Terrorists in Bengaluru : ಕಿರಾತಕರಿಗೆ ಲಷ್ಕರ್‌ ನಂಟು; ಇವರ ಹಿಂದಿದ್ದಾನೆ 2008ರ ‌Bangalore Blast ಕಿಂಗ್‌ಪಿನ್ - Vistara News

ಕರ್ನಾಟಕ

Terrorists in Bengaluru : ಕಿರಾತಕರಿಗೆ ಲಷ್ಕರ್‌ ನಂಟು; ಇವರ ಹಿಂದಿದ್ದಾನೆ 2008ರ ‌Bangalore Blast ಕಿಂಗ್‌ಪಿನ್

Terrorists in Bengaluru : ಬೆಂಗಳೂರಿನಲ್ಲಿ ಬಂಧಿತರಾದ ಐವರು ಉಗ್ರರಿಗೆ ಲಷ್ಕರ್‌ ಸಂಬಂಧ ಇರುವುದು ಬಯಲಾಗಿದೆ. ಹಾಗಿದ್ದರೆ ಇವರ ಹಿಂದಿರುವ ದುಷ್ಟ ಶಕ್ತಿ ಯಾವುದು?

VISTARANEWS.COM


on

T Nazir and arrested terrorists
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜಧಾನಿಯಲ್ಲಿ ದೊಡ್ಡ ಮಟ್ಟದ ಸ್ಫೋಟ (Blast in Bangalore) ನಡೆಸಲು ಸಂಚು ನಡೆಸುತ್ತಿದ್ದ ಐವರು ಶಂಕಿತ ಉಗ್ರರನ್ನು (Terrorists in Bengaluru) ಬೆಂಗಳೂರಿನ ಸಿಸಿಬಿ ಪೊಲೀಸರು (Bangalore CCB Police) ಬಂಧಿಸುವ ಮೂಲಕ ದೊಡ್ಡ ಅಪಾಯವನ್ನು ತಪ್ಪಿಸಿದ್ದಾರೆ. ಈ ಐವರು ಉಗ್ರರ ಚಟುವಟಿಕೆಗಳು ಮತ್ತು ರೌಡಿಶೀಟರ್‌ಗಳಾಗಿದ್ದ ಅವರು ಭಯಾನಕ ಉಗ್ರರಾಗಿ ಬದಲಾದ ಬಗೆ ಆತಂಕ ಹುಟ್ಟಿಸುತ್ತಿದೆ. ಅವರು ಈಗ ಸಾಮಾನ್ಯರಲ್ಲ. ಯಾಕೆಂದರೆ, ಅವರ ಹಿಂದೆ ಕುಖ್ಯಾತ ಉಗ್ರ ಸಂಘಟನೆ ಲಷ್ಕರೆ ತಯ್ಬಾ (Lashkar E Toiba) ಇದೆ ಎಂಬ ಅಂಶ ಬಯಲಾಗಿದೆ. ಅವರಿಗೆ ಲಷ್ಕರ್‌ ಜತೆ ಸಂಪರ್ಕ ಕುದುರಿಸಿದ್ದು ಟಿ. ನಝೀರ್‌. ಅವನು ಸಾಮಾನ್ಯನಲ್ಲ. 2008ರಲ್ಲಿ ನಡೆದ ಬೆಂಗಳೂರು ಸರಣಿ ಬಾಂಬ್‌ ಸ್ಫೋಟದ ರೂವಾರಿ. ಪ್ರಸಕ್ತ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಈ ನಝೀರ್‌ನೇ ಈ ಎಲ್ಲ ಕೃತ್ಯಗಳ ಹಿಂದಿರುವ ಮಾಸ್ಟರ್‌ ಮೈಂಡ್‌. ಅವನಿಗೆ ಬೆಂಬಲವಾಗಿ ನಿಂತವನು ಮೊಹಮ್ಮದ್‌ ಜುನೈದ್‌.

2008ರಲ್ಲಿ ನಡೆದಿತ್ತು ಬೆಂಗಳೂರು ಸ್ಫೋಟ

ಎಲ್ಲರಿಗೂ ಗೊತ್ತಿರುವ ಹಾಗೆ 2008ರ ಜುಲೈ 25 ರಂದು ಬೆಂಗಳೂರಲ್ಲಿ ಸೀರಿಯಲ್ ಬಾಂಬ್ ಬ್ಲಾಸ್ಟ್ (2008 Bangalore Blast) ಸಂಭವಿಸಿತ್ತು. ಬೆಂಗಳೂರಿನ 9 ಕಡೆಗಳಲ್ಲಿ ಲಷ್ಕರೆ ತಯ್ಬಾ ಉಗ್ರರು ಸ್ಫೋಟ ನಡೆಸಿದ್ದು ಇದರಲ್ಲಿ ಮೂವರು ಗಾಯಗೊಂಡಿದ್ದರು. 20 ಮಂದಿ ಗಾಯಗೊಂಡಿದ್ದರು.

ಮಡಿವಾಳದಿಂದ ನಾಯಂಡಹಳ್ಳಿಯವರಗೆ ಅಲ್ಲಲ್ಲಿ ಜಿಲ್ಯಾಟಿನ್‌ ಬಳಸಿ ಸ್ಫೋಟ ನಡೆಸಲಾಗಿತ್ತು.
ಮೊದಲ ಸ್ಫೋಟ: ಮಡಿವಾಳ ಬಸ್ ಸ್ಟ್ಯಾಂಡ್- ಮಧ್ಯಾಹ್ನ 1.20
ಎರಡನೇ ಸ್ಫೋಟ: ಮೈಸೂರು ರಸ್ತೆ – ಮಧ್ಯಾಹ್ನ 1-25ರ ಸಮಯ
ಮೂರನೇ ಸ್ಫೋಟ: ಆಡುಗೋಡಿ – ಮಧ್ಯಾಹ್ನ 1-40 ಸಮಯ
ನಾಲ್ಕನೇ ಸ್ಫೋಟ: ಕೋರಮಂಗಲ – ಮಧ್ಯಾಹ್ನ 2-10
ಐದನೇ ಸ್ಫೋಟ: ವಿಠಲ್ ಮಲ್ಯ ರೋಡ್ -ಮಧ್ಯಾಹ್ನ 2-25ರ ಹೊತ್ತು
ಆರನೇ ಸ್ಫೋಟ: ಲ್ಯಾಂಗ್ ಫೋರ್ಡ್ ರೋಡ್: ಮಧ್ಯಾಹ್ನ 2-35 ಸಮಯ
ಏಳನೇ ಸ್ಫೋಟ: ರಿಚ್ಮಂಡ್ ಟೌನ್ ಬಳಿ ಸ್ಫೋಟ
ಎಂಟನೆಯದ್ದು: ಫೋರಂ ಮಾಲ್ ಬಳಿ ಬಾಂಬ್ ಪತ್ತೆ
9ನೆಯದ್ದು: ನಾಯಂಡಹಳ್ಳಿ ಬಳಿ ಪತ್ತೆಯಾಗಿತ್ತು.

ಆವತ್ತು ಈ ಸ್ಫೋಟವನ್ನು ಸಂಘಟಿಸಿದ್ದು ಟಿ. ನಝೀರ್‌ ಮತ್ತು ಅಬ್ದುಲ್‌ ಸತ್ತಾರ್‌ ಎಂಬ ಲಷ್ಕರ್‌ ಉಗ್ರರು. ಇಬ್ಬರು ಕೂಡಾ ಪಿಡಿಪಿಯ ಅಬ್ದುಲ್ ನಾಸಿರ್ ಮದನಿ ಜೊತೆ ಸಂಪರ್ಕ ಹೊಂದಿದ್ದರು. ಈ ಪ್ರಕರಣದ ಪ್ರಧಾನ ಆರೋಪಿಯಾಗಿರುವ ಟಿ. ನಝೀರ್‌ ಕಳೆದ 10 ವರ್ಷಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾನೆ.

ಬಂಧಿತ ಉಗ್ರರು ಇವರು

ನಝೀರ್‌ ಜತೆ ಬಂಧಿತರ ಶಂಕಿತ ಉಗ್ರರ ಸಂಪರ್ಕ ಹೇಗೆ?

ಈಗ ಜೈಲಿನಲ್ಲಿರುವ ನಝೀರ್‌ ಈಗ ಬಂಧಿತರಾಗಿರುವ ಐದು ಮಂದಿ ಶಂಕಿತ ಉಗ್ರರನ್ನು ತರಬೇತಿ ನೀಡಿ ಸ್ಫೋಟಕ್ಕೆ ಸಜ್ಜುಗೊಳಿಸಿದ್ದು ಹೇಗೆ ಎನ್ನುವುದು ಇಂಟರೆಸ್ಟಿಂಗ್‌ ಕಥೆ.

2019ರ ಅಕ್ಟೋಬರ್‌ 9ರಂದು ಬೆಂಗಳೂರಿನ ಬೆನ್ಸನ್‌ ಟೌನ್‌ ನಿವಾಸಿಯಾಗಿರುವ ನಿಸಾರ್‌ ಅಹಮದ್‌ ಅವರ ಪುತ್ರ ನೂರ್‌ ಅಹಮದ್‌, ಅವನ ಗೆಳೆಯರಾದ ಮುದಸ್ಸರ್‌ ಮತ್ತು ಕಾಳು ಎಂಬಾತನ ಅಪಹರಣ ನಡೆಯುತ್ತದೆ. ಯಾವುದೇ ಕೆಲಸ ಮಾಡದೆ ಮನೆಗೆ ಭಾರವಾಗಿದ್ದ ನೂರ್‌ ಅಹಮದ್‌ ಮತ್ತು ಆತನ ಗೆಳೆಯರನ್ನು ದೇವೇ ಗೌಡ ರಸ್ತೆಯ ವಿಕೇರ್‌ ಆಸ್ಪತ್ರೆಯ ಮುಂಭಾಗದಿಂದ ಕಾರಿನಲ್ಲಿ ಅಪಹರಣ ಮಾಡಲಾಗಿತ್ತು. ಸ್ವಲ್ಪವೇ ಹೊತ್ತಿನಲ್ಲಿ ನೂರ್‌ ಅಹಮದ್‌ನ ಕೊಲೆ ನಡೆದಿತ್ತು.

ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು 21 ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಅದರಲ್ಲಿ ಪ್ರಮುಖರೇ ಆರ್‌ಟಿ ನಗರ ನಿವಾಸಿ ಮೊಹಮ್ಮದ್‌ ಜುನೇಡ್‌, ಸುಲ್ತಾನ್‌ಪಾಳ್ಯದ ಸೈಯ್ಯದ್ ಸುಹೇಲ್‌ ಖಾನ್‌, ಕೊಡಿಗೆಹಳ್ಳಿ ದೇವಿ ನಗರದ ಮಹಮ್ಮದ್ ಉಮ್ಮರ್, ಕೊಡಿಗೆ ಹಳ್ಳಿ ಭದ್ರಪ್ಪ ಲೇಔಟ್‌ನ ಜಾಹಿದ್ ತಬ್ರೈಜ್‌, ಆರ್‌ಟಿ ನಗರ ಮೇನ್‌ರೋಡ್‌ನ ದಿಣ್ಣೂರಿನ ಸೈಯ್ಯದ್ ಮುದಾಸ್ಸಿರ್‌ ಪಾಷಾ. ಇವರ ಜತೆಗೆ ಇನ್ನೂ 15 ಮಂದಿ ಜೈಲು ಸೇರಿದ್ದರು.

ಹೀಗೆ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಜುನೈದ್‌ ಮತ್ತು ಟೀಮಿಗೆ ಪರಿಚಯವಾದವನೇ ಟಿ. ನಝೀರ್‌. ಉದ್ದಕ್ಕೆ ಗಡ್ಡ ಬಿಟ್ಟುಕೊಂಡು ಜೈಲಿನಲ್ಲಿದ್ದ ಅಪರಾಧಿ, ವಿಚಾರಣಾಧೀನ ಕೈದಿಗಳ ಜತೆ ಸಂಪರ್ಕ ಸಾಧಿಸುತ್ತಿದ್ದ. ಹಾಗೆ ಅವನ ಸಂಪರ್ಕ ಸಿಕ್ಕವನೇ ಮೊಹಮ್ಮದ್‌ ಜುನೈದ್‌. ಟಿ. ನಝೀರ್‌ ಜುನೈದ್‌ನ ಬ್ರೇನ್‌ ವಾಷ್‌ ಮಾಡಿ ಉಗ್ರ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಪ್ರೇರೇಪಿಸಿದ್ದ. ಅದುವರೆಗೆ ಕೇವಲ ರೌಡಿಸಂ, ಕೊಲೆ ಮೊದಲಾದ ಸ್ಥಳೀಯ ಸಂಗತಿಗಳಲ್ಲಿ ಕ್ರಿಮಿನಲ್‌ ಎನಿಸಿಕೊಂಡಿದ್ದ ಜುನೈದ್‌ನ ತಲೆಯಲ್ಲಿ ಮೊದಲ ಬಾರಿಗೆ ಧಾರ್ಮಿಕ ದ್ವೇಷ ಮೊಳೆತಿತ್ತು. ಈ ಜುನೇದ್‌ ಆಗಲೇ ಜೈಲಿನಲ್ಲಿರುವ ತನ್ನ ಜತೆಗಾರರಲ್ಲಿ ಈ ಧರ್ಮ ದ್ವೇಷದ ಬೀಜವನ್ನು ಬಿತ್ತಲು ಶುರು ಮಾಡಿದ್ದ. ಕೆಲವು ಸಂದರ್ಭದಲ್ಲಿ ಈ ಆರೋಪಿಗಳಿಗೂ ನಝೀರ್‌ ಸಂಪರ್ಕ ಸಿಕ್ಕಿತ್ತಾದರೂ ಜುನೇದ್‌ನ ಸಂಪರ್ಕ ಕೊಂಡಿಯಾಗಿದ್ದ.

ಆಗಲೇ ನಜೀರ್‌ ಬಾಂಬ್‌ ತಯಾರಿ ಹೇಗೆ, ಪರಿಕರಗಳನ್ನು ಎಲ್ಲಿಂದ ತರಬೇಕು, ಧರ್ಮದ್ವೇಷದ ಉದ್ದೇಶವೇನು? ಅದರಿಂದ ಪರಲೋಕದಲ್ಲಿ ಸಿಗುವ ಸವಲತ್ತುಗಳೇನು ಎಂದೆಲ್ಲ ವಿವರಿಸಿ ಅವರ ಮನಗೆದ್ದಿದ್ದ. ಹೀಗಾಗಿ ಅವರೆಲ್ಲರ ಒಳಗೊಂದು ದ್ವೇಷದ ಕಿಡಿ ಹೊತ್ತಿಕೊಂಡಿತ್ತು.

ಅವರೆಲ್ಲ ಜೈಲಿನಿಂದ ಹೊರಗೆ ಬಂದಿದ್ದರು

ಈ ನಡುವೆ, ನೂರ್‌ ಮಹಮ್ಮದ್‌ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಜಾಮೀನು ಸಿಕ್ಕಿತ್ತು. ಹೀಗಾಗಿ ಜುನೇದ್‌ ಸಹಿತ ಅವರೆಲ್ಲರೂ ಜೈಲಿನಿಂದ ಹೊರಬಂದು ತಮ್ಮ ತಮ್ಮ ಕೆಲಸಗಳಲ್ಲಿ ತೊಡಗಿದ್ದರು. ಹೆಚ್ಚಿನವರು ಮೆಕ್ಯಾನಿಕ್‌ ಕೆಲಸಗಾರರು. ಈ ನಡುವೆ ಜುನೇದ್‌ 2020ರಲ್ಲಿ ರಕ್ತಚಂದನ ಕಳವು ಪ್ರಕರಣದಲ್ಲಿ ಮತ್ತೊಮ್ಮೆ ಜೈಲು ಸೇರಿದ್ದಾನೆ. ಆಗ ನಝೀರ್‌ ಮತ್ತು ಅತನ ಸಂಪರ್ಕ ಇನ್ನಷ್ಟು ಗಾಢವಾಗಿದೆ. ಈ ಪ್ರಕರಣದಲ್ಲಿ ಕೂಡಾ ಆತ ಜಾಮೀನು ಪಡೆದು ಹೊರಗೆ ಬಂದಿದ್ದಾನೆ. ಆದರೆ, ನಝೀರ್‌ನೊಂದಿಗಿನ ಸಂಪರ್ಕ ಮುಂದುವರಿದಿತ್ತು.

ಜೈಲಿನಿಂದ ಹೊರಬಂದವನು ಕಣ್ಮರೆ

ಹೀಗೆ ಜಾಮೀನು ಪಡೆದು ಹೊರಗೆ ಬಂದಿದ್ದ ಜುನೇದ್‌ ಮತ್ತೆ ಯಾರಿಗೂ ಸಿಕ್ಕಿಲ್ಲ. ಕಣ್ಮರೆಯಾದ ಆತ ಈಗ ವಿದೇಶದಲ್ಲಿದ್ದಾನೆ ಎಂದು ಪೊಲೀಸರು ಹೇಳುತ್ತಾರೆ. ಈ ನಡುವೆ, ಜುನೈದ್‌ ಟಿ. ನಝೀರ್‌ ಸಹಕಾರದೊಂದಿಗೆ ಲಷ್ಕರೆ ತಯ್ಬಾ ಸಂಘಟನೆಯ ಜತೆ ಸಂಪರ್ಕ ಸಾಧಿಸಿದ್ದಾನೆ.

ಇತ್ತ ಜುನೇದ್‌ ನೂರ್‌ ಮಹಮ್ಮದ್‌ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ಜೈಲು ಸೇರಿ, ಅಲ್ಲಿ ಒಂದಿಷ್ಟು ಬ್ರೇನ್‌ ವಾಷ್‌ ಆಗಿದ್ದ ತನ್ನ ಹಳೆ ಟೀಮ್‌ನ್ನು ಒಂದುಗೂಡಿಸಲು ಪ್ಲ್ಯಾನ್‌ ಮಾಡಿದ್ದ. ಅವನ ಬಲೆಗೆ ಕೆಲವರು ಮಂದಿ ಸಿಕ್ಕಿದ್ದವರು. ಅವರೇ ಈಗ ಪೊಲೀಸರಿಂದ ಬಂಧನಕ್ಕೆ ಒಳಗಾಗಿರುವ 15 ಮಂದಿ ಶಂಕಿತ ಉಗ್ರರು.

ಈ ಐವರು ಬೆಂಗಳೂರಿನ ನಿವಾಸಿಗಳೇ ಆಗಿದ್ದರೂ ಒಂದೇ ಕಡೆ ವಾಸ ಮಾಡಬೇಕು ಎಂದು ಸೂಚನೆ ಕೊಟ್ಟವನು ಇದೇ ಜುನೈದ್‌. ಈ ಐವರಿಗೆ ಬೆಂಗಳೂರಿನಲ್ಲಿ ಬಾಂಬ್‌ ಸ್ಫೋಟ ನಡೆಸಬೇಕಾದ ಜಾಗ, ಯಾವ ರೀತಿ ನಡೆಸಬೇಕು ಎಂಬುದರಿಂದ ಹಿಡಿದು ಅದಕ್ಕೆ ಬೇಕಾದ ಕಚ್ಚಾ ಸಾಮಗ್ರಿಗಳನ್ನು ಹಂತ ಹಂತವಾಗಿ ಒದಗಿಸಿದ್ದ.

ಸುಲ್ತಾನ್‌ ಪಾಳ್ಯದಲ್ಲಿ ವಾಸವಾಗಿದ್ದ ಈ ಐವರ ಮನೆಗಳಿಗೆ ಪೊಲೀಸರು ದಾಳಿ ಮಾಡಿ 7 ಕಂಟ್ರಿಮೇಡ್ ಪಿಸ್ತೂಲುಗಳು, 45 ಜೀವಂತ ಗುಂಡುಗಳು, ವಾಕಿ ಟಾಕಿ ಸೆಟ್ಸ್, ಒಂದು ಡ್ಯಾಗರ್‌ ಮತ್ತು 12 ಮೊಬೈಲ್‌ ಫೋನ್‌ಗಳನ್ನು ವಶಪಡಿಸಿಕೊಂಡಿದ್ದರು. ಈ ಎಲ್ಲ ವಸ್ತುಗಳನ್ನು ಇವರಿಗೆ ಒದಗಿಸಿದ್ದು ಜುನೇದ್‌. ಜುನೇದ್‌ ಕಳೆದ ಮೂರು ತಿಂಗಳಿನಿಂದ ಹಣ, ಕಚ್ಚಾ ವಸ್ತುಗಳನ್ನು ಪಾರ್ಸೆಲ್‌ ಮಾಡುತ್ತಿದ್ದ.

ಈ ಎಲ್ಲ ಸಂಶಯಾಸ್ಪದ ಚಟುವಟಿಕೆಗಳು ಯಾರಿಗೂ ಗೊತ್ತಾಗುವುದಿಲ್ಲ ಎಂದು ಅಪರಾಧಿಗಳು ಭಾವಿಸಿದ್ದರು. ಆದರೆ, ದೂರದಿಂದಲೇ ಒಂದು ಕಣ್ಣು ಈ ಎಲ್ಲ ಚಟುವಟಿಕೆಗಳನ್ನು ಗಮನಿಸುತ್ತಿತ್ತು. ಅದುವೇ ಕೇಂದ್ರದ ಗುಪ್ತಚರ ಇಲಾಖೆ.

ಬೆಂಗಳೂರಿನ ಸುಲ್ತಾನ್‌ ಪಾಳ್ಯದಲ್ಲಿ ಇಂಥ ವಿದ್ಯಮಾನವೊಂದು ನಡೆಯುತ್ತಿದೆ ಗಮನಿಸಿ ಎಂಬ ಸಂದೇಶ ಬೆಂಗಳೂರಿನ ಸಿಸಿಬಿ ಪೊಲೀಸರಿಗೆ ಬಂದಿತ್ತು. ಇದನ್ನು ಆಧರಿಸಿ ಕಳೆದ ಕೆಲವು ದಿನಗಳಿಂದ ಸಿಸಿಬಿ ಪೊಲೀಸರು ಮಫ್ತಿಯಲ್ಲಿ ಈ ಭಾಗದಲ್ಲಿ ಓಡಾಡಿದ್ದರು. ಅಲ್ಲಿನ ಒಂದು ಅಂಗಡಿಯಿಂದ ಹಾರ್ಡ್‌ ಡಿಸ್ಕ್‌ ಒಂದನ್ನು ವಶಪಡಿಸಿಕೊಂಡಿದ್ದರು. ಮನೆಗೆ ಹೋಗಿ ಯಾರೆಲ್ಲ ಇದ್ದಾರೆ ಎಂದು ಮಾತನಾಡಿಸಿ ಬಂದಿದ್ದರು. ಕೊನೆಗೆ ಮಂಗಳವಾರ ರಾತ್ರಿ ಬಹುತೇಕ ಎಲ್ಲರೂ ಜತೆಯಾಗಿರುವಾಗ ನುಗ್ಗಿಯೇ ಬಿಟ್ಟರು. ಹೀಗೆ ದೊಡ್ಡದೊಂದು ದುಷ್ಕ್ರಮಣ ಕೃತ್ಯ ನಡೆಸುವ ಸಂಚು ವಿಫಲಗೊಂಡಿತು.

ಇದೀಗ ಪೊಲೀಸರು ತಲೆಮರೆಸಿಕೊಂಡಿರುವ ಜುನೇದ್‌ಗಾಗಿ ಹುಡುಕಾಟ ಶುರು ಮಾಡಿದ್ದಾರೆ, ಜತೆಗೆ ಜೈಲಿನಲ್ಲಿರುವ ನಝೀರ್‌ನನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆಗಳಿವೆ.

ಇದನ್ನೂ ಓದಿ: Terrorists in Bengaluru : ಉಗ್ರರು ಇದ್ದದ್ದು ಹಿಂದುಗಳ ಮನೆಯಲ್ಲಿ; ತಾಯಿ, ತಂಗಿಯನ್ನು ತೋರಿಸಿ ಮನೆ ಪಡೆದಿದ್ದ ಉಗ್ರ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಮಳೆ

Karnataka Weather : ಕರಾವಳಿ-ಮಲೆನಾಡಿನಲ್ಲಿ ಮುಂದುವರಿಯಲಿದೆ ಮಳೆ ಅಬ್ಬರ- ಇರಲಿ ಎಚ್ಚರ

Karnataka Weather Forecast : ರಾಜ್ಯಾದ್ಯಂತ ಮಳೆ (Rain News) ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ವಾರಾಂತ್ಯದಲ್ಲಿ 7 ಜಿಲ್ಲೆಗಳಿಗೆ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ (Karnataka Weather Forecast) ಸಾಧ್ಯತೆಯಿದೆ. ಮಲೆನಾಡಿನಲ್ಲಿ ಹಗುರದಿಂದ ಮಧ್ಯಮದೊಂದಿಗೆ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನ ಚದುರಿದಂತೆ ಹಗುರದಿಂದ ಮಳೆಯಾಗುವ (Rain News) ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ ಹಾಗೂ ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಮಧ್ಯಮದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ ಸೇರಿದಂತೆ ತುಮಕೂರು, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಕೋಲಾರದಲ್ಲೂ ಮಳೆಯಾಗಲಿದೆ.

ಇದನ್ನೂ ಓದಿ: Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

ಮಲೆನಾಡು ಜಿಲ್ಲೆಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನದಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯಲ್ಲಿ ವ್ಯಾಪಕ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗಲಿದೆ.

ರಾಜಧಾನಿ ಬೆಂಗಳೂರಿನಲ್ಲಿ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಆರೆಂಜ್‌ ಅಲರ್ಟ್‌

ಗುಡುಗು ಜತೆಗೆ ಭಾರಿ ಮಳೆಯೊಂದಿಗೆ 40-50 ಕಿ.ಮೀ ಗಾಳಿಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉತ್ತರ ಕನ್ನಡ

Uttara Kannada News: ಶಿರೂರು ಗುಡ್ಡಕುಸಿತ ಸಂತ್ರಸ್ತರಿಗೆ ರಾಮಚಂದ್ರಾಪುರ ಮಠದ ಸಹಾಯಹಸ್ತ

Uttara Kannada News: ಶಿರೂರು ಗುಡ್ಡಕುಸಿತದ ಸಂದರ್ಭದಲ್ಲಿ ಗಂಗಾವಳಿ ನದಿ ನೀರು ಅಪ್ಪಳಿಸಿ ಏಳು ಮನೆಗಳು ಸಂಪೂರ್ಣ ಕೊಚ್ಚಿಕೊಂಡು ಹೋಗಿದ್ದು, ಸಂತ್ರಸ್ತ ಕುಟುಂಬಗಳಿಗೆ ರಾಮಚಂದ್ರಾಪುರ ಮಠ ಸಹಾಯಹಸ್ತ ಚಾಚಿದೆ. ಶ್ರೀಮಠದ ನಿಯೋಗವು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಸಂತ್ರಸ್ತರಿಗೆ ಸಾಂತ್ವನ ಹೇಳಿ, ನಗದು, ಆಹಾರಧಾನ್ಯದ ಕಿಟ್‌ಗಳನ್ನು ಸಂತ್ರಸ್ತರ ಕುಟುಂಬಗಳಿಗೆ ವಿತರಿಸಿತು.

VISTARANEWS.COM


on

assistance from Ramchandrapur Matha for Shiruru landslide victims
Koo

ಗೋಕರ್ಣ: ಶಿರೂರು ಗುಡ್ಡ ಕುಸಿತದ ಸಂದರ್ಭದಲ್ಲಿ ಗಂಗಾವಳಿ ನದಿ ನೀರು ಅಪ್ಪಳಿಸಿ ಏಳು ಮನೆಗಳು ಸಂಪೂರ್ಣ ಕೊಚ್ಚಿಕೊಂಡು ಹೋಗಿದ್ದು, ಸಂತ್ರಸ್ತ ಕುಟುಂಬಗಳಿಗೆ ರಾಮಚಂದ್ರಾಪುರ ಮಠ ಸಹಾಯಹಸ್ತ (Uttara Kannada News) ಚಾಚಿದೆ.

ಗೋಕರ್ಣದ ಅಶೋಕೆಯಲ್ಲಿ ಚಾತುರ್ಮಾಸ್ಯ ವ್ರತ ಕೈಗೊಂಡಿರುವ ಶ್ರೀರಾಘವೇಶ್ವರ ಭಾರತೀಸ್ವಾಮೀಜಿಯವರು ಶ್ರೀಮಠದ ನಿಯೋಗವನ್ನು ಘಟನಾ ಸ್ಥಳಕ್ಕೆ ಅಗತ್ಯ ನೆರವಿನ ವಸ್ತುಗಳೊಂದಿಗೆ ಶ್ರೀಮಠದ ನಿಯೋಗವನ್ನು ಕಳುಹಿಸಿಕೊಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ತಂಡ, ಸಂತ್ರಸ್ತರಿಗೆ ಸಾಂತ್ವನ ಹೇಳಿ, ನಗದು, ಆಹಾರಧಾನ್ಯದ ಕಿಟ್‌ಗಳನ್ನು ಸಂತ್ರಸ್ತರ ಕುಟುಂಬಗಳಿಗೆ ವಿತರಿಸಿತು.

ಇದನ್ನೂ ಓದಿ: Dengue Fever: ರಾಜ್ಯದಲ್ಲಿ ನಿಫಾ ವೈರಸ್ ಪ್ರಕರಣ ಪತ್ತೆಯಾಗಿಲ್ಲ: ದಿನೇಶ್ ಗುಂಡೂರಾವ್

ಶ್ರೀ ರಾಘವೇಶ್ವರ ಭಾರತೀಮಹಾಸ್ವಾಮೀಜಿ ಮತ್ತು ಹವ್ಯಕ ಮಹಾಮಂಡಲದ ಅಧ್ಯಕ್ಷ ಮೋಹನ ಭಾಸ್ಕರ ಹೆಗಡೆ ಮಾರ್ಗದರ್ಶನದಲ್ಲಿ ವಿವಿವಿ ಆಡಳಿತಾಧಿಕಾರಿ ಡಾ.ಪ್ರಸನ್ನ ಕುಮಾರ್, ಮಹಾಮಂಡಲ ಪ್ರಧಾನ ಕಾರ್ಯದರ್ಶಿ ಉದಯಶಂಕರ ಮಿತ್ತೂರು, ಪ್ರಾಂತ ಉಪಾಧ್ಯಕ್ಷ ಜಿ.ಎಸ್.ಹೆಗಡೆ, ಕುಮಟಾ ಮಂಡಲ ಅಧ್ಯಕ್ಷ ಸುಬ್ರಾಯ ಭಟ್ ನೇತೃತ್ವದಲ್ಲಿ ತಂಡ ಎಲ್ಲ ಸಂತ್ರಸ್ತರನ್ನು ಭೇಟಿ ಮಾಡಿ ಸಾಂತ್ವನ ಹೇಳುವ ಜತೆಗೆ ಕಾಳಜಿ ಕೇಂದ್ರಕ್ಕೂ ಭೇಟಿ ನೀಡಿ ಆಸರೆ ಪಡೆದಿರುವ 83 ಮಂದಿಯ ಊಟೋಪಚಾರಕ್ಕೆ ದಿನಸಿ ವಿತರಿಸಿದರು.

ಘಟನೆ ಬಗ್ಗೆ ರಾಘವೇಶ್ವರಭಾರತೀ ಸ್ವಾಮೀಜಿಯವರು ತೀವ್ರ ಆಘಾತ ವ್ಯಕ್ತಪಡಿಸಿದ್ದು, ಶ್ರೀಗಳು ಚಾತುರ್ಮಾಸ್ಯ ವ್ರತಾಚರಣೆಯಲ್ಲಿರುವುರಿಂದ ಎಲ್ಲೂ ಹೊರಹೋಗುವಂತಿಲ್ಲ. ಆದರೆ ಸಂತ್ರಸ್ತರ ಸಂಕಷ್ಟಗಳಿಗೆ ಸ್ಪಂದಿಸಿ ನಿಯೋಗವನ್ನು ಕಳುಹಿಸಿಕೊಟ್ಟಿದ್ದಾರೆ. ಸಂತ್ರಸ್ತರು ಸ್ಥೈರ್ಯ ಕಳೆದುಕೊಳ್ಳುವ ಅಗತ್ಯವಿಲ್ಲ. ಶ್ರೀಮಠ ಸದಾ ನಿಮ್ಮ ಬೆಂಬಲಕ್ಕಿದೆ ಎಂಬ ಸ್ವಾಮೀಜಿಯವರ ಅಭಯವನ್ನು ಸಂತ್ರಸ್ತರಿಗೆ ತಿಳಿಸಲಾಯಿತು.

ಪ್ರತಿ ಕುಟುಂಬಗಳಿಗೆ ತಕ್ಷಣಕ್ಕೆ 5 ಸಾವಿರ ರೂಪಾಯಿ ನಗದು, ಅಕ್ಕಿ, ತರಕಾರಿ, ಸಕ್ಕರೆ, ತೊಗರಿಬೇಳೆ, ತೆಂಗಿನಕಾಯಿ, ಶ್ರೀಗಳ ಮಂತ್ರಾಕ್ಷತೆ, ರಾಮದೇವರ ಪ್ರಸಾದ ಇದ್ದ ಕಿಟ್‌ಗಳನ್ನು ವಿತರಿಸಲಾಯಿತು.

ಇದನ್ನೂ ಓದಿ: Wonderla Offer: ವಂಡರ್‌ಲಾದಿಂದ ವಿಶೇಷ ಆಫರ್‌; 1 ಟಿಕೆಟ್‌ ಖರೀದಿಸಿದರೆ ಮತ್ತೊಂದು ಟಿಕೆಟ್‌ ಫ್ರೀ!

ಸಂತ್ರಸ್ತರನ್ನು ಗುರುತಿಸುವಲ್ಲಿ ಮತ್ತು ನೆರವನ್ನು ಅರ್ಹರಿಗೆ ತಲುಪಿಸುವಲ್ಲಿ ತಾಲೂಕು ಪಂಚಾಯ್ತಿ ಸದಸ್ಯ ಮಹೇಶ್ ಶೆಟ್ಟಿ ನೇತೃತ್ವದ ತಂಡ ಸಹಕರಿಸಿತು. ಸಗಡಗೇರಿ ಪಂಚಾಯಿತಿ ಸದಸ್ಯ ಕೃಷ್ಣಗೌಡ, ಜಗದೀಶ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ನಾಗೇಶ್ ಗೌಡ, ಗೋಕರ್ಣ ಗ್ರಾಮಪಂಚಾಯಿತಿ ಅಧ್ಯಕ್ಷೆ ಸುಮನಾ ಗೌಡ, ಹನೇಹಳ್ಳಿ ಪಂಚಾಯಿತಿ ಅಧ್ಯಕ್ಷ ಸಣ್ಣುಗೌಡ, ಹಾಲಕ್ಕಿ ಸಮಾಜದ ಮುಖಂಡರಾದ ಶಂಕರಗೌಡ ಹೆಗ್ರೆ, ನಾಗೇಶ್‌ಗೌಡ ಕುಡ್ಲೆ, ಶ್ರೀಮಠದ ಪ್ರತಿನಿಧಿಗಳಾದ ಎಸ್.ವಿ.ಹೆಗಡೆ, ಗೋಪಾಲಕೃಷ್ಣ ಹೆಗಡೆ ಮತ್ತಿತರರು ನಿಯೋಗದಲ್ಲಿದ್ದರು.

Continue Reading

ಕರ್ನಾಟಕ

Bengaluru News: ಕನ್ನಡ-ಮಲೆಯಾಳಿ ಸಾಹಿತ್ಯ ಸಮ್ಮೇಳನ ಆಯೋಜಿಸಿ: ಸ್ಪೀಕರ್‌ ಯು.ಟಿ.ಖಾದರ್‌ ಸೂಚನೆ

Bengaluru News: ಕನ್ನಡ ಕಲಿಕಾ ತರಗತಿಗಳಲ್ಲಿ ಕನ್ನಡ ಕಲಿತ ಮಲೆಯಾಳಿ ಭಾಷಿಕರಿಗಾಗಿ ಹಾಗೂ ಕೇರಳದಲ್ಲಿ ನೆಲೆಸಿರುವ ಕನ್ನಡಿಗರಿಗಾಗಿ ಕನ್ನಡ ಮತ್ತು ಮಲೆಯಾಳಿ ಭಾಷಿಕರ ಸಾಹಿತ್ಯ ಸಮ್ಮೇಳನ ಆಯೋಜಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮುಂದಾಗಬೇಕು ಎಂದು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ತಿಳಿಸಿದ್ದಾರೆ.

VISTARANEWS.COM


on

Inauguration of Kannada learning classes for Malayali speakers
Koo

ಬೆಂಗಳೂರು: ಕನ್ನಡ ಕಲಿಕಾ ತರಗತಿಗಳಲ್ಲಿ ಕನ್ನಡ ಕಲಿತ ಮಲೆಯಾಳಿ ಭಾಷಿಕರಿಗಾಗಿ ಹಾಗೂ ಕೇರಳದಲ್ಲಿ ನೆಲೆಸಿರುವ ಕನ್ನಡಿಗರಿಗಾಗಿ ಕನ್ನಡ ಮತ್ತು ಮಲೆಯಾಳಿ ಭಾಷಿಕರ ಸಾಹಿತ್ಯ ಸಮ್ಮೇಳನ ಆಯೋಜಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮುಂದಾಗಬೇಕು ಎಂದು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್ (Bengaluru News) ತಿಳಿಸಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ವಿಕಾಸಸೌಧದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಲೆಯಾಳಿ ಭಾಷಿಕರಿಗೆ ಕನ್ನಡ ಕಲಿಕಾ ತರಗತಿಗಳ ಉದ್ಘಾಟನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ದೇಶದ ಹಾಗೂ ಸಮಾಜದ ಅಭಿವೃದ್ಧಿಯಲ್ಲಿ ಭಾಷೆ ಪ್ರಮುಖ ಪಾತ್ರ ವಹಿಸುತ್ತದೆ. ಹೆಚ್ಚು ಭಾಷೆಯನ್ನು ಕಲಿಯುವವರು ಹೆಚ್ಚು ಸಾಧನೆ, ಯಶಸ್ಸು ಪಡೆಯುತ್ತಾರೆ. ನಾವು ಬೇರೆ ರಾಜ್ಯಗಳಿಗೆ ಹೋದಾಗ ಅಲ್ಲಿನ ಭಾಷೆಗೆ ಗೌರವ ಕೊಟ್ಟು ಭಾಷೆ ಕಲಿಯಲು ಮುಂದಾಗಬೇಕು. ಕರ್ನಾಟಕ ರಾಜ್ಯದಲ್ಲಿರುವ ಮಲೆಯಾಳಿ ಭಾಷಿಕರು ಕನ್ನಡ ಭಾಷೆ ಕಲಿಯುತ್ತಿರುವುದು ನಿಮ್ಮ ವ್ಯಕ್ತಿತ್ವ, ಆತ್ಮ ವಿಶ್ವಾಸ ಹೆಚ್ಚಿಸುವ ಜತೆಗೆ ಕರ್ನಾಟಕ ರಾಜ್ಯಕ್ಕೆ ಕೊಡುಗೆ ನೀಡಲು ಮುಂದಾಗಿರುವುದು ಸಂತೋಷದ ವಿಷಯ ಎಂದು ಹೇಳಿದರು.

ಇದನ್ನೂ ಓದಿ: Wonderla Offer: ವಂಡರ್‌ಲಾದಿಂದ ವಿಶೇಷ ಆಫರ್‌; 1 ಟಿಕೆಟ್‌ ಖರೀದಿಸಿದರೆ ಮತ್ತೊಂದು ಟಿಕೆಟ್‌ ಫ್ರೀ!

ಮಲೆಯಾಳಿ ಭಾಷಿಕರಿಗೆ ಕನ್ನಡ ಕಲಿಸುವ ಕೆಲಸ ಇಲ್ಲಿಗೆ ನಿಲ್ಲಬಾರದು. ಈ ಯೋಜನೆ ಹೆಚ್ಚು ವಿಸ್ತೃತವಾಗಿ ಪ್ರತಿ ಜಿಲ್ಲೆಗಳಲ್ಲಿರುವ ಅನ್ಯಭಾಷಿಕರಿಗೆ ಕನ್ನಡ ಕಲಿಸುವ ಕೆಲಸ ಪ್ರಾಧಿಕಾರದಿಂದ ಆಗಬೇಕು. ಪ್ರಾಧಿಕಾರದಿಂದ ಆಯೋಜಿಸಿದ್ದ ಕನ್ನಡ ಕಲಿಕಾ ತರಗತಿಗಳಲ್ಲಿ ಕನ್ನಡ ಕಲಿತ ಮಲೆಯಾಳಿ ಭಾಷಿಕರಿಗಾಗಿ ಹಾಗೂ ಕೇರಳದಲ್ಲಿ ನೆಲೆಸಿರುವ ಕನ್ನಡಿಗರಿಗಾಗಿ ಕನ್ನಡ ಮತ್ತು ಮಲೆಯಾಳಿ ಭಾಷಿಕರ ಸಾಹಿತ್ಯ ಸಮ್ಮೇಳನ ಆಯೋಜಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮುಂದಾಗಬೇಕು ಎಂದು ಅವರು ಸಲಹೆ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ ಎಸ್. ತಂಗಡಗಿ ಮಾತನಾಡಿ, ಜೀವನ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಭಾಷೆ ತುಂಬಾ ಪ್ರಮುಖವಾದುದು. ಹೆಚ್ಚು ಭಾಷೆ ಕಲಿತಷ್ಟು ವ್ಯಕ್ತಿತ್ವ ವಿಕಾಸನ ಆಗುವುದರೊಂದಿಗೆ ನಮ್ಮಲ್ಲಿನ ಜ್ಞಾನವೂ ಹೆಚ್ಚಾಗುತ್ತದೆ.

ಬೇರೆ ಬೇರೆ ಭಾಷೆಗಳಲ್ಲಿರುವ ಒಳ್ಳೆಯ ವಿಚಾರಗಳು ಕನ್ನಡಿಗರಿಗೆ ಪರಿಚಯವಾಗಬೇಕೆಂಬ ಉದ್ದೇಶದಿಂದ ಹಲವು ಪುಸ್ತಕಗಳನ್ನು ಅನುವಾದ ಮಾಡಿಸಲಾಗಿದೆ. ಕನ್ನಡ ಭಾಷೆಯಿಂದ ಮಲೆಯಾಳಿ ಭಾಷೆಗೆ ಮಲೆಯಾಳಿ ಭಾಷೆಯಿಂದ ಕನ್ನಡ ಭಾಷೆಗೆ ಹೆಚ್ಚೆಚ್ಚು ಕೃತಿಗಳು ಅನುವಾದವಾಗಬೇಕು. ಈ ನಿಟ್ಟಿನಲ್ಲಿ ಮುಂಬರುವ ದಿನಗಳಲ್ಲಿ ಕನ್ನಡ ಮತ್ತು ಮಲೆಯಾಳಿ ಭಾಷಿಕರ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗುವುದು ಎಂದರು.

ಕನ್ನಡ ಅಭಿವೃದ್ಧಿ ಪ್ರಾಧಿಕರಾದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಮಾತನಾಡಿ, ಭಾರತದ ಒಕ್ಕೂಟ ವ್ಯವಸ್ಥೆ ಬಹಳ ಬಲಿಷ್ಠವಾಗಿ ಉಳಿಯಲು ರಾಜ್ಯಗಳ ಭಾಷೆಗಳು ಪ್ರಮುಖವಾದುದು. ಭಾಷೆ ದುರ್ಬಲವಾದರೆ ದೇಶದ ಒಕ್ಕೂಟ ವ್ಯವಸ್ಥೆ ದುರ್ಬಲವಾಗುತ್ತದೆ. 2011ರ ಜನಗಣತಿ ಪ್ರಕಾರ ಭಾರತದಲ್ಲಿ 19,509 ತಾಯ್ನುಡಿಗಳಿವೆ. ರಾಜ್ಯದಲ್ಲಿ 230ಕ್ಕೂ ಹೆಚ್ಚು ಭಾಷೆಗಳಿವೆ. ನಾವು ಎಲ್ಲರೂ ಸೇರಿ ರಾಜ್ಯ ಭಾಷೆಯನ್ನು ಬೆಳೆಸಬೇಕು ಅದರ ಜತೆಗೆ ಸಣ್ಣ ಭಾಷೆಗಳನ್ನು ಬೆಳೆಸಬೇಕು ಎಂದರು.

ಇದನ್ನೂ ಓದಿ: Jio Air Fiber: ಗ್ರಾಹಕರಿಗೆ ಭರ್ಜರಿ ರಿಯಾಯಿತಿ ಘೋಷಿಸಿದ ಜಿಯೊ! ಎಲ್ಲಿಯವರೆಗೆ ಈ ಆಫರ್‌?

ಕಾರ್ಯಕ್ರಮದಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸುಧಾಕರನ್ ರಾಮಂತಳ್ಳಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಸಂತೋಷ ಹಾನಗಲ್ಲ ಮತ್ತು ಮಲೆಯಾಳಂ ಮಿಷನ್ ಕೇರಳ ಸರ್ಕಾರ ಮತ್ತು ಕನ್ನಡ ಕಲಿಕಾ ಯೋಜನೆ ಸಂಚಾಲಕ ಟಾಮಿ ಜೆ. ಅಲುಂಕಲ್ ಉಪಸ್ಥಿತರಿದ್ದರು.

Continue Reading

ಕರ್ನಾಟಕ

Dog Meat: ಬೆಂಗಳೂರಿಗೆ ಬಂತು ಟನ್‌ಗಟ್ಟಲೇ ನಾಯಿ ಮಾಂಸ; ಅಬ್ದುಲ್ ರಜಾಕ್ ವಿರುದ್ಧ ಆರೋಪ!

Dog Meat: ಬೆಂಗಳೂರಿನಲ್ಲಿ ನಾಯಿ ಮಾಂಸದ ದಂಧೆ ನಡೆಯುತ್ತಿರುವ ಆರೋಪ ಕೇಳಿಬಂದಿದೆ. ಹೊರ ರಾಜ್ಯಗಳಿಂದ ಪ್ರತಿ ದಿನ ಬೆಂಗಳೂರಿಗೆ ನಾಯಿ ಮಾಂಸ ಬರುತ್ತಿದೆ ಎನ್ನಲಾಗಿದ್ದು, ಸಾವಿರಾರು ಕೆಜಿ ಶಂಕಿತ ನಾಯಿ ಮಾಂಸವನ್ನು ಮೆಜೆಸ್ಟಿಕ್‌ನಲ್ಲಿ ವಶಕ್ಕೆ ಪಡೆಯಲಾಗಿದೆ.

VISTARANEWS.COM


on

Dog meat
Koo

ಬೆಂಗಳೂರು: ರಾಜಸ್ಥಾನದಿಂದ ಬೆಂಗಳೂರಿಗೆ ನಾಯಿ ಮಾಂಸ ಸರಬರಾಜು ಆಗುತ್ತಿರುವ ಬಗ್ಗೆ ಆರೋಪಗಳು ಕೇಳಿಬಂದಿವೆ. ನಗರದ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ಸಾವಿರಾರು ಕೆಜಿ ಶಂಕಿತ ನಾಯಿ ಮಾಂಸವನ್ನು ರೈಲ್ವೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಷ್ಟ್ರ ಜಾಗೃತಿ ಸಂಘಟನೆ ಅಧ್ಯಕ್ಷ ಪುನೀತ್ ಕೆರೆಹಳ್ಳಿ ನೇತೃತ್ವದಲ್ಲಿ ಹಲವು ಹಿಂದು ಕಾರ್ಯಕರ್ತರು ದಾಳಿ ನಡೆಸಿದ ವೇಳೆ ಮಾಂಸದ ಪಾರ್ಸೆಲ್‌ಗಳಲ್ಲಿ ನಾಯಿ ಮಾಂಸ (Dog Meat) ಕಂಡುಬಂದಿದೆ. ಇದರಿಂದ ಸ್ಥಳದಲ್ಲಿ‌ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ.

ಮುಸ್ಲಿಂ ಮುಖಂಡ ಅಬ್ದುಲ್‌ ರಜಾಕ್‌ ಎಂಬುವವರಿಂದ ನಾಯಿ ಮಾಂಸ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಆದರೆ, ಈ ಆರೋಪಗಳನ್ನು ಅಬ್ದುಲ್‌ ರಜಾಕ್‌ ಅಲ್ಲಗಳೆದಿದ್ದಾರೆ. ನಾಯಿ ಮಾಂಸದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಹಿಂದು ಸಂಘಟನೆಗಳು ದಾಳಿ ಮಾಡಿದ್ದು, ಈ ವೇಳೆ ಸಾವಿರಾರು ಕೆ.ಜಿ ಮಾಂಸ ಪತ್ತೆಯಾಗಿದೆ. ಆದರೆ, ಎರಡು ದಿನಕ್ಕೊಮ್ಮೆ ಜೈಪುರದಿಂದ ಬೆಂಗಳೂರಿಗೆ ಕುರಿ ಮಾಂಸ ಬರುತ್ತದೆ. ಇವತ್ತು ಎರಡು ಸಾವಿರ ಕೆಜಿ ಮಾಂಸ ಬಂದಿದೆ. ಹನ್ನೆರಡು ವರ್ಷದಿಂದ ಈ ವ್ಯವಹಾರ ನಡೆಯುತ್ತಿದೆ. ಆಹಾರ ಇಲಾಖೆ ಅಧಿಕಾರಿಗಳು ಬೇಕಿದ್ದರೆ ಬಂದು ಚೆಕ್ ಮಾಡಲಿ ಎಂದು ಅಬ್ದುಲ್‌ ರಜಾಕ್‌ ಹೇಳಿದ್ದಾರೆ.

ಮಾಂಸದ ಪಾರ್ಸೆಲ್‌ಗಳಲ್ಲಿ ಪ್ರಾಣಿಯ ಬಾಲ ಉದ್ದವಾಗಿರೋದು ಕಂಡುಬಂದಿದ್ದರಿಂದ, ಕುರಿ ಬಾಲ ಈ ರೀತಿ ಇರುತ್ತದಾ ಎಂದು ಹಿಂದು ಕಾರ್ಯಕರ್ತರು ಪ್ರಶ್ನಿಸಿದ್ದಾರೆ. ಈ ವೇಳೆ ರಾಜಸ್ಥಾನ ಕುರಿಗಳಿಗೆ ಇದೇ ರೀತಿ ಬಾಲ ಉದ್ದವಾಗಿರುತ್ತೆ, ಅದನ್ನು ನಾಯಿ ಎನ್ನುತ್ತಿದ್ದಾರೆ ಎಂದು ಮುಸ್ಲಿಂ ಮುಖಂಡ ಹೇಳಿದ್ದಾರೆ.

ಪುನೀತ್ ಕೆರೆಹಳ್ಳಿ ಹಣ ವಸೂಲಿ ಮಾಡಲು ಈ ರೀತಿ ಮಾಡುತ್ತಿದ್ದಾರೆ. ನಾಳೆ ಈ ಬಗ್ಗೆ ಸುದ್ದಿಗೋಷ್ಠಿ ಮಾಡುತ್ತೇವೆ. ಅವರ ವಿರುದ್ಧ ದೂರು ನೀಡುತ್ತೇವೆ ಎಂದು ಅಬ್ದುಲ್‌ ರಜಾಕ್‌ ತಿಳಿಸಿದ್ದಾರೆ.

ಆಹಾರ ಸುರಕ್ಷತಾ ಅಧಿಕಾರಿಗಳ ಪರಿಶೀಲನೆ

ಸ್ಥಳಕ್ಕೆ ಆಹಾರ ಸುರಕ್ಷತೆ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. 5 ಬಾಕ್ಸ್‌ಗಳಲ್ಲಿ ಇದ್ದ ಕುರಿ ಮಾಂಸದ ಸ್ಯಾಂಪಲ್ ತೆಗೆದುಕೊಂಡಿದ್ದೇವೆ. ಮೇಲ್ನೋಟಕ್ಕೆ ಇದು ಕಳಪೆಯಾಗಿ ತೋರುತ್ತಿದೆ. ಇದನ್ನು ನಾವು ಪ್ರಯೋಗಾಲಯಕ್ಕೆ ಕಳುಹಿಸಿಕೊಡುತ್ತೇವೆ. 14 ದಿನದ ಬಳಿಕ ರಿಪೋರ್ಟ್ ಸಿಗುತ್ತದೆ ಎಂದು ಅಧಿಕಾರಿ ಸುಬ್ರಹ್ಮಣ್ಯ ತಿಳಿಸಿದ್ದಾರೆ.

ಹೋಟೆಲ್‌ಗಳಿಗೆ 700-800 ರೂಪಾಯಿಗೆ ಮಾರಾಟ

ಬೆಂಗಳೂರಿನ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದ ಮೂಲಕ ನಾಯಿ ಮಾಂಸ, ನಗರದ ವಿವಿಧ ಹೋಟೆಲ್‌ಗಳಿಗೆ ಸರಬರಾಜು ಆಗುತ್ತಿದೆ. ರಾಜಸ್ಥಾನದಿಂದ ಬೆಂಗಳೂರಿಗೆ ನಾಯಿ ಮಾಂಸ ಸಪ್ಲೈ ಆಗುತ್ತಿದೆ ಎನ್ನಲಾಗಿದೆ. ರಾಜಸ್ಥಾನದಿಂದ ಕುರಿ ಮಾಂಸ ಅಂತ ಹೇಳಿ ನಾಯಿ ಮಾಂಸವನ್ನು ತರಿಸಿ ಇಲ್ಲಿನ ಹೋಟೆಲ್‌ಗಳಿಗೆ 700-800 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ. ಇದು ಒಂದು ದೊಡ್ಡ ದಂಧೆ ಆಗಿದ್ದು, ಅಧಿಕಾರಿಗಳು, ಸಚಿವ ಜಮೀರ್ ಅಹ್ಮದ್ ಎಲ್ಲರೂ ಭಾಗಿ ಆಗಿದ್ದಾರೆ ಎಂದು ಪುನೀತ್‌ ಕೆರೆಹಳ್ಳಿ ಆರೋಪಿಸಿದ್ದಾರೆ.

ಮತ್ತೊಂದೆಡೆ ಕಳೆದೊಂದು ವರ್ಷದಿಂದ 700 ರೂ.ಗಳಿಗಿಂತ ಹೆಚ್ಚಿನ ದರಕ್ಕೆ ಕುರಿ ಹಾಗೂ ಮೇಕೆಯ ಮಟನ್ ಮಾಂಸ ಮಾರಾಟವಾಗುತ್ತಿದೆ. ಆದರೆ, ಬೆಂಗಳೂರಿನ ಶಿವಾಜಿನಗರ ಸೇರಿ ಕಡೆ ಕೆಲ ವ್ಯಾಪಾರಿಗಳು ಪ್ರತಿ ಕೆ.ಜಿ. ಮಾಂಸವನ್ನು 500 ರೂ.ಗೆ ಮಾರಾಟ ಮಾಡುತ್ತಿದ್ದಾರೆ. ಇಷ್ಟು ಕಡಿಮೆ ದರಕ್ಕೆ ಮಾಂಸ ಹೇಗೆ ಸಿಗುತ್ತೆ ಎಂದು ಅನುಮಾನಗೊಂಡ ಮುಸ್ಲಿಂ ವ್ಯಾಪಾರಿಗಳೇ ಅಧಿಕಾರಿಗಳಿಗೆ ದೂರು ನೀಡಿದ್ದರು ಎನ್ನಲಾಗುತ್ತಿದೆ. ಹೀಗಾಗಿ ಕಡಿಮೆ ದರಕ್ಕೆ ನಾಯಿ ಮಾಂಸ ತರಿಸಿಕೊಂಡು ಹೆಚ್ಚಿನ ದರಕ್ಕೆ ಕುರಿ ಮಾಂಸವೆಂದು ಮಾರಾಟ ಮಾಡಲಾಗುತ್ತಿದೆ ಎಂಬ ಅನುಮಾನಗಳು ವ್ಯಕ್ತವಾಗಿವೆ.

ಫಿಶ್ ಎಂದು ಸ್ಟಿಕ್ಕರ್ ಹಾಕಿಕೊಂಡು ಏನು ಪ್ಯಾಕ್ ಮಾಡಿದ್ದಾರೋ ನೋಡಿ, ಕುರಿಯ ಬಾಲ ಇಷ್ಟು ಉದ್ದ ಇರುತ್ತಾ? ಇದರ ಬಗ್ಗೆ ಸಂಪೂರ್ಣ ತನಿಖೆ ಆಗಬೇಕು. ಎಲ್ಲ ಮಾಂಸ ಆಹಾರ ಗುಣಮಟ್ಟ ಚೆಕ್ ಮಾಡಬೇಕು ಎಂದು ಹಿಂದುಪರ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಈ ವೇಳೆ ಪುನೀತ್‌ ಕೆರೆಹಳ್ಳಿ ಸೇರಿ ಹಲವು ಕಾರ್ಯಕರ್ತರನ್ನು ಉಪ್ಪಾರಪೇಟೆ ಪೊಲೀಸರು ವಶಕ್ಕೆ ಪಡೆದು, ಠಾಣೆಗೆ ಕರೆದೊಯ್ದಿದ್ದಾರೆ.

Continue Reading
Advertisement
Michel Phelps ರಾಜಮಾರ್ಗ ಅಂಕಣ
ಅಂಕಣ10 mins ago

ರಾಜಮಾರ್ಗ ಅಂಕಣ: 28 ಒಲಿಂಪಿಕ್ ಪದಕಗಳ ವಿಶ್ವದಾಖಲೆ- ಮೈಕೆಲ್ ಫೆಲ್ಪ್ಸ್

Aadhaar Update
ವಾಣಿಜ್ಯ23 mins ago

Aadhaar Update: ಹೊಸ ನಿಯಮ ಪ್ರಕಾರ ಆಧಾರ್ ವಿಳಾಸ ನವೀಕರಣಕ್ಕೆ ಯಾವ ದಾಖಲೆ ಬಳಸಬಹುದು?

Health Tips Kannada
ಆರೋಗ್ಯ38 mins ago

Health Tips Kannada: ಚಹಾ, ಕಾಫಿಯನ್ನು ಯಾವ ಸಮಯದಲ್ಲಿ ಕುಡಿಯಬಾರದು ಗೊತ್ತೇ?

Vastu Tips
ಧಾರ್ಮಿಕ1 hour ago

Vastu Tips: ಮನೆಯಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸಬೇಕೆಂದರೆ ಅಡುಗೆ ಮನೆ ಹೀಗಿರಬೇಕು!

Remedies For Fatty Liver
ಆರೋಗ್ಯ2 hours ago

Remedies For Fatty Liver: ಲಿವರ್‌ನ ಕೊಬ್ಬನ್ನು ನೈಸರ್ಗಿಕವಾಗಿ ಹೀಗೆ ಕರಗಿಸಲು ಸಾಧ್ಯ!

Shravan Month 2024
ಧಾರ್ಮಿಕ2 hours ago

Shravan 2024: ಶ್ರಾವಣ ಮಾಸದಲ್ಲಿ ಯಾವ ಆಹಾರ ತಿನ್ನಬೇಕು, ಯಾವುದನ್ನು ತಿನ್ನಬಾರದು?

karnataka Weather Forecast
ಮಳೆ2 hours ago

Karnataka Weather : ಕರಾವಳಿ-ಮಲೆನಾಡಿನಲ್ಲಿ ಮುಂದುವರಿಯಲಿದೆ ಮಳೆ ಅಬ್ಬರ- ಇರಲಿ ಎಚ್ಚರ

dina bhavishya
ಭವಿಷ್ಯ2 hours ago

Dina Bhavishya : ಈ ರಾಶಿಯವರಿಗೆ ಮಾತೇ ಮೃತ್ಯು, ಮೌನಕ್ಕೆ ಶರಣಾಗಿ

Paris Olympics 2024
ಪ್ರಮುಖ ಸುದ್ದಿ7 hours ago

Paris Olympics 2024 : ಪ್ರಣಯ ನಗರಿ ಪ್ಯಾರಿಸ್​ನಲ್ಲಿ ಒಲಿಂಪಿಕ್ಸ್​ ಕ್ರೀಡಾಕೂಟಕ್ಕೆ ಅದ್ಧೂರಿ ಚಾಲನೆ

Mumbai Spa
ಪ್ರಮುಖ ಸುದ್ದಿ7 hours ago

ಕೊಲೆಯಾದ ರೌಡಿಯ ಮೈಮೇಲಿದ್ದ ಟ್ಯಾಟೂ ನೆರವಿನಿಂದ ಆರೋಪಿಗಳ ಬಂಧನ; ಹೇಗಂತೀರಾ? ಇಲ್ಲಿದೆ ರೋಚಕ ಕತೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Ankola landslide
ಉತ್ತರ ಕನ್ನಡ12 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ14 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ14 hours ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ16 hours ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ3 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ4 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

ಟ್ರೆಂಡಿಂಗ್‌