Site icon Vistara News

Road Accident: ಕಾರು-ಸ್ಕೂಟರ್ ಮುಖಾಮುಖಿ ಡಿಕ್ಕಿಯಾಗಿ ಮೂವರು ಸವಾರರ ದುರ್ಮರಣ

scooter accident

ತುಮಕೂರು: ಕಾರು ಹಾಗೂ ಸ್ಕೂಟರ್‌ ಮುಖಾಮುಖಿ ಡಿಕ್ಕಿಯಾಗಿ ಮೂವರು ಸವಾರರು ದುರ್ಮರಣ ಹೊಂದಿದ ಘಟನೆ ಜಿಲ್ಲೆಯ ತುರುವೇಕೆರೆ ತಾಲೂಕಿನ ಜೋಡಗಟ್ಟೆ ಬಳಿ ಶನಿವಾರ ನಡೆದಿದೆ. ಮೂವರೂ ಆದಿಚುಂಚನಗಿರಿ ಮಠಕ್ಕೆ ಬೈಕ್‌ನಲ್ಲಿ ತೆರಳಿ ವಾಪಸ್ ಮನೆಗೆ ತೆರಳುವಾಗ ದುರಂತ ನಡೆದಿದೆ.

ತಿಪಟೂರು ಮೂಲದ ಅನಿಲ್ ಕುಮಾರ್ (21), ನರಸಿಂಹ ಮೂರ್ತಿ (21), ಕಾವ್ಯ (19) ಮೃತರು. ಮೂವರು ಸ್ನೇಹಿತರು ಆದಿಚುಂಚನಗಿರಿ ಮಠಕ್ಕೆ ತೆರಳಿ ಸ್ಕೂಟರ್‌ನಲ್ಲಿ ವಾಪಸ್ ಮನೆಗೆ ತೆರಳುವಾಗ ಜೋಡಗಟ್ಟೆ ಬಳಿ ಸ್ಕೂಟರ್‌-ಕಾರು ಮುಖಾಮುಖಿ ಡಿಕ್ಕಿಯಾಗಿವೆ. ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದು, ಯುವತಿ ಅಸ್ಪತ್ರೆಗೆ ಸಾಗಿಸುವಾಗ ಕೊನೆಯುಸಿರೆಳೆದಿದ್ದಾಳೆ.

ಮೃತದೇಹಗಳನ್ನು ಆದಿಚುಂಚನಗಿರಿ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ತುರುವೇಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Bus Accident: ಎರಡು ಬಸ್‌ ಮುಖಾಮುಖಿ ಡಿಕ್ಕಿ; ಇಬ್ಬರ ಸಾವು, 10ಕ್ಕೂ ಹೆಚ್ಚು ಮಂದಿಗೆ ಗಾಯ

ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ; ಇಬ್ಬರ ದುರ್ಮರಣ

ಬೆಳಗಾವಿ: ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ದುರ್ಮರಣ ಹೊಂದಿರುವ ಘಟನೆ (Road Accident) ಜಿಲ್ಲೆಯ ಗೋಕಾಕ್‌ ತಾಲೂಕಿನ ಲೋಳಸೂರ ಬ್ರಿಡ್ಜ್ ಬಳಿ ನಡೆದಿದೆ. ಸ್ಥಳಕ್ಕೆ ಗೋಕಾಕ್‌ ಗ್ರಾಮೀಣ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಅಪಘಾತದಲ್ಲಿ ಕಬ್ಬು ತುಂಬಿದ ಟ್ರ್ಯಾಕ್ಟರ್‌ನಡಿ ಬೈಕ್‌ ಸವಾರರು ಸಿಲುಕಿದ್ದು, ಜೆಸಿಬಿ ಬಳಸಿ ಟ್ರಾಕ್ಟರ್‌ನಡಿಯಿಂದ ಮೃತದೇಹಗಳನ್ನು ಪೊಲೀಸರು ಹೊರತೆಗೆಯುತ್ತಿದ್ದಾರೆ. ಮೃತರ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.

Exit mobile version