Site icon Vistara News

Heart Attack: ಶಾಲೆಯಲ್ಲಿ ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಕುಸಿದು ಬಿದ್ದು ಶಿಕ್ಷಕ ಸಾವು

Teacher Dies of Heart Attack

#image_title

ದಾವಣಗೆರೆ: ಶಾಲೆಯಲ್ಲಿ ಪಾಠ ಮಾಡುತ್ತಿದ್ದಾಗ ಹೃದಯಾಘಾತವಾಗಿ ಶಿಕ್ಷಕ ಮೃತಪಟ್ಟಿರುವ ಘಟನೆ (Heart Attack) ಹರಿಹರ ತಾಲೂಕಿನ ಭಾನುವಳ್ಳಿ ಗ್ರಾಮದಲ್ಲಿ ನಡೆದಿದೆ. ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಸೋಮವಾರ ಬೆಳಗ್ಗೆ ಪ್ರಾರ್ಥನೆ ಮುಗಿಸಿ ತರಗತಿ ಮಾಡುವಾಗ ಶಿಕ್ಷಕನಿಗೆ ಹೃದಯಾಘಾತವಾಗಿದೆ.

ಮೂಲತಃ ದಾವಣಗೆರೆ ತಾಲೂಕು ಮಹಾದೇವಿಪುರದ ನಿವಾಸಿ ಇಂಗ್ಲಿಷ್ ಶಿಕ್ಷಕ ವಿಜಯ್ ಕುಮಾರ್ (54) ಮೃತರು. ಶಾಲೆಯಲ್ಲಿ ತರಗತಿ ಮಾಡುತ್ತಿದ್ದಾಗ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಶಿಕ್ಷಕ ಕೊನೆಯುಸಿರೆಳೆದಿದ್ದಾರೆ. ಶಿಕ್ಷಕ ವಿಜಯ್‌ ಕುಮಾರ್‌ಗೆ ಇಬ್ಬರು ಮಕ್ಕಳಿದ್ದಾರೆ.

ಶಿಕ್ಷಕನ ನಿಧನಕ್ಕೆ ಶಾಲೆ ಸಹ ಶಿಕ್ಷಕರು ಹಾಗೂ ಗ್ರಾಮಸ್ಥರು ಸಂತಾಪ ಸೂಚಿಸಿದರು. ಶಾಲಾ ಮಕ್ಕಳು ಶಿಕ್ಷಕನ ಮೃತದೇಹದ ಬಳಿ ಗೋಳಾಡಿದ ದೃಶ್ಯ ಮನಕಲಕುವಂತಿತ್ತು.

ಇದನ್ನೂ ಓದಿ | ತೆಂಗಿನ ಮರ ಏರಿದವನಿಗೆ ತಪ್ಪಿತು ಪ್ರಜ್ಞೆ; ಮರದಲ್ಲೇ ನೇತಾಡುತ್ತಿದ್ದವನ ರಕ್ಷಿಸಿದ ಸಿವಿಲ್‌ ಡಿಫೆನ್ಸ್‌ ಟೀಂ

Exit mobile version