MLC Election: ವಿಧಾನ ಪರಿಷತ್‌ಗೆ ಕಾಂಗ್ರೆಸ್‌ನ ಮೂವರು ಅವಿರೋಧ ಆಯ್ಕೆ; ಶೆಟ್ಟರ್‌ ಕಮ್‌ ಬ್ಯಾಕ್‌ Vistara News

ಕರ್ನಾಟಕ

MLC Election: ವಿಧಾನ ಪರಿಷತ್‌ಗೆ ಕಾಂಗ್ರೆಸ್‌ನ ಮೂವರು ಅವಿರೋಧ ಆಯ್ಕೆ; ಶೆಟ್ಟರ್‌ ಕಮ್‌ ಬ್ಯಾಕ್‌

MLC Election: ಕಾಂಗ್ರೆಸ್‌ನ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ಹಾಗೂ ತಿಪ್ಪಣ್ಣಪ್ಪ ಕಮಕನೂರು ಅವರು ಎಂಎಲ್‌ಸಿಯಾಗಿ ಅವಿರೋಧ ಆಯ್ಕೆಯಾಗಿದ್ದಾರೆ.

VISTARANEWS.COM


on

New MLC Jagadish Shettar NS Boseraju and Tippanna Kamakanoor
ಜಗದೀಶ್ ಶೆಟ್ಟರ್, ತಿಪ್ಪಣ್ಣಪ್ಪ ಕಮಕನೂರು ಹಾಗೂ ಎನ್.ಎಸ್. ಬೋಸರಾಜು
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ (MLC Election) ಮೂವರು ಕಾಂಗ್ರೆಸ್ ಅಭ್ಯರ್ಥಿಗಳು ಅವಿರೋಧ ಅಯ್ಕೆಯಾಗಿದ್ದಾರೆ. ಪಕ್ಷೇತರ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡಿದ್ದರಿಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ತಿಪ್ಪಣ್ಣಪ್ಪ ಕಮಕನೂರು ಹಾಗೂ ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ಅವರ ಅವಿರೋಧ ಆಯ್ಕೆ ಘೋಷಿಸಲಾಗಿದೆ.

ನಾಮಪತ್ರ ವಾಪಸ್ ಪಡೆಯಲು ಶುಕ್ರವಾರ ಕೊನೆಯ ದಿನವಾಗಿತ್ತು. ಪಕ್ಷೇತರ ಅಭ್ಯರ್ಥಿ ಡಾ.ಕೆ ಪದ್ಮರಾಜನ್‌ ಅವರ ನಾಮಪತ್ರ ಸೂಚಕರಿಲ್ಲದ ಕಾರಣ ತಿರಸ್ಕೃತಗೊಂಡಿದೆ. ಹೀಗಾಗಿ ಉಳಿದ ಮೂವರು ಕಾಂಗ್ರೆಸ್‌ ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ. ಈ ಬಗ್ಗೆ ವಿಧಾನಸಭಾ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಮಾಹಿತಿ ನೀಡಿದ್ದಾರೆ.

ಶೆಟ್ಟರ್‌ 5 ವರ್ಷ, ಬೋಸರಾಜು 1 ವರ್ಷ, ಕಮಕನೂರು 3 ವರ್ಷ ಎಂಎಲ್‌ಸಿ

ರಾಜ್ಯದಲ್ಲಿ ಖಾಲಿಯಾಗಿರುವ ವಿಧಾನ ಪರಿಷತ್‌ನ (MLC Election) ಮೂರು ಸ್ಥಾನಗಳಿಗೆ ಜೂನ್‌ 30ರಂದು ಚುನಾವಣೆ ನಡೆಯಬೇಕಿತ್ತು. ಆದರೆ, ಕಾಂಗ್ರೆಸ್‌ ಮೂವರು ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ. ಇನ್ನು ಇವರ ಅಧಿಕಾರಾವಧಿ ನೋಡುವುದಾದರೆ, ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ 5 ವರ್ಷ, ಹಾಲಿ ಸಚಿವ ಎನ್.ಎನ್‌. ಬೋಸ್‌ ರಾಜು 1 ವರ್ಷ ಮತ್ತು ತಿಪ್ಪಣ್ಣ ಕಮಕನೂರು 3 ವರ್ಷ ಎಂಎಲ್‌ಸಿಯಾಗಿ ಇರಲಿದ್ದಾರೆ.

ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್‌ ನಡೆಯುವ ಚುನಾವಣೆ ಇದಾಗಿದೆ. 135 ಶಾಸಕರನ್ನು ಹೊಂದಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಎಲ್ಲ ಮೂರು ಸ್ಥಾನಗಳನ್ನು ಗೆದ್ದುಕೊಂಡಿದೆ.

ಇದನ್ನೂ ಓದಿ | ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ? ಸುಳಿವು ಬಿಚ್ಚಿಟ್ಟ ಸಿ.ಪಿ.ಯೋಗೇಶ್ವರ್

ಶೆಟ್ಟರ್‌ಗೆ ದೊಡ್ಡ ಗೌರವ

ಕಳೆದ ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿಯಲ್ಲಿ ಟಿಕೆಟ್‌ ನಿರಾಕರಿಸಲ್ಪಟ್ಟು ಕಾಂಗ್ರೆಸ್‌ ಸೇರಿದ್ದ ಜಗದೀಶ್‌ ಶೆಟ್ಟರ್‌ ಅವರು ಚುನಾವಣೆಯಲ್ಲಿ ಸೋಲು ಕಂಡರೂ ಅವರಿಗೆ ಪಕ್ಷ ದೊಡ್ಡ ಗೌರವವನ್ನೇ ನೀಡಿದೆ. ಬಾಬುರಾವ್‌ ಚಿಂಚನಸೂರು ಅವರಿಂದ ತೆರವಾಗಿರುವ ಸ್ಥಾನಕ್ಕೆ ಜಗದೀಶ್‌ ಶೆಟ್ಟರ್‌ ಅವರು ಆಯ್ಕೆಯಾಗಿದ್ದು, ಐದು ವರ್ಷ ಸದಸ್ಯರಾಗಿರಲಿದ್ದಾರೆ.

ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ಆಗಿದ್ದರಿಂದ ಈ ಬಾರಿ ಕಾಂಗ್ರೆಸ್ ಗೆ ಲಾಭವಾಗಿತ್ತು. 39 ಲಿಂಗಾಯತ ಸಮುದಾಯದ ಶಾಸಕರು ಗೆಲ್ಲುವುದರಲ್ಲಿ ಶೆಟ್ಟರ್‌ ಅವರ ವರ್ಚಸ್ಸಿನ ಪ್ರಭಾವವೂ ಇದೆ ಎಂದು ಕಾಂಗ್ರೆಸ್‌ ಕಂಡುಕೊಂಡಿದೆ. ಇದರ ಲಾಭವನ್ನು ಲೋಕಸಭಾ ಚುನಾವಣೆಯಲ್ಲಿಯೂ ಪಡೆಯಲು ಶೆಟ್ಟರ್‌ಗೆ ಮಣೆ ಹಾಕಲಾಗಿದೆ ಎಂದು ಹೇಳಲಾಗಿದೆ. ಮುಂದಿನ ಲೋಕಸಭಾ ಚುನಾವಣೆ ದೃಷ್ಟಿಯಿಂದ ಶೆಟ್ಟರ್ ಗೆ ಐದು ವರ್ಷಗಳ ಅವಧಿ ಇರೋ ಎಂಎಲ್ಸಿ ಸ್ಥಾನವನ್ನು ಕಾಂಗ್ರೆಸ್‌ ಕೊಟ್ಟಿದೆ ಎನ್ನಲಾಗಿದೆ.

ಇದನ್ನೂ ಓದಿ | Congress Guarantee: ರಾಜ್ಯ ಬಿಜೆಪಿ ಅಧ್ಯಕ್ಷ ಮನೆಗೆ ಮಾರಿ ಪರರಿಗೆ ಉಪಕಾರಿ: ಸಚಿವ ದಿನೇಶ್‌ ಗುಂಡೂರಾವ್‌ ವಾಗ್ದಾಳಿ

ಎನ್.ಎಸ್‌. ಬೋಸರಾಜು ಅವರಿಗೆ 1 ವರ್ಷ ಅವಕಾಶವಿರುವ ಪರಿಷತ್‌ ಸದಸ್ಯತ್ವವನ್ನು ನೀಡಲಾಗಿದೆ. ಬೋಸರಾಜು ಅವರನ್ನು ಈಗಾಗಲೇ ಸಣ್ಣ ನೀರಾವರಿ ಸಚಿವರನ್ನಾಗಿ ನೇಮಕ ಮಾಡಲಾಗಿದೆ. ಇವರು ಆರ್‌.ಶಂಕರ್‌ ಅವರಿಂದ ತೆರವಾಗಿರುವ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ.

ಇತ್ತ ತಿಪ್ಪಣ್ಣ ಕಮಕನೂರು ಅವರಿಗೆ ಲಕ್ಷ್ಮಣ ಸವದಿ ಅವರಿಂದ ತೆರವಾದ ಮೂರು ವರ್ಷಗಳ ಅವಧಿಯ ಮೇಲ್ಮನೆ ಸ್ಥಾನವನ್ನು ನೀಡಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಉದ್ಯೋಗ

Government Job: 2.47 ಲಕ್ಷ ಹುದ್ದೆ ಖಾಲಿ: ಸದನದಲ್ಲಿ ಸದ್ದು ಮಾಡಿದ ವಿಸ್ತಾರ EXCLUSIVE ಸ್ಟೋರಿ

Government Job: ಸರ್ಕಾರಿ ಇಲಾಖೆಯಲ್ಲಿ 7 ಲಕ್ಷ ಜನ ಮಾಡಬೇಕಾದ ಕೆಲಸವನ್ನು ಈಗ 4 ಲಕ್ಷ ಜನರು ಮಾಡುತ್ತಲಿದ್ದಾರೆ. ಇದರ ಬಗ್ಗೆ ವಿಸ್ತಾರ ನ್ಯೂಸ್‌ನಲ್ಲಿ (Vistara News) ಪ್ರಸಾರ ಮಾಡಲಾಗಿದೆ. ಸರ್ಕಾರ ಹುದ್ದೆಗಳ ಬಗ್ಗೆ ಕೊಟ್ಟ ಉತ್ತರ ಅಸಮರ್ಪಕವಾಗಿದೆ. ಇದಕ್ಕೆ ಸಿಎಂ ಸಿದ್ದರಾಮಯ್ಯ ಅವರೇ ಉತ್ತರ ಕೊಡಬೇಕು ಎಂದು ಪಟ್ಟು ಹಿಡಿದಿದ್ದು, ಗದ್ದಲಕ್ಕೆ ಕಾರಣವಾಗಿದೆ.

VISTARANEWS.COM


on

Government Job Vistara Exclusive and CM Siddaramaiah
Koo

ಬೆಳಗಾವಿ: ರಾಜ್ಯದಲ್ಲಿ ಎರಡೂವರೆ ಲಕ್ಷ ಸರ್ಕಾರಿ ಹುದ್ದೆಗಳು (Government Job) ಖಾಲಿ ಇರುವ ಬಗ್ಗೆ ವಿಸ್ತಾರ ನ್ಯೂಸ್‌ ಬಿತ್ತರಿಸಿದ ಎಕ್ಸ್‌ಕ್ಲೂಸಿವ್‌ ವರದಿಯು ಬೆಳಗಾವಿ ಚಳಿಗಾಳದ ಅಧಿವೇಶನದಲ್ಲಿ (Belagavi Winter Session) ಚರ್ಚೆಗೆ ಬಂದಿದ್ದು, ಆಡಳಿತ ಮತ್ತು ವಿಪಕ್ಷಗಳ ವಾಗ್ವಾದಕ್ಕೆ ಕಾರಣವಾಗಿದೆ. ಪರಿಷತ್‌ ಕಲಾಪದಲ್ಲಿ ಈ ಬಗ್ಗೆ ಪ್ರಸ್ತಾಪಿಸಿದ ಬಿಜೆಪಿ ಸದಸ್ಯೆ ತೇಜಸ್ವಿನಿ ರಮೇಶ್‌, ಸರ್ಕಾರಿ ಇಲಾಖೆಯಲ್ಲಿ (Government Department) 7 ಲಕ್ಷ ಜನ ಮಾಡಬೇಕಾದ ಕೆಲಸವನ್ನು ಈಗ 4 ಲಕ್ಷ ಜನರು ಮಾಡುತ್ತಲಿದ್ದಾರೆ. ಇದರ ಬಗ್ಗೆ ವಿಸ್ತಾರ ನ್ಯೂಸ್‌ನಲ್ಲಿ (Vistara News) ಪ್ರಸಾರ ಮಾಡಲಾಗಿದೆ. ಸರ್ಕಾರ ಹುದ್ದೆಗಳ ಬಗ್ಗೆ ಕೊಟ್ಟ ಉತ್ತರ ಅಸಮರ್ಪಕವಾಗಿದೆ. ಇದಕ್ಕೆ ಸಿಎಂ ಸಿದ್ದರಾಮಯ್ಯ (CM Siddaramaiah) ಅವರೇ ಉತ್ತರ ಕೊಡಬೇಕು ಎಂದು ಪಟ್ಟು ಹಿಡಿದಿದ್ದು, ಗದ್ದಲಕ್ಕೆ ಕಾರಣವಾಗಿದೆ.

ಖಾಲಿ ಹುದ್ದೆ ಬಗ್ಗೆ ಸರ್ಕಾರ ಕೊಟ್ಟ ಉತ್ತರ ಅಸಮರ್ಪಕವಾಗಿದೆ ಎಂದು ತೇಜಸ್ವಿನಿ ರಮೇಶ್‌ ಹೇಳಿಕೆ ನೀಡುತ್ತಿದ್ದಂತೆ ಮಧ್ಯ ಪ್ರವೇಶ ಮಾಡಿದ ಸಲೀಂ ಅಹಮದ್‌, ಸರ್ಕಾರ ಈಗಾಗಲೇ ಉತ್ತರ ಕೊಟ್ಟಿದೆ ಎಂದು ಹೇಳಿದರು. ಆಗ ಕಾಂಗ್ರೆಸ್ ಸದಸ್ಯ ಯು.ಬಿ. ವೆಂಕಟೇಶ್ ಮಾತನಾಡಿ, ಈ ಹಿಂದೆ ನಿಮ್ಮ ಸರ್ಕಾರದ ಇತ್ತಲ್ಲವೇ? ಆಗ ಏನು ಕತ್ತೆ ಕಾಯ್ತಾ ಇದ್ರಾ? ಕೇಂದ್ರ ಸರ್ಕಾರದಲ್ಲಿ ಒಂದು ಕೋಟಿ ಹುದ್ದೆ ಖಾಲಿ ಇದೆ ಎಂದು ಹೇಳಿದರು. ಇದು ಬಿಜೆಪಿ ಸದಸ್ಯರನ್ನು ಮತ್ತಷ್ಟು ಕೆರಳಿಸಿತು.

ಸಿಎಂ ಕಲಾಪಕ್ಕೆ ಬಂದು ಉತ್ತರಿಸಲಿ

ಈ ಹೇಳಿಕೆಯಿಂದ ಆಕ್ರೋಶಗೊಂಡ ಪ್ರತಿಪಕ್ಷ ಬಿಜೆಪಿ ಸದಸ್ಯರು, ಕತ್ತೆ ಅನ್ನೋ ಪದವನ್ನು ಕಡಿತದಿಂದ ತೆಗೆಯಲು ಒತ್ತಾಯ ಮಾಡಿದರು. ಬಳಿಕ ಮಾತನಾಡಿದ ತೇಜಸ್ವಿನಿ ರಮೇಶ್‌, ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ ಎಂದು ನಮಗೆ ಆರೋಪಿಸುತ್ತಾರೆ. ಆದರೆ, ನಾವು ಬ್ಲಾಕ್‌ಮೇಲ್ ಮಾಡುತ್ತಿಲ್ಲ. ಜ್ವಲಂತ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿದ್ದೇವೆ. ಖಾಲಿ ಹುದ್ದೆ ಬಗ್ಗೆ ವಿಸ್ತಾರ ನ್ಯೂಸ್‌ನಲ್ಲಿ ಪ್ರಸಾರ ಆಗುತ್ತಾ ಇದೆ. ಯಾವ ಯಾವ ಇಲಾಖೆಗಳಲ್ಲಿ ಎಷ್ಟೆಷ್ಟು ಸರ್ಕಾರಿ ಹುದ್ದೆಗಳು ಖಾಲಿ ಇವೆ ಅಂತ ತೋರಿಸುತ್ತಿದ್ದಾರೆ. ಮುಖ್ಯಮಂತ್ರಿಗಳು ಕಲಾಪಕ್ಕೆ ಆಗಮಿಸಿ ಉತ್ತರಿಸಬೇಕು ಎಂದು ಆಗ್ರಹಿಸಿದರು.

ಸಿಎಂ ಉತ್ತರಕ್ಕಾಗಿ ಪಟ್ಟು

ಆಗ ಮಾತನಾಡಿದ ಯು.ಬಿ. ವೆಂಕಟೇಶ್, ಈಗಾಗಲೇ ಮುಖ್ಯಮಂತ್ರಿಗಳಿಂದಲೇ ಉತ್ತರ ಕೊಡಿಸಿಯಾಗಿದೆ. ಇವರು ಕಳೆದ ಐದು ವರ್ಷದಿಂದ ಏನ್ ಕತ್ತೆ ಕಾಯುತ್ತಿದ್ದರಾ? ಯಾಕೆ ಏಳನೇ ವೇತನ ಆಯೋಗ ಜಾರಿ ಮಾಡಲಿಲ್ಲ? ಎಂದು ಪ್ರಶ್ನೆ ಮಾಡಿದರು. ಇದರಿಂದ ಅಸಮಾಧಾನಗೊಂಡ ತೇಜಸ್ವಿನಿ ರಮೇಶ್, ಕತ್ತೆ ಕಾಯುವ ಕೆಲಸ ಸದನದಲ್ಲಿ ಮಾಡಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನಕ್ಕೆ ಬಂದು ಉತ್ತರ ಕೊಡಬೇಕು. ಅಲ್ಲಿಯವರೆಗೂ ಧರಣಿ ವಾಪಸ್ ಪಡೆಯಲ್ಲ ಎಂದು ಪಟ್ಟುಹಿಡಿದು ಕುಳಿತರು.

ಕತ್ತೆಯ ಗುಣವನ್ನು ಬೆಳೆಸಿಕೊಳ್ಳಬೇಕು

ಆಗ ಬೋಜೇಗೌಡ ಮಾತನಾಡಿ, ಕತ್ತೆಗಿರುವ ಗೌರವವನ್ನು ಸಹ ಕಾಂಗ್ರೆಸ್‌ನವರು ಹಾಳು ಮಾಡಿದ್ದಾರೆ. ಕತ್ತೆಯ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಇದೇ ಸಂದರ್ಭದಲ್ಲಿ ಹೇಳಿದರು. ಆಗ ಸಚಿವ ಕೃಷ್ಣ ಬೈರೆಗೌಡ ಮಾತನಾಡಿ, ಸುಗಮ ಕಲಾಪಕ್ಕೆ ಅನುವು ಮಾಡಿಕೊಡಿ. ಸಿಎಂ ಬೆಂಗಳೂರಿನ ಕಾರ್ಯಕ್ರಮದಲ್ಲಿದ್ದಾರೆ. ಅವರು ಬಂದ ಕೂಡಲೇ ಗಮನಕ್ಕೆ ತರುತ್ತೇವೆ ಎಂದು ಹೇಳಿದರು.

ಸಿಎಂರಿಂದ ಉತ್ತರ ಕೊಡಿಸುವ ಭರವಸೆ

ಇಷ್ಟಾದರೂ ಗದ್ದಲ ನಿಲ್ಲದೇ ಇದ್ದಾಗ ಸಭಾಪತಿ ಬಸವರಾಜ ಹೊರಟ್ಟಿ ಮಧ್ಯಪ್ರವೇಶಿಸಿ, ಸದನದ ಕಲಾಪವನ್ನು ನಡೆಸಲು ಬಿಡಿ. ಇದೇ ರೀತಿಯಾದರೆ ಸದನವನ್ನು ಮುಂದೂಡುತ್ತೇನೆ. ಏನ್ ಹುಡುಗಾಟಿಕೆ ಮಾಡಿಕೊಂಡಿದ್ದೀರಿ? ಎಂದು ಗರಂ ಆದರು. ಸಿಎಂ ಸಿದ್ದರಾಮಯ್ಯ ಅವರಿಂದ ಉತ್ತರ ಕೊಡಿಸುವ ಭರವಸೆ ಸಿಕ್ಕ ಮೇಲೆ ಪ್ರತಿಪಕ್ಷಗಳು ಧರಣಿಯನ್ನು ವಾಪಸ್‌ ಪಡೆದವು.

‘ಖಾಲಿ’ ಸರ್ಕಾರದಲ್ಲಿ ಉದ್ಯೋಗಕ್ಕಿಲ್ಲ ಗ್ಯಾರಂಟಿ; ಭರ್ತಿಯಾಗದ 2.47 ಲಕ್ಷ ಹುದ್ದೆ!

VISTARA-EXCLUSIVE

ವಿಸ್ತಾರ ನ್ಯೂಸ್‌ನಲ್ಲಿ ಮೆಗಾ EXCLUSIVE ಸ್ಟೋರಿ ಇದಾಗಿದ್ದು, ರಾಜ್ಯ ಸರ್ಕಾರಿ ಇಲಾಖೆಯಲ್ಲಿ ಲಕ್ಷ, ಲಕ್ಷ ಖಾಲಿ ಹುದ್ದೆ (Government Job) ಇರುವುದು ಗೊತ್ತಾಗಿದೆ. ಗ್ಯಾರಂಟಿ ಯೋಜನೆಯನ್ನು ಕೊಟ್ಟಿರುವ ಕಾಂಗ್ರೆಸ್‌ ಸರ್ಕಾರದಲ್ಲಿ (Congress Government) ಉದ್ಯೋಗ ಸೃಷ್ಟಿಗೆ ‘ಗ್ಯಾರಂಟಿ’ಯೇ ಇಲ್ಲ ಎನ್ನುವಂತೆ ಆಗಿದೆ. ಸರ್ಕಾರ ಬಂದು 6 ತಿಂಗಳು ಕಳೆದರೂ ಉದ್ಯೋಗ ಭರ್ತಿಗೆ ಹೊಸ ನೋಟಿಫಿಕೇಷನ್ ಮಾಡಲಾಗಿಲ್ಲ. ಖಾಲಿ ಹುದ್ದೆ ಭರ್ತಿ ಹೇಳಿಕೆಯು ಕೇವಲ ಬಜೆಟ್‌ಗೆ ಸೀಮಿತವಾಗಿದೆ. ಯಾವ್ಯಾವ ಸರ್ಕಾರಿ ಇಲಾಖೆಯಲ್ಲಿ ಎಷ್ಟೆಷ್ಟು ಹುದ್ದೆಗಳು ಖಾಲಿ ಇವೆ? ಎಂಬ ಬಗ್ಗೆ ಇಲ್ಲಿ ಸಂಪೂರ್ಣ ಮಾಹಿತಿ ನೀಡಲಾಗಿದೆ.

ಶಿಕ್ಷಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಒಳಾಡಳಿತ ಇಲಾಖೆ, ಆರೋಗ್ಯ – ವೈದ್ಯಕೀಯ ಇಲಾಖೆ, ಕಂದಾಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರ್ಥಿಕ ಇಲಾಖೆ, ಕೃಷಿ ಇಲಾಖೆ, ಪಶು ಸಂಗೋಪನಾ ಇಲಾಖೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಲೋಕೋಪಯೋಗಿ ಇಲಾಖೆ ಹಾಗೂ ನೀರಾವರಿ ಇಲಾಖೆಗಳಲ್ಲಿ ಒಟ್ಟು 2,47,558 ಹುದ್ದೆಗಳು ಖಾಲಿ ಇವೆ.

ಇಲ್ಲಿ ದಾಖಲೆಗಳ ಸಮೇತ ಖಾಲಿ ಹುದ್ದೆಗಳ ವಿವರ; ಇಲ್ಲಿದೆ ವಿಡಿಯೊ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ

  • ಮಂಜೂರಾದ ಹುದ್ದೆಗಳು – 2,82,862
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 2,16,803
  • ಖಾಲಿ ಹುದ್ದೆಗಳು- 66,059

ಒಳಾಡಳಿತ ಇಲಾಖೆ

  • ಮಂಜೂರಾದ ಹುದ್ದೆಗಳು – 1,26,913
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು -1,03,356
  • ಖಾಲಿ ಹುದ್ದೆಗಳು – 23,557

ಉನ್ನತ ಶಿಕ್ಷಣ ಇಲಾಖೆ

  • ಮಂಜೂರಾದ ಹುದ್ದೆಗಳು – 24,785
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು -12,111
  • ಖಾಲಿ ಹುದ್ದೆಗಳು- 12,674

ಆರೋಗ್ಯ ಮತ್ತು ವೈದ್ಯಕೀಯ

  • ಮಂಜೂರಾದ ಹುದ್ದೆಗಳು – 74,857
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು -40,213
  • ಖಾಲಿ ಹುದ್ದೆಗಳು- 34,644

ಕಂದಾಯ ಇಲಾಖೆ

  • ಮಂಜೂರಾದ ಹುದ್ದೆಗಳು – 32,309
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು -21,688
  • ಖಾಲಿ ಹುದ್ದೆಗಳು – 10,621

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ

  • ಮಂಜೂರಾದ ಹುದ್ದೆಗಳು – 6,940
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು -3,710
  • ಖಾಲಿ ಹುದ್ದೆಗಳು – 3,230

ಆರ್ಥಿಕ ಇಲಾಖೆ

  • ಮಂಜೂರಾದ ಹುದ್ದೆಗಳು – 18,892
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 10,113
  • ಖಾಲಿ ಹುದ್ದೆಗಳು – 8,779

ಕೃಷಿ ಇಲಾಖೆ

  • ಮಂಜೂರಾದ ಹುದ್ದೆಗಳು – 10,324
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 4,008
  • ಖಾಲಿ ಹುದ್ದೆಗಳು – 6,316

ಪಶುಸಂಗೋಪನೆ ಇಲಾಖೆ

  • ಮಂಜೂರಾದ ಹುದ್ದೆಗಳು – 19,610
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 8,581
  • ಖಾಲಿ ಹುದ್ದೆಗಳು – 11,029

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ

  • ಮಂಜೂರಾದ ಹುದ್ದೆಗಳು – 10,986
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 5,248
  • ಖಾಲಿ ಹುದ್ದೆಗಳು – 5,738

ಗ್ರಾಮೀಣಾಭಿವೃದ್ಧಿ ಇಲಾಖೆ

  • ಮಂಜೂರಾದ ಹುದ್ದೆಗಳು – 28,223
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 17,814
  • ಖಾಲಿ ಹುದ್ದೆಗಳು – 10,409

ಸಮಾಜ ಕಲ್ಯಾಣ ಇಲಾಖೆ

  • ಮಂಜೂರಾದ ಹುದ್ದೆಗಳು – 15,177
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 5,585
  • ಖಾಲಿ ಹುದ್ದೆಗಳು – 9,592

ಲೋಕೋಪಯೋಗಿ ಇಲಾಖೆ

  • ಮಂಜೂರಾದ ಹುದ್ದೆಗಳು – 16,635
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 10,602
  • ಖಾಲಿ ಹುದ್ದೆಗಳು – 6,033

ನೀರಾವರಿ ಇಲಾಖೆ

  • ಮಂಜೂರಾದ ಹುದ್ದೆಗಳು – 10,623
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 6,401
  • ಖಾಲಿ ಹುದ್ದೆಗಳು – 4,222

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಅಡಿಕೆ ಬೆಳೆಯ ಸಂಕಷ್ಟಗಳನ್ನು ನಿವಾರಿಸಿ

ಒಟ್ಟು 2,47,558 ಹುದ್ದೆಗಳು ಖಾಲಿ ಇದ್ದು, ಇದರ ಭರ್ತಿಗೆ ರಾಜ್ಯ ಸರ್ಕಾರ ಚಿಂತನೆಯನ್ನೇ ನಡೆಸಿಲ್ಲ. ಸರ್ಕಾರ ಅಸ್ತಿತ್ವಕ್ಕೆ ಬಂದು ಆರು ತಿಂಗಳು ಕಳೆದರೂ ಸಹ ಯಾವುದೇ ನೋಟಿಫಿಕೇಶನ್‌ ಆಗಿಲ್ಲ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ಕೊಡಬೇಕು ಎಂಬ ಆಗ್ರಹಗಳು ಕೇಳಿ ಬಂದಿವೆ.

Continue Reading

ಕರ್ನಾಟಕ

Murder Case : ಸ್ನೇಹಿತನ ಹಣ ಕೊಡಿಸಿ ಕಿರಿಕ್ ಮಾಡಿಕೊಂಡು ಹೆಣವಾದ ಯುವಕ!

Murder Case : ಎಣ್ಣೆಮತ್ತಿನಲ್ಲಿ ನಡೆದ ಅದೊಂದು ಗಲಾಟೆಯು ಕೊಲೆಯಲ್ಲಿ ಅಂತ್ಯವಾಗಿದೆ. ಸ್ನೇಹಿತನ ಹಣ ಕೊಡಿಸಿ ಕಿರಿಕ್‌ ಮಾಡಿಕೊಂಡು ಯುವಕನೊಬ್ಬ ಉಸಿರು ಚೆಲ್ಲಿದ್ದಾನೆ.

VISTARANEWS.COM


on

By

murder case in Bengaluru
Koo

ಬೆಂಗಳೂರು: ಇಲ್ಲಿನ ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯ ಸಿಂಗಸಂದ್ರದಲ್ಲಿ ವ್ಯಕ್ತಿಯೊಬ್ಬನ ಎದೆಗೆ ಚಾಕುವಿನಿಂದ ಇರಿದು ಹತ್ಯೆ (Murder case) ಮಾಡಲಾಗಿದೆ. ಎಣ್ಣೆಮತ್ತಿನಲ್ಲಿ 1500 ರೂ ವಿಚಾರಕ್ಕೆ ನಡೆದ ಕಿರಿಕ್ ಕೊಲೆಯಲ್ಲಿ ಅಂತ್ಯವಾಗಿದೆ. ಸ್ನೇಹಿತನ ಹಣ ಕೊಡಿಸಿ ಕಿರಿಕ್ ಮಾಡಿಕೊಂಡು ಗೋಪಾಲ್‌ ಎಂಬಾತ ಹೆಣವಾಗಿದ್ದಾನೆ.

ಗೋಪಾಲ್, ಕರೆಗೌಡ ಮತ್ತು ಶಶಿಧರ್‌ ಈ ಮೂವರು ಸ್ನೇಹಿತರು ಬಾರ್‌ವೊಂದರಲ್ಲಿ ಕುಡಿಯಲು ಹೋಗಿದ್ದರು. ಅದೇ ಬಾರ್‌ಗೆ ಪ್ರದೀಪ್ ಮತ್ತು ಗಿರೀಶ್ ಎಂಬುವವರು ಬಂದಿದ್ದರು. ಹಿಂದೊಮ್ಮೆ ಎಲೆಕ್ಟ್ರಿಷಿಯನ್ ಕೆಲಸದಲ್ಲಿ ಕರೆಗೌಡಗೆ 1,500 ರೂ. ಹಣವನ್ನು ಗಿರೀಶ್ ಕೊಡಬೇಕಿತ್ತು. ಬಾರ್‌ನಲ್ಲಿ ಗಿರೀಶ್‌ ಸಿಕ್ಕಾಗ ಹಣ ಕೊಡುವಂತೆ ಕರೆಗೌಡ ಕೇಳಿದ್ದಾನೆ.

ಈ ವೇಳೆ ಗಿರೀಶ್‌ ಹಣ ಕೊಡುವುದಿಲ್ಲ ಏನ್‌ ಬೇಕಾದರೂ ಮಾಡಿಕೋ ಎಂದು ಕರೆಗೌಡಗೆ ಅವಾಜ್‌ ಹಾಕಿದ್ದಾನೆ. ಆಗ ಅಲ್ಲೇ ಇದ್ದ ಕರೆಗೌಡನ ಸ್ನೇಹಿತ ಗೋಪಾಲ್‌ ಮಧ್ಯ ಪ್ರವೇಶಿಸಿ, ಗಿರೀಶ್‌ಗೆ ಹೊಡೆದು ಹಣವನ್ನು ವಾಪಸ್‌ ಕೊಡಿಸಿದ್ದ. ಇದು ಇಷ್ಟೆಕ್ಕೆ ನಿಲ್ಲದೆ ನಂತರ ಈ ಗಿರೀಶ್‌ ಶಶಿಧರ್‌ಗೆ ಫೋನ್ ಮಾಡಿ ಅವಾಚ್ಯ ಶಬ್ಧಗಳಲ್ಲಿ ನಿಂದಿಸಿದ್ದಾನೆ.

ಇದರಿಂದ ಸಿಟ್ಟಾದ ಗೋಪಾಲ್, ಕರೆಗೌಡ, ಶಶಿಧರ್‌ನನ್ನು ಕರೆದುಕೊಂಡು ಗಿರೀಶ್ ಮನೆಗೆ ಹೋಗಿದ್ದಾರೆ. ಗಿರೀಶ್‌ಗೆ ಸರಿಯಾಗಿ ಮಾತನಾಡುವಂತೆ ಹೇಳಿ ಇಲ್ಲದಿದ್ದರೆ ಪರಿಸ್ಥಿತಿ ಸರಿಯಾಗಿ ಇರುವುದಿಲ್ಲ ಎಂದು ಆತನ ಪತ್ನಿ ಬಳಿ ಹೇಳಿದ್ದಾರೆ. ಈ ವೇಳೆ ಅಡುಗೆ ಮನೆಯಿಂದ ಚಾಕುವನ್ನು ಬೆನ್ನ ಹಿಂದೆ ಇಟ್ಟುಕೊಂಡು ಬಂದ ಗಿರೀಶ್‌, ಏಕಾಏಕಿ ಗೋಪಾಲ್ ಎದೆಗೆ ಚಾಕುವಿನಿಂದ ಚುಚ್ಚಿ, ಮನೆಯಿಂದ ಪರಾಗಿದ್ದಾನೆ.

ತೀವ್ರ ರಕ್ತಸ್ರಾವದಿಂದ ಒದ್ದಾಡುತ್ತಿದ್ದ ಗೋಪಾಲ್‌ನನ್ನು ಸ್ನೇಹಿತರೆಲ್ಲರೂ ಸೇರಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ಗಂಭೀರ ಗಾಯಗೊಂಡಿದ್ದ ಗೋಪಾಲ್‌ ಚಿಕಿತ್ಸೆ ಫಲಕಾರಿಯಾಗದೆ ಎರಡು ದಿನಗಳ ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಸದ್ಯ ಆರೋಪಿ ಗಿರೀಶ್‌ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ನಿದ್ರೆಗೆ ಜಾರಿದಾಗ ವ್ಯಕ್ತಿಯ ಕತ್ತು ಕೊಯ್ದ ಹಂತಕರು!

ಕೊಪ್ಪಳ: ಜಗಲಿ ಕಟ್ಟೆಯಲ್ಲಿ ಮಲಗಿದ್ದಲೇ ವ್ಯಕ್ತಿಯ ಕತ್ತು ಕೊಯ್ದು ಹತ್ಯೆ (Murder Case ) ಮಾಡಿರುವ ಘಟನೆ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ವಟಪರ್ವಿಯಲ್ಲಿ ನಡೆದಿದೆ. ವಟಪರ್ವಿ ಗ್ರಾಮದ ಪ್ರಭುರಾಜ ಎಂಬಾತ ಹತ್ಯೆಯಾದವನು.

ಕಳೆದ ಸೋಮವಾರದಿಂದ ಪ್ರಭುರಾಜ ನಾಪತ್ತೆಯಾಗಿದ್ದರು ಎನ್ನಲಾಗಿದೆ. ಪ್ರಭುರಾಜ ತೋಟದ ಮನೆಯ ಹೊರಗಿದ್ದ ಜಗಲಿ ಕಟ್ಟೆ ಮೇಲೆ ಮಲಗಿದ್ದ ಅವರ ಮೇಲೆ ಮಾರಾಕಾಸ್ತ್ರಗಳಿಂದ ದಾಳಿ ಮಾಡಿ ಕೊಚ್ಚಿ ಕೊಲೆ ಮಾಡಲಾಗಿದೆ. ಮಂಗಳವಾರ ಸಂಜೆ ಕೊಲೆಯಾಗಿರುವ ಶಂಕೆ ಇದ್ದು, ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಸ್ಥಳಕ್ಕೆ ಬೇವೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ.

6 ತಿಂಗಳ ಹಿಂದೆ ಪ್ರೀತಿಸಿ ಮದುವೆಯಾದ ಯುವತಿ ಆತ್ಮಹತ್ಯೆ

ಚಿಕ್ಕಬಳ್ಳಾಪುರ: ಪತಿ ಹಾಗೂ ಪತ್ನಿ ನಡುವೆ ವೈಮನಸ್ಸು ಬಂದ ಕಾರಣ ಮನನೊಂದ ಪತ್ನಿ ಆತ್ಮಹತ್ಯೆ (Self Harm) ಮಾಡಿಕೊಂಡ ಘಟನೆ ನಡೆದಿದೆ. ಮುಸ್ಕಾತ್ ತಾಜ್ (21) ಆತ್ಮಹತ್ಯೆ ಮಾಡಿಕೊಂಡ ಪತ್ನಿ.

ಇವರು ಚಿಕ್ಕಬಳ್ಳಾಪುರ (Chikkaballapura news) ಜಿಲ್ಲೆಯ ಚಿಂತಾಮಣಿ ನಗರದ ವೆಂಕಟಗಿರಿಕೋಟೆಯಲ್ಲಿರುವ ಪತಿಯ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆರು ತಿಂಗಳ ಹಿಂದೆ ಆಜಾಮ್‌ ಎಂಬಾತನನ್ನು ಪ್ರೀತಿಸಿದ್ದ ಈಕೆ ನಂತರ ವಿವಾಹ ಮಾಡಿಕೊಂಡಿದ್ದರು. ಪತಿ ಆಜಾಮ್ ವಿರುದ್ಧ ಪತ್ನಿಯ ಪೋಷಕರು ಕೊಲೆ ಆರೋಪ (murder complaint) ಹೊರಿಸಿದ್ದಾರೆ. ಚಿಂತಾಮಣಿ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಬೆಂಗಳೂರಿನಲ್ಲಿ ಆಟೋ ಚಾಲಕನ ಬರ್ಬರ ಹತ್ಯೆ

ಬೆಂಗಳೂರು: ರಾಜಧಾನಿಯಲ್ಲಿ ಯುವಕನೊಬ್ಬನನ್ನು ಹತ್ತಕ್ಕೂ ಅಧಿಕ ದುಷ್ಕರ್ಮಿಗಳು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ. ಅರುಣ್ (24) ಕೊಲೆಯಾದ ಆಟೋ ಚಾಲಕ. ರಾತ್ರಿ 9.30ರ ಸುಮಾರಿಗೆ ಈ ಘಟನೆ ನಡೆದಿದೆ. ಬ್ಯಾಟರಾಯನಪುರ ಪೊಲೀಸ್ ಠಾಣೆ ವ್ಯಾಪ್ತಿಯ ಟಿಂಬರ್ ಲೇಔಟ್‌ನಲ್ಲಿ ಘಟನೆ ನಡೆದಿದೆ.

ಅರುಣ್‌ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಅರುಣ್‌ನ ಮದುವೆ ಸಹ ಮುಂದಿನ ತಿಂಗಳು ಫಿಕ್ಸ್ ಆಗಿತ್ತು. 10ಕ್ಕೂ ಅಧಿಕ ಮಂದಿ ದುಷ್ಕರ್ಮಿಗಳಿಂದ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ. ಮಾರಕಾಸ್ತ್ರಗಳಿಂದ ಕೊಚ್ಚಿರುವ ರೀತಿ ನೋಡಿದರೆ ಹಳೆಯ ದ್ವೇಷ ತೀರಿಸಿಕೊಳ್ಳಲು ನಡೆದ ಕೃತ್ಯದಂತೆ ಕಾಣಿಸುತ್ತಿದೆ. ಘಟನಾ ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading

ಉದ್ಯೋಗ

Government Job : ‘ಖಾಲಿ’ ಸರ್ಕಾರದಲ್ಲಿ ಉದ್ಯೋಗಕ್ಕಿಲ್ಲ ಗ್ಯಾರಂಟಿ; ಭರ್ತಿಯಾಗದ 2.47 ಲಕ್ಷ ಹುದ್ದೆ!

Government Job : ಶಿಕ್ಷಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಒಳಾಡಳಿತ ಇಲಾಖೆ, ಆರೋಗ್ಯ – ವೈದ್ಯಕೀಯ ಇಲಾಖೆ, ಕಂದಾಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರ್ಥಿಕ ಇಲಾಖೆ, ಕೃಷಿ ಇಲಾಖೆ, ಪಶು ಸಂಗೋಪನಾ ಇಲಾಖೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಲೋಕೋಪಯೋಗಿ ಇಲಾಖೆ ಹಾಗೂ ನೀರಾವರಿ ಇಲಾಖೆಗಳಲ್ಲಿ ಒಟ್ಟು 2,47,558 ಹುದ್ದೆಗಳು ಖಾಲಿ ಇವೆ.

VISTARANEWS.COM


on

Government Job Vistara Exclusive
Koo
VISTARA-EXCLUSIVE

ಬೆಂಗಳೂರು: ವಿಸ್ತಾರ ನ್ಯೂಸ್‌ನಲ್ಲಿ ಮೆಗಾ EXCLUSIVE ಸ್ಟೋರಿ ಇದಾಗಿದ್ದು, ರಾಜ್ಯ ಸರ್ಕಾರಿ ಇಲಾಖೆಯಲ್ಲಿ ಲಕ್ಷ, ಲಕ್ಷ ಖಾಲಿ ಹುದ್ದೆ (Government Job) ಇರುವುದು ಗೊತ್ತಾಗಿದೆ. ಗ್ಯಾರಂಟಿ ಯೋಜನೆಯನ್ನು ಕೊಟ್ಟಿರುವ ಕಾಂಗ್ರೆಸ್‌ ಸರ್ಕಾರದಲ್ಲಿ (Congress Government) ಉದ್ಯೋಗ ಸೃಷ್ಟಿಗೆ ‘ಗ್ಯಾರಂಟಿ’ಯೇ ಇಲ್ಲ ಎನ್ನುವಂತೆ ಆಗಿದೆ. ಸರ್ಕಾರ ಬಂದು 6 ತಿಂಗಳು ಕಳೆದರೂ ಉದ್ಯೋಗ ಭರ್ತಿಗೆ ಹೊಸ ನೋಟಿಫಿಕೇಷನ್ ಮಾಡಲಾಗಿಲ್ಲ. ಖಾಲಿ ಹುದ್ದೆ ಭರ್ತಿ ಹೇಳಿಕೆಯು ಕೇವಲ ಬಜೆಟ್‌ಗೆ ಸೀಮಿತವಾಗಿದೆ. ಯಾವ್ಯಾವ ಸರ್ಕಾರಿ ಇಲಾಖೆಯಲ್ಲಿ ಎಷ್ಟೆಷ್ಟು ಹುದ್ದೆಗಳು ಖಾಲಿ ಇವೆ? ಎಂಬ ಬಗ್ಗೆ ಇಲ್ಲಿ ಸಂಪೂರ್ಣ ಮಾಹಿತಿ ನೀಡಲಾಗಿದೆ.

ಶಿಕ್ಷಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಒಳಾಡಳಿತ ಇಲಾಖೆ, ಆರೋಗ್ಯ – ವೈದ್ಯಕೀಯ ಇಲಾಖೆ, ಕಂದಾಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರ್ಥಿಕ ಇಲಾಖೆ, ಕೃಷಿ ಇಲಾಖೆ, ಪಶು ಸಂಗೋಪನಾ ಇಲಾಖೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಲೋಕೋಪಯೋಗಿ ಇಲಾಖೆ ಹಾಗೂ ನೀರಾವರಿ ಇಲಾಖೆಗಳಲ್ಲಿ ಒಟ್ಟು 2,47,558 ಹುದ್ದೆಗಳು ಖಾಲಿ ಇವೆ.

ಇಲ್ಲಿ ದಾಖಲೆಗಳ ಸಮೇತ ಖಾಲಿ ಹುದ್ದೆಗಳ ವಿವರ; ಇಲ್ಲಿದೆ ವಿಡಿಯೊ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ

  • ಮಂಜೂರಾದ ಹುದ್ದೆಗಳು – 2,82,862
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 2,16,803
  • ಖಾಲಿ ಹುದ್ದೆಗಳು- 66,059

ಒಳಾಡಳಿತ ಇಲಾಖೆ

  • ಮಂಜೂರಾದ ಹುದ್ದೆಗಳು – 1,26,913
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು -1,03,356
  • ಖಾಲಿ ಹುದ್ದೆಗಳು – 23,557

ಉನ್ನತ ಶಿಕ್ಷಣ ಇಲಾಖೆ

  • ಮಂಜೂರಾದ ಹುದ್ದೆಗಳು – 24,785
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು -12,111
  • ಖಾಲಿ ಹುದ್ದೆಗಳು- 12,674

ಆರೋಗ್ಯ ಮತ್ತು ವೈದ್ಯಕೀಯ

  • ಮಂಜೂರಾದ ಹುದ್ದೆಗಳು – 74,857
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು -40,213
  • ಖಾಲಿ ಹುದ್ದೆಗಳು- 34,644

ಕಂದಾಯ ಇಲಾಖೆ

  • ಮಂಜೂರಾದ ಹುದ್ದೆಗಳು – 32,309
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು -21,688
  • ಖಾಲಿ ಹುದ್ದೆಗಳು – 10,621

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ

  • ಮಂಜೂರಾದ ಹುದ್ದೆಗಳು – 6,940
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು -3,710
  • ಖಾಲಿ ಹುದ್ದೆಗಳು – 3,230

ಆರ್ಥಿಕ ಇಲಾಖೆ

  • ಮಂಜೂರಾದ ಹುದ್ದೆಗಳು – 18,892
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 10,113
  • ಖಾಲಿ ಹುದ್ದೆಗಳು – 8,779

ಕೃಷಿ ಇಲಾಖೆ

  • ಮಂಜೂರಾದ ಹುದ್ದೆಗಳು – 10,324
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 4,008
  • ಖಾಲಿ ಹುದ್ದೆಗಳು – 6,316

ಪಶುಸಂಗೋಪನೆ ಇಲಾಖೆ

  • ಮಂಜೂರಾದ ಹುದ್ದೆಗಳು – 19,610
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 8,581
  • ಖಾಲಿ ಹುದ್ದೆಗಳು – 11,029

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ

  • ಮಂಜೂರಾದ ಹುದ್ದೆಗಳು – 10,986
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 5,248
  • ಖಾಲಿ ಹುದ್ದೆಗಳು – 5,738

ಗ್ರಾಮೀಣಾಭಿವೃದ್ಧಿ ಇಲಾಖೆ

  • ಮಂಜೂರಾದ ಹುದ್ದೆಗಳು – 28,223
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 17,814
  • ಖಾಲಿ ಹುದ್ದೆಗಳು – 10,409

ಸಮಾಜ ಕಲ್ಯಾಣ ಇಲಾಖೆ

  • ಮಂಜೂರಾದ ಹುದ್ದೆಗಳು – 15,177
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 5,585
  • ಖಾಲಿ ಹುದ್ದೆಗಳು – 9,592

ಲೋಕೋಪಯೋಗಿ ಇಲಾಖೆ

  • ಮಂಜೂರಾದ ಹುದ್ದೆಗಳು – 16,635
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 10,602
  • ಖಾಲಿ ಹುದ್ದೆಗಳು – 6,033

ನೀರಾವರಿ ಇಲಾಖೆ

  • ಮಂಜೂರಾದ ಹುದ್ದೆಗಳು – 10,623
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 6,401
  • ಖಾಲಿ ಹುದ್ದೆಗಳು – 4,222

ಒಟ್ಟು 2,47,558 ಹುದ್ದೆಗಳು ಖಾಲಿ ಇದ್ದು, ಇದರ ಭರ್ತಿಗೆ ರಾಜ್ಯ ಸರ್ಕಾರ ಚಿಂತನೆಯನ್ನೇ ನಡೆಸಿಲ್ಲ. ಸರ್ಕಾರ ಅಸ್ತಿತ್ವಕ್ಕೆ ಬಂದು ಆರು ತಿಂಗಳು ಕಳೆದರೂ ಸಹ ಯಾವುದೇ ನೋಟಿಫಿಕೇಶನ್‌ ಆಗಿಲ್ಲ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ಕೊಡಬೇಕು ಎಂಬ ಆಗ್ರಹಗಳು ಕೇಳಿ ಬಂದಿವೆ.

Continue Reading

ಕರ್ನಾಟಕ

Murder Case : ನಿದ್ರೆಗೆ ಜಾರಿದಾಗ ವ್ಯಕ್ತಿಯ ಕತ್ತು ಕೊಯ್ದ ಹಂತಕರು!

Murder Case : ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿದ್ದಾನೆ. ತೋಟದ ಮನೆಯ ಜಗಲಿ ಕಟ್ಟೆಯಲ್ಲಿ ಮಲಗಿದ್ದವನ ಕತ್ತು ಕೊಯ್ದು ಹತ್ಯೆ ಮಾಡಲಾಗಿದೆ.

VISTARANEWS.COM


on

By

Murder case in kopal
Koo

ಕೊಪ್ಪಳ: ಜಗಲಿ ಕಟ್ಟೆಯಲ್ಲಿ ಮಲಗಿದ್ದಲೇ ವ್ಯಕ್ತಿಯ ಕತ್ತು ಕೊಯ್ದು ಹತ್ಯೆ (Murder Case ) ಮಾಡಿರುವ ಘಟನೆ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ವಟಪರ್ವಿಯಲ್ಲಿ ನಡೆದಿದೆ. ವಟಪರ್ವಿ ಗ್ರಾಮದ ಪ್ರಭುರಾಜ ಎಂಬಾತ ಹತ್ಯೆಯಾದವನು.

ಕಳೆದ ಸೋಮವಾರದಿಂದ ಪ್ರಭುರಾಜ ನಾಪತ್ತೆಯಾಗಿದ್ದರು ಎನ್ನಲಾಗಿದೆ. ಪ್ರಭುರಾಜ ತೋಟದ ಮನೆಯ ಹೊರಗಿದ್ದ ಜಗಲಿ ಕಟ್ಟೆ ಮೇಲೆ ಮಲಗಿದ್ದ ಅವರ ಮೇಲೆ ಮಾರಾಕಾಸ್ತ್ರಗಳಿಂದ ದಾಳಿ ಮಾಡಿ ಕೊಚ್ಚಿ ಕೊಲೆ ಮಾಡಲಾಗಿದೆ. ಮಂಗಳವಾರ ಸಂಜೆ ಕೊಲೆಯಾಗಿರುವ ಶಂಕೆ ಇದ್ದು, ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಸ್ಥಳಕ್ಕೆ ಬೇವೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ.

6 ತಿಂಗಳ ಹಿಂದೆ ಪ್ರೀತಿಸಿ ಮದುವೆಯಾದ ಯುವತಿ ಆತ್ಮಹತ್ಯೆ

ಚಿಕ್ಕಬಳ್ಳಾಪುರ: ಪತಿ ಹಾಗೂ ಪತ್ನಿ ನಡುವೆ ವೈಮನಸ್ಸು ಬಂದ ಕಾರಣ ಮನನೊಂದ ಪತ್ನಿ ಆತ್ಮಹತ್ಯೆ (Self Harm) ಮಾಡಿಕೊಂಡ ಘಟನೆ ನಡೆದಿದೆ. ಮುಸ್ಕಾತ್ ತಾಜ್ (21) ಆತ್ಮಹತ್ಯೆ ಮಾಡಿಕೊಂಡ ಪತ್ನಿ.

ಇವರು ಚಿಕ್ಕಬಳ್ಳಾಪುರ (Chikkaballapura news) ಜಿಲ್ಲೆಯ ಚಿಂತಾಮಣಿ ನಗರದ ವೆಂಕಟಗಿರಿಕೋಟೆಯಲ್ಲಿರುವ ಪತಿಯ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆರು ತಿಂಗಳ ಹಿಂದೆ ಆಜಾಮ್‌ ಎಂಬಾತನನ್ನು ಪ್ರೀತಿಸಿದ್ದ ಈಕೆ ನಂತರ ವಿವಾಹ ಮಾಡಿಕೊಂಡಿದ್ದರು. ಪತಿ ಆಜಾಮ್ ವಿರುದ್ಧ ಪತ್ನಿಯ ಪೋಷಕರು ಕೊಲೆ ಆರೋಪ (murder complaint) ಹೊರಿಸಿದ್ದಾರೆ. ಚಿಂತಾಮಣಿ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಬೆಂಗಳೂರಿನಲ್ಲಿ ಆಟೋ ಚಾಲಕನ ಬರ್ಬರ ಹತ್ಯೆ

ಬೆಂಗಳೂರು: ರಾಜಧಾನಿಯಲ್ಲಿ ಯುವಕನೊಬ್ಬನನ್ನು ಹತ್ತಕ್ಕೂ ಅಧಿಕ ದುಷ್ಕರ್ಮಿಗಳು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ. ಅರುಣ್ (24) ಕೊಲೆಯಾದ ಆಟೋ ಚಾಲಕ. ರಾತ್ರಿ 9.30ರ ಸುಮಾರಿಗೆ ಈ ಘಟನೆ ನಡೆದಿದೆ. ಬ್ಯಾಟರಾಯನಪುರ ಪೊಲೀಸ್ ಠಾಣೆ ವ್ಯಾಪ್ತಿಯ ಟಿಂಬರ್ ಲೇಔಟ್‌ನಲ್ಲಿ ಘಟನೆ ನಡೆದಿದೆ.

ಅರುಣ್‌ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಅರುಣ್‌ನ ಮದುವೆ ಸಹ ಮುಂದಿನ ತಿಂಗಳು ಫಿಕ್ಸ್ ಆಗಿತ್ತು. 10ಕ್ಕೂ ಅಧಿಕ ಮಂದಿ ದುಷ್ಕರ್ಮಿಗಳಿಂದ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ. ಮಾರಕಾಸ್ತ್ರಗಳಿಂದ ಕೊಚ್ಚಿರುವ ರೀತಿ ನೋಡಿದರೆ ಹಳೆಯ ದ್ವೇಷ ತೀರಿಸಿಕೊಳ್ಳಲು ನಡೆದ ಕೃತ್ಯದಂತೆ ಕಾಣಿಸುತ್ತಿದೆ. ಘಟನಾ ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

ಹೆಜ್ಜೇನು ದಾಳಿಯಿಂದ ಕಾರ್ಮಿಕ ಸಾವು

ರಾಮನಗರ: ಟಿಂಬರ್ ಕೆಲಸ ಮಾಡುತ್ತಿದ್ದಾಗ ಹೆಜ್ಜೇನು ದಾಳಿ ನಡೆಸಿದ ಪರಿಣಾಮ ಕಾರ್ಮಿಕರೊಬ್ಬರು ಸಾವಿಗೀಡಾಗಿದ್ದಾರೆ. ರಾಮನಗರದ (ramanagara news) ಮಾಗಡಿ ತಾಲೂಕಿನ ಬೆಳಗವಾಡಿ ಗ್ರಾಮದಲ್ಲಿ ಘಟನೆ ನಡೆದಿದೆ.

ಬಜ್ಜಯ್ಯ (53) ಸ್ಥಳದಲ್ಲೇ ಸಾವಿಗೀಡಾದ ವ್ಯಕ್ತಿ. ಮರ ಕಡಿಯುವಾಗ ಹೆಜ್ಜೇನು ಗೂಡು ಬಜ್ಜಯ್ಯ ಮೇಲೆ ಬಿದ್ದಿದೆ. ಹೆಜ್ಜೇನು ಹುಳುಗಳು ಗುಂಪಾಗಿ ದಾಳಿ ನಡೆಸಿವೆ. ಹೆಜ್ಜೇನು ದಾಳಿಯಿಂದ ಇನ್ನಿತರ ಕೆಲವು ಕಾರ್ಮಿಕರಿಗೂ ಗಾಯಗಳಾಗಿದ್ದು, ಸ್ಥಳದಿಂದ ಓಡಿಹೋಗಿದ್ದಾರೆ. ಬಜ್ಜಯ್ಯನವರಿಗೆ ನೂರಾರು ಹುಳಗಳು ಕಡಿದ ಪರಿಣಾಮ ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಮಾಗಡಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading
Advertisement
lidkar ambassador dolly dhananjay Officially
South Cinema3 mins ago

Dolly Dhananjay: ಸಂಭಾವನೆ ಪಡೆಯದೆ ಲಿಡ್ಕರ್‌ ರಾಯಭಾರಿಯಾದ ಡಾಲಿ ಧನಂಜಯ್‌!

Government Job Vistara Exclusive and CM Siddaramaiah
ಉದ್ಯೋಗ8 mins ago

Government Job: 2.47 ಲಕ್ಷ ಹುದ್ದೆ ಖಾಲಿ: ಸದನದಲ್ಲಿ ಸದ್ದು ಮಾಡಿದ ವಿಸ್ತಾರ EXCLUSIVE ಸ್ಟೋರಿ

kim
ವಿದೇಶ25 mins ago

Viral Video: ತುಂಬಿದ ಸಭೆಯಲ್ಲಿ ಕಣ್ಣೀರಿಟ್ಟ ಉತ್ತರ ಕೊರಿಯಾ ಸರ್ವಾಧಿಕಾರಿ!

narendra modi amit shah jp nadda
ದೇಶ38 mins ago

Assembly Election 2023: 3 ರಾಜ್ಯಗಳಲ್ಲೂ ಮುಖ್ಯಮಂತ್ರಿಯಾಗಿ ಬಿಜೆಪಿಯಿಂದ ಹೊಸ ಮುಖ

Vinay Gowda and sangeetha Bigg boss
ಬಿಗ್ ಬಾಸ್39 mins ago

BBK SEASON 10: ಪಾತ್ರದಿಂದ ಹೊರಗೆ ಬಂದ್ರೆ ಸಂಗೀತಾ ಟೀಮ್‌ಗೆ ʻಹುಚ್ಚೇಟುʼ ಕೊಡ್ತೀನಿ ಎಂದ ವಿನಯ್‌!

murder case in Bengaluru
ಕರ್ನಾಟಕ53 mins ago

Murder Case : ಸ್ನೇಹಿತನ ಹಣ ಕೊಡಿಸಿ ಕಿರಿಕ್ ಮಾಡಿಕೊಂಡು ಹೆಣವಾದ ಯುವಕ!

Government Job Vistara Exclusive
ಉದ್ಯೋಗ1 hour ago

Government Job : ‘ಖಾಲಿ’ ಸರ್ಕಾರದಲ್ಲಿ ಉದ್ಯೋಗಕ್ಕಿಲ್ಲ ಗ್ಯಾರಂಟಿ; ಭರ್ತಿಯಾಗದ 2.47 ಲಕ್ಷ ಹುದ್ದೆ!

danish
ಕ್ರಿಕೆಟ್1 hour ago

Danish Kaneria: ರಾಹುಲ್‌ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ; ಕಾರಣವೇನು?

Snehith Gowda Became Villain In Bigg Boss Kannada in rakshasa task
ಬಿಗ್ ಬಾಸ್1 hour ago

BBK SEASON 10: ನ್ಯಾಯವಾಗಿ ಆಡೋಕ್‌ ಬಂದಿಲ್ಲ ಅಂದ್ರೆ ಹೋಗ್ತಿರ್ಬೇಕು; ಸ್ನೇಹಿತ್‌ ವಿರುದ್ಧ ರಕ್ಕಸರು ಉರಿ ಉರಿ!

pranab mukherjee and rahul gandhi
ದೇಶ1 hour ago

ʼರಾಹುಲ್‌ ಗಾಂಧಿಗೆ ರಾಜಕೀಯದಲ್ಲಿ ಪ್ರಬುದ್ಧತೆ ಇಲ್ಲʼ ಎಂದಿದ್ದರು ಪ್ರಣಬ್‌ ಮುಖರ್ಜಿ!

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Government Job Vistara Exclusive and CM Siddaramaiah
ಉದ್ಯೋಗ8 mins ago

Government Job: 2.47 ಲಕ್ಷ ಹುದ್ದೆ ಖಾಲಿ: ಸದನದಲ್ಲಿ ಸದ್ದು ಮಾಡಿದ ವಿಸ್ತಾರ EXCLUSIVE ಸ್ಟೋರಿ

Government Job Vistara Exclusive
ಉದ್ಯೋಗ1 hour ago

Government Job : ‘ಖಾಲಿ’ ಸರ್ಕಾರದಲ್ಲಿ ಉದ್ಯೋಗಕ್ಕಿಲ್ಲ ಗ್ಯಾರಂಟಿ; ಭರ್ತಿಯಾಗದ 2.47 ಲಕ್ಷ ಹುದ್ದೆ!

read your daily horoscope predictions for december 6 2023
ಪ್ರಮುಖ ಸುದ್ದಿ8 hours ago

Dina Bhavishya : ಈ ರಾಶಿಯವರು ಸುಮ್ಮನಿದ್ದರೂ ನಡೆಯುತ್ತೆ ಕಲಹ!

CM Siddaramaiah and Black magic
ಕರ್ನಾಟಕ16 hours ago

Belagavi Winter Session: ಸಿದ್ದರಾಮಯ್ಯಗೆ ಮಾಟ – ಮಂತ್ರ; ಗಾಳಿ ಬಿಡಿಸಲು ರೇವಣ್ಣಗೆ ಅಶೋಕ್‌ ಮನವಿ!

R Ashok in assembly session
ಕರ್ನಾಟಕ17 hours ago

Belagavi Winter Session: ಟಿಸಿ ಬದಲಾಯಿಸಲು ಹಣ ಕೇಳ್ತಾರೆ, ರೈತರು ಬದುಕೋದು ಬೇಡವಾ? ಅಶೋಕ್‌ ಕ್ಲಾಸ್‌

R Ashok
ಕರ್ನಾಟಕ17 hours ago

Belagavi Winter Session: ಬರ ಪ್ರದೇಶಕ್ಕೆ ಹೋಗದ ಸಿಎಂ, ಸಚಿವರು; ಸರ್ಕಾರಕ್ಕೆ ಆರ್.‌ ಅಶೋಕ್‌ ಚಾಟಿ

dina bhavishya read your daily horoscope predictions for December 5 2023
ಪ್ರಮುಖ ಸುದ್ದಿ1 day ago

Dina Bhavishya : ಈ ರಾಶಿಯವರ ಅದೃಷ್ಟ ಸಂಖ್ಯೆ 1, 3! ನಿಮ್ಮ ಲಕ್ಕಿ ನಂಬರ್‌ ಏನು?

ead your daily horoscope predictions for december 4th 2023
ಪ್ರಮುಖ ಸುದ್ದಿ2 days ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Police call off protest FIR against lawyer who slapped police
ಕರ್ನಾಟಕ3 days ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ3 days ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

ಟ್ರೆಂಡಿಂಗ್‌