Hampi Utsav: ಹಂಪಿ ಉತ್ಸವಕ್ಕೆ ಅದ್ಧೂರಿ ತೆರೆ; ನಟ ರವಿಚಂದ್ರನ್, ನೆನಪಿರಲಿ ಪ್ರೇಮ್‌ ಸೇರಿ ಹಲವು ಗಣ್ಯರು ಭಾಗಿ - Vistara News

ಕರ್ನಾಟಕ

Hampi Utsav: ಹಂಪಿ ಉತ್ಸವಕ್ಕೆ ಅದ್ಧೂರಿ ತೆರೆ; ನಟ ರವಿಚಂದ್ರನ್, ನೆನಪಿರಲಿ ಪ್ರೇಮ್‌ ಸೇರಿ ಹಲವು ಗಣ್ಯರು ಭಾಗಿ

Hampi Utsav: ಮೂರು ದಿನಗಳ ಕಾಲ ನಡೆದ ಹಂಪಿ ಉತ್ಸವದಲ್ಲಿ ಲಕ್ಷಾಂತರ ಮಂದಿ ಭಾಗಿಯಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಿದರು.

VISTARANEWS.COM


on

The three-day Hampi Utsav concludes in a grand manner
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ವಿಜಯನಗರ: ಮೂರು ದಿನಗಳ ಹಂಪಿ ಉತ್ಸವಕ್ಕೆ (Hampi Utsav) ಭಾನುವಾರ ರಾತ್ರಿ ಅದ್ಧೂರಿ ತೆರೆಬಿದ್ದಿತು. ಉತ್ಸವಕ್ಕೆ ವಿವಿಧೆಡೆಯಿಂದ ಲಕ್ಷಾಂತರ ಜನರು ಆಗಮಿಸಿ ಸಂಗೀತ, ನೃತ್ಯ ಸೇರಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕಣ್ತುಂಬಿಕೊಂಡರು. ಸಮಾರೋಪ ಸಮಾರಂಭದಲ್ಲಿ ನಟ ರವಿಚಂದ್ರನ್, ನೆನಪಿರಲಿ ಪ್ರೇಮ್‌ ಸೇರಿ ಹಲವು ಗಣ್ಯರು ಭಾಗಿಯಾಗಿದ್ದರು.

ಸಮಾರೋಪ ಸಮಾರಂಭದಲ್ಲಿ ನಟ ರವಿಚಂದ್ರನ್ ಅವರು ಮಾತನಾಡಿ, ಹಂಪಿ ಹೆಸರು ಹೇಳಿದ ಕೂಡಲೇ ಮೈ ರೋಮಾಂಚನ ಆಗುತ್ತದೆ. ಇಲ್ಲಿನ ಒಂದೊಂದು ಕಲ್ಲು ಒಂದೊಂದು ಕಥೆ ಹೇಳುತ್ತವೆ. ಸ್ನೇಹಿತರೆಲ್ಲ ಒಂದಾಗಲು ಪಾರ್ಟಿ ಮಾಡುತ್ತಾರೆ. ಯಾವುದೇ ಊರಿಗೆ ಹೋದರೂ ಆಡಂಬರ ಒಂದು ಕಡೆ ಆದರೆ, ನೀವು ಕೊಡುವ ಪ್ರೀತಿ ಇನ್ನೊಂದು ಕಡೆ. ಅಪ್ಪ – ಅಮ್ಮನನ್ನು ಕಳೆದುಕೊಂಡಿದ್ದೇನೆ. ಅವರನ್ನು ನಿಮ್ಮಂತಹ ಜನರ ಮಧ್ಯೆ ಬಂದಾಗ ಕಾಣುವೆ. ಕಲಾವಿದರು ಬದುಕಿರೋದು ಕಲೆಯಿಂದ, ಬದೋಕೋದಕ್ಕೆ ದುಡ್ಡು ಬೇಕಂತಲೇ ಗೊತ್ತಿರಲಿಲ್ಲ ಎಂದು ಹೇಳಿದರು.

ಪ್ರೇಮಲೋಕ ಸಿನಿಮಾ ಮಾಡಿದಾಗ ನಮ್ಮಪ್ಪ ಅಪ್ಪಿಕೊಂಡು ಅತ್ತರು. ಮತ್ತೊಂದು ಅಪ್ಪುಗೆ ಪುನೀತ್‌ರದ್ದು. ಹಂಪಿ ಉತ್ಸವ ಶುರುವಾಗಿ 37 ವರ್ಷ ಆಗಿದೆ. ಹೀಗಾಗಿ ಮತ್ತೊಂದು ಪ್ರೇಮ ಲೋಕ ಶುರು ಮಾಡುತ್ತೇನೆ. ಜಮೀರ್ ಅಹ್ಮದ್‌ರಿಂದ ಒಳ್ಳೆಯ ಕಾರ್ಯಕ್ರಮ ನಡೆದಿದೆ. ಡಿಸಿ ದಿವಾಕರ್ ಉತ್ಸಾಹ ಬೇಕು, ನೀವು ಕೊಡುವ ಹುಮ್ಮಸ್ಸಿನಿಂದ ಕಾರ್ಯಕ್ರಮ ಸಕ್ಸಸ್ ಆಗಿದೆ ಎಂದು ಹೇಳಿದರು.

ಇದನ್ನೂ ಓದಿ | Hampi Utsav: ಹಂಪಿ ಉತ್ಸವದಲ್ಲಿ ಡಿ ಬಾಸ್‌ ಹವಾ; ಮಾಸ್‌ ಡೈಲಾಗ್‌ಗಳ ಮೂಲಕ ರಂಜಿಸಿದ ದರ್ಶನ್‌

ಮುಂದಿನ ವರ್ಷ ಪ್ರೇಮಲೋಕ ಸಿನಿಮಾ

ಯಾವುದೇ ಊರಿಗೆ ಬಂದರೂ ಅಲ್ಲಿನ ಮಣ್ಣು ಮೈಗೆ ಅಂಟಿಕೊಳ್ಳುತ್ತದೆ. ಐದುನೂರು ವರ್ಷದ ಹಿಂದೆ ನಮ್ಮ‌ ನೆಲದ ಗಮ್ಮತ್ತು ವಾಪಸ್ ಬಂತು. ಅದಕ್ಕೆ ಸಾಕ್ಷಿ ಅಯೋಧ್ಯೆ ಶ್ರೀರಾಮಂದಿರ, ಮೈಸೂರಲ್ಲಿ ದಸರಾ, ಹಂಪಿಯಲ್ಲಿ ಹಂಪಿ ಉತ್ಸವ ಆಚರಣೆ ಮಾಡುತ್ತೇವೆ. ಮುಂದಿನ ವರ್ಷ ಪ್ರೇಮಲೋಕ ರೆಡಿ ಮಾಡುತ್ತೇನೆ. ನಿಮಗೆ ಇಷ್ಟ ಆಗುವ ಸಿನಿಮಾ‌‌ ಕೊಡುತ್ತೇನೆ. ಆ ಸಿನಿಮಾದಲ್ಲಿ 20 – 25 ಸಾಂಗ್ ಇರಬೇಕು ಅಂತ ಸಿನಿಮಾ ಕೊಡುತ್ತೇನೆ. ನಿಮ್ಮ ಜೊತೆಯಲ್ಲಿ ಹುಟ್ಟದೇ ಇರಬಹುದು, ಪರದೇ ಮೂಲಕ ನಿಮ್ಮ ಮನದಲ್ಲಿ ಇದ್ದೇನೆ ಎಂದು ರವಿಚಂದ್ರನ್ ಹೇಳಿದರು.

ಮೂರು ದಿನಗಳಲ್ಲಿ 10 ರಿಂದ 12 ಲಕ್ಷ ಜನ ಭೇಟಿ

ಸಚಿವ ಜಮೀರ್‌ ಅಹ್ಮದ್‌ ಮಾತನಾಡಿ, ಹಂಪಿ ಉತ್ಸವಕ್ಕೆ ಪಕ್ಷ ಭೇದ ಇಲ್ಲ. ಇದಕ್ಕೆ ಮಾಜಿ ಸಚಿವ ಆನಂದ್ ಸಿಂಗ್ ಅವರೇ ಸಾಕ್ಷಿ. ಹಂಪಿ ಉತ್ಸವದಲ್ಲಿ ಸಂತೋಷವೂ ಇದೆ, ದುಃಖವೂ ಇದೆ. ಮೂರು ದಿನಗಳಲ್ಲಿ ಹಂಪಿ ಉತ್ಸವಕ್ಕೆ 10 ರಿಂದ 12 ಲಕ್ಷ ಜನ ಬಂದಿದ್ದರು ಅಂತ ಮಾಹಿತಿ ಇದೆ. ರವಿಚಂದ್ರನ್ ಅವರು ಬಂದು ಕಾರ್ಯಕ್ರಮ ಯಶಸ್ವಿ ಮಾಡಿದ್ದಕ್ಕೆ ಧನ್ಯವಾದ. ವಿಜಯನಗರ ಜಿಲ್ಲೆಯಲ್ಲಿ ನಾಡಹಬ್ಬದ ರೀತಿ ಹಂಪಿ ಉತ್ಸವ ಆಚರಣೆ ಮಾಡಲಾಯ್ತು. ನನ್ನ ಒಬ್ಬನಿಂದ ಉತ್ಸವ ಸಕ್ಸಸ್ ಆಗಿಲ್ಲ. ಎಲ್ಲಾ ಅಧಿಕಾರಿಗಳು ಮಾಡಿದ ಕೆಲಸದಿಂದ ಯಶಸ್ವಿಯಾಗಿದೆ. ಪೊಲೀಸ್ ಇಲಾಖೆ ಬಹಳ ಚೆನ್ನಾಗಿ ಭದ್ರತೆ ವ್ಯವಸ್ಥೆ ಮಾಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ನಟ ನೆನಪಿರಲಿ ಪ್ರೇಮ್ ಮಾತನಾಡಿ, ಹಂಪಿ ಉತ್ಸವ ಅಂದ್ರೆ ನನಗೆ ಬಹಳ ಇಷ್ಟ. ಹಂಪಿಯಲ್ಲಿ ಪ್ರತಿ ಸ್ಮಾರಕ ಒಂದೊಂದು ಕಥೆ ಹೇಳುತ್ತವೆ. ಇಲ್ಲಿಗೆ ನಾನು ಬಹಳ ಸಾರಿ ಬಂದಿದ್ದೇನೆ. ವಿಜಯನಗರ ಸಾಮ್ರಾಜ್ಯದ ನೆಲ ಅಂದ್ರೆ ಮೈ ರೋಮಾಂಚನ ಆಗುತ್ತದೆ. ಇಲ್ಲಿನ ಕಲೆ, ವಾಸ್ತು ಶಿಲ್ಪ ಇಡೀ ಜಗತ್ತಿಗೆ ಚಿರಪರಿಚಿತ. ಹಂಪಿ ಉತ್ಸವಕ್ಕೂ ಬಹಳ ಬಾರಿ ಬಂದಿದ್ದೇನೆ. ಇಲ್ಲಿಗೆ ಅತಿಥಿಯಾಗಿ ಬಂದಿಲ್ಲ, ಮನೆ ಸಂಭ್ರಮ ಅಂತ ಬಂದಿದ್ದೇನೆ. ಮುಂದಿನ ಬಾರಿಯ ಹಂಪಿ ಉತ್ಸವಕ್ಕೂ ನಾನು ಬರುತ್ತೇನೆ ಎಂದು ಹೇಳಿದರು.

ಸಚಿವ ಜಮೀರ್‌ ಅಹ್ಮದ್‌ ಅವರ ಪುತ್ರ, ನಟ ಝೈದ್ ಖಾನ್ ಅವರ ಡಾನ್ಸ್

ಸಮಾರೋಪ ಸಮಾರಂಭದಲ್ಲಿ ಸಚಿವ ಜಮೀರ್ ಅಹ್ಮದ್, ಮಾಜಿ ಸಚಿವ ಆನಂದ್ ಸಿಂಗ್, ಶಾಸಕರಾದ ಲತಾ, ಕಂಪ್ಲಿ ಗಣೇಶ್, ರಾಘವೇಂದ್ರ ಹಿಟ್ನಾಳ್, ಡಿಸಿ ದಿವಾಕರ್, ಸಿಇಒ ಸದಾಶಿವ ಪ್ರಭು ಸೇರಿ ಹಲವು ಗಣ್ಯರು ಭಾಗಿಯಾಗಿದ್ದರು.

ಇದನ್ನೂ ಓದಿ | Hampi Utsav 2024: ವಿಜಯನಗರ ಸಾಮ್ರಾಜ್ಯದ ವೈಭವ ರಾಜ್ಯದಲ್ಲಿ ಪುನಃ ಮರುಕಳಿಸಬೇಕು: ಸಿಎಂ ಸಿದ್ದರಾಮಯ್ಯ

ಗಮನ ಸೆಳೆದ ಶ್ವಾನ ಪ್ರದರ್ಶನ

ಹಂಪಿ ಉತ್ಸವದಲ್ಲಿ ಭಾನುವಾರ ಆಕರ್ಷಕ ಶ್ವಾನ ಪ್ರದರ್ಶನ ಗಮನ ಸೆಳೆಯಿತು. ಜರ್ಮನ್ ಶೆಫರ್ಡ್, ಲ್ಯಾಬ್ರಡರ್ ಸೇರಿ 19ಕ್ಕೂ ಹೆಚ್ಚು ತಳಿಯ ನಾಯಿಗಳು ಭಾಗಿಯಾಗಿದ್ದವು. ಕರ್ನಾಟಕದ ಹೆಮ್ಮೆಯ ತಳಿ ಮುಧೋಳ ನಾಯಿ ಪ್ರದರ್ಶನದಲ್ಲಿ ಭಾಗಿಯಾಗಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ದುಬಾರೆಯಲ್ಲಿ ಆನೆಗಳ ಕಾದಾಟದ ವೇಳೆ ಮಹಿಳೆ ಸಾವು

VISTARANEWS.COM


on

ದುಬಾರೆ ಶಿಬಿರದಲ್ಲಿ ಆನೆಗಳ ಕಾದಾಟದ ವೇಳೆ ಪ್ರವಾಸಿ ಮಹಿಳೆ ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಚೆನ್ನೈ ಮೂಲದ ಜಿನ್ಶು (33) ಮೃತ ಮಹಿಳೆ ಎಂದು ಗುರುತಿಸಲಾಗಿದೆ.

ದುಬಾರೆ ಶಿಬಿರದಲ್ಲಿ ಆನೆಗಳನ್ನು ಕಾವೇರಿ ನದಿಯಲ್ಲಿ ಸ್ನಾನ ಮಾಡಿಸಲು ಕರೆದೊಯ್ಯಲಾಗಿತು. ಈ ವೇಳೆ ಮಾರ್ತಾಂಡ ಆನೆಗೆ ಕಂಜನ್ ಆನೆ ತಿವಿದ ಪರಿಣಾಮ, ನಿಯಂತ್ರಣ ತಪ್ಪಿದ ಆನೆ ಪ್ರವಾಸಿ ಮಹಿಳೆಯ ಮೇಲೆ ಬಿದ್ದಿದೆ ಎನ್ನಲಾಗಿದೆ.

ಆನೆ ಕೆಳಗೆ ಸಿಲುಕಿದ ಮಹಿಳೆ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಬಳಿಕ ಶಿಬಿರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

Continue Reading

ಪ್ರಮುಖ ಸುದ್ದಿ

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

VISTARANEWS.COM


on


ಕೇಂದ್ರ ಚುನಾವಣಾ ಆಯೋಗ 3 ನೇ ಹಂತದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ( ಎಸ್‌ಐಆರ್‌) ಘೋಷಣೆ ಮಾಡಿದೆ. ಇದರಲ್ಲಿ ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳು ಸೇರಿದ್ದು, ಮೇ 30ರಿಂದ ಎಸ್‌ಐಆರ್‌ ನಡೆಯಲಿದೆ.
ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ದೆಹಲಿ, ಹರಿಯಾಣ, ಪಂಜಾಬ್‌, ಚಂಡೀಗಢ, ಒಡಿಶಾ, ಮಿಜೋರಾಂ, ಸಿಕ್ಕಿಂ, ಮಣಿಪುರ, ಉತ್ತರಾಖಂಡ, ಅರುಣಾಚಲ ಪ್ರದೇಶ, ಮೇಘಾಲಯ, ಜಾರ್ಜಂಡ್‌, ನಾಗಾಲ್ಯಾಂಡ್‌, ತ್ರಿಪುರ, ದಾದರ್‌ ಮತ್ತು ನಗರ ಹವೇಲಿ, ದಮನ್‌ ಮತ್ತು ದಿಯುಗಳಲ್ಲಿ 3 ನೇ ಹಂತದಲ್ಲಿ ಎಸ್‌ಐಆರ್‌ ನಡೆಯಲಿದೆ.
3ನೇ ಹಂತದ ಎಸ್‌ಐಆರ್‌ನಲ್ಲಿ 3.94 ಲಕ್ಷಕ್ಕೂ ಅಧಿಕ ಬೂತ್‌ ಮಟ್ಟದ ಅಧಿಕಾರಿಗಳು 36.73ಕೋಟಿ ಮತದಾರರ ಮನೆಗಳಿಗೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ.
ಈಗಾಗಲೇ ದೇಶದ 10 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌ ನಡೆಸಲಾಗಿದೆ. ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ತಮಿಳುನಾಡು, ರಾಜಸ್ಥಾನ, ಛತ್ತೀಸಗಢ, ಕೇರಳಂ, ಪುದುಚೇರಿ, ಅಂಡಮಾನ್‌ ಮತ್ತು ನಿಕೋಬಾರ್‌, ಲಕ್ಷದ್ವೀಪ, ಗುಜರಾತ್‌, ಮಧ್ಯಪ್ರದೇಶ, ಗೋವಾ ಮತ್ತು ಬಿಹಾರದಲ್ಲಿ ಈಗಾಗಲೇ ಎಸ್‌ಐಆರ್‌ ಕಾರ್ಯ ಮುಗಿದಿದೆ.
ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ ಹಾಗೂ ಲಡಾಖ್‌ನಲ್ಲಿ ಎಸ್‌ಐಆರ್‌ ಬಾಕಿ ಇದ್ದು, ಸ್ಥಳೀಯ ಹವಾಮಾನ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ವೇಳಾಪಟ್ಟಿ ಘೋಷಿಸುವುದಾಗಿ ಚುನಾವಣಾ ಆಯೋಗ ತಿಳಿಸಿದೆ.

Continue Reading

ಚಿತ್ರದುರ್ಗ

ಡಿ. ಸುಧಾಕರ್‌ ನಿಧನ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ: ಸಿಎಂ ಸಿದ್ದರಾಮಯ್ಯ

VISTARANEWS.COM


on

ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಡಿ. ಸುಧಾಕರ್‌ ಅವರ ಅಗಲಿಕೆಯಿಂದ ರಾಜ್ಯ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ. ಸುಧಾಕರ್‌ ಅವರ ನಿವಾಸದಲ್ಲಿ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, “ಸುಧಾಕರ್‌ ಅವರು ಜನಪರ ನಾಯಕನಾಗಿ ಗುರುತಿಸಿಕೊಂಡಿದ್ದರು. ಅವರ ನಿಧನದಿಂದ ರಾಜ್ಯಕ್ಕೆ ಅಪಾರ ನಷ್ಟವಾಗಿದೆ” ಎಂದು ಹೇಳಿದರು.

ಸುಧಾಕರ್‌ ಅವರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಗಳು ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ. “ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ” ಎಂದು ಸಿಎಂ ಪ್ರಾರ್ಥಿಸಿದರು.

ಡಿ. ಸುಧಾಕರ್‌ ಅವರು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಅವರ ನಿಧನ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದ್ದು, ಸೋಮವಾರ ಸರ್ಕಾರಿ ರಜೆ ಘೋಷಿಸಲಾಗಿದೆ.

ನಾಳೆ ಸಂಜೆ 4 ಗಂಟೆಗೆ ಚಳ್ಳಕೆರೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.

Continue Reading

ಕರ್ನಾಟಕ

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

VISTARANEWS.COM


on

ಬೆಂಗಳೂರು: ಜಿಬಿಎ ಚುನಾವಣೆ ದಿನಾಂಕ ನಿಗದಿಗೆ ದಿನಗಣನೆ ಆರಂಭವಾಗಿದೆ. ಈ ಸಂಬಂಧ ರಾಜ್ಯ ಚುನಾವಣಾ ಆಯೋಗ ಮಹತ್ವದ ಸಭೆ ನಡೆಸಿದೆ. ಸಭೆ ಬಳಿಕ ಮಾತಾಡಿದ ರಾಜ್ಯ ಚುನಾವಣಾ ಆಯೋಗದ ಆಯಕ್ತ ಸಂಗ್ರೇಶಿ, ʼʼಚುನಾವಣೆಯ ಎಲ್ಲಾ ಪ್ರಕ್ರಿಯೆ ಮುಗಿಸಲಾಗಿದೆ. ಕೇವಲ ದಿನಾಂಕ ನಿಗದಿ ಮಾತ್ರ ಬಾಕಿ ಉಳಿದಿದೆ. ಶಾಲೆ, ಕಾಲೇಜು, ವಿಧಾನಸಭಾ ಅಧಿವೇಶನ ಇತ್ಯಾದಿ ಗಮನದಲ್ಲಿಟ್ಟುಕೊಂಡು ಡೇಟ್‌ ಫಿಕ್ಸ್‌ ಮಾಡಬೇಕು. ಜೂನ್‌ ೩೦ರ ಒಳಗಾಗಿ ಚುನಾವಣೆ ಮುಗಿಸುವಂತೆ ಸುಪ್ರೀಂ ಕೋರ್ಟ್‌ ಹೇಳಿದೆ. ಜೂನ್‌ ೧೪ರಿಂದ ಜೂನ್‌ ೨೪ರ ಒಳಗೆ ಒಂದು ಡೇಟ್‌ ಹೇಳಿದ್ದೇವೆ. ಕೆಲವೇ ದಿನಗಳಲ್ಲಿ ಅಂತಿಮ ದಿನಾಂಕ ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಚುನಾವಣೆ ಮುಂದೂಡುವ ಅಧಿಕಾರ ರಾಜ್ಯ ಚುನಾವಣಾ ಆಯೋಗಕ್ಕೆ ಇಲ್ಲ, ಅದು ಸುಪ್ರೀಂ ಕೋರ್ಟ್‌ ಪರಮಾಧಿಕಾರ ಎಂದು ಸಂಗ್ರೇಶಿ ಹೇಳಿದ್ದಾರೆ.

Continue Reading
Advertisement
Latest12 hours ago

ಪತ್ನಿ, ಮಗನ ಪ್ರತ್ಯೇಕ ಭೇಟಿಗೆ ಅವಕಾಶ ಕೋರಿದ ದರ್ಶನ್‌

Latest14 hours ago

ದುಬಾರೆಯಲ್ಲಿ ಆನೆಗಳ ಕಾದಾಟದ ವೇಳೆ ಮಹಿಳೆ ಸಾವು

Latest16 hours ago

ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಭಾವುಕ ಪೋಸ್ಟ್‌

Latest17 hours ago

ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಪ್ರದಗ್ರಹಣ

ಪ್ರಮುಖ ಸುದ್ದಿ2 days ago

ವಿಜಯ್‌ ಸಿಎಂ ಆಗಿದ್ದಕ್ಕೆ ನನಗೆ ಅಸೂಯೆ ಇಲ್ಲ – ರಜನೀಕಾಂತ್‌

Latest2 days ago

ಕೇರಳಂ ಮುಖ್ಯಮಂತ್ರಿಯಾಗಿ ನಾಳೆ ವಿ.ಡಿ. ಸತೀಶನ್ ಪ್ರಮಾಣವಚನ

Latest3 days ago

ಅಬುಧಾಬಿಯಲ್ಲಿ ಮೋದಿ: ಯುಎಇ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ

Latest4 days ago

ವಾಹನ ಸವಾರರಿಗೆ ಶಾಕ್! ಪೆಟ್ರೋಲ್, ಡೀಸೆಲ್ ತಲಾ ₹3 ಏರಿಕೆ.

Latest4 days ago

ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಶಾಕ್‌, ಜಾಮೀನು ಅರ್ಜಿ ವಜಾ

Latest4 days ago

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌