Site icon Vistara News

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು; ಇಬ್ಬರ ಸಾವು

ಕಾರು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಕಾಣಿಯೂರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಹಳ್ಳಕ್ಕೆ ಬಿದ್ದಿದ್ದರಿಂದ ಇಬ್ಬರು ಮೃತಪಟ್ಟಿದ್ದಾರೆ. ಶನಿವಾರ ರಾತ್ರಿ ವಿಟ್ಲದಿಂದ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಕಾರು ಹಳ್ಳಕ್ಕೆ ಬಿದ್ದು ಕೊಚ್ಚಿ ಹೋಗಿತ್ತು.

ಬಂಟ್ವಾಳ ತಾಲೂಕಿನ ವಿಟ್ಲ ಗ್ರಾಮದ ಧನುಷ್, ಕಾಸರಗೋಡು ಜಿಲ್ಲೆ ಮಂಜೇಶ್ವರ ತಾಲೂಕಿನ ನಿವಾಸಿ (ಹೆಸರು ತಿಳಿದುಬಂದಿಲ್ಲ) ಮೃತರು. ಕಾರು ಹಳ್ಳಕ್ಕೆ ಬಿದ್ದ ಮಾಹಿತಿ ತಿಳಿದು ಭಾನುವಾರ ಬೆಳಗ್ಗೆ ಅಗ್ನಿಶಾಮಕ ದಳ ಹಾಗೂ ಎಸ್‌ಡಿಆರ್‌ಎಫ್ ತಂಡದಿಂದ ಶೋಧನಾ ಕಾರ್ಯ ನಡೆಸಲಾಯಿತು. ಕೆಲ ಗಂಟೆಗಳ ಬಳಿಕ ಹಳ್ಳದಲ್ಲಿ ಕೊಚ್ಚಿ ಹೋದ ಕಾರನ್ನು ಮೇಲಕ್ಕೆತ್ತಲಾಯಿತು. ಆದರೆ, ಕಾರಿನಲ್ಲಿದ್ದ ಇಬ್ಬರು ನಾಪತ್ತೆಯಾಗಿದ್ದರಿಂದ ಅವರಿಗಾಗಿ ಹುಡುಕಾಟ ನಡೆಸಲಾಯಿತು. ಆನಂತರ ಕಾರು ಸಿಕ್ಕ ಜಾಗದ ಸಮೀಪವೇ ಈ ಇಬ್ಬರ ಮೃತದೇಹಗಳು ಸಿಕ್ಕಿವೆ.

ಇದನ್ನೂ ಓದಿ | Rain News | ಕೊಡಗಿನಲ್ಲಿ ಮುಂದುವರಿದ ಭಾರಿ ಮಳೆ, ರಾಜ್ಯದಲ್ಲಿ 5-6 ದಿನ ವರುಣನ ಅಬ್ಬರ ನಿರೀಕ್ಷೆ

Exit mobile version