Attack on Rowdy Sheeters: ಕುಡಿದ ಅಮಲಿನಲ್ಲಿ ಜನರಿಗೆ ಕಾಟ ಕೊಡ್ತಿದ್ದ ಮೂವರು ರೌಡಿಶೀಟರ್‌ಗಳಿಗೆ ಹಿಗ್ಗಾಮುಗ್ಗ ಥಳಿತ - Vistara News

ಕರ್ನಾಟಕ

Attack on Rowdy Sheeters: ಕುಡಿದ ಅಮಲಿನಲ್ಲಿ ಜನರಿಗೆ ಕಾಟ ಕೊಡ್ತಿದ್ದ ಮೂವರು ರೌಡಿಶೀಟರ್‌ಗಳಿಗೆ ಹಿಗ್ಗಾಮುಗ್ಗ ಥಳಿತ

Attack on Rowdy Sheeters: ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನಲ್ಲಿ ಬಾರ್‌ನಲ್ಲಿ ಕುಡಿದ ಗಲಾಟೆ ಮಾಡಿದ ಹಿನ್ನೆಲೆಯಲ್ಲಿ ಸಾರ್ವಜನಿಕರು, ಮೂವರು ರೌಡಿ ಶೀಟರ್‌ಗಳನ್ನು ಹಿಡಿದು ಥಳಿಸಿದ್ದಾರೆ.

VISTARANEWS.COM


on

Three rowdy-sheeters thrashed for harassing people in an inebriated state
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹಾಸನ: ಕುಡಿದ ಅಮಲಿನಲ್ಲಿ ಜನರಿಗೆ ಕಾಟ ಕೊಡುತ್ತಿದ್ದ ಮೂವರು ರೌಡಿಶೀಟರ್‌ಗಳಿಗೆ ಹಿಗ್ಗಾಮುಗ್ಗ ಥಳಿಸಿರುವುದು (Attack on Rowdy Sheeters) ಹೊಳೆನರಸೀಪುರ ತಾಲೂಕಿನ ಹಳ್ಳಿ ಮೈಸೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಎರಡು ಕೊಲೆ ಪ್ರಕರಣ ಆರೋಪಿ ಯಾಚೇನಹಳ್ಳಿ ಚೇತು, ಉಲಿವಾಲ ಚೇತು ಮತ್ತು ನೈನ್ಟಿ ವಿಶ್ವ ಎಂಬ ಮೂವರನ್ನು ಹಿಡಿದು ಜನರು ಥಳಿಸಿದ್ದಾರೆ. ಜಿಲ್ಲೆಯಲ್ಲಿ ನಟೋರಿಸ್ ರೌಡಿಗಳಾಗಿದ್ದ ಈ ಮೂವರು, ನಾಲ್ಕು ದಿನದ ಹಿಂದೆ ಹೊಳೆನರಸೀಪುರ ತಾಲೂಕಿನ ಜೋಡಿಗುಬ್ಬಿಯಲ್ಲಿ ಗಲಾಟೆ ಮಾಡಿದ್ದಾರೆ. ಬಾರ್‌ಗೆ ಹೋಗಿ ಕಂಠಪೂರ್ತಿ ಕುಡಿದು ಬಿಲ್ ಕೊಡದೆ, ನಾವು ಕೊಲೆ ಮಾಡಿ ಜೈಲಿಗೆ ಹೋಗಿ ಬಂದಿರುವ ರೌಡಿಗಳು, ನಮ್ಮ ಬಳಿಯೇ ಹಣ ಕೇಳುತ್ತೀಯಾ ಎಂದು ಬಾರ್‌ನ ಕ್ಯಾಷಿಯರ್ ಮೇಲೆ ಚಾಕುವಿನಿಂದ ದಾಳಿ ಮಾಡಿದ್ದರು.

ಕುಡಿದ ಅಮಲಿನಲ್ಲಿ ಬಾರ್‌ನೊಳಗೆ ಕೂತು ಜನರಿಗೆ ಆವಾಜ್ ಹಾಕುತ್ತಿದ್ದ ಹಿನ್ನೆಲೆಯಲ್ಲಿ ಮೂವರ ಬಟ್ಟೆ ಬಿಚ್ಚಿ ರಸ್ತೆಯಲ್ಲಿ ಉರುಳಾಡಿಸಿ ಹೊಡೆಯಲಾಗಿದೆ. ಚುನಾವಣೆ ಹಿನ್ನೆಲೆಯಲ್ಲಿ ಮೂವರನ್ನು ಗಡಿಪಾರು ಮಾಡಲು ಪೊಲೀಸ್ ಇಲಾಖೆ ತಯಾರಿ ಮಾಡಿತ್ತು. ಗಡಿಪಾರು ವಿಚಾರ ತಿಳಿದು ಕಿಡಿಗೇಡಿಗಳು ಚನ್ನರಾಯಪಟ್ಟಣದಿಂದ ಹೊಳೆನರಸೀಪುರ ಗಡಿಭಾಗಕ್ಕೆ ಬಂದು ತಲೆ ಮರೆಸಿಕೊಳ್ಳುವ ಪ್ಲ್ಯಾನ್ ಮಾಡಿದ್ದರು. ಈ ನಡುವೆ ಕುಡಿದು ಗಲಾಟೆ ಮಾಡಿಕೊಂಡು ಧರ್ಮದೇಟು ತಿಂದಿದ್ದಾರೆ.

ಬಾರ್ ಕ್ಯಾಷಿಯರ್ ದೂರು ಆಧರಿಸಿ ಮೂವರು ರೌಡಿಗಳ ವಿರುದ್ಧ ಕೊಲೆ ಯತ್ನ ಕೇಸ್ ದಾಖಲಾಗಿದೆ. ಹಳ್ಳಿ ಮೈಸೂರು ಪೊಲೀಸ್ ಠಾಣೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Karnataka Assembly : ಗದ್ದಲದಲ್ಲೇ ಮುಕ್ತಾಯಗೊಂಡ ಮೂರನೇ ದಿನದ ವಿಧಾನಮಂಡಲ ಅಧಿವೇಶನ

Karnataka Assembly :ವಾಲ್ಮಿಕಿ ನಿಗಮದ ಹಗರಣ ಪ್ರಕರಣದಲ್ಲಿ ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ ಚಂದ್ರಶೇಖರ್​ ಎಂಬುವರ ಡೆತ್ ನೋಟ್​ ಓದುವಾಗ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಹೆಸರನ್ನೇ ಬಿಟ್ಟಿದ್ದಾರೆ ಎಂಬುದ ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್ ಅರೋಪಿಸಿದರು. ಬಳಿಕ ಬಿಜೆಪಿ ಹಾಗೂ ಜೆಡಿಎಸ್​ ಕಾರ್ಯಕರ್ತರು ಸದನದ ಬಾವಿಗೆ ಇಳಿದ ಪ್ರತಿಭಟನೆ ನಡೆಸಿದರು.

VISTARANEWS.COM


on

Karnataka Assembly
Koo

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಹಗರಣ ಹಾಗೂ ಮುಡಾ ಸೈಟ್​ ಪ್ರಕರಣದ ವಿಧಾನ ಮಂಡಲ ಅಧಿವೇಶನದ (Karnataka Assembly) ಮೂರನೇ ದಿನವನ್ನೂ ಹಾಳುಗಡೆವಿತು. ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್​ ಮುಂದಾದರೆ, ಕಾಂಗ್ರೆಸ್​ ಮುಜುಗರದಿಂದ ತಪ್ಪಿಸಲು ನಾನಾ ರೀತಿಯ ಪ್ರಯತ್ನಗಳನ್ನು ಮಾಡಿತು. ಆದರೆ ಪ್ರತಿಭಟನೆ ಹಾಗೂ ಪ್ರತಿರೋಧಗಳಿಂದಾಗಿ ಕಲಾಪದ ಅವಧಿ ನಷ್ಟವಾಯಿತು.

ವಾಲ್ಮಿಕಿ ನಿಗಮದ ಹಗರಣ ಪ್ರಕರಣದಲ್ಲಿ ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ ಚಂದ್ರಶೇಖರ್​ ಎಂಬುವರ ಡೆತ್ ನೋಟ್​ ಓದುವಾಗ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಹೆಸರನ್ನೇ ಬಿಟ್ಟಿದ್ದಾರೆ ಎಂಬುದ ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್ ಅರೋಪಿಸಿದರು. ಬಳಿಕ ಬಿಜೆಪಿ ಹಾಗೂ ಜೆಡಿಎಸ್​ ಕಾರ್ಯಕರ್ತರು ಸದನದ ಬಾವಿಗೆ ಇಳಿದ ಪ್ರತಿಭಟನೆ ನಡೆಸಿದರು.

ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಹಾಗೂ ಜೆಡಿಎಸ್​ ಸದಸ್ಯರು ವಿಧಾನ ಸೌಧದ ಗೇಟ್ ಬಳಿಯೂ ಪ್ರತಿಭಟನೆ ನಡೆಸಿದರು. ಸರ್ಕಾರವು ಹಗರಣಗಳನ್ನು ಮುಚ್ಚಿ ಹಾಕಲು ಯತ್ನಿಸುತ್ತಿದೆ ಎಂದು ವಿಪಕ್ಷಗಳ ಸದಸ್ಯರು ಈ ವೇಳೆ ಆರೋಪಿಸಿದರು.

ಸಂಧಾನ ಸಭೆ

ಸಿಎಂ ಸಿದ್ದರಾಮಯ್ಯ ಅವರು ಉತ್ತರ ಕೊಡುವಾಗ ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್​ ಸದಸ್ಯರು ಸದನದ ಬಾವಿಗಿಳಿದು ಧರಣಿ ನಡೆಸಿರುವ ಹಿನ್ನೆಲೆಯಲ್ಲಿಯ ಸ್ಪೀಕರ್​ ಯುಟಿ ಖಾದರ್ ಸಂಧಾನ ಸಭೆ ಕರೆದರು. ಆಡಳಿತ ಪಕ್ಷದ ಕಡೆಯಿಂದ ಸಿದ್ದರಾಮಯ್ಯ, ಎಚ್ ಕೆ ಪಾಟೀಲ್ ,ಜಾರ್ಜ್ ಹಾಗೂ ವಿಪಕ್ಷಗಳಿಂದ ಆರ್ ಆಶೋಕ್, ವಿಜೇಯೇಂದ್ರ, ಸುರೇಶ್ ಬಾಬು ಇದ್ದರು.

ಸಂಧಾನ ಸಭೆ ನಡೆಸಿದ ಬಳಿಕವೂ ವಿಪಕ್ಷಗಳ ಸದಸ್ಯರು ತಮ್ಮ ಹೋರಾಟವನ್ನ ಮುಂದುವರಿಸಿದ ಕಾರಣ ಕಲಾಪ ಬಹುತೇಕ ಗದ್ದಲದಲ್ಲಿಯೇ ಅಂತ್ಯಗೊಂಡಿತು.

ಅಹಿಂದಕ್ಕೆ ಅನ್ಯಾಯ ಮಾಡುವ ಕೆಲಸ ಸಿಎಂ ಮಾಡಿದ್ದಾರೆ. ವಾಲ್ಮೀಕಿ ನಿಗಮದ ಹಣದಿಂದ ಹೆಂಡ ಹಚ್ಚಿದ್ದಾರೆ. ಡೆತ್ ನೋಟ್ ನಲ್ಲಿ ಅಧಿಕಾರಿಗಳ ಹೆಸರನ್ನು ಮಾತ್ರ ಉಲ್ಲೇಖ ಮಾಡ್ತಾರೆ. ಸಚಿವರ ಹೆಸರು ಉಲ್ಲೇಖ ಮಾಡುತ್ತಾರೆ. ಇದೇ ವೇಳೆ ನಾಗೇಂದ್ರ ಕ್ಲಿನ್ ಚಿಟ್ ಪಡೆದು ಹೊರಗೆ ಬರ್ತಾರೆ ಅಂತ ಡಿಕೆ ಶಿವಕುಮಾರ್ ಹೇಳ್ತಾರೆ. ಸರ್ಕಾರದ ಮುಖವಾಡ ಬಯಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.

ಇದನ್ನೂ ಓದಿ: Karnataka Job Reservation : ಹಗರಣಗಳನ್ನು ಮುಚ್ಚಿಡಲು ಕನ್ನಡಿಗರಿಗೆ ಮೀಸಲು ವಿಚಾರ ಮುನ್ನೆಲೆಗೆ ತಂದ ಸರ್ಕಾರ; ಸಿಟಿ ರವಿ ಆರೋಪ

ವಿಧಾನ ಪರಿಷತ್​ನಲ್ಲೂ ಇದೇ ರೀತಿ ಪರಿಸ್ಥಿತಿ ಮುಂದುವರಿಯಿತು. ಹೆಚ್ಚು ಚರ್ಚೆಗಳು ನಡೆಯದೇ ಆರೋಪಗಳಲ್ಲೇ ಕೊನೆಯಾಯಿತು.

ಸಿಎಂ ಉತ್ತರ

ನಿಯಮ‌ 69ರ ಅಡಿಯಲ್ಲಿ ನಡೆದ ವಾಲ್ಮೀಕಿ ಅಭಿವೃದ್ಧಿ ನಿಗಮ ಕುರಿತಾದ ಚರ್ಚೆಗೆ ಸದನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರ ನೀಡಿದ್ದಾರೆ. ಆರ್.ಅಶೋಕ್, ವಿಜಯೇಂದ್ರ ನನ್ನ ರಾಜೀನಾಮೆ ಕೇಳಿದ್ದಾರೆ. ಆರಗ ಜ್ಞಾನೇಂದ್ರ ಮಾಜಿ ಗೃಹ ಸಚಿವರು. ಇವರು ಎಸ್​ಐಟಿ ಹಿಂದಕ್ಕೆ ಪಡೆಯಿರಿ ಎಂದು ಹೇಳಿದ್ದಾರೆ. ನೀವು ಗೃಹ ಮಂತ್ರಿ ಆಗಿದ್ದಾಗಲೂ ಎಸ್​ಐಟಿ ಬಗ್ಗೆ ಹೀಗೆ ಹೇಳಿದ್ದೀರಾ ಎಂದು ಪ್ರಶ್ನಿಸಿದ್ದಾರೆ.

26-5-2024 ರಂದು ಚಂದ್ರಶೇಖರ್ ಅವರು ಆತ್ಮಹತ್ಯೆ ಮಾಡಿಕೊಂಡರು. ಇವರು ತಮಿಳುನಾಡಿನ ಬೋವಿ ಸಮುದಾಯದವರು. ವಿರೋಧ ಪಕ್ಷದವರು ಸಾವಿರ ಸಾರಿ ದಲಿತ, ದಲಿತ ಅಂತ ಹೇಳುತ್ತಿದ್ದಾರೆ ಎಂದರು.

ಈ ಎಲ್ಲಾ ನಿಗಮಗಳ ಉದ್ದೇಶ ಆಯಾ ಸಮುದಾಯಗಳನ್ನು ಆರ್ಥಿಕವಾಗಿ ಬಲಿಷ್ಠರನ್ನಾಗಿಸುವುದೇ ಆಗಿದೆ. 2013 ಡಿಸೆಂಬರ್ ನಲ್ಲಿ ಎಸ್​​ಸಿಪಿ, ಟಿಸಿಪಿ ಕಾಯ್ದೆ ಜಾರಿ ಮಾಡಿದೆ. ನಾನು ಮುಖ್ಯಮಂತ್ರಿಯಾಗಿಯೇ ಜಾರಿ ಮಾಡಿದೆ. 24.1% ಅಭಿವೃದ್ಧಿ ಹಣ ಈ ಸಮುದಾಯದ ಅಭಿವೃದ್ಧಿಗೆ ಮೀಸಲಿಡಬೇಕು ಎಂದು ಕಡ್ಡಾಯ ಮಾಡಿದ್ದು ನಾನು. ಪ್ರತಿಪಕ್ಷಗಳು ಬರಿ ಮೊಸಳೆ ಕಣ್ಣೀರು ಹರಿಸುತ್ತವೆ ಎಂದರು.

ನಾನು ಹಿಂದಿನ ಸಿದ್ದರಾಮಯ್ಯ ಅಲ್ಲ ಅಂತ ಯತ್ನಾಳ್ ಅವರು ಹೇಳಿದರು. ಯತ್ನಾಳ್ ಅವರು ಕೂಡ ವಾಜಪೇಯಿ ಅವರ ಸಂಪುಟದಲ್ಲಿದ್ದ ಯತ್ನಾಳ್ ಆಗಿ ಉಳಿದಿಲ್ಲ ಎಂದರು. ಆರ್.ಅಶೋಕ್ ಮೂರು ಗಂಟೆ ನಾಲ್ಕು ನಿಮಿಷ ಸದನದಲ್ಲಿ ಆರೋಪಿಸಿದ್ದೆಲ್ಲಾ ಪತ್ರಿಕಾ ಸುದ್ದಿಗಳ ಆಧಾರದಲ್ಲಿ ಮಾತ್ರ. ಪರಿಶಿಷ್ಠ ಸಮುದಾಯಗಳ ಬಗ್ಗೆ ಪ್ರಾಮಾಣಿಕ ಕಾಳಜಿ ಇದ್ದಿದ್ದರೆ ಕೇಂದ್ರದ ಬಿಜೆಪಿಯಾಗಲಿ, ಅವರು ಅಧಿಕಾರದಲ್ಲಿರುವ ರಾಜ್ಯಗಳಲ್ಲಾಗಲಿ ಕಾಯ್ದೆಯನ್ನು ಏಕೆ ಜಾರಿಗೆ ತಂದಿಲ್ಲ ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಇರುವವರೆಗೂ, ನಾನು ಇರುವವರೆಗೂ ಸಾಮಾಜಿಕ ನ್ಯಾಯಕ್ಕೆ ನಾವು ಬದ್ದರು. ನಿಮ್ಮಿಂದ ಸಾಮಾಜಿಕ ನ್ಯಾಯದ ಪಾಠ ಹೇಳಿಸಿಕೊಳ್ಳುವ ಅಗತ್ಯವಿಲ್ಲ ಎಂದು ಹೇಳಿದರು.

Continue Reading

ಕರ್ನಾಟಕ

Police Suspended : ಠಾಣೆಯಲ್ಲೇ ಕೈಮಿಲಾಯಿಸಿದ ಪೊಲೀಸ್​ ಅಧಿಕಾರಿಗಳಿಬ್ಬರು ಸಸ್ಪೆಂಡ್​​

Police Suspended :ಹೆಡ್​ಕಾನ್​ಸ್ಟೇಬಲ್​ ನೇತ್ರಾವತಿ ಎಂಬುವರ ಜತೆ ಅತ್ಯಾಚಾರ ಪ್ರಕರಣವೊಂದರ ಕುರಿತು ಮಂಜುನಾಥ್ ಮಾತನಾಡುತ್ತಿದ್ದರು ಎನ್ನಲಾಗಿದೆ. ಈ ವೇಳೆ ಬಂದ ಅಂಜನಾಮೂರ್ತಿ ಅವರು ಲೈನ್ ಕಂಪ್ಯೂಟರ್​ನಲ್ಲಿ ಟೈಪ್ ಮಾಡಿ ಪುಕ್ಸಟ್ಟೆ ಸಂಬಳ ತಗೋತಿದ್ದೀಯ ಎಂದು ಹೇಳಿದ್ದರು. ಈ ವೇಳೆ ಸಿಟ್ಟಿಗೆದ್ದ ಮಂಜುನಾಥ್​, ಬೇರೆಯವರಿಗೆ ಹೆದರಿಸಿದಂತಲ್ಲ. ನೀನೇ ಬಂದು ಇನ್ವೆಷ್ಟಿಗೇಷನ್ ಮಾಡು ಎಂದು ಮರುತ್ತರ ನೀಡಿದ್ದರು.

VISTARANEWS.COM


on

Police Suspended
Koo

ಬೆಂಗಳೂರು: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲೇ ಕಿತ್ತಾಡಿಕೊಂಡಿದ್ದ ಪೊಲೀಸ್ ಅಧಿಕಾರಿಗಳಿಬ್ಬರನ್ನು ದಕ್ಷಿಣ ವಿಭಾಗ ಡಿಸಿಪಿ ಲೋಕೇಶ್ ಜಗಲಾಸರ್ ಅಮಾನತು (Police Suspended) ಮಾಡಿದ್ದಾರೆ. ವಿಚಾರದ ಬಗ್ಗೆ ಇಲಾಖಾ ತನಿಖೆ ನಡೆಸುವಂತೆ ಆದೇಶಿಸಲಾಗಿದೆ. ಪುಟ್ಟೇನಹಳ್ಳಿ ಪೊಲೀಸ್ ಠಾಣೆಯ ಎಎಸ್​ಐ ಮಂಜುನಾಥ್ ಹಾಗೂ ಹೆಡ್​ಕಾನ್​​ಸ್ಟೇಬಲ್​ ಅಂಜನಾಮೂರ್ತಿ ಅಮಾನತುಗೊಂಡವರು.

ಠಾಣೆಯಲ್ಲಿ ಹೊಡೆದಾಡಿಕೊಂಡ ಕುರಿತು ತನಿಖೆ ನಡೆಸಿದಾಗ ಇಬ್ಬರ ತಪ್ಪೂ ಸಾಬೀತಾಗಿತ್ತು. ಹೀಗಾಗಿ ಅವರಿಬ್ಬರನ್ನೂ ಅಮಾನತು ಮಾಡಲು ಡಿಸಿಪಿ ಲೋಕೇಶ್ ಜಗಲಾಸರ್ ಆದೇಶ ಹೊರಡಿಸಿದ್ದಾರೆ. ಇವರಿಬ್ಬರೂ ಜುಲೈ 16ರಂದು ಠಾಣೆಯಲ್ಲಿ ಕರ್ತವ್ಯದ ಅವಧಿಯಲ್ಲಿ ಹೊಡೆದಾಡಿಕೊಂಡ ಬಗ್ಗೆ ಹಿರಿಯ ಅಧಿಕಾರಿಗಳಿಗೆ ದೂರು ನೀಡಲಾಗಿತ್ತು. ಇದು ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ಬಂದಿತ್ತು.

ಏನಿದು ಗಲಾಟೆ?

ಪುಟ್ಟೇನಹಳ್ಳಿ ಪೊಲೀಸ್ ಸಿಬ್ಬಂದಿಗಳಾದ ಅವರಿಬ್ಬರೂ ಸಾರ್ವಜನಿಕರ ಮುಂದೆಯೇ ಕಿತ್ತಾಟ ನಡೆಸಿಕೊಂಡಿದ್ದರು. ಈ ವೇಳೆ ಪರಸ್ಪರ ಅವಾಚ್ಯ ಪದಗಳಿಂದ ನಿಂದಿಸಿಕೊಂಡಿದ್ದರು. ಹೊರಗಡೆ ಬಂದ್ರೆ ಬೀದಿ ಹೆಣ ಮಾಡ್ತಿನಿ ಎಂದು ಪೊಲೀಸ್ ಠಾಣೆಯಲ್ಲಿಯೇ ಬೆದರಿಕೆ ಹಾಕಿಕೊಂಡಿದ್ದರು. ಈ ಬಗ್ಗೆ ಹೆಡ್​ಕಾನಸ್ಟೇಬಲ್​ ಅಂಜನಾಮೂರ್ತಿ ಜೀವ ಬೆದರಿಕೆ ಹಾಕಿದ್ದರು ಎಂದು ದೂರಿನಲ್ಲಿ ದಾಖಲಾಗಿತ್ತು.

ಹೆಡ್​ಕಾನ್​ಸ್ಟೇಬಲ್​ ನೇತ್ರಾವತಿ ಎಂಬುವರ ಜತೆ ಅತ್ಯಾಚಾರ ಪ್ರಕರಣವೊಂದರ ಕುರಿತು ಮಂಜುನಾಥ್ ಮಾತನಾಡುತ್ತಿದ್ದರು ಎನ್ನಲಾಗಿದೆ. ಈ ವೇಳೆ ಬಂದ ಅಂಜನಾಮೂರ್ತಿ ಅವರು ಲೈನ್ ಕಂಪ್ಯೂಟರ್​ನಲ್ಲಿ ಟೈಪ್ ಮಾಡಿ ಪುಕ್ಸಟ್ಟೆ ಸಂಬಳ ತಗೋತಿದ್ದೀಯ ಎಂದು ಹೇಳಿದ್ದರು. ಈ ವೇಳೆ ಸಿಟ್ಟಿಗೆದ್ದ ಮಂಜುನಾಥ್​, ಬೇರೆಯವರಿಗೆ ಹೆದರಿಸಿದಂತಲ್ಲ. ನೀನೇ ಬಂದು ಇನ್ವೆಷ್ಟಿಗೇಷನ್ ಮಾಡು ಎಂದು ಮರುತ್ತರ ನೀಡಿದ್ದರು.

ಇದನ್ನೂ ಓದಿ: Natasa Stankovic : ಹಾರ್ದಿಕ್ ಪಾಂಡ್ಯಗೆ ಡೈವೋರ್ಸ್​ ನೀಡಿದ್ದೇನೆ; ಪತ್ನಿ ನತಾಶಾ ಹೇಳಿಕೆ

ಕೋಪಗೊಂಡ ಅಂಜನಾಮೂರ್ತಿ ಕಾಲೆತ್ತಿ ಒದಿಯಲು ಮುಂದಾಗಿದ್ದರು ಎನ್ನಲಾಗಿದೆ. ಅಲ್ಲದೆ, ಪೆನ್ಷನ್ ಬರದೇ ಇರೋ ಮಾಡ್ತಿನಿ ಎಂದು ಹೇಳಿ ಅವಾಚ್ಯ ಪದಗಳಿಂದ ನಿಂದಿಸಿದ್ದರಂತೆ. ಈ ಬಗ್ಗೆ ಮಂಜುನಾಥ್ ಅವರು ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದಿದ್ದರು. ತಮಗೆ ಹೃದಯ ಸಂಬಂಧಿ ಕಾಯಿಲೆ ಇದೆ. ಎರಡು ಸಲ ಸ್ಟಂಟ್ ಹಾಕಿದ್ದೇನೆ. ಅಂಜನಾಮೂರ್ತಿಯಿಂದ ತೊಂದರೆ ಆಗುತ್ತಿದೆ ಎಂದು ಬರೆದುಕೊಂಡಿದ್ದರು.

Continue Reading

ಶಿವಮೊಗ್ಗ

Shivamogga News: ಕೂಡಲೇ ಬೆಳೆ ವಿಮೆ ಮಾಡಿಸಿಕೊಳ್ಳಲು ಸಂಸದ ಬಿ.ವೈ. ರಾಘವೇಂದ್ರ ಮನವಿ

Shivamogga News: ಪ್ರಸಕ್ತ ಸಾಲಿನಲ್ಲಿ ಅಧಿಕ ಮಳೆಯಾಗುತ್ತಿದ್ದು, ಪ್ರಮುಖ ನದಿಗಳು ತುಂಬಿ ಹರಿಯುತ್ತಿವೆ. ಈ ಕಾರಣದಿಂದ ನದಿಪಾತ್ರದ ಜಮೀನುಗಳಿಗೆ ಪ್ರವಾಹ ಎದುರಾಗಿದ್ದು, ರೈತ ಸಮೂಹ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುವಂತಾಗಿದೆ. ಆದ್ದರಿಂದ ಬೆಳೆ ವಿಮೆ ಮಾಡಿಸದ ರೈತರು ಕೂಡಲೇ ಬೆಳೆ ವಿಮೆಗೆ ಮುಂದಾಗಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ.

VISTARANEWS.COM


on

Farmers should get crop insurance immediately says MP BY Raghavendra
Koo

ಸೊರಬ: ಪ್ರಸಕ್ತ ಸಾಲಿನಲ್ಲಿ ಅಧಿಕ ಮಳೆಯಾಗುತ್ತಿದ್ದು, ಪ್ರಮುಖ ನದಿಗಳು ತುಂಬಿ ಹರಿಯುತ್ತಿವೆ. ಈ ಕಾರಣದಿಂದ ನದಿಪಾತ್ರದ ಜಮೀನುಗಳಿಗೆ ಪ್ರವಾಹ ಎದುರಾಗಿದ್ದು, ರೈತ ಸಮೂಹ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುವಂತಾಗಿದೆ. ಆದ್ದರಿಂದ ಬೆಳೆ ವಿಮೆ ಮಾಡಿಸದ ರೈತರು ಕೂಡಲೇ ಬೆಳೆ ವಿಮೆಗೆ ಮುಂದಾಗಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ (Shivamogga News) ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಮಳೆ ಹಾನಿ ಬಗ್ಗೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ನಂತರ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ಜಿಲ್ಲೆ ಕಳೆದ ಬಾರಿ ಬರಗಾಲ ಪರಿಸ್ಥಿತಿಯನ್ನು ಎದುರಿಸುವಂತಾಗಿತ್ತು. ಆದರೆ ಈ ಬಾರಿ ಮುಂಗಾರು ತಡವಾಗಿ ಪ್ರಾರಂಭವಾದರೂ ಉತ್ತಮ ಮಳೆಯಾಗುತ್ತಿದೆ. ಜಿಲ್ಲೆಯ ಪ್ರಮುಖ ನದಿಗಳು ತುಂಬಿ ಹರಿಯುತ್ತಿವೆ ಎಂದರು.

ಇದನ್ನೂ ಓದಿ: Uttara Kannada News: ಗೋಕರ್ಣದ ʼಅಶೋಕೆʼಯಲ್ಲಿ ಜು. 21ರಿಂದ ರಾಘವೇಶ್ವರಶ್ರೀ ಚಾತುರ್ಮಾಸ್ಯ

ತಾಲೂಕಿನ ದಂಡಾವತಿ ಮತ್ತು ವರದಾ ನದಿಗಳು ಈಗಾಗಲೇ ತುಂಬಿ ಹರಿಯುತ್ತಿದ್ದು, ಅಪಾಯದ ಮಟ್ಟ ತಲುಪಿವೆ. ವಿಶೇಷವಾಗಿ ವರದಾ ನದಿ ಪ್ರವಾಹದಿಂದ ತಾಲೂಕಿನ ಅಬಸೆ, ಕಡಸೂರು, ಹೊಳೆಜೋಳದಗುಡ್ಡೆ, ತಟ್ಟಿಕೆರೆ, ಹೆಚ್ಚೆ, ಹಿರೇನೆಲ್ಲೂರು, ಸೈದೂರು, ತಾಳಗುಪ್ಪ ಗ್ರಾಮಗಳ ರೈತರ ಜಮೀನುಗಳು ಜಲಾವೃತವಾಗಿವೆ. ಸುಮಾರು 650 ಹೆಕ್ಟೇರ್ ಭತ್ತ ಮುಳುಗಡೆಯಾಗಿದೆ ಎಂದು ಹೇಳಿದರು.

ಇನ್ನೂ ಬೆಳೆ ವಿಮೆ ಮಾಡಿಸದ ರೈತರಿಗೆ ಜುಲೈ 31 ರವರೆಗೆ ಅವಕಾಶವಿದೆ. ರೈತರು ಇದರ ಸದುಪಯೋಗ ಪಡೆಯಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು.

ಹಾನಿಯಾದ ವರದಿ ಸರ್ಕಾರಕ್ಕೆ ಸಲ್ಲಿಸಿ

ಜಿಲ್ಲೆಯಲ್ಲಿ ಜೂನ್ ತಿಂಗಳಿನಲ್ಲಿ ವಾಡಿಕೆಗಿಂತ ಶೇ. 36ರಷ್ಟು ಮಳೆ ಕೊರತೆ ಎದುರಾಗಿತ್ತು. ಜುಲೈ ತಿಂಗಳ ವಾಡಿಕೆ ಮಳೆ 423 ಮಿ.ಮೀ. ಆದರೆ 577 ಮಿ.ಮೀ. ಮಳೆಯಾಗಿದ್ದು, ಶೇ. 36ರಷ್ಟು ಅಧಿಕ ಮಳೆಯಾಗಿದೆ. ತಾಲೂಕಿನಾದ್ಯಂತ 21 ಮನೆಗಳಿಗೆ ಭಾಗಶಃ ಹಾನಿಯಾಗಿದೆ. 2 ಎಮ್ಮೆ, 1 ಹಸು ಮೃತಪಟ್ಟಿವೆ. ಈ ಕಾರಣ ತಹಸೀಲ್ದಾರ್ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿಯಾಗಿ ನೆರೆ ಪ್ರದೇಶದ ಗ್ರಾಮ ಮತ್ತು ಜಮೀನುಗಳಿಗೆ ಭೇಟಿ ನೀಡಿ ಮಳೆಯಿಂದ ಹಾನಿಯಾದ ಬಗ್ಗೆ ಸರ್ಕಾರಕ್ಕೆ ಪ್ರಾಥಮಿಕ ವರದಿ ಸಲ್ಲಿಸುವಂತೆ ತಿಳಿಸಲಾಗಿದೆ ಎಂದರು.

ಮಳೆಯಿಂದ ಮನೆಯ ಒಂದು ಭಾಗದ ಗೋಡೆ ಬಿದ್ದರೆ ಇಡೀ ಮನೆಗೆ ಹಾನಿಯಾದಂತೆ. ಹಾಗಾಗಿ ಅಧಿಕಾರಿಗಳು ಸಂಪೂರ್ಣ ಪರಿಹಾರಕ್ಕೆ ಇಂತಹ ಮನೆಗಳನ್ನೂ ಪರಿಗಣಿಸಬೇಕು ಎಂದ ಅವರು, ರಸ್ತೆಗಳಲ್ಲಿ ಸರಾಗವಾಗಿ ನೀರು ಹರಿಯದೇ ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ಇದರಿಂದ ಅಪಘಾತಗಳು ಸಂಭವಿಸುತ್ತಿವೆ. ಜಿ.ಪಂ. ಮತ್ತು ಪಿ.ಡಬ್ಲ್ಯೂ.ಡಿ. ಇಲಾಖೆ ಹೆಚ್ಚಿನ ಗಮನ ಹರಿಸಿ, ರಸ್ತೆಯ ಎರಡೂ ಬದಿಗಳಲ್ಲಿ ಕಾಲುವೆ ನಿರ್ಮಿಸುವ ಮೂಲಕ ನೀರು ಸರಾಗವಾಗಿ ಹರಿಯಲು ಹೆಚ್ಚಿನ ನಿಗಾ ವಹಿಸಬೇಕು ಎಂದರು.

ಇದನ್ನೂ ಓದಿ: Kannada New Movie: ಹಾರರ್ ಜಾನರ್‌ನ ʼಹಗ್ಗʼ ಚಿತ್ರದ ಟೀಸರ್ ಅನಾವರಣ

ಸುದ್ದಿಗೋಷ್ಠಿಯಲ್ಲಿ ತಹಸೀಲ್ದಾರ್ ಮಂಜುಳಾ ಹೆಗಡಾಳ್, ಕೃಷಿ ಸಹಾಯಕ ನಿರ್ದೇಶಕ ಕೆ.ಜಿ. ಕುಮಾರ್ ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಮತ್ತು ಮಾಜಿ ಶಾಸಕ ಕುಮಾರ ಬಂಗಾರಪ್ಪ, ಬಿಜೆಪಿ ಮಂಡಲ ಅಧ್ಯಕ್ಷ ಪ್ರಕಾಶ್ ತಲಕಾಲುಕೊಪ್ಪ, ಪ್ರಧಾನ ಕಾರ್ಯದರ್ಶಿ ಶಿವಕುಮಾರ ಕಡಸೂರು, ಜಿಲ್ಲಾ ಕಾರ್ಯದರ್ಶಿ ದೇವೇಂದ್ರಪ್ಪ ಚನ್ನಾಪುರ, ಮುಖಂಡರಾದ ಗುರುಕುಮಾರ ಪಾಟೀಲ್, ಪ್ರಕಾಶ್ ಅಗಸನಹಳ್ಳಿ ಹಾಗೂ ಇತರರು ಇದ್ದರು.

Continue Reading

ಚಿಕ್ಕಬಳ್ಳಾಪುರ

Kaivara Tatayya: ಕೈವಾರ ಶ್ರೀ ಯೋಗಿನಾರೇಯಣ ಮಠದಲ್ಲಿ ಜು.19ರಿಂದ ಗುರುಪೂಜಾ ಮಹೋತ್ಸವ, ಸಂಗೀತೋತ್ಸವ

Kaivara Tatayya: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೈವಾರದ ಶ್ರೀಕ್ಷೇತ್ರ ಸದ್ಗುರು ಶ್ರೀ ಯೋಗಿನಾರೇಯಣ ಮಠದಲ್ಲಿ ಗುರುಪೂರ್ಣಿಮಾ ಪ್ರಯುಕ್ತ ಜು.19ರಿಂದ ಮೂರು ದಿನಗಳ ಕಾಲ ಗುರುಪೂಜಾ ಮಹೋತ್ಸವ ಹಾಗೂ ಸಂಗೀತೋತ್ಸವ ನಡೆಯಲಿದೆ.

VISTARANEWS.COM


on

Guru Puja Mahotsav and Sangeethotsava from July 19th at Kaiwara Srikshethra Sadguru Sri Yoginareyan Mutt
Koo

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೈವಾರದ ಶ್ರೀಕ್ಷೇತ್ರ ಸದ್ಗುರು ಶ್ರೀ ಯೋಗಿನಾರೇಯಣ ಮಠದಲ್ಲಿ (Kaivara Tatayya) ಗುರುಪೂರ್ಣಿಮಾ ಪ್ರಯುಕ್ತ ಜು.19ರಿಂದ ಮೂರು ದಿನಗಳ ಕಾಲ ಗುರುಪೂಜಾ ಮಹೋತ್ಸವ ಹಾಗೂ ಸಂಗೀತೋತ್ಸವ ಏರ್ಪಡಿಸಲಾಗಿದೆ.

ಜು.19ರಂದು ಶುಕ್ರವಾರ ಸಂಜೆ ವಿಶೇಷ ಕಾರ್ಯಕ್ರಮಗಳು ನಡೆಯಲಿದ್ದು, ಪಿ.ಜೆ.ಬ್ರಹ್ಮಾಚಾರಿ ಮತ್ತು ತಂಡದವರಿಂದ ಪಿಟೀಲು ಸೋಲೋ, ಅಧಿತಿ ಪ್ರಹ್ಲಾದ್‌, ವಿನಯ್‌ ಶರ್ವ, ಲಕ್ಷ್ಮೀ ಹೊಸೂರು, ಡಿ.ಆರ್‌. ರಾಜಪ್ಪ ಅವರ ತಂಡದವರಿಂದ ಗಾಯನ ಕಾರ್ಯಕ್ರಮ ನಡೆಯಲಿದೆ.

ಜು.20 ರಂದು ಶನಿವಾರ ಸಂಜೆ 5.30ಕ್ಕೆ ಸಿ.ಕೆ. ಪತಂಜಲಿ ಮತ್ತು ವಿಶ್ವೇಶ್ವರನ್‌ ತಂಡದವರಿಂದ ಕೊಳಲು, ಕೇರಳದ ಸೂರ್ಯಗಾಯತ್ರಿ, ಚೆನ್ನೈನ ಸಿಕ್ಕಿಲ್‌ ಸಿ. ಗುರುಚರಣ್‌ ಮತ್ತು ತಂಡದವರಿಂದ ಗಾಯನ, ಚೆನ್ನೈನ ಪದ್ಮಶ್ರೀ ಎ. ಕನ್ಯಾಕುಮಾರಿ ಮತ್ತು ತಂಡದವರಿಂದ ಪಿಟೀಲು ಸೋಲೋ ಮತ್ತು ಬೆಂಗಳೂರಿನ ಶ್ರೀ ರುದ್ರಾಕ್ಷಾ ನಾಟ್ಯಾಲಯ ಕಲಾವಿದರಿಂದ ಭರತನಾಟ್ಯ ಮತ್ತು ಡಾ.ಎ. ವಿಜಯ್‌ ಕಾರ್ತೀಕೇಯನ್‌, ಮಲೈ ಎಂ. ಕಾರ್ತಿಕೇಯನ್‌ ಅವರ ತಂಡದವರಿಂದ ನಾದಸ್ವರ ಏರ್ಪಡಿಸಲಾಗಿದೆ.

ಇದನ್ನೂ ಓದಿ: Ratna Bhandar: ಒಂದೇ ವಾರದಲ್ಲಿ ಎರಡನೇ ಬಾರಿ ತೆರೆದ ಪುರಿ ಜಗನ್ನಾಥನ ʼರತ್ನ ಭಂಡಾರʼ

ಜು.21 ರಂದು ಭಾನುವಾರ ಗುರುಪೂಜಾ ಮಹೋತ್ಸವ ಜರುಗಲಿದ್ದು, ಬೆಳಿಗ್ಗೆ 5 ಗಂಟೆಗೆ ಸುಪ್ರಸಿದ್ಧ ವಿದ್ವಾಂಸರುಗಳಿಂದ ನಾದಸ್ವರ, ತವಿಲ್‌ ವಾದನ ಹಾಗೂ ಸಂಗೀತ ಸಮರ್ಪಣೆ, ಬೆಳಿಗ್ಗೆ 9.30ಕ್ಕೆ ವಿದ್ವಾಂಸರುಗಳಿಂದ ಸದ್ಗುರು ಶ್ರೀ ಯೋಗಿ ನಾರೇಯಣ ತಾತಯ್ಯನವರ ವಿರಚಿತ ಬೋಧನಾ ಕೃತಿಗಳ ಗೋಷ್ಠಿ ಗಾಯನ ಕಾರ್ಯಕ್ರಮ ನಡೆಯಲಿದೆ.

ಬಳಿಕ ಬೆಳಿಗ್ಗೆ 10.30 ರಿಂದ 12.30ರವರೆಗೆ ಸದ್ಗುರು ಶ್ರೀ ಯೋಗಿ ನಾರೇಯಣ ತಾತಯ್ಯನವರಿಗೆ ಗುರುಪೂಜೆ ನಡೆಯಲಿದೆ. ಧರ್ಮಾಧಿಕಾರಿ ಡಾ.ಎಂ.ಆರ್‌. ಜಯರಾಮ್‌ ಅವರು ಗುರುಸಂದೇಶ ನೀಡಲಿದ್ದಾರೆ. ಕರ್ನಾಟಕದ ಪ್ರಸಿದ್ಧ ಮೃದಂಗ ವಿದ್ವಾಂಸ ವಿ. ಪ್ರವೀಣ್‌ ಮತ್ತು ಸದ್ಗುರು ನಾರೇಯಣ ತಾತಯ್ಯನವರ ಭಜನಾ ಭಕ್ತ ಭೀಮಗಾನಪಲ್ಲಿ ಕೆ.ರಾಜಪ್ಪ ಅವರಿಗೆ ವಿಶೇಷ ಸನ್ಮಾನ ಏರ್ಪಡಿಸಲಾಗಿದೆ.

ಸಂಜೆ 5 ಗಂಟೆಯಿಂದ ದೆಹಲಿಯ ಸರಸ್ವತಿ ರಾಜಗೋಪಾಲನ್‌ ತಂಡದವರಿಂದ ವೀಣಾವಾದನ, ಭೈರತಿ ಅಂಜಿನಪ್ಪ, ತೇಜಸ್ವಿನಿ ಮನೋಜ್‌ ಕುಮಾರ್‌, ಕೆ.ಸುಧಾಮಣಿ ವೆಂಕಟರಾಘವನ್‌ ಅವರ ತಂಡಗಳಿಂದ ಗಾಯನ ಕಾರ್ಯಕ್ರಮ, ಸುಬ್ಬಲಕ್ಷ್ಮೀ ಮತ್ತು ತಂಡದವರಿಂದ ಸ್ಯಾಕ್ಸೋಪೋನ್‌, ಮಹಾಲಿಂಗಯ್ಯ ಮಠದ್‌ ಮತ್ತು ತಂಡದಿಂದ ಹಿಂದೂಸ್ಥಾನಿ ಗಾಯನ ಏರ್ಪಡಿಸಲಾಗಿದೆ.

ಇದನ್ನೂ ಓದಿ: Sensex Jump: ಷೇರುಪೇಟೆಯಲ್ಲಿ ಸಾರ್ವಕಾಲಿಕ ದಾಖಲೆ ಬರೆದ ಸೆನ್ಸೆಕ್ಸ್, 24,000 ಮೀರಿದ ನಿಫ್ಟಿ

ಜು.22 ರಂದು ಸೋಮವಾರ ಬೆಳಗ್ಗೆ 6 ಗಂಟೆಗೆ 72 ಗಂಟೆಗಳ ನಿರಂತರ ಸಂಗೀತ ಕಾರ್ಯಕ್ರಮಗಳ ಮುಕ್ತಾಯ ಮತ್ತು ಮಹಾಮಂಗಳಾರತಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Continue Reading
Advertisement
Karnataka Assembly
ಪ್ರಮುಖ ಸುದ್ದಿ5 mins ago

Karnataka Assembly : ಗದ್ದಲದಲ್ಲೇ ಮುಕ್ತಾಯಗೊಂಡ ಮೂರನೇ ದಿನದ ವಿಧಾನಮಂಡಲ ಅಧಿವೇಶನ

Udhayanidhi Stalin
ದೇಶ27 mins ago

Udhayanidhi Stalin: ತಮಿಳುನಾಡು ಉಪ ಮುಖ್ಯಮಂತ್ರಿಯಾಗಿ ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್?

The Ambani family gave a wedding special reception to the staff and housekeepers
ದೇಶ35 mins ago

Anant Radhika Wedding: ಸಿಬ್ಬಂದಿ, ಮನೆಗೆಲಸದವರಿಗೆ ಮದುವೆಯ ಭರ್ಜರಿ ಔತಣಕೂಟ ನೀಡಿದ ಅಂಬಾನಿ ಫ್ಯಾಮಿಲಿ!

Police Suspended
ಕರ್ನಾಟಕ1 hour ago

Police Suspended : ಠಾಣೆಯಲ್ಲೇ ಕೈಮಿಲಾಯಿಸಿದ ಪೊಲೀಸ್​ ಅಧಿಕಾರಿಗಳಿಬ್ಬರು ಸಸ್ಪೆಂಡ್​​

Train Derail
ದೇಶ1 hour ago

Train Derail: “ಪ್ರಚಾರದ ಗೀಳು ಬಿಟ್ಟು ರೈಲುಗಳ ಸುರಕ್ಷತೆ ಬಗ್ಗೆ ಗಮನ ಹರಿಸಿ”- ಪ್ರಧಾನಿ ಮೋದಿ ವಿರುದ್ಧ ಖರ್ಗೆ ವಾಗ್ದಾಳಿ

Natasa Stankovic
ಪ್ರಮುಖ ಸುದ್ದಿ2 hours ago

Natasa Stankovic : ಹಾರ್ದಿಕ್ ಪಾಂಡ್ಯಗೆ ಡೈವೋರ್ಸ್​ ನೀಡಿದ್ದೇನೆ; ಪತ್ನಿ ನತಾಶಾ ಹೇಳಿಕೆ

Neet UG
ದೇಶ2 hours ago

NEET UG 2024: ನೀಟ್‌ ಅಕ್ರಮ; ನಾಲ್ವರು ಏಮ್ಸ್‌ ವಿದ್ಯಾರ್ಥಿಗಳು ಸಿಬಿಐ ಬಲೆಗೆ

Farmers should get crop insurance immediately says MP BY Raghavendra
ಶಿವಮೊಗ್ಗ3 hours ago

Shivamogga News: ಕೂಡಲೇ ಬೆಳೆ ವಿಮೆ ಮಾಡಿಸಿಕೊಳ್ಳಲು ಸಂಸದ ಬಿ.ವೈ. ರಾಘವೇಂದ್ರ ಮನವಿ

Guru Puja Mahotsav and Sangeethotsava from July 19th at Kaiwara Srikshethra Sadguru Sri Yoginareyan Mutt
ಚಿಕ್ಕಬಳ್ಳಾಪುರ3 hours ago

Kaivara Tatayya: ಕೈವಾರ ಶ್ರೀ ಯೋಗಿನಾರೇಯಣ ಮಠದಲ್ಲಿ ಜು.19ರಿಂದ ಗುರುಪೂಜಾ ಮಹೋತ್ಸವ, ಸಂಗೀತೋತ್ಸವ

Shiradi Ghat
ಪ್ರಮುಖ ಸುದ್ದಿ3 hours ago

Shiradi Ghat: ಭೂಕುಸಿತ; ಶಿರಾಡಿ ಘಾಟ್​ನಲ್ಲಿ ಸಂಚಾರ ನಿಷೇಧ ​; ಬೆಂಗಳೂರು- ಮಂಗಳೂರು ಸಂಪರ್ಕ ಬಹುತೇಕ ಕಟ್​

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ7 hours ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ8 hours ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ2 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ3 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ4 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ4 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ4 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ4 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ4 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

ಟ್ರೆಂಡಿಂಗ್‌