Site icon Vistara News

ಮುರುಘಾಶ್ರೀ ಪ್ರಕರಣ | ಇಂದು ಬೆಳಗ್ಗೆ ಸ್ಥಳ ಮಹಜರು, ನಾಳೆ ಕೋರ್ಟ್ ಶ್ರೀಗಳು

ಮುರುಘಾಶ್ರೀ

ಬೆಂಗಳೂರು: ಮುರುಘಾಶ್ರೀಗಳು ಆರೋಪಿಯಾಗಿರುವ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿ ಇಂದು ಬೆಳಗ್ಗೆ ಪೊಲೀಸರು ಸ್ಥಳ ಮಹಜರು ನಡೆಸುವ ನಿರೀಕ್ಷೆ ಇದೆ.

ಪ್ರಕರಣದ ತನಿಖಾಧಿಕಾರಿ ಡಿವೈಎಸ್ಪಿ ಅನಿಲ್‌ಕುಮಾರ್‌ ನೇತೃತ್ವದಲ್ಲಿ ಸ್ಥಳದ ಮಹಜರು ನಡೆಯಲಿದೆ.

ಭಾನುವಾರ ಬೆಳಗ್ಗೆ 10 ಗಂಟೆಗೆ ಬಳಿಕ ಸ್ಥಳ ಮಹಜರು ಸಾಧ್ಯತೆ ಇದೆ. ಸೋಮವಾರ ಪುನಃ ಕೋರ್ಟ್ ಮುಂದೆ ಶ್ರೀಗಳು ಹಾಜರಾಗಬೇಕಾಗುತ್ತದೆ. ಹೀಗಾಗಿ ನಾಳೆ ಸಂಜೆ ಒಳಗೆ ಪೊಲೀಸರು ಸ್ಥಳ ಮಹಜರು ಮಾಡುವ ನಿರೀಕ್ಷೆ ಇದೆ. ಸೋಮವಾರದ ನಂತರ ನ್ಯಾಯಾಂಗ ಬಂಧನವಾದರೆ, ಮಹಜರು ಸಲುವಾಗಿ ಪೊಲೀಸರು ಕೋರ್ಟ್ ಅನುಮತಿ ಪಡೆಯಬೇಕಾಗುತ್ತದೆ. ಹೀಗಾಗಿ ಇಂದು ನಡೆಯುವ ನಿರೀಕ್ಷೆ ಇದೆ.

ಗುರುವಾರ ರಾತ್ರಿ ಶರಣರ ಬಂಧನ ನಡೆದಿತ್ತು. ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ನ್ಯಾಯಾಧೀಶರು ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.

Exit mobile version