Theft Case : ಬೆಂಗಳೂರಿಗರೇ ಎಚ್ಚರ; ಖಾಕಿ ಡ್ರೆಸ್‌ನಲ್ಲಿ ಬಂದು ದರೋಡೆ ಮಾಡ್ತಾರೆ ಹುಷಾರ್‌! - Vistara News

ಕರ್ನಾಟಕ

Theft Case : ಬೆಂಗಳೂರಿಗರೇ ಎಚ್ಚರ; ಖಾಕಿ ಡ್ರೆಸ್‌ನಲ್ಲಿ ಬಂದು ದರೋಡೆ ಮಾಡ್ತಾರೆ ಹುಷಾರ್‌!

Theft Case : ಇತ್ತೀಚೆಗೆ ಖದೀಮರು ಪೊಲೀಸರ ಸೋಗಿನಲ್ಲಿ ಬಂದು ದರೋಡೆ ಮಾಡುತ್ತಿರುವ ಪ್ರಕರಣ ಹೆಚ್ಚಾಗುತ್ತಿದೆ. ಸದ್ಯ ಬೆಂಗಳೂರಲ್ಲಿ ಉದ್ಯಮಿ ಮನೆಗೆ ನುಗ್ಗಿದ ದರೋಡೆಕೋರರು ಲಕ್ಷಾಂತರ ರೂ. ಕದ್ದು ಪರಾರಿ ಆಗಿದ್ದಾರೆ.

VISTARANEWS.COM


on

Theft case
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಆ ಉದ್ಯಮಿ ಮನೆಯವರು ಇನ್ನೇನು ರಾತ್ರಿ ಊಟ ಮುಗಿಸಿ ನಿದ್ರೆಗೆ ಜಾರುವವರಿದ್ದರು. ಆದರೆ ಅದೇ ಸಮಯಕ್ಕೆ ಮನೆ ಡೋರ್‌ನ ಕಾಲಿಂಗ್‌ ಬೆಲ್‌ ಬಡಿದುಕೊಂಡಿತ್ತು. ಯಾರೆಂದು ನೋಡಿದಾಗ ಎದುರಿಗೆ ನಾಲ್ಕೈದು ಮಂದಿ ಪೊಲೀಸ್‌ ಸಮವಸ್ತ್ರದಲ್ಲಿ ಬಂದಿದ್ದರು. ಪೊಲೀಸರಲ್ವಾ ಎಂದು ಆ ಮನೆಯವರು ಮನೆ ಬಾಗಿಲು ತೆರೆದಿದ್ದು ಅಷ್ಟೇ.., ರಾಜಾರೋಷವಾಗಿ ಮನೆಯೊಳಗೆ ನುಗ್ಗಿದ್ದರು. ಏಕಾಏಕಿ ಮಾರಕಾಸ್ತ್ರಗಳನ್ನು ತೋರಿಸಿ ಕ್ಷಣಾರ್ಧದಲ್ಲಿ ದರೋಡೆ (theft Case) ಮಾಡಿ ಪರಾರಿ ಆಗಿದ್ದರು.

ಬೆಂಗಳೂರಿನ ಪೀಣ್ಯ ಪೊಲೀಸ್ ಠಾಣೆಯ ಎಚ್‌.ಎಂ.ಟಿ ಲೇಔಟ್‌ನಲ್ಲಿ ಪೊಲೀಸರ ಸೋಗಿನಲ್ಲಿ ಉದ್ಯಮಿಯೊಬ್ಬರ ಮನೆಗೆ ನುಗ್ಗಿ ಕಳ್ಳರು ದರೋಡೆ ಮಾಡಿದ್ದಾರೆ. ಖಾಸಗಿ ಕಂಪನಿ ಮಾಲೀಕ ಮನೋಹರ್ ಎಂಬುವವರ ಮನೆಯಲ್ಲಿ ದರೋಡೆ ನಡೆದಿದೆ. ಮನೆಯಲ್ಲಿದ್ದ ಸುಮಾರು 700 ಗ್ರಾಂ ಚಿನ್ನಾಭರಣ ಹಾಗೂ 60 ಲಕ್ಷ ರೂ. ನಗದು ಕದ್ದು ಪರಾರಿ ಆಗಿದ್ದಾರೆ.

ಉದ್ಯಮಿ ಮನೋಹರ್ ಮನೆಯಲ್ಲಿ ಇಲ್ಲದ ವೇಳೆ ಈ ಕಳ್ಳತನ ನಡೆದಿದೆ. ಮನೋಹರ್ ಪತ್ನಿ ಸುಜಾತ ಹಾಗೂ ಮಗ ರೂಪೇಶ್ ಮನೆಯಲ್ಲಿದ್ದರು. ಈ ವೇಳೆ ಪೊಲೀಸ್ ಡ್ರೆಸ್‌ನಲ್ಲಿ ಮನೆಗೆ ನುಗ್ಗಿದ್ದಾರೆ. ಉದ್ಯಮಿ ಮನೋಹರ್‌ರ ಅಣ್ಣ-ತಮ್ಮಂದಿರ ನಡುವೆ ಹಲವು ಪ್ರಕರಣಗಳಿದ್ದವು. ಹೀಗಾಗಿ ಅದೇ ವಿಚಾರಕ್ಕೆ ಪೊಲೀಸರು ಬಂದಿರಬಹುದು ಎಂದುಕೊಂಡು ಸುಜಾತ ಮನೆ ಡೋರ್‌ ತೆರೆದಿದ್ದರು. ಪೊಲೀಸರ ಸೋಗಿನಲ್ಲಿ ಮನೆಯೊಳಗೆ ಕಾಲಿಟ್ಟ ಕಳ್ಳರು ಕ್ಷಣ ಮಾತ್ರದಲ್ಲಿ ತಮ್ಮ ನಿಜ ಸ್ವರೂಪವನ್ನು ತೋರಿದ್ದರು.

ಇದನ್ನೂ ಓದಿ: Elephant Arjuna : ಅಧಿಕಾರಿಗಳ ಗುಂಡಿನಿಂದಲೇ ಅರ್ಜುನನ ಮರಣ?; ಇಲ್ಲಿದೆ ವಿಡಿಯೊ ಸಾಕ್ಷಿ

ನೋಡನೋಡುತ್ತಿದ್ದಂತೆ ಈ ಮೊದಲೇ ತಂದಿದ್ದ ಡ್ರ್ಯಾಗರ್ ಹಾಗೂ ಮಚ್ಚುಗಳನ್ನು ಹೊರತೆಗೆದು ಮನೆಯೊಳಗೆ ಇದ್ದವರನ್ನು ಹೆದರಿಸಲು ಶುರು ಮಾಡಿದ್ದರು. ಈ ವೇಳೆ ಉದ್ಯಮಿ ಪುತ್ರ ರೂಪೇಶ್ ವಿರೋಧ ವ್ಯಕ್ತಪಡಿಸಲು ಮುಂದಾಗಿದ್ದರು. ಆದರೆ ಆತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ. ಬಳಿಕ ಮನೆಯಲ್ಲಿ ಇದ್ದವರನ್ನೆಲ್ಲ ಲಾಕ್‌ ಮಾಡಿ, ಮನೆಯಲ್ಲಿದ್ದ ಚಿನ್ನಾಭರಣ ಹಾಗೂ ನಗದು ಲೂಟಿ ಮಾಡಿದ್ದಾರೆ.

ಮಾತ್ರವಲ್ಲದೆ ಕೃತ್ಯ ಎಸಗಿದ ಬಳಿಕ ಸಿಕ್ಕಿಹಾಕಿಕೊಳ್ಳಬಾರದೆಂದು ಮನೆಯಲ್ಲಿದ್ದ ಸಿಸಿಟಿವಿ ಡಿವಿಆರ್ ಸಮೇತ ದುಷ್ಕರ್ಮಿಗಳು ಪರಾರಿ ಆಗಿದ್ದಾರೆ. ಸುಮಾರು 5 ರಿಂದ 6 ಮಂದಿ ಈ ಕೃತ್ಯದಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ. ರೂಪೇಶ್‌ಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನಾ ಸ್ಥಳಕ್ಕೆ ಪೀಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮನೆಯ ಅಕ್ಕ ಪಕ್ಕದ ಸಿಸಿಕ್ಯಾಮೆರಾಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಈ ಸಂಬಂಧ ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಮೊಬೈಲ್‌ ಅಂಗಡಿಗೆ ಕನ್ನ

ರಾಯಚೂರಿನ ಸಿಂಧನೂರಿನ ಬಸ್ ನಿಲ್ದಾಣದ ಬಳಿ ಇದ್ದ ಮೊಬೈಲ್‌ ಅಂಗಡಿಗೆ ಖದೀಮರು ಕನ್ನ ಹಾಕಿದ್ದಾರೆ. ಎಸ್‌ಆರ್‌ಕೆ ಮೊಬೈಲ್ ಶಾಪ್‌ನ ಬೀಗ ಮುರಿದು, ಸುಮಾರು 53ಕ್ಕೂ ಹೆಚ್ಚು ಮೊಬೈಲ್‌ಗಳನ್ನು ‌ಕಳವು ಮಾಡಿದ್ದಾರೆ. ಅಂಗಡಿಯೊಳಗೆ ಇದ್ದ ಸಿಸಿಟಿವಿಯನ್ನು ಬೇರೆ ಕಡೆ ತಿರುಗಿಸಿ ಕಳ್ಳತನ ಮಾಡಿದ್ದಾರೆ. ಮಾಹಿತಿ ತಿಳಿದು ಮೊಬೈಲ್ ಅಂಗಡಿಗೆ ಸಿಂಧನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Assault Case : ವಿವಾಹಿತೆ ಹಿಂದೆ ಬಿದ್ದ ಪಾಗಲ್‌ ಪ್ರೇಮಿ; ಮದುವೆ ನಿರಾಕರಿಸಿದ್ದಕ್ಕೆ ಮನೆಗೆ ಇಟ್ಟ ಬೆಂಕಿ

Assault Case : ಮದುವೆಗೆ ಒಲ್ಲೆ ಎಂದಿದ್ದಕ್ಕೆ ಪಾಗಲ್‌ ಪ್ರೇಮಿಯೊಬ್ಬ ವಿವಾಹಿತ ಮಹಿಳೆಯ ಮನೆಗೆ ಬೆಂಕಿ ಹಚ್ಚಿದ್ದಾನೆ. ಪ್ರಕರಣ ಸಂಬಂಧ ಪೊಲೀಸರು ಆರೋಪಿಯನ್ನು ಬಂಧಿಸಿ, ತನಿಖೆಯನ್ನು ಮುಂದುವರಿಸಿದ್ದಾರೆ.

VISTARANEWS.COM


on

By

assault case in Bengaluru
Koo

ಬೆಂಗಳೂರು: ವಿವಾಹಿತ ಮಹಿಳೆಯ (Assault Case) ಹಿಂದೆ ಬಿದ್ದ ಪಾಗಲ್‌ ಪ್ರೇಮಿಯೊಬ್ಬ, ಮದುವೆ ಆಗುವಂತೆ ಪೀಡಿಸುತ್ತಿದ್ದ. ಮದುವೆಗೆ ಮಹಿಳೆ ನಿರಾಕರಿಸಿದ್ದಕ್ಕೆ ಆಕೆ ಮನೆಗೆ ಬೆಂಕಿ ಇಟ್ಟಿದ್ದಾನೆ. ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಸಾರಾಯಿಪಾಳ್ಯದಲ್ಲಿ ಘಟನೆ ನಡೆದಿದೆ.

ಅರ್ಬಾಜ್ ಎಂಬಾತನಿಂದ ಈ ಕೃತ್ಯ ನಡೆದಿದೆ. ಮಹಿಳೆಗೆ ದೂರದ ಸಂಬಂಧಿಯಾಗಿದ್ದ ಅರ್ಬಾಜ್, ಇತ್ತೀಚೆಗೆ ತನ್ನ ವಾರಸೆ ಬದಲಾಯಿಸಿಕೊಂಡಿದ್ದ. ಮಹಿಳೆಗೆ ಮದುವೆ ಆಗಿದ್ದರೂ, ತನ್ನನ್ನು ಮದುವೆ ಆಗು ಎಂದು ಪೀಡಿಸುತ್ತಿದ್ದ. ಇದರಿಂದ ಬೇಸತ್ತ ಮಹಿಳೆ ಮನೆಯವರಿಗೆ ವಿಚಾರ ತಿಳಿಸಿದ್ದಳು. ಹೀಗಾಗಿ 2 ಕುಟುಂಬದ ಹಿರಿಯರು ಅರ್ಬಾಜ್‌ಗೆ ಬುದ್ಧಿವಾದ ಹೇಳಿದ್ದರು.

ಆದರೂ ಮಹಿಳೆಗೆ ಆಗಾಗ ಫೋನ್‌ ಮಾಡಿ ಗಲಾಟೆ ಮಾಡುತ್ತಿದ್ದ. ಹೀಗಿರುವಾಗ ಗುರುವಾರ ಮುಂಜಾನೆ 4 ಗಂಟೆ ಸುಮಾರಿಗೆ ಮಹಿಳೆ ಮನೆ ಬಳಿ ಬಂದವನೇ ಬೆಂಕಿ ಇಟ್ಟಿದ್ದಾನೆ. ಅದೃಷ್ಟವಶಾತ್‌ ಆ ಸಮಯದಲ್ಲಿ ಮನೆಯಲ್ಲಿ ಯಾರು ಇರಲಿಲ್ಲ. ಬೆಂಕಿ ಬಿದ್ದಿದ್ದರಿಂದ ಮನೆಯಲ್ಲಿದ್ದ ಬಟ್ಟೆಗಳು, ಟಿವಿ, ಫ್ರಿಡ್ಜ್ ಬೆಂಕಿಗಾಹುತಿ ಆಗಿವೆ.

ಸದ್ಯ ಈ ಬಗ್ಗೆ ಸಂಪಿಗೆಹಳ್ಳಿ ಪೊಲೀಸ್ ಠಾಣೆಗೆ ಸಂತ್ರಸ್ತೆ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಅರ್ಬಾಜ್‌ನನ್ನು ಬಂಧಿಸಿದ್ದಾರೆ. ಈ ಸಂಬಂಧ ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Crime News : 6 ವರ್ಷದ ಬಾಲಕಿಯ ಅಪಹರಿಸಲು ಯತ್ನಿಸಿದ ದುಷ್ಟ; ಹಿಟ್‌ ಆ್ಯಂಡ್‌ ರನ್‌ ಮಾಡಿ ಚಾಲಕರಿಬ್ಬರು ಎಸ್ಕೇಪ್‌

Self Harming : ಕಲಬುರಗಿಯಲ್ಲಿ ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

ಕಲಬುರಗಿ: ಜಾತಿ ನಿಂದನೆ ಕೇಸ್ (Case of casteist slurs) ದಾಖಲಿಸಿದಕ್ಕೆ ಹೆದರಿದ ಯುವಕ ಆತ್ಮಹತ್ಯೆ (Self Harming) ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯ (Kalaburagi News) ಕಮಲಾಪುರ ತಾಲ್ಲೂಕಿನ ಲಾಡಮುಗಳಿ ಗ್ರಾಮದಲ್ಲಿ ನಡೆದಿದೆ. ನಿಖಿಲ್ ಪೂಜಾರಿ (23) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟವರು.

ನಾಲ್ಕು ದಿನದ ಹಿಂದೆ ಲಾಡಮುಗುಳಿ ಗ್ರಾಮದಲ್ಲಿ ಜಾತ್ರೆ ವೇಳೆ ಗಲಾಟೆ ನಡೆದಿತ್ತು. ಈ ವೇಳೆ ಕ್ಷುಲ್ಲಕ‌ ವಿಚಾರಕ್ಕೆ ಎರಡು ಸಮುದಾಯದ ಯುವಕರ ನಡುವೆ ಗಲಾಟೆ ನಡೆದಿತ್ತು. ಗಲಾಟೆಯ ಬಳಿಕ ಊರವರ ಸಮ್ಮುಖದಲ್ಲಿ ರಾಜಿ ಸಂಧಾನ ಕೂಡ ನಡೆದಿತ್ತು. ಬಳಿಕ ಇನ್ನೊಂದು ಸಮುದಾಯ ಯುವಕರು ನಿಖಿಲ್ ಪೂಜಾರಿ ಸೇರಿ ಹಲವರ ವಿರುದ್ಧ ದೂರು ನೀಡಿದ್ದರು.

ನರೋಣಾ ಪೊಲೀಸ್ ಠಾಣೆಯಲ್ಲಿ ನಿಖಿಲ್ ಸೇರಿ ಹಲವರ ವಿರುದ್ಧ ಜಾತಿ ನಿಂದನೆ ಕೇಸ್ ದಾಖಲಾಗಿತ್ತು. ಇದರಿಂದ ಹೆದರಿದ ನಿಖಿಲ್‌ ಲಾಡಮುಗಳಿ ಗ್ರಾಮದ ಹೊರವಲಯದ ಜಮೀನಿನಲ್ಲಿ ಮರಕ್ಕೆ ನೇಣಿಗೆ ಶರಣಾಗಿದ್ದಾನೆ.

Self Harming in kalaburagi

ಇನ್ನೂ ಯುವಕನ ಕುಟುಂಬಸ್ಥರು ಹಾಗೂ ಸಮುದಾಯದವರು ನ್ಯಾಯಕ್ಕಾಗಿ ಕಲಬುರಗಿಗೆ ಶವ ತರಲು ಮುಂದಾದರು. ಮಿಲಿಟರಿಯವರು ನಡುರಸ್ತೆಯಲ್ಲಿ ತಡೆದ ಹಿನ್ನೆಲೆಯಲ್ಲಿ ಲಾಡ ಮುಗಳಿ ಗ್ರಾಮದ ಹೊರವಲಯದಿಂದ ಮೃತದೇಹವನ್ನು ಹೊತ್ತಿಕೊಂಡು ಬರುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

Lok Sabha Election 2024

Prajwal Revanna Case: ಮಹಾನ್‌ ರೇಪಿಸ್ಟ್‌ಗೆ ಮೋದಿಯಿಂದ ರಕ್ಷಣೆ; ಪ್ರಜ್ವಲ್‌ ಪೆನ್‌ಡ್ರೈವ್‌ ಕೇಸ್‌ ಬಗ್ಗೆ ರಾಹುಲ್‌ ಗಾಂಧಿ ಗುಡುಗು

Prajwal Revanna Case: ರೇಪಿಸ್ಟ್‌ಗೆ ಬೆಂಬಲ ಕೊಟ್ಟಿರುವುದು ಪ್ರಧಾನಿ ನರೇಂದ್ರ ಮೋದಿ ಅವರ ಗ್ಯಾರಂಟಿ. ಪ್ರಜ್ವಲ್ ರೇವಣ್ಣ ಜತೆ ಬಿಜೆಪಿ ನಾಯಕರು ಪ್ರಚಾರಕ್ಕೆ ಹೋಗಿದ್ದಾರೆ. ಇದು ಬಿಜೆಪಿಯವರ ಅಜೆಂಡಾವಾಗಿದೆ. ಇದು ಬಿಜೆಪಿಯವರ ನಡೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂತಹ ಅತ್ಯಾಚಾರಿಯೊಬ್ಬನ ಪರ ಮತಯಾಚನೆ ನಡೆಸಲು ಬಂದಿದ್ದಾರೆ. ಮೋದಿಯವರ ಗ್ಯಾರಂಟಿ ಏನು? ಅತ್ಯಾಚಾರಿಗೆ ಸಪೋರ್ಟ್ ಮಾಡಿರೋದು. 400 ಅತ್ಯಾಚಾರ ಮಾಡಿರುವ ರೇಪಿಸ್ಟ್‌ನನ್ನು ಮೋದಿ ಬೆಂಬಲಿಸಿದ್ದಾರೆ ಎಂದು ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

VISTARANEWS.COM


on

Prajwal Revanna Case PM Modi defends MP accused of rape says Rahul Gandhi
Koo

ಶಿವಮೊಗ್ಗ: ಹಾಸನ ಸಂಸದ (Hassan MP), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna Case) ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹರಿಹಾಯ್ದಿದ್ದಾರೆ. ದೇಶದ ಮಹಾನ್‌ ರೇಪಿಸ್ಟ್‌ ಒಬ್ಬನನ್ನು ಮೋದಿ ರಕ್ಷಣೆ ಮಾಡಿದ್ದಾರೆ. ಇದು ಮಹಾ ಅಪರಾಧ ಎಂದು ಗುಡುಗಿದ್ದಾರೆ.

ಶಿವಮೊಗ್ಗದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ಪರ ಪ್ರಚಾರ ಭಾಷಣ ಮಾಡಿದ ರಾಹುಲ್‌ ಗಾಂಧಿ, ರೇಪಿಸ್ಟ್‌ಗೆ ಬೆಂಬಲ ಕೊಟ್ಟಿರುವುದು ಪ್ರಧಾನಿ ನರೇಂದ್ರ ಮೋದಿ ಅವರ ಗ್ಯಾರಂಟಿ. ಪ್ರಜ್ವಲ್ ರೇವಣ್ಣ ಜತೆ ಬಿಜೆಪಿ ನಾಯಕರು ಪ್ರಚಾರಕ್ಕೆ ಹೋಗಿದ್ದಾರೆ. ಇದು ಬಿಜೆಪಿಯವರ ಅಜೆಂಡಾವಾಗಿದೆ. ಇದು ಬಿಜೆಪಿಯವರ ನಡೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂತಹ ಅತ್ಯಾಚಾರಿಯೊಬ್ಬನ ಪರ ಮತಯಾಚನೆ ನಡೆಸಲು ಬಂದಿದ್ದಾರೆ. ಮೋದಿಯವರ ಗ್ಯಾರಂಟಿ ಏನು? ಅತ್ಯಾಚಾರಿಗೆ ಸಪೋರ್ಟ್ ಮಾಡಿರೋದು. 400 ಅತ್ಯಾಚಾರ ಮಾಡಿರುವ ರೇಪಿಸ್ಟ್‌ನನ್ನು ಮೋದಿ ಬೆಂಬಲಿಸಿದ್ದಾರೆ ಎಂದು ಹೇಳಿದರು.

ಪ್ರಜ್ವಲ್ ರೇವಣ್ಣ 400 ಮಹಿಳೆಯರಿಗೆ ಅತ್ಯಾಚಾರ ಮಾಡಿದ್ದಾರೆ. ಇದು ಕೇವಲ ಸೆಕ್ಸ್ ಕ್ಯಾಂಡಲ್ ಅಲ್ಲ, ಅತ್ಯಾಚಾರವಾಗಿದೆ. ಇದನ್ನು ಬಿಜೆಪಿಯವರು ಸಮರ್ಥಿಸಿಕೊಳ್ಳುತ್ತಿದ್ದಾರೆ. ಪ್ರಜ್ವಲ್ ರೇವಣ್ಣ ಜತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ನಿಂತಿದ್ದಾರೆ. ಪ್ರಜ್ವಲ್ ರೇವಣ್ಣ ಅತ್ಯಾಚಾರಿ ಅಂತ ಬಿಜೆಪಿ ನಾಯಕರಿಗೆ ಗೊತ್ತಿತ್ತು. ಆದರೆ, ಹಾಸನದಲ್ಲಿ ಟಿಕೆಟ್ ಕೊಟ್ಟರು. ಬಿಜೆಪಿಯವರಿಗೆ ಹಾಗೂ‌ ಮಹಿಳೆಯರಿಗೆ ಇದು ತಿಳಿಯಬೇಕು. ಮೋದಿ ಅವರು ಹಾಸನ ಹಾಗೂ ದೇಶದ ಮಹಿಳೆಯರಿಗೆ ಅವಮಾನ ಮಾಡಿದ್ದಾರೆ. ಮೋದಿ ಹಾಗೂ ಅಮಿತ್ ಶಾ ಅವರು ದೇಶಕ್ಕೆ ತಲೆಬಾಗಿ ಕ್ಷಮೆ ಕೇಳಬೇಕು. ಇಡೀ ಪ್ರಪಂಚದಲ್ಲಿ ಇಂತಹ ಘಟನೆ ನೋಡಿಲ್ಲ, ನೋಡುವುದೂ ಇಲ್ಲ ಎಂದು ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿದರು. ‌

ಕಾಂಗ್ರೆಸ್‌ನಿಂದ ಸೂಕ್ತ ತನಿಖೆ

ಪ್ರಜ್ವಲ್‌ ರೇವಣ್ಣ ಅವರನ್ನು ವಿದೇಶದಿಂದ ಕರೆಸಿ ಸೂಕ್ತ ತನಿಖೆಯನ್ನು ನಮ್ಮ ಕಾಂಗ್ರೆಸ್‌ ಸರ್ಕಾರ ನಡೆಸುತ್ತದೆ. ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತದೆ ಎಂದು ರಾಹುಲ್‌ ಗಾಂಧಿ ಭರವಸೆ ನೀಡಿದರು.

ಮೋದಿಗೆ ಭಯ ಶುರುವಾಗಿದೆ

ಕರ್ನಾಟಕದಲ್ಲಿ 5 ಗ್ಯಾರಂಟಿ ಕೊಟ್ಟಿದ್ದೇವೆ. ಪ್ರತಿ ಮನೆ ಯಜಮಾನಿಗೆ ಮಾಸಿಕವಾಗಿ ತಲಾ 2000 ರೂಪಾಯಿಯಂತೆ ಒಂದು ವರ್ಷಕ್ಕೆ 24 ಸಾವಿರ ರೂಪಾಯಿಯನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುತ್ತಿದೆ. ಇನ್ನು ಕಾಂಗ್ರೆಸ್‌ನಿಂದ ಈಗ ಗ್ಯಾರಂಟಿಯ ಭಾಗವಾಗಿ ಮಹಾಲಕ್ಷ್ಮಿ ಯೋಜನೆಯನ್ನು ಜಾರಿಗೆ ತರಲು ಹೊರಟಿದ್ದೇವೆ. ಇಡೀ ದೇಶದಲ್ಲಿ ಅಧಿಕಾರ ಬಂದರೆ ಮೊದಲು ಮಹಾಲಕ್ಷ್ಮಿ ಯೋಜನೆಯನ್ನು ತರುತ್ತೇವೆ. ಮೋದಿಯವರು ಜನರನ್ನು ಬಡವರನ್ನಾಗಿ ಮಾಡಿದ್ದಾರೆ. ಪ್ರತಿಯೊಂದು ಕುಟುಂಬದಿಂದ ಮಹಿಳೆಯರ ಹೆಸರನ್ನು ಸಂಗ್ರಹ ಮಾಡುತ್ತಾ ಇದ್ದಾರೆ. 1 ಲಕ್ಷ ರೂಪಾಯಿಯನ್ನು ಖಾತೆಗೆ ಹಾಕಲಾಗುವುದು. ಇದರಿಂದ ಮೋದಿಗೆ ಭಯ ಶುರುವಾಗಿದೆ ಎಂದು ಹೇಳಿದರು.

ಅಧಿಕಾರಕ್ಕೆ ಬಂದರೆ ಉದ್ಯೋಗ ಭರ್ತಿ, ಸಾಲ ಮನ್ನಾ

ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಯುವಕರಿಗೆ ಉದ್ಯೋಗ ಕೊಡುವ ಕೆಲಸ ಮಾಡುತ್ತೇವೆ. ಕೇಂದ್ರದಲ್ಲಿ 30 ಲಕ್ಷ ಉದ್ಯೋಗಗಳು ಖಾಲಿ ಇವೆ. ಅವುಗಳನ್ನು ಭರ್ತಿ ಮಾಡುತ್ತೇವೆ. ಆಶಾ ಕಾರ್ಯಕರ್ತರಿಗೆ ನಾವು ಸಹಾಯ ಮಾಡುತ್ತೇವೆ. ನರೇಂದ್ರ ಮೋದಿ ಅವರು ಉದ್ಯಮಿಗಳ ಸಾಲ ಮನ್ನಾ ಮಾಡಿದ್ದಾರೆ. ನಾವು ರೈತರ ಸಾಲ ಮನ್ನಾ ಮಾಡುತ್ತೇವೆ. ನಾವು ರೈತರ ಬೆಳೆದ ಬೆಳೆಗೆ ಬೆಂಬಲ ಬೆಲೆ ಕೊಡುತ್ತೇವೆ ಎಂದು ರಾಹುಲ್‌ ಗಾಂಧಿ ಆಶ್ವಾಸನೆ ನೀಡಿದರು.

ಇದನ್ನೂ ಓದಿ: Prajwal Revanna Case: SIT ಮುಂದೆ ಹಾಜರಾಗಲು ವಿನಾಯಿತಿ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕಾರ? ತನಿಖೆಗೆ ಆತುರ ಏಕೆ?

ಶಿವಮೊಗ್ಗದಲ್ಲಿ ನಡೆದ ಕಾಂಗ್ರೆಸ್‌ ಸಮಾವೇಶದ ವಿಡಿಯೊ

ಬಿಜೆಪಿ, ಆರ್‌ಎಸ್ಎಸ್‌ನವರಿಂದ ಸಂವಿಧಾನ ಬದಲಾವಣೆಗೆ ಮುಂದು

ವಿದ್ಯಾ ಸಂಸ್ಥೆಗಳನ್ನು ಖಾಸಗೀಕರಣ ಮಾಡಲು ಬಿಜೆಪಿಯವರು ಹೊರಟಿದ್ದಾರೆ. ನಾವು ಸಂವಿಧಾನದಲ್ಲಿ ರಕ್ಷಣೆ ಮಾಡಬೇಕಿದೆ. ಬಿಜೆಪಿಯವರು, ಆರ್‌ಎಸ್ಎಸ್‌ನವರು ಸಂವಿಧಾನ ಬದಲಾಯಿಸಲು ಮುಂದಾಗಿದ್ದಾರೆ. ಸಂವಿಧಾನದಿಂದ ದಲಿತರು ಆದಿವಾಸಿಗಳಿಗೆ ರಕ್ಷಣೆ ಸಿಗುತ್ತಿದೆ. ಇದನ್ನು ತಿರುಚಲು ಬಿಜೆಪಿಯವರು ಮುಂದಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರದಲ್ಲಿರುವ ಸಂಪತ್ತನ್ನು 22 ಮಂದಿಯ ಪ್ಯಾಕೆಟ್‌ಗೆ ಹಾಕಿದ್ದಾರೆ. ಅದಾನಿ, ಅಂಬಾನಿ ಕೈಯಲ್ಲಿ ದೇಶದ ಸಂಪತ್ತು ಇದೆ. ಕರ್ನಾಟಕಕ್ಕೆ ಮೋಸ ಮಾಡಿರುವ ಮೋದಿ 22 ಜನರಿಗೆ ಹಣ ಕೊಟ್ಟಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ನಾವು ಸಮಾನತೆಗಾಗಿ ಹೋರಾಟ ಮಾಡುತ್ತಿದ್ದೇವೆ. ಒಬಿಸಿ ದಲಿತರು, ಆದಿವಾಸಿಗಳ ಬಗ್ಗೆ ಮಾತನಾಡಿದರೆ ನಾವು ನಕ್ಸಲರು ಅಂತಿದ್ದಾರೆ. ಆದರೆ, ಸಂವಿಧಾನ ರಕ್ಷಣೆಗೆ ಕಾಂಗ್ರೆಸ್ ಮುಂದಾಗಿದೆ. ನಾವು ಸಂವಿಧಾನದ ಅಡಿಯಲ್ಲಿ ಬದುಕುತ್ತಿದ್ದೇವೆ ಎಂದು ರಾಹುಲ್‌ ಗಾಂಧಿ ಹೇಳಿದರು.

Continue Reading

ಕ್ರೈಂ

Crime News : 6 ವರ್ಷದ ಬಾಲಕಿಯ ಅಪಹರಿಸಲು ಯತ್ನಿಸಿದ ದುಷ್ಟ; ಹಿಟ್‌ ಆ್ಯಂಡ್‌ ರನ್‌ ಮಾಡಿ ಚಾಲಕರಿಬ್ಬರು ಎಸ್ಕೇಪ್‌

Crime News : ಪ್ರತ್ಯೇಕ ಕಡೆಗಳಲ್ಲಿ ಅಪರಾಧ ಕೃತ್ಯಗಳು ವರದಿ ಆಗಿವೆ. ಯಾದಗಿರಿಯಲ್ಲಿ ದುಷ್ಟನೊಬ್ಬ ಬಾಲಕಿಯನ್ನು ಅಪಹರಿಸಲು ಯತ್ನಿಸಿದರೆ, ಬೆಂಗಳೂರು ಹಾಗೂ ಗದಗನಲ್ಲಿ ಹಿಟ್‌ ಆ್ಯಂಡ್‌ ರನ್‌ ಕೇಸ್‌ ದಾಖಲಾಗಿದೆ.

VISTARANEWS.COM


on

By

Crime News
Koo

ಯಾದಗಿರಿ: ಹಾಡಹಗಲೆ ದುಷ್ಕರ್ಮಿಯೊಬ್ಬ ಶಾಲಾ ವಿದ್ಯಾರ್ಥಿನಿಯನ್ನು ಅಪಹರಿಸಲು (kidnap case) ಯತ್ನಿಸಿದ್ದಾರೆ. ಯಾದಗಿರಿಯ ಅಜೀಜ್ ಕಾಲೋನಿಯಲ್ಲಿ ಘಟನೆ (Crime News) ನಡೆದಿದೆ. 6 ವರ್ಷದ ಸಂಜನಾ ಎಂಬಾಕೆ ಎಂದಿನಂತೆ ಸ್ನೇಹಿತೆ ಮನೆಯಿಂದ ಟ್ಯೂಶನ್‌ಗೆ ತೆರಳುತ್ತಿದ್ದಳು.

ಈ ವೇಳೆ ಮಾಸ್ಕ್ ಧರಿಸಿ ಬಂದ ದುಷ್ಕರ್ಮಿಯೊರ್ವ ಬಾಲಕಿಯ ಕಣ್ಣಿಗೆ ಸ್ಪ್ರೇ ಮಾಡಿದ್ದಾನೆ. ಬಳಿಕ ಅಪಹರಿಸಲು ಯತ್ನಿಸಿದಾಗ ಬಾಲಕಿ ಆತನಿಂದ ತಪ್ಪಿಸಿಕೊಂಡು ಮನೆಗೆ ಓಡಿ ಬಂದಿದ್ದಾಳೆ. ಸದ್ಯ ಪೋಷಕರ ದೂರಿನ ಮೇರೆಗೆ ಘಟನಾ ಸ್ಥಳಕ್ಕೆ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುತ್ತಮುತ್ತಲ ಸಿಸಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ.

ಪೊಲೀಸ್‌ ಪೇದೆಗೆ ಗುದ್ದಿ ಟಿಪ್ಪರ್‌ ಚಾಲಕ ಪರಾರಿ

ಟಿಪ್ಪರ್ ಮತ್ತು ಪೊಲೀಸ್ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಪೊಲೀಸ್ ಪೇದೆ ಕಾಲು ಮುರಿದು ಹೋಗಿದೆ. ಗದಗದ ಬೆಟಗೇರಿ ರೈಲ್ವೇ ಅಂಡರ್ ಬ್ರಿಜ್ ಬಳಿ ಅಪಘಾತ ನಡೆದಿದೆ. ವೀರಯ್ಯ ಹಿರೇಮಠ (54) ಗಂಭಿರ ಗಾಯಗೊಂಡವರು. ಪೇದೆ ವೀರಯ್ಯ ಬೆಟಗೇರಿಯಿಂದ ಗದಗ ಕಡೆ ಬರುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಟಿಪ್ಪರ್ ಬೈಕ್‌ಗೆ ಗುದ್ದಿದೆ. ಡಿಕ್ಕಿ ರಭಸಕ್ಕೆ ಬೈಕ್‌ ನುಜ್ಜುಗುಜ್ಜಾಗಿದೆ.

ಇತ್ತ ಅಪಘಾತ ಮಾಡಿದ ಚಾಲಕ ಟಿಪ್ಪರ್ ನಿಲ್ಲಿಸದೇ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ನಂತರ ಗದಗ ನಗರದ ಪಂಚಾಕ್ಷರಿ ನಗರದ ಬಳಿ ಟಿಪ್ಪರ್ ಲಾರಿ ನಿಲ್ಲಿಸಿ ಚಾಲಕ ಪರಾರಿ ಆಗಿದ್ದಾನೆ. ಗದಗ ಟ್ರಾಫಿಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನೆಯಲ್ಲಿ ಪೇದೆ ಎಡಗಾಲಿಗೆ ಗಂಭೀರ ಗಾಯವಾಗಿದ್ದು, ಪ್ರಥಮ ಚಿಕಿತ್ಸೆ ಬಳಿಕ ಧಾರವಾಡದ ಎಸ್‌ಡಿಎಮ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ: Students Self harming: 20 ವರ್ಷಗಳಲ್ಲಿ ಐಐಟಿಯ 115 ವಿದ್ಯಾರ್ಥಿಗಳು ಆತ್ಮಹತ್ಯೆ

ಬೆಂಗಳೂರಲ್ಲಿ ಮಹಿಳೆಗೆ ಆಟೋ ಡಿಕ್ಕಿ

ಬೆಂಗಳೂರಲ್ಲಿ ಆಟೋ ಚಾಲಕನಿಂದ ಹಿಟ್‌ ಆ್ಯಂಡ್‌ ರನ್‌ ಮಾಡಿ ಪರಾರಿ ಆಗಿದ್ದಾನೆ. ಏಪ್ರಿಲ್ 29ರ ರಾತ್ರಿ 9.58ಕ್ಕೆ ಬೆಂಗಳೂರಿನ ಗಿರಿನಗರದ ಆವಲಹಳ್ಳಿ ಮುಖ್ಯರಸ್ತೆಯಲ್ಲಿ ಘಟನೆ ನಡೆದಿದೆ. ಲಕ್ಷ್ಮೀ (55) ಎಂಬಾಕೆ ಕಸ ಹಾಕಲು ಬಂದಿದ್ದರು. ಈ ವೇಳೆ ಅತಿ ವೇಗದಿಂದ ಬಂದ ಆಟೋ ಚಾಲಕ, ಮಹಿಳೆಗೆ ಗುದ್ದಿ ಸ್ಥಳದಿಂದ ಎಸ್ಕೇಪ್‌ ಆಗಿದ್ದಾನೆ.

ಘಟನೆಯಲ್ಲಿ ಲಕ್ಷ್ಮಿ ತಲೆ, ಕಾಲಿಗೆ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ. ಘಟನೆ ಸಂಬಂಧ ಬನಶಂಕರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಆಟೋ ಚಾಲಕನ ಪತ್ತೆ ಮಾಡಲು ಸಿಸಿಟಿವಿ ಮೊರೆ ಹೋಗಿದ್ದಾರೆ.

ಸಮುದ್ರದಲ್ಲಿ ಮುಳುಗುತ್ತಿದ್ದ ಮಹಿಳೆಯ ರಕ್ಷಣೆ

ನೀರಲ್ಲಿ ಆಟವಾಡುತ್ತಿದ್ದ ವೇಳೆ ಅಲೆಗೆ ಸಿಕ್ಕಿ ನೀರಲ್ಲಿ ಮುಳುಗುತ್ತಿದ್ದ ಮಹಿಳೆಯನ್ನು ರಕ್ಷಣೆ ಮಾಡಲಾಗಿದೆ. ಉತ್ತರಕನ್ನಡ ಜಿಲ್ಲೆಯ ಕುಮಟಾ ವನ್ನಳ್ಳಿಯ ಹೆಡ್‌ಬಂದರ್ ಬೀಚ್‌ನಲ್ಲಿ ಘಟನೆ ನಡೆದಿದೆ. ಶೋಭಾ (31) ರಕ್ಷಣೆಗೊಳಗಾದವರು. ಗದಗ ಜಿಲ್ಲೆಯ ರೋಣ ಮೂಲದ ಶೋಭಾ ಬೀಚ್‌ಗೆ ಬಂದಿದ್ದರು. ಈ ವೇಳೆ ಅಲೆಗೆ ಸಿಲುಕಿದ್ದರು. ಇದನ್ನೂ ಗಮನಿಸಿದ ಲೈಫ್‌ಗಾರ್ಡ್ ಸಿಬ್ಬಂದಿ ಉದಯ ಹರಿಕಂತ್ರ ಹಾಗೂ ಬೀಚ್ ಸೂಪರ್‌ವೈಸರ್ ರವಿ ನಾಯ್ಕ, ಬೋಟಿಂಗ್ ಸಿಬ್ಬಂದಿ ಪ್ರಭಾಕರ್, ಗಣೇಶ್ ನೆರವಿನಿಂದ ಬದುಕುಳಿದಿದ್ದಾರೆ. ಕುಮಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Prajwal Revanna Case: ನಿನ್ನ ಮಗನಿಂದ ಇಂಥ ಕಪ್ಪು ಚುಕ್ಕೆ ಬಂತು; ರೇವಣ್ಣ ಮೇಲೆ ಮುಗಿಬಿದ್ದ ಎಚ್‌ಡಿಡಿ, ಎಚ್‌ಡಿಕೆ

Prajwal Revanna Case: “ನಿನ್ನ ಮಗ ಮಾಡಿದ ಕೃತ್ಯಕ್ಕೆ ನಾವು ತಲೆ ತಗ್ಗಿಸಬೇಕು. ಇಡೀ ಪ್ರಪಂಚಕ್ಕೆ ಗೊತ್ತಾಗುವ ಕೆಲಸ ಮಾಡಿ ಹೋದ. ದೇಶದಲ್ಲಿ ತಲೆ ಎತ್ತಿಕೊಳ್ಳದಂತೆ ಮಾಡಿ ಹೋದ” ಎಂದು ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರೂ ಸಹ ಇದೇ ವೇಳೆ ತಮ್ಮ ಅಸಮಾಧಾನ ಹೊರಹಾಕಿದ್ದು, ನನ್ನ ರಾಜಕೀಯ ಜೀವನದಲ್ಲಿ ಇಂತಹ ಪರಿಸ್ಥಿತಿಯನ್ನು ಎದುರಿಸಿರಲಿಲ್ಲ ಎಂದು ಹರಿಹಾಯ್ದಿದ್ದಾರೆ.

VISTARANEWS.COM


on

Prajwal Revanna Case HD DeveGowda and HD Kumaraswamy slams HD Revanna
Koo

ಬೆಂಗಳೂರು: ಹಾಸನ ಸಂಸದ (Hassan MP), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna Case) ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಎಚ್‌.ಡಿ. ರೇವಣ್ಣ ವಿರುದ್ಧ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ನಿನ್ನ ಮಗನಿಂದ ತಲೆ ತಗ್ಗಿಸಬೇಕಾಗಿ ಬಂತು. ನಿನ್ನ ಮಗನಿಂದ ಇಂತಹ ಕಪ್ಪು ಚುಕ್ಕೆ ಬಂತು ಎಂದು ಹರಿಹಾಯ್ದಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಎಚ್‌.ಡಿ. ದೇವೇಗೌಡ ನಿವಾಸದಲ್ಲಿ ಸಭೆ ನಡೆದಿದ್ದು, ಪ್ರಜ್ವಲ್ ಪ್ರಕರಣದಲ್ಲಿ ರಾಜಕೀಯ ವಿರೋಧಿಗಳ ವಿರುದ್ಧ ಕಾನೂನು ಹೋರಾಟದ ಬಗ್ಗೆ ಚರ್ಚೆಯನ್ನು ನಡೆಸಲಾಗಿದೆ. ದೇವೇಗೌಡರ ಸಮ್ಮುಖದಲ್ಲಿ ಹಲವು ವಿಚಾರಗಳ ಬಗ್ಗೆ ಮಾತುಕತೆ ನಡೆದಿದೆ ಎನ್ನಲಾಗಿದೆ. ಈ ವೇಳೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಸಿಟ್ಟಾಗಿ ರೇವಣ್ಣ ಮೇಲೆ ಕಿಡಿಕಾರಿದ್ದಾರೆ ಎನ್ನಲಾಗಿದೆ.

“ನಿನ್ನ ಮಗ ಮಾಡಿದ ಕೃತ್ಯಕ್ಕೆ ನಾವು ತಲೆ ತಗ್ಗಿಸಬೇಕು. ಇಡೀ ಪ್ರಪಂಚಕ್ಕೆ ಗೊತ್ತಾಗುವ ಕೆಲಸ ಮಾಡಿ ಹೋದ. ದೇಶದಲ್ಲಿ ತಲೆ ಎತ್ತಿಕೊಳ್ಳದಂತೆ ಮಾಡಿ ಹೋದ” ಎಂದು ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರೂ ಸಹ ಇದೇ ವೇಳೆ ತಮ್ಮ ಅಸಮಾಧಾನ ಹೊರಹಾಕಿದ್ದು, ನನ್ನ ರಾಜಕೀಯ ಜೀವನದಲ್ಲಿ ಇಂತಹ ಪರಿಸ್ಥಿತಿಯನ್ನು ಎದುರಿಸಿರಲಿಲ್ಲ. ಇಂತಹ ಕಪ್ಪು ಚುಕ್ಕೆ ನಮ್ಮ ವಿರುದ್ಧ ಬಂದಿರಲಿಲ್ಲ. ನಿನ್ನ ಮಗನಿಂದ ಇಂತಹ ಕಪ್ಪು ಚುಕ್ಕೆ ಬಂತು. ಮಗನನ್ನು ಬೆಳೆಸುವ ವಿಚಾರದಲ್ಲಿ ನೀನು ಎಡವಿದ್ದೀಯಾ ಎಂದು ಗರಂ ಆಗಿದ್ದಾರೆ ಎನ್ನಲಾಗಿದೆ.

ರಾಜಕೀಯ ಮತ್ತು ಕಾನೂನಾತ್ಮಕ ಹೋರಾಟದ ಚರ್ಚೆ

ಬಳಿಕ ಈ ಪ್ರಕರಣದಲ್ಲಿ ರಾಜಕೀಯ ವಿರೋಧಿಗಳಿಗೂ ಖಡಕ್ ಎಚ್ಚರಿಕೆ ಕೊಡಬೇಕು. ಅಲ್ಲದೆ, ನಮ್ಮ ತಂಟೆಗೆ ಬಂದ ಡಿ.ಕೆ. ಬ್ರದರ್ಸ್‌ಗೆ ತಿರುಗೇಟು ಕೊಡಬೇಕು. ಕೇವಲ ರಾಜಕೀಯವಾಗಿ ಅಷ್ಟೇ ಅಲ್ಲ. ಕಾನೂನಾತ್ಮಕವಾಗಿ ಹೋರಾಟ ಮಾಡಲು ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ. ಆ ವಿಡಿಯೊಗಳನ್ನು ಬಿಡುಗಡೆ ಮಾಡಿದವರು ಯಾರು? ಇದರ ಹಿಂದೆ ಇರುವ ಶಕ್ತಿಗಳ ವಿರುದ್ಧ ಕಾನೂನು ಹೋರಾಟ ಮಾಡಲು ತಂತ್ರಗಾರಿಕೆ ರೂಪಿಸಲಾಗಿದೆ ಎನ್ನಲಾಗಿದೆ.

ಪ್ರಜ್ವಲ್‌ ಅರೆಸ್ಟ್‌ ಆದಲ್ಲಿ ಎಸ್‌ಐಟಿ ಕೇಳುವ ಪ್ರಶ್ನೆಗಳಿವು! ರೇವಣ್ಣಗೂ ತಟ್ಟುವ ಬಿಸಿ

ಪ್ರಜ್ವಲ್‌ ಎಸ್ಐಟಿ ಅಧಿಕಾರಿಗಳ ಮುಂದೆ ಹಾಜರಾದಲ್ಲಿ ಇಲ್ಲವೇ ಅವರನ್ನು ಬಂಧಿಸಿ ಕರೆತಂದಲ್ಲಿ ಅವರಿಗೆ ಸರಣಿ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಈಗಾಗಲೇ ಹಲವು ಪ್ರಶ್ನೆಗಳನ್ನು ಎಸ್‌ಐಟಿ ಸಿದ್ಧಪಡಿಸಿಟ್ಟುಕೊಂಡಿದೆ ಎನ್ನಲಾಗಿದೆ. ಪ್ರಕರಣ ಸಂಬಂಧ ಸಣ್ಣ ಸಣ್ಣ ಪ್ರಶ್ನೆಗಳನ್ನೂ ಕೇಳಿ ಪ್ರಜ್ವಲ್‌ ಹೇಳಿಕೆಯನ್ನು ದಾಖಲು ಮಾಡಿಕೊಳ್ಳಲಾಗುತ್ತದೆ. ಪ್ರಜ್ವಲ್‌ ಅವರ ವಯಸ್ಸಿನಿಂದ ಹಿಡಿದು ಹಲವು ಪ್ರಶ್ನೆಗಳನ್ನು ಕೇಳಲಿದ್ದಾರೆ. ಆರೋಪಗಳ ಬಗ್ಗೆ ಏನು ಹೇಳುತ್ತೀರಿ? ನೀವೇ ರೆಕಾರ್ಡ್‌ ಮಾಡಿಕೊಂಡಿದ್ದೀರಿ ಎಂಬ ಆರೋಪ ಇದೆ. ರೆಕಾರ್ಡ್‌ಗೆ ಯಾವ ಸಾಧನವನ್ನು ಬಳಸಿಕೊಂಡಿದ್ದೀರಿ. ಡಿಯೋ ಇಟ್ಕೊಂಡು ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದಿರಾ? ಎಂಬಿತ್ಯಾದಿ ಪ್ರಶ್ನೆಗಳನ್ನು ಕೇಳಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಅದೇ ರೀತಿ ಪ್ರಜ್ವಲ್‌ ರೇವಣ್ಣ ಅವರ ತಂದೆ ಎಚ್.ಡಿ. ರೇವಣ್ಣ ಅವರಿಗೂ ಹಲವು ಪ್ರಶ್ನೆಗಳನ್ನು ಕೇಳಲು ಎಸ್‌ಐಟಿ ರೆಡಿಯಾಗಿದೆ. ನಿಮ್ಮ ಪುತ್ರನ ಮೇಲೆ ಆರೋಪಿವಿರುವುದು ಗಮನಕ್ಕೆ ಬಂದಿತ್ತಾ? ನಿಮ್ಮ ಗಮನಕ್ಕೆ ಬಂದಿದ್ರೆ ಅದರ ಬಗ್ಗೆ ಪ್ರಜ್ವಲ್‌‌ ಜತೆ ಚರ್ಚಿಸಿದ್ದಿರಾ? ಒಂದು ವೇಳೆ ಚರ್ಚೆ ಮಾಡಿದರೆ ನಿಮ್ಮ ಪುತ್ರ ಏನು ಹೇಳಿದ್ದರು? ಎಂಬಿತ್ಯಾದಿ ಪ್ರಶ್ನೆಗಳನ್ನು ಕೇಳಲಾಗುತ್ತದೆ ಎಂದು ಹೇಳಲಾಗಿದೆ.

ಪ್ರಜ್ವಲ್ ರೇವಣ್ಣಗೆ SIT ಕೇಳುವ ಸಂಭಾವ್ಯ ಪ್ರಶ್ನೆಗಳು

1- ಪ್ರಜ್ವಲ್ ಅವರೇ ನಿಮಗೆ ವಯಸ್ಸು ಎಷ್ಟು?
2- ನೀವು ಏನು ಓದಿದ್ದೀರಿ? ಎಲ್ಲಿ ಓದಿದ್ದು?
3- ಎಲೆಕ್ಷನ್ ಮುಗಿದ ತಕ್ಷಣ ತಾವು ಎಲ್ಲಿಗೆ ಹೋದಿರಿ?
4- ನೀವು ಹೆಚ್ಚಾಗಿ ವಾಸವಿರೋದು ಹಾಸನವಾ? ದೆಹಲಿಯಾ? ಅಥವಾ ಬೆಂಗಳೂರಲ್ಲೋ?
5- ನಿಮ್ಮ ಮೇಲೆ ಕೇಳಿ ಬಂದಿರುವ ಆರೋಪಗಳ ಬಗ್ಗೆ ಏನಂತೀರಿ?
6- ಅಸಲಿಗೆ ಅವು ನಿಮ್ಮ ವಿಡಿಯೊಗಳಾ?
7- ವಿಡಿಯೋದಲ್ಲಿರುವ ಧ್ವನಿ ನಿಮ್ಮದಲ್ಲವೇ?
8- ನಿಮ್ಮಿಂದಲೇ ರೆಕಾರ್ಡ್‌ ಎನ್ನಲಾಗುತ್ತಿದೆ, ಹೌದೇ?
9- ರೆಕಾರ್ಡ್ ಮಾಡಲು ಬಳಸಿದ ಸಾಧನ ಯಾವುದು?
10- ನೀವೇ ರೆಕಾರ್ಡ್ ಮಾಡಿದ್ದಂತೆ. ಯಾಕೆ ಮಾಡಿದಿರಿ?
11 – ವಿಡಿಯೋ ಇಟ್ಕೊಂಡು ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದಿರಾ?
12- ನಿಮ್ಮ ಮೋಜಿಗೆ ವಿಡಿಯೊಗಳನ್ನು ಮಾಡಿಕೊಳ್ಳುತ್ತಿದ್ದಿರಾ?
13- ರೆಕಾರ್ಡ್ ಮಾಡುವುದು ತಪ್ಪು ಎಂದು ನಿಮಗೆ ಗೊತ್ತಿಲ್ವೆ?
14- ದೃಶ್ಯಗಳಲ್ಲಿ ಇರುವ ಮಹಿಳೆಯರು ನಿಮಗೆ ಪರಿಚಯವೇ?
15- ಆ ಮಹಿಳೆಯರನ್ನು ನೀವು ಎಲ್ಲಿ ಭೇಟಿ ಮಾಡಿದಿರಿ?
16- ದೈಹಿಕ ಸಂಪರ್ಕ ಬೆಳೆಸಲು ಏನಾದರೂ ಆಮಿಷ ಒಡ್ಡಿದ್ರಾ?
17 – ಅದು ಅತ್ಯಾಚಾರಕ್ಕೆ ಸಮ ಎಂದು ಗೊತ್ತಿದೆಯೇ?
18- ಪ್ರಮೋಷನ್, ಕೆಲಸದ ನೆಪದಲ್ಲಿ ದೈಹಿಕ ಸಂಪರ್ಕ ಮಾಡಿದಿರಾ?
19- ನಿಮಗೇನಾದರೂ ಮಾನಸಿಕ ಸಮಸ್ಯೆ ಇದೆಯಾ?
20- ನೀವು ದೌರ್ಜನ್ಯ ನಡೆಸುತ್ತಿರುವಂತಿದೆ, ಏನಂತೀರಿ?
21- ನೋಟಿಸ್ ಕೊಟ್ಟರೂ 7 ದಿನ ಟೈಮ್ ಯಾಕೆ ಕೇಳಿದಿರಿ?
22- ನೀವು ದೃಶ್ಯ ಶೂಟ್ ಮಾಡಲು ಬಳಸಿದ ಸಾಧನ ಎಲ್ಲಿದೆ?
23- ಬೇರೆ ಯಾರ ಬಳಿಯಾದರೂ ವಿಡಿಯೊ ಶೇರ್ ಮಾಡಿದಿರಾ?
24- ಖಾಸಗಿ ದೃಶ್ಯಗಳು ಹೇಗೆ ಹೊರಗೆ ಬಂದವು ಹೇಳಬಹುದಾ?
25- ನಿಮಗೆ ಕಾರ್ತಿಕ್ ಎಂಬ ವ್ಯಕ್ತಿ ಗೊತ್ತಾ?
26 – ನಿಮಗೂ ಕಾರ್ತಿಕ್‌ಗೂ ಸ್ನೇಹವಿತ್ತಾ?
27 – ನಿಮ್ಮ ವಿರುದ್ಧ ಸುದ್ದಿ ಪ್ರಸಾರವಾಗದಂತೆ ತಡೆ ತಂದಿದ್ದಿರಿ ಯಾಕೆ?
28 – ನಿಮ್ಮ ಮೇಲಿನ ಪಿತೂರಿ ಅಂತಾದರೆ ನೀವ್ಯಾಕೆ ದೂರು ನೀಡಲಿಲ್ಲ?
29 – ನಿಮ್ಮ ವಿರುದ್ಧ ಆರೋಪ ಬಂದ ಕೂಡಲೇ ಯಾಕೆ ದೇಶ ಬಿಟ್ಟು ಹೋದಿರಿ?
30 – ಮನೆಯಲ್ಲಿ ಯಾರ ಬಳಿಯಾದರೂ ಈ ವಿಷಯಗಳನ್ನು ಹೇಳಿಕೊಳ್ಳುತ್ತಿದ್ದಿರಾ?
31 – ಕೆಲಸದಾಕೆಯ ಆರೋಪದ ಬಗ್ಗೆ ಏನಂತೀರಿ?
32 – ಪ್ರಜ್ವಲ್ ನೀವು ತನಿಖೆಗೆ ಸಹಕರಿಸಬೇಕು
33 – ತನಿಖೆ ಪೂರ್ಣವಾಗುವವರೆಗೂ ದೇಶ ಬಿಟ್ಟು ಹೋಗಬೇಡಿ

ಎಂಬಿತ್ಯಾದಿ ಪ್ರಶ್ನೆಗಳನ್ನು ಎಸ್‌ಐಟಿ ಕೇಳಲಿದೆ. ಒಂದು ವೇಳೆ ಇವುಗಳಿಗೆ ಆರೋಪಿ ಪ್ರಜ್ವಲ್‌ ಸ್ಪಂದಿಸದೆ ಸಮರ್ಪಕ ಉತ್ತರ ನೀಡಿದ್ದರೆ ಮುಂದಿನ ಕ್ರಮದ ಬಗ್ಗೆ ಎಸ್‌ಐಟಿ ಚಿಂತನೆ ನಡೆಸಲಿದೆ ಎನ್ನಲಾಗಿದೆ.

ಇದನ್ನೂ ಓದಿ: Prajwal Revanna Case: SIT ಮುಂದೆ ಹಾಜರಾಗಲು ವಿನಾಯಿತಿ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕಾರ? ತನಿಖೆಗೆ ಆತುರ ಏಕೆ?

ಎಚ್‌‌‌‌.ಡಿ.ರೇವಣ್ಣಗೆ SIT ಕೇಳುವ ಸಂಭಾವ್ಯ ಪ್ರಶ್ನೆಗಳು!

1) ನಿಮ್ಮ ಹೆಸರೇನು..? ಏನು ಕೆಲಸ ಮಾಡಿಕೊಂಡಿದ್ದೀರಿ..?
2) ಯಾವ ವಿಳಾಸದಲ್ಲಿ ವಾಸವಾಗಿದ್ದೀರಾ? ಎಷ್ಟು ವರ್ಷ..?
3) ನಿಮ್ಮ ಮೇಲೆ ಸಂತ್ರಸ್ತೆ ನೀಡಿದ ದೂರಿನ ಬಗ್ಗೆ ಮಾಹಿತಿ ಇದೆಯಾ?
4) ದೂರು ನೀಡಿರುವ ಮಹಿಳೆ ಪರಿಚಯಸ್ಥರಾ? ಸಂಬಂಧಿನಾ?
5) ಎಷ್ಟು ವರ್ಷಗಳಿಂದ ನಿಮ್ಮ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದಾರೆ..?
6) ದೂರಿನಲ್ಲಿ ಉಲ್ಲೇಖಿಸಿದಂತೆ ಲೈಂಗಿಕ ದೌರ್ಜನ್ಯ ಎಸಗಿದ್ದೀರಾ?
7) ನಿಮ್ಮ ಪುತ್ರನ ಮೇಲೂ ಆರೋಪಿವಿದೆ ಗಮನಕ್ಕೆ ಬಂದಿತ್ತಾ..?
8) ನಿಮ್ಮ ಗಮನಕ್ಕೆ ಬಂದಿದ್ದರೆ ಅದರ ಬಗ್ಗೆ ಪ್ರಜ್ವಲ್‌‌ ಜತೆ ಚರ್ಚಿಸಿದ್ದಿರಾ?
9) ಒಂದು ವೇಳೆ ಚರ್ಚೆ ಮಾಡಿದ್ದರೆ ನಿಮ್ಮ ಪುತ್ರ ಏನು ಹೇಳಿದ್ದರು?
10) ನಿಮ್ಮ ಪುತ್ರನ ಕಾರು ಚಾಲಕ ಕಾರ್ತಿಕ್ ಎಷ್ಟು ವರ್ಷಗಳಿಂದ ಕೆಲಸ ಮಾಡುತ್ತಿದ್ದ ?
11) ನಿಮ್ಮ ಡ್ರೈವರ್ ಕಾರ್ತಿಕ್ ಜತೆ ಏನಾದರೂ ಗಲಾಟೆ ಆಗಿತ್ತಾ?
12) ವಿಡಿಯೊ ನಾನೇ ಕೊಟ್ಟಿದ್ದು ಎಂದು ಕಾರ್ತಿಕ್ ಹೇಳಿಕೆ ನೀಡಿದ್ದಾರಲ್ವಾ, ಇದು ಸತ್ಯನಾ?
13) ಪೆನ್‌ಡ್ರೈವ್‌ನಲ್ಲಿರೋ ವಿಡಿಯೊ ಪ್ರಜ್ವಲ್ ರೇವಣ್ಣನವರೆದ್ದೇನಾ..?
14) ಇಲ್ಲ ಅಂದಾದರೆ ಕೋರ್ಟ್‌ನಲ್ಲಿ ಸ್ಟೇ ತಂದಿದ್ದು ಯಾಕೆ?
15) ಮನೆ ಕೆಲಸದವಳು ಮಾಡುವ ಆರೋಪಕ್ಕೆ ನಿಮ್ಮ ಪ್ರತಿಕ್ರಿಯೆ ಏನು?

Continue Reading
Advertisement
T20 World Cup
ಕ್ರೀಡೆ3 mins ago

T20 World Cup: ರೋಹಿತ್​, ಅಗರ್ಕರ್​ ಜಂಟಿ ಸುದ್ದಿಗೋಷ್ಠಿಗೆ ಕ್ಷಣಗಣನೆ

Deepak Chahar
ಪ್ರಮುಖ ಸುದ್ದಿ4 mins ago

Deepak Chahar : ಸಹೋದರನನ್ನು ಗೇಲಿ ಮಾಡಿದವರಿಗೆ ತಿರುಗೇಟು ಕೊಟ್ಟ ದೀಪಕ್ ಚಾಹರ್​ ಸಹೋದರಿ!

Viral video
ವೈರಲ್ ನ್ಯೂಸ್7 mins ago

Viral Video:ಶಾಕಿಂಗ್‌ ವಿಡಿಯೋ! ಮಗನನ್ನು ಟ್ರೆಡ್‌ಮಿಲ್‌ನಲ್ಲಿ ಓಡಿಸಿ ಪ್ರಾಣವನ್ನೇ ತೆಗೆದ ಪಾಪಿ ತಂದೆ

assault case in Bengaluru
ಬೆಂಗಳೂರು15 mins ago

Assault Case : ವಿವಾಹಿತೆ ಹಿಂದೆ ಬಿದ್ದ ಪಾಗಲ್‌ ಪ್ರೇಮಿ; ಮದುವೆ ನಿರಾಕರಿಸಿದ್ದಕ್ಕೆ ಮನೆಗೆ ಇಟ್ಟ ಬೆಂಕಿ

Vote Jihad
ದೇಶ28 mins ago

Vote Jihad: ವೋಟ್‌ ಜಿಹಾದ್‌ಗೆ ಕರೆ ನೀಡಿದ್ದು ಇಂಡಿಯಾ ಒಕ್ಕೂಟದ ಮನಸ್ಥಿತಿಗೆ ಕನ್ನಡಿ ಎಂದ ಮೋದಿ

Prajwal Revanna Case PM Modi defends MP accused of rape says Rahul Gandhi
Lok Sabha Election 202433 mins ago

Prajwal Revanna Case: ಮಹಾನ್‌ ರೇಪಿಸ್ಟ್‌ಗೆ ಮೋದಿಯಿಂದ ರಕ್ಷಣೆ; ಪ್ರಜ್ವಲ್‌ ಪೆನ್‌ಡ್ರೈವ್‌ ಕೇಸ್‌ ಬಗ್ಗೆ ರಾಹುಲ್‌ ಗಾಂಧಿ ಗುಡುಗು

Rinku Singh
ಕ್ರೀಡೆ41 mins ago

Rinku Singh: ಟಿ20 ವಿಶ್ವಕಪ್​ಗೆ ರಿಂಕು ಆಯ್ಕೆಯಾಗಬಹುದೆಂದು ಪಟಾಕಿ, ಸಿಹಿ ತಂದಿಟ್ಟಿದ್ದ ತಂದೆಗೆ ನಿರಾಸೆ

Crime News
ಕ್ರೈಂ42 mins ago

Crime News : 6 ವರ್ಷದ ಬಾಲಕಿಯ ಅಪಹರಿಸಲು ಯತ್ನಿಸಿದ ದುಷ್ಟ; ಹಿಟ್‌ ಆ್ಯಂಡ್‌ ರನ್‌ ಮಾಡಿ ಚಾಲಕರಿಬ್ಬರು ಎಸ್ಕೇಪ್‌

Samsung
ತಂತ್ರಜ್ಞಾನ1 hour ago

ಸ್ಯಾಮ್‌ಸಂಗ್‌ನ ‘ಫ್ಯಾಬ್ ಗ್ರಾಬ್ ಫೆಸ್ಟ್’: ಸ್ಮಾರ್ಟ್‌ಫೋನ್‌, ಟಿವಿ, ಲ್ಯಾಪ್‌ಟಾಪ್‌, ಡಿಜಿಟಲ್ ಉಪಕರಣಗಳ ಮೇಲೆ ಅದ್ಭುತ ಆಫರ್

students self harming
ಕ್ರೈಂ2 hours ago

Students Self harming: 20 ವರ್ಷಗಳಲ್ಲಿ ಐಐಟಿಯ 115 ವಿದ್ಯಾರ್ಥಿಗಳು ಆತ್ಮಹತ್ಯೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ11 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ2 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest4 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

ಟ್ರೆಂಡಿಂಗ್‌