Praveen Nettaru | ಕಾಶ್ಮೀರದಿಂದಲೇ ಸಾಂತ್ವನ ಹೇಳಿದ ತೇಜಸ್ವಿ, ಜಾಲತಾಣದಲ್ಲಿ ತೀವ್ರ ತರಾಟೆ - Vistara News

ಕರ್ನಾಟಕ

Praveen Nettaru | ಕಾಶ್ಮೀರದಿಂದಲೇ ಸಾಂತ್ವನ ಹೇಳಿದ ತೇಜಸ್ವಿ, ಜಾಲತಾಣದಲ್ಲಿ ತೀವ್ರ ತರಾಟೆ

Praveen Nettaru | ಪ್ರವೀಣ್‌ ನೆಟ್ಟಾರು ಹತ್ಯೆಯನ್ನು ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಖಂಡಿಸಿದ್ದಾರೆ. ಆದರೆ, ಅವರನ್ನೂ ಬಿಡದೆ ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ.

VISTARANEWS.COM


on

tejaswi surya
ಕಾಶ್ಮೀರದಲ್ಲಿ ನಡೆದ ಬೈಕ್‌ ರ‍್ಯಾಲಿಯಲ್ಲಿ ಸಂಸದ ತೇಜಸ್ವಿ ಸೂರ್ಯ ಅವರು ಭಾಗವಹಿಸಿರುವುದು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಬಿಜೆಪಿ ಯುವಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ, ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ಕೊಲೆಯಾದ ಯುವ ಮೋರ್ಚಾ ಪದಾಧಿಕಾರಿ ಪ್ರವೀಣ್‌ ನೆಟ್ಟಾರು ಅವರ ಕುಟುಂಬಕ್ಕೆ ಕಾಶ್ಮೀರದಿಂದ ಫೋನ್‌ ಮೂಲಕ ಸಾಂತ್ವನ ಹೇಳಿದ್ದಾರೆ. ಶಿವಮೊಗ್ಗದ ಹರ್ಷ ಮತ್ತು ಪ್ರವೀಣ್‌ ನೆಟ್ಟಾರು ಅವರ ಕೊಲೆ ಪ್ರಕರಣವನ್ನು ಯುಎಪಿಎ ಕಾಯಿದೆಯ ವ್ಯಾಪ್ತಿಯಡಿಗೆ ತಂದು ಸಮಗ್ರ ತನಿಖೆ ನಡೆಸುವಂತೆ ಮುಖ್ಯಮಂತ್ರಿಯಲ್ಲಿ ಕೋರುವುದಾಗಿ ಅವರು ಸೋಷಿಯಲ್‌ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ತೇಜಸ್ವಿ ಸೂರ್ಯ ಅವರು ತಿರಂಗಾ ಯಾತ್ರೆ ಪ್ರಯುಕ್ತ ಕಳೆದ ಎರಡು ದಿನಗಳಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಇದ್ದಾರೆ. ಶ್ರೀನಗರದ ಲಾಲ್‌ ಚೌಕದಿಂದ ಕಾರ್ಗಿಲ್‌ವರೆಗೆ ನಡೆದ ಬೈಕ್‌ ರ‍್ಯಾಲಿಯಲ್ಲಿ ಅವರು ಪಾಲ್ಗೊಂಡಿದ್ದಾರೆ. ʻʻ1952 ರ ನಂತರ ಶ್ರೀನಗರದ ಲಾಲ್‌ ಚೌಕ್‌ ನಲ್ಲಿ ಯಾವುದೇ ರಾಜಕೀಯ ಪಕ್ಷದ ವತಿಯಿಂದ ಕಾರ್ಯಕ್ರಮಗಳು ನಡೆದಿರುವುದಿಲ್ಲ. ಬಿಜೆಪಿ ಯುವಮೋರ್ಚಾ ವತಿಯಿಂದ ದೇಶದ ವಿವಿಧ ಭಾಗಗಳ ಹುತಾತ್ಮ ಸೈನಿಕರ ಮನೆಯ ಅಂಗಳದ ಮಣ್ಣನ್ನು ಕಲಶದಲ್ಲಿ ಹೊತ್ತು ತಂದು ಕಾರ್ಗಿಲ್‌ ಯುದ್ಧ ಸ್ಮಾರಕದ ಪರಿಸರದಲ್ಲಿ ಗಿಡ ನೆಡುವ ಐತಿಹಾಸಿಕ ಕಾರ್ಯದಲ್ಲಿ ಪಾಲ್ಗೊಂಡಿದ್ದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ರಾಷ್ಟ್ರವಾದದ ಚಿಂತನೆಗಳು ಇಂದು ಕಣಿವೆ ರಾಜ್ಯದಲ್ಲಿ ಫಲ ನೀಡುತ್ತಿವೆ. ಅದರ ಬಗ್ಗೆ ಖುಷಿಪಡುತ್ತಾ ಬೈಕ್‌ ರ‍್ಯಾಲಿಯಲ್ಲಿ ಇರುವಾಗಲೇ ನನ್ನ ತವರು ರಾಜ್ಯದಲ್ಲಿ ಇಂತಹ ಭೀಕರ ಘಟನೆ ನಡೆದಿರುವುದು ನನ್ನ ಮನಸ್ಸಿಗೆ ಅತ್ಯಂತ ನೋವನ್ನುಂಟು ಮಾಡಿದೆʼʼ ಎಂದು ತೇಜಸ್ವಿ ಬರೆದುಕೊಂಡಿದ್ದಾರೆ.

ಸಂಚನ್ನು ಬಯಲಿಗೆಳೆಯಿರಿ
ಹರ್ಷ, ಪ್ರವೀಣ್‌ ಹತ್ಯೆಯಂಥ ಪ್ರಕರಣಗಳನ್ನು ಕೇವಲ ಧಾರ್ಮಿಕ ಕಾರಣದ ಹತ್ಯೆ ಎಂಬುದಾಗಿ ಪರಿಗಣಿಸದೆ, ಇದರ ಹಿಂದಿರುವ ವ್ಯವಸ್ಥಿತ ಜಾಲ, ಸಂಚನ್ನು ಬಯಲಿಗೆಳೆಯಬೇಕು, ಪ್ರಮುಖ ಸಂಘಟನೆ ಹಾಗೂ ಧಾರ್ಮಿಕ ಮೂಲಭೂತವಾದವನ್ನು ಬಿತ್ತುವ ಪ್ರಮುಖ ವ್ಯಕ್ತಿಗಳಿಗೆ ಉಗ್ರ ಶಿಕ್ಷೆ ನೀಡುವಂತೆ ಮನವಿ ಸಲ್ಲಿಸುತ್ತೇನೆ ಎಂದು ಮುಖ್ಯಮಂತ್ರಿಯವರನ್ನು ವಿನಂತಿಸಿದ್ದಾರೆ.

ಪ್ರವೀಣ ನೆಟ್ಟಾರು ಮತ್ತು ಹರ್ಷ ಅವರನ್ನು ಕೊಲೆಗೈದಿರುವ ರೀತಿ ಹಾಗೂ ಕರ್ನಾಟಕದಲ್ಲಿ ಧಾರ್ಮಿಕ ಕಾರಣಗಳಿಗಾಗಿ ನಡೆದಿರುವ ಹಿಂದೂ ಕಾರ್ಯಕರ್ತರ ಸರಣಿ ಹತ್ಯೆಗಳು, ಕೆಲವು ಮತಾಂಧ ಇಸ್ಲಾಮಿಕ್ ಸಂಘಟನೆಗಳ ಪೂರ್ವನಿಯೋಜಿತ ಸಂಘಟಿತ ಅಪರಾಧ (ಷಡ್ಯಂತ್ರ)ದ ಭಾಗವಾಗಿವೆ. ಇವುಗಳನ್ನು ಕೇವಲ ಸಾಮಾನ್ಯ ಹತ್ಯೆಗಳೆಂದು ಪರಿಗಣಿಸದೇ, ಭಯೋತ್ಪಾದನೆಯ ಪ್ರಕರಣಗಳೆಂದು ಪರಿಗಣಿಸಬೇಕು. ಸಾಮಾನ್ಯ ಹತ್ಯೆ ಎಂಬ ತೀರ್ಮಾನಕ್ಕೆ ಬಂದಲ್ಲಿ, ತನಿಖೆ ಹಾದಿ ತಪ್ಪುವ ಮತ್ತು ನೈಜ ಅಪರಾಧಿಗಳನ್ನು ತಪ್ಪಿತಸ್ಥರೆಂದು ಬಿಂಬಿಸಲು ಅಸಾಧ್ಯವಾಗುವ ಸಂಭವವಿದೆ. ಹರ್ಷ ರವರ ಪ್ರಕರಣವನ್ನು UAPA ಅಡಿ ಸಮಗ್ರ ತನಿಖೆಗೆ ಒಳಪಡಿಸಬೇಕು ಎಂದು ಕೋರಿದ್ದಾರೆ.

ಕೇವಲ ಉಗ್ರ ಶಿಕ್ಷೆಯ ಮಾತುಗಳನ್ನಾಡಿ, 3 ದಿನಗಳ ನಂತರ ಯಥಾಸ್ಥಿತಿ ಹಾಗೂ ಮತ್ತೊಂದು ಬಲಿಯಾದಾಗ ಮತ್ತೆ ಇಂತಹ ಹೇಳಿಕೆಗಳನ್ನು ಪುನರುಚ್ಚರಿಸುವ ಬದಲು, ಸಮಸ್ಯೆಯ ಮೂಲಕ್ಕೆ ಪರಿಹಾರ ಕಂಡುಕೊಳ್ಳಲೇಬೇಕಾದ ಅಗತ್ಯತೆಯನ್ನು ನಾನು ಸರ್ಕಾರಕ್ಕೆ ಒತ್ತಾಯಪಡಿಸುತ್ತೇನೆ ಎಂದು ಅವರು ಹೇಳಿದ್ದಾರೆ.

ನೆಟ್ಟಿಗರ ಆಕ್ರೋಶ
ತೇಜಸ್ವಿ ಸೂರ್ಯ ಅವರ ಫೇಸ್‌ಬುಕ್‌ ಪೋಸ್ಟನ್ನು ೬.೪ ಲಕ್ಷ ಮಂದಿ ಲೈಕ್‌ ಮಾಡಿದ್ದಾರೆ. ೧,೭೦೦ಕ್ಕೂ ಅಧಿಕ ಮಂದಿ ಕಮೆಂಟ್‌ ಮಾಡಿದ್ದಾರೆ. ೪೦೫ ಮಂದಿ ಹೇಳಿಕೆಯನ್ನು ಹಂಚಿಕೊಂಡಿದ್ದಾರೆ. ವಿಶೇಷವೆಂದರೆ, ಕಮೆಂಟ್‌ ಮಾಡಿದ ೧೭೦೦ಕ್ಕೂ ಅಧಿಕ ಮಂದಿಯಲ್ಲಿ ಹೆಚ್ಚಿನವರು ಸಂಸದರಾದ ತೇಜಸ್ವಿ ಸೂರ್ಯ ಮತ್ತು ಬಿಜೆಪಿ ಸರಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ನಾವು ಶೂರರು ಎಂದು ಆರಿಸಿದೆವು. ಈಗ ಷಂಡರನ್ನು ಆರಿಸಿದ್ದರ ಅರಿವಾಗುತ್ತಿದೆ ಎಂಬಷ್ಟು ತೀಕ್ಷ್ಣವಾದ ಪ್ರತಿಕ್ರಿಯೆಗಳಿದ್ದರೆ, ಬಾಯ್ಕಾಟ್‌ ಬಿಜೆಪಿ ಎಂದು ಕೆಲವರು ಹ್ಯಾಷ್‌ ಟ್ಯಾಗ್‌ ಹಾಕಿದ್ದಾರೆ.

ʻʻನೀವ್ಗಳು ಹೀಗೆ ಮೌನವಾಗಿರಲು ಕಾರಣವೇನು? ಹಿಂದುತ್ವ ಬರೀ ಮೈಕಿಗೆ ಭಾಷಣಕ್ಕೆ ಸೀಮಿತ ಅಲ್ಲವೇ? ಬಲ ಇಲ್ಲದ ಮುಖ್ಯಮಂತ್ರಿ, ನರ ಇಲ್ಲದ ಗೃಹಮಂತ್ರಿ, ಇವುಗಳ ನಡುವೆ ಕಾರ್ಯಕರ್ತ ಓಂ ಶಾಂತಿ..!ʼʼ ಎಂದು ಒಬ್ಬರು ಹೇಳಿದ್ದಾರೆ.
ಇದನ್ನೂ ಓದಿ| Praveen Nettaru | ಪಕ್ಷ, ಸಿದ್ಧಾಂತಕ್ಕೆ ಹೋರಾಡುವವರಿಗಿಲ್ಲ ರಕ್ಷಣೆ; ಬಿಜೆಪಿ ನೂರಾರು ಕಾರ್ಯಕರ್ತರ ರಾಜೀನಾಮೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

ಹುಬ್ಬಳ್ಳಿಯಲ್ಲಿ ವಾರದಲ್ಲಿ ಮೂರನೇ ಬಾರಿ ವಿಮಾನ ಲ್ಯಾಂಡಿಂಗ್ ಸಮಸ್ಯೆ; ಕೂದಲೆಳೆ ಅಂತರದಲ್ಲಿ ಪಾರಾದ ಪ್ರಯಾಣಿಕರು

VISTARANEWS.COM


on

ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಫ್ಲೈ 91 (Fly 91) ವಿಮಾನಯಾನ ಸಂಸ್ಥೆಯ ವಿಮಾನಗಳು ಸತತವಾಗಿ ತಾಂತ್ರಿಕ ಸಂಕಷ್ಟಕ್ಕೆ ಸಿಲುಕುತ್ತಿದ್ದು, ಪ್ರಯಾಣಿಕರಲ್ಲಿ ಭೀತಿ ಮೂಡಿಸಿವೆ. ಕಳೆದ ಒಂದು ವಾರದ ಅವಧಿಯಲ್ಲಿ ಇದು ಮೂರನೇ ಘಟನೆಯಾಗಿದ್ದು, ನಿನ್ನೆ ಹೈದರಾಬಾದ್‌ನಿಂದ ಬಂದ ವಿಮಾನವು ಲ್ಯಾಂಡಿಂಗ್‌ಗಾಗಿ ಸುಮಾರು 40 ನಿಮಿಷಗಳ ಕಾಲ ಆಕಾಶದಲ್ಲಿಯೇ ಸುತ್ತು ಹೊಡೆದಿದೆ. ಮಧ್ಯಾಹ್ನ 3.13ಕ್ಕೆ ಹೈದರಾಬಾದ್‌ನಿಂದ ಹೊರಟಿದ್ದ ವಿಮಾನವು ಸಂಜೆ 4.30ಕ್ಕೆ ಲ್ಯಾಂಡ್ ಆಗಬೇಕಿತ್ತು. ಆದರೆ ಹವಾಮಾನ ವೈಪರೀತ್ಯದ ನೆಪವೊಡ್ಡಿ ವಿಮಾನವನ್ನು ಆಕಾಶದಲ್ಲೇ ತಡೆಹಿಡಿದ ಪರಿಣಾಮ, ಅಂತಿಮವಾಗಿ 5.09ಕ್ಕೆ ಸುರಕ್ಷಿತವಾಗಿ ಲ್ಯಾಂಡ್ ಆಯಿತು. ಈ ವಿಳಂಬದಿಂದಾಗಿ ವಿಮಾನದಲ್ಲಿದ್ದ ಪ್ರಯಾಣಿಕರು ಪ್ರಾಣಭಯದಿಂದ ತತ್ತರಿಸುವಂತಾಯಿತು.

ಫ್ಲೈ 91 ಸಂಸ್ಥೆಯ ವಿಮಾನಗಳಿಗೆ ಹುಬ್ಬಳ್ಳಿಯಲ್ಲಿ ಇಂತಹ ಸಮಸ್ಯೆ ಎದುರಾಗುತ್ತಿರುವುದು ಇದೇ ಮೊದಲೇನಲ್ಲ. ಕಳೆದ ಏಪ್ರಿಲ್ 19 ರಂದು ಹೈದರಾಬಾದ್‌ನಿಂದ ಬರುತ್ತಿದ್ದ ಇದೇ ಸಂಸ್ಥೆಯ ವಿಮಾನವೊಂದು ವೇಗ ನಿಯಂತ್ರಣ ಕಳೆದುಕೊಂಡು ಬರೊಬ್ಬರಿ 4 ಗಂಟೆಗಳ ಕಾಲ ಆಗಸದಲ್ಲೇ ಹಾರಾಡಿ, ಕೊನೆಗೆ ಬೆಂಗಳೂರಿನಲ್ಲಿ ತುರ್ತು ಲ್ಯಾಂಡಿಂಗ್ ಮಾಡಿತ್ತು. ಆಗಲೂ ಹವಾಮಾನದ ಕಾರಣ ನೀಡಲಾಗಿತ್ತಾದರೂ, ತಾಂತ್ರಿಕ ದೋಷವೇ ಅಸಲಿ ಕಾರಣ ಎಂಬ ಬಲವಾದ ಶಂಕೆ ವ್ಯಕ್ತವಾಗಿತ್ತು. ವಿಮಾನಯಾನ ಸಂಸ್ಥೆಯು ಈ ಬಗ್ಗೆ ಸರಿಯಾದ ಮಾಹಿತಿ ನೀಡದೆ ನಿರ್ಲಕ್ಷ್ಯ ತೋರಿದ್ದಕ್ಕೆ ಪ್ರಯಾಣಿಕರ ಕುಟುಂಬಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.

ಈ ಘಟನೆ ನಡೆದ ಎರಡೇ ದಿನಗಳಲ್ಲಿ ಅಂದರೆ ಏಪ್ರಿಲ್ 21 ರಂದು ಬೆಂಗಳೂರಿನಿಂದ ಬಂದಿದ್ದ ವಿಮಾನಕ್ಕೂ ಇಂತಹುದೇ ಸ್ಥಿತಿ ಎದುರಾಗಿತ್ತು. ಈಗ ಕೇವಲ ಮೂರು ದಿನಗಳ ಅಂತರದಲ್ಲಿ ಮತ್ತೆ ಅದೇ ರೀತಿಯ ಲ್ಯಾಂಡಿಂಗ್ ಸಮಸ್ಯೆ ಉಂಟಾಗಿರುವುದು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ಇತರ ವಿಮಾನ ಸಂಸ್ಥೆಗಳು ಸುಗಮವಾಗಿ ಸಂಚರಿಸುತ್ತಿರುವಾಗ ಫ್ಲೈ 91 ವಿಮಾನಗಳಿಗೆ ಮಾತ್ರ ಏಕೆ ಪದೇ ಪದೇ ಈ ತೊಂದರೆ ಆಗುತ್ತಿದೆ ಎಂಬ ಪ್ರಶ್ನೆ ಈಗ ಎದ್ದಿದೆ. ವಿಮಾನಗಳ ಫಿಟ್‌ನೆಸ್ ಹಾಗೂ ನಿರ್ವಹಣೆಯಲ್ಲಿ ಸಂಸ್ಥೆ ತೋರುತ್ತಿರುವ ನಿರ್ಲಕ್ಷ್ಯದ ಬಗ್ಗೆ ಪ್ರಯಾಣಿಕರಿಂದ ಈಗ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿದ್ದು, ಉನ್ನತ ಮಟ್ಟದ ತನಿಖೆಗೆ ಒತ್ತಾಯ ಕೇಳಿಬಂದಿದೆ.

Continue Reading

Latest

ಮಹಿಳಾ ಮೀಸಲಾತಿ ವಿರೋಧಿಸಿದ ಕಾಂಗ್ರೆಸ್‌ ವಿರುದ್ಧ ಸಚಿವೆ ಶೋಭಾ ಕರಂದ್ಲಾಜೆ ಆಕ್ರೋಶ

VISTARANEWS.COM


on

ಬೆಂಗಳೂರು: ಶಾಸನಸಭೆಗಳಲ್ಲಿ ಮಹಿಳೆಯರ ಸ್ಥಾನಗಳನ್ನು ಹೆಚ್ಚಿಸುವ ಉದ್ದೇಶದಿಂದ ಮಹಿಳಾ ಮೀಸಲಾತಿ ಮಸೂದೆ ಜಾರಿಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿತ್ತು. ಆದರೆ ಮಸೂದೆ ಜಾರಿಯಾಗದಂತೆ ಕಾಂಗ್ರೆಸ್ ಮತ್ತು ಇಂಡಿ ಮೈತ್ರಿ ಪಕ್ಷಗಳ ಒಕ್ಕೂಟ ತಡೆಯೊಡ್ಡಿದೆ. ಈ ಮೂಲಕ ಆ ಪಕ್ಷಗಳು ಮಹಿಳಾ ವಿರೋಧಿ ನೀತಿಯನ್ನು ಅನುಸರಿಸಿವೆ ಎಂದು ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ ಆಪಾದಿಸಿದ್ದಾರೆ.
ಅವರು ಇಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ “ನಾರಿ ಶಕ್ತಿ ಫೋರಂ” ವತಿಯಿಂದ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.
ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಮಹಿಳೆಯರ ಪ್ರಾತಿನಿಧ್ಯ ಹೆಚ್ಚಳ ಆಗಬೇಕು. ಮಹಿಳೆಯರು ಕಾನೂನು ರೂಪಿಸುವ ಜವಾಬ್ದಾರಿಯುತ ಅವಕಾಶ ಪಡೆಯಬೇಕು ಎಂದು ಮಹಿಳಾ ಮೀಸಲಾತಿ ಮಸೂದೆ ಜಾರಿಗೆ ಕೇಂದ್ರ ಸರ್ಕಾರ ಮುಂದಾಗಿತ್ತು. ದೇಶದ ನೀತಿ ನಿಯಮಗಳನ್ನು ಸಿದ್ದಪಡಿಸುವ ನಿರ್ಣಾಯಕ ಪಾತ್ರದಲ್ಲಿ ಮಹಿಳೆಯರ ಪಾಲು ಇರಬೇಕು ಎಂಬ ಉದ್ದೇಶದಿಂದ ಮಹಿಳಾ ಮೀಸಲಾತಿ ಮಸೂದೆ ಮಂಡನೆಯಾಗಿತ್ತು. ಆದರೆ ಈ ಮಸೂದೆಗೆ ಕಾಂಗ್ರೆಸ್ ಹಾಗೂ ಅವರ ಮಿತ್ರ ಪಕ್ಷಗಳು ಬೆಂಬಲ ನೀಡದೆ ಸೋಲಾಗುವಂತೆ ಮಾಡಿದವು ಎಂದು ಆರೋಪಿಸಿದರು.
ವಿಧಾನಸಭೆ ಮತ್ತು ಸಂಸತ್ತಿನಲ್ಲಿ ಮಹಿಳಾ ಧ್ವನಿ ಇರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಬಯಸಿದ್ದರು. ಅವರು ಮಹಿಳಾ ಸಂಸದರಿಗೆ ದೊಡ್ಡ ದೊಡ್ಡ ಜವಾಬ್ದಾರಿ ಕೊಟ್ಟಿದ್ದಾರೆ. ನಿರ್ಮಲಾ ಸೀತಾರಾಮನ್ ಅವರು ಹಣಕಾಸು ಸಚಿವೆ ಆಗಿದ್ದಾರೆ. ಇಂದು ಮಹಿಳೆ ಯುದ್ಧ ವಿಮಾನಗಳನ್ನು ಚಾಲನೆ ಮಾಡುತ್ತಾರೆ. ಸಿಂಧೂರ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದು ಮಹಿಳೆ. ಹೀಗೆ ಮಹಿಳೆಯ ಧ್ವನಿ ದೊಡ್ಡದಿದೆ. ಈ ಧ್ವನಿಗೆ ಶಿಕ್ಷಣ, ಹಣ ಇದ್ದಾಗ ಗೌರವ ಬರುತ್ತದೆ. ಇದೆಲ್ಲಕ್ಕಿಂತ ನೀತಿ ರೂಪಿಸುವಲ್ಲಿ ಮಹಿಳೆ ಇದ್ದರೆ ಇನ್ನೂ ಒಳ್ಳೆಯದು ಎಂದರು.
ಮಹಿಳೆಯರು ಆರ್ಥಿಕವಾಗಿ ಸದೃಢವಾಗಲು ಹಲವು ಯೋಜನೆಗಳನ್ನು ಕೇಂದ್ರ ಸರ್ಕಾರ ಜಾರಿ ಮಾಡಿದೆ. ಮಹಿಳೆ ಇಂದು ಡ್ರೋಣ್ ತಯಾರಿ ಮಾಡುತ್ತಿದ್ದಾರೆ. ಹೊಸದಾಗಿ ಮಹಿಳಾ ಮೀಸಲು ಕಾಯಿದೆಯನ್ನು ಏಕೆ ತಂದಿದ್ದೀರಿ ಎಂದು ಕಾಂಗ್ರೆಸ್ ಪ್ರಶ್ನಿಸಬಹುದು. ಈ ಹಿಂದೆ 543 ಸ್ಥಾನಗಳಿಗೆ ಮಹಿಳಾ ಮೀಸಲಾತಿ ಮಸೂದೆ ತರಲಾಗಿತ್ತು. ಪುರುಷರ ಸ್ಥಾನಗಳನ್ನು ಕಿತ್ತು ಕೊಳ್ಳುವುದು ಬೇಡ ಎಂದು ಲೋಕಸಭಾ ಸ್ಥಾನಗಳನ್ನು ಹೆಚ್ಚಳ ಮಾಡಿ ಮಸೂದೆ ಮಂಡಿಸಿದರು. ಜನಗಣತಿ ಆದ ನಂತರ ಕ್ಷೇತ್ರ ಮರುವಿಂಗಡಣೆ ಮಾಡಿ ಎಂದು ಕಾಂಗ್ರೆಸ್ ನವರು ಒತ್ತಾಯ ಮಾಡುತ್ತಿದ್ದಾರೆ. ಸಮೀಕ್ಷೆ ಆದ ನಂತರ ಕ್ಷೇತ್ರ ಹಂಚಿಕೆ ಮಾಡಿದರೆ ದಕ್ಷಿಣ ಭಾರತಕ್ಕೆ ಸೀಟು ಕಡಿಮೆ ಆಗಲಿದೆ. ಹಾಗಾಗಿ ಎರಡೂ ಮಸೂದೆಯನ್ನು ಒಟ್ಟಿಗೆ ಮಂಡಿಸಲಾಗಿತ್ತು. ಪ್ರತಿ ರಾಜ್ಯಕ್ಕೆ ಶೇ. 50 ರಷ್ಟು ಲೋಕಸಭಾ ಸ್ಥಾನಗಳನ್ನು ಹೆಚ್ಚಳ ಮಾಡಲು ಮಸೂದೆ ಉದ್ದೇಶಿಸಿತ್ತು ಎಂದು ಸ್ಪಷ್ಟನೆ ನೀಡಿದರು.
ಬೃಹತ್‌ ಹೋರಾಟಕ್ಕೆ ಸಜ್ಜಾಗೋಣ:ಮಂಜುಳಾ
ರಾಜ್ಯ ಮಹಿಳಾ ಆಯೋಗದ ಮಾಜಿ ಅಧ್ಯಕ್ಷರು ಮತ್ತು ವಕೀಲರಾದ ಕು. ಸಿ ಮಂಜುಳ ಅವರು ಮಾತನಾಡಿ, ಮಹಿಳಾ ಮೀಸಲು ಮಸೂದೆ ಸೋಲಿಸಿದ ಕಾಂಗ್ರೆಸ್ ಮತ್ತು ಮಿತ್ರ ಪಕ್ಷಗಳ ವಿರುದ್ಧ ಜನಾಕ್ರೋಶ ಮಹಿಳಾ ಸಭೆ ಮಾಡಲಾಗುತ್ತಿದೆ. ಇಂದು ಇಡೀ ನಾರಿಶಕ್ತಿಗೆ ಕಾಂಗ್ರೆಸ್ ಅವಮಾನ ಮಾಡಿದೆ. ಲಜ್ಜೆಗೆಟ್ಟ ರಾಜಕಾರಣ ಮಾಡುತ್ತಿರುವ ಕಾಂಗ್ರೆಸ್‍ಗೆ ಬುದ್ಧಿ ಕಲಿಸಬೇಕಾಗಿದೆ. ಕಾಂಗ್ರೆಸ್ ಧೋರಣೆ ಖಂಡಿಸಿ ಇನ್ನು ಮುಂದೆ ಹೋರಾಟಕ್ಕೆ ಸದಾ ಸಿದ್ಧರಾಗೋಣ ಎಂದು ಕರೆ ನೀಡಿದರು.
ಸುಮಂಗಲಿ ಸೇವಾ ಆಶ್ರಮದ ಸ್ಥಾಪಕರು ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕøತರಾದ ಡಾ. ಎಸ್.ಜಿ. ಸುಶೀಲಮ್ಮ ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Continue Reading

Latest

ಪರಮಾಣು ಶಸ್ತ್ರಾಸ್ತ್ರಗಳು ಶಾಂತಿಯ ಉದ್ದೇಶಕ್ಕೆ ಬಳಕೆಯಾಗಲಿ: ವಿಶ್ವಸಂಸ್ಥೆ ಕಳಕಳಿ

VISTARANEWS.COM


on

ನ್ಯೂಯಾರ್ಕ್:‌ ಜಗತ್ತು ಚೆರ್ನೋಬಿಲ್ ದುರಂತದ 40 ನೇ ವಾರ್ಷಿಕೋತ್ಸವ ಆಚರಿಸುತ್ತಿದೆ. ಈ ವೇಳೆ ವಿಶ್ವಸಂಸ್ಥೆಯ ಸಾಮಾನ್ಯ ಸಭೆ ಪರಮಾಣು ಶಸ್ತ್ರಾಸ್ತ್ರಗಳ ಶಾಂತಿಯುತ ಬಳಕೆಗೆ ಕರೆ ನೀಡಿದೆ.


ಚೆರ್ನೋಬಿಲ್‌ ದುರಂತದ ಸ್ಮರಣಾರ್ಥ ಶುಕ್ರವಾರ ಇಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧ್ಯಕ್ಷೆ ಅನ್ನಾಲೆನಾ ಬೇರ್ಬಾಕ್ ಅವರು, ಚೆರ್ನೋಬಿಲ್‌ನ ಪ್ರಮಾಣವು, ಪರಮಾಣು ತಂತ್ರಜ್ಞಾನವನ್ನು ಶಾಂತಿಯುತವಾಗಿ ಬಳಸಿದಾಗಲೂ ಇತರ ತಂತ್ರಜ್ಞಾನಗಳಿಗಿಂತ ಮೂಲಭೂತವಾಗಿ ಭಿನ್ನವಾಗಿದೆ ಎಂದು ಒತ್ತಿ ಹೇಳಿದರು.


ಏಪ್ರಿಲ್ 26, 1986 ರಂದು ಚೆರ್ನೋಬಿಲ್ ಪರಮಾಣು ವಿದ್ಯುತ್ ಸ್ಥಾವರ ಇತಿಹಾಸದಲ್ಲಿಯೇ ಅತ್ಯಂತ ಭೀಕರವಾದ ಪರಮಾಣು ಅಪಘಾತಗಳಲ್ಲಿ ಒಂದನ್ನು ಕಂಡಿತು. ಆ ದಿನ, ಸರಣಿ ಸ್ಫೋಟಕಗಳು ನಂ. 4 ರಿಯಾಕ್ಟರ್ ಅನ್ನು ಹಾಳು ಮಾಡಿ, ಉಕ್ರೇನ್, ಬೆಲಾರಸ್ ಮತ್ತು ಯುರೋಪಿನ ಇತರ ಭಾಗಗಳಲ್ಲಿ ವಿಕಿರಣಶೀಲ ಮಾಲಿನ್ಯವನ್ನು ಹರಡಿತು.


8 ಮಿಲಿಯನ್‌ಗಿಂತಲೂ ಹೆಚ್ಚು ಜನರು ವಿಕಿರಣಕ್ಕೆ ಒಡ್ಡಿಕೊಂಡರು, ಸಾವಿರಾರು ಜನರು ಸತ್ತರು ಮತ್ತು ಮಕ್ಕಳು ಲ್ಯುಕೇಮಿಯಾ ಮತ್ತು ಇತರ ಕಾಯಿಲೆಗಳನ್ನು ಬೆಳೆಸಿಕೊಂಡರು ಎಂದು ಬೇರ್‌ಬಾಕ್ ಹೇಳಿದರು, ಅನೇಕರಿಗೆ ಅವರ ಉಳಿದ ಜೀವನವನ್ನು ರೂಪಿಸುವ ದೀರ್ಘಾವಧಿಯ ಆರೈಕೆಯ ಅಗತ್ಯವಿತ್ತು.


ಯುಎನ್ ಕಾರ್ಯದರ್ಶಿ, ಜನರಲ್ ಆಂಟೋನಿಯೊ ಗುಟೆರೆಸ್ ಇದನ್ನು ಇತಿಹಾಸದಲ್ಲಿ ಅತ್ಯಂತ ಮಹತ್ವದ ಪರಮಾಣು ಅಪಘಾತ ಎಂದು ಬಣ್ಣಿಸಿದರು. ಚೆರ್ನೋಬಿಲ್ ರಾಷ್ಟ್ರೀಯ ದುರಂತ ಮಾತ್ರವಲ್ಲ, ಪರಮಾಣು ಅಪಘಾತಗಳ ಪರಿಣಾಮಗಳನ್ನು ಅಂತರರಾಷ್ಟ್ರೀಯ ಸಮುದಾಯವ ಹಂಚಿಕೊಳ್ಳುತ್ತದೆ ಎಂಬ ಪಾಠವಾಗಿದೆ ಎಂದು ಅವರು ಹೇಳಿದರು.


ವಿಶ್ವಸಂಸ್ಥೆಯ ರಷ್ಯಾದ ಉಪ ಖಾಯಂ ಪ್ರತಿನಿಧಿ ಡಿಮಿಟ್ರಿ ಚುಮಾಕೋವ್, ಸರಿಯಾದ ವಿವೇಕವಿಲ್ಲದೆ ಯಾವುದೇ ತಂತ್ರಜ್ಞಾನಗಳು, ಉತ್ತಮ ಉದ್ದೇಶವನ್ನು ಹೊಂದಿರುವವುಗಳು ಸಹ ಬೆದರಿಕೆಯ ಮೂಲವಾಗಬಹುದು ಎಂದು ಹೇಳಿದರು.

Continue Reading

Latest

ಒಳಮೀಸಲಾತಿ ಜಾರಿ: ಕೊಟ್ಟ ಮಾತು ಈಡೇರಿಸಿದ ದಲಿತರಾಮಯ್ಯ; ಸಚಿವ ಆರ್.ಬಿ. ತಿಮ್ಮಾಪುರ

VISTARANEWS.COM


on

ಬೆಂಗಳೂರು: ಒಳ ಮೀಸಲಾತಿ ಜಾರಿಗೊಳಿಸುವ ಮೂಲಕ ಐತಿಹಾಸಿಕ ತೀರ್ಮಾನ ಕೈಗೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ, ಅಬಕಾರಿ ಮತ್ತು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ನೇತೃತ್ವದ ನಿಯೋಗ ಕೃತಜ್ಞತೆ ಅರ್ಪಿಸಿತು.

ಶನಿವಾರ ಸಿಎಂ ನಿವಾಸ ಕಾವೇರಿಯಲ್ಲಿ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಸಚಿವ ತಿಮ್ಮಾಪೂರರವರು ಹಾಗೂ ನೂರಾರು ದಲಿತ ಎಡ ಸಮುದಾಯದ ನಾಯಕರು, ಮೂವತ್ತು ವರ್ಷಗಳ ಬೇಡಿಕೆ ಈಡೇರಿಸಿದ್ದಕ್ಕೆ ಸಿಹಿ ತಿನ್ನಿಸಿ ಧನ್ಯವಾದ ತಿಳಿಸಿದರು.

ನಮ್ಮ ಒಳ ಮೀಸಲಾತಿ ಹೋರಾಟ 30-40 ವರ್ಷಗಳದ್ದು. ಹಲವು ಸರ್ಕಾರಗಳು, ಮುಖ್ಯಮಂತ್ರಿಗಳಿಂದ ಸಾಧ್ಯವಾಗದ ಕೆಲಸವನ್ನ ಸನ್ಮಾನ್ಯ ಸಿದ್ದರಾಮಯ್ಯರವರು ಮಾಡಿ ತೋರಿಸಿದ್ದಾರೆ‌. ಸಿದ್ದರಾಮಯ್ಯ ಸಾಹೇಬರು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು, ಸರ್ವ ಜನಾಂಗ ಒಪ್ಪುವಂತೆ ಮಾಡಿ, ಎಲ್ಲಾ ಕ್ಯಾಬಿನೆಟ್ ಸಚಿವರ ಸರ್ವಾನುಮತದಿಂದ ನಿರ್ಣಯ ಕೈಗೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಮೂಲಕ ನಮ್ಮ ಸಮುದಾಯಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ. ನಮ್ಮ ಇಡೀ ಸಮುದಾಯ ಸಿದ್ದರಾಮಯ್ಯರನ್ನ ನೆನಪಿಟ್ಟುಕೊಳ್ಳಲಿದೆ. ಇಡೀ ಸಮುದಾಯ ಅವರಿಗೆ ಕೃತಜ್ಞರಾಗಿಲಿದೆ ಎಂದು ಸಚಿವ ತಿಮ್ಮಾಪೂರ ಅವರು ಹೇಳಿದರು.

Continue Reading
Advertisement
Latest1 hour ago

ಆರ್‌ಸಿಬಿ ಪ್ಲೇಯಿಂಗ್ 11 ಅಪ್‌ಡೇಟ್: ಡೆಲ್ಲಿ ವಿರುದ್ಧದ ಪಂದ್ಯಕ್ಕೆ ಇಬ್ಬರು ಸ್ಟಾರ್ ಆಟಗಾರರು ಡೌಟ್?

Latest2 hours ago

ಬಿಗಿ ಭದ್ರತೆಯ ನಡುವೆಯೂ ಟ್ರಂಪ್ ಪಾರ್ಟಿಗೆ ಅತಿಥಿಯಂತೆ ಬಂದಿದ್ದ ದಾಳಿಕೋರ! ಸೀಕ್ರೆಟ್ ಸರ್ವಿಸ್ ಕಣ್ಣು ತಪ್ಪಿಸಿದ್ದು ಹೇಗೆ?

ಕರ್ನಾಟಕ3 hours ago

ಹುಬ್ಬಳ್ಳಿಯಲ್ಲಿ ವಾರದಲ್ಲಿ ಮೂರನೇ ಬಾರಿ ವಿಮಾನ ಲ್ಯಾಂಡಿಂಗ್ ಸಮಸ್ಯೆ; ಕೂದಲೆಳೆ ಅಂತರದಲ್ಲಿ ಪಾರಾದ ಪ್ರಯಾಣಿಕರು

Latest3 hours ago

ದೆಹಲಿ ಏರ್‌ಪೋರ್ಟ್‌ನಲ್ಲಿ ಅಪಘಾತ: ಟೇಕಾಫ್ ಆಗುವಾಗ ಸ್ವಿಸ್ ಏರ್ ವಿಮಾನದ ಎಂಜಿನ್‌ನಲ್ಲಿ ಬೆಂಕಿ; ಆರು ಮಂದಿಗೆ ಗಾಯ!

Latest20 hours ago

ಮಹಿಳಾ ಮೀಸಲಾತಿ ವಿರೋಧಿಸಿದ ಕಾಂಗ್ರೆಸ್‌ ವಿರುದ್ಧ ಸಚಿವೆ ಶೋಭಾ ಕರಂದ್ಲಾಜೆ ಆಕ್ರೋಶ

Latest21 hours ago

ಟೆಹರಾನ್‌ನಲ್ಲಿ ವಿಮಾನ ಹಾರಾಟ ಪುನರಾರಂಭ: ಪಾಕ್‌ಗೆ ಆಗಮಿಸಿದ ಇರಾನ್‌ ನಿಯೋಗ: ಯುದ್ಧದ ಅಂತ್ಯದ ಮುನ್ಸೂಚನೆಯೇ ?

Latest22 hours ago

ಪರಮಾಣು ಶಸ್ತ್ರಾಸ್ತ್ರಗಳು ಶಾಂತಿಯ ಉದ್ದೇಶಕ್ಕೆ ಬಳಕೆಯಾಗಲಿ: ವಿಶ್ವಸಂಸ್ಥೆ ಕಳಕಳಿ

Latest23 hours ago

ರಾಜಕುಮಾರ್‌ ಸಮಾಧಿಗೆ ಭೂಮಿ: ವಿವಾದ ಹುಟ್ಟು ಹಾಕಿದ ನಟ ಚೇತನ್‌ ವಿರುದ್ಧ ಅಭಿಮಾನಿಗಳ ಆಕ್ರೋಶ; ದೂರು ದಾಖಲು

Latest23 hours ago

ಯೋಗೇಶ್‌ ಗೌಡ ಕೊಲೆ ಪ್ರಕರಣ: ಅನರ್ಹತೆ ಭೀತಿ; ಶಿಕ್ಷೆ ರದ್ದುಕೋರಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಶಾಸಕ ವಿನಯ್‌ ಕುಲಕರ್ಣಿ

Latest24 hours ago

ಕಲಬುರಗಿ ಜಿಲ್ಲೆಯ ಮಕ್ಕಳನ್ನು ಅವಮಾನಿಸಬೇಡಿ, ಅವರೂ ಬುದ್ದಿವಂತರು; ಬಿಜೆಪಿ ಮುಖಂಡರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌