Site icon Vistara News

Mysore News: ಸಿಡಿಮದ್ದು ಸಿಡಿದು ಎತ್ತು ಸಾವು; ಸ್ಫೋಟಕ್ಕೆ ಬಾಯಿ ಛಿದ್ರ ಛಿದ್ರ

Bull killed

ಮೈಸೂರು: ಕಾಡುಪ್ರಾಣಿಗಳ ಬೇಟೆಗೆ ಇಟ್ಟಿದ್ದ ಸಿಡಿಮದ್ದು ತಿಂದು ಎತ್ತಿನ ಬಾಯಿ ಛಿದ್ರ ಛಿದ್ರವಾಗಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ (Mysore News) ನಂಜನಗೂಡು ತಾಲೂಕಿನ ಈರೇಗೌಡನಹುಂಡಿ‌ ಗ್ರಾಮದಲ್ಲಿ ನಡೆದಿದೆ. ಸ್ಫೋಟದ ತೀವ್ರತೆಗೆ ಗಂಭೀರ ಗಾಯಗಳಾಗಿ ಎತ್ತು ಸ್ಥಳದಲ್ಲೇ ಮೃತಪಟ್ಟಿದೆ.

ಗ್ರಾಮದ ಮಹದೇವಯ್ಯ ಎಂಬುವರ ಜಮೀನಿನಲ್ಲಿ ಕಾಡು ಪ್ರಾಣಿಗಳ ಬೇಟೆಗಾಗಿ ಪೇಪರ್‌ನಲ್ಲಿ ಸುತ್ತಿ ಇಟ್ಟಿದ್ದ ಸಿಡಿಮದ್ದು ತಿಂದಿದ್ದರಿಂದ ಎತ್ತು ಮೃತಪಟ್ಟಿದ್ದೆ. ಕಾಡು ಹಂದಿ ಸೇರಿದಂತೆ ವಿವಿಧ ಪ್ರಾಣಿಗಳ ಹಿಡಿಯಲು ಸಿಡಿಮದ್ದು ಇಡಲಾಗಿತ್ತು. ತಿನ್ನುವ ಪದಾರ್ಥ ಇರಬಹುದೆಂದು ಎತ್ತು ಬಾಯಿ ಹಾಕಿದಾಗ ಸಿಡಿಮದ್ದು ಸಿಡಿದಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲಿಸಿದ್ದು, ಕಿಡಿಗೇಡಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

ಮಂಡ್ಯ ಜಿಲ್ಲೆಗೆ ಕಾಲಿಟ್ಟ ಹುಲಿರಾಯ

Nelamangala Accident

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹಾದೇವಪುರ ಗ್ರಾಮದ ಬಳಿ ಹುಲಿ ಪ್ರತ್ಯಕ್ಷವಾಗಿದ್ದು, ಹುಲಿ ಕಂಡು ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಗ್ರಾಮದ ಬಳಿ ಜಮೀನಿನಲ್ಲಿ ಹುಲಿಯ ಚಲನವಲನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹುಲಿ ಸೆರೆಗೆ ಗ್ರಾಮಸ್ಥರು ಆಗ್ರಹಿಸಿದ್ದು, ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದು, ಹುಲಿ ಸೆರೆಗಾಗಿ ಕಾರ್ಯಾಚರಣೆ ಆರಂಭವಾಗಿದೆ.

ಡೆಪ್ಯೂಟಿ ಆರ್‌ಎಫ್‌ಒ ಶಿವು ನೇತೃತ್ವದಲ್ಲಿ ಹುಲಿ ಸೆರೆ ಕಾರ್ಯಾಚರಣೆ ಆರಂಭವಾಗಿದ್ದು, ಸುಮಾರು 20ಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿಯಿಂದ ಹುಲಿಗಾಗಿ ಹುಡುಕಾಟ ನಡೆಯುತ್ತಿದೆ. ಹೆಜ್ಜೆ ಗುರುತು ನೋಡಿದರೆ ಹುಲಿಯಂತೆ ಕಾಣುತ್ತಿದೆ, ಆದರೆ ಹುಲಿ ಎಂದು ಖಚಿತವಾಗಿ ಹೇಳಲು ಆಗಲ್ಲ ಎಂದು ಅರಣ್ಯಾಧಿಕಾರಿ ಹೇಳಿದ್ದಾರೆ.

ಇನ್ನು ಹುಲಿ ಪ್ರತ್ಯಕ್ಷದಿಂದ ಗದ್ದೆ ಕೆಲಸಗಾರರು ಬಾರದ ಹಿನ್ನೆಲೆಯಲ್ಲಿ ರೈತರು ಕಂಗಾಲಾಗಿದ್ದಾರೆ. ಆದಷ್ಟು ಬೇಗ ಹುಲಿ ಸೆರೆ ಹಿಡಿಯುವಂತೆ ಮಾಧ್ಯಮಗಳ ಮುಂದೆ ಸ್ಥಳೀಯ ರೈತ ಅಶೋಕ ಒತ್ತಾಯ ಮಾಡಿದ್ದಾರೆ.

ಸಂಕ್ರಾಂತಿ ಸಂಭ್ರಮ ಮುಗಿಸಿ ಬರುವಾಗ ಅಪಘಾತ; ತಂದೆ, ಪುಟ್ಟ ಮಗಳು ಮೃತ್ಯು

Nelamangala Accident

ಬೆಂಗಳೂರು: ನೆಲಮಂಗಲ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಸಂಭವಿಸಿದ ಭೀಕರ ಅಪಘಾತದಲ್ಲಿ (Road accident) ತಂದೆ ಮತ್ತು ಐದು ವರ್ಷದ ಮಗಳು (Father and daughter Dead) ಮೃತಪಟ್ಟಿದ್ದಾರೆ. ಬೈಕ್‌ ಡಿವೈಡರ್‌ಗೆ ಡಿಕ್ಕಿ (Bike hits Divider) ಹೊಡೆದು ಸಂಭವಿಸಿದ ದುರಂತ ಇದಾಗಿದೆ.

ಬೆಂಗಳೂರಿನ ಉತ್ತರ ತಾಲೂಕಿನ ಅಡಕಮಾರನಹಳ್ಳಿಯಲ್ಲಿ ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ತಂದೆ-ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪತ್ನಿಗೆ ಗಂಭೀರ ಗಾಯಗಳಾಗಿವೆ.

ಬೆಂಗಳೂರಿನ ಚಿಕ್ಕಪೇಟೆಯ ಅಮಿತ್ (32) ಹಾಗೂ 5 ವರ್ಷದ ಮಗಳು ಅನಿತಾ ಮೃತಪಟ್ಟವರು. ಅಮಿತ್ ಪತ್ನಿ ಕುಸುಮಾ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ತಂದೆ ಹಾಗೂ ಮಗಳ ಇಬ್ಬರ ತಲೆಗೂ ಗಂಭೀರ ಪೆಟ್ಟಾಗಿದ್ದು, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟರು.

ಇದನ್ನೂ ಓದಿ | Love Case : ಪ್ರೇಮಿಗಳ ನಡುವೆ ಕಿರಿಕ್‌; ನಡುರಸ್ತೆಯಲ್ಲೇ ಯುವತಿಗೆ ಚೂರಿ ಹಾಕಿದ ಯುವಕ

ಅಮಿತ್‌ ಮತ್ತು ಕುಸುಮಾ ಅವರು ತಮ್ಮ ಪುಟ್ಟ ಮಗಳೊಂದಿಗೆ ಸಂಕ್ರಾಂತಿ ಹಬ್ಬಕ್ಕೆಂದು ಊರಿಗೆ ಹೋಗಿದ್ದರು. ಅಲ್ಲಿಂದ ಹಬ್ಬ ಮುಗಿಸಿ ಮರಳುವಾಗ ನೆಲಮಂಗಲ ಬಳಿಯ ಅಡಕಮಾರನಹಳ್ಳಿಯ ಪ್ಲೈಓವರ್ ಮೇಲೆ ಅವರು ಚಲಾಯಿಸುತ್ತಿದ್ದ ಬೈಕ್‌ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ತಂದೆ, ಮಗಳು ಸ್ಥಳದಲ್ಲೇ ಮೃತಪಟ್ಟರೆ, ತಾಯಿಯ ಸ್ಥಿತಿ ಗಂಭೀರವಾಗಿದೆ.

Exit mobile version