Site icon Vistara News

ಎಂಜಿನಿಯರಿಂಗ್ ಕೋರ್ಸ್‌ಗಳ ಪ್ರವೇಶಾತಿಗೆ ನ.30 ಕೊನೆಯ ದಿನ

Udyami Vokkaliga

ಬೆಂಗಳೂರು: ಎಂಜಿನಿಯರಿಂಗ್ ಕೋರ್ಸ್‌ಗಳ ಪ್ರವೇಶಾತಿಗೆ ಕೊನೆಯ ದಿನಾಂಕವನ್ನು ಸುಪ್ರೀಂ ಕೋರ್ಟ್ ನವೆಂಬರ್ 30ರವರೆಗೆ ವಿಸ್ತರಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಸೋಮವಾರ ತಿಳಿಸಿದ್ದಾರೆ.

ಈ ಮುನ್ನ ಎಐಸಿಟಿಇ ನಿಗದಿ ಮಾಡಿದ್ದ ಪ್ರಕಾರ ಎಂಜಿನಿಯರಿಂಗ್ ಕೋರ್ಸ್‌ಗಳಿಗೆ ಅಕ್ಟೋಬರ್ 25 ಕೊನೆಯ ದಿನವಾಗಿತ್ತು. ಆದರೆ, ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಈ ದಿನಾಂಕವನ್ನು ವಿಸ್ತರಿಸಬೇಕೆಂದು ಕೋರಿ ಸುಪ್ರೀಂ ಕೋರ್ಟ್‌ ಮೊರೆ ಹೋಗಿತ್ತು. ಈ ಮನವಿಯನ್ನು ನ್ಯಾಯಾಲಯವು ಪುರಸ್ಕರಿಸಿದೆ ಎಂದು ಹೇಳಿದ್ದಾರೆ.

ಹೀಗಾಗಿ ನಮಗೆ ಒಂದು ತಿಂಗಳಿಗಿಂತ ಹೆಚ್ಚು ಕಾಲಾವಕಾಶ ಸಿಕ್ಕಿದೆ. ಇಷ್ಟರಲ್ಲಿ ನಾವು ಸುಗಮ ಕೌನ್ಸೆಲಿಂಗ್ ಸೇರಿದಂತೆ ಪ್ರವೇಶ ಪ್ರಕ್ರಿಯೆ ಮುಗಿಸಲಿದ್ದೇವೆ ಎಂದು ತಿಳಿಸಿರುವ ಅವರು, ಕಳೆದ ವರ್ಷ ಪಿಯುಸಿ ಪಾಸಾದ 24 ಸಾವಿರ ಅಭ್ಯರ್ಥಿಗಳು, ಈ ವರ್ಷ ಸಿಇಟಿ ಬರೆದು ರ‍್ಯಾಂಕಿಂಗ್‌ ವಿಚಾರದಲ್ಲಿ ಹೈಕೋರ್ಟ್ ಮೆಟ್ಟಿಲೇರಿದ್ದರಿಂದ ಸ್ವಲ್ಪ ಅಡಚಣೆ ಎದುರಾಯಿತು. ಹೀಗಾಗಿ ಅಂತಿಮ ದಿನಾಂಕ ವಿಸ್ತರಿಸುವಂತೆ ಸರ್ವೋಚ್ಚ ನ್ಯಾಯಾಲಯಕ್ಕೆ ಕೇಳಿಕೊಂಡಿದ್ದೆವು ಎಂದು ವಿವರಿಸಿದ್ದಾರೆ.

ಇದನ್ನೂ ಓದಿ | SCST ಮೀಸಲು| ಒಕ್ಕಲಿಗರಿಂದಲೂ ಮೀಸಲು ಹೆಚ್ಚಳ ಬೇಡಿಕೆ: 4%ನಿಂದ 12ಕ್ಕೆ ಏರಿಸಿ ಎಂದ ನಿರ್ಮಲಾನಂದನಾಥ ಶ್ರೀ

Exit mobile version