Shravanabelagola swameeji No more : ನಾಲ್ಕು ಮಹಾಮಸ್ತಕಾಭಿಷೇಕಗಳ ರೂವಾರಿ, ಶ್ರವಣಬೆಳಗೊಳದ ಮಹಾಬೆಳಕು - Vistara News

ಕರ್ನಾಟಕ

Shravanabelagola swameeji No more : ನಾಲ್ಕು ಮಹಾಮಸ್ತಕಾಭಿಷೇಕಗಳ ರೂವಾರಿ, ಶ್ರವಣಬೆಳಗೊಳದ ಮಹಾಬೆಳಕು

ನಾಲ್ಕು ಮಹಾಮಸ್ತಕಾಭಿಷೇಕಗಳನ್ನು ನೆರವೇರಿಸಿದ ಖ್ಯಾತಿ ಹೊಂದಿರುವ, ಜೈನ ಪರಂಪರೆಯ ಮಹಾಸಂತ, ಶ್ರವಣಬೆಳಗೊಳ ಮಠದ ಶ್ರೀ ಚಾರುಕೀರ್ತಿ ಪಟ್ಟಾರಕ ಭಟ್ಟಾಚಾರ್ಯವರ್ಯ ಸ್ವಾಮೀಜಿ ಇನ್ನಿಲ್ಲ.

VISTARANEWS.COM


on

Shravana belagola swameeji
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಡಾ. ಅಜಿತ ಮುರುಗುಂಡೆ, ಬೆಂಗಳೂರು
ಇಂದು ಬೆಳಗಿನ ಜಾವ ಮೂಲ ಸಂಘ ದೇಶಿ ಗಣ ಆಚಾರ್ಯ ಕುಂದಕುಂದರ ಹಾಗೂ ಪ್ರಾತಃಸ್ಮರಣೀಯರಾದ ಶ್ರೀ ನೇಮಿ ಸಾಗರವರ್ಣೀ ಭಟ್ಟಾರಕ ಪರಂಪರೆಯ ವರ್ತಮಾನ ಪೀಠಾಧೀಶರಾದ ಪ.ಪೂ. ಸ್ವಸ್ತಿಶ್ರೀ ಜಗದ್ಗುರು ಆಧ್ಯಾತ್ಮ ಯೋಗಿ, ಕರ್ಮಯೋಗಿ, ಭಟ್ಟಾರಕ ಶಿರೋಮಣಿ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾ ಸ್ವಾಮೀಜಿ ಅವರು ಇಹಲೋಕ ತ್ಯಜಿಸಿದರು. ಭಗವಾನ್‌ 1008 ಶ್ರೀ ಮಹಾವೀರ ಜಯಂತಿ ಚೈತ್ರ ಶುದ್ಧ ತ್ರಯೋದಶಿಯಂದು ಶ್ರವಣಬೆಳಗೊಳದ ಶ್ರೀಮಠದಲ್ಲಿ ಜೈನ ಪರಂಪರೆಯ ಆಗಮೋಕ್ತ ರೀತಿಯಲ್ಲಿ ಪೂಜ್ಯ ಶ್ರೀಗಳ ಪಟ್ಟಾಭಿಷೇಕ 1970ರಲ್ಲಿ ನಡೆದಿತ್ತು.

ಅವರ ಬದುಕು ಮತ್ತು ಮಹಾಸಾಧನೆಗಳ ಒಂದು ನೋಟ ಇಲ್ಲಿದೆ

  • ಶ್ರೀಗಳು 1949ರ ಮೇ 3ರಂದು ವರಂಗದಲ್ಲಿ ಜನಿಸಿದರು. ಪೂವಾ೯ಶ್ರಮದ ಹೆಸರು ರತ್ನಾಕರ. ತಂದೆಯ ಹೆಸರು ಶ್ರೀ ಕೀರ್ತಿಶೇಷ ಚಂದ್ರರಾಜ. ತಾಯಿಯ ಹೆಸರು ಮಾತೃಶ್ರೀ ಕಾಂತಮ್ಮನವರು.
  • ಪ್ರಾಥಮಿಕ ಶಿಕ್ಷಣವನ್ನು ಹುಟ್ಟೂರಲ್ಲಿ ಪ್ರಾರಂಭಿಸಿ ಹೊಂಬುಜ ಹಾಗೂ ವಿವಿಧ ಜೈನ ಮಠಗಳಲ್ಲಿ ಕನ್ನಡ, ಸಂಸ್ಕೃತ, ಪ್ರಾಕೃತ, ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಪ್ರಾವೀಣ್ಯತೆಯನ್ನು ಪಡೆದರು.
  • ಸತತ ಜೈನ ಧರ್ಮದ ತತ್ವಶಾಸ್ತ್ರ ಅಧ್ಯಯನ ಕೈಗೊಂಡರು. ಮೈಸೂರು ವಿಶ್ವವಿದ್ಯಾಲಯದಿಂದ ಎಂ.ಎ.ಇತಿಹಾಸ, ಬೆಂಗಳೂರು ವಿಶ್ವವಿದ್ಯಾಲಯದಿಂದ ಎಂ.ಎ.ತತ್ವಶಾಸ್ತ್ರಗಳ ಸ್ನಾತಕೋತ್ತರ ಪದವಿಗಳನ್ನು ಪಡೆದರು.
ಶ್ರವಣಬೆಳಗೊಳ ಮಠದ ಸ್ವಾಮೀಜಿ

ಸನ್ಯಾಸ ದೀಕ್ಷೆ ಮತ್ತು ಪೀಠಾರೋಹಣ

  • ಪೂಜ್ಯ ಶ್ರೀಗಳು 1969ರ ಡಿಸೆಂಬರ್‌ 12ರಂದು ಕ್ಷುಲ್ಲಕ ದೀಕ್ಷೆ ಸ್ವೀಕರಿಸಿದರು.
  • 1970ರಲ್ಲಿ ಶ್ರವಣಬೆಳಗೊಳದ ಮಠದ ಮಠಾಧೀಶರಾದರು. ಬಳಿಕ ಎಸ್.ಡಿ. ಜೆ.ಎಂ.ಐ ಟ್ರಸ್ಟ್ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಪ್ರಾಥಮಿಕ ಶಿಕ್ಷಣದಿಂದ ಇಂಜಿನಿಯರಿಂಗ್ ಕಾಲೇಜು ಶಿಕ್ಷಣದವರೆಗೆ ಅದನ್ನು ಕೊಂಡೊಯ್ಯದ ಕೀರ್ತಿ ಪೂಜ್ಯ ಶ್ರೀಗಳಿಗೆ ಸಲ್ಲುತ್ತದೆ.
  • ರಾಷ್ಟ್ರೀಯ ಪ್ರಾಕೃತ ಅಧ್ಯಯನ ಮತ್ತು ಸಂಶೋಧನ ಸಂಸ್ಥೆಯನ್ನು ಸ್ಥಾಪಿಸುವ ಮೂಲಕ ಪ್ರಾಕೃತ ಭಾಷೆಗೆ ಮರುಜೀವ ತುಂಬಿದರು.
  • ಪ್ರಾಕೃತ ವಿದ್ವಾಂಸರಿಗೆ- ಪ್ರಾಕೃತ ಜ್ಞಾನಭಾರತಿ ಪ್ರಶಸ್ತಿ, ಜೈನ ಸಾಹಿತ್ಯ ಸಂಸ್ಕೃತಿಗಳಿಗೆ- ಶ್ರೀ ಗೋಮಟೇಶ್ವರ ವಿದ್ಯಾಪೀಠ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ದತ್ತಿನಿಧಿ ,ಕನ್ನಡ ಜೈನ ಸಾಹಿತ್ಯ ಸೇವೆಗೆ- ಚಾವುಂಡರಾಯ ಪ್ರಶಸ್ತಿಗಳನ್ನು ಸ್ಥಾಪಿಸಿ,ವಿಶೇಷ ಸಾಧಕರಿಗೆ ಅವುಗಳನ್ನು ನೀಡಿ ಗೌರವಿಸುತ್ತ ಬರುತ್ತಿದ್ದರು.
  • 42 ಧವಲಾ ಸಂಪುಟಗಳ ಅವಿಸ್ಮರಣೀಯ ಕಾರ್ಯ
  • ಧವಲಾ, ಜಯಧವಲಾ, ಮಹಾಧವಲಾ ಗ್ರಂಥಗಳ 42 ಸಂಪುಟಗಳ ಕನ್ನಡ ಅನುವಾದ ಮಾಡಿಸಿ, ಅವುಗಳನ್ನು ಪ್ರಕಟಿಸಿ ಅವಿಸ್ಮರಣೀಯ ಕಾಯ೯ಕೈಗೊಂಡರು.
  • ಪ್ರಶಸ್ತಿಗಳು: ಪೂಜ್ಯ ಶ್ರೀಗಳ ಧಾರ್ಮಿಕ, ಶೈಕ್ಷಣಿಕ, ಸಾಂಸ್ಕೃತಿಕ, ಸಾಹಿತ್ಯಿಕ ಕ್ಷೇತ್ರದಲ್ಲಿನ ಸೇವೆಗಾಗಿ: ಕಮ೯ಯೋಗಿ, ಅಧ್ಯಾತ್ಮ ಯೋಗಿ,ಭಟ್ಟಾರಕ ಶಿರೋಮಣಿ ಮುಂತಾದ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

16ಕ್ಕೂ ಹೆಚ್ಚು ದೇಶಗಳಲ್ಲಿ ಪ್ರವಾಸ

  • ಶ್ರೀಗಳು 16ಕ್ಕೂ ಹೆಚ್ಚು ವಿದೇಶಗಳಲ್ಲಿ ಜರುಗಿದ ವಿಚಾರ ಸಂಕಿರಣ, ಧರ್ಮ ಸಭೆಗಳಲ್ಲಿ ಭಾಗವಹಿಸಿ ತಮ್ಮ ಸರಳಶೈಲಿಯ ಪ್ರವಚನಗಳಿಂದ ಶ್ರಾವಕರ ಮನ ಗೆದ್ದಿದ್ದಾರೆ. ಶ್ರೀಗಳು ಜೈನ ಧರ್ಮ ಇಂದಿಗೂ ತನ್ನತನ ಉಳಿಸಿಕೊಂಡು ಬರುವುದಕ್ಕೆ ಪ್ರಮುಖ ಕಾರಣ ಜೈನ ತತ್ವಶಾಸ್ತ್ರ ಗ್ರಂಥಗಳು ಹಾಗೂ ಜೈನ ವಾಸ್ತುಶಿಲ್ಪ ಕಲೆ ಎಂಬುದನ್ನು ಅರಿತು ಬಸದಿಗಳ ಜೀಣೊ೯ದ್ದಾರ, ಜೈನ ಸಾಹಿತ್ಯ ಪ್ರಕಟಣೆಗೆ ವಿಶೇಷವಾಗಿ ಒತ್ತು ನೀಡಿದ್ದಾರೆ.ಅವುಗಳ ಸಂರಕ್ಷಣೆಗಾಗಿ ಪ್ರಮುಖ ಪಾತ್ರ ವಹಿಸಿದ್ದಾರೆ.

ನಾಲ್ಕು ಮಹಾಮಸ್ತಕಾಭಿಷೇಕಗಳ ರೂವಾರಿ

  • ಶ್ರವಣಬೆಳಗೊಳದಲ್ಲಿ ಇಲ್ಲಿಯವರೆಗೆ ನಾಲ್ಕು ಮಹಾಮಸ್ತಕಾಭಿಷೇಕಗಳು ಶ್ರೀಗಳ ನೇತೃತ್ವದಲ್ಲಿ ಮಾದರಿಗಳಾಗಿ ನೆರವೇರಿವೆ.
  • ಶ್ರೀ ಬಾಹುಬಲಿ ಮಕ್ಕಳ ಆಸ್ಪತ್ರೆ, ವೃದ್ದಾಶ್ರಮಗಳಂಥ ಸಮಾಜಮುಖಿ ಹಾಗೂ ಇನ್ನೂ ಹತ್ತು ಹಲವು ಕ್ಷೇತ್ರದಲ್ಲಿ ತಮ್ಮ ಸೇವೆಯನ್ನು ನಿರ್ವಹಿಸುತ್ತಾ ಈ ನಾಡಿನಲ್ಲಿ ಶಾಂತಿ ನೆಲೆಸಲು ತಮ್ಮ ಅಪಾರವಾದ ಸತತ 50 ವಷ೯ಗಳ ಸೇವೆಯನ್ನು ಸಮಾಜಕ್ಕೆ ಸಲ್ಲಿಸುತ್ತಾ ಬಂದಿದ್ದಾರೆ. ಇದನ್ನು ಅರಿತ ಕನಾ೯ಟಕ ಸರ್ಕಾರವು 2018ರ ರಾಷ್ಟ್ರೀಯ ಶ್ರೀ ಭ.ಮಹಾವೀರ ಶಾಂತಿ ಪ್ರಶಸ್ತಿಯನ್ನು ನೀಡಿ ಗೌರವಿಸಿರುವುದು ಹೆಮ್ಮೆಯ ವಿಷಯವಾಗಿದೆ.ಇದು 10 ಲಕ್ಷ ರೂಪಾಯಿ ಹಾಗೂ ಫಲಕವನ್ನು ಹೊಂದಿರುವುದು.
  • ಅವರನ್ನು ಎಲ್ಲ ಜಾತಿ ಮತ ಪಂಥಗಳ ಭಕ್ತರೂ ಅತಿಯಾಗಿ ಗೌರವಿಸುವ ಆದರಿಸುವ ಪ್ರೀತಿಸುವ ಅದೆಲ್ಲವೂಗಳಿಗಿಂತ ಅವರನ್ನು ಕಂಡರೆ ಹೆಚ್ಚು ಭಕ್ತಿ, ಅತಿ ಕಡಿಮೆ ಭಯ,ಇನ್ನೂ ಜಾಸ್ತಿ ಪ್ರೀತಿ, ಹೆಚ್ಚಿನ ಅಭಿಮಾನ ಇಟ್ಟುಕೊಳ್ಳುವುದಕ್ಕೆ ಕಾರಣ.
    ತಾವಾಯಿತು ತಮ್ಮ ಕೆಲಸವಾಯಿತು. ಪೂಜೆ, ಧಾರ್ಮಿಕ ಕಾರ್ಯಗಳು ಜೊತೆಗೆ ಮಾತುಕತೆ, ಅಧ್ಯಯನ, ಧಾರ್ಮಿಕ ಆಚರಣೆಗಳಲ್ಲಿ ಸ್ವಾಮೀಜಿ ಸದಾ ನಿರತರು. ಮಹಮಸ್ತಕಾಭಿಷೇಕ ಸಂದರ್ಭಗಳಲ್ಲಿ ಮಾತ್ರ ಪತ್ರಿಕೆ, ದೂರದರ್ಶನಗಳಲ್ಲಿ ಅಲ್ಲಲ್ಲಿ ಕಾಣುತ್ತಾರೆ. ಮತ್ತೆ ಅವರನ್ನು ಅವುಗಳಲ್ಲಿ ಕಾಣಬೇಕಾದರೆ 12 ವರ್ಷ ಕಾಯಬೇಕಾಗಿತ್ತು.
  • ಇವರು ಜಾತಿ ಪಂಗಡ ಧರ್ಮಗಳ ಆಚೆ ಸಮಸ್ತರ ಗೌರವಾದರಗಳಿಗೆ ಪಾತ್ರರಾದ ಅಪರೂಪದ ಸಂತ.

“ಮನೆ ಮನೆಗಳಲ್ಲಿ ಚಾರುಕೀರ್ತಿ ಮನ ಮನಗಳಲ್ಲಿ ಚಾರುಕೀತಿ೯” ಆದುದರಿಂದ ಪೂಜ್ಯ ಶ್ರೀಗಳು ” ಬೆಳಗೊಳದ ಮಹಾಬೆಳಕು”

ಹೇ ಪರಮ ಉಪಕಾರಿ ತಮಗೆ ನಮೋಸ್ತು
ಪರಮ ಮಂಗಳಕಾರಿ ತಮಗೆ ನಮೋಸ್ತು
ಪರಮ ಶುಭಕಾರಿ ತಮಗೆ ನಮೋಸ್ತು
ಓಂ ಶಾಂತಿ

ಇದನ್ನೂ ಓದಿ : Sri Charukeerthi Bhattaraka Swamiji: ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕೊಡಗು

Road Accident : ಯಮ ರೂಪಿ ಕೆಎಸ್‌ಆರ್‌ಟಿಸಿ ಬಸ್‌ಗೆ ಸ್ಕೂಟರ್‌ ಸವಾರ ಸಾವು, ಬಾಲಕ ಗಂಭೀರ

Road Accident : ಪ್ರತ್ಯೇಕ ಕಡೆಗಳಲ್ಲಿ ನಡೆದ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರನೊಬ್ಬ ಪ್ರಾಣ ಕಳೆದುಕೊಂಡರೆ, ಹಲವರು ಗಂಭೀರ ಗಾಯಗೊಂಡಿದ್ದಾರೆ. ಬೆಂಗಳೂರು ಹಾಗೂ ದಕ್ಷಿಣ ಕನ್ನಡದಲ್ಲಿ ಲಾರಿ ಬ್ರೇಕ್‌ ಫೇಲ್ಯೂರ್‌ ಆಗಿ ಸರಣಿ ಅಪಘಾತಗಳೇ ಸಂಭವಿಸಿವೆ.

VISTARANEWS.COM


on

By

Road Accident in karnataka
Koo

ಕೊಡಗು: ಕೆಎಸ್ಆರ್‌ಟಿಸಿ ಹಾಗೂ ಸ್ಕೂಟರ್‌ ನಡುವೆ ಅಪಘಾತ ಸಂಭವಿಸಿದ್ದು, ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಬಾಲಕನ ಸ್ಥಿತಿ ಗಂಭೀರವಾಗಿದೆ. ಕೊಡಗಿನ ವಿರಾಜಪೇಟೆ ತಾಲೂಕಿನ ಬಿಟ್ಟಂಗಾಲ ಗ್ರಾಮದಲ್ಲಿ ಅಪಘಾತ (Road Accident) ಸಂಭವಿಸಿದೆ.

ಸವಾರ ವೇಣುಗೋಪಾಲ್ ಮೃತ ದುರ್ದೈವಿ. ಸ್ಕೂಟಿಯಲ್ಲಿದ್ದ 11 ವರ್ಷದ ಬಾಲಕನ ಸ್ಥಿತಿ ಗಂಭೀರವಾಗಿದ್ದು, ವಿರಾಜಪೇಟೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕ್ಯಾಂಟರ್ ಬ್ರೇಕ್ ಫೇಲ್ಯೂರ್ ಆಗಿ ಸರಣಿ ಅಪಘಾತ

ಕ್ಯಾಂಟರ್ ವಾಹನದ ಬ್ರೇಕ್ ಫೇಲ್ಯೂರ್ ಆಗಿದ್ದರಿಂದ ಸರಣಿ ಅಪಘಾತ ಸಂಭವಿಸಿದೆ. ಬೆಂಗಳೂರಿನ ಮಾಗಡಿ ಮುಖ್ಯ ರಸ್ತೆಯ ಓಲ್ಡ್ ರಿಂಗ್ ರೋಡ್ ಬಳಿ ಘಟನೆ ನಡೆದಿದೆ. ಕ್ಯಾಂಟರ್‌ ವಾಹನವು ಕಾರು ಮತ್ತು ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಸದ್ಯ ಘಟನೆಯಲ್ಲಿ ಮೂರು ವಾಹನಗಳಿಗೆ ಮಾತ್ರ ಡ್ಯಾಮೇಜ್ ಆಗಿದ್ದು, ಯಾರುಗೂ ಪ್ರಾಣ ಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Rain News : ಶುರುವಾಯ್ತು ಮಳೆ ಅವಘಡ; ಮಲಗಿದ್ದಾಗ ಚಾವಣಿ ಕುಸಿದು ಮಹಿಳೆ ಸಾವು

ಮೂಡಬಿದ್ರೆಯಲ್ಲಿ ಮಣ್ಣಿನ ಲಾರಿಯ ಬ್ರೇಕ್ ಫೇಲ್

ದಕ್ಷಿಣ ಕನ್ನಡದ ಎಡಪದವು ರಾಮಮಂದಿರದ ಬಳಿ ಮಂಗಳೂರು ಕಡೆಯಿಂದ ಮೂಡಬಿದ್ರೆಗೆ ತೆರಳುತ್ತಿದ್ದ ಲಾರಿಯ ಬ್ರೇಕ್ ಫೇಲ್ ಆಗಿತ್ತು. ಲಾರಿ ನಿಲ್ಲಿಸಲು ಆಗದೆ, ಸುಮಾರು 500 ಮೀಟರ್ ದೂರದವರೆಗೂ ಹೋಗಿ ಮೊದಲಿಗೆ ಎದುರಿಗೆ ಬಂದ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರು ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದವರಿಗೆ ಗಾಯವಾಗಿದೆ.

ಬಳಿಕ ಮುಂದೆ ಚಲಿಸಿದ ಲಾರಿ, ಎಣ್ಣೆ ಪೂರೈಕೆ ಮಾಡುತ್ತಿದ್ದ ಪಿಕ್ಅಫ್ ವಾಹನಕ್ಕೆ ಡಿಕ್ಕಿಯಾಗಿತ್ತು. ಪರಿಣಾಮ ಪಿಕ್‌ಅಪ್‌ ವಾಹನ ಉರುಳಿ ಬಿದ್ದು ಎಣ್ಣೆ ಪ್ಯಾಕೆಟ್ಗಳು ಚೆಲ್ಲಾಪಿಲ್ಲಿಯಾಗಿದ್ದವು. ಎದುರಿನಿಂದ ಬಂದ ಟ್ಯಾಂಕರ್‌ವೊಂದು ಲಾರಿ ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿ ಬಿದ್ದಿತ್ತು. ಬಳಿಕ ಎಡಪದವು ಪೇಟೆಯ ಬಳಿ ಬಸ್‌ಗೆ ಡಿಕ್ಕಿ ಹೊಡೆದು ಲಾರಿ ನಿಂತಿತ್ತು. ಮೂಡಬಿದ್ರೆಯಿಂದ ಮಂಗಳೂರಿಗೆ ಬರುತ್ತಿದ್ದ ನಿಶ್ಮತ ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದರು. ಸರಣಿ ಅಪಘಾತದ ನಡುವೆ ಅಗರಿ ಎಂಟರ್‌ರ್ಪ್ರೈಸಸ್ ಎಂಬ ಅಂಗಡಿಯ ಕಟ್ಟಡಕ್ಕೂ ಹಾನಿಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Rain News : ಶುರುವಾಯ್ತು ಮಳೆ ಅವಘಡ; ಮಲಗಿದ್ದಾಗ ಚಾವಣಿ ಕುಸಿದು ಮಹಿಳೆ ಸಾವು

Rain News : ಒಂದು ಕಡೆ ಸಿಡಿಲಿಗೆ ಸಾವು-ನೋವು ಸಂಭವಿಸುತ್ತಿದ್ದರೆ, ಮತ್ತೊಂದು ಕಡೆ ರಾತ್ರಿ ಮಲಗಿದ್ದಾಗ ದಿಢೀರ್‌ ಮನೆ ಚಾವಣಿ ಕುಸಿದಿದೆ. ಪರಿಣಾಮ ಮಹಿಳೆಯೊಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಪಾಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಮೃತಪಟ್ಟಿದ್ದಾರೆ.

VISTARANEWS.COM


on

By

Rain news
Koo

ವಿಜಯನಗರ: ಧಾರಕಾರವಾಗಿ ಸುರಿಯುತ್ತಿರುವ ಮಳೆ (Rain News) ನಾನಾ ಅವಾಂತರವನ್ನು ಸೃಷ್ಟಿ ಮಾಡಿದ್ದು, ಜನರ ಸಾವು-ನೋವಿಗೆ ಕಾರಣವಾಗಿದೆ. ಭಾರಿ ಮಳೆಗಾಳಿಗೆ ಚಾವಣಿ ಕುಸಿದು ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಹರಾಳು ಗ್ರಾಮದಲ್ಲಿ ಘಟನೆ ನಡೆದಿದೆ. ನಾಗಮ್ಮ (48) ಮೃತ ದುರ್ದೈವಿ.

ರಾತ್ರಿ ಪೂರ್ತಿ ಸುರಿದ ಭಾರಿ ಮಳೆಯೊಂದಿಗೆ, ರಭಸವಾಗಿ ಬೀಸಿದ ಗಾಳಿಗೆ ಮನೆ ಚಾವಣಿ ಕುಸಿದಿದೆ. ಈ ವೇಳೆ ನಾಗಮ್ಮ ಗಂಭೀರ ಗಾಯಗೊಂಡಿದ್ದರು. ಕೂಡಲೇ ಕುಟುಂಬಸ್ಥರು ಕೊಟ್ಟೂರು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಕೊಪ್ಪಳ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ನಾಗಮ್ಮ ಮೃತಪಟ್ಟಿದ್ದಾರೆ. ಕೊಟ್ಟೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಗುಡುಗು ಮಳೆಗೆ ಕೆರೆಯಂತಾದ ರಸ್ತೆಗಳು

ಬಿಸಿಲಿನ ಧಗೆಗೆ ತತ್ತರಿಸಿದ್ದ ಬೀದರ್ ಜನತೆಗೆ ಶುಕ್ರವಾರ ರಾತ್ರಿಯಿಂದಲೇ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗಿದೆ. ಏಕಾಏಕಿ ಮಳೆಯಿಂದಾಗಿ ವಾಹನ ಸವಾರರು, ಸಾರ್ವಜನಿಕರ ಪರದಾಡಿದರು. ಮಳೆಯಿಂದಾಗಿ ನಗರದ ಪ್ರಮುಖ ರಸ್ತೆಗಳು ಕೆರೆಯಂತಾಗಿದ್ದವು. ತರಕಾರಿ, ತೋಟಗಾರಿಕೆ ಬೆಳೆಗಳು ಭಾರಿ ಪ್ರಮಾಣದಲ್ಲಿ ಹಾನಿಯಾಗಿವೆ. ಸಿಡಿಲು ಬಡಿದು ಬರೂರು ಗ್ರಾಮದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಔರಾದ್, ಕಮಲನಗರ, ಭಾಲ್ಕಿ ತಾಲೂಕಿನಲ್ಲಿ‌ ಧಾರಾಕಾರ ಮಳೆ ಆಗುತ್ತಿದ್ದರೆ, ಬಸವಕಲ್ಯಾಣ, ಹುಮನಾಬಾದ್‌, ಚಿಟಗುಪ್ಪಾ ತಾಲೂಕುಗಳಲ್ಲಿ ಸಾಧಾರಣ ಮಳೆಯಾಗುತ್ತಿದೆ.

ಇದನ್ನೂ ಓದಿ: Rain News : ಸಿಡಿಲಿಗೆ ವ್ಯಕ್ತಿ ಸೇರಿ ಜಾನುವಾರುಗಳು ಮೃತ್ಯು; ವ್ಯಾಪಕ ಮಳೆಗೆ ಜನರು ಕಂಗಾಲು

ಮಳೆಯಲ್ಲಿಯೇ ಕ್ರಿಕೆಟ್‌ ಆಟ

ಕೊಪ್ಪಳದಲ್ಲಿ ಶನಿವಾರ ಬೆಳ್ಳಂಬೆಳಗ್ಗೆ ವರುಣನ ಆಗಮನದಿಂದ‌ ಜನರು ಸಂತಸಗೊಂಡಿದ್ದರು. ಬಿಸಿಲಿನಿಂದ‌ ಕಂಗೆಟ್ಟಿದ್ದವರು ಮಳೆಯಲ್ಲಿಯೇ ಯುವಕರು ಕ್ರಿಕೆಟ್ ಆಡಿದರು. ಗದಗ ಜಿಲ್ಲೆಯ ಮುಂಡರಗಿ, ಶಿರಹಟ್ಟಿ ಸೇರಿದಂತೆ ಹಲವೆಡೆ ಬಿರುಗಾಳಿ ಸಮೇತ ಗುಡುಗು ಮಳೆಯಾಗುತ್ತಿದೆ. ಮಳೆ ಶುರುವಾದ ಹಿನ್ನೆಲೆ ಜನಜೀವನ‌ ಅಸ್ತವ್ಯಸ್ತವಾಗಿತ್ತು. ಯಾದಗಿರಿ ನಗರದಲ್ಲಿ ಜಿಟಿ ಜಿಟಿ ಮಳೆಯಾಗುತ್ತಿದ್ದು, ಕಳೆದ ಅರ್ಧ ಗಂಟೆಯಿಂದ ಸುರಿಯುತ್ತಿದೆ. ಹುಬ್ಬಳ್ಳಿಯಲ್ಲೂ ಎಡಬಿಡದೇ ಮಳೆ ಸುರಿಯುತ್ತಿದೆ. ಕೊಪ್ಪಳ ಜಿಲ್ಲೆಯಲ್ಲೂ ಭಾರಿ ಮಳೆಗೆ ಕೆಲವು ಕಡೆ ಹೊಲದ ಒಡ್ಡುಗಳು ಒಡೆದು ಹೋಗಿವೆ. ಕೊಪ್ಪಳ ತಾಲೂಕಿನ ಬೆಟಗೆರಿ ಹಾಗೂ ಬೋಚನಹಳ್ಳಿಯಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ.

ಕರಾವಳಿಯಲ್ಲೂ ಮಳೆ ಅಬ್ಬರ

ಕರಾವಳಿಯ ಉತ್ತರಕನ್ನಡಕ್ಕೂ ವರುಣ ಕಾಲಿಟ್ಟಿದ್ದಾನೆ. ಕಳೆದೆರಡು ದಿನಗಳಿಂದ ಘಟ್ಟದ ಮೇಲಿನ ತಾಲೂಕುಗಳಲ್ಲಿ ಮಳೆ ಅಬ್ಬರಿಸುತ್ತಿತ್ತು. ಶನಿವಾರ ಬೆಳಗ್ಗೆಯಿಂದ ಕುಮಟಾ, ಅಂಕೋಲಾ ಭಾಗದಲ್ಲಿ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯು ಏಪ್ರಿಲ್ 22ರವರೆಗೆ ಮಳೆಯ ಮುನ್ಸೂಚನೆ ನೀಡಿದೆ. ಶಿರಸಿ, ಸಿದ್ದಾಪುರ, ಮುಂಡಗೋಡ, ಹಳಿಯಾಳ ಭಾಗದಲ್ಲಿ ಕಳೆದೆರಡು ದಿನಗಳಿಂದ ಭಾರೀ ಮಳೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಶಿಕ್ಷಣ

CET 2024 exam: ಸಿಇಟಿಯಲ್ಲಿ 50 ಔಟ್ ಆಫ್ ಸಿಲೆಬಸ್ ಪ್ರಶ್ನೆ; ಮರು ಪರೀಕ್ಷೆ ಅಥವಾ ಗ್ರೇಸ್‌ ಮಾರ್ಕ್ಸ್‌? ಇಂದು ನಿರ್ಧಾರ

CET 2024 exam: ಈ ಸಮಸ್ಯೆಯನ್ನು ಸರಿಪಡಿಸಲಾಗದ ಸ್ಥಿತಿಗೆ ಕೆಇಎ ಬಂದಿದೆ ಎನ್ನಲಾಗಿದೆ. ನಾಲ್ಕು ವಿಷಯಗಳಲ್ಲಿ ಒಟ್ಟು 50 ಪ್ರಶ್ನೆಗಳು ಔಟ್ ಆಫ್ ಸಿಲೆಬಸ್ ಇರುವುದರಿಂದ ಕೆಇಎ ಮುಂದೆ ಏನು ಮಾಡಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಈಗ ಗ್ರೇಸ್ ಮಾರ್ಕ್ಸ್ ನೀಡಲು ಸಾಧ್ಯವೇ? ಮರು ಪರೀಕ್ಷೆ ನಡೆಸಬೇಕಾ? ಎಂಬ ಗೊಂದಲ ಏರ್ಪಿಟ್ಟಿದೆ. ಈ ಬಗ್ಗೆ ಇಂದೇ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಹೆಚ್ಚಿದೆ.

VISTARANEWS.COM


on

50 out of syllabus question in CET 2024 exam Re examination or grace marks
Koo

ಬೆಂಗಳೂರು: ಎಂಜಿನಿಯರಿಂಗ್, ಕೃಷಿ ಸೇರಿದಂತೆ ಹಲವು ವೃತ್ತಿಪರ ಕೋರ್ಸ್‌ಗಳಿಗೆ ಬುಧವಾರ, ಗುರುವಾರ ನಡೆದಿದ್ದ ದಿನದ ಸಿಇಟಿ-2024 ಪರೀಕ್ಷೆಯಲ್ಲಿ (CET 2024 exam) ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (KEA) ಮಹಾ ಎಡವಟ್ಟು ಆಗಿದೆ. ನಾಲ್ಕು ವಿಷಯಗಳಿಂದ ಒಟ್ಟು 50 ಪ್ರಶ್ನೆಗಳು ಔಟ್ ಆಫ್ ಸಿಲೆಬಸ್ ಬಂದಿವೆ. ಹೀಗಾಗಿ ಈ ಬಗ್ಗೆ ಪರಿಶೀಲಿಸಿ ತೀರ್ಮಾನ ಕೈಗೊಳ್ಳಲು ಇಂದೇ (ಶನಿವಾರ – ಏಪ್ರಿಲ್‌ 20) ಸಮಿತಿಯನ್ನು ರಚನೆ ಮಾಡಲು ಮುಂದಾಗಿದೆ. ಅಲ್ಲದೆ, ಮರು ಪರೀಕ್ಷೆ ಮಾಡಲಿದೆಯೇ? ಅಥವಾ ಗ್ರೇಸ್‌ ಮಾರ್ಕ್ಸ್‌ ಕೊಡಲಿದೆಯೇ ಎಂಬ ಪ್ರಶ್ನೆಗಳು ಎದುರಾಗಿವೆ.

ಮೊದಲ ದಿನದ ಸಿಇಟಿ ಪರೀಕ್ಷೆಯಲ್ಲಿ ಗಣಿತ ಹಾಗೂ ಜೀವಶಾಸ್ತ್ರದ ವಿಷಯದಲ್ಲಿ ಔಟ್ ಆಫ್ ಸಿಲಬಸ್ ಪ್ರಶ್ನೆಗಳನ್ನು ಕೇಳಲಾಗಿತ್ತು. ಎರಡನೇ ದಿನದ ಪರೀಕ್ಷೆಯಲ್ಲಿಯೂ ಈ ಸಮಸ್ಯೆ ಪುನರಾವರ್ತನೆಯಾಗಿತ್ತು. ಭೌತಶಾಸ್ತ್ರದಲ್ಲಿ 8 ಹಾಗೂ ರಸಾಯನಶಾಸ್ತ್ರ ವಿಷಯದಲ್ಲಿ 18 ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗಳನ್ನು ಕೇಳಲಾಗಿತ್ತು. ಇದು ವಿದ್ಯಾರ್ಥಿಗಳ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.

ಈ ಸಮಸ್ಯೆಯನ್ನು ಸರಿಪಡಿಸಲಾಗದ ಸ್ಥಿತಿಗೆ ಕೆಇಎ ಬಂದಿದೆ ಎನ್ನಲಾಗಿದೆ. ನಾಲ್ಕು ವಿಷಯಗಳಲ್ಲಿ ಒಟ್ಟು 50 ಪ್ರಶ್ನೆಗಳು ಔಟ್ ಆಫ್ ಸಿಲೆಬಸ್ ಇರುವುದರಿಂದ ಕೆಇಎ ಮುಂದೆ ಏನು ಮಾಡಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಈಗ ಗ್ರೇಸ್ ಮಾರ್ಕ್ಸ್ ನೀಡಲು ಸಾಧ್ಯವೇ? ಮರು ಪರೀಕ್ಷೆ ನಡೆಸಬೇಕಾ? ಎಂಬ ಗೊಂದಲ ಏರ್ಪಿಟ್ಟಿದೆ.

ಇದನ್ನೂ ಓದಿ: Neha Murder Case: ನೇಹಾಳನ್ನು ಮದುವೆ ಮಾಡಿಸುವಂತೆ ಆಕೆಯ ಹೆತ್ತವರ ಪ್ರಾಣ ತಿಂದಿದ್ದ ಫಯಾಜ್!‌

ಮರು ಪರೀಕ್ಷೆ ಮಾಡುತ್ತಾ?

ಮರು ಪರೀಕ್ಷೆ ನಡೆಸಲು ಕೆಇಎ ಮುಂದಾಗುತ್ತದೆಯೇ? ಒಂದು ವೇಳೆ ಈ ನಿರ್ಧಾರಕ್ಕೆ ಬಂದರೆ ದೂರದೂರಿನಿಂದ ಬಂದು ಪರೀಕ್ಷೆ ಬರೆದ ಮಕ್ಕಳಿಗೆ ಮತ್ತೊಂದು ಸವಾಲು ಎದುರಾಗಲಿದೆ. ಹೀಗಾಗಿ ಮಕ್ಕಳಿಗೆ ಗ್ರೇಸ್ ಮಾರ್ಕ್ಸ್ ಕೊಡಿ. ಇಲ್ಲದಿದ್ದರೆ ಮಕ್ಕಳ ಭವಿಷ್ಯವೇ ಹಾಳಾಗುತ್ತದೆ ಎಂದು ಪೋಷಕರು ಒತ್ತಾಯ ಮಾಡುತ್ತಿದ್ದಾರೆ.

ಏಪ್ರಿಲ್‌ 27ರವರೆಗೆ ಆಕ್ಷೇಪಣೆ ಸಲ್ಲಿಕೆಗೆ KEA ಅವಕಾಶ

ಈ ಬಾರಿ ಸಿಇಟಿಯಲ್ಲಿ ನೋಂದಣಿ ಮಾಡಿಕೊಂಡಿದ್ದ 3,49,637 ವಿದ್ಯಾರ್ಥಿಗಳ ಪೈಕಿ ಶೇ.92ರಷ್ಟು ಮಂದಿ ಪರೀಕ್ಷೆ ಬರೆದಿದ್ದಾರೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಈ ವರ್ಷ ಪಠ್ಯದಲ್ಲಿ ಇಲ್ಲದ ವಿಷಯಕ್ಕೆ ಸಂಬಂಧಿಸಿದಂತೆ ಪರೀಕ್ಷಾ ಪ್ರಾಧಿಕಾರ ಪ್ರಶ್ನೆ ಕೇಳಿದೆ. ಪಿಯು ಮಂಡಳಿ ನಿಗದಿ ಪಡಿಸಿರುವ ಪಿಯು ಪಠ್ಯಪುಸ್ತಕದ ಆಧಾರದ ಮೇಲೆ ಸಿಇಟಿ ಪರೀಕ್ಷೆ ನಡೆಸಬೇಕು. ಆದರೆ ಪಿಯು ಮಂಡಳಿ ನಿಗದಿ ಮಾಡದ ಪಠ್ಯ ಪುಸ್ತಕದ ಪ್ರಶ್ನೆ ಕೇಳಿ ಕೆಇಎ ಗೊಂದಲ ಸೃಷ್ಟಿಸಿದೆ. ಕೆಇಎ ಎಡವಟ್ಟಿಗೆ ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ. ಈ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಏಪ್ರಿಲ್ 27ರವರೆಗೆ ಕಾಲಾವಕಾಶವನ್ನು ಕೆಇಎ ನೀಡಿದೆ.

ಪ್ರಶ್ನೆಪತ್ರಿಕೆಯಲ್ಲಿನ ಯಾವುದೇ ಪ್ರಶ್ನೆಗಳ ಬಗ್ಗೆ ಆಕ್ಷೇಪಣೆಗಳು ಇದ್ದರೆ, ವಿಷಯ, ವರ್ಷನ್‌ ಕೋಡ್, ಪ್ರಶ್ನೆ ಸಂಖ್ಯೆಗಳನ್ನು ನಮೂದಿಸಿ keaugcet24@gmail.com ಗೆ ಇ – ಮೇಲ್‌ ಮೂಲಕ ಸಂಜೆ 5.30ರ ಒಳಗೆ ದೂರು ಸಲ್ಲಿಸಲು ಕೆಇಎ ಸೂಚಿಸಿದೆ. ಇದಕ್ಕೆ ತಜ್ಞರ ಸಮಿತಿಯು ಪರಿಶೀಲಿಸಿ ಸೂಕ್ತ ಪರಿಹಾರವನ್ನು ನೀಡಲಿದೆ ಎಂದು ಕೆಇಎ ಸ್ಪಷ್ಟಪಡಿಸಿದೆ.

ಈ ಬಗ್ಗೆ ಪರೀಕ್ಷಾ ಪ್ರಾಧಿಕಾರ ಹಾಗೂ ಪಿಯು ಮಂಡಳಿ ನಡುವೆ ಆರೋಪ ಪ್ರತ್ಯಾರೋಪ ನಡೆದಿದೆ. ಪಿಯು ಮಂಡಳಿ ನೀಡಿದ ಪಠ್ಯ ಪುಸ್ತಕದ ಆಧಾರದ ಮೇಲೆಯೇ ಸಿಇಟಿ ಪ್ರಶ್ನೆ ಪತ್ರಿಕೆ ತಯಾರಿಸಲಾಗಿದೆ ಎಂದು ಕೆಇಎ‌ ಹೇಳಿದೆ. ತಾವು ನೀಡಿದ ಪರಿಷ್ಕೃತ ಪಠ್ಯಪುಸ್ತಕ ಕೆಇಎ ಅನುಸರಿಸಿಲ್ಲ ಎಂದು ಪಿಯು ಮಂಡಳಿ ಆರೋಪಿಸಿದೆ. ಎರಡು ಇಲಾಖೆ ನಡುವೆ ಪತ್ರವ್ಯವಹಾರ ನಡೆದಿದೆ. ಪಠ್ಯಪುಸ್ತಕ ಪರಿಷ್ಕರಣೆ ಆಧಾರದ ಮೇಲೆ ಸಿಇಟಿ ಪರೀಕ್ಷೆ ನಡೆಸುವಂತೆ ಪಿಯು ಬೋರ್ಡ್ ಮೊದಲೇ ಪತ್ರ ಬರೆದಿತ್ತು. ಪಿಯು ಬೋರ್ಡ್ ಪತ್ರಕ್ಕೆ ಉತ್ತರವನ್ನೂ ಕೆಇಎ ನೀಡಿತ್ತು. ಪರಿಷ್ಕೃತ ಪಠ್ಯಪುಸ್ತಕ ಅನುಸರಿಸಲಾಗಿದೆ ಎಂದಿದೆ. ಕೊನೆಗೆ ಪಿಯು ಬೋರ್ಡ್ ನೀಡಿದ ಪರಿಷ್ಕೃತ ಪಠ್ಯಪುಸ್ತಕವನ್ನು ಕೆಇಎ ನಿರ್ಲಕ್ಷ್ಯ ಮಾಡಿದೆ.

ಇಂದು ಈ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಕೆಇಎ ಸೂಚನೆ ನೀಡಿದೆ. ಆಕ್ಷೇಪಣೆಗಳ ಆಧಾರದ ಮೇಲೆ ಪರಿಶೀಲನೆಗೆ ಸಮಿತಿ ರಚಿಸುವ ಭರವಸೆಯನ್ನು ಕೆಇಎ ನೀಡಿದ್ದು, ಸಮಿತಿ ನೀಡುವ ವರದಿಯ ಆಧಾರದ ಮೇಲೆ‌ ಕ್ರಮ ಕೈಗೊಳ್ಳಲಾಗುವುದು ಎಂದು ಕೆಇಎ ನಿರ್ದೇಶಕಿ ರಮ್ಯಾ ಹೇಳಿದ್ದಾರೆ.

Continue Reading

ಮಳೆ

Rain News : ಸಿಡಿಲಿಗೆ ವ್ಯಕ್ತಿ ಸೇರಿ ಜಾನುವಾರುಗಳು ಮೃತ್ಯು; ವ್ಯಾಪಕ ಮಳೆಗೆ ಜನರು ಕಂಗಾಲು

Rain News : ಸಿಡಿಲಿನ ಹೊಡೆತಕ್ಕೆ ಮೃತಪಡುವವರ ಸಂಖ್ಯೆ ಏರಿಕೆ ಆಗುತ್ತಲೇ ಇದೆ. ಗುಡುಗು ಸಿಡಿಲಿನ ಮುನ್ನೆಚ್ಚರಿಕೆ ಕೊಟ್ಟರೂ ಮುಂಜಾಗ್ರತಾ ವಹಿಸಿದೆ ಜನರು ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ. ಸದ್ಯ ಹಲವೆಡೆ ಸುರಿದ ಭಾರಿ ಗಾಳಿಮಳೆಗೆ ನಾನಾ ಅನಾಹುತಗಳು (Karnataka Weather Forecast) ಸಂಭವಿಸಿವೆ.

VISTARANEWS.COM


on

By

Rain News
Koo

ಬೀದರ್: ರಾಜ್ಯದ ಹಲವೆಡೆ ಮಳೆಯು (Rain news) ಅಬ್ಬರಿಸುತ್ತಿದ್ದು, ಸಾವು-ನೋವಿಗೆ ಕಾರಣವಾಗುತ್ತಿದೆ. ಯಾದಗಿರಿ ಜಿಲ್ಲೆಯ ಔರಾದ ತಾಲೂಕಿನ ಚಿಕ್ಲಿ (ಜೆ) ತಾಂಡದಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಭೀಮಲಾ ಹೇಮಲು (60) ಮೃತ ದುರ್ದೈವಿ. ನಿನ್ನೆ ಶುಕ್ರವಾರ ಸಂಜೆ ಭೀಮಲಾ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದಿದೆ. ಸ್ಥಳಕ್ಕೆ ಔರಾದ ತಾಲೂಕಿನ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಗದಗದಲ್ಲಿ ವರುಣಾರ್ಭಟಕ್ಕೆ ಜಾನುವಾರು ಬಲಿ

ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಕೆಲೂರು ಗ್ರಾಮದಲ್ಲಿ ಗುಡುಗು ಸಿಡಿಲು ಸಹಿತ ಮಳೆಯಾಗಿದೆ. ಸಿಡಿಲು ಬಡಿದು ಎತ್ತು ಹಾಗೂ ಎಮ್ಮೆ ಮೃತಪಟ್ಟಿವೆ. ರೈತ ಶಂಕ್ರಪ್ಪ ಸೋಂಪುರ ಅವರಿಗೆ ಸೇರಿದ ಎತ್ತು ಅನ್ನು ಮನೆ ಬಳಿ ಕಟ್ಟಿದ್ದರು. ಈ ವೇಳೆ ಸಿಡಿಲು ಬಡಿದು ಎತ್ತು ಜೀವ ಬಿಟ್ಟಿತ್ತು.

ಮತ್ತೊಬ್ಬ ರೈತ ಹನುಮಪ್ಪ ಕೊಂಚಿಗೇರಿ ಎಂಬುವವರ ಎಮ್ಮೆಯೂ ಗ್ರಾಮದ ಹೊರವಲಯದಲ್ಲಿ ಸಿಡಿಲು ಬಡಿದು ಮೃತಪಟ್ಟಿದೆ. ಹೆತ್ತ ಮಕ್ಕಳಂತೆ‌ ಜಾನುವಾರುಗಳನ್ನು ಜೋಪಾನ ಮಾಡಿದ್ದ ರೈತ ಕುಟುಂಬಗಳು ಕಣ್ಣೀರು ಹಾಕಿದರು. ಸ್ಥಳಕ್ಕೆ ಬಾರದ ಅಧಿಕಾರಿಗಳ ವಿರುದ್ಧ ರೈತರು ಆಕ್ರೋಶ ಹೊರಹಾಕಿದರು.

Rain News

ಇದನ್ನೂ ಓದಿ: Boat Capsizes: ಭಾರೀ ಗಾಳಿ ಮಳೆಗೆ ಅರಬ್ಬೀ ಸಮುದ್ರದಲ್ಲಿ ಬೋಟ್‌ ಮುಳುಗಡೆ, ನಾಲ್ವರ ರಕ್ಷಣೆ; ಇಲ್ಲಿದೆ ವಿಡಿಯೋ

ಹಾಸನದಲ್ಲಿ ಮೂರು ಮನೆಗಳಿಗೆ ಹಾನಿ

ಹಾಸನ ಜಿಲ್ಲೆಯ ವಿವಿಧೆಡೆ ನಿನ್ನೆ ಶುಕ್ರವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಅಪಾರ ಪ್ರಮಾಣದ ಹಾನಿಯಾಗಿದೆ. ಗುಡುಗು, ಸಿಡಿಲು, ಬಿರುಗಾಳಿ ಸಹಿತ ಸುರಿದ ವರ್ಷಧಾರೆಗೆ ಮೂರು ಮನೆಗಳಿಗೆ ಹಾನಿಯಾಗಿದೆ. ಸಕಲೇಶಪುರ ತಾಲೂಕಿನ ಬಿರಡಹಳ್ಳಿ ಗ್ರಾಮದಲ್ಲಿ ಭಾರಿ ಗಾಳಿಗೆ ವಾಸದ ಮನೆಯ ಹಂಚುಗಳು ಹಾರಿ ಹೋಗಿದ್ದವು. ಶೀಟ್‌ಗಳು ಮನೆಯ ಒಳಗೆ ಮುರಿದು ಬಿದ್ದಿತ್ತು. ಮನೆಯ ಮೇಲೆ ಮರ ಬಿದ್ದು ಒಂದು ಮನೆ ಜಖಂಗೊಂಡಿತ್ತು.

ಗ್ರಾಮದ ಸಲೀಂ, ಚಂದ್ರು ಎಂಬುವವರಿಗೆ ಸೇರಿದ ಮನೆಗಳು ಹಾನಿಯಾಗಿದ್ದರೆ, ಜಾಕೋಬ್ ಪಿಂಟೊ ಎಂಬುವವರ ಮನೆಯ ಮೇಲೆ ಮರ ಬಿದ್ದು ಮನೆ ಸಂಪೂರ್ಣ ಜಖಂಗೊಂಡಿತ್ತು. ಮನೆಯಲ್ಲಿದ್ದರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದರು. ಸ್ಥಳಕ್ಕೆ ಅಧಿಕಾರಿಗಳು ಆಗಮಿಸಿ ಪರಿಶೀಲಿಸುವಂತೆ ಒತ್ತಾಯಿಸಿದರು. ಮಳೆಯಿಂದ ಆಗಿರುವ ನಷ್ಟಕ್ಕೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದರು.

Rain News

ಕೆಲವೆಡೆ ಬಾರಿ ಗಾಳಿಗೆ ಬೃಹತ್‌ ಗಾತ್ರದ ಮರ ಉರುಳಿ ಬಿದ್ದಿತ್ತು. ಜನ್ನಾಪುರ-ಹಲಸುಲಿಗೆ ರಸ್ತೆ ಮಧ್ಯೆ ಮರ ಬಿದ್ದು, ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದವು. ಇದರಿಂದಾಗಿ ಜನ್ನಾಪುರ, ಹಲಸುಲಿಗೆ, ಮಾಗಡಿ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿ, ರಾತ್ರಿಯಿಂದ ವಿದ್ಯುತ್ ಇಲ್ಲದೆ ಗ್ರಾಮಸ್ಥರ ಪರದಾಡಿದರು.

Rain News

ಜಲಾವೃತಗೊಂಡ ಬ್ರಿಡ್ಜ್‌

ಗದಗನಲ್ಲಿ ವರುಣದೇವನ ಆರ್ಭಟ ಜೋರಾಗಿದೆ. ಗುಡುಗು, ಸಿಡಿಲು ಸಹಿತ ಭಾರೀ ಮಳೆಗೆ ಗದಗನಿಂದ ಬೆಟಗೇರಿಗೆ ಸಂಪರ್ಕಿಸುವ ಬಳ್ಳಾರಿ ಗೇಟ್ ಅಂಡರ್ ಬ್ರಿಡ್ಜ್‌ ಸಂಪೂರ್ಣ ಜಲಾವೃತಗೊಂಡಿದೆ. ಸುಮಾರು 8 ಅಡಿಗಳಷ್ಟು ನೀರು ನಿಂತಿದ್ದು, ಸಂಚಾರ ಅಸ್ತವ್ಯಸ್ತಗೊಂಡು ವಾಹನ ಸವಾರರು ಪರದಾಡಿದರು. ಇತ್ತ ಬೆಟಗೇರಿ ಹಾಗೂ ಗದಗ ನಗರ ಸಂಪರ್ಕಿಸಬೇಕಾದರೆ ಸುತ್ತು ಹಾಕಿಕೊಂಡು ಹೋಗುವ ಪರಿಸ್ಥಿತಿ ಸೃಷ್ಟಿಯಾಗಿದೆ. ರಸ್ತೆ ಬದಿ ಪಾರ್ಕ್‌ ಮಾಡಿದ್ದ ಮಿನಿ ಬಸ್ ಜಲಾವೃತವಾಗಿತ್ತು. ನೀರಿನಲ್ಲಿಯೇ ಬಸ್ ಚಲಾಯಿಸಿಕೊಂಡು ಬರಲಾಯಿತು.

ಮುರಿದು ಬಿದ್ದ ಸಿಗ್ನಲ್‌ ಕಂಬ

ಧಾರವಾಡದಲ್ಲಿ ಜೋರಾಗಿ ಬೀಸಿದ ಗಾಳಿಗೆ ಸಿಗ್ನಲ್ ಕಂಬ ಮುರಿದು ಬಿದ್ದಿತ್ತು. ಧಾರವಾಡದ ಯುಬಿ ಹಿಲ್ ಸರ್ಕಲ್‌ನಲ್ಲಿದ್ದ ಕಂಬದ ಕೆಳಭಾಗದಲ್ಲಿ ತುಕ್ಕು ಹಿಡಿದಿತ್ತು. ರಭಸವಾಗಿ ಬೀಸಿದ ಗಾಳಿಗೆ ರಸ್ತೆ ಮೇಲೆಯೇ ಕಂಬ ಬಿದ್ದಿತ್ತು. ಅದೃಷ್ಟವಶಾತ್ ವಾಹನ ಸವಾರರು ಪಾರಾಗಿದ್ದರು. ವಿದ್ಯಾಗಿರಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Road Accident in karnataka
ಕೊಡಗು1 min ago

Road Accident : ಯಮ ರೂಪಿ ಕೆಎಸ್‌ಆರ್‌ಟಿಸಿ ಬಸ್‌ಗೆ ಸ್ಕೂಟರ್‌ ಸವಾರ ಸಾವು, ಬಾಲಕ ಗಂಭೀರ

Gut Health
ಲೈಫ್‌ಸ್ಟೈಲ್16 mins ago

Gut Health: ನಿಮ್ಮ ಕರುಳಿನ ಆರೋಗ್ಯಕ್ಕಾಗಿ ಬೇಸಿಗೆಯಲ್ಲಿ ಈ ಡ್ರಿಂಕ್ಸ್ ಸೇವಿಸಿ

Viral news
ವೈರಲ್ ನ್ಯೂಸ್17 mins ago

Viral news: ಚುನಾವಣೆಗೆ ಮೊದಲೇ 19 ಲಕ್ಷ ಇವಿಎಂ ಕಾಣೆಯಾಗಿದ್ದು ನಿಜವೇ? ಏನಿದರ ಅಸಲಿಯತ್ತು ?

Manjummel Boys ott malayalam to premiere on may
ಮಾಲಿವುಡ್22 mins ago

Manjummel Boys: ಕನ್ನಡದಲ್ಲೂ ಬರಲಿದೆ ʻಮಂಜುಮ್ಮೆಲ್ ಬಾಯ್ಸ್ʼ? ಒಟಿಟಿಗೆ ಯಾವಾಗ?

China Missile
ವಿದೇಶ25 mins ago

China Missile : ಪಾಕಿಸ್ತಾನಕ್ಕೆ ಗುಟ್ಟಾಗಿ ಕ್ಷಿಪಣಿ ಕಳುಹಿಸಿದ ಚೀನಾದ ಎರಡು ಕಂಪನಿಗಳಿಗೆ ಅಮೆರಿಕದ ನಿರ್ಬಂಧ

Rain news
ಮಳೆ26 mins ago

Rain News : ಶುರುವಾಯ್ತು ಮಳೆ ಅವಘಡ; ಮಲಗಿದ್ದಾಗ ಚಾವಣಿ ಕುಸಿದು ಮಹಿಳೆ ಸಾವು

50 out of syllabus question in CET 2024 exam Re examination or grace marks
ಶಿಕ್ಷಣ44 mins ago

CET 2024 exam: ಸಿಇಟಿಯಲ್ಲಿ 50 ಔಟ್ ಆಫ್ ಸಿಲೆಬಸ್ ಪ್ರಶ್ನೆ; ಮರು ಪರೀಕ್ಷೆ ಅಥವಾ ಗ್ರೇಸ್‌ ಮಾರ್ಕ್ಸ್‌? ಇಂದು ನಿರ್ಧಾರ

MS Dhoni
ಪ್ರಮುಖ ಸುದ್ದಿ49 mins ago

MS Dhoni : ಧೋನಿ ಮುಟ್ಟಿದ್ದೆಲ್ಲ ದಾಖಲೆ, ಲಕ್ನೊ ವಿರುದ್ಧವೂ ಮತ್ತೊಂದು ರೆಕಾರ್ಡ್​​

Neha Murder Case Rachita Ram React
ಕ್ರೈಂ1 hour ago

Neha Murder Case: ನೇಹಾ ಹತ್ಯೆ ಆರೋಪಿಯನ್ನು ಜನರ ಕೈಗೆ ಒಪ್ಪಿಸಿ ಎಂದ ಡಿಂಪಲ್‌ ಕ್ವೀನ್‌!

Rain News
ಮಳೆ1 hour ago

Rain News : ಸಿಡಿಲಿಗೆ ವ್ಯಕ್ತಿ ಸೇರಿ ಜಾನುವಾರುಗಳು ಮೃತ್ಯು; ವ್ಯಾಪಕ ಮಳೆಗೆ ಜನರು ಕಂಗಾಲು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder Case
ಹುಬ್ಬಳ್ಳಿ2 hours ago

Neha Murder Case : ನನ್ನ ಮಗನಿಗೆ ಶಿಕ್ಷೆ ಆಗಲಿ; ಇಬ್ಬರೂ ಲವ್‌ ಮಾಡ್ತಿದ್ದರು ಅನ್ನೋದು ಸತ್ಯ ಎಂದ ಫಯಾಜ್‌ ತಾಯಿ

Dina Bhavishya
ಭವಿಷ್ಯ9 hours ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಕೂಡಿಬರಲಿದೆ ಶುಭ ಘಳಿಗೆ

Neha Murder Case
ಹುಬ್ಬಳ್ಳಿ22 hours ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ1 day ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ3 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ4 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20245 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20246 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ6 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

ಟ್ರೆಂಡಿಂಗ್‌