Site icon Vistara News

ಧಾರವಾಡ: ಕಾರು-ಬೈಕ್‌ ಮುಖಾಮುಖಿ ಡಿಕ್ಕಿ; ಮೂವರ ದಾರುಣ ಸಾವು

ಮೂವರ ದಾರುಣ ಸಾವು

ಧಾರವಾಡ: ನಗರದ ಹೊರಹೊಲಯದ ರಾಷ್ಟ್ರೀಯ ಹೆದ್ದಾರಿಯ ವೆಂಕಟಾಪುರ ಕ್ರಾಸ್ ಬಳಿ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ದಾರುಣವಾಗಿ ಮೃತಪಟ್ಟಿದ್ದಾರೆ.

ಬೇಗೂರು ಗ್ರಾಮದ ನಿವಾಸಿಗಳಾದ ಸೂಸವ್ವಾ ಹರಿಜನ, ಕಲ್ಲವ್ವ ಹರಿಜನ, ರಾಜು ತಿಗಡೋಳಿ ಮೃತಪಟ್ಟ ದುರ್ದೈವಿಗಳು. ಇವರು ಭಾನುವಾರ ರಾತ್ರಿ ಬೈಕ್‌ನಲ್ಲಿ ಧಾರವಾಡದಿಂದ ಸ್ವಗ್ರಾಮ ಬೇಗೂರಿಗೆ ತೆರಳುತ್ತಿದ್ದಾಗ ಎದುರಿನಿಂದ ಬಂದ ಕಾರಿಗೆ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ.

ಸ್ಥಳಕ್ಕೆ ಗರಗ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಕಾರಿನಲ್ಲಿದ್ದ ಯಾರಿಗೂ ಗಭೀರವಾದ ಗಾಯಗಳಾಗಿಲ್ಲ ಎನ್ನಲಾಗಿದೆ.

ಇದನ್ನೂ ಓದಿ | Accident | ಬೆಳಗಾವಿಯಲ್ಲಿ ಭೀಕರ ಅಪಘಾತ, ಕ್ರೂಸರ್‌ ಪಲ್ಟಿಯಾಗಿ 7 ಜನ ಸಾವು, ಹಲವರ ಸ್ಥಿತಿ ಗಂಭೀರ

Exit mobile version