Tightening of checks at check posts, Cash, liquor, items worth Rs 19.14 crore seizedKarnataka Election: ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ಬಿಗಿ; ನಗದು, ಮದ್ಯ ಸೇರಿ 53.28 ಲಕ್ಷ ರೂ.ಮೌಲ್ಯದ ವಸ್ತುಗಳ ವಶ - Vistara News

ಕರ್ನಾಟಕ

Karnataka Election: ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ಬಿಗಿ; ನಗದು, ಮದ್ಯ ಸೇರಿ 53.28 ಲಕ್ಷ ರೂ.ಮೌಲ್ಯದ ವಸ್ತುಗಳ ವಶ

Karnataka Election: ಬಾಗಲಕೋಟೆ, ಕೋಲಾರ, ರಾಮನಗರ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಗದು, ಮದ್ಯ ಸೇರಿ 53.28 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

VISTARANEWS.COM


on

ಬಾಗಲಕೋಟೆಯಲ್ಲಿ ಕಬ್ಬಿನ ಸಿಪ್ಪೆಯಿಂದ ಮರೆಮಾಚಿ ಲಾರಿಯಲ್ಲಿ ಸಾಗಿಸುತ್ತಿದ್ದ 34.14 ಲಕ್ಷ ರೂಪಾಯಿ ಮೌಲ್ಯದ ಗೋಡೆ ಗಡಿಯಾರಗಳನ್ನು ವಶಕ್ಕೆ ಪಡೆಯಲಾಗಿದೆ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿಧಾನಸಭಾ ಚುನಾವಣೆ (Karnataka Election) ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಚೆಕ್‌ಪೋಸ್ಟ್‌ಗಳಲ್ಲಿ ವಾಹನ ತಪಾಸಣೆಗೆ ಬಿಗಿ ಕ್ರಮ ಕೈಗೊಳ್ಳಲಾಗಿದೆ. ಹೀಗಾಗಿ ಅಕ್ರಮವಾಗಿ, ದಾಖಲೆ ಇಲ್ಲದೆ ಸಾಗಿಸುವ ಹಣ, ಮದ್ಯ ಹಾಗೂ ಮತದಾರರಿಗೆ ಹಂಚಲು ಸಾಗಿಸುವ ಉಡುಗೊರೆಗಳನ್ನು ಪೊಲೀಸರು ಜಪ್ತಿ ಮಾಡುತ್ತಿದ್ದಾರೆ. ಈ ನಡುವೆ ಬಾಗಲಕೋಟೆ, ಕೋಲಾರ, ರಾಮನಗರ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಗದು, ಮದ್ಯ ಸೇರಿ 53.28 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ಪೊಲೀಸರು ಗುರುವಾರ ವಶಕ್ಕೆ ಪಡೆದಿದ್ದಾರೆ.

ಕಬ್ಬಿನ ಸಿಪ್ಪೆಯಲ್ಲಿ ಮರೆಮಾಚಿ ಸಾಗಾಟ; 34.14 ಲಕ್ಷ ರೂ ಮೌಲ್ಯದ ಗೋಡೆ ಗಡಿಯಾರಗಳ ಜಪ್ತಿ

ಬಾಗಲಕೋಟೆ: ಕಬ್ಬಿನ ಸಿಪ್ಪೆಯಲ್ಲಿ (ಬಗ್ಯಾಸ್) ಮರೆಮಾಚಿ ಸಾಗಿಸುತ್ತಿದ್ದ 34.14 ಲಕ್ಷ ರೂಪಾಯಿ ಮೌಲ್ಯದ 2 ಲೋಡ್‌ ಗೋಡೆ ಗಡಿಯಾರಗಳನ್ನು ನಗರದಲ್ಲಿ ವಶಕ್ಕೆ ಪಡೆಯಲಾಗಿದೆ. ಗಡಿಯಾರಗಳ ಮೇಲೆ ವಿಧಾನ ಪರಿಷತ್ ಮಾಜಿ ಸದಸ್ಯ, ಕಾಂಗ್ರೆಸ್‌ ನಾಯಕ ಎಸ್.ಆರ್. ಪಾಟೀಲ್ ಭಾವಚಿತ್ರ ಕಂಡುಬಂದಿದೆ. ಮತದಾರರಿಗೆ ಹಂಚಲು ಗೋಡೆ ಗಡಿಯಾರಗಳನ್ನು ಸಾಗಿಸುತ್ತಿದ್ದ ಹಿನ್ನೆಲೆಯಲ್ಲಿ ಗಡಿಯಾರಗಳನ್ನು ನವಗನಗರ ಠಾಣೆ ಪೊಲೀಸರು ಜಪ್ತಿ ಮಾಡಿದ್ದಾರೆ.

ಇದನ್ನೂ ಓದಿ | Robbery Case: ಅತ್ತ ಸರಸಕ್ಕಾಗಿ ಸರ ಕದ್ದ ಮೂವರು ಹೆಂಡಿರ ಮುದ್ದಿನ ಗಂಡ; ಇತ್ತ ದರೋಡೆಗಿಳಿದ ಆಟೊ ಚಾಲಕರಿಬ್ಬರ ಸೆರೆ

ಒಂದು ಲಾರಿಯಲ್ಲಿ 420 ಹಾಗೂ ಮತ್ತೊಂದು ಲಾರಿಯಲ್ಲಿ 390 ಬಾಕ್ಸ್ ಪತ್ತೆಯಾಗಿವೆ. ಒಂದೊಂದು ಬಾಕ್ಸ್‌ನಲ್ಲಿ 10 ಗೋಡೆ ಗಡಿಯಾರಗಳಿವೆ. ಎಸ್.ಆರ್. ಪಾಟೀಲ್ ವಿಜಯಪುರ ಜಿಲ್ಲೆ ದೇವರಹಿಪ್ಪರಗಿ ಕ್ಷೇತ್ರದ ಕಾಂಗ್ರೆಸ್ ಪ್ರಬಲ ಆಕಾಂಕ್ಷಿಯಾಗಿದ್ದಾರೆ.

ಬಾಗಲಕೋಟೆ ಎಪಿಎಮ್‌ಸಿ ಕ್ರಾಸ್ ಬಳಿ ಬುಧವಾರ ತಡರಾತ್ರಿ ಲಾರಿಗಳನ್ನು ವಶಕ್ಕೆ ಪಡೆದಿದ್ದು, ಗೋಡೆ ಗಡಿಯಾರಗಳ ನಿಖರ ಮೌಲ್ಯ, ಎಲ್ಲಿಂದ ಎಲ್ಲಿಗೆ ಸಾಗಿಸುತ್ತಿದ್ದರು ಎಂಬ ಬಗ್ಗೆ ಪೊಲೀಸರು ಹಾಗೂ ಚುನಾವಣಾ ಅಧಿಕಾರಿಗಳು ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.

ನವನಗರದ ಡಿಎಆರ್ ಕಚೇರಿ ಬಳಿ ನಿಲ್ಲಿಸಲಾಗಿದ್ದ ಲಾರಿಗಳನ್ನು ಬಾಗಲಕೋಟೆ ಡಿಸಿ ಪಿ. ಸುನಿಲ್ ಕುಮಾರ,‌ ಸಿಇಒ ಟಿ. ಭೂಬಾಲನ್, ಎಸ್.ಪಿ.ಜಯಪ್ರಕಾಶ್, ಎಸಿ ಶ್ವೇತಾ ಬಿಡಿಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೆಜಿಎಫ್‌ ಬಾರ್‌ನಲ್ಲಿ 11.14 ಲಕ್ಷ ರೂಪಾಯಿ ಮೌಲ್ಯದ ಮದ್ಯ ವಶ

ಕೋಲಾರ: ಜಿಲ್ಲೆಯ ಕೆಜಿಎಫ್ ನಗರದ ಎಲಿಗೆಂಟ್ ಬಾರ್‌ನಲ್ಲಿ‌ ಅಕ್ರಮವಾಗಿ ದಾಸ್ತಾನು ಮಾಡಿದ್ದ ಸುಮಾರು 11.14 ಲಕ್ಷ ರೂಪಾಯಿ ಮೌಲ್ಯದ ಮದ್ಯವನ್ನು ಅಬಕಾರಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬಾರ್‌ನಲ್ಲಿದ್ದ ನಾಗೇಶ್ ಹಾಗೂ ಬಾರ್ ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿದೆ.‌

ರಾಮನಗರದಲ್ಲಿ 7 ಲಕ್ಷ ರೂಪಾಯಿ ವಶಕ್ಕೆ

ಹಾರೋಹಳ್ಳಿ ತಾಲೂಕಿನ ತಟ್ಟೆಕೆರೆ ಚೆಕ್ ಪೋಸ್ಟ್‌ನಲ್ಲಿ 2 ಲಕ್ಷ ರೂಪಾಯಿ ಜಪ್ತಿ ಮಾಡಲಾಗಿದೆ.

ರಾಮನಗರ: ಜಿಲ್ಲೆಯ ಎರಡು ಸ್ಥಳಗಳಲ್ಲಿ ದಾಖಲೆಯಿಲ್ಲದೇ ಅಕ್ರಮವಾಗಿ ಸಾಗಿಸುತ್ತಿದ್ದ 7 ಲಕ್ಷ ರೂ.ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಮನಗರ ತಾಲೂಕಿನ ಹನುಮಂತನಗರ ಚೆಕ್‌ಪೋಸ್ಟ್‌ನಲ್ಲಿ ಇನ್ನೋವಾ ಕಾರಿನಿಂದ 5 ಲಕ್ಷ ರೂ.ಗಳನ್ನು ಜಪ್ತಿ ಮಾಡಲಾಗಿದೆ. ಬೆಂಗಳೂರಿನಿಂದ ಮೈಸೂರಿಗೆ ಜಯಂತ್ ಎಂಬುವವರು ಹಣ ಸಾಗಿಸುತ್ತಿದ್ದಾಗ ಪೋಲಿಸರು ಹಣ ಜಪ್ತಿ ಮಾಡಿದ್ದಾರೆ. ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Drugs Case : ಅಕ್ರಮ ಗಾಂಜಾ ಮಾರಾಟ; ಮೂವರು ಆರೋಪಿಗಳು ಮಾಲು ಸಮೇತ ಬಂಧನ

ಮತ್ತೊಂದೆಡೆ ಹಾರೋಹಳ್ಳಿ ತಾಲೂಕಿನ ತಟ್ಟೆಕೆರೆ ಚೆಕ್ ಪೋಸ್ಟ್‌ನಲ್ಲಿ ಕಾರಿನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2 ಲಕ್ಷ ರೂ.ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಜಿಗಣಿ ಮಾರ್ಗವಾಗಿ ಹಾರೋಹಳ್ಳಿ ಬರುತಿದ್ದ ಶಿವಣ್ಣ ಎಂಬುವವರ ಕಾರನ್ನು ತಪಾಸಣೆ ಮಾಡಿದಾಗ ಹಣ ಪತ್ತೆಯಾಗಿದೆ. ಹಾರೋಹಳ್ಳಿ ತಹಸೀಲ್ದಾರ್ ವಿಜಿಯಣ್ಣ ಹಾರೋಹಳ್ಳಿ ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.

ಚನ್ನಪಟ್ಟಣದಲ್ಲಿ 975 ಅಕ್ಕಿ ಮೂಟೆ ವಶ: ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕೋಲೂರು ಚೆಕ್ ಪೋಸ್ಟ್‌ನಲ್ಲಿ ಮದ್ದೂರಿನಿಂದ ಬೆಂಗಳೂರಿಗೆ ಸಾಗಿಸುತ್ತಿದ್ದ 25 ಕೆ‌.ಜಿ ತೂಕದ 975 ಅಕ್ಕಿ ಮೂಟೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಕಾಳ ಸಂತೆಯಲ್ಲಿ ಮಾರಾಟ ಮಾಡಲು ಸಾಗಾಟ ಮಾಡುತ್ತಿರುವುದಾಗಿ ಕಂಟೈನರ್ ಚಾಲಕ ಮಾಹಿತಿ ನೀಡಿದ್ದಾನೆ. ಬಳಿಕ ಪೊಲೀಸರಿಗೆ ಕಣ್ತಪ್ಪಿಸಿ ಕಂಟೈನರ್ ಚಾಲಕ ಪರಾರಿಯಾಗಿದ್ದಾನೆ. ಮೇಲ್ನೋಟಕ್ಕೆ ಪಡಿತರ ಅಕ್ಕಿ ಎಂದು ಕಂಡುಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದು, ಚನ್ನಪಟ್ಟಣ ನಿವಾಸಿ ಸೈಯದ್ ಮಿರಾಜುದ್ದಿನ್ ಹಾಗೂ ಚಾಲಕನ ಮೇಲೆ ಚನ್ನಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರವಾಸಿಗರ ಕಾರಿನಲ್ಲಿದ್ದ 1 ಲಕ್ಷ ರೂಪಾಯಿ ಸೀಜ್

ಚಿಕ್ಕಮಗಳೂರು: ಜಿಲ್ಲೆಗೆ ಬಂದ ಪ್ರವಾಸಿಗರಿಗೂ ಚುನಾವಣೆ ನೀತಿ ಸಂಹಿತೆ ಎಫೆಕ್ಟ್ ಆಗಿದೆ. ಮೂಡಿಗೆರೆ ತಾಲೂಕಿನ ಕೋಟಿಗೆರ ಚೆಕ್ ಪೋಸ್ಟ್‌ನಲ್ಲಿ ಪ್ರವಾಸಿಗರ ಕಾರಿನಲ್ಲಿದ್ದ 1 ಲಕ್ಷ ಹಣವನ್ನು ಸೀಜ್‌ ಮಾಡಲಾಗಿದೆ. ಸೂಕ್ತ ದಾಖಲೆ ಇಲ್ಲದ ಹಿನ್ನೆಲೆಯಲ್ಲಿ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರಾಮನಗರದ ಬಂದಿದ್ದ ಪ್ರವಾಸಿಗರು ಧರ್ಮಸ್ಥಳ ಹಾಗೂ ಸುಬ್ರಹ್ಮಣ್ಯಕ್ಕೆ ಹೊರಟಿದ್ದರು. ಪೊಲೀಸರು ಹಣ ವಶಕ್ಕೆ ಪಡೆದ ಹಿನ್ನೆಲೆಯಲ್ಲಿ ಅತ್ತ ಪ್ರವಾಸಕ್ಕೂ ಹೋಗದೆ ಇತ್ತ ಹಣವು ಇಲ್ಲದೆ ಪರದಾಡಬೇಕಾಯಿತು. ಒಂದು ಲಕ್ಷ ರೂಪಾಯಿಗೆ ಯಾವ ದಾಖಲೆ ಕೊಡೋಣ ಎಂದು ಪ್ರವಾಸಿಗರು ಅಳಲು ತೋಡಿಕೊಂಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Prajwal Revanna Case: ಮೊಮ್ಮಗನ ದೆಸೆಯಿಂದ ದೇವೇಗೌಡರ ಆರೋಗ್ಯ ಏರುಪೇರು, ಕುಟುಂಬದಿಂದ ತೀವ್ರ ನಿಗಾ

Prajwal Revanna Case: ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು, ಹಿರಿಮಗ ಹಾಗೂ ಮೊಮ್ಮಗನ ಹಗರಣಗಳಿಂದಾಗಿ ತೀವ್ರವಾಗಿ ನೊಂದಿದ್ದಾರೆ. ಇದರಿಂದಾಗಿ, ಇತ್ತೀಚೆಗೆ ತಾನೇ ಆಗಿರುವ ಬಿಜೆಪಿ- ಜೆಡಿಎಸ್‌ ಮೈತ್ರಿಯ ಮೇಲೂ ದುಷ್ಪರಿಣಾಮ ಆಗುವ ಸಾಧ್ಯತೆಯೂ ಅವರನ್ನು ಬಾಧಿಸುತ್ತಿದೆ.

VISTARANEWS.COM


on

HD Deve gowda prajwal revanna case
Koo

ಬೆಂಗಳೂರು: ಮೊಮ್ಮಗ, ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಪೆನ್ ಡ್ರೈವ್ ಪ್ರಕರಣ (Pen drive Case) ಉಂಟುಮಾಡಿರುವ ಚಿಂತೆ ಹಾಗೂ ಒತ್ತಡದ ದೆಸೆಯಿಂದ ಮಾಜಿ ಪ್ರಧಾನಿ ದೇವೇಗೌಡರ (hd Deve gowda) ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ ಎಂದು ತಿಳಿದುಬಂದಿದೆ. ಹೀಗಾಗಿ ದೇವೇಗೌಡ ಕುಟುಂಬದ ಸದಸ್ಯರು ಅಲರ್ಟ್‌ ಆಗಿದ್ದು, ತೀವ್ರ ನಿಗಾ ಇರಿಸಿದ್ದಾರೆ.

ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು, ಹಿರಿಮಗ ಹಾಗೂ ಮೊಮ್ಮಗನ ಹಗರಣಗಳಿಂದಾಗಿ ತೀವ್ರವಾಗಿ ನೊಂದಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಈ ಪ್ರಕರಣದಲ್ಲಿ ಕೈ ತೊಳೆದುಕೊಂಡು ಬೆನ್ನು ಹತ್ತಿರುವುದು ಇನ್ನಷ್ಟು ಚಿಂತೆ ಮೂಡಿಸಿದೆ. ಇದರಿಂದಾಗಿ, ಇತ್ತೀಚೆಗೆ ತಾನೇ ಆಗಿರುವ ಬಿಜೆಪಿ- ಜೆಡಿಎಸ್‌ ಮೈತ್ರಿಯ ಮೇಲೂ ದುಷ್ಪರಿಣಾಮ ಆಗುವ ಸಾಧ್ಯತೆಯೂ ಅವರನ್ನು ಬಾಧಿಸುತ್ತಿದೆ.

ಈ ಹಿನ್ನೆಲೆಯಲ್ಲಿ ದೇವೇಗೌಡರು ಹಾಗೂ ಪತ್ನಿ ಚೆನ್ನಮ್ಮ ಆರೋಗ್ಯದ ಬಗ್ಗೆಯೂ ಕುಟುಂಬದ ಸದಸ್ಯರು ತೀವ್ರ ನಿಗಾ ವಹಿಸುತ್ತಿದ್ದಾರೆ. ಹೆಣ್ಣು ಮಕ್ಕಳು ಸಂಪೂರ್ಣ ಮೇಲ್ವಿಚಾರಣೆ ಹೊತ್ತಿದ್ದಾರೆ. ಬೆಳಿಗ್ಗೆ ಹಾಗೂ ಸಂಜೆ ಎರಡೂ ಟೈಮ್ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ. “ಟಿವಿ ನೋಡಬೇಡಿ.. ಸಂಪೂರ್ಣ ರೆಸ್ಟ್ ಮಾಡಿ” ಎಂದು ದೇವೇಗೌಡರಿಗೆ ವೈದ್ಯರು ಕೂಡ ಸಲಹೆ ನೀಡಿದ್ದಾರೆ.

ನಿನ್ನೆ ದೇವೇಗೌಡರ ಅಳಿಯ, ಹೃದಯ ತಜ್ಞ ಡಾ. ಸಿ.ಎನ್‌ ಮಂಜುನಾಥ್ ಗೌಡರ ಮನೆಗೆ ಭೇಟಿ ನೀಡಿ ನಿಯಮಿತ ತಪಾಸಣೆ ನಡೆಸಿದ್ದಾರೆ. ಇತರ ನುರಿತ ವೈದ್ಯರಿಂದಲೂ ತಪಾಸಣೆ ನಡೆದಿದೆ. ಪುತ್ರಿಯರು ದೇವೇಗೌಡರ ಮನೆಯಲ್ಲಿಯೇ ಉಳಿದುಕೊಂಡಿದ್ದು, ದೇವೇಗೌಡರ ಕೋಣೆಯಲ್ಲಿ ಒಬ್ಬ ವ್ಯಕ್ತಿಯನ್ನು ಸದಾ ನೋಡಿಕೊಳ್ಳಲು ಇರಿಸಿದ್ದಾರೆ.

ರೇವಣ್ಣ ಕೂಡ ಕಣ್ಮರೆ

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ (Pen Drive Case) ಪ್ರಕರಣದಲ್ಲಿ ರೇವಣ್ಣಗೆ ಎಸ್ಐಟಿ ಮೂರನೇ ನೋಟೀಸ್ ಹಾಗೂ ಕೊನೆಗೆ ಲುಕೌಟ್ ನೋಟೀಸ್ (Lookout notice) ಜಾರಿಯಿಂದಾಗಿ ಮತ್ತಷ್ಟು ಸಂಕಷ್ಟ ಎದುರಾಗಿದೆ. ರೇವಣ್ಣ ಅವru ವಿದೇಶಕ್ಕೆ ಹಾರಬಹುದು ಎಂಬ ಮುಂದಾಲೋಚನೆಯಿಂದ ಲುಕೌಟ್‌ ನೋಟೀಸ್‌ ಜಾರಿ ಮಾಡಲಾಗಿದ್ದು, ಈಗ ಅವರು ಯಾವುದೇ ಏರ್‌ಪೋರ್ಟ್‌ ಮೂಲಕ ಹಾದು ಹೋಗಲು ಸಾಧ್ಯವಿಲ್ಲದಾಗಿದೆ.

ವಿದೇಶದಲ್ಲಿದ್ದುಕೊಂಡು ಲೈಂಗಿಕ ಹಗರಣ (Pen drive case) ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿರುವ ಪ್ರಜ್ವಲ್ ರೇವಣ್ಣ (Prajwal Revanna Case) ವಿರುದ್ಧ ರೆಡ್ ಕಾರ್ನರ್ ನೊಟೀಸ್ (Red Corner Notice) ಜಾರಿ ಮಾಡಲು ಎಸ್‌ಐಟಿ (SIT) ಸಿದ್ಧತೆ ನಡೆಸಿದೆ ಎನ್ನಲಾಗಿದ್ದು, ಇನ್ನೊಂದೆಡೆ ಭವಾನಿ ರೇವಣ್ಣ ಅವರಿಗೂ ವಿಚಾರಣೆಗೆ ಎಸ್‌ಐಟಿ ಬುಲಾವ್‌ ಮಾಡಿದೆ.

ಸದ್ಯ ರೇವಣ್ಣ ವಿರುದ್ಧ ತನಿಖೆಗೆ ಒಳಗಾಗಬೇಕಾದ ಗಂಭೀರ ಆರೋಪವಿದೆ. ಮೈಸೂರಿನಲ್ಲಿ ಸಂತ್ರಸ್ತೆಯ ಪುತ್ರ ರೇವಣ್ಣ ವಿರುದ್ಧ ಕಿಡ್ನಾಪ್ ಪ್ರಕರಣ ದಾಖಲು ಮಾಡಿದ್ದಾರೆ. ಹೀಗಾಗಿ ರೇವಣ್ಣಗೆ ಎಸ್ಐಟಿ ಮುಂದೆ ಹಾಜರಾಗಲು ನೋಟೀಸ್ ನೀಡಲಾಗಿದೆ. ಆದರೆ ಕಳೆದ ಎರಡು ದಿನಗಳಿಂದ ರೇವಣ್ಣ ನಾಪತ್ತೆಯಾಗಿದ್ದಾರೆ. ಅವರು ಅತ್ತ ಎಚ್.ಡಿ ದೇವೇಗೌಡರ ನಿವಾಸದಲ್ಲಿಯಾಗಲೀ, ಈತ್ತ ಬಸವನಗುಡಿಯ ತಮ್ಮ ನಿವಾಸದಲ್ಲಿಯಾಗಲೀ, ಹಾಸನದ ಎರಡು ನಿವಾಸಗಳಲ್ಲಾಗಲೀ ಇಲ್ಲ.

ಹೀಗಾಗಿ ಅವರು ಬಂಧನದ ಭೀತಿಯಿಂದ ಅಜ್ಞಾತ ಸ್ಥಳಕ್ಕೆ ಎಸ್ಕೇಪ್ ಆಗಿರಬಹುದು ಎಂದು ಶಂಕೆಯನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ. ಸದ್ಯ ರೇವಣ್ಣ ಅವರಿಗೆ ಬಂಧನದ ಭಯ ಕಾಡುತ್ತಿದೆ. ಕಿಡ್ನಾಪ್ ಪ್ರಕರಣದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ತೀರ್ಪು ನೋಡಿಕೊಂಡು ನಿರ್ಧಾರ ಮಾಡಲಿದ್ದಾರೆ. ಜಾಮೀನು ಸಿಕ್ಕರೆ ಎಸ್ಐಟಿ ಮುಂದೆ ಬರುವುದು, ಇಲ್ಲವೇ ಮೇಲಿನ ಕೋರ್ಟ್ ಮೊರೆ ಹೋಗೋಣ ಎಂದು ರೇವಣ್ಣ ಪರ ವಕೀಲರು ಹೇಳಿದ್ದಾರೆ.

ಇದನ್ನೂ ಓದಿ: Prajwal Revanna Case: ಹಾಸನ ಸಂಸದರ ನಿವಾಸದ ಗೇಟಿಗೆ ಬೀಗ; ನಿವಾಸದ ಕೀ ನಾಪತ್ತೆ! ಎಚ್‌ಡಿ ರೇವಣ್ಣ ಕೂಡ ಗಾಯಬ್!‌

Continue Reading

ಮಳೆ

Accident News: ಬಿರುಗಾಳಿಗೆ ಕೂಲಿಂಗ್ ಶೀಟ್ ತಲೆ ಮೇಲೆ ಬಿದ್ದು ವ್ಯಕ್ತಿ ಸಾವು; ಬಿಸಿಲಾಘಾತಕ್ಕೆ ಇಬ್ಬರು ಬಲಿ

Accident News: ಪ್ರತ್ಯೇಕ ಕಡೆಗಳಲ್ಲಿ ನಡೆದ ಅವಘಡದಲ್ಲಿ ಮೂವರು ಮೃತಪಟ್ಟಿದ್ದಾರೆ. ಮೈಸೂರಲ್ಲಿ ಮಳೆ ಸಹಿತ ಜೋರಾಗಿ ಬೀಸಿದ ಗಾಳಿಗೆ ಕೂಲಿಂಗ್‌ ಶೀಟ್‌ ತಲೆ ಮೇಲೆ ಬಿದ್ದು ವ್ಯಕ್ತಿಯೊಬ್ಬರು ದಾರುಣ ಅಂತ್ಯ ಕಂಡಿದ್ದಾರೆ. ಇತ್ತ ರಾಯಚೂರಲ್ಲಿ ರಣ ಬಿಸಿಲಿಗೆ ಇಬ್ಬರು ಬಲಿಯಾಗಿದ್ದಾರೆ.

VISTARANEWS.COM


on

By

Accident news
Koo

ಮೈಸೂರು/ರಾಯಚೂರು: ನಿನ್ನೆ ಶುಕ್ರವಾರ ಬೀಸಿದ ಬಿರುಗಾಳಿಗೆ ಕೂಲಿಂಗ್‌ ಶೀಟ್‌ ಕಳಚಿ ವ್ಯಕ್ತಿಯೊಬ್ಬರ ತಲೆ ಮೇಲೆ ಬಿದ್ದಿದೆ. ಬಿದ್ದ ರಭಸಕ್ಕೆ ಕುಸಿದು ಬಿದ್ದ ವ್ಯಕ್ತಿ ಸ್ಥಳದಲ್ಲೇ (Accident News) ಮೃತಪಟ್ಟಿದ್ದಾರೆ. ಮೈಸೂರಿನ ಆಲನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಶಿವಕುಮಾರ್ (34) ಮೃತ ದುರ್ದೈವಿ.

ಮಾರಶೆಟ್ಟಹಳ್ಳಿ ಗ್ರಾಮದ ನಿವಾಸಿಯಾದ ಶಿವಕುಮಾರ್‌ ಕಟ್ಟಡ ಕಾಮಗಾರಿ ಕೆಲಸ ಮಾಡುತ್ತಿದ್ದ. ಈ ವೇಳೆ ಜೋರಾಗಿ ಬಿರುಗಾಳಿ ಬೀಸಿದ್ದು, ಕೂಲಿಂಗ್ ಶೀಟ್ ನೇರವಾಗಿ ಶಿವಕುಮಾರ್‌ ತಲೆ ಮೇಲೆ ಬಿದ್ದಿದೆ. ಪರಿಣಾಮ ಗಂಭೀರ ಗಾಯಗೊಂಡ ಶಿವಕುಮಾರ್‌ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರ ಮಾಡಲಾಗಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇಬ್ಬರನ್ನು ಬಲಿ ಪಡೆದ ರಾಯಚೂರು ರಣ ಬಿಸಿಲು

ಒಂದು ಕಡೆ ಬಿರುಗಾಳಿ ಸಹಿತ ಮಳೆ ಮತ್ತೊಂದು ಕಡೆ ರಣ ಬಿಸಿಲಿಗೆ ಜನರು ತತ್ತರಿಸಿ ಹೋಗಿದ್ದಾರೆ. ರಾಯಚೂರಿನಲ್ಲಿ ಪ್ರತ್ಯೇಕ ಕಡೆಗಳಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಅತಿಯಾದ ಬಿಸಿಲಿನ ತಾಪಮಾನದಿಂದ ಮಲ್ಲಯ್ಯ ಹಾಗೂ ಆಂಜನೇಯ ಎಂಬುವವರು ಮೃತಪಟ್ಟಿದ್ದಾರೆ.

ರಾಯಚೂರಿನ ಮಸ್ಕಿ ಪಟ್ಟಣದಲ್ಲಿ ಬಿಸಿಲಿನ ತಾಪಕ್ಕೆ ಬಿಎಂಟಿಸಿ ಬಸ್ ಕಂಡಕ್ಟರ್ ಮೃತಪಟ್ಟಿದ್ದಾರೆ. ಮಸ್ಕಿ ತಾಲೂಕಿನ ಹಸಮಕಲ್ ಗ್ರಾಮದ ಮಲ್ಲಯ್ಯ (45) ಬಿಸಿಲಿನ ತಾಪ ತಾಳಲಾರದೆ ಕುಸಿದು ಬಿದ್ದಿದ್ದು, ಪ್ರಾಣಪಕ್ಷಿ ಹಾರಿ ಹೋಗಿದೆ.

ಮಲ್ಲಯ್ಯ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಕಂಡಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ರಜೆ ಮೇಲೆ ಸ್ವಗ್ರಾಮ ಮಸ್ಕಿಯ ಹಸಮಕಲ್‌ಗೆ ಬಂದಿದ್ದರು. ಮಧ್ಯಾಹ್ನ ಮಸ್ಕಿ ಪಟ್ಟಣದಲ್ಲಿ ಕಿರಾಣಿ ಸಾಮಾನು ತರಲು ಬಂದಾಗ ರಸ್ತೆಯಲ್ಲೇ ಕುಸಿದು ಬಿದ್ದಿದ್ದಾರೆ. ಕೂಡಲೇ ಸ್ಥಳೀಯರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವಾಗ ಮೃತಪಟ್ಟಿದ್ದಾರೆ. ಆರೋಗ್ಯವಾಗಿದ್ದ ವ್ಯಕ್ತಿ ಬಿಸಿಲತಾಪಕ್ಕೆ ಜೀವಬಿಟ್ಟಿದ್ದಾರೆ.

ಇತ್ತ ರಾಯಚೂರು ತಾಲೂಕಿನ ಜಾಲಿಬೆಂಚಿಯಲ್ಲೂ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಜಾಲಿಬೆಂಚಿಯ ಆಂಜನೇಯ (45) ಮೃತ ದುರ್ದೈವಿ. ಆಂಜನೇಯ ಹೊಲದಿಂದ ಕೆಲಸ ಮುಗಿಸಿ ಮನೆಗೆ ಬರುವಾಗ ಸುಸ್ತಾಗಿ ಬಿದ್ದು ಮೃತಪಟ್ಟಿದ್ದಾರೆ. ನಿತ್ಯ 44-46°C ತಾಪಮಾನ ದಾಖಲಾಗುತ್ತಿದೆ. ಹೀಗಾಗಿ ಅನಾವಶ್ಯಕವಾಗಿ ಹೊರಗೆ ಓಡಾಡದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

ಮೈಸೂರಿನಲ್ಲಿ ಏಕಾಏಕಿ ಹೊತ್ತಿ ಉರಿದ ಬೈಕ್

ಮೈಸೂರಿನ ದೇವರಾಜ ಅರಸು ರಸ್ತೆಯಲ್ಲಿ ನಿನ್ನೆ ಶುಕ್ರವಾರ ಮಧ್ಯಾಹ್ನ ಏಕಾಏಕಿ ಬೈಕ್‌ವೊಂದು ಹೊತ್ತಿ ಉರಿದಿದೆ. ಬಿಸಿಲ ತಾಪಕ್ಕೆ ಇದ್ದಕ್ಕಿದ್ದಂತೆ ಬೈಕ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್‌ ಯಾರಿಗೂ ಪ್ರಾಣಹಾನಿ ಆಗಿಲ್ಲ.

ಇದನ್ನೂ ಓದಿ: Drama Artist: ಶಕುನಿಯಾಗಿ ಗರ್ಜಿಸುತ್ತಿರುವಾಗಲೇ ಹೃದಯಾಘಾತ; ಮೊಬೈಲ್‌ನಲ್ಲಿ ಸೆರೆಯಾಯ್ತು ಕಲಾವಿದನ ಕೊನೆಯ ಕ್ಷಣ

ರಾಯಚೂರಲ್ಲಿ ಬಿಸಿಲಾಜ್ಞೆ; ಮಧ್ಯಾಹ್ನ 12-4ರ ವರೆಗೆ ಹೊರಬರದಂತೆ ಡಿಸಿ ಕಟ್ಟಾಜ್ಞೆ!

ರಾಯಚೂರು/ಚಿಕ್ಕಬಳ್ಳಾಪುರ: ರಾಜ್ಯಾದ್ಯಂತ ಉರಿ ಬಿಸಿಲು ಜನರನ್ನು ಸುಸ್ತು (Karnataka Weather Forecast) ಮಾಡಿದೆ. ಅದರಲ್ಲೂ ಉತ್ತರ ಕರ್ನಾಟಕದ ಮಂದಿ ಕುಂತರೂ ನಿಂತರೂ ಬೆವರು ಸುರಿಸುವಂತಾಗಿದೆ. ಬಿಸಿಲಿನ ಆಜ್ಞೆಗೆ ಜನರು ಹೊರಬರಲು ಆಗದೆ ಅಘೋಷಿತ ಬಂದ್‌ ನಿರ್ಮಾಣವಾಗಿದೆ. ಸದ್ಯ ಅತಿಯಾದ ಬಿಸಿಲಿಗೆ ತತ್ತರಿಸಿದ ರಾಯಚೂರು ಜನರು ಮಧ್ಯಾಹ್ನ ಹೊರಗೆ ಬಾರದಂತೆ ರಾಯಚೂರು ಜಿಲ್ಲಾಧಿಕಾರಿ ಸಲಹೆ ನೀಡಿದ್ದಾರೆ.

ಮುಂದಿನ ಒಂದು ವಾರ ಮತ್ತಷ್ಟು ಗರಿಷ್ಠ ತಾಪಮಾನ ಹೆಚ್ಚಾಗುವ ಸಾಧ್ಯತೆ ಇದೆ. ಈಗಾಗಲೇ 44 ರಿಂದ 46 ಡಿ.ಸೆ ನಷ್ಟು ತಾಪಮಾನ ದಾಖಲಾಗುತ್ತಿದೆ. ಇದರಿಂದ ಅನಾರೋಗ್ಯ ಸಮಸ್ಯೆ ಜತೆಗೆ ಬಿಸಿಲಾಘಾತಕ್ಕೆ ಸಾವು ಸಂಭವಿಸಬಹುದು. ಹಾಗಾಗಿ ಮಧ್ಯಾಹ್ನ 12 ರಿಂದ 4 ಗಂಟೆವರೆಗೂ ಹೊರಗೆ ಹೋಗದಿರಿ ಎಂದು ಡಿಸಿ ಎಲ್ ಚಂದ್ರಶೇಖರ ನಾಯಕ್ ಸಲಹೆ ನೀಡಿದ್ದಾರೆ. ಹೊರಗೆ ಹೋಗಲೇಬೇಕಾದ ಅವಶ್ಯಕತೆ ಇದ್ದರೆ ಶುದ್ಧ ಕುಡಿಯುವ ನೀರಿನ ಬಾಟಲ್ ಕೊಂಡೊಯ್ಯಿರಿ. ಟೋಪಿ ಅಥವಾ ಛತ್ರಿ ಬಳಸಿ, ಆದಷ್ಟು ನೆರಳಿನ ಪ್ರದೇಶಗಳಲ್ಲಿ ಓಡಾಡಿ. ಬಾಯಾರಿಕೆ ಆಗದಿದ್ದರೂ ಆಗಾಗ ನೀರು ಕುಡಿಬೇಕು. ಯಾವಾಗಲೂ ನಿಮ್ಮ ಬಳಿ ನೀರು ಇಟ್ಟುಕೊಂಡಿರಿ ಎಂದು ಜಿಲ್ಲಾಧಿಕಾರಿ ಎಲ್‌.ಚಂದ್ರಶೇಖರ ನಾಯಕ್ ಸಲಹೆ ನೀಡಿದ್ದಾರೆ. ಹಾಗೆಯೇ ಮನೆ- ಕಚೇರಿಗಳಲ್ಲಿ ಪಕ್ಷಿಗಳಿಗೂ ನೀರನ್ನು ತುಂಬಿ ಇಡಿ ಎಂದಿದ್ದಾರೆ.

karnataka weather forecast

ತುಮಕೂರಲ್ಲಿ ಬಿಸಿ ಗಾಳಿ; ಹಸುಗಳಿಗೆ ತೇವದ ಗೋಣಿಚೀಲದ ಹೊದಿಕೆ

ತುಮಕೂರು ಜಿಲ್ಲೆಯಲ್ಲೂ ಬಿಸಿ ಗಾಳಿಯು ಆತಂಕವನ್ನು ಹೆಚ್ಚಿಸಿದೆ. ಪಾವಗಡ ತಾಲೂಕಿನಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ. ಬಿಸಿಲ ಬೇಗೆಗೆ ಪ್ರಾಣಿ ಪಕ್ಷಿಗಳೂ ಹೈರಾಣಾಗಿವೆ. ಇತ್ತ ರೈತರು ದನ ಕರುಗಳಿಗೆ ಒದ್ದೆ ಮಾಡಿದ ಗೋಣಿಚೀಲ ಹಾಕುತ್ತಿದ್ದಾರೆ. ಪಾವಗಡ ತಾಲೂಕಿನ ವೈ ಎನ್ ಹೊಸಕೋಟೆಯಲ್ಲಿ ಹಸುಗಳಿಗೆ ತೇವದ ಗೋಣಿಚೀಲದ ಹೊದಿಕೆ ಹಾಕಿ, ತಂಪು ಮಾಡುತ್ತಿದ್ದಾರೆ.

ಬಿಸಿಲಿನ ಹೊಡೆತ- ಚಿಕ್ಕಬಳ್ಳಾಪುರ ಪ್ರವಾಸಿತಾಣ ಖಾಲಿ ಖಾಲಿ

ಇತ್ತ ಚಿಕ್ಕಬಳ್ಳಾಪುರದಲ್ಲೂ ಅತಿಯಾದ ತಾಪಮಾನದಿಂದಾಗಿ ಪ್ರವಾಸಿ ತಾಣಗಳು ಪ್ರವಾಸಿಗರು ಇಲ್ಲದೆ ಬಣಗುಡುತ್ತಿದೆ. ನಂದಿ ಬೆಟ್ಟ, ಈಶಾ ಫೌಂಡೇಶನ್ ಜನರಿಲ್ಲದೆ ಖಾಲಿ ಖಾಲಿಯಾಗಿದೆ. ಬಿಸಿಲಿನ ತಾಪಕ್ಕೆ ಜನರು ಮನೆ ಬಿಟ್ಟು‌ ಕದಲದ ಕಾರಣಕ್ಕೆ ಮಧ್ಯಾಹ್ನ 12 ಗಂಟೆ ಬಳಿಕ ಚಿಕ್ಕಬಳ್ಳಾಪುರದಲ್ಲಿ ಆಘೋಷಿತ ಬಂದ್ ವಾತಾವರಣ ನಿರ್ಮಾಣವಾಗಿದೆ. ಪ್ರತಿನಿತ್ಯ ಪ್ರವಾಸಿಗರಿಂದ ಗಿಜುಗುಡುತಿದ್ದ ನಂದಿಬೆಟ್ಟ ಖಾಲಿಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

CM Siddaramaiah: ಸಿಎಂ ಸಿದ್ದರಾಮಯ್ಯ ಬಗ್ಗೆ ಪೋಸ್ಟ್:‌ ಮಹೇಶ್‌ ವಿಕ್ರಂ ಹೆಗ್ಡೆ, ವಸಂತ್‌ ಗಿಳಿಯಾರ್ ಬಂಧನವಿಲ್ಲ

CM Siddaramaiah: ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಮಹೇಶ್‌ ವಿಕ್ರಮ್‌ ಹೆಗ್ಡೆ ಮತ್ತು ವಸಂತ್‌ ಗಿಳಿಯಾರ್‌ ಸಲ್ಲಿಸಿದ್ದ ಕ್ರಿಮಿನಲ್‌ ಅರ್ಜಿ ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರ ಮುಂದೆ ವಿಚಾರಣೆಗೆ ಬಂದಿತ್ತು. ಪೊಲೀಸರ ಪರ ಹೆಚ್ಚುವರಿ ಸರ್ಕಾರಿ ಅಭಿಯೋಜಕರು ಹಾಜರಾಗಿ, ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಬೇಕು ಎಂದು ಕೋರಿದರು.

VISTARANEWS.COM


on

cm siddaramaiah
Koo

ಬೆಂಗಳೂರು: ಸೋಶಿಯಲ್‌ ಮೀಡಿಯಾದಲ್ಲಿ (Social media) ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಮಾನಹಾನಿ (derogatory) ಮಾಡುವಂತಹ ಪೋಸ್ಟ್‌ ಹಾಕಿದ ಆರೋಪದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ʼಪೋಸ್ಟ್‌ಕಾರ್ಡ್‌ʼ (Postcard) ಮುಖ್ಯಸ್ಥ ಮಹೇಶ್‌ ವಿಕ್ರಮ್‌ ಹೆಗ್ಡೆ (Mahesh Vikram Hegde) ಮತ್ತು ವಸಂತ್‌ ಗಿಳಿಯಾರ್‌ (Vasant Giliyar) ಅವರನ್ನು ಸದ್ಯಕ್ಕೆ ಬಂಧಿಸದಂತೆ ಪೊಲೀಸರಿಗೆ ಹೈಕೋರ್ಟ್‌ (Highcourt) ನಿರ್ದೇಶಿಸಿದೆ.

ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಮಹೇಶ್‌ ವಿಕ್ರಮ್‌ ಹೆಗ್ಡೆ ಮತ್ತು ವಸಂತ್‌ ಗಿಳಿಯಾರ್‌ ಸಲ್ಲಿಸಿದ್ದ ಕ್ರಿಮಿನಲ್‌ ಅರ್ಜಿ ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರ ಮುಂದೆ ವಿಚಾರಣೆಗೆ ಬಂದಿತ್ತು. ಪೊಲೀಸರ ಪರ ಹೆಚ್ಚುವರಿ ಸರ್ಕಾರಿ ಅಭಿಯೋಜಕರು ಹಾಜರಾಗಿ, ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಬೇಕು ಎಂದು ಕೋರಿದರು. ಅದನ್ನು ಪರಿಗಣಿಸಿದ ನ್ಯಾಯಪೀಠವು ಅರ್ಜಿ ವಿಚಾರಣೆಯನ್ನು ಮೇ 9ಕ್ಕೆ ವಿಚಾರಣೆ ಮುಂದೂಡಿತು. ಅಲ್ಲಿಯವರೆಗೆ ಅರ್ಜಿದಾರರನ್ನು ಬಂಧಿಸಬಾರದು ಎಂದು ಪೊಲೀಸರಿಗೆ ನಿರ್ದೇಶಿಸಿ ಮಧ್ಯಂತರ ಆದೇಶ ಮಾಡಿತು.

ಮಹೇಶ್‌ ವಿಕ್ರಮ್‌ ಹೆಗ್ಡೆ ಅವರು ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್‌, ಟ್ವಿಟರ್‌ ಮತ್ತು ವಾಟ್ಸಾಪ್‌ಗಳ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾನಹಾನಿ ಮಾಡುವಂತಹ ಸುಳ್ಳು ಸುದ್ದಿ ಹರಿಬಿಟ್ಟಿದ್ದಾರೆ. ಜನರನ್ನು ಪ್ರಚೋದಿಸುವ ಉದ್ದೇಶದಿಂದಲೇ ಈ ಕೃತ್ಯ ಎಸಗಿದ್ದಾರೆ. ಸಿದ್ದರಾಮಯ್ಯ ಅವರ ಫೋಟೊ ದುರ್ಬಳಕೆ ಮಾಡಿಕೊಂಡಿದ್ದಾರೆ. ಜತೆಗೆ, ಪೋಟೋವನ್ನು ಕೆಟ್ಟ ಮಾಹಿತಿಯೊಂದಿಗೆ ಬಳಕೆ ಮಾಡುವ ಮೂಲಕ ಸಿಎಂ ವರ್ಚಸ್ಸಿಗೆ ಹಾನಿ ಮಾಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಹರೀಶ್‌ ನಾಗರಾಜು 2024ರ ಏ.9ರಂದು ಅರ್ಜಿದಾರರು ಸೇರಿದಂತೆ ಒಟ್ಟು 7 ಮಂದಿ ವಿರುದ್ಧ ಬೆಂಗಳೂರಿನ ಬಸವೇಶ್ವರ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

ಅದನ್ನು ಆಧರಿಸಿ ಅರ್ಜಿದಾರರ ವಿರುದ್ಧ ಪಶ್ವಿಮ ವಿಭಾಗದ ಸಿಇಎನ್‌ ಠಾಣಾ ಪೊಲೀಸರು ಎಫ್‌ಐಆರ್‌ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. ಪ್ರಕರಣದಲ್ಲಿ ಬಂಧನ ಭೀತಿ ಎದುರಾದ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿದಾರರು ಹೈಕೋರ್ಟ್‌ ಮೊರೆ ಹೋಗಿದ್ದಾರೆ.

ಇದನ್ನೂ ಓದಿ: Prajwal Revanna Case: ವಿಡಿಯೊದಲ್ಲಿ ಪ್ರಜ್ವಲ್‌ ಮುಖ ಕಾಣಲ್ಲ; ಗಂಡಸ್ತನವಿದ್ದರೆ ರಾಹುಲ್‌ ಗಾಂಧಿಗೆ ನೋಟಿಸ್‌ ಕೊಡಿ: ಸಿಎಂಗೆ ಎಚ್‌ಡಿಕೆ ಸವಾಲು

Continue Reading

ಕರ್ನಾಟಕ

Drama Artist: ಶಕುನಿಯಾಗಿ ಗರ್ಜಿಸುತ್ತಿರುವಾಗಲೇ ಹೃದಯಾಘಾತ; ಮೊಬೈಲ್‌ನಲ್ಲಿ ಸೆರೆಯಾಯ್ತು ಕಲಾವಿದನ ಕೊನೆಯ ಕ್ಷಣ

Drama Artist: ನಾಟಕದಲ್ಲಿ ಅಭಿನಯಿಸುತ್ತಿರುವಾಗಲೇ ವೇದಿಕೆಯಲ್ಲೇ ಕುಸಿದು ಬಿದ್ದು ಕಲಾವಿದರೊಬ್ಬರು ಮೃತಪಟ್ಟಿದ್ದಾರೆ. ಎನ್.ಮುನಿಕೆಂಪಣ್ಣ (72) ಅವರು ಯಲಹಂಕದ ಸಾತನೂರು ಗ್ರಾಮದಲ್ಲಿ ʼಕುರುಕ್ಷೇತ್ರʼ ನಾಟಕ ಪ್ರದರ್ಶಿಸುತ್ತಿದ್ದ ವೇಳೆ ನಿಧನ ಹೊಂದಿದ್ದಾರೆ. ʼಕುರುಕ್ಷೇತ್ರʼ ನಾಟಕದಲ್ಲಿ ಮುನಿಕೆಂಪಣ್ಣ ಅವರು ಶಕುನಿ ಪಾತ್ರ ನಿರ್ವಹಿಸುತ್ತಿದ್ದರು. ಮಧ್ಯರಾತ್ರಿಯವರೆಗೂ ಅದ್ಬುತ ಪ್ರದರ್ಶನ ನೀಡಿದ ಅವರು ಒಂದು ಗಂಟೆಯ ವೇಳೆಗೆ ಇದ್ದಕ್ಕಿದ್ದಂತೆ ವೇದಿಕೆ ಮೇಲೆಯೇ ಕುಸಿದು ಬಿದ್ದಿದ್ದಾರೆ. ಸದ್ಯ ಅವರು ಕುಸಿದು ಬೀಳುತ್ತಿರುವ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ವೈರಲ್‌ ಆಗಿದೆ.

VISTARANEWS.COM


on

Drama Artist
Koo

ಯಲಹಂಕ: ನಾಟಕದಲ್ಲಿ ಅಭಿನಯಿಸುತ್ತಿರುವಾಗಲೇ ವೇದಿಕೆಯಲ್ಲೇ ಕುಸಿದು ಬಿದ್ದು ಕಲಾವಿದರೊಬ್ಬರು ಮೃತಪಟ್ಟಿದ್ದಾರೆ. ಎನ್.ಮುನಿಕೆಂಪಣ್ಣ (72) ಅವರು ಯಲಹಂಕದ ಸಾತನೂರು ಗ್ರಾಮದಲ್ಲಿ ʼಕುರುಕ್ಷೇತ್ರʼ ನಾಟಕ ಪ್ರದರ್ಶಿಸುತ್ತಿದ್ದ ವೇಳೆ ನಿಧನ ಹೊಂದಿದ್ದಾರೆ.

ʼಕುರುಕ್ಷೇತ್ರʼ ನಾಟಕದಲ್ಲಿ ಮುನಿಕೆಂಪಣ್ಣ ಅವರು ಶಕುನಿ ಪಾತ್ರ ನಿರ್ವಹಿಸುತ್ತಿದ್ದರು. ಮಧ್ಯರಾತ್ರಿಯವರೆಗೂ ಅದ್ಬುತ ಪ್ರದರ್ಶನ ನೀಡಿದ ಅವರು ಒಂದು ಗಂಟೆಯ ವೇಳೆಗೆ ಇದ್ದಕ್ಕಿದ್ದಂತೆ ವೇದಿಕೆ ಮೇಲೆಯೇ ಕುಸಿದು ಬಿದ್ದಿದ್ದಾರೆ. ಸದ್ಯ ಅವರು ಕುಸಿದು ಬೀಳುತ್ತಿರುವ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ವೈರಲ್‌ ಆಗಿದೆ.

ಹಿಂದೆ ಉಪನ್ಯಾಸಕರಾಗಿದ್ದ ಮುನಿಕೆಂಪಣ್ಣ ಅವರು ನಾಟಕದಲ್ಲಿ ಅಪಾರ ಆಸಕ್ತಿ ಹೊಂದಿದ್ದು, ಆಗಾಗ ವೇಷ ಹಚ್ಚುತ್ತಿರುತ್ತಾರೆ. ದೇವನಹಳ್ಳಿಯಲ್ಲಿ ನಡೆದ 28ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಹೃದಯಾಘಾತದಿಂದ ಮೃತಪಟ್ಟ ಮುನಿಕೆಂಪಣ್ಣ ಅವರ ಅಂತ್ಯ ಸಂಸ್ಕಾರ ಅವರ ಹುಟ್ಟೂರು ಅರದೇಶನಹಳ್ಳಿಯಲ್ಲಿ ನಡೆಯಲಿದೆ. ಇದಕ್ಕಾಗಿ ಸಿದ್ಧತೆ ಕೈಗೊಳ್ಳಲಾಗಿದೆ.

ವೇಷ ಕಳಚುತ್ತಿರುವಾಗಲೇ ಹೃದಯ ಸ್ತಬ್ಧ; ಯಕ್ಷಗಾನ ಕಲಾವಿದ ಇನ್ನಿಲ್ಲ

ಮಂಗಳೂರು: ವೇಷ ಕಳಚುತ್ತಿರುವಾಗಲೇ ಹೃದಯಾಘಾತದಿಂದ ಧರ್ಮಸ್ಥಳ ಯಕ್ಷಗಾನ ಮೇಳದ ಸವ್ಯಸಾಚಿ ಕಲಾವಿದ ಗಂಗಾಧರ ಪುತ್ತೂರು(60) ಅವರು ಇಹಲೋಕ ತ್ಯಜಿಸಿದ್ದಾರೆ. ಮೇ 1ರಂದು ರಾತ್ರಿ ಕೋಟ ಗಾಂಧಿಮೈದಾನದ ಬಳಿ ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಯಕ್ಷಗಾನದಲ್ಲಿ ಅವರು ಕುಕ್ಕಿಂತ್ತಾಯ ದೈವದ ವೇಷವನ್ನು ನಿರ್ವಹಿಸಿದ್ದರು. ಬಳಿಕ ಚೌಕಿಗೆ ಆಗಮಿಸಿ ಕಿರೀಟ, ಯಕ್ಷಗಾನದ ಆಭರಣ ತೆಗೆದಿಟ್ಟು, ಮುಖದ ಬಣ್ಣವನ್ನು ಅಳಿಸುತ್ತಿರುವಾಗ ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಪುತ್ತೂರಿನ ಸೇಡಿಯಾಪು ನಿವಾಸಿಯಾಗಿರುವ ಇವರು ಏಳನೇ ತರಗತಿಯವರೆಗೆ ವಿದ್ಯಾಭ್ಯಾಸ ಹೊಂದಿದ್ದರು. ತಮ್ಮ 18ನೇ ವಯಸ್ಸಿಗೆ ಯಕ್ಷಗಾನ ತಿರುಗಾಟ ಆರಂಭಿಸಿದ ಗಂಗಾಧರ ಪುತ್ತೂರು ಸುದೀರ್ಘ 40 ವರ್ಷಗಳಷ್ಟು ಕಾಲ ಯಕ್ಷಗಾನ ರಂಗದಲ್ಲಿ ವ್ಯವಸಾಯ ಮಾಡಿದ್ದರು. ಕರ್ಗಲ್ಲು ವಿಶ್ವೇಶ್ವರ ಭಟ್ ಹಾಗೂ ಕೆ.ಗೋವಿಂದ ಭಟ್ ಅವರಿಂದ ನಾಟ್ಯಾಭ್ಯಾಸ ಮಾಡಿದರು.

ಯಕ್ಷಗಾನ ರಂಗದ ಸವ್ಯಸಾಚಿ ಕಲಾವಿದರಾದ ಇವರು ಸ್ತ್ರೀವೇಷದಿಂದ ಹಿಡಿದು ಪುಂಡುವೇಷ, ರಾಜವೇಷ, ಹೆಣ್ಣುಬಣ್ಣ ಸಮರ್ಥವಾಗಿ ನಿರ್ವಹಿಸುತ್ತಿದ್ದರು. 30 ವರ್ಷಗಳಿಗಿಂತಲೂ ಅಧಿಕ ಕಾಲದಿಂದ ಗಂಗಾಧರ ಪುತ್ತೂರು ಧರ್ಮಸ್ಥಳ ಮೇಳದಲ್ಲಿಯೇ ಕಲಾವಿದರಾಗಿ ತಿರುಗಾಟ ಮಾಡಿದ್ದರು.

ಇದನ್ನೂ ಓದಿ: Srinivas Prasad: ತೀವ್ರ ಹೃದಯಾಘಾತದಿಂದ ಹಿರಿಯ ಸಂಸದ ಶ್ರೀನಿವಾಸ್‌ ಪ್ರಸಾದ್‌ ವಿಧಿವಶ

Continue Reading
Advertisement
HD Deve gowda prajwal revanna case
ಬೆಂಗಳೂರು4 mins ago

Prajwal Revanna Case: ಮೊಮ್ಮಗನ ದೆಸೆಯಿಂದ ದೇವೇಗೌಡರ ಆರೋಗ್ಯ ಏರುಪೇರು, ಕುಟುಂಬದಿಂದ ತೀವ್ರ ನಿಗಾ

MP High Court
ದೇಶ11 mins ago

MP High Court: ಪತ್ನಿಯೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ; ಮಹತ್ವದ ತೀರ್ಪು ಪ್ರಕಟಿಸಿದ ಕೋರ್ಟ್‌

Aishwarya Rajinikanth new house priceless reaction Rajinikanth
ಕಾಲಿವುಡ್17 mins ago

Aishwarya Rajinikanth: ಮಗಳ ಹೊಸ ಮನೆ ಕಂಡು ಹುಬ್ಬೇರಿಸಿದ ರಜನಿಕಾಂತ್!

Josh Baker
ಕ್ರೀಡೆ19 mins ago

Josh Baker: 6 ವಿಕೆಟ್‌ ಪಡೆದು ಸ್ನೇಹಿತನ ಮನೆಯಲ್ಲಿ ಶವವಾಗಿ ಪತ್ತೆಯಾದ ಇಂಗ್ಲೆಂಡ್ ಕ್ರಿಕೆಟಿಗ

International Firefighters Day 2024
ಪ್ರಮುಖ ಸುದ್ದಿ35 mins ago

International Firefighters Day 2024: ಇಂದು ಅಂತಾರಾಷ್ಟ್ರೀಯ ಅಗ್ನಿಶಾಮಕ ದಿನ; ಜೀವ ರಕ್ಷಕರಿಗೊಂದು ಸಲಾಂ

Nijjar Killling
ವಿದೇಶ37 mins ago

Nijjar Killing: ನಿಜ್ಜರ್‌ ಹಂತಕರ ಫೊಟೋ ರಿಲೀಸ್‌; ಭಾರತದತ್ತ ಮತ್ತೆ ಬೊಟ್ಟು ಮಾಡಿದ ಕೆನಡಾ

Vettaiyan Movie Rajinikanth And Amitabh Bachchan Poses Together
ಸಿನಿಮಾ39 mins ago

Vettaiyan Movie: ಸೂಟು ಬೂಟು ಹಾಕಿಕೊಂಡು ಸ್ಟೈಲಿಶ್‌ ಆಗಿ ಪೋಸ್‌ ಕೊಟ್ಟ ರಜನಿ!

Accident news
ಮಳೆ44 mins ago

Accident News: ಬಿರುಗಾಳಿಗೆ ಕೂಲಿಂಗ್ ಶೀಟ್ ತಲೆ ಮೇಲೆ ಬಿದ್ದು ವ್ಯಕ್ತಿ ಸಾವು; ಬಿಸಿಲಾಘಾತಕ್ಕೆ ಇಬ್ಬರು ಬಲಿ

cm siddaramaiah
ಕ್ರೈಂ57 mins ago

CM Siddaramaiah: ಸಿಎಂ ಸಿದ್ದರಾಮಯ್ಯ ಬಗ್ಗೆ ಪೋಸ್ಟ್:‌ ಮಹೇಶ್‌ ವಿಕ್ರಂ ಹೆಗ್ಡೆ, ವಸಂತ್‌ ಗಿಳಿಯಾರ್ ಬಂಧನವಿಲ್ಲ

Urfi Javed magical butterflies dress Samantha reacts
ಬಾಲಿವುಡ್59 mins ago

Urfi Javed: ಉರ್ಫಿ ʻಮ್ಯಾಜಿಕ್ʼ ಡ್ರೆಸ್‌ಗೆ ಸಮಂತಾ ಮೆಚ್ಚುಗೆ; ಗೌನ್‌ನಿಂದ ಹಾರಿತು ಬಣ್ಣದ ಚಿಟ್ಟೆ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ7 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ20 hours ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ1 day ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌