Kannada Rajyotsava: ಶತಶತಮಾನಗಳಿಂದ ಕರ್ನಾಟಕ ನಡೆದು ಬಂದ ಹಾದಿ ರೋಚಕ! - Vistara News

ಕನ್ನಡ ರಾಜ್ಯೋತ್ಸವ

Kannada Rajyotsava: ಶತಶತಮಾನಗಳಿಂದ ಕರ್ನಾಟಕ ನಡೆದು ಬಂದ ಹಾದಿ ರೋಚಕ!

ಕರ್ನಾಟಕದ ಇತಿಹಾಸ (Kannada Rajyotsava) ಸುದೀರ್ಘವಾಗಿದೆ. ನಿಖರವಾಗಿ ಲಭ್ಯವಿರುವ ಕರ್ನಾಟಕದ ಚರಿತ್ರೆಯ ಬಗೆಗೊಂದು ಸಂಗ್ರಹಯೋಗ್ಯ ಪಕ್ಷಿನೋಟ ಇಲ್ಲಿದೆ.

VISTARANEWS.COM


on

karnataka karunadu
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕರ್ನಾಟಕವೆಂಬ ವಿಶಿಷ್ಟ ನಾಡಿಗೆ ಸುದೀರ್ಘ ಚರಿತ್ರೆಯಿದೆ. ಕನ್ನಡ ಸೀಮೆಯ ಬಗ್ಗೆ (Kannada Rajyotsava) ಪ್ರಾಗೈತಿಹಾಸಿಕ ಕಾಲದ (ಬರಹ ಆರಂಭವಾಗುವ ಮೊದಲಿನ ಕಾಲ) ಚರಿತ್ರೆ ಲಭ್ಯವಿಲ್ಲ. ಆದರೆ ರಾಮಾಯಣ ಮತ್ತು ಮಹಾಭಾರತದಂಥ ಪುರಾಣ ಕಾಲದ ಜೊತೆಗೆ ಕರ್ನಾಟಕದ ನಂಟಿದೆಯೆಂದು ಹೇಳಲಾಗುತ್ತದೆ. ಸುಗ್ರೀವನ ರಾಜಧಾನಿ ಕಿಷ್ಕಿಂಧೆಯನ್ನು ನಮ್ಮ ಹಂಪೆಯ ಬಳಿ ಗುರುತಿಸಲಾಗಿದೆ. ʻಕರ್ನಾಟ ದೇಶʼವೆಂಬ ಹೆಸರನ್ನು ಮಹಾಭಾರತದಲ್ಲಿ ಉಲ್ಲೇಖಿಸಲಾಗಿದೆ. ಮಹಾಭಾರತದಲ್ಲಿ ಬಳಸಲಾದ ಕುಂತಳ ಎಂಬ ಸ್ಥಳನಾಮವನ್ನು ಕರ್ನಾಟಕಕ್ಕೂ ಕೆಲವೆಡೆ ಪರ್ಯಾಯವೆಂಬಂತೆ ಅನ್ವಯಿಸಲಾಗಿದೆ. ಮುನಿ ಅಗಸ್ತ್ಯರೊಂದಿಗೆ ನಂಟಿರುವ ವಾತಾಪಿ ಪ್ರದೇಶ ಬಾಗಲಕೋಟೆಯ ಬಾದಾಮಿ ಕ್ಷೇತ್ರ. ನಿಖರವಾಗಿ ಲಭ್ಯವಿರುವ ಕರ್ನಾಟಕದ ಚರಿತ್ರೆಯ ಬಗೆಗೊಂದು ಪಕ್ಷಿನೋಟವಿದು.

A written history of Karnataka

ಕರ್ನಾಟಕದ ಲಿಖಿತ ಚರಿತ್ರೆ

ಕರ್ನಾಟಕದ ಲಿಖಿತ ಚರಿತ್ರೆ ಲಭ್ಯವಿರುವುದು ಕ್ರಿ.ಪೂ. 4 ಮತ್ತು 3ನೇ ಶತಮಾನದಿಂದ. ನಂದರು ಮತ್ತು ಮೌರ್ಯರ ಸಾಮ್ರಾಜ್ಯದಲ್ಲಿ ಕರ್ನಾಟಕ ಸೇರಿತ್ತು. ಸಾಮ್ರಾಟ ಅಶೋಕನಿಗೆ ಸೇರಿದ ಶಾಸನವೊಂದು ಚಿತ್ರದುರ್ಗದಲ್ಲಿ ದೊರೆತಿದ್ದು, ಈ ವಿಷಯವನ್ನು ಪುಷ್ಟೀಕರಿಸುತ್ತದೆ. ಮೌರ್ಯ ಸಾಮ್ರಜ್ಯದ ನಂತರ ಕರ್ನಾಟಕದ ಪ್ರಾಂತ್ಯದಲ್ಲಿ ಶಾತವಾಹನರ ಆಡಳಿತವಿತ್ತು. ಕ್ರಿ.ಪೂ. ಮೂರನೇ ಶತಮಾನದ ನಂತರದ ಸುಮಾರು ೩೦೦ ವರ್ಷಗಳು ಇದೇ ರಾಜವಂಶವು ಆಳಿದ್ದು, ಪ್ರಾಕೃತ ಇವರ ಆಡಳಿತ ಭಾಷೆಯಾಗಿತ್ತು. ಶಾತವಾಹನ ವಂಶದ ನಂತರ ಗಂಗರು ಮತ್ತು ಕದಂಬರು ಕರ್ನಾಟಕವನ್ನು ಆಳಿದರು.

ಕನ್ನಡದ ರಾಜಮನೆತನಗಳು

ಕರ್ನಾಟಕದ ಪ್ರಾಚೀನ ದೇಶೀಯ ಅರಸು ಮನೆತನ ಬನವಾಸಿಯ ಕದಂಬರದ್ದು. ಮಯೂರವರ್ಮನಿಂದ ಆರಂಭವಾದ ಈ ರಾಜವಂಶ, ಕ್ರಿ.ಶ. 325ರಿಂದ 540ರವರೆಗೆ ಕರ್ನಾಟಕದ ಉತ್ತರ ಭಾಗ ಮತ್ತು ಮಹಾರಾಷ್ಟ್ರದ ದಕ್ಷಿಣ ಭಾಗದಲ್ಲಿ ಆಡಳಿತ ನಡೆಸಿತ್ತು. ಆನಂತರ ಕದಂಬರ ಸಾಮ್ರಾಜ್ಯದ ಹೆಚ್ಚಿನ ಭಾಗ ಬಾದಾಮಿ ಚಾಲುಕ್ಯರ ಕೈವಶವಾಯಿತು. ಕದಂಬರು ಕರ್ನಾಟಕದ ಉತ್ತರ ಭಾಗವನ್ನು ತಮ್ಮದಾಗಿಸಿಕೊಂಡ ಸಂದರ್ಭದಲ್ಲಿ, ದಕ್ಷಿಣದಲ್ಲಿ ಗಂಗರು ಆಡಳಿತ ಆರಂಭಿಸಿದರು. ನಂದಗಿರಿ ಮತ್ತು ತಲಕಾಡಿನಲ್ಲಿ ಆಡಳಿತ ನಡೆಸಿದ ಗಂಗರು ಹಿಂದೂ ಮತ್ತು ಜೈನ ಧರ್ಮಗಳ ಪೋಷಕರಾಗಿದ್ದರು. ಕನ್ನಡ ಸಾಹಿತ್ಯದ ಬೆಳವಣಿಗೆಯ ಮಹತ್ವದ ಹಂತವನ್ನು ಈ ಕಾಲಘಟ್ಟದಲ್ಲಿ ಗುರುತಿಸಲಾಗಿದೆ. ಸುಮಾರು 700 ವರ್ಷಗಳ ಕಾಲ, ಕರ್ನಾಟಕದ ದಕ್ಷಿಣ ಭಾಗ, ಆಂಧ್ರಪ್ರದೇಶ ಮತ್ತು ತಮಿಳುನಾಡುಗಳ ಕೆಲ ಭಾಗಗಳನ್ನು ಈ ಅರಸರು ಆಳಿದರು. ಶ್ರವಣಬೆಳಗೊಳದ ವೈರಾಗ್ಯದ ಮಹಾಮೂರ್ತಿ ಗೊಮ್ಮಟನನ್ನು ಸ್ಥಾಪಿಸಿದ್ದು ಗಂಗರ ಕಾಲದಲ್ಲಿ.

ಬಾದಾಮಿಯ ಚಾಲುಕ್ಯರು

ಮಧ್ಯ ಮತ್ತು ದಕ್ಷಿಣ ಭಾರತದ ದೊಡ್ಡ ಭಾಗದಲ್ಲಿ ಈ ರಾಜವಂಶ ಆಡಳಿತ ನಡೆಸಿತು. ಕರ್ನಾಟಕ ಮತ್ತು ಮಹಾರಾಷ್ಟ್ರದ ಬಹುತೇಕ ಭಾಗ, ಆಂಧ್ರಪ್ರದೇಶದ ದೊಡ್ಡ ಪ್ರಾಂತ್ಯ, ಮಧ್ಯಪ್ರದೇಶ, ಗುಜರಾತ್‌ ಮತ್ತು ಒರಿಸ್ಸಾದ ಹಲವು ಭಾಗಗಳು ಬಾದಾಮಿ ಚಾಲುಕ್ಯರ ಸಾಮ್ರಾಜ್ಯಕ್ಕೆ ಸೇರಿದ್ದವು. ವೈಷ್ಣವ ಪಂಥಕ್ಕೆ ಸೇರಿದ ಈ ರಾಜವಂಶ ಕ್ರಿ.ಶ. 500ರಿಂದ 757ರವರೆಗೆ ಅಧಿಕಾರದಲ್ಲಿತ್ತು. ಚಾಲುಕ್ಯರ ಪ್ರಖ್ಯಾತ ದೊರೆ ಎರಡನೇ ಪುಲಕೇಶಿಯ ಕಾಲದಲ್ಲಿ ಆತನ ಆಸ್ಥಾನಕ್ಕೆ ಭೇಟಿ ನೀಡಿದ್ದ ಚೀನೀ ಯಾತ್ರಿಕ ಹ್ಯೂಯೆನ್‌ ತ್ಸಾಂಗ್‌ ಆತನ ರಾಜಸತ್ತೆಯ ಬಗ್ಗೆ ತನ್ನ ಪ್ರವಾಸಿ ಟಿಪ್ಪಣಿಯಲ್ಲಿ ವಿವರಗಳನ್ನು ನೀಡಿದ್ದಾನೆ. ಸುಪ್ರಸಿದ್ಧ ಬಾದಾಮಿ, ಐಹೊಳೆ, ಪಟ್ಟದಕಲ್ಲಿನ ದೇಗುಲಗಳು ಚಾಲುಕ್ಯರ ಕಾಲದಲ್ಲೇ ನಿರ್ಮಾಣಗೊಂಡವು.

ಆನಂತರ ವರ್ಷಗಳಲ್ಲಿ, ಕರ್ನಾಟಕ ಮತ್ತು ಮಹಾರಾಷ್ಟ್ರದ ಪೂರ್ಣ ಭಾಗ, ಆಂಧ್ರಪ್ರದೇಶ, ತಮಿಳುನಾಡು ಮತ್ತು ಮಧ್ಯಪ್ರದೇಶದ ಒಂದಿಷ್ಟು ಭಾಗಗಳು ಸೇರಿ ರಾಷ್ಟ್ರಕೂಟರ ಸಾಮ್ರಾಜ್ಯವೆನಿಸಿತ್ತು. ಕ್ರಿ.ಶ 757ರಿಂದ 973ರವರೆಗೆ ವ್ಯಾಪಿಸಿದ್ದ ಇವರ ಕಾಲದಲ್ಲಿ ಕೆಲವು ಮಹತ್ವದ ಸಾಹಿತ್ಯಿಕ ಕೆಲಸಗಳು ನಡೆದಿವೆ. ರಾಷ್ಟ್ರಕೂಟರ ದೊರೆ ನೃಪತುಂಗ ಅಮೋಘವರ್ಷನ ಕಾಲದಲ್ಲಿ ಕನ್ನಡದ ಮೇರು ಕೃತಿ ಕವಿರಾಜಮಾರ್ಗ ರಚನೆಗೊಂಡಿತ್ತು. ಇವರ ನಂತರ ಪ್ರಬಲರಾಗಿದ್ದು ಕಲ್ಯಾಣದ ಚಾಲುಕ್ಯರು. ಇವರ ಆಳ್ವಿಕೆಯ ಕಾಲದಲ್ಲೇ ಮಹತ್ವದ ವಚನ ಚಳುವಳಿ ನಡೆದಿದ್ದು. 1198ರಲ್ಲಿ ಇವರ ಆ‍ಳ್ವಿಕೆ ಕೊನೆಗೊಂಡ ನಂತರ ಉತ್ತರದಲ್ಲಿ ಸೇವುಣರು ಮತ್ತು ದಕ್ಷಿಣದಲ್ಲಿ ಹೊಯ್ಸಳರು ಪ್ರವರ್ಧಮಾನಕ್ಕೆ ಬಂದರು.

ಉತ್ತರ ಕರ್ನಾಟಕ, ಮಹಾರಾಷ್ಟ್ರದ ಹೆಚ್ಚಿನ ಭಾಗ ಮತ್ತು ಆಂಧ್ರದ ಕೆಲವು ಪ್ರಾಂತ್ಯಗಳನ್ನು ಕೂಡಿಸಿ, 1198ರಲ್ಲಿ ಆಳ್ವಿಕೆ ಆರಂಭಿಸಿದ ಸೇವುಣರು ದೇವಗಿರಿಯನ್ನು ರಾಜಧಾನಿಯನ್ನಾಗಿಸಿಕೊಂಡಿದ್ದರು. ಆದರೆ ಹೊಯ್ಸಳರೊಂದಿಗೆ ಪದೇಪದೆ ಯುದ್ಧದಲ್ಲಿ ತೊಡಗಿಸಿಕೊಂಡಿದ್ದರಿಂದ, ರಾಜ್ಯ ಸ್ಥಿರವಾಗದೆ, ದಿಲ್ಲಿಯ ಸುಲ್ತಾನ ಅಲ್ಲಾವುದ್ದೀನ್‌ ಖಿಲ್ಜಿಗೆ ಸೋಲಬೇಕಾಯಿತು.

ಹೊಯ್ಸಳರು

ಸಳನೆಂಬ ವೀರನಿಂದ ಸ್ಥಾಪನೆಗೊಂಡ ಈ ಸಾಮ್ರಾಜ್ಯ, ಅದ್ಭುತವಾಗ ವಾಸ್ತುಶಿಲ್ಪಕ್ಕೆ ಹೆಸರುವಾಸಿಯಾಗಿದೆ. ಹುಲಿಯೊಂದಿಗೆ ವೀರನೊಬ್ಬ ಹೋರಾಡುತ್ತಿರುವ ಚಿತ್ರವೇ ಹೊಯ್ಸಳರ ಲಾಂಛನವೂ ಆಗಿತ್ತು. ಹಲವು ಮತ-ಧರ್ಮಗಳ ಪೋಷಕರಾಗಿದ್ದ ಹೊಯ್ಸಳರ ಕಾಲದಲ್ಲಿ ಸೋಮನಾಥಪುರ, ಬೇಲೂರು, ಹಳೇಬೀಡಿನ ಸುಂದರ ದೇವಾಲಯಗಳು ನಿರ್ಮಾಣಗೊಂಡವು. 1349ರವರೆಗೆ ಇವರ ಆಳ್ವಿಕೆಯ ಕಾಲವಾಗಿದ್ದು, ವಿಷ್ಣುವರ್ಧನ ಮಹಾರಾಜ ಮತ್ತು ಆತನ ಪತ್ನಿ ನಾಟ್ಯರಾಣಿ ಶಾಂತಲೆಯ ಕಥೆ ಇಂದಿಗೂ ಪ್ರಚಲಿತದಲ್ಲಿದೆ.

ಗುರು ವಿದ್ಯಾರಣ್ಯರ ಪ್ರೋತ್ಸಾಹದಿಂದ ಸಂಗಮ ವಂಶೀಯರಾದ ಹಕ್ಕ-ಬುಕ್ಕರು (ಹರಿಹರ ಮತ್ತು ಬುಕ್ಕರಾಯ) ನಿರ್ಮಿಸಿದ ವಿಜಯನಗರ ಸಾಮ್ರಾಜ್ಯದ ಬಗ್ಗೆಯೂ ಕಥೆಗಳು ಪ್ರಚಲಿತದಲ್ಲಿವೆ. ಮೊಲವೊಂದು ಬೇಟೆ ನಾಯನ್ನು ಹಿಮ್ಮೆಟ್ಟಿಸಿದ್ದನ್ನು ಕಂಡು, ಇದು ವೀರಭೂಮಿ ಎಂದು ವಿದ್ಯಾರಣ್ಯರು ನಿರ್ಧರಿಸಿ, ಅದರಿಂದ ವಿಜಯನಗರ ಸಾಮ್ರಾಜ್ಯ ಸ್ಥಾಪನೆಯಾಯಿತೆಂಬ ಕಥೆಗಳಿವೆ. ಕೃಷ್ಣದೇವರಾಯನ ಕಾಲದಲ್ಲಿ ತನ್ನ ಉತ್ತುಂಗವನ್ನು ಮುಟ್ಟಿದ್ದ ಸಾಮ್ರಾಜ್ಯ, ಆತನ ಮರಣಾನಂತರ ಅವನತಿಯ ಹಾದಿ ಹಿಡಿಯಿತು. ದಖನ್ನಿನ ಸುಲ್ತಾನರೊಂದಿಗೆ ಕ್ರಿ.ಶ. 1565ರಲ್ಲಿ ತಾಳಿಕೋಟೆಯಲ್ಲಿ ನಡೆದ ಯುದ್ಧದಲ್ಲಿ ಅಳಿಯ ರಾಮರಾಯ ಸೋತ ಮೇಲೆ ಸಾಮ್ರಾಜ್ಯ ಪತನಗೊಂಡಿತು. ಅವರ ಅದ್ಭುತ ವಾಸ್ತುಶಿಲ್ಪದ ಕುರುಹಾಗಿ ಹಂಪೆ ಇಂದಿಗೂ ನಿಂತಿದೆ.

ದಖನ್ನಿನ ಸುಲ್ತಾನರು

ಬಹಮನಿ ಮತ್ತು ಬಿಜಾಪುರದ ಸುಲ್ತಾನರುಗಳ ಆಳ್ವಿಕೆಯು 1347ರಿಂದ ಆರಂಭವಾಗಿ 1686ರಲ್ಲಿ ಅಂತ್ಯಗೊಂಡಿತು. ಉತ್ತರ ಭಾರತದ ಕಡೆಯಿಂದ ದಕ್ಷಿಣಕ್ಕೆ ದಾಳಿ ಮಾಡಿದ ಸುಲ್ತಾನರು, ದೇವಗಿರಿ, ವಾರಂಗಲ್‌ ಪ್ರಾಂತ್ಯಗಳು, ತಮಿಳುನಾಡು ಭಾಗದಲ್ಲಿ ಪಾಂಡ್ಯರು ಮತ್ತು ಕರ್ನಾಟಕದಲ್ಲಿ ಹೊಯ್ಸಳರ ಆಡಳಿತನ್ನು ಬುಡಮೇಲು ಮಾಡಿದ್ದರು. 1490ರಲ್ಲಿ ಬಹಮನಿ ಸಾಮ್ರಾಜ್ಯ ಐದು ತುಂಡುಗಳಾಗಿ ಒಡೆದು, ಕರ್ನಾಟಕದಲ್ಲಿ ಬೀದರ್‌ ಮತ್ತು ಬಿಜಾಪುರಗಳಲ್ಲಿ ಎರಡು ಪ್ರತ್ಯೇಕ ಸಂಸ್ಥಾನಗಳಾದವು. 1686ರಲ್ಲಿ ಮೊಘಲರ ಔರಂಗಜೇಬನಿಂದ ಸಿಕಂದರ್‌ ಅಲಿ ಷಾ ಸೋತ ಮೇಲೆ ಕರ್ನಾಟಕದಲ್ಲಿ ಆದಿಲ್‌ ಷಾಹಿಗಳ ಆಳ್ವಿಕೆ ಕೊನೆಗೊಂಡಿತು.

ಕೆಳದಿಯ ನಾಯಕರು 1500ರಲ್ಲೇ ಆಡಳಿತ ಆರಂಭಿಸಿದ್ದರು. ತನ್ನ ಉನ್ನತಿಯ ಕಾಲದಲ್ಲಿ ಬನವಾಸಿಯಿಂದ ಕೇರಳದ ಕಣ್ಣೂರಿನವರೆಗೆ ಘಟ್ಟದ ಮೇಲೆ ಮತ್ತು ಕೆಳಗಿನ ಭಾಗಗಳಲ್ಲಿ ಹರಡಿದ್ದ ಈ ರಾಜವಂಶದಲ್ಲಿ ಶಿವಪ್ಪ ನಾಯಕ ಮತ್ತು ರಾಣಿ ಚೆನ್ನಮ್ಮನ (ಕಿತ್ತೂರು ಚೆನ್ನಮ್ಮ ಅಲ್ಲ, ಕೆಳದಿ ಚೆನ್ನಮ್ಮ) ಕಥೆಗಳು, ಔರಂಗಜೇಬನನ್ನು ರಾಣಿ ಎದುರಿಸಿದ ವೀರಗಾಥೆ ಇಂದಿಗೂ ಪ್ರಚಲಿತವಿವೆ. 1763ರಲ್ಲಿ ರಾಣಿ ವೀರಮ್ಮಾಜಿಯ ಕಾಲದಲ್ಲಿ ಹೈದರಾಲಿಯ ಜೊತೆಗಿನ ಯುದ್ಧದಲ್ಲಿ ಸಂಸ್ಥಾನ ಪತನಗೊಂಡಿತು.

mysore wodeyar

ಮೈಸೂರಿನ ಒಡೆಯರು

1399ರಲ್ಲಿ ಯದುರಾಯನಿಂದ ಆರಂಭಗೊಂಡ ಈ ವಂಶ, ದೇಶಕ್ಕೆ ಸ್ವಾತಂತ್ರ ಬರುವವರೆಗೂ ಆಳ್ವಿಕೆಯಲ್ಲಿತ್ತು. ಆರಂಭದಲ್ಲಿದ್ದ ಸಣ್ಣ ಸಂಸ್ಥಾನ ದೊಡ್ಡ ರಾಜ್ಯವಾಗಿ ವಿಸ್ತರಿಸಿದ್ದು ರಾಜ ಒಡೆಯರ್.‌ 1761ರಲ್ಲಿ ಹೈದರಾಲಿಯು ರಾಜ್ಯವನ್ನು ವಶಪಡಿಸಿಕೊಂಡು, ಶ್ರೀರಂಗಪಟ್ಟಣದಿಂದ ಆಡಳಿತವನ್ನು ಮುಂದುವರಿಸಿದ. ಆತನ ನಂತರ, ಮಗ ಟಿಪ್ಪು ಸುಲ್ತಾನ್‌ ಆಡಳಿತ ಮುಂದುವರಿಸಿದ. ಆದರೆ ಅಷ್ಟರಲ್ಲಾಗಲೇ ಭಾರತದೆಲ್ಲೆಡೆ ಹರಡಿದ್ದ ಬ್ರಿಟಿಷರೊಂದಿಗೆ ಹಲವು ಬಾರಿ ಯುದ್ಧ ಮಾಡಬೇಕಾಯಿತು. 1799ರಲ್ಲಿ ನಡೆದ ನಾಲ್ಕನೇ ಮೈಸೂರು ಯುದ್ಧದಲ್ಲಿ ಟಿಪ್ಪು ಅಸುನೀಗಿದ. ಆನಂತರ ರಾಜ್ಯದ ಉತ್ತರ ಭಾಗಗಳು ನಿಜಾಮರು ಮತ್ತು ಮರಾಠರ ನಡುವೆ ಹಂಚಿಹೋಯಿತು. ಮೈಸೂರಿನ ಭಾಗ ಒಡೆಯರ್‌ ಮನೆತನಕ್ಕೆ ಉಳಿಯಿತು. ಕರ್ನಾಟಕದ ಉಳಿದ ಭಾಗಗಳು ಬ್ರಿಟಿಷರ ಆಡಳಿತಕ್ಕೆ ಒಳಪಟ್ಟಿತು. 1824ರಲ್ಲಿ ಕಿತ್ತೂರಿನ ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣನಿಂದ ಪ್ರಬಲ ಪ್ರತಿರೋಧ ಎದುರಾದರೂ, ಅದು ಹೆಚ್ಚು ಸಮಯ ನಿಲ್ಲಲಿಲ್ಲ. ಭಾರತದ ಒಕ್ಕೂಟದಲ್ಲಿ ವಿಲೀನ ಆಗುವವರೆಗೂ ಮೈಸೂರು ಸಂಸ್ಥಾನ ಅಸ್ತಿತ್ವದಲ್ಲಿಲ ಇತ್ತು.

ಭಾರತಕ್ಕೆ ಸ್ವಾತಂತ್ರ ಬಂದ ಕೆಲವು ವರ್ಷಗಳ ನಂತರ, 1956ರ ನವೆಂಬರ್‌ 1ರಂದು ಭಾಷಾವಾರು ಪ್ರಾಂತ್ಯಗಳ ವಿಲೀನವಾಗಿ, ವಿಶಾಲ ಮೈಸೂರು ರಾಜ್ಯ ಅಸ್ತಿತ್ವಕ್ಕೆ ಬಂತು. ನಂತರ 1973ರ ನವೆಂಬರ್‌ 1ರಂದು ರಾಜ್ಯಕ್ಕೆ ಕರ್ನಾಟಕ ಎಂಬ ಹೆಸರು ಅಧಿಕೃತವಾಯಿತು.

ಇದನ್ನೂ ಓದಿ: Kannada Rajyotsava: ಒಮ್ಮೆ ನೋಡಲೇಬೇಕಾದ ಕರ್ನಾಟಕದ ವಿಶ್ವ ಪರಂಪರೆ ತಾಣಗಳಿವು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Kannada Pride: ಇನ್ನು ಕನ್ನಡದಲ್ಲೇ ಸಿಆರ್‌ಪಿಎಫ್, ಬಿಎಸ್‌ಎಫ್, ಸಿಐಎಸ್‌ಎಫ್ ಕಾನ್ಸ್‌ಟೇಬಲ್ ಎಕ್ಸಾಮ್!

Kannada Pride: ಕೇಂದ್ರ ಸಶಸ್ತ್ರ ಮೀಸಲು ಪಡೆಗಳ ನೇಮಕಾತಿಯ ಪರೀಕ್ಷೆಗಳನ್ನು ಕನ್ನಡವೂ ಸೇರಿದಂತೆ 13 ಪ್ರಾದೇಿಕ ಭಾಷೆಗಳಲ್ಲಿ ನಡೆಸಲು ಕೇಂದ್ರ ಗೃಹ ಇಲಾಖೆಯು ಕಳೆದ ವರ್ಷವೇ ನಿರ್ಧರಿಸಿತ್ತು.

VISTARANEWS.COM


on

Karnataka Candidate can write CRPF, BSF, CIS Constable Exam in Kannada, Kannada Pride
Koo

ನವದೆಹಲಿ: ಸಿಆರ್‌ಪಿಎಫ್(CRPF), ಬಿಎಸ್‌ಎಫ್ (BSF) ಮತ್ತು ಸಿಐಎಸ್ಎಫ್‌ನಂಥ (CISF) ಅರೆ ಸೇನಾ ಪಡೆಗಳ ಕಾನ್ಸ್‌ಟೇಬ್ ನೇಮಕಾತಿ ಪರೀಕ್ಷೆಯನ್ನು (Constable Exam) ಇಂಗ್ಲಿಷ್ ಮತ್ತು ಹಿಂದಿ ಮಾತ್ರವಲ್ಲದೇ, ಕನ್ನಡವೂ (Kannada Pride) ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲಾಗುವುದು ಎಂದು ಕೇಂದ್ರ ಗೃಹ ಸಚಿವಾಲಯವು ಭಾನುವಾರ ಹೇಳಿದೆ.

ದೇಶಾದ್ಯಂತ 128 ನಗರಗಳಲ್ಲಿ ನಡೆಯಲಿರುವ ಪರೀಕ್ಷೆಯಲ್ಲಿ ಸುಮಾರು 48 ಲಕ್ಷ ಅಭ್ಯರ್ಥಿಗಳು ಎಕ್ಸಾಮ್ ಬರೆಯಲಿದ್ದಾರೆ. ಈ ಪರೀಕ್ಷೆಗಳನ್ನು ಕನ್ನಡವೂ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ನಡೆಯಲು ಕಳೆದ ವರ್ಷ ಏಪ್ರಿಲ್ ತಿಂಗಳಲ್ಲಿ ನಿರ್ಧಾರ ಕೈಗೊಳ್ಳಲಾಗಿತ್ತು ಎಂದು ಸಚಿವಾಲಯವು ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಪ್ರಾದೇಶಿಕ ಭಾಷೆಗಳಿಗೆ ಉತ್ತೇಜನ ಮತ್ತು ಕೇಂದ್ರ ಸಶಸ್ತ್ರ ಮೀಸಲು ಪಡೆಯಲ್ಲಿ ಸ್ಥಳೀಯ ಯುವಕರು ಪಾಲ್ಗೊಳ್ಳುವುದನ್ನು ಹೆಚ್ಚಿುವುದಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ಐತಿಹಾಸಿಕ ನಿರ್ಧಾರವನ್ನು ಕೈಗೊಂಡಿದ್ದಾರೆ ಎಂದು ಸಚಿವಾಲಯದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಹಿಂದಿ ಮತ್ತು ಇಂಗ್ಲಿಷ್ ಮಾತ್ರವಲ್ಲದೇ, ಅಸ್ಸಾಮಿ, ಬೆಂಗಾಲಿ, ಗುಜರಾತಿ, ಮರಾಠಿ, ಮಲಯಾಳಂ, ಕನ್ನಡ, ತಮಿಳು, ತೆಲುಗು, ಉರ್ದು, ಪಂಜಾಬಿ, ಮಣಿಪುರಿ ಮತ್ತು ಕೊಂಕಣಿ ಸೇರಿದಂತೆ 13 ಸ್ಥಳೀಯ ಭಾಷೆಗಳಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಸ್ಟಾಫ್ ಸೆಲಕ್ಷನ್ ಕಮಿಷನ್(SSC) ಈ ಕಾನ್‌ಸ್ಟೇಬಲ್(ಸಾಮಾನ್ಯ ಕರ್ತವ್ಯ) ಪರೀಕ್ಷೆಯನ್ನು ಕೈಗೊಳ್ಳುತ್ತಿದೆ. ಈ ಮೂಲಕ ಕೇಂದ್ರ ಸಶಸ್ತ್ರ ಪಡೆಗಳಿಗೆ ಲಕ್ಷಾಂತರ ಯುವಕರನ್ನು ಆಕರ್ಷಿಸಲಾಗುತ್ತಿದೆ. ಪರೀಕ್ಷೆಗಳನ್ನು ಸ್ಥಳೀಯ ಭಾಷೆಗಳಲ್ಲಿ ನಡೆಸಲು ಎಸ್ಎಸ್‌ಸಿ ಮತ್ತು ಕೇಂದ್ರ ಗೃಹ ಸಚಿವಾಲಯವು ತಿಳಿವಳಿಕಾ ಒಪ್ಪಂದಕ್ಕೆ ಸಹಿ ಹಾಕಿವೆ.

ಈ ಸುದ್ದಿಯನ್ನೂ ಓದಿ: ಕನ್ನಡಿಗರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ; ಕನ್ನಡ ಸೇರಿ 15 ಭಾಷೆಗಳಲ್ಲಿ ನೇಮಕಾತಿ ಪರೀಕ್ಷೆ, ಯಾವ ಹುದ್ದೆಗೆ ಅನ್ವಯ?

Continue Reading

ಕನ್ನಡ ರಾಜ್ಯೋತ್ಸವ

Kannada Koota Luxembourg: ಲಕ್ಸಂಬರ್ಗ್ ಕನ್ನಡ ಕೂಟದಿಂದ ಅದ್ಧೂರಿ ಕನ್ನಡೋತ್ಸವ-2023

Kannada Koota Luxembourg: ಯುರೋಪ್ ಖಂಡದ ಚಿಕ್ಕ ದೇಶದಲ್ಲಿ ಲಕ್ಸಂಬರ್ಗ್ ಕನ್ನಡ ಕೂಟ, ಕರುನಾಡು ಸಂಸ್ಕೃತಿಯ ಅನಾವರಣ ಮಾಡಿದೆ.

VISTARANEWS.COM


on

Kannada Koota Luxembourg
Koo

ಲಕ್ಸಂಬರ್ಗ್: ಕನ್ನಡದ ಕಂಪನ್ನು ಪಸರಿಸುವ ಮತ್ತು ಕನ್ನಡದ ಸಂಸ್ಕೃತಿಯನ್ನು ಬೆಳೆಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿರುವ ಕನ್ನಡ ಕೂಟ ಲಕ್ಸಂಬರ್ಗ್ (ಕೆಕೆಎಲ್) (Kannada Koota Luxembourg) ಅದ್ಧೂರಿಯಾಗಿ `ಕನ್ನಡೋತ್ಸವ -2023’ ನಡೆಸುವ ಮೂಲಕ ಯುರೋಪ್ ಖಂಡದ ಚಿಕ್ಕ ದೇಶದಲ್ಲಿ ಕರುನಾಡು ಸಂಸ್ಕೃತಿಯ ಅನಾವರಣ ಮಾಡಿದೆ.

ಲಕ್ಸಂಬರ್ಗ್‌ನ ಬೆಗ್ಗೆನ್ ಸಾಂಸ್ಕೃತಿಕ ಕೇಂದ್ರದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಅಲ್ಲಿ ನೆಲೆಸಿರುವ ಕನ್ನಡಿಗರೆಲ್ಲರೂ ಪಾಲ್ಗೊಂಡು ಕನ್ನಡದ ಕೀರ್ತಿ ಪತಾಕೆಯನ್ನು ಹಾರಿಸಿದರು. ಈ ಮೂಲಕ ಕನ್ನಡಿಗರೆಲ್ಲರೂ ಒಂದೆಡೆ ಸೇರಿ ಕನ್ನಡ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಿದರು.

ಬೆಂಗಳೂರು ನಗರ ಜಿಲ್ಲೆಯಷ್ಟು ದೊಡ್ಡದಿರುವ ಲಕ್ಸಂಬರ್ಗ್‌ನಲ್ಲಿ ಸುಮಾರು 6 ಲಕ್ಷ ಜನಸಂಖ್ಯೆ ಇದೆ. ಚಿಕ್ಕದಾದರೂ ಇಲ್ಲಿ ವೈವಿಧ್ಯಮಯ ಸಂಸ್ಕೃತಿ ಶ್ರೀಮಂತವಾಗಿದೆ. ಈ ಬಹುಸಾಂಸ್ಕೃತಿಕ ಪ್ರದೇಶದಲ್ಲಿ ಭಾರತೀಯರು ಅದರಲ್ಲೂ ವಿಶೇಷವಾಗಿ ಕನ್ನಡಿಗರು ಗಮನಾರ್ಹವಾದ ರೀತಿಯಲ್ಲಿ ತಮ್ಮ ಭಾಷೆ ಮತ್ತು ಸಂಸ್ಕೃತಿಯನ್ನು ಪಸರಿಸುವಲ್ಲಿ ಯಶಸ್ವಿಯಾಗುತ್ತಿದ್ದಾರೆ. ಇಲ್ಲಿ 100ಕ್ಕೂ ಹೆಚ್ಚು ಕನ್ನಡಿಗ ಕುಟುಂಬಗಳು ವಾಸ ಮಾಡುತ್ತಿದ್ದು, 2022ರ ಅಂತ್ಯದಲ್ಲಿ ಆರಂಭವಾದ ಕನ್ನಡ ಕೂಟ ಲಕ್ಸಂಬರ್ಗ್ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳು, ಕಾರ್ಯಾಗಾರಗಳು ಹಾಗೂ ಹಬ್ಬಗಳ ಮೂಲಕ ಕನ್ನಡಿಗರನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸಿದೆ.

ಇದನ್ನೂ ಓದಿ | ದಶಮುಖ ಅಂಕಣ: ನಿದ್ದೆಗೊಮ್ಮೆ ನಿತ್ಯ ಮರಣ, ಎದ್ದ ಸಲ ನವೀನ ಜನನ!

ಕೆಕೆಎಲ್ ಕನ್ನಡೋತ್ಸವ 2023 ಎರಡನೇ ಕರ್ನಾಟಕ ರಾಜ್ಯೋತ್ಸವವನ್ನು ಆಯೋಜಿಸಿದ್ದು, ಇದರಲ್ಲಿ 120ಕ್ಕೂ ಹೆಚ್ಚು ಕನ್ನಡದ ಮನಸುಗಳು ಪಾಲ್ಗೊಂಡಿದ್ದವು. ಇದರ ವಿಶೇಷವೆಂದರೆ ದೊಡ್ಡ ಮಟ್ಟದಲ್ಲಿ ಭಾರತೀಯರು ಮತ್ತು ಕೆಲವು ಯೂರೋಪಿಯನ್ನರೂ ಪಾಲ್ಗೊಂಡಿದ್ದರು. ಕನ್ನಡದ ಶ್ರೀಮಂತ ಪರಂಪರೆಯನ್ನು ಬಿಂಬಿಸುವ ಹಾಗೂ ಸಾಂಸ್ಕೃತಿಕ ಸಂಪ್ರದಾಯವನ್ನು ಬಿಂಬಿಸುವ ರೀತಿಯಲ್ಲಿ ಹಚ್ಚೇವು ಕನ್ನಡದ ದೀಪ ಹಾಡಿನೊಂದಿಗೆ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು ಮತ್ತು ನಾಡಗೀತೆಯನ್ನು ಹಾಡಲಾಯಿತು.

ಕನ್ನಡಿಗ ಸಮುದಾಯಕ್ಕೆ ತಮ್ಮದೇ ಆದ ಕೊಡುಗೆ ನೀಡುತ್ತಾ ಬಂದಿರುವ ವನಜಾಕ್ಷಿ ಜಗದೀಶ್ ಮತ್ತು ಡಾ.ಪುನೀತ್ ಜುಬ್ಬ ಹೊನ್ನಯ್ಯ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಶರಣ್ಯ ಮತ್ತು ಪ್ರಮೋದ್ ಈಶ್ವರ್ ಅವರು ಈ ಕಾರ್ಯಕ್ರಮದ ನಿರೂಪಣೆ ಮಾಡಿದರು.

ಶಾಸ್ತ್ರೀಯ ಸಂಗೀತ, ಸಿನಿಮಾ ಹಾಡುಗಳ ಗಾಯನ, ನೃತ್ಯ ಮತ್ತು ಆರ್ಕೆಸ್ಟ್ರಾ ಕಾರ್ಯಕ್ರಮಗಳನ್ನು ಈ ಸಂದರ್ಭದಲ್ಲಿ ಆಯೋಜಿಸಲಾಗಿತ್ತು. ವಿಶೇಷವೆಂದರೆ ಈ ಕಾರ್ಯಕ್ರಮಗಳ ಅರ್ಧದಷ್ಟು ಕಾರ್ಯಕ್ರಮಗಳನ್ನು ಮಕ್ಕಳೇ ನಡೆಸಿಕೊಟ್ಟರು. ಈ ಮೂಲಕ ಮಕ್ಕಳು ಕನ್ನಡದ ಸಂಸ್ಕೃತಿಯನ್ನು ಬಿಂಬಿಸಿದರು. ಇದೇ ವೇಳೆ, ಆದರ್ಶ ದಂಪತಿ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು. ಈ ಪೈಕಿ 5 ಅತ್ಯುತ್ತಮ ಜೋಡಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯೆಂದರೆ ಕನ್ನಡಿಗರಾದ ಅಚಲ್ ಮೂರ್ತಿ ಮತ್ತು ಲಕ್ಸಂಬರ್ಗ್ ಮೂಲದ ಬ್ಯಾಂಡ್ `ಅಹ್ಮದ್ ರಾದ್ವಾನ್ & ಲೆಸ್ ಹಿರೋಂಡೆಲ್ಸ್’ ನ ಕಲಾವಿದರು ತಮ್ಮ ಕಲೆಯನ್ನು ಪ್ರದರ್ಶನ ಮಾಡಿ ಎಲ್ಲರ ಗಮನ ಸೆಳೆದರು. ಅಲ್ಲದೇ, ಇಲ್ಲಿ ಆಯೋಜಿಸಲಾಗಿದ್ದ ವಿವಿಧ ಖಾದ್ಯಗಳ ಪ್ರದರ್ಶನ ತಿಂಡಿ ಪ್ರಿಯರಿಗೆ ಆಹ್ಲಾದವನ್ನು ಉಂಟು ಮಾಡಿತು.

ಕೆಕೆಎಲ್ ಅಧ್ಯಕ್ಷರಾದ ಭವಾನಿ ಶಂಕರ್ ಅವರು ಈ ಕಾರ್ಯಕ್ರಮದ ಯಶಸ್ಸಿನ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
“ಲಕ್ಸಂಬರ್ಗ್ ಮತ್ತು ಕರ್ನಾಟಕದ ಕನ್ನಡಿಗರ ನಡುವಿನ ಬಾಂಧವ್ಯ ಬಲವರ್ಧನೆಗೆ ಈ ಕಾರ್ಯಕ್ರಮ ನಾಂದಿ ಹಾಡಿದೆ. ಈ ಕನ್ನಡೋತ್ಸವ 2023 ಕೇವಲ ನಮ್ಮ ನಡುವಿನ ಪ್ರತಿಭೆಗಳನ್ನು ಹೊರ ಜಗತ್ತಿಗೆ ಅನಾವರಣ ಮಾಡಲಷ್ಟೇ ಕಾರಣವಾಗಿಲ್ಲ. ಇದರೊಂದಿಗೆ ಒಗ್ಗಟ್ಟು ಮತ್ತು ಪ್ರೀತಿ ವಿಶ್ವಾಸವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸಹಕಾರಿಯಾಗಿದೆ. ನಮ್ಮ ಶ್ರೀಮಂತ ಸಂಸ್ಕೃತಿಯನ್ನು ಹೊರ ಜಗತ್ತಿಗೆ ತೋರಿಸುವಲ್ಲಿ ಈ ಕಾರ್ಯಕ್ರಮ ಯಶಸ್ವಿಯಾಗಿದೆ’’ ಎಂದರು.

ಸಂಧ್ಯಾ ಸುರೇಶ್, ಪುನೀತಾ ರೆಡ್ಡಿ, ಕಾರ್ತೀಕ್ ರಾಮಮೂರ್ತಿ, ನರಸಿಂಹ ಹೆಬ್ಬಾರ್, ಮಂಜುನಾಥ್ ಪ್ರಸಾದ್, ನಿರಂಜನ್ ವಿಶ್ವಮೂರ್ತಿ, ಹಿತೇಶ್ ಚಿಡ್ಗಲ್, ಪ್ರಶಾಂತ್ ಅಳವಂಡಿ, ರಮೇಶ್ ಪಾಂಡುರಂಗ ಸೇರಿದಂತೆ ಇನ್ನಿತರ ಆಡಳಿತ ಮಂಡಳಿ ಸದಸ್ಯರು ನೇತೃತ್ವದಲ್ಲಿ ಹಾಗೂ ಸ್ವಯಂಸೇವಕರ ಶ್ರಮದ ಫಲವಾಗಿ ಈ ಕಾರ್ಯಕ್ರಮದಲ್ಲಿ ಯಶಸ್ವಿಯಾಗಿ ನಡೆಯಲು ಕಾರಣವಾಗಿದೆ.

ಇದನ್ನೂ ಓದಿ | Cultural Events : ಡಿ.13-14ರಂದು ನೃತ್ಯ ವೈಭವದ ತ್ಯಾಗರಾಜ ಹೃತ್ಸದನ

ಈ ಕನ್ನಡೋತ್ಸವ 2023 ಕನ್ನಡದ ಸಮುದಾಯದ ಒಗ್ಗಟ್ಟನ್ನು ಪ್ರದರ್ಶಿಸುವುದರೊಂದಿಗೆ ಕನ್ನಡೇತರರು ಮತ್ತು ಸ್ಥಳೀಯ ನಾಗರಿಕರೊಂದಿಗೆ ಸಂಬಂಧ ಬೆಳೆಸುವುದು ಮತ್ತು ಸಂಸ್ಕೃತಿ ವಿನಿಮಯಕ್ಕೆ ಒಂದು ಉತ್ತಮವಾದ ವೇದಿಕೆಯನ್ನು ಒದಗಿಸಿಕೊಟ್ಟಿತು.

Continue Reading

ಕನ್ನಡ ರಾಜ್ಯೋತ್ಸವ

RK Balachandra: ʼಕರ್ನಾಟಕ ಸಾಧಕ ರತ್ನʼ ಪ್ರಶಸ್ತಿಗೆ ಕುಶಾಲನಗರದ ಆರ್.ಕೆ. ಬಾಲಚಂದ್ರ ಆಯ್ಕೆ

R. K. Balachandra: ಬಳ್ಳಾರಿಯ ಸ್ಮಿಯಾಕ ಚಾರಿಟಬಲ್ ಟ್ರಸ್ಟ್‌ನಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ʼಕರ್ನಾಟಕ ಸಾಧಕ ರತ್ನʼ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಲಾಗಿದೆ.

VISTARANEWS.COM


on

RK Balachandra
Koo

ಮಡಿಕೇರಿ: 68ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಬಳ್ಳಾರಿಯ ಸ್ಮಿಯಾಕ ಚಾರಿಟಬಲ್ ಟ್ರಸ್ಟ್‌ನಿಂದ ನೀಡುವ ʼಕರ್ನಾಟಕ ಸಾಧಕ ರತ್ನʼ ರಾಜ್ಯೋತ್ಸವ ಪ್ರಶಸ್ತಿಗೆ ಕೊಡಗು ಜಿಲ್ಲೆಯ ಕುಶಾಲನಗರದ ಆರ್.ಕೆ. ಬಾಲಚಂದ್ರ (RK Balachandra) ಅವರು ಆಯ್ಕೆಯಾಗಿದ್ದಾರೆ.

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಬಹುಮುಖ್ಯವಾಗಿ ಅನ್ಯ ರಾಜ್ಯದ ಕನ್ನಡೇತರರಿಗೆ ಕನ್ನಡ ಕಲಿಸುವಿಕೆ ಹಾಗೂ ರಾಜ್ಯಾದಂತ ಉಚಿತವಾಗಿ ಬ್ಯಾಂಕಿಂಗ್ ಹಾಗೂ ಇತರೆ ಸ್ಪರ್ಧಾತ್ಮಗಳ ಪರೀಕ್ಷೆ ತರಬೇತಿಯ ಸೇವೆಯನ್ನು ಗುರುತಿಸಿ ಶಿಕ್ಷಣ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗೆ ಇವರಿಗೆ ʼಕರ್ನಾಟಕ ಸಾಧಕ ರತ್ನʼ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

ಇದನ್ನೂ ಓದಿ | ವಿಸ್ತಾರ ಸಂಪಾದಕೀಯ: ರಾಮಾಯಣ, ಮಹಾಭಾರತ ಕಲಿಕೆ ಶಿಫಾರಸು ಸ್ವಾಗತಾರ್ಹ

ಕನ್ನಡ ರಾಜ್ಯೋತ್ಸವದ ಅಂಗವಾಗಿ ನವೆಂಬರ್‌ 26ರಂದು ಹಮ್ಮಿಕೊಂಡಿರುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಆರ್.ಕೆ. ಬಾಲಚಂದ್ರ ಸೇರಿ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕನ್ನಡ ರಾಜ್ಯೋತ್ಸವ

Karnataka Sambhrama 50: ಹೋರಾಟ, ತ್ಯಾಗ-ಬಲಿದಾನದಿಂದ ಕನ್ನಡ ನಾಡು ಉದಯ: ಸಿದ್ದರಾಮಯ್ಯ

Karnataka Sambhrama 50: ಗದಗದಲ್ಲಿ ಆಯೋಜಿಸಿದ್ದ ʼಕರ್ನಾಟಕ ಸಂಭ್ರಮ-50ʼ ರಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ.

VISTARANEWS.COM


on

CM Siddaramaiah
Koo

ಗದಗ: ಹೋರಾಟ, ತ್ಯಾಗ-ಬಲಿದಾನಗಳಿಂದ ಕನ್ನಡ ನಾಡು (Karnataka Sambhrama 50) ಉದಯವಾಗಿದೆ. ಈ ನಾಡಲ್ಲಿ ಕನ್ನಡತ್ವ ಮತ್ತಷ್ಟು ಆಳವಾಗಿ ಬೇರೂರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಗರದಲ್ಲಿ ಆಯೋಜಿಸಿದ್ದ ʼಕರ್ನಾಟಕ ಸಂಭ್ರಮ-50ʼ ಅದ್ಧೂರಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕರ್ನಾಟಕ ನಾಮಕರಣ ಆಗಲು ಶ್ರಮಿಸಿ ಹೋರಾಡಿದ ಕೆ.ಎಚ್. ಪಾಟೀಲ್ ಮತ್ತು ಎಲ್ಲಾ ಹೋರಾಟದ ಸಂಗತಿಗಳನ್ನು ಇಂದು ನಾನು ಸ್ಮರಿಸುತ್ತೇನೆ. ಅವತ್ತು ಕೆ.ಎಚ್.ಪಾಟೀಲ್, ಇಂದು ಎಚ್.ಕೆ.ಪಾಟೀಲ್, ಅವತ್ತು ದೇವರಾಜ ಅರಸು ಕುಳಿತಿದ್ದ ಮುಖ್ಯಮಂತ್ರಿ ಕುರ್ಚಿಯಲ್ಲಿ ಇವತ್ತು ನಾನು ಕುಳಿತಿದ್ದೇನೆ. ಇದೇನು ಕಾಕತಾಳೀಯ ಅಲ್ಲ ಎಂದರು.

ಇಂಗ್ಲಿಷ್‌ನಲ್ಲಿ ಶೇಕ್ಸ್ ಪಿಯರ್ ಸಾಹಿತ್ಯ ರಚಿಸುವುದಕ್ಕೂ 500 ವರ್ಷಗಳ ಮೊದಲೇ ಕನ್ನಡದಲ್ಲಿ ವಿಶ್ವ ಮಟ್ಟದ ಅತ್ಯುನ್ನತ ಸಾಹಿತ್ಯ ರಚನೆಯಾಗಿತ್ತು. ಪಂಪನಿಂದ ಹಿಡಿದು ವಚನಕಾರರನ್ನೂ ಸೇರಿಸಿ ಹಲವರು ಅತ್ಯುನ್ನತ ಸಾಹಿತ್ಯ ರಚಿಸಿದ್ದರು ಎಂದು ಕನ್ನಡ ಭಾಷಾ ಹಿರಿಮೆಯನ್ನು ಉದಾಹರಿಸಿದರು.

ಇದನ್ನೂ ಓದಿ | Karnataka Drought : 324 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

ಕನ್ನಡ ಕಲಿಯದೆಯೂ ಕರ್ನಾಟಕದಲ್ಲಿ ವ್ಯವಹರಿಸಬಹುದು ಎನ್ನುವ ವಾತಾವರಣ ಬದಲಾಗಬೇಕು. ಕನ್ನಡದ ಸಂಸ್ಕೃತಿ ಜತೆಗೆ ನಮ್ಮೆಲ್ಲರಲ್ಲಿ ಕನ್ನಡತನ ಬೇರೂರಬೇಕು. ಆಗ ಮಾತ್ರ ಕನ್ನಡದ ವಾತಾವರಣ ಇಡಿ ನಾಡಿನಲ್ಲಿ ಪಸರಿಸುತ್ತದೆ ಎಂದರು.

CM Siddaramaiah talks in Karnataka sambhrama at Gadag

ಕನ್ನಡ ಸಂಸ್ಕೃತಿ ಎಂದಾಗ ಬಸವಾದಿ ಶರಣರ ಕಾಯಕ ಸಂಸ್ಕೃತಿಯೂ ಸೇರಿದೆ. ಬಸವಣ್ಣನವರ ಆಶಯದಂತೆ ವರ್ಗರಹಿತ, ಜಾತಿರಹಿತ ಸಮಾಜದ ನಿರ್ಮಾಣ ಮತ್ತು ಅಭಿವೃದ್ಧಿ ನಮ್ಮ ಗುರಿಯಾಗಿದೆ. ಆ ಕಾರಣಕ್ಕೇ ಸರ್ವ ಜಾತಿ-ಧರ್ಮದವರ ಬದುಕನ್ನು ಎತ್ತರಿಸುವ ಗ್ಯಾರಂಟಿ ಕಾರ್ಯಕ್ರಮಗಳನ್ನು ನಾವು ನೀಡಿದ್ದೇವೆ ಎಂದರು.

ಈ ಹಿಂದೆ ಕೆ.ಎಚ್.ಪಾಟೀಲರು ಇಡೀ ಜಿಲ್ಲೆಗೆ ಕುಡಿಯುವ ನೀರು ಕೊಟ್ಟರು. ಅವರ ಪುತ್ರ ಎಚ್.ಕೆ.ಪಾಟೀಲರೂ ಇಡೀ ರಾಜ್ಯಕ್ಕೆ ಉತ್ತಮ ಕಾರ್ಯಕ್ರಮಗಳನ್ನು ನೀಡಿದ್ದಾರೆ. ಹೀಗಾಗಿ ನಾಮಪತ್ರ ಸಲ್ಲಿಸಿದರೆ ಸಾಕು, ನೀವೆಲ್ಲಾ ಎಚ್.ಕೆ.ಪಾಟೀಲರನ್ನು ಗೆಲ್ಲಿಸಬೇಕು. ಇಡೀ ರಾಜ್ಯಕ್ಕೆ ಅಷ್ಟೊಂದು ಕೆಲಸ ಮಾಡಿರುವ ಎಚ್.ಕೆ.ಪಾಟೀಲರು ಮತ ಕೇಳಬಾರದು. ನೀವೆಲ್ಲಾ ಅವರನ್ನೂ ಹಾಗೇ ಗೆಲ್ಲಿಸಬೇಕು ಎಂದು ಕರೆ ನೀಡಿದರು.

ಅವಳಿ ನಗರಕ್ಕೆ 61 ಕೋಟಿ ಕೊಟ್ಟಿದ್ದೇವೆ

ಗದಗ-ಬೆಟಗೇರಿ ಅವಳಿ ನಗರದ ಕುಡಿಯುವ ನೀರಿನ ವ್ಯವಸ್ಥೆಯನ್ನು ಇನ್ನಷ್ಟು ಸಮರ್ಪಕಗೊಳಿಸಲು ಈಗಾಗಲೇ 61 ಕೋಟಿ ರೂ. ನೀಡಿದ್ದೇವೆ. ಅಗತ್ಯಬಿದ್ದರೆ ಮತ್ತಷ್ಟು ಹಣ ಕೊಡಲು ನಮ್ಮ ಸರ್ಕಾರ ಸಿದ್ದವಿದೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರಚಾಸೋದ್ಯಮ ಇಲಾಖೆ ಮತ್ತು ಗದಗ ಜಿಲ್ಲಾಡಳಿತ ಜಂಟಿಯಾಗಿ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರವಾಸೋದ್ಯಮ ಸಚಿವರೂ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಡಾ.ಎಚ್.ಕೆ.ಪಾಟೀಲ್ ಅವರು ವಹಿಸಿದ್ದರು.

ಇದನ್ನೂ ಓದಿ | Cauvery Dispute : ರಾಜ್ಯಕ್ಕೆ ಮತ್ತೆ ಕಾವೇರಿ ಜಲಾಘಾತ; ಇನ್ನು 20 ದಿನ ನಿರಂತರ ನೀರು ಹರಿಸಲು ಪ್ರಾಧಿಕಾರ ಸೂಚನೆ

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ್, ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಸಚಿವರಾದ ಕೆ.ಎಚ್.ಮುನಿಯಪ್ಪ, ಶಿವರಾಜ ತಂಗಡಗಿ, ಲಕ್ಷ್ಮೀ ಹೆಬ್ಬಾಳ್ಕರ್, ಬೈರತಿ ಸುರೇಶ್, ಮಂಕಾಳ ವೈದ್ಯ, ಶರಣ ಪ್ರಕಾಶ್ ಪಾಟೀಲ್, ಶಿವಾನಂದ ಪಾಟೀಲ್, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್ ಸೇರಿ ಹಲವಾರು ಶಾಸಕರು, ಇಲಾಖಾ ಕಾರ್ಯದರ್ಶಿಗಳು-ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading
Advertisement
Crime News
ಕ್ರೈಂ19 mins ago

Crime News: ಶಾಕಿಂಗ್‌: ಕುಟುಂಬದ 7 ಮಂದಿಯನ್ನು ಕೊಚ್ಚಿ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ; ಕಾರಣ ನಿಗೂಢ

belluru assault case
ಕ್ರೈಂ22 mins ago

Assault Case: ಬೆಳ್ಳೂರು ಹಿಂದೂ ಯುವಕನ ಮೇಲೆ ಹಲ್ಲೆ; ದೂರು ಸ್ವೀಕರಿಸದ ಪಿಎಸ್‌ಐ ಸಸ್ಪೆಂಡ್‌

Shilpa Shetty Visiting Nanjundeshwara Temple
ಸಿನಿಮಾ22 mins ago

Shilpa Shetty: ಮೈಸೂರಿನ ನಂಜುಂಡೇಶ್ವರನ ಸನ್ನಿಧಿಯಲ್ಲಿ ನಟಿ ಶಿಲ್ಪಾ ಶೆಟ್ಟಿ ಧ್ಯಾನ

Viral Video
ವೈರಲ್ ನ್ಯೂಸ್38 mins ago

Viral Video: “ನೀವು ಅಲ್ಲಿಂದ ದಾಳಿ ಮಾಡಿ..ನಾವು ಇಲ್ಲಿಂದ ಅಟ್ಯಾಕ್‌ ಮಾಡ್ತೇವೆ..ಪಾಕ್‌ ಧ್ವಂಸ ಆಗೋದು ಪಕ್ಕಾ”-ಆಫ್ಗನ್‌ ವೃದ್ಧನ ಈ ವಿಡಿಯೋ ಫುಲ್‌ ವೈರಲ್‌

India Highest Paid Item Girl not Malaika Nora, Katrina, Sunny
ಸಿನಿಮಾ43 mins ago

India Highest Paid Item Girl : ಅತಿ ಹೆಚ್ಚು ಸಂಭಾವನೆ ಪಡೆಯುವ ಐಟಂ ಗರ್ಲ್ ಯಾರು? ಮಲೈಕಾ, ಸನ್ನಿ, ನೋರಾ ಅಲ್ವೇ ಅಲ್ಲ!

Job Alert
ಉದ್ಯೋಗ1 hour ago

Job Alert: ಯುಪಿಎಸ್‌ಸಿಯಿಂದ 312 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆನ್‌ಲೈನ್‌ ಮೂಲಕ ಅಪ್ಲೈ ಮಾಡಿ

love jihad kasaragod 2
ಕ್ರೈಂ1 hour ago

Love Jihad: ನಾಪತ್ತೆಯಾದ ಹಿಂದೂ ಯುವತಿ ಮುಸ್ಲಿಂ ಯುವಕನ ಮದುವೆಯಾಗಿ ಪತ್ತೆ; ಮುಸ್ಲಿಂ ಲೀಗ್‌ ನಾಯಕನ ಕುಮ್ಮಕ್ಕು?

Kannada New Movie Aditya Shashikumar Kaadaadi Movie Lyrical song out
ಸ್ಯಾಂಡಲ್ ವುಡ್1 hour ago

Kannada New Movie: ಶಶಿಕುಮಾರ್ ಪುತ್ರನ ‘ಕಾದಾಡಿ’ ಸಿನಿಮಾದ ಲಿರಿಕಲ್ ಸಾಂಗ್ ಔಟ್‌!

Viral Video
ವೈರಲ್ ನ್ಯೂಸ್1 hour ago

Viral Video: ಭಾರತ-ಚೀನಾ ಯೋಧರ ನಡುವೆ ಹಗ್ಗಜಗ್ಗಾಟ; ಗೆದ್ದವರು ಯಾರು? ವಿಡಿಯೊ ನೋಡಿ!

Aditi Prabhudeva is returning to reality show judge
ಕಿರುತೆರೆ2 hours ago

Aditi Prabhudeva: ತಾಯಿಯಾದ ಬಳಿಕ ಮತ್ತೆ ಕಿರುತೆರೆಗೆ ಎಂಟ್ರಿ ಕೊಟ್ಟ ಅದಿತಿ ಪ್ರಭುದೇವ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ16 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 day ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ3 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ6 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌