Theerthahalli News: ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ ಆರಂಭ; ಗೃಹ ಸಚಿವ ಆರಗ ಜ್ಞಾನೇಂದ್ರ - Vistara News

ಕರ್ನಾಟಕ

Theerthahalli News: ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ ಆರಂಭ; ಗೃಹ ಸಚಿವ ಆರಗ ಜ್ಞಾನೇಂದ್ರ

Theerthahalli News: ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ಈ ಹಿಂದೆ ಸಚಿವರಾಗಿದ್ದ ಕಿಮ್ಮನೆ ರತ್ನಾಕರ್ ಕಾಲದಲ್ಲಿ ಅಭಿವೃದ್ಧಿಗೆ ಆದ್ಯತೆ ಇರಲಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

VISTARANEWS.COM


on

Araga Jnanendra Home Minister
ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಗೃಹ ಸಚಿವ ಆರಗ ಜ್ಞಾನೇಂದ್ರ .
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತೀರ್ಥಹಳ್ಳಿ: ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದ್ದು, 2000 ಕೋಟಿ ರೂಪಾಯಿಗೂ ಹೆಚ್ಚಿನ ಅನುದಾನ ತರಲಾಗಿದೆ. ಈ ಹಿಂದೆ ಸಚಿವರಾಗಿದ್ದ ಕಿಮ್ಮನೆ ರತ್ನಾಕರ್ ಕಾಲದಲ್ಲಿ ಅಭಿವೃದ್ಧಿಗೆ ಆದ್ಯತೆ ಇರಲಿಲ್ಲ. ಹಾಗಾಗಿ ಬಿಜಿಪಿ ಕುರಿತು ಈಗ ತೀರ್ಥಹಳ್ಳಿ ಜನತೆಗೆ ಹೆಚ್ಚಿನ ನಂಬಿಕೆ ಬಂದಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಪಕ್ಷದಿಂದ ಪ್ರಮುಖರ ಸಮೇತರಾಗಿ ಅನೇಕರು ಸೇರ್ಪಡೆಯಾಗುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಪ್ರಮುಖರು ಬಿಜೆಪಿಗೆ ಸೇರಲಿದ್ದಾರೆ. ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹಣದ ಆಮಿಷ ತೋರಿಸಿ ಕಾಂಗ್ರೆಸ್ ಪಕ್ಷದಿಂದ ಸೆಳೆಯಲಾಗುತ್ತಿದೆ ಎಂದು ಆರೋಪ ಮಾಡುತ್ತಿದ್ದಾರೆ. ಆದರೆ, ಅವರ ಪಕ್ಷದ ಪ್ರಮುಖ ನಾಯಕರು ಮತ್ತು ಕಾರ್ಯಕರ್ತರು ಕಿಮ್ಮನೆಯವರ ಉಪೇಕ್ಷೆಯಿಂದ ಪಕ್ಷ ತೊರೆಯುತ್ತಿದ್ದಾರೆ ಎಂದು ಸೇರ್ಪಡೆಗೊಂಡವರೇ ಹೇಳುತ್ತಿದ್ದಾರೆ. ಸುಖಾಸುಮ್ಮನೆ ಆರೋಪ ಹೊರಿಸುತ್ತಿರುವ ಕಿಮ್ಮನೆ ರತ್ನಾಕರ್ ಶಿಕ್ಷಣ ಮಂತ್ರಿ ಆಗಿದ್ದಾಗ ಪರೀಕ್ಷೆ ಬರೆಯದೆ ಇದ್ದವರಿಗೂ ಕೆಲಸ ನೀಡಲಾಗಿತ್ತು. ವಂಚನೆ ಮಾಡಿದವರನ್ನು ಜೈಲಿಗೆ ಹಾಕಲಾಗಿದೆ. ಆದರೆ, ಆರೋಪಿಗಳ ರಕ್ಷಣೆಯೂ ಆಯಿತು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಕ್ಷೇತ್ರದಲ್ಲಿ ಪಕ್ಷ ಬಲವರ್ಧನೆ ಮಾಡಲು ಹೊಸ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರದ ಸಾಧನೆಗಳನ್ನು ಮನೆ ಮನೆಗೆ ತಲುಪಿಸಲಾಗುತ್ತಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ತಾಲೂಕು ಅಧ್ಯಕ್ಷ ಬಾಳೆ ಬೈಲು ರಾಘವೇಂದ್ರ, ರಂಗಾಯಣ ನಿರ್ದೇಶಕ ಸಂದೇಶ ಜವಳಿ, ತಾಲೂಕು ಕಾರ್ಯದರ್ಶಿ ರಕ್ಷಿತ್ ಮೇಗರವಳ್ಳಿ, ಕವಿರಾಜ್ ಬೇಗುವಳ್ಳಿ, ಕುಕ್ಕೆ ಪ್ರಶಾಂತ್ ಉಪಸ್ಥಿತರಿದ್ದರು.

ಇದನ್ನೂ ಓದಿ | Shahrukh Khan: ಟಾಪ್‌ 10 ಶಾರುಖ್‌ ಖಾನ್‌ ಹಿಟ್‌ ಸಿನಿಮಾ, ಗಳಿಕೆ ಎಷ್ಟು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Driving Bus With Umbrella: ಛತ್ರಿ ಹಿಡಿದು ಬಸ್ ಚಾಲನೆ; ಮೋಜಿಗಾಗಿ ವಿಡಿಯೊ ಮಾಡಿದ ಡ್ರೈವರ್‌, ಕಂಡಕ್ಟರ್‌ ಸಸ್ಪೆಂಡ್‌!

Bus Driver Holds Umbrella: ಮಳೆಯಿಂದ ಬಸ್ ಸೋರಿಲ್ಲ, ಮೋಜಿಗಾಗಿ ಡ್ರೈವರ್ ಕೊಡೆ ಹಿಡಿದು ಚಾಲನೆ ಮಾಡಿದ್ದ ಎನ್ನುವ ವಿಷಯ ಬೆಳಕಿಗೆ ಬಂದಿದೆ. ಹೀಗಾಗಿ ಚಾಲಕ, ನಿರ್ವಾಹಕಿಯನ್ನು ಅಮಾನತು ಮಾಡಲಾಗಿದೆ.

VISTARANEWS.COM


on

Koo

ಧಾರವಾಡ: ಸಾರಿಗೆ ಬಸ್‌ನಲ್ಲಿ ಚಾಲಕ ಛತ್ರಿ ಹಿಡಿದು ಚಾಲನೆ ಮಾಡಿದ್ದ ವಿಡಿಯೊ ವೈರಲ್ (Driving Bus With Umbrella) ಆದ ಹಿನ್ನೆಲೆಯಲ್ಲಿ ಕಳಪೆ ನಿರ್ವಹಣೆ ಬಗ್ಗೆ ಸಾರಿಗೆ ನಿಗಮದ ವಿರುದ್ಧ ಸಾರ್ವಜನಿಕರು ಅಸಮಾಧಾನ ಹೊರಹಾಕಿದ್ದರು. ಆದರೆ, ವಿಡಿಯೊ ವೈರಲ್ ಆಗುತ್ತಿದ್ದಂತೆ ಸಿಬ್ಬಂದಿಯನ್ನು ಅಧಿಕಾರಿಗಳು ವಿಚಾರಣೆ ಮಾಡಿದಾಗ, ವಿಡಿಯೋ ಅಸಲಿಯತ್ತು ಹೊರಬಿದ್ದಿದೆ. ಮಳೆಯಿಂದ ಬಸ್ ಸೋರಿಲ್ಲ, ಮೋಜಿಗಾಗಿ ಡ್ರೈವರ್ ಕೊಡೆ ಹಿಡಿದು ಚಾಲನೆ ಮಾಡಿದ್ದ ಎನ್ನುವ ವಿಷಯ ಬೆಳಕಿಗೆ ಬಂದಿದೆ. ಹೀಗಾಗಿ ಡ್ರೈವರ್, ಕಂಡಕ್ಟರ್ ಇಬ್ಬರನ್ನೂ ಅಮಾನತು ಮಾಡಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಎನ್‌ಡಬ್ಲ್ಯುಕೆಆರ್‌ಟಿಸಿ) ವಿಭಾಗೀಯ ನಿಯಂತ್ರಣಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಸೋರುತಿಹುದು ಎನ್‌ಡಬ್ಲ್ಯುಕೆಆರ್‌ಟಿಸಿ ಬಸ್ ಎಂದು ವಿಡಿಯೊ ವೈರಲ್ ಆಗಿತ್ತು. ಇದರಿಂದ ಸಾರಿಗೆ ನಿಗಮದ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ವಿಡಿಯೊ ವೈರಲ್ ಆಗುತ್ತಿದ್ದಂತೆ ಸಿಬ್ಬಂದಿಯನ್ನು ಅಧಿಕಾರಿಗಳು ವಿಚಾರಣೆ ಮಾಡಿದಾಗ ಅಸಲೀ ವಿಷಯ ಬೆಳಕಿಗೆ ಬಂದಿದೆ. ಮಳೆಯಿಂದ ಬಸ್ ಸೋರಿಲ್ಲ, ಮೋಜಿಗಾಗಿ ಡ್ರೈವರ್ ಕೊಡೆ ಹಿಡಿದು ಚಾಲನೆ ಮಾಡಿದ್ದ ಎನ್ನುವುದು ತಿಳಿದುಬಂದಿದೆ.

ಕೊಡೆ ಹಿಡಿದು ಡ್ರೈವರ್ ಚಾಲನೆ ಮಾಡುತ್ತಿದ್ದರೆ ನಿರ್ವಾಹಕಿ ವಿಡಿಯೊ ಸೆರೆಹಿಡಿದಿದ್ದಾಳೆ. ಪ್ರಕರಣ ಸಂಬಂಧ ಚಾಲಕ ಹಣಮಂತ್ ಕಿಲ್ಲೇದಾರ್ ಹಾಗೂ ನಿರ್ವಾಹಕಿ ಎಚ್. ಅನಿತಾ ಅವರನ್ನು ಅಮಾನತು ಮಾಡಿ ವಿಭಾಗೀಯ ನಿಯಂತ್ರಣಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ | Karnataka Weather : ಕೈಯಲ್ಲಿ ಛತ್ರಿ ಹಿಡಿದು ಬಸ್ ಡ್ರೈವಿಂಗ್; ಮಳೆಗೆ ಕುಸಿದು ಬಿದ್ದ ಮಾಳಿಗೆ ಮನೆ

ಧಾರವಾಡದಲ್ಲಿ ಭಾರಿ ಮಳೆಗೆ ಸಾರಿಗೆ ಬಸ್‌ನಲ್ಲಿ ನೀರು ಸೋರುತ್ತಿದ್ದ ಕಾರಣಕ್ಕೆ, ಚಾಲಕರೊಬ್ಬರು ಒಂದು ಕೈಯಲ್ಲಿ ಛತ್ರಿ ಹಿಡಿದು ಮತ್ತೊಂದು ಕೈಯಲ್ಲಿ ಬಸ್ ಡ್ರೈವಿಂಗ್ ಮಾಡಿದ್ದಾರೆ ಎಂಬ ವಿಡಿತೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿಗೆ ಗ್ರಾಮಕ್ಕೆ ಸಂಚರಿಸುವ ಸಾರಿಗೆ ಬಸ್‌ನಲ್ಲಿ ಭಾರಿ ಮಳೆಗೆ ಎಲ್ಲ ಕಡೆಯು ನೀರು ಸೋರಿದೆ. ಮಳೆಯಿಂದ ರಕ್ಷಣೆ ಪಡೆಯುವ ಸಲುವಾಗಿ ಚಾಲಕ ಛತ್ರಿ ಹಿಡಿದುಕೊಂಡು ಬಸ್‌ ಅನ್ನು ಚಾಲನೆ ಮಾಡಿದ್ದಾರೆ ಎನ್ನಲಾಗಿತ್ತು. ಆದರೆ, ಕರ್ತವ್ಯದ ವೇಳೆ ರೀಲ್ಸ್‌ ಮಾಡಲು ಬಸ್‌ ಬಳಕೆ ಮಾಡಿಕೊಂಡಿದ್ದರಿಂದ ಚಾಲಕ, ನಿರ್ವಾಹಕಿ ವಿರುದ್ಧ ಅಧಿಕಾರಿಗಳು ಶಿಸ್ತು ಕ್ರಮ ಕೈಗೊಂಡಿದ್ದಾರೆ.

Continue Reading

ಬೆಂಗಳೂರು

ವಿಸ್ತಾರ ಸಂಪಾದಕೀಯ: ಕಸ ವಿಲೇವಾರಿಗೆ ಹೊಸ ಸಂಸ್ಥೆ, ಜಾರಿಕೊಳ್ಳುವ ನೆಪ ಆಗದಿರಲಿ

ಭಾರತದಲ್ಲಿ ಇಂದೋರ್ ಅತ್ಯಂತ ಸ್ವಚ್ಛ ನಗರ ಎಂಬ ಹೆಗ್ಗಳಿಕೆ ಗಳಿಸಿದೆ. ನಮ್ಮ ಹಲವು ಹಿಂದಿನ ಸಚಿವರು ಅಧಿಕಾರಿಗಳು ಅಲ್ಲಿಗೆ ಭೇಟಿ ನೀಡಿಯೂ ಇದ್ದಾರೆ. ಏನೇನು ಕಲಿತುಕೊಂಡು ಬಂದಿದ್ದಾರೆ, ಕಲಿತದ್ದನ್ನು ಅನ್ವಯಿಸಲಾಗಿದೆಯೇ ಇಲ್ಲವೇ ಎಂಬುದು ತಿಳಿಯದು. ಹಾಗೆ ನೋಡಿದರೆ ಉತ್ತರ ಭಾರತದ ಹೆಚ್ಚಿನ ನಗರಗಳಿಗಿಂತ ಬೆಂಗಳೂರಿನ ತ್ಯಾಜ್ಯ ನಿರ್ವಹಣೆ ಉತ್ತಮವಾಗಿದೆ. ಇನ್ನಷ್ಟು ಉತ್ತಮ ಆಗಬೇಕಿದೆ.

VISTARANEWS.COM


on

Vistara editorial
Koo

ರಾಜಧಾನಿ ಬೆಂಗಳೂರಿನಲ್ಲಿ (Bengaluru) ಕಸ ವಿಲೇವಾರಿ (waste disposal) ಸಮಸ್ಯೆ ಬೃಹತ್‌ ಆಗಿ ಬೆಳೆದು ನಿಂತಿದೆ. ಬಿಬಿಎಂಪಿಯಲ್ಲಿ (BBMP) ಸಾಕಷ್ಟು ಎಂಜಿನಿಯರ್‌ಗಳು (Engineers) ಇದಕ್ಕಾಗಿಯೇ ಇದ್ದರೂ ಇದನ್ನು ನಿರ್ವಹಿಸುವುದು ಸವಾಲೇ ಆಗಿದೆ. ಹೀಗಾಗಿ, ರಾಜ್ಯ ಸರ್ಕಾರದಿಂದ ಕಸ ವಿಲೇವಾರಿಗೆ ಇದೇ ಜೂನ್‌ 1ರಿಂದ ಹೊಸ ಯೋಜನೆ ಜಾರಿಯಾಗುತ್ತಿದೆ. ಘನ ತ್ಯಾಜ್ಯ ವಿಲೇವಾರಿಗಾಗಿಯೇ (garbage disposal) ಒಂದು ಕಂಪನಿಯನ್ನು ರಾಜ್ಯ ಸರ್ಕಾರ ಸ್ಥಾಪಿಸಿದೆ. “ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಕಂಪನಿ ನಿಯಮಿತ” ಹೆಸರಿನ ಈ ಕಂಪನಿ ಘನತ್ಯಾಜ್ಯ ನಿರ್ವಹಣೆಯನ್ನು ಕೈಗೆತ್ತಿಕೊಳ್ಳಲಿದ್ದು, ಇನ್ನು ಮುಂದೆ ನಗರದಲ್ಲಿ ಕಸದ ಸಮಸ್ಯೆ ಕಂಡುಬಂದರೆ ಅದನ್ನು ಈ ಕಂಪನಿಯ ಮುಂದೆ ಪ್ರಶ್ನಿಸಬೇಕಾಗಲಿದೆ. ಒಂದು ರೀತಿಯಿಂದ ಇದಕ್ಕೊಂದು ಪ್ರತ್ಯೇಕ ವ್ಯವಸ್ಥೆ ಇರುವುದು ಒಳ್ಳೆಯದು.

ರಾಜ್ಯ ಸರ್ಕಾರ ಹಾಗೂ ಬೃಹತ್‌ ಬೆಂಗಳೂರು ಮಹಾನಗರಪಾಲಿಕೆ ಜಂಟಿಯಾಗಿ ಈ ಸಂಸ್ಥೆಯನ್ನು ನಿರ್ಮಾಣ ಮಾಡಿವೆ. ಇನ್ನು ಮುಂದೆ ಈ ಕಂಪನಿಯಿಂದಲೇ ಕಸ ಸಂಗ್ರಹಣೆ, ಸಾಗಾಣಿಕೆ ಹಾಗೂ ಹಾಗೂ ವಿಲೇವಾರಿ ಕಾರ್ಯ ನಡೆಯಲಿದೆ. ಜೂನ್ 1ರಿಂದ ಮನೆಮನೆಯಿಂದ ಅಟೋದಲ್ಲಿ ಕಸ ಸಂಗ್ರಹಣೆ, ಸಂಗ್ರಹಿಸಿದ ಕಸವನ್ನು ಟಿಪ್ಪರ್ ಲಾರಿಗಳ ಮೂಲಕ ಕಸದ ಸಂಸ್ಕರಣಾ ಘಟಕ ಅಥವಾ ಕ್ಯಾರಿಗಳಿಗೆ ಸಾಗಿಸುವುದು ಈ ಸಂಸ್ಥೆಯ ಹೊಣೆ. ಬಿಬಿಎಂಪಿ ಅಡಿಯಲ್ಲಿ ತ್ಯಾಜ್ಯ ವಿಲೇವಾರಿ ಕಾರ್ಯ ನಿರ್ವಹಿಸುತ್ತಿರುವ ಅಟೋ, ಟಿಪ್ಪರ್, ಕಾಂಪ್ಯಾಕ್ಟರ್ ಚಾಲಕರು, ಸಹಾಯಕರು ಕಂಪನಿ ವ್ಯಾಪ್ತಿಗೆ ಬರಲಿದ್ದಾರೆ. ಘನತ್ಯಾಜ್ಯ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು, ವಾರ್ಡ್‌ ಮಟ್ಟದ ಎಂಜಿನಿಯರ್‌ಗಳು, ಸಿಬ್ಬಂದಿಗಳು ಹಾಗೂ ಮಾರ್ಷಲ್‌ಗಳು ಕಂಪನಿ ಅಧೀನಕ್ಕೆ ಬರಲಿದ್ದಾರೆ. ಈ ಅಧಿಕಾರಿಗಳ, ಸಿಬ್ಬಂದಿಗಳ ವೇತನವನ್ನು ಕಂಪನಿಯೇ ಪಾವತಿ ಮಾಡಲಿದೆ. ನಗರದಲ್ಲಿ ಇರುವ 7 ಕಸ ಸಂಸ್ಕರಣಾ ಘಟಕಗಳು ಕಂಪನಿ ವ್ಯಾಪ್ತಿಗೆ ಬರಲಿವೆ. ಪೌರ ಕಾರ್ಮಿಕರು, ಗುತ್ತಿಗೆ ಪೌರಕಾರ್ಮಿಕರು ಬಿಬಿಎಂಪಿ ಅಧೀನದಲ್ಲಿ ಕಾರ್ಯ ನಿರ್ವಹಿಸಲಿದ್ದು, ಇವರಿಗೆ ಬಿಬಿಎಂಪಿಯಿಂದ ವೇತನ ದೊರೆಯಲಿದೆ. ಪೌರಕಾರ್ಮಿಕರು ಕೇವಲ ಕಸ ಗುಡಿಸುವುದು, ಸಾರ್ವಜನಿಕ ಸ್ಥಳಗಳನ್ನು ಕ್ಲೀನ್ ಮಾಡುವುದು ಮಾಡಲಿದ್ದಾರೆ. ಘನತ್ಯಾಜ್ಯ ಇಲಾಖೆಯನ್ನು ಆರೋಗ್ಯ ಇಲಾಖೆ ಜೊತೆ ವಿಲೀನ ಮಾಡಿ ಅದೇಶ ಹೊರಡಿಸಲಾಗಿದ್ದು, ಇನ್ನು ಮುಂದೆ ಆರೋಗ್ಯ ಮತ್ತು ನೈರ್ಮಲ್ಯ ಇಲಾಖೆ ಎಂದು ಕರೆಯಲಾಗುತ್ತದೆ.

2012ರಿಂದಲೇ ಘನತ್ಯಾಜ್ಯ ನಿರ್ವಹಣೆ ಬಗ್ಗೆ ಹೈಕೋರ್ಟ್, ಬಿಬಿಎಂಪಿಯ ಕಿವಿ ಹಿಂಡುತ್ತ ಬಂದಿದೆ. ಬೆಂಗಳೂರಲ್ಲಿ ಘನ ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ 2012ರಲ್ಲಿ ಸಲ್ಲಿಕೆಯಾಗಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ನ್ಯಾಯಪೀಠ ವಿಚಾರಣೆ ನಡೆಸಿತ್ತು. ಬಿಬಿಎಂಪಿ ವ್ಯಾಪ್ತಿಯಲ್ಲಿ ಘನತ್ಯಾಜ್ಯ ವಿಲೇವಾರಿ ವ್ಯವಸ್ಥೆಯ ಸಾಮರ್ಥ್ಯ ವೃದ್ಧಿಸಲು ಮತ್ತು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಂಬಂಧಪಟ್ಟ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಸೂಕ್ತ ನಿರ್ಣಯಗಳನ್ನು ಕೈಗೊಳ್ಳುವಂತೆ ಸರ್ಕಾರ ಮತ್ತು ಪಾಲಿಕೆಗೆ ಹೈಕೋರ್ಟ್ ಇತ್ತೀಚೆಗೆ ಸೂಚನೆ ನೀಡಿತ್ತು. ಅದರನ್ವಯ ಕ್ರಮ ಕೈಗೊಳ್ಳಲಾಗುತ್ತಿದೆ.

ಭಾರತದಲ್ಲಿ ಇಂದೋರ್ ಅತ್ಯಂತ ಸ್ವಚ್ಛ ನಗರ ಎಂಬ ಹೆಗ್ಗಳಿಕೆ ಗಳಿಸಿದೆ. ನಮ್ಮ ಹಲವು ಹಿಂದಿನ ಸಚಿವರು ಅಧಿಕಾರಿಗಳು ಅಲ್ಲಿಗೆ ಭೇಟಿ ನೀಡಿಯೂ ಇದ್ದಾರೆ. ಏನೇನು ಕಲಿತುಕೊಂಡು ಬಂದಿದ್ದಾರೆ, ಕಲಿತದ್ದನ್ನು ಅನ್ವಯಿಸಲಾಗಿದೆಯೇ ಇಲ್ಲವೇ ಎಂಬುದು ತಿಳಿಯದು. ಹಾಗೆ ನೋಡಿದರೆ ಉತ್ತರ ಭಾರತದ ಹೆಚ್ಚಿನ ನಗರಗಳಿಗಿಂತ ಬೆಂಗಳೂರಿನ ತ್ಯಾಜ್ಯ ನಿರ್ವಹಣೆ ಉತ್ತಮವಾಗಿದೆ. ಇನ್ನಷ್ಟು ಉತ್ತಮ ಆಗಬೇಕಿದೆ. ಆದರೆ ಸಂಸ್ಥೆ ಬದಲಾಯಿಸಿದ ಮಾತ್ರಕ್ಕೆ ನಿರ್ವಹಣೆ ಉತ್ತಮಗೊಳ್ಳುತ್ತದೆ ಎಂದೇನಿಲ್ಲ. ಕಂಪನಿಗೂ ಬಿಬಿಎಂಪಿಗೂ ಹಂಚಿಕೊಳ್ಳಲಾದ ಕಾರ್ಯಗಳಲ್ಲಿ ಭಿನ್ನಮತ ತಲೆದೋರಬಾರದು. ಕಸದ ಸಮಸ್ಯೆಯಿಂದ ಬಿಬಿಎಂಪಿ ಜಾರಿಕೊಳ್ಳಲು ಇದು ನೆಪ ಆಗಬಾರದು. ಈ ಬದಲಾವಣೆಗಳಿಂದ ಮುಂದಿನ ದಿನಗಳಲ್ಲಿ ಸಿಲಿಕಾನ್ ಸಿಟಿಯಲ್ಲಿ ಕಸದ ಸಮಸ್ಯೆ ಇರವುದಿಲ್ಲವೇ, ಗಾರ್ಬೆಜ್ ಸಿಟಿ ಗಾರ್ಡನ್ ಸಿಟಿ ಆಗಲಿದೆಯೇ ಎಂಬ ಪ್ರಶ್ನೆಗಳಿಗೆ ಉತ್ತರ ಕಾದು ನೋಡಬೇಕಿದೆ.

ಇದನ್ನೂ ಓದಿ: Waste Disposal: ಕಸ ವಿಲೇವಾರಿ ಇನ್ನು ಬಿಬಿಎಂಪಿ ಕೆಲಸ ಅಲ್ಲ! ಅದಕ್ಕಾಗಿಯೇ ಬರುತ್ತಿದೆ ಹೊಸ ಸಂಸ್ಥೆ

Continue Reading

ಕ್ರೈಂ

Electric Shock: ಲಿಂಗಸುಗೂರಿನಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವು

Electric Shock: ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ದೇವರಭೂಪುರ ಗ್ರಾಮದಲ್ಲಿ ಅವಘಡ ನಡೆದಿದೆ. ಅರೆ ಬರೆ ವಿದ್ಯುತ್ ಕಾಮಗಾರಿ ನಡೆಸಿದ್ದರಿಂದ ವಿದ್ಯುತ್‌ ಸ್ಪರ್ಶಿಸಿ ಬಾಲಕ ಕೊನೆಯುಸಿರೆಳೆದಿದ್ದಾನೆ.

VISTARANEWS.COM


on

Electric Shock
Koo

ರಾಯಚೂರು: ಬೋರ್‌ ವೆಲ್ ಬಳಿ ಕುಡಿಯುವ ನೀರು ತರಲು ಹೋದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಮೃತಪಟ್ಟಿರುವ ಘಟನೆ (Electric Shock) ಲಿಂಗಸುಗೂರು ತಾಲೂಕಿನ ದೇವರಭೂಪುರ ಗ್ರಾಮದಲ್ಲಿ ನಡೆದಿದೆ. ಬೋರ್ ವೆಲ್ ಬಳಿ ಅರೆ ಬರೆ ವಿದ್ಯುತ್ ಕಾಮಗಾರಿ ನಡೆಸಿದ್ದರಿಂದ ವಿದ್ಯುತ್‌ ಸ್ಪರ್ಶಿಸಿ ಬಾಲಕ ಕೊನೆಯುಸಿರೆಳೆದಿದ್ದಾನೆ.

ಬಸವರಾಜ್ (2) ಮೃತ ಬಾಲಕ. ಬೋರ್ ವೆಲ್ ಬಳಿ ಅರೆ ಬರೆ ವಿದ್ಯುತ್ ಕಾಮಗಾರಿ ಮಾಡಿದ್ದರಿಂದ ವಿದ್ಯುತ್‌ ತಂತಿಗಳು ಕೆಳಗೆ ನೇತಾಡುತ್ತಿದ್ದವು. ಈ ವೇಳೆ ಬಾಲಕ ಬೋರ್‌ ವೆಲ್‌ ಬಳಿ ಹೋದಾಗ ವಿದ್ಯುತ್‌ ತಗುಲಿತ್ತು. ನಂತರ ಆತನನ್ನು ಲಿಂಗಸುಗೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದ ಬಾಲಕ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಪಂಚಾಯಿತಿ ಸಿಬ್ಬಂದಿ ಹಾಗೂ ಪಿಡಿಒ ಎಡವಟ್ಟಿನಿಂದ ಬಾಲಕ ಮೃತಪಟ್ಟಿದ್ದಾನೆ ಎಂದು ಬಾಲಕನ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ.

ಕೃಷ್ಣಾ ನದಿಯಲ್ಲಿ ಬಾಲಕನನ್ನು ಎಳೆದೊಯ್ದ ಮೊಸಳೆ

ರಾಯಚೂರು: ಕೃಷ್ಣಾ ನದಿಯಲ್ಲಿ ಬಾಲಕನನ್ನು ಮೊಸಳೆ ಎಳೆದೊಯ್ದ ಘಟನೆ ರಾಯಚೂರು ತಾಲೂಕಿನ ಗಂಜಳ್ಳಿ ಗ್ರಾಮದಲ್ಲಿ ನಡೆದಿದೆ. ಕುರಿಗಳಿಗೆ ನೀರು ಕುಡಿಸಲು ನದಿಗೆ ಇಳಿದಿದ್ದ ಬಾಲಕನನ್ನು ಮೊಸಳೆ ಬಲಿ (Crocodile Attack) ಪಡೆದಿದೆ. ಗಂಜಳ್ಳಿ ಗ್ರಾಮದ ವಿಶ್ವ (12) ಮೃತ ಬಾಲಕ. ಸ್ಥಳಕ್ಕೆ ರಾಯಚೂರು ಗ್ರಾಮಾಂತರ ಪೋಲಿಸರು ದೌಡಾಯಿಸಿದ್ದು, ಅಗ್ನಿ ಶಾಮಕ ದಳದ ಸಿಬ್ಬಂದಿಯಿಂದ ಬಾಲಕನ ಮೃತದೇಹಕ್ಕಾಗಿ ಶೋಧಕಾರ್ಯ ನಡೆಯುತ್ತಿದೆ.

ಇದನ್ನೂ ಓದಿ | Murder Attempt: ಮಗು ಹೆಣ್ಣೋ ಗಂಡೋ ನೋಡಲು ಹೆಂಡತಿಯ ಹೊಟ್ಟೆ ಸೀಳಿದವನಿಗೆ ಜೀವಾವಧಿ ಶಿಕ್ಷೆ!

ಮಹಿಳೆ ಕಾಲಿನ ಮೇಲೆ ಹರಿದ ಬಸ್ ಚಕ್ರ

ವಿಜಯಪುರ: ಬಸ್ ಹತ್ತುವ ವೇಳೆ ಆಯುತಪ್ಪಿ ಬಿದ್ದ ಮಹಿಳೆ ಕಾಲಿನ ಮೇಲೆ ಬಸ್ ಚಕ್ರ ಹರಿದ ಘಟನೆ ವಿಜಯಪುರ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದಿದೆ. ಘಟನೆಯಲ್ಲಿ ಮಹಿಳೆ ಕಾಲಿಗೆ ತೀವ್ರ ಗಾಯಗಳಾಗಿವೆ.

ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಸಾಲುಟಗಿ ಗ್ರಾಮದ ಸಾವಿತ್ರಿಬಾಯಿ ಬಿರಾದಾರ ಗಾಯಗೊಂಡವರು. ವಿಜಯಪುರದಿಂದ ಇಂಡಿಗೆ ತೆರಳುವ KA 28 F 2492 ಸಂಖ್ಯೆಯ ಬಸ್ ಹರಿದಿದ್ದರಿಂದ ಮಹಿಳೆ ಗಾಯಗೊಂಡಿದ್ದು, ಅವರನ್ನು ಆಂಬ್ಯುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.

Continue Reading

ಕರ್ನಾಟಕ

Prajwal Revanna Case: ರಾಜ್ಯಕ್ಕೆ ಬಂದು ಕಾನೂನು ಗೌರವಿಸಿ; ಪ್ರಜ್ವಲ್‌ಗೆ ವಿಸ್ತಾರ ನ್ಯೂಸ್‌ ಬಹಿರಂಗ ಪತ್ರ

Prajwal Revanna Case: ಪ್ರಜ್ವಲ್‌ ರೇವಣ್ಣಗೆ ವಿಸ್ತಾರ ನ್ಯೂಸ್‌ ಕೂಡ ಬಹಿರಂಗ ಪತ್ರದ ಮೂಲಕ ಕರುನಾಡಿಗೆ ಬರುವಂತೆ ಆಗ್ರಹಿಸಿದೆ. “ನಿಮಗಾಗಿ ಹಗಲು-ರಾತ್ರಿ ಕಣ್ಣಿಗೆ ಎಣ್ಣೆ ಬಿಟ್ಟುಕೊಂಡು ದಕ್ಷ ಅಧಿಕಾರಿಗಳ ಎಸ್‌ಐಟಿ ತಂಡ ಮನೆ-ಮಠ ಬಿಟ್ಟು ಏರ್‌ಪೋರ್ಟ್‌ನಲ್ಲಿ ನಿಮಗೋಸ್ಕರ ಕಾಯಬೇಕಾ..? ನಿಮ್ಮಿಂದಾಗಿದೆ ಎನ್ನಲಾಗ್ತಿರೋ ಪರಮ ಪಾಪದ ಕೂಪದಲ್ಲಿ ನೊಂದು ಬೆಂದು ಹೋಗಿರೋ ಆ ಹೆಣ್ಣುಮಕ್ಕಳ ಬಿಸಿಯುಸಿರು ನಿಮ್ಮನ್ನ ಸುಮ್ಮನೆ ಬಿಡದು” ಎಂದು ವಿಸ್ತಾರ ನ್ಯೂಸ್‌ ತರಾಟೆಗೆ ತೆಗೆದುಕೊಂಡಿದೆ. ನಮ್ಮ ಪತ್ರದ ಪೂರ್ಣಪಾಠ ಇಲ್ಲಿದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿದೇಶಕ್ಕೆ ಪರಾರಿಯಾಗಿರುವ ಪ್ರಜ್ವಲ್‌ ರೇವಣ್ಣ (Prajwal Revanna Case) ಕೂಡಲೇ ಕರ್ನಾಟಕಕ್ಕೆ ಬಂದು, ನೆಲದ ಕಾನೂನು ಗೌರವಿಸಬೇಕು ಎಂದು ಸಂಸದನ ಅಜ್ಜ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ (H D Deve Gowda) ಅವರು ಬಹಿರಂಗ ಪತ್ರ ಬರೆದಿದ್ದಾರೆ. ರಾಜ್ಯದ ಜನರು ಕೂಡ ಪ್ರಜ್ವಲ್‌ ರೇವಣ್ಣ ವಾಪಸ್‌ ಬರಬೇಕು ಎಂಬುದಾಗಿ ಆಗ್ರಹಿಸಿದ್ದಾರೆ. ಇದರ ಬೆನ್ನಲ್ಲೇ, ‘ವಿಸ್ತಾರ ನ್ಯೂಸ್’‌ ಕೂಡ ಪ್ರಜ್ವಲ್‌ ರೇವಣ್ಣಗೆ ಬಹಿರಂಗ ಪತ್ರದ ಮೂಲಕ ಕರ್ನಾಟಕಕ್ಕೆ ಬರುವಂತೆ ರಾಜ್ಯದ ಜನರ ಪರವಾಗಿ ಆಗ್ರಹಿಸಿದೆ.

ಹೀಗಿದೆ ವಿಸ್ತಾರ ನ್ಯೂಸ್ ಪತ್ರದ ಸಾರಾಂಶ…

“ಮಿಸ್ಟರ್‌ ಪ್ರಜ್ವಲ್‌, ನಿಮ್ಮನ್ನ ಇವತ್ತು ಓರ್ವ ಸಂಸದ ಅಂತಾ ಕರೆಯೋದಕ್ಕೆ ನಿಜಕ್ಕೂ ಅಸಹ್ಯವೆನ್ನಿಸ್ತಿದೆ. ಅಮೂಲ್ಯ ಮತ ಹಾಕಿ ನಿಮ್ಮನ್ನ ಗೆಲ್ಲಿಸಿದ ಸಮಸ್ತ ಹಾಸನದ ಜನತೆ ಇಂದು ಪಾಪಪ್ರಜ್ಞೆಯಲ್ಲಿ ಮುಳುಗಿಹೋಗಿದ್ದಾರೆ. ಯಾಕೆಂದ್ರೆ, ಪ್ರಜಾಸತ್ತಾತ್ಮಕವಾದ ನಿಮ್ಮ ಹುದ್ದೆಗೆ ನಯಾಪೈಸೆ ಕಿಮ್ಮತ್ತಿಲ್ಲದ ಹಾಗೆ ನಡೆದುಕೊಂಡವರು ನೀವು. ಚಿಕ್ಕ ವಯಸ್ಸಿಗೆ ಸಂಸತ್‌ ಪ್ರವೇಶಿಸಿದ್ದ ನೀವು ಯುವ ಪೀಳಿಗೆಗೆ ಆದರ್ಶವಾಗಿ ನಿಲ್ಲಬೇಕಿತ್ತು. ಆದ್ರೆ ಇಂದು ನಿಮ್ಮ ಹೆಸರನ್ನೂ ಅವರ ಮಕ್ಕಳಿಗೆ ಇಡೋಕೆ ನಾಡಿನ ಪೋಷಕರು ಹಿಂದೇಟು ಹಾಕೋ ಸನ್ನಿವೇಶ ಸೃಷ್ಟಿಸಿಕೊಂಡುಬಿಟ್ಟಿದ್ದೀರಿ” ಎಂಬುದಾಗಿ ವಿಸ್ತಾರ ನ್ಯೂಸ್‌ ತರಾಟೆಗೆ ತೆಗೆದುಕೊಂಡಿದೆ.

ಸಮಸ್ತ ಕರುನಾಡೇ ಹೆಮ್ಮೆಪಡುವಂಥಾ ಕುಟುಂಬದ ಕುಡಿಯಾದ ನೀವು ಇವತ್ತು ಖಳನಾಯಕನ ಜಾಗದಲ್ಲಿ ನಿಂತಿದ್ದೀರಿ. ಒಂದಂತೂ ಸತ್ಯ, ಸಮಸ್ತ ಕರುನಾಡೇ ಗರ್ವದಿಂದ ಬೀಗುವಂತೆ ಪ್ರಧಾನಿ ಹುದ್ದೆಗೇರಿದವರು ನಿಮ್ಮ ತಾತ. ಮರೆಯದಿರಿ, ಅವಿರಿಗೀಗ ಬರೋಬ್ಬರಿ 92 ವರ್ಷ ವಯಸ್ಸು. ಅವರ ಸಂಧ್ಯಾಕಾಲದಲ್ಲಿ ನಿಜಕ್ಕೂ ನಗುನಗುತ್ತಲಿರಬೇಕಿದ್ದ ಜೀವ ಇಂದು ನೋವನ್ನು ಹೇಳಿಕೊಳ್ಳಲಾಗದೆ, ಹೊರಗೂ ಹಾಕಲಾರದೆ ಮೂಕರೋದನದಲ್ಲಿದೆ. ಒಂದೇ ಒಂದು ಕ್ಷಣಕ್ಕೂ ನಿಮ್ಮ ಮನಸ್ಸಿಗೆ ಅಂದು ಅವರ ನೆನಪಾಗಲಿಲ್ಲವೇ…

ನಿಮ್ಮ ವಿರುದ್ಧದ ಆರೋಪಗಳು ಎಂಥಾ ಪ್ರಜ್ಞಾವಂತ ಸಮಾಜವೇ ಆಗಿದ್ರೂ ಕ್ಯಾಕರಿಸಿ ಮುಖಕ್ಕೆ ಉಗಿಯೋಥರದ್ದು ರೀ. ಹೋಗ್ಲಿ ನೀವು ತಪ್ಪೇ ಮಾಡಿಲ್ಲ ಅನ್ನೋದಾದ್ರೆ 28 ದಿನಗಳಿಂದ ನೀವು ತಲೆಮರೆಸಿಕೊಂಡಿದ್ಯಾಕೆ. ಅಂದು ಹೇಡಿಯಂತೆ ಕಾರ್ಗತ್ತಲಲ್ಲಿ ಓಡಿಹೋಗಿದ್ದು ಯಾಕೆ? ಓಡಿ ಹೋಗಿಬಿಟ್ರೆ ಮಾಡಿದ ತಪ್ಪು ಮುಚ್ಚಿಹೋಗಿಬಿಡುತ್ತಾ..? ಹಾಗಂತ ನೀವೇನೂ ಒಲಿಂಪಿಕ್ಸ್‌ನಂಥಾ ಕ್ರೀಡೆಯಲ್ಲಿ ಚಿನ್ನದ ಪದಕ ಗೆದ್ದ ಪರಮವೀರರಾ..?

ನಿಮಗಾಗಿ ಹಗಲು-ರಾತ್ರಿ ಕಣ್ಣಿಗೆ ಎಣ್ಣೆ ಬಿಟ್ಟುಕೊಂಡು ದಕ್ಷ ಅಧಿಕಾರಿಗಳ ಎಸ್‌ಐಟಿ ತಂಡ ಮನೆ-ಮಠ ಬಿಟ್ಟು ಏರ್‌ಪೋರ್ಟ್‌ನಲ್ಲಿ ನಿಮಗೋಸ್ಕರ ಕಾಯಬೇಕಾ..? ನಿಮ್ಮಿಂದಾಗಿದೆ ಎನ್ನಲಾಗ್ತಿರೋ ಪರಮ ಪಾಪದ ಕೂಪದಲ್ಲಿ ನೊಂದು ಬೆಂದು ಹೋಗಿರೋ ಆ ಹೆಣ್ಣುಮಕ್ಕಳ ಬಿಸಿಯುಸಿರು ನಿಮ್ಮನ್ನ ಸುಮ್ಮನೆ ಬಿಡದು. ಆ ಅಸಹಾಯಕ ಜೀವಗಳಿಗೆ ನಿಜಕ್ಕೂ ನ್ಯಾಯ ಸಿಗಲೇಬೇಕು. ಇದು ಸಮಸ್ತ ಕರುನಾಡಿ ಒಕ್ಕೊರಲ ಆಗ್ರಹ.

ನೆನಪಿರಲಿ… ನೀವು ಇಂದು ಸಂಸದನಾಗಿ ನಿಲ್ಲುವಲ್ಲಿ ನಿಮ್ಮ ಕುಟುಂಬಕ್ಕಿರೋ ಆ ವರ್ಚಸ್ಸಿನ ಪಾಲೇ ಹೆಚ್ಚು. ಈ ರಾಜ್ಯದ ಮುಖ್ಯಮಂತ್ರಿಯಾಗಿ ದುಡಿದ ನಿಮ್ಮ ಚಿಕ್ಕಪ್ಪ ಇಂದು ಬಹಿರಂಗವಾಗಿ ಎಲ್ಲಿದ್ರೂ ಬಾರಪ್ಪಾ ಅನ್ನುವಂಥಾ ಅಸಹಾಯಕ ಸ್ಥಿತಿಯನ್ನು ನಿರ್ಮಿಸಿದವರು ನೀವೇ. ನಿಮ್ಮನ್ನ ಎತ್ತಿ, ಮುದ್ದಾಡಿ, ಭವ್ಯ ಭವಿಷ್ಯದ ಕನಸನ್ನು ಕನವರಿಸಿದ್ದ ನಿಮ್ಮ ತಂದೆಯು ನಿಮ್ಮಿಂದಾಗಿ ಜೈಲಿನ ಕತ್ತಲಕೋಣೆಯಲ್ಲಿ ಒಬ್ಬರೇ ಕೂತು ರೋದಿಸಿದ್ದು ನಿಮಗೆ ಗೊತ್ತಿಲ್ವಾ? ನಿಜಕ್ಕೂ ನಿಮ್ಮೊಳಗೊಬ್ಬ ಮಾನವೀಯ ಜೀವಿ ಇಲ್ಲವೇ ಇಲ್ವಾ? ಹೃದಯವೆನ್ನೋದೇ ಕಲ್ಲುಬಂಡೆಯಾಗಿದೆಯಾ? ಪಾಪಪ್ರಜ್ಞೆ ನಿಮ್ಮನ್ನ ಇನ್ನಿಲ್ಲದಂತೆ ಕಾಡ್ತಿಲ್ವಾ?

ನಿಮ್ಮ ತಾಯಿಯ ಮುಖದಲ್ಲಿದ್ದ ನಗು ನಿಮ್ಮಿಂದ ಬಾಡಿ ಹೋಗಿರೋ ಸತ್ಯದ ಅರಿವು ನಿಮಗಿಲ್ವಾ? ನಿಮ್ಮ ಸಹೋದರ ನಾಲ್ಕು ಜನರ ಮುಂದೆ ಮುಖ ಎತ್ತಿ ಮಾತನಾಡದಂಥಾ ಪರಿಸ್ಥಿತಿಯನ್ನು ನಿರ್ಮಿಸಿದ್ದು ನೀವೇ ಅಲ್ವಾ? ಅದೇನೇ ಇರ್ಲಿ. ಇವತ್ತು ನೀವು ಜರ್ಮನಿಯಲ್ಲಿದ್ದೀರೋ, ಇಲ್ಲ ಮತ್ತಿನ್ನೆಲ್ಲೋ ಪುಕ್ಕಲನಂತೆ ಅಡಗಿ ಕುಳಿತಿದ್ದೀರೋ ಅದು ನಿಮಗೆ ಗೊತ್ತು. ಒಂದೇ ಒಂದು ಪ್ರಶ್ನೆ, ನೀವು ದೇಶ ಬಿಟ್ಟು ಓಡಿಹೋಗಿದ್ದಾದ್ರೂ ಯಾಕೆ? ತಪ್ಪು ಮಾಡಿದ್ದೀರೋ, ಇಲ್ವೋ ಅನ್ನೋದನ್ನ ನಿಮ್ಮ ಮನಸಾಕ್ಷಿಯನ್ನೇ ಪ್ರಶ್ನಿಸಿಕೊಂಡು ಬಿಡಿ.

ನಿಮ್ಮ ವಿರುದ್ಧದ ಆರೋಪಗಳೆಲ್ಲ ಕಪೋಲಕಲ್ಪಿತ, ಎದುರಾಳಿಗಳ ಕುತಂತ್ರ, ಷಡ್ಯಂತ್ರವೇ ಅಂತಾ ಭಾವಿಸಿದ್ರೆ, ನೀವ್ಯಾಕೆ 28 ದಿನದಿಂದ ಕದ್ದು ಓಡ್ತಿದ್ದೀರಿ? ಭಾರತಕ್ಕೆ ಬಂದ್ರೆ ಕೇಸ್‌ ಹಾಕ್ತಾರೆ ಅಂತಾ ಭಯನಾ? ಪೊಲೀಸರು ವಿಚಾರಣೆ ಹೆಸರಲ್ಲಿ ಟಾರ್ಚರ್‌ ಕೊಡ್ತಾರೆ ಅಂತ ದಿಗಿಲಾ? ಜೈಲಿಗೆ ಹಾಕಿಬಿಡ್ತಾರೆ ಅಂತಾ ಕೈಕಾಲು ತಣಗಾಗ್ತಿವೆಯಾ? ಹಾಗಾದ್ರೆ, ಒಂದು ಕೆಲಸ ಮಾಡಿ. ಕೋರ್ಟ್‌ ಮುಂದೆ ಬಂದು ಶರಣಾಗಿ.

ಒಂದಲ್ಲ, ಎರಡಲ್ಲ, ಅದೆಷ್ಟು ಜನರು ನಿಮ್ಮಿಂದ ಇಂದು ಕಣ್ಣೀರು ಸುರಿಸ್ತಿದ್ದಾರೋ ಗೊತ್ತಿಲ್ಲ. ಅದೆಷ್ಟು ತಾಯಂದಿರು ನಿಮಗೆ ಹಿಡಿಶಾಪ ಹಾಕ್ತಿದ್ದಾರೋ ತಿಳಿದಿಲ್ಲ. ಸಮಸ್ತ ಹಾಸನವೇ ಇವತ್ತು ತಲೆತಗ್ಗಿಸಿ ನಿಂತಿದೆ ಅಂದ್ರೆ ಅದು ನಿಮ್ಮಿಂದಲೇ ಅನ್ನೋದನ್ನ ಮಾತ್ರ ಮರೆಯದಿರಿ. ಈ ಮಣ್ಣಿನ ಕಾನೂನು ನೊಂದವರಿಗೆ ನ್ಯಾಯದಾನ ಮಾಡಿಯೇ ತೀರುತ್ತದೆ. ಅದೆಷ್ಟು ದಿನ, ಅದೆಲ್ಲೇ ನೀವು ತಲೆಮರೆಸಿಕೊಂಡು ಸುತ್ತಿದ್ರೂ ಪ್ರತಿ ಆರಂಭಕ್ಕೂ ಅಂತ್ಯವಿರುತ್ತೆ. ಪಾಪದ ಕೊಡ ತುಂಬಿ ಬಂದಾಗ ಅದೆಂಥವನೇ ಆದ್ರೂ ತಲೆಬಾಗಲೇಬೇಕು.

ಸಮಸ್ತ ಕರುನಾಡಿನ ಪರವಾಗಿ

ವಿಸ್ತಾರ ನ್ಯೂಸ್‌ ತಂಡ

ಇದನ್ನೂ ಓದಿ: Prajwal Revanna Case: ಪಾಸ್‌ಪೋರ್ಟ್‌ ವಿಚಾರವಾಗಿ ಪ್ರಜ್ವಲ್‌ಗೆ ವಿದೇಶಾಂಗ ಸಚಿವಾಲಯ ನೋಟಿಸ್;‌ ಶೀಘ್ರ ಬಂಧನ?

Continue Reading
Advertisement
Narendra Modi
ದೇಶ16 mins ago

Narendra Modi: ನನ್ನನ್ನು ನಾಶಪಡಿಸಲು ಯಾರಿಂದಲೂ ಸಾಧ್ಯವಿಲ್ಲ; ಮಮತಾ ಬ್ಯಾನರ್ಜಿಗೆ ಮೋದಿ ಚಾಟಿ

ಕರ್ನಾಟಕ17 mins ago

Driving Bus With Umbrella: ಛತ್ರಿ ಹಿಡಿದು ಬಸ್ ಚಾಲನೆ; ಮೋಜಿಗಾಗಿ ವಿಡಿಯೊ ಮಾಡಿದ ಡ್ರೈವರ್‌, ಕಂಡಕ್ಟರ್‌ ಸಸ್ಪೆಂಡ್‌!

Vistara editorial
ಬೆಂಗಳೂರು41 mins ago

ವಿಸ್ತಾರ ಸಂಪಾದಕೀಯ: ಕಸ ವಿಲೇವಾರಿಗೆ ಹೊಸ ಸಂಸ್ಥೆ, ಜಾರಿಕೊಳ್ಳುವ ನೆಪ ಆಗದಿರಲಿ

SRH vs RR
ಕ್ರೀಡೆ59 mins ago

SRH vs RR: ಹೈದರಾಬಾದ್​ಗೆ ಗೆಲುವಿನ ‘ಸನ್​ರೈಸ್’; ಫೈನಲ್​ನಲ್ಲಿ ಕೆಕೆಆರ್ ವಿರುದ್ಧ ಕಣಕ್ಕೆ​

Electric Shock
ಕ್ರೈಂ1 hour ago

Electric Shock: ಲಿಂಗಸುಗೂರಿನಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವು

Prajwal Revanna Case
ಕರ್ನಾಟಕ1 hour ago

Prajwal Revanna Case: ರಾಜ್ಯಕ್ಕೆ ಬಂದು ಕಾನೂನು ಗೌರವಿಸಿ; ಪ್ರಜ್ವಲ್‌ಗೆ ವಿಸ್ತಾರ ನ್ಯೂಸ್‌ ಬಹಿರಂಗ ಪತ್ರ

Kangana Ranaut
ದೇಶ2 hours ago

Kangana Ranaut: ಈ ಗುಲಾಬಿಯು ನಿಮಗಾಗಿ; ಮೋದಿಗೆ ಕೆಂಪು ಗುಲಾಬಿ ಕೊಟ್ಟು ಸ್ವಾಗತಿಸಿದ ಕಂಗನಾ! Photo ಇದೆ

T20 World Cup 2024
ಕ್ರೀಡೆ2 hours ago

T20 World Cup 2024: ಕೊನೆಗೂ ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸಿದ ಭಾರತದ ಬದ್ಧ ಎದುರಾಳಿ ಪಾಕಿಸ್ತಾನ

Prajwal Revanna Case
ಕರ್ನಾಟಕ2 hours ago

Prajwal Revanna Case: ವಕೀಲ ದೇವರಾಜೇಗೌಡಗೆ ಇನ್ನೂ 14 ದಿನ ಜೈಲೇ ಗತಿ; ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ

Yuzvendra Chahal
ಕ್ರಿಕೆಟ್3 hours ago

Yuzvendra Chahal: ಸಿಕ್ಸರ್​ ಹೊಡೆಸಿಕೊಂಡು ಐಪಿಎಲ್​ನಲ್ಲಿ ಕೆಟ್ಟ ದಾಖಲೆ ಬರೆದ ಚಹಲ್​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ2 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ3 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು3 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು4 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ4 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ5 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ5 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ5 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ1 week ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌