲ. ಋಷಿಹೃದಯದ ಒಳಹೊಕ್ಕು, ಆ ಆರ್ಷತನವನ್ನು ಆಸ್ವಾದಿಸುತ್ತಾ, ಸತ್ಯವನ್ನು ಮಾತ್ರ ಹೇಳುತ್ತೇನೆ ಎನ್ನುವ ವಿನಯಪೂರ್ವಕವಾದ ದಿಟ್ಟತನ ಕೃತಿಯಲ್ಲಿದೆ.

ಇದನ್ನೂ ಓದಿ | Sunday Read: ಹೊಸ ಪುಸ್ತಕ: ರಾಮನೇನು ದೇವನೇ?

ಕನ್ನಡ, ಸಂಸ್ಕೃತ, ಇಂಗ್ಲಿಷ್ ಭಾಷೆಗಳಲ್ಲಿ 39ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿರುವ, ಮದ್ರಾಸು ಐಐಟಿಯಲ್ಲಿ ಪೀಠಪ್ರಾಧ್ಯಾಪಕರಾಗಿ ನಿವೃತ್ತರಾಗಿರುವ, ಬಹುಶ್ರುತ ವಿದ್ವಾಂಸರಾದ ಡಾ. ಕೆ. ಎಸ್. ಕಣ್ಣನ್ ಅವರು ರಚಿಸಿರುವ, ಶ್ರೀ ಭಾರತೀ ಪ್ರಕಾಶನ ಪ್ರಕಟಿಸಿರುವ ಈ ಪುಸ್ತಕದ ಪ್ರತಿಗಳಿಗಾಗಿ ಶ್ರೀಪುಸ್ತಕಮ್ (9591542454) ಸoಪರ್ಕಿಸಬಹುದಾಗಿದೆ.

“ಶ್ರೀರಾಮ, ಶ್ರೀಮನ್ನಾರಾಯಣನ ಅವತಾರ. ವಾಲ್ಮೀಕಿ ರಾಮಾಯಣ ಇದನ್ನು ಬಗೆಬಗೆಯಾಗಿ ತೋರಿಸಿಕೊಡುತ್ತದೆ. ವ್ಯಕ್ತವಾಗಿಯಲ್ಲದೇ ರಾಮಾಯಣದ ಅಂತಃಸೂತ್ರವೇ ಇದಾಗಿದೆ. ವೈಕುಂಠದಿಂದ ಆರಂಭವಾಗಿ ಮತ್ತೆ ವೈಕುಂಠವನ್ನು ಸೇರುವುದೇ ರಾಮನ ಅಯನ. ಈ ಅಯನ ಜೀವಿಗಳೆಲ್ಲರದ್ದೂ ಆಗಬೇಕೆನ್ನುವುದೇ ರಾಮಾಯಣದ ಸಂದೇಶ, ಶ್ರೀರಾಮನ ಅವತಾರವೂ, ಶ್ರೀಮದ್ರಾಮಾಯಣದ ಅವತಾರವೂ ಈ ಉದ್ದೇಶದ್ದೇ ಆಗಿದೆ. ಇದೀಗ ರಾಮನೇನು ದೇವನೇ? ಕೃತಿ ವಾಲ್ಮೀಕಿಗಳು ರಾಮಾಯಣದಲ್ಲಿ ಎಲ್ಲೆಲ್ಲಿ ಈ ಅಂಶವನ್ನು ಪ್ರಸ್ತುತಪಡಿಸಿದ್ದಾರೆ ಎನ್ನುವುದನ್ನು ಸಾಧಾರವಾಗಿ ನಿರೂಪಿಸಿದೆ.
| ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳು, ಶ್ರೀರಾಮಚಂದ್ರಾಪುರ ಮಠ

Continue Reading

ಬೆಂಗಳೂರು

Fraud Case : ಉದ್ಯಮಿಗೆ ಚಮತ್ಕಾರಿ ಚೆಂಬು ಕೊಟ್ಟವರು ಅರೆಸ್ಟ್‌; 22 ಬ್ಯಾಂಕ್‌ಗಳಿಗೆ ಟೋಪಿ ಹಾಕಿದ ಫ್ಯಾಮಿಲಿ ಲಾಕ್‌

Fraud Case : ಜಯನಗರ (Jayanagar Police) ಠಾಣೆಯಲ್ಲಿ ದಾಖಲಾಗಿದ್ದ ಪ್ರತ್ಯೇಕ ಎರಡು ವಂಚನೆ ಪ್ರಕರಣಗಳನ್ನು ಪೊಲೀಸರು ಭೇದಿಸಿದ್ದಾರೆ. ಚಮತ್ಕಾರಿ ಪಾತ್ರೆ ಎಂದು ಉದ್ಯಮಿಗೆ ಚೆಂಬು ಕೊಟ್ಟ ಗ್ಯಾಂಗ್‌ ಹಾಗೂ ನಕಲಿ ದಾಖಲೆ ಸೃಷ್ಟಿಸಿ 22 ಬ್ಯಾಂಕ್‌ಗಳಿಗೆ ವಂಚಿಸಿದ್ದ ಖತರ್ನಾಕ್‌ ಕುಟುಂಬವೊಂದು ಸೆರೆಯಾಗಿದೆ.

VISTARANEWS.COM


on

By

Fraud Case in Bengaluru
Koo

ಬೆಂಗಳೂರು: ಆ ನಯವಂಚಕರು ದೊಡ್ಡ ದೊಡ್ಡ ಉದ್ಯಮಿಗಳನ್ನೇ (Fraud Case) ಟಾರ್ಗೆಟ್‌ ಮಾಡುತ್ತಿದ್ದರು. ಅದರಲ್ಲೂ ದೇವರು, ಆಧ್ಯಾತ್ಮದ ನಂಬಿಕೆ ಇತ್ತು ಅಂದರೆ ಮುಗಿತು ವಂಚನೆಯ ಬಲೆಗೆ ಬೀಳಿಸಿಕೊಳ್ಳುತ್ತಿದ್ದರು. ಚಮತ್ಕಾರಿ ಪಾತ್ರೆ ಎಂದು ನಂಬಿಸಿ ಉದ್ಯಮಿಯೊಬ್ಬರನ್ನು ವಂಚಿಸಲು ಮುಂದಾಗಿದ್ದ ಗ್ಯಾಂಗ್ ಜಯನಗರ ಪೊಲೀಸರ ಅತಿಥಿಗಳಾಗಿದ್ದಾರೆ.

ಅದೃಷ್ಟದ ಚೆಂಬಿನ ಹಿಂದೆ ಬಿದ್ದ ಉದ್ಯಮಿಯೊಬ್ಬ ಲಕ್ಷ ಲಕ್ಷ ಕಳೆದುಕೊಂಡಿದ್ದ. ಆದರೆ ಪೊಲೀಸರ ಕ್ಷಿಪ್ರ ಕಾರ್ಯಾಚರಣೆಯಿಂದ ಕಳೆದುಕೊಂಡ ಹಣ ವಾಪಸ್‌ ಸಿಕ್ಕಿದ್ದು, ಅಂತರರಾಜ್ಯ ವಂಚಕ ಶಿವಶಂಕರ್, ಅಬ್ದುಲ್ ಸುಕ್ಕುರ್ ಹಾಗೂ ಸನ್ನಿ ಗಿಲ್ ಎಂಬುವವರು ಸಿಕ್ಕಿಬಿದ್ದಿದ್ದಾರೆ.

ಈ ಮೂವರು ತಮ್ಮ ಬಳಿ ಅದೃಷ್ಟ ಖುಲಾಯಿಸುವ ಚಮತ್ಕಾರಿ ಪಾತ್ರೆ ಇದೆ. ಅದನ್ನೂ ಮನೆಯಲ್ಲಿ ಇಟ್ಟರೆ ನಿಮ್ಮ ಅದೃಷ್ಟವೇ ಬದಲಾಗುತ್ತದೆ. ಇದಕ್ಕೆ ವಿದೇಶಿ ಮಾರ್ಕೆಟ್‌ನಲ್ಲಿ ಕೋಟಿ ಕೋಟಿ ಬೆಲೆ ಇದೆ ಎಂದು ಬಣ್ಣ ಬಣ್ಣದ ಮಾತುಗಳನ್ನು ಹೇಳಿ ನಂಬಿಸುತ್ತಿದ್ದರು. ಅದೇ ರೀತಿ ಬೆಂಗಳೂರಿನ ಉದ್ಯಮಿಯೊಬ್ಬರನ್ನು ಟಾರ್ಗೆಟ್ ಮಾಡಿ, ಒಂದೂವರೆ ಕೋಟಿ ಕೊಟ್ಟರೆ ಈ ಅದೃಷ್ಟದ ಪಾತ್ರೆ ಕೊಡುವುದಾಗಿ ನಂಬಿಸಿದ್ದಾರೆ. ಕೊನೆಗೆ 70 ಲಕ್ಷ ರೂಪಾಯಿಗೆ ಡೀಲ್ ಮುಗಿಸಿದ್ದರು.

Fraud Case in bengaluru

ವಿಡಿಯೊದಲ್ಲಿ ತೋರಿಸಿದ್ದ ಅದೃಷ್ಟ ಚೆಂಬನ್ನು ಕೊಡುತ್ತೇವೆ ದುಡ್ಡು ರೆಡಿ ಮಾಡಿಕೊಳ್ಳಿ ಎಂದಿದ್ದರು. ತಾಮ್ರದ ಪಾತ್ರೆ ತೆಗೆದುಕೊಂಡು ಯಡಿಯೂರು ಕೆರೆ ಬಳಿ ಬಂದು ಹಣ ತೆಗೆದುಕೊಳ್ಳಲು ವ್ಯವಹಾರ ನಡೆಸಿದ್ದರು. ಈ ಬಗ್ಗೆ ಮಾಹಿತಿ ತಿಳಿದ ಜಯನಗರ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಆರೋಪಿಗಳನ್ನು ವಶಕ್ಕೆ ಪಡೆದಿದ್ದರು. ಉದ್ಯಮಿಗೆ ವಂಚಿಸಿ ಪಡೆದಿದ್ದ 70 ಲಕ್ಷ ರೂ. ಹಣವನ್ನು ಸೀಜ್ ಮಾಡಿದ್ದಾರೆ. ಸದ್ಯ ಆರೋಪಿಗಳನ್ನು ವಿಚಾರಣೆಗೊಳಪಡಿಸಿದಾಗ ಬೆಂಗಳೂರಿನಲ್ಲಿರುವ ಸುಮಾರು 20 ಉದ್ಯಮಿಗಳನ್ನು ಟಾರ್ಗೆಟ್ ಮಾಡಿಕೊಂಡು ವಂಚಿಸುವುದಕ್ಕೆ ಪ್ಲಾನ್ ಮಾಡಿದ್ದರು ಎನ್ನಲಾಗಿದೆ. ಆದರೆ ಅದಕ್ಕೂ ಮೊದಲೇ ಪೊಲೀಸರ ಬಲೆಗೆ ಸಿಕ್ಕಿ ಬಿದ್ದಿದ್ದಾರೆ.

ಇದನ್ನೂ ಓದಿ: Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

ನಕಲಿ ದಾಖಲೆ ಕೊಟ್ಟು 22 ಬ್ಯಾಂಕ್‌ಗಳಿಗೆ ವಂಚನೆ

ನಕಲಿ ದಾಖಲೆ ಸೃಷ್ಟಿಸಿ ಸಾಲ ಪಡೆದು ಬ್ಯಾಂಕ್‌ಗಳಿಗೆ ವಂಚಿಸಿದ್ದ ಖತರ್ನಾಕ್‌ ಫ್ಯಾಮಿಲಿಯ ಬಂಧನವಾಗಿದೆ. ಒಂದೇ ಕುಟುಂಬದ ಐವರು ಆರೋಪಿಗಳು ‌ಸೇರಿ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಸುಮಾರು 22 ಬ್ಯಾಂಕ್‌ಗಳಿಗೆ ವಂಚಿಸಿ, ಬರೋಬ್ಬರಿ 10 ಕೋಟಿ ರೂ. ಸಾಲ ಪಡೆದಿದ್ದರು.

Fraud Case in Bengaluru

ನಾಗೇಶ್‌, ಸತೀಶ್‌, ವೇದ, ಶೋಭಾ, ಸುಮ, ಶೇಷಗಿರಿ ಬಂಧಿತ ಆರೋಪಿಗಳಾಗಿದ್ದಾರೆ. ಒಂದೇ ಸ್ವತ್ತಿಗೆ ಸಂಬಂಧಿಸಿದಂತೆ ನಕಲಿ ದಾಖಲೆ ಸೃಷ್ಟಿಸಿ ಸಾಲ ಪಡೆಯುತ್ತಿದ್ದರು. ನಕಲಿ ದಾಖಲೆಗಳನ್ನು ಡೀಡ್ ಮಾಡಿಸಿ, ಸಬ್ ರಿಜಿಸ್ಟರ್ ಕಚೇರಿಯಲ್ಲಿ ನೊಂದಣಿ ಮಾಡಿಸುತ್ತಿದ್ದರು. ಬಳಿಕ ರಾಷ್ಟ್ರೀಕೃತ ಬ್ಯಾಂಕ್, ಸಹಕಾರಿ ಬ್ಯಾಂಕ್‌ಗಳಲ್ಲಿ ಕಂತು ಸಾಲ ಹಾಗೂ ಯಂತ್ರೋಪಕರಣ ಸಾಲ ಪಡೆಯುತ್ತಿದ್ದರು. ಹೀಗೆ ಒಟ್ಟು 22 ಬ್ಯಾಂಕ್‌ಗಳಲ್ಲಿ ಹತ್ತು ಕೋಟಿ ರೂ.ಗೂ ಅಧಿಕ ಸಾಲ‌ ಪಡೆದು ವಂಚನೆ ಮಾಡಿದ್ದಾರೆ. ಸದ್ಯ ಪತಿ, ಪತ್ನಿ ಹಾಗೂ ಈಕೆ ಸೋದರಿ, ಭಾವ ಹಾಗೂ ಅವರ ಸ್ನೇಹಿತೆ ಬಂಧಿತರಾಗಿದ್ದಾರೆ. ಬಂಧಿತ ಆರೋಪಿಗಳನ್ನು ಹತ್ತು ದಿನ ಕಸ್ಟಡಿಗೆ ಪಡೆದು ಜಯನಗರ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
IPL 2024
ಕ್ರೀಡೆ5 mins ago

IPL 2024 : ಪಾಂಡ್ಯನನ್ನು ವಿಚಿತ್ರ ನಾಯಕ ಎಂದ ಮುಂಬೈ ಇಂಡಿಯನ್ಸ್​ ಆಲ್​ರೌಂಡರ್​​

Karnataka Weather Forecast
ಮಳೆ12 mins ago

Karnataka Weather : ವರ್ಷಾಘಾತಕ್ಕೆ ಉತ್ತರ ಕರ್ನಾಟಕ ಸುಸ್ತು; ರಾತ್ರಿಯೆಲ್ಲ ಗಾಳಿ ಸಹಿತ ಮಳೆಯಾರ್ಭಟ

lok sabha Election
ಪ್ರಮುಖ ಸುದ್ದಿ34 mins ago

Lok Sabha Election : ಕಾಂಗ್ರೆಸ್​ ಪರ ಶಾರುಖ್​ ಖಾನ್​ ಪ್ರಚಾರ; ಬಿಜೆಯಿಂದ ಆಕ್ಷೇಪ!; ವಿಡಿಯೊ ಇದೆ

Road accident between bike and Bolero near Mudgal Two dead
ಕರ್ನಾಟಕ36 mins ago

Road Accident: ಮುದ್ಗಲ್‌ ಬಳಿ ಬೈಕ್‌ – ಬುಲೇರೋ ನಡುವೆ ಅಪಘಾತ; ಸ್ಥಳದಲ್ಲೇ ಇಬ್ಬರು ಸಾವು

Wedding Saree Selection
ಫ್ಯಾಷನ್39 mins ago

Wedding Saree Selection: ಮದುವೆ ಸೀರೆಗಳನ್ನು ಆಯ್ಕೆ ಮಾಡುವುದು ಹೇಗೆ? ಇಲ್ಲಿದೆ ಸೀರೆ ಎಕ್ಸ್‌ಫರ್ಟ್‌ಗಳ ಟಿಪ್ಸ್

ಶಿವಮೊಗ್ಗ50 mins ago

Book Release: ರಾಮನೇನು ದೇವನೇ? ಪುಸ್ತಕ ಲೋಕಾರ್ಪಣೆ ಮಾಡಿದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ

Wipro Q4 Results
ವಾಣಿಜ್ಯ53 mins ago

Wipro Q4 Results: ಐಟಿ ದೈತ್ಯ ವಿಪ್ರೋದ ನಿವ್ವಳ ಲಾಭದಲ್ಲಿ ಶೇ. 8ರಷ್ಟು ಕುಸಿತ

Fraud Case in Bengaluru
ಬೆಂಗಳೂರು1 hour ago

Fraud Case : ಉದ್ಯಮಿಗೆ ಚಮತ್ಕಾರಿ ಚೆಂಬು ಕೊಟ್ಟವರು ಅರೆಸ್ಟ್‌; 22 ಬ್ಯಾಂಕ್‌ಗಳಿಗೆ ಟೋಪಿ ಹಾಕಿದ ಫ್ಯಾಮಿಲಿ ಲಾಕ್‌

Jackfruit benefits
ಆರೋಗ್ಯ1 hour ago

Jackfruit Benefits: ಈ ಬೇಸಿಗೆಯಲ್ಲಿ ಹಲಸಿನಹಣ್ಣನ್ನು ಯಾಕೆ ತಿನ್ನಲೇಬೇಕು ಗೊತ್ತೆ? ಇಲ್ಲಿವೆ 10 ಕಾರಣಗಳು!

Narayana Murthy
ಪ್ರಮುಖ ಸುದ್ದಿ1 hour ago

Narayana Murthy : 4.2 ಕೋಟಿ ರೂಪಾಯಿ ಡಿವಿಡೆಂಡ್​ ಜೇಬಿಗಿಳಿಸಿದ ನಾರಾಯಣ ಮೂರ್ತಿಯ 5 ತಿಂಗಳ ಮೊಮ್ಮಗ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder Case
ಹುಬ್ಬಳ್ಳಿ3 hours ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ13 hours ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ3 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ4 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20244 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20245 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ6 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ7 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ1 week ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

ಟ್ರೆಂಡಿಂಗ್‌