Zero Shadow Day: ಇಂದು ಬೆಂಗಳೂರಿನಲ್ಲಿ ʼಶೂನ್ಯ ನೆರಳಿನ ದಿನʼ! ಏನಿದು ವಿಶಿಷ್ಟ ವಿದ್ಯಮಾನ? - Vistara News

ಕರ್ನಾಟಕ

Zero Shadow Day: ಇಂದು ಬೆಂಗಳೂರಿನಲ್ಲಿ ʼಶೂನ್ಯ ನೆರಳಿನ ದಿನʼ! ಏನಿದು ವಿಶಿಷ್ಟ ವಿದ್ಯಮಾನ?

ಇಂದು ಮಧ್ಯಾಹ್ನ 12.17 ಗಂಟೆಗೆ ಸರಿಯಾಗಿ ಬಿಸಿಲಿಗೆ ಬಂದು ನಿಂತು ನೋಡಿ. ನಿಮ್ಮ ನೆರಳು ಮಾಯವಾಗಿರುತ್ತದೆ. ಇದು ಒಂದು ನಿಮಿಷ ಮಾತ್ರ ಲಭ್ಯ!

VISTARANEWS.COM


on

Zero Shadow Day
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಏಪ್ರಿಲ್ 25, ಮಂಗಳವಾರ ಬೆಂಗಳೂರು ಒಂದು ವಿಶಿಷ್ಟವಾದ ಆಕಾಶ ಸಂಬಂಧಿತ ಘಟನೆಗೆ ಸಾಕ್ಷಿಯಾಗಲಿದೆ. ಇಂದು ಮಧ್ಯಾಹ್ನ ಒಂದು ನಿಮಿಷದ ಮಟ್ಟಿಗೆ ಇಲ್ಲಿನ ಯಾವುದೇ ಲಂಬ ವಸ್ತುವೂ ನೆರಳನ್ನು ಹೊಂದಿರುವುದಿಲ್ಲ!

ಇದನ್ನು ʼಶೂನ್ಯ ನೆರಳಿನ ದಿನʼ (Zero Shadow Day) ಎಂದು ಕರೆಯುತ್ತಾರೆ.

ಈ ವಿದ್ಯಮಾನ ಮಧ್ಯಾಹ್ನ 12:17ಕ್ಕೆ ನಡೆಯಲಿದೆ. ಬೆಂಗಳೂರಿನ ಕೋರಮಂಗಲದಲ್ಲಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ (IIA) ಈ ಸಂದರ್ಭಕ್ಕಾಗಿ ತನ್ನ ಕ್ಯಾಂಪಸ್‌ನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಬೆಂಗಳೂರಿನ ಬಹಳಷ್ಟು ಮಂದಿ ಬಾಹ್ಯಾಕಾಶ ಪ್ರೇಮಿಗಳು ಈ ಇವೆಂಟ್‌ಗೆ ತಯಾರಾಗುತ್ತಿರುವ ಫೋಟೋಗಳನ್ನು ಟ್ವೀಟ್ ಮಾಡಿದ್ದಾರೆ.

ಏನಾಗಲಿದೆ ಈ ಶೂನ್ಯ ನೆರಳಿನ ದಿನದಂದು?

ಆಸ್ಟ್ರೋನಾಮಿಕಲ್ ಸೊಸೈಟಿ ಆಫ್ ಇಂಡಿಯಾ (ASI) ಪ್ರಕಾರ, ಸೂರ್ಯನು ಮಧ್ಯಾಹ್ನ ನಡು ನೆತ್ತಿಯ ಮೇಲಿರುವಾಗ ಲಂಬವಾಗಿರುವ ವಸ್ತುವಿಗೆ ಸ್ವಲ್ಪಮಾತ್ರವಾದರೂ ನೆರಳು ಇದ್ದೇ ಇರುತ್ತದೆ. ಆದರೆ ಇಂದು ಅಂಥ ಯಾವುದೇ ನೆರಳು ಇರುವುದಿಲ್ಲ. ಉಷ್ಣವಲಯದ ಸ್ಥಳಗಳಲ್ಲಿ (ಕರ್ಕಾಟಕ ಸಂಕ್ರಾಂತಿ ಮತ್ತು ಮಕರ ಸಂಕ್ರಾಂತಿಯ ನಡುವೆ) ವರ್ಷಕ್ಕೆ ಎರಡು ಬಾರಿ ಶೂನ್ಯ ನೆರಳು ದಿನ ಸಂಭವಿಸುತ್ತದೆ ಎಂದು ASI ಹೇಳಿದೆ.

ಇದನ್ನು ಸಾಮಾನ್ಯವಾಗಿ ಪರೀಕ್ಷಿಸುವವರು ಲಂಬವಾದ ಒಂದು ಕಂಬ, ಪಿವಿಸಿ ಪೈಪ್‌, ಸನ್ನೆಗೋಲು ಮುಂತಾದವುಗಳನ್ನು ಬಿಸಿಲಿನಲ್ಲಿ ನೆಟ್ಟಗೆ ನೆಟ್ಟು ಪರೀಕ್ಷಿಸುತ್ತಾರೆ. ನೀವೂ ಪರೀಕ್ಷಿಸಿ ನೋಡಬಹುದು.

ಏಕೆ ಸಂಭವಿಸುತ್ತದೆ?

ಸೂರ್ಯನ ಸುತ್ತ ಭೂಮಿಯ ಪರಿಭ್ರಮಣೆಯ ಅಕ್ಷವು ತನ್ನ ಸಮತಲದಿಂದ 23.5 ಡಿಗ್ರಿಗಳಷ್ಟು ಬಾಗಿದೆ. ಇದರಿಂದ ವಿವಿಧ ಋತುಗಳು ಸಂಭವಿಸುತ್ತವೆ. ಇದರಿಂದಾಗಿ ಸೂರ್ಯನು ದಿನದ ಅತ್ಯುನ್ನತ ಬಿಂದುವಿನಲ್ಲಿರುವಾಗ, ಉತ್ತರಾಯಣದಲ್ಲಿ ಆಕಾಶ ಸಮಭಾಜಕದ ದಕ್ಷಿಣದ 23.5 ಡಿಗ್ರಿಗಳಿಂದ ಸಮಭಾಜಕದ ಉತ್ತರಕ್ಕೆ 23.5 ಡಿಗ್ರಿಗಳಿಗೆ ಚಲಿಸುತ್ತಾನೆ ಮತ್ತು ದಕ್ಷಿಣಾಯನದಲ್ಲಿ ಇದರ ವಿರುದ್ಧಕ್ಕೆ ಚಲಿಸುತ್ತಾನೆ.

ಈ ಪರಿಭ್ರಮಣ ಚಲನೆಯಿಂದಾಗಿ, ಒಂದು ಶೂನ್ಯ ನೆರಳು ದಿನವು ಉತ್ತರಾಯಣದಲ್ಲಿ (ಸೂರ್ಯ ಉತ್ತರದ ಕಡೆಗೆ ಚಲಿಸುವಾಗ) ಬರುತ್ತದೆ ಮತ್ತು ಇನ್ನೊಂದು ದಕ್ಷಿಣಾಯನದಲ್ಲಿ (ಸೂರ್ಯನು ದಕ್ಷಿಣಕ್ಕೆ ಚಲಿಸುವಾಗ) ಬರುತ್ತದೆ. 23.5 ಡಿಗ್ರಿ ಉತ್ತರ ಮತ್ತು 23.5 ಡಿಗ್ರಿ ದಕ್ಷಿಣ ಅಕ್ಷಾಂಶಗಳ ನಡುವೆ ವಾಸಿಸುವ ಜನರಿಗೆ, ಸೂರ್ಯನ ಅವನತಿಯು ಅವರ ಅಕ್ಷಾಂಶಕ್ಕೆ ಎರಡು ಬಾರಿ ಸಮನಾಗಿರುತ್ತದೆ.

ಎಷ್ಟು ಹೊತ್ತು ಇರುತ್ತದೆ?

ನಿಜವಾಗಿಯೂ ಶೂನ್ಯ ನೆರಳಿನ ಪ್ರಕ್ರಿಯೆ ಸಂಭವಿಸುವುದು ಕೆಲವೇ ಸೆಕೆಂಡ್‌ ಮಾತ್ರ. ಆದರೆ ಸುಮಾರು ಒಂದೂವರೆ ನಿಮಿಷ ಕಾಲ ಇದರ ಪರಿಣಾಮ ನೋಡಬಹುದು. 2021ರಲ್ಲಿ ಒಡಿಶಾದ ಭುವನೇಶ್ವರದಲ್ಲಿ ಈ ಪ್ರಕ್ರಿಯೆ ಸಂಭವಿಸಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Doctors Protest: ನಾಳಿನ ಪ್ರತಿಭಟನೆಗೆ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಬೆಂಬಲ; ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೇವೆ ಬಂದ್

Doctors Protest: ಕೋಲ್ಕತ್ತಾದ ವೈದ್ಯೆಯನ್ನು ಅತ್ಯಾಚಾರವೆಸಗಿ ಕೊಲೆ ಮಾಡಿರುವುದನ್ನು ಖಂಡಿಸಿ ಆ. 17ರಂದು ಭಾರತೀಯ ವೈದ್ಯಕೀಯ ಸಂಘವು ದೇಶವ್ಯಾಪಿ ಪ್ರತಿಭಟನೆಗೆ ಕರೆ ನೀಡಿದೆ. ಇದರಿಂದ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲೂ ತುರ್ತುಸೇವೆ ಹೊರತುಪಡಿಸಿ ಇತರೆ ಎಲ್ಲಾ ಆರೋಗ್ಯ ಸೇವೆ ಸ್ಥಗಿತವಾಗಲಿವೆ.

VISTARANEWS.COM


on

Doctors protest
Koo

ಬೆಂಗಳೂರು: ಕೋಲ್ಕತ್ತಾದ ಆರ್.ಜಿ.ಕರ್ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಕರ್ತವ್ಯ ನಿರತ ಯುವ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಖಂಡಿಸಿ ತುರ್ತು ಸೇವೆಗಳನ್ನು ಹೊರತುಪಡಿಸಿ, ಇತರೆ ಎಲ್ಲಾ ಆರೋಗ್ಯ ಸೇವೆಗಳನ್ನು ಸ್ಥಗಿತಗೊಳಿಸಲು ಭಾರತೀಯ ವೈದ್ಯಕೀಯ ಸಂಘವು ಆ.17ರಂದು ದೇಶಾದ್ಯಂತ ಹಮ್ಮಿಕೊಂಡಿರುವ ಪ್ರತಿಭಟನೆಗೆ (Doctors Protest) ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಬೆಂಬಲ ವ್ಯಕ್ತಪಡಿಸಿದೆ.

ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಪತ್ರ ಬರೆದಿದೆ. ವೈದ್ಯಾಧಿಕಾರಿಗಳು ದಿನದ 24/7 ಗಂಟೆ ಬಡ ರೋಗಿಗಳಿಗೆ ತಪಾಸಣೆ ಮತ್ತು ಚಿಕಿತ್ಸೆ ನೀಡುತ್ತಿದ್ದು, ಸಾರ್ವಜನಿಕರ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದಾರೆ ಹಾಗೂ ಕೋವಿಡ್ -19 ನಂತಹ ಸಾಂಕ್ರಾಮಿಕ ರೋಗವು ಇಡೀ ಪ್ರಪಂಚವನ್ನೇ ಬಾಧಿಸಿದ ಸಂದರ್ಭದಲ್ಲಿ ವೈದ್ಯರು ಹಗಲಿರುಳು ಎನ್ನದೇ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಶ್ರಮಿಸಿದ್ದರು.

ಆದರೆ ಆ.9 ರಂದು ಪಶ್ಚಿಮ ಬಂಗಾಳದ ಕೋಲ್ಕತ್ತಾದ ಆರ್.ಜಿ.ಕರ್ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಯುವ ವೈದ್ಯೆಯನ್ನು ಅತ್ಯಾಚಾರವೆಸಗಿ ಕೊಲೆ ಮಾಡಿರುವುದು ಘೋರ ಅಪರಾಧವಾಗಿದ್ದು, ಇದು ಕಾನೂನಿನ ವೈಫಲ್ಯವನ್ನು ಎತ್ತಿ ಹಿಡಿಯುತ್ತದೆ. ಅಲ್ಲದೇ ಈ ಪ್ರಕರಣವು ವೈದ್ಯರ ಮನೋಸ್ಥೈರ್ಯವನ್ನು ಕುಗ್ಗುವಂತೆ ಮಾಡಿದ್ದು, ಇದನ್ನು ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ಗಂಭೀರವಾಗಿ ಪರಿಗಣಿಸಿದೆ.

ಇದನ್ನೂ ಓದಿ | Kolkata Doctor Murder Case: ಟ್ರೈನಿ ವೈದ್ಯೆಯ ಹತ್ಯೆ-ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ; ಭಾರೀ ಲಾಠಿಚಾರ್ಜ್‌

ಹೀಗಾಗಿ ಮುಂದಿನ ದಿನಗಳಲ್ಲಿ ಇಂತಹ ಅಹಿತಕರ ಪ್ರಕರಣಗಳು ಮರುಕಳಿಸದಂತೆ ವೈದ್ಯರು ಮತ್ತು ಸಿಬ್ಬಂದಿಗೆ ಸೂಕ್ತ ಭದ್ರತೆ ಮತ್ತು ರಕ್ಷಣೆಯನ್ನು ಒದಗಿಸಿ, ವೈದ್ಯರ ಮನೋಸ್ಥೆರ್ಯವನ್ನು ಹೆಚ್ಚಿಸಿ, ನಿರ್ಭೀತಿಯಿಂದ ಸಾರ್ವಜನಿಕರಿಗೆ ಆರೋಗ್ಯ ಸೇವೆಯನ್ನು ನೀಡಲು ಅವಕಾಶ ಕಲ್ಪಿಸಬೇಕೆಂದು ಎಂದು ಆಗ್ರಹಿಸಿದೆ.

ಇನ್ನು ಯುವ ವೈದ್ಯೆಯನ್ನು ಅತ್ಯಾಚಾರವೆಸಗಿ ಕೊಲೆ ಮಾಡಿರುವುದನ್ನು ಖಂಡಿಸಿ ತುರ್ತುಸೇವೆ ಹೊರತುಪಡಿಸಿ, ಇತರೆ ಎಲ್ಲಾ ಆರೋಗ್ಯ ಸೇವೆಗಳನ್ನು ಸ್ಥಗಿತಗೊಳಿಸಿ, ಆ. 17ರಂದು ಭಾರತೀಯ ವೈದ್ಯಕೀಯ ಸಂಘವು ಪ್ರತಿಭಟನೆಗೆ ಕರೆ ನೀಡಿದ್ದು, ಈ ಸಂಘವು ಮುಖ್ಯ ವಾಹಿನಿಯಲ್ಲಿ ಬರುವ ಹಿನ್ನೆಲೆಯಲ್ಲಿ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ಈ ಪ್ರತಿಭಟನೆಗೆ ಕಪ್ಪು ಪಟ್ಟಿಯನ್ನು ಧರಿಸಿ ತುರ್ತು ಸೇವೆಯನ್ನು ಮಾತ್ರ ನೀಡುತ್ತಾ, ಬೆಂಬಲವನ್ನು ಸೂಚಿಸುತ್ತದೆ ಎಂದು ವೈದ್ಯಾಧಿಕಾರಿಗಳ ಸಂಘವು ತಿಳಿಸಿದೆ.

ತುರ್ತು ಸೇವೆ ಬಿಟ್ಟು ಎಲ್ಲಾ ಸೇವೆ ಬಂದ್

ಪ್ರತಿಭಟನೆ ಬಗ್ಗೆ ಡಾ.ಶ್ರೀನಿವಾಸ್ ಮಾತನಾಡಿ, ನಾಳೆ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ದೇಶ ವ್ಯಾಪ್ತಿ ಪ್ರತಿಭಟನೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕೂಡ ಓಪಿಡಿ ಬಂದ್ ಮಾಡಿ ಪ್ರತಿಭಟನೆ ಮಾಡುತ್ತಿದ್ದೇವೆ. ಕರ್ತವ್ಯದ ವೇಳೆ ಕೋಲ್ಕತ್ತಾದಲ್ಲಿ ವೈದ್ಯೆಯ ಅತ್ಯಾಚಾರ, ಕೊಲೆ ಆಗಿದೆ. ಪ್ರಕರಣ ಖಂಡಿಸಿ ಒಟ್ಟು ಒಂದು ಲಕ್ಷಕ್ಕೂ ಅಧಿಕ ವೈದ್ಯರು ಪ್ರತಿಭಟನೆ ಮಾಡುತ್ತಾರೆ.

ಖಾಸಗಿ ಅಸ್ಪತ್ರೆ. ಮೆಡಿಕಲ್ ಕಾಲೇಜುಗಳು ಪ್ರತಿಭಟನೆಗೆ ಬೆಂಬಲ ನೀಡಿವೆ. ಸರ್ಕಾರಿ ವೈದ್ಯರು ಕೂಡ ಪ್ರತಿಭಟನೆಗೆ ಬೆಂಬಲ ನೀಡುತ್ತೇವೆ ಅಂತ ಹೇಳಿದ್ದಾರೆ. ನಾಳೆ ಬೆಳಗ್ಗೆ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ಮಾಡುತ್ತೇವೆ, ಸಾವಿರಾರು ವೈದ್ಯರು ಹೋರಾಟದಲ್ಲಿ ಭಾಗಿಯಾಗಲಿದ್ದಾರೆ ಎಂದರು.

ಇದನ್ನೂ ಓದಿ | Kolkata Doctor Murder Case: ಕೋಲ್ಕತ್ತಾ ವೈದ್ಯೆಯ ಅತ್ಯಾಚಾರಿಗೆ ಮರಣದಂಡನೆ ವಿಧಿಸುವಂತೆ ಬಾಲಿವುಡ್ ತಾರೆಯರ ಆಗ್ರಹ

ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ಡಾ. ವಿವೇಕ್ ದೊರೈ ಮಾತನಾಡಿ, ವೈದ್ಯೆಯನ್ನು ಗ್ಯಾಂಗ್ ರೇಪ್ ಮಾಡಿ ಕೊಲೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸಾಂಕೇತಿಕ ಪ್ರತಿಭಟನೆ ಮಾಡುತ್ತೇವೆ. ತುರ್ತು ಸೇವೆ ಬಿಟ್ಟು ಎಲ್ಲಾ ಸೇವೆಗಳನ್ನು ಬಂದ್ ಮಾಡುತ್ತೇವೆ. 6 ಸಾವಿರ ಸರ್ಕಾರಿ ವೈದ್ಯರು ಕಪ್ಪುಪಟ್ಟಿ ಧರಿಸಿ ತುರ್ತು ಚಿಕಿತ್ಸೆ ನೀಡಲಿದ್ದಾರೆ ಎಂದು ತಿಳಿಸಿದರು.

Continue Reading

ಕ್ರೈಂ

Techie Missing: ಕಾಣೆಯಾದ ಟೆಕ್ಕಿ ಪತ್ತೆ, ಪ್ರಕರಣಕ್ಕೆ ಟ್ವಿಸ್ಟ್‌; ಜೈಲಿಗಾದ್ರೂ ಹಾಕಿ, ಆದ್ರೆ ಹೆಂಡತಿ ಹತ್ರ ಹೋಗಲ್ಲ ಎಂದು ರೋದನ!

Techie Missing: ಟೆಕ್ಕಿ ವಿಪಿನ್‌ ತನಗಿಂತ ಎಂಟು ವರ್ಷ ದೊಡ್ಡವಳನ್ನು ಮದುವೆಯಾಗಿದ್ದ. ಪತ್ನಿಗೆ 42 ವರ್ಷ, ವಿಪಿನ್‌ಗೆ 34 ವರ್ಷ. ವಿಪಿನ್‌ನೊಂದಿಗೆ ಎರಡನೇ ಮದುವೆಯಾಗಿದ್ದ ಪತ್ನಿ, ವಿಪಿನ್‌ಗೆ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಳೆನ್ನಲಾಗಿದೆ. ವಿಪಿನ್‌ನನ್ನು ತುಂಬಾ ಕಂಟ್ರೋಲ್ ಮಾಡುತ್ತಿದ್ದ ಈಕೆ, ಮನೆಯಲ್ಲೆಲ್ಲ ಸಿಸಿಟಿವಿ ಹಾಕಿಸಿ ಗಂಡನ ಮೇಲೆ ನಿಗಾ ಇಟ್ಟಿದ್ದಳು.

VISTARANEWS.COM


on

techie missing
Koo

ಬೆಂಗಳೂರು: ಬೆಂಗಳೂರಲ್ಲಿ ಕಂಪ್ಯೂಟರ್‌ ಇಂಜಿನಿಯರ್‌ (Computer Engineer) ಒಬ್ಬಾತ ಕಾಣೆಯಾದ (Techie Missing) ಪ್ರಕರಣಕ್ಕೆ‌ ಟ್ವಿಸ್ಟ್ ದೊರೆತಿದೆ. ಕಾಣೆಯಾದ ವಿಪಿನ್‌ ಎಂಬ ಟೆಕ್ಕಿಯನ್ನು ನೋಯ್ಡಾದಲ್ಲಿ (Noida) ಪೊಲೀಸರು (Bangalore police) ಪತ್ತೆ ಹಚ್ಚಿದ್ದಾರೆ. ಆದರೆ ಆತ ಮಾತ್ರ ʼನನ್ನನ್ನು ಜೈಲಿಗಾದರೂ ಹಾಕಿ ಸಾರ್‌, ಆದರೆ ಹೆಂಡತಿ ಹತ್ರ ಮತ್ತೆ ಕಳಿಸಬೇಡಿʼ ಎಂದು ಅಲವತ್ತುಕೊಂಡಿದ್ದಾನೆ.

ಒಂದು ವಾರದಿಂದ ಕಾಣೆಯಾಗಿದ್ದ ಟೆಕ್ಕಿ ವಿಪಿನ್ ಬೆನ್ನು ಬಿದ್ದ ಬೆಂಗಳೂರು ಪೊಲೀಸರು, ಆತನನ್ನು ನೋಯ್ಡಾದಲ್ಲಿ ಪತ್ತೆ ಹಚ್ಚಿದ್ದಾರೆ. ನೊಯ್ಡಾದಿಂದ ಬೆಂಗಳೂರಿಗೆ ಕೊಡಿಗೆಹಳ್ಳಿ ಪೊಲೀಸರು ಕರೆತಂದಿದ್ದಾರೆ. ವಿಚಾರಣೆ ವೇಳೆ, ತಾನೇ ಸ್ವಇಚ್ಛೆಯಿಂದ ಮನೆ ಬಿಟ್ಟು ಹೋಗಿರುವುದಾಗಿ ಹೇಳಿಕೆ ನೀಡಿದ್ದಾನೆ.

ಪತಿ ಹಾಗೂ ಪತ್ನಿ ನಡುವೆ ವಯಸ್ಸಿನ ಅಂತರವಿತ್ತು. ಟೆಕ್ಕಿ ವಿಪಿನ್‌ ತನಗಿಂತ ಎಂಟು ವರ್ಷ ದೊಡ್ಡವಳನ್ನು ಮದುವೆಯಾಗಿದ್ದ. ಪತ್ನಿಗೆ 42 ವರ್ಷ, ವಿಪಿನ್‌ಗೆ 34 ವರ್ಷ. ವಿಪಿನ್‌ನೊಂದಿಗೆ ಎರಡನೇ ಮದುವೆಯಾಗಿದ್ದ ಪತ್ನಿ, ವಿಪಿನ್‌ಗೆ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಳೆನ್ನಲಾಗಿದೆ. ವಿಪಿನ್‌ನನ್ನು ತುಂಬಾ ಕಂಟ್ರೋಲ್ ಮಾಡುತ್ತಿದ್ದ ಈಕೆ, ಮನೆಯಲ್ಲೆಲ್ಲ ಸಿಸಿಟಿವಿ ಹಾಕಿಸಿ ಗಂಡನ ಮೇಲೆ ನಿಗಾ ಇಟ್ಟಿದ್ದಳು.

ಇದರಿಂದಾಗಿ ಸಾಕಷ್ಟು ನೊಂದಿದ್ದ ವಿಪಿನ್, ಆಕೆಯ ಸಹವಾಸವೇ ಬೇಡ ಎಂದು ಮನೆ ಬಿಟ್ಟು ಹೋಗಿದ್ದ. ಪತಿ ಕಾಣೆಯಾದ ಬಗ್ಗೆ ಎಕ್ಸ್‌ ಪೋಸ್ಟ್‌ನಲ್ಲಿ ಗೋಳು ತೋಡಿಕೊಂಡಿದ್ದ ಮಹಿಳೆ, ಪ್ರಧಾನ ಮಂತ್ರಿಗೂ ಎಕ್ಸ್‌ನಲ್ಲಿ ಈ ಪೋಸ್ಟನ್ನು ಟ್ಯಾಗ್ ಮಾಡಿದ್ದಳು. ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದರು. ಇದೀಗ, ನಾನು ಮನೆಗೆ ಹೋಗುವುದಿಲ್ಲ ಎಂದು ಟೆಕ್ಕಿ ಪಟ್ಟು ಹಿಡಿದಿದ್ದಾನೆ.

ನನ್ನನ್ನ ಜೈಲಿಗೆ ಬೇಕಿದ್ದರೂ ಹಾಕಿ; ಆದರೆ ನಾನು ಮತ್ತೆ ಮನೆಗೆ ಹೋಗಲ್ಲ ಎಂದು ಅಳಲು ತೋಡಿಕೊಂಡಿದ್ದಾನೆ. ಈ ಗಂಡ- ಹೆಂಡತಿ ಬಿಕ್ಕಟ್ಟನ್ನು ಹೇಗೆ ಪರಿಹರಿಸುವುದು ಎಂದು ಅರ್ಥವಾಗದೆ ಕೊಡಿಗೇಹಳ್ಳಿ ಪೊಲೀಸರು ತಲೆ ಕೆಡಿಸಿಕೊಳ್ಳುತ್ತಿದ್ದಾರೆ.

ಗೋವಾಗೆ ಕಳ್ಳಸಾಗಣೆ ಮಾಡುತ್ತಿದ್ದ ಹೆಣ್ಣು ಶಿಶು ರಕ್ಷಣೆ ವೇಳೆ ಅಧಿಕಾರಿಗಳ ಮೇಲೆ‌ ಹಲ್ಲೆ

ಗದಗ: ಗೋವಾ ರಾಜ್ಯಕ್ಕೆ ಕಳ್ಳಸಾಗಣೆ ಮಾಡಿ ಮಾರಾಟ ಮಾಡಲು ಮುಂದಾದ ಹೆಣ್ಣು ಶಿಶುವನ್ನು ರಕ್ಷಿಸಲು ಹೋದ ಅಧಿಕಾರಿಗಳ ಮೇಲೆ‌ ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ. ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಶಿಂಗಟರಾಯನಕೇರಿ ತಾಂಡಾದಲ್ಲಿ ಮೂರು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಅಕ್ರಮ ಸಂಬಂಧದಿಂದ ಶಿಶು ಜನಿಸಿದ್ದರಿಂದ ಇವರನ್ನು ಗ್ರಾಮದಿಂದ ಹೊರಗೆ ಹಾಕಲಾಗಿತ್ತು. ಹೆಣ್ಣು ಶಿಶುವಿನೊಂದಿಗೆ ಗ್ರಾಮದ ನಿರ್ಜನ‌ ಪ್ರದೇಶದಲ್ಲಿ ಶಿಶುವಿನ ತಾಯಿ ಹಾಗೂ ಕುಟುಂಬ ವಾಸವಿದ್ದರು. ವಿಷಯ ತಿಳಿದ ಶಿಶು ಅಭಿವೃದ್ಧಿ ಇಲಾಖೆ ಮಹಿಳಾ ಮೇಲ್ವಿಚಾರಕಿ ರುದ್ರಮ್ಮ, ಸಮಾಜ ಕಾರ್ಯಕರ್ತೆ ಲಲಿತಾ ಕುಂಬಾರ ಹಾಗೂ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಪ್ರವೀಣಕುಮಾರ ಮತ್ತಿತರ ಅಧಿಕಾರಿಗಳು ಸ್ಥಳಕ್ಕೆ ಹೋಗಿ ಶಿಶು ರಕ್ಷಣೆ ಮಾಡಿ ಕಾರ್‌ನಲ್ಲಿ ಕರೆದುಕೊಂಡು ಬರುವಾಗ ಹಲ್ಲೆ ನಡೆಸಲಾಗಿದೆ.

40ಕ್ಕೂ ‌ಹೆಚ್ಚು ಜನರ ಗುಂಪು ಅಧಿಕಾರಿಗಳಿದ್ದ ಕಾರು ಅಡ್ಡಗಟ್ಟಿ ಗಲಾಟೆ ದಾಂಧಲೆ ನಡೆಸಿದೆ. ಮಗುವನ್ನು ಹೇಗೆ ಒಯ್ಯುತ್ತೀರಿ‌ ಎಂದು ಅಧಿಕಾರಿಗಳಿಂದ ಶಿಶುವನ್ನು ಕಸಿದುಕೊಂಡು ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಸಿಬ್ಬಂದಿ ಪ್ರವೀಣಕುಮಾರ ಮೇಲೆ ಹಲ್ಲೆ ನಡೆಸಿ, ಮೊಬೈಲ್ ಕಸಿದು ನೂಕಿದ್ದಾರೆ. ಈ ವೇಳೆ ಪ್ರವೀಣ ಕೊರಳಲ್ಲಿದ್ದ 11 ಗ್ರಾಂ ಬಂಗಾರದ ಚೈನ್ ಹರಿದು ಬಿಸಾಡಿದ್ದಾರೆ.

ಅಧಿಕಾರಿಗಳ ಜೊತೆಗೆ ಬಂದಿದ್ದ ಇತರೆ ಕಾರ್ಯಕರ್ತರ ಕಾರ್‌ನ ಚಕ್ರದ ಗಾಳಿ ತೆಗೆದು ಅಟ್ಟಹಾಸ ಮಾಡಿದ್ದಾರೆ. ಅಧಿಕಾರಿಗಳ ಭದ್ರತೆಗೆ ಆಗಮಿಸಿದ್ದ ಇಬ್ಬರು ಪೊಲೀಸ್ ಸಿಬ್ಬಂದಿ ಕೂಡ ಹಲ್ಲೆಕೋರರ ಅಟ್ಟಹಾಸಕ್ಕೆ ಅಸಹಾಯಕರಾಗಿದ್ದಾರೆ. ಸ್ಥಳದಿಂದ ಬಚಾವ್ ಆಗಿ ತಪ್ಪಿಸಿಕೊಂಡು‌ ಬಂದ ಅಧಿಕಾರಿಗಳು ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಿಸಿದ್ದಾರೆ.

ಇದನ್ನೂ ಓದಿ: Shocking Incident : ಮಹಿಳೆಯನ್ನು ನಗ್ನಗೊಳಿಸಿ ಶಸ್ತ್ರ ಚಿಕಿತ್ಸೆ ನಡೆಸಿದ ವಾರ್ಡ್​ ಬಾಯ್​! ವಿಡಿಯೊ ವೈರಲ್​

Continue Reading

ಕ್ರೈಂ

Child Trafficking: ಗೋವಾಗೆ ಕಳ್ಳಸಾಗಣೆ ಮಾಡುತ್ತಿದ್ದ ಹೆಣ್ಣು ಶಿಶು ರಕ್ಷಣೆ ವೇಳೆ ಅಧಿಕಾರಿಗಳ ಮೇಲೆ‌ ಹಲ್ಲೆ

Child Trafficking: 40ಕ್ಕೂ ‌ಹೆಚ್ಚು ಜನರ ಗುಂಪು ಅಧಿಕಾರಿಗಳಿದ್ದ ಕಾರು ಅಡ್ಡಗಟ್ಟಿ ಗಲಾಟೆ ದಾಂಧಲೆ ನಡೆಸಿದೆ. ಮಗುವನ್ನು ಹೇಗೆ ಒಯ್ಯುತ್ತೀರಿ‌ ಎಂದು ಅಧಿಕಾರಿಗಳಿಂದ ಶಿಶುವನ್ನು ಕಸಿದುಕೊಂಡು ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ್ದಾರೆ.

VISTARANEWS.COM


on

child trafficking gadag
Koo

ಗದಗ: ಗೋವಾ (Goa) ರಾಜ್ಯಕ್ಕೆ ಕಳ್ಳಸಾಗಣೆ ಮಾಡಿ ಮಾರಾಟ (Child Trafficking) ಮಾಡಲು ಮುಂದಾದ ಹೆಣ್ಣು ಶಿಶುವನ್ನು ರಕ್ಷಿಸಲು ಹೋದ ಅಧಿಕಾರಿಗಳ ಮೇಲೆ‌ ಹಲ್ಲೆ (Assault Case) ನಡೆಸಿದ ಘಟನೆ ವರದಿಯಾಗಿದೆ. ಗದಗ (Gadag news) ಜಿಲ್ಲೆ ಮುಂಡರಗಿ ತಾಲೂಕಿನ ಶಿಂಗಟರಾಯನಕೇರಿ ತಾಂಡಾದಲ್ಲಿ ಮೂರು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಹೆಣ್ಣು ಶಿಶುವಿನೊಂದಿಗೆ ಗ್ರಾಮದ ನಿರ್ಜನ‌ ಪ್ರದೇಶದಲ್ಲಿ ಶಿಶುವಿನ ತಾಯಿ ಹಾಗೂ ಕುಟುಂಬ ವಾಸವಿದ್ದರು. ವಿಷಯ ತಿಳಿದ ಶಿಶು ಅಭಿವೃದ್ಧಿ ಇಲಾಖೆ ಮಹಿಳಾ ಮೇಲ್ವಿಚಾರಕಿ ರುದ್ರಮ್ಮ, ಸಮಾಜ ಕಾರ್ಯಕರ್ತೆ ಲಲಿತಾ ಕುಂಬಾರ ಹಾಗೂ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಪ್ರವೀಣಕುಮಾರ ಮತ್ತಿತರ ಅಧಿಕಾರಿಗಳು ಸ್ಥಳಕ್ಕೆ ಹೋಗಿ ಶಿಶು ರಕ್ಷಣೆ ಮಾಡಿ ಕಾರ್‌ನಲ್ಲಿ ಕರೆದುಕೊಂಡು ಬರುವಾಗ ಹಲ್ಲೆ ನಡೆಸಲಾಗಿದೆ.

40ಕ್ಕೂ ‌ಹೆಚ್ಚು ಜನರ ಗುಂಪು ಅಧಿಕಾರಿಗಳಿದ್ದ ಕಾರು ಅಡ್ಡಗಟ್ಟಿ ಗಲಾಟೆ ದಾಂಧಲೆ ನಡೆಸಿದೆ. ಮಗುವನ್ನು ಹೇಗೆ ಒಯ್ಯುತ್ತೀರಿ‌ ಎಂದು ಅಧಿಕಾರಿಗಳಿಂದ ಶಿಶುವನ್ನು ಕಸಿದುಕೊಂಡು ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಸಿಬ್ಬಂದಿ ಪ್ರವೀಣಕುಮಾರ ಮೇಲೆ ಹಲ್ಲೆ ನಡೆಸಿ, ಮೊಬೈಲ್ ಕಸಿದು ನೂಕಿದ್ದಾರೆ. ಈ ವೇಳೆ ಪ್ರವೀಣ ಕೊರಳಲ್ಲಿದ್ದ 11 ಗ್ರಾಂ ಬಂಗಾರದ ಚೈನ್ ಹರಿದು ಬಿಸಾಡಿದ್ದಾರೆ.

ಅಧಿಕಾರಿಗಳ ಜೊತೆಗೆ ಬಂದಿದ್ದ ಇತರೆ ಕಾರ್ಯಕರ್ತರ ಕಾರ್‌ನ ಚಕ್ರದ ಗಾಳಿ ತೆಗೆದು ಅಟ್ಟಹಾಸ ಮಾಡಿದ್ದಾರೆ. ಅಧಿಕಾರಿಗಳ ಭದ್ರತೆಗೆ ಆಗಮಿಸಿದ್ದ ಇಬ್ಬರು ಪೊಲೀಸ್ ಸಿಬ್ಬಂದಿ ಕೂಡ ಹಲ್ಲೆಕೋರರ ಅಟ್ಟಹಾಸಕ್ಕೆ ಅಸಹಾಯಕರಾಗಿದ್ದಾರೆ. ಸ್ಥಳದಿಂದ ಬಚಾವ್ ಆಗಿ ತಪ್ಪಿಸಿಕೊಂಡು‌ ಬಂದ ಅಧಿಕಾರಿಗಳು ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಿಸಿದ್ದಾರೆ.

11 ವರ್ಷದ ಶಾಲಾ ಬಾಲಕಿ ಮೇಲೆ ಶಿಕ್ಷಕನಿಂದ ಲೈಂಗಿಕ ದೌರ್ಜನ್ಯ

ಮುಂಬೈ: 11 ವರ್ಷದ ಬಾಲಕಿಯ ಮೇಲೆ ಶಾಲಾ ಶಿಕ್ಷಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ (Physical Assault) ಮುಂಬೈನ ಕಾಂದಿವಲಿಯಲ್ಲಿ ನಡೆದಿದೆ. 7 ನೇ ತರಗತಿಯ ವಿದ್ಯಾರ್ಥಿ ಬುಧವಾರ ಈ ಬಗ್ಗೆ ಶಾಲಾ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾನೆ. ಶಿಕ್ಷಕ ತನ್ನ ತರಗತಿಯ ನಂತರ ತನ್ನನ್ನು ಕರೆದು ಅನುಚಿತವಾಗಿ ಸ್ಪರ್ಶಿಸಿದ್ದಾರೆ ಎಂದು ಅವಳು ತನ್ನ ಪ್ರಾಂಶುಪಾಲರಿಗೆ ತಿಳಿಸಿದ್ದಾಳೆ. ಜುಲೈನಲ್ಲಿ ಈ ಘಟನೆ ನಡೆದಿದ್ದು ಇದೀಗ ಪ್ರಕರಣದ ದಾಖಲಾಗಿದೆ.

ಪ್ರಾಂಶುಪಾಲರು ಆಕೆಯ ಪೋಷಕರಿಗೆ ಮಾಹಿತಿ ನೀಡಿದ್ದು ಅವರು ಪೊಲೀಸರನ್ನು ಸಂಪರ್ಕಿಸಿ ದೂರು ದಾಖಲಿಸಿದ್ದಾರೆ. ಬಾಲಕಿಯ ಹೇಳಿಕೆಯ ಆಧಾರದ ಮೇಲೆ, ಶಿಕ್ಷಕನ ವಿರುದ್ಧ ಕಠಿಣ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆಯಡಿ ಪೊಲೀಸ್ ಪ್ರಕರಣ ದಾಖಲಿಸಲಾಗಿದೆ.

ಬಾಲಕಿಯ ಹೇಳಿಕೆಯನ್ನು ದಾಖಲಿಸಲು ಶಿಕ್ಷಕರನ್ನು ಕರೆಸಲಾಗಿದೆ. ಪೊಲೀಸರು ಪುರಾವೆಗಳಿಗಾಗಿ ಸಿಸಿಟಿವಿ ದೃಶ್ಯಾವಳಿಗಳನ್ನು ಸಹ ತನಿಖೆ ಮಾಡುತ್ತಿದ್ದಾರೆ. ಕೋಲ್ಕೊತಾದ ಸರ್ಕಾರಿ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಯಿಂದ ಘಟನೆ ಬಳಿಕ ಬಾಲಕಿಯರು ಮತ್ತು ಮಹಿಳೆಯರ ಸುರಕ್ಷತೆಯ ಬಗ್ಗೆ ಭಾರಿ ಕಳವಳ ವ್ಯಕ್ತಗೊಂಡಿದ್ದು ಮಧ್ಯೆ ಈ ಘಟನೆ ವರದಿಯಾಗಿದೆ.

ಇದನ್ನೂ ಓದಿ: Shocking Incident : ಮಹಿಳೆಯನ್ನು ನಗ್ನಗೊಳಿಸಿ ಶಸ್ತ್ರ ಚಿಕಿತ್ಸೆ ನಡೆಸಿದ ವಾರ್ಡ್​ ಬಾಯ್​! ವಿಡಿಯೊ ವೈರಲ್​

Continue Reading

ಪ್ರಮುಖ ಸುದ್ದಿ

CM Medal: ಕಳ್ಳತನ ಪ್ರಕರಣದಲ್ಲಿ ಸಸ್ಪೆಂಡ್‌ ಆದ ಮುಖ್ಯ ಪೇದೆಗೆ ಮುಖ್ಯಮಂತ್ರಿಗಳ ಪದಕ! ಇದೇನಿದು ಅಂತಿದಾರೆ ಜನ

CM Medal: ಕರ್ನಾಟಕ ಸರ್ಕಾರ ಬುಧವಾರ ಪ್ರಕಟಿಸಿದ ಪೊಲೀಸ್‌ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಸೇವಾ ಪದಕ ವಿಜೇತರ ಪಟ್ಟಿಯಲ್ಲಿ ಈ ಸಸ್ಪೆಂಡ್‌ ಆದ ಪೇದೆಯ ಹೆಸರಿದೆ. ಕರ್ನಾಟಕದ ಮುಖ್ಯಮಂತ್ರಿಗಳಿಂದ ಸೇವಾ ಪದಕ ಪಡೆಯುತ್ತಿರುವ ಈ ಪೇದೆಯ ಹೆಸರು ಸಲೀಂ ಪಾಶಾ.

VISTARANEWS.COM


on

cm medal saleem pasha
Koo

ಮೈಸೂರು: ತಿಂಗಳ ಹಿಂದೆಯಷ್ಟೇ ಮೈಸೂರಿನಲ್ಲಿ ನಡೆದ ಕಳ್ಳತನ (Theft) ಪ್ರಕರಣವೊಂದರಲ್ಲಿ ಆರೋಪಿಗಳಿಗೆ ಸಹಕರಿಸಿದ ಆರೋಪ ಹಾಗೂ ಕರ್ತವ್ಯದಲ್ಲಿ ನಿರ್ಲಕ್ಷ್ಯ ಆರೋಪದಿಂದ ಅಮಾನತ್ತಾಗಿದ್ದ (Suspned) ಪೊಲೀಸ್‌ ಪೇದೆ (Police constable) ಈ ಬಾರಿ ಸ್ವಾತಂತ್ರ್ಯೋತ್ಸವದಲ್ಲಿ (Independence Day 2024) ಮುಖ್ಯಮಂತ್ರಿ ಸೇವಾ ಪದಕ (CM Medal) ಪಡೆದಿದ್ದು, ಇದೀಗ ವಿಪಕ್ಷಗಳಿಂದ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಕಟು ಟೀಕೆಗೆ ಕಾರಣವಾಗಿದೆ.

ಕರ್ನಾಟಕ ಸರ್ಕಾರ ಬುಧವಾರ ಪ್ರಕಟಿಸಿದ ಪೊಲೀಸ್‌ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಸೇವಾ ಪದಕ ವಿಜೇತರ ಪಟ್ಟಿಯಲ್ಲಿ ಈ ಸಸ್ಪೆಂಡ್‌ ಆದ ಪೇದೆಯ ಹೆಸರಿದೆ. ಕರ್ನಾಟಕದ ಮುಖ್ಯಮಂತ್ರಿಗಳಿಂದ ಸೇವಾ ಪದಕ ಪಡೆಯುತ್ತಿರುವ ಈ ಪೇದೆಯ ಹೆಸರು ಸಲೀಂ ಪಾಶಾ. ಮೈಸೂರಿನಲ್ಲಿ ಎರಡು ದಶಕದಿಂದ ಕೆಲಸ ಮಾಡುತ್ತಿರುವ ಪೇದೆ ಸಲೀಂ. ಮೈಸೂರಿನ ವಿವಿಧ ಠಾಣೆಗಳಲ್ಲಿ ಕೆಲಸ ಮಾಡಿದ ಅನುಭವ ಅವರಿಗಿದೆ. ಆದರೆ ಕಳೆದ ತಿಂಗಳು ಕಳವು ಪ್ರಕರಣವೊಂದರಲ್ಲಿ ಅವರ ಸಹಕಾರವೂ ಇದೆ ಎನ್ನುವ ಕಾರಣಕ್ಕೆ ಅಮಾನತುಪಡಿಸಲಾಗಿತ್ತು.

ಇದಲ್ಲದೆ ಹಲವು ಅಪರಾಧ ಪ್ರಕರಣಗಳಲ್ಲಿ ಆರೋಪಿಗಳ ಜೊತೆ ಸಂಪರ್ಕ, ಸಾರ್ವಜನಿಕರ ಆಸ್ತಿ ಕಳವಿಗೆ ಪರೋಕ್ಷ ಸಹಕಾರ, ದಾಖಲೆಗಳ ಸೋರಿಕೆ ಮಾಡಿರುವ ಆರೋಪಗಳ ಹಿನ್ನಲೆಯಲ್ಲಿ ಕ್ರಮ ಕೈಗೊಳ್ಳಲಾಗಿತ್ತು. ಮೇಟಗಳ್ಳಿ ಹಾಗೂ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕನ್ನ ಹಾಗೂ ಗಾಂಜಾ ಪ್ರಕರಣಗಳ ಆರೋಪಿಗಳ ಸಂಬಂಧಿಕರ ಜೊತೆ ಸಂಪರ್ಕ ಇಟ್ಟುಕೊಂಡಿರುವುದು ಹಿರಿಯ ಅಧಿಕಾರಿಗಳ ಗಮನಕ್ಕೆ ಬಂದಿದೆ.

ಸಲೀಂ ಪಾಶಾ ಸಮಾಜಘಾತುಕ ಶಕ್ತಿಗಳ ಜೊತೆ ಕೈಜೋಡಿಸಿ ಸಾರ್ವಜನಿಕರ ಸ್ವತ್ತು ಕಳುವಾಗಲು ಕಾರಣರಾಗಿರುತ್ತಾರೆ. ಇದರಿಂದಾಗಿ ಮುಂದಿನ ದಿನಗಳಲ್ಲಿ ಇಲಾಖೆಯ ಆಂತರಿಕ ಮತ್ತು ಗುಪ್ತಮಾಹಿತಿಗಳು ಸೋರಿಕೆಯಾಗಿ ಸಾರ್ವಜನಿಕರ ಸ್ವತ್ತುಗಳು ಹೆಚ್ಚು ಹೆಚ್ಚಾಗಿ ಕಾಣೆಯಾಗುವ ಸಾಧ್ಯತೆಗಳು ಇರುವುದಾಗಿ ಕಾರಣ ನೀಡಿ ಸಲೀಂ ಪಾಷಾ ಅವರನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ಮೈಸೂರು ನಗರ ಪೊಲೀಸ್‌ ಆಯುಕ್ತರು ಆದೇಶದಲ್ಲಿ ತಿಳಿಸಿದ್ದರು. ಈಗಲೂ ಸಲೀಂ ಅಮಾನತಿನಲ್ಲಿದ್ದಾರೆ. ಪ್ರಕರಣದ ವಿಚಾರಣೆ ನಡೆದಿದೆ.

ಸಲೀಂ ಕಳೆದ ವರ್ಷ ಕೆಲಸ ಮಾಡಿದ್ದ ಮೈಸೂರು ಸಿಸಿಬಿ ಘಟಕದಲ್ಲಿನ ಸೇವೆ ಆಧರಿಸಿ ಈ ವರ್ಷ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಪಾಶಾ ಅಮಾನತುಗೊಳ್ಳುವ ಮುಂಚೆಯೇ ಮೈಸೂರು ನಗರ ಪೊಲೀಸ್‌ ಆಯುಕ್ತರಿಂದ ಶಿಫಾರಸ್ಸು ಆಗಿ ಹೋಗಿದ್ದ ಪಟ್ಟಿಯಲ್ಲಿ ಇವರ ಹೆಸರಿತ್ತು. ಅದನ್ನು ಗೃಹ ಇಲಾಖೆ ಪ್ರಕಟಿಸಿ ಎಡವಟ್ಟು ಮಾಡಿದೆ. ಒಂದು ತಿಂಗಳ ಹಿಂದೆ ಅಮಾನತಾದರೂ ಇದೀಗ ಬಿಡುಗಡೆಯಾದ ಮುಖ್ಯಮಂತ್ರಿಗಳ ಪದಕದ ಪಟ್ಟಿಯಲ್ಲಿ ಮುಖ್ಯ ಪೇದೆ ಸಲೀಂ ಪಾಷಾ ಹೆಸರು ಪ್ರಕಟವಾಗಿದ್ದು ಅಚ್ಚರಿಗೆ ಕಾರಣವಾಗಿದ್ದೂ ಅಲ್ಲದೇ ಗೃಹ ಇಲಾಖೆ ಇಂತಹ ಅಂಶಗಳನ್ನು ಗಮನಿಸದೇ ಪ್ರಶಸ್ತಿ ಪ್ರಕಟಿಸುತ್ತದೆಯೇ ಎನ್ನುವ ಪ್ರಶ್ನೆ ಎದುರಾಗಿದೆ.

ಇದು 2023ರ ಕರ್ತವ್ಯದ ಆಧಾರದ ಮೇಲೆ ನೀಡಿರುವ ಪ್ರಶಸ್ತಿ. ಈ ವರ್ಷದ್ದು ಅಲ್ಲ ಎಂದು ಅನಾಮಿಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಮಾನತುಗೊಂಡ, ಈ ವರ್ಷ ಕರ್ತವ್ಯ ಲೋಪದಲ್ಲಿ ಸಿಲುಕಿದ ಪೊಲೀಸ್‌ ಪ್ರತಿಷ್ಠಿತ ಹಾಗೂ ಗೌರವಯುತ ಪ್ರಶಸ್ತಿ ಸ್ವೀಕರಿಸುವುದು ಸರಿಯೇ ಎಂಬ ಪ್ರಶ್ನೆ ಎದುರಾಗಿದೆ.

ಇದನ್ನೂ ಓದಿ: CM Award : ಕಳಂಕಿತ ಡಿವೈಎಸ್ಪಿ ಜಾವೀದ್​ಗೆ ಸಿಎಂ ಪದಕ ನೀಡುವಂತೆ ಶಿಫಾರಸು; ಶಾಸಕ ಕಂದಕೂರ ವಿರೋಧ

Continue Reading
Advertisement
Doctors protest
ಕರ್ನಾಟಕ4 mins ago

Doctors Protest: ನಾಳಿನ ಪ್ರತಿಭಟನೆಗೆ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಬೆಂಬಲ; ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೇವೆ ಬಂದ್

Medicine
ಆರೋಗ್ಯ10 mins ago

Red Line on Medicine Strip: ಔಷಧ ಪ್ಯಾಕೇಟ್‌ ಮೇಲೆ ಕೆಂಪು ಗೆರೆ ಏಕಿರುತ್ತದೆ ಅನ್ನೋದು ಗೊತ್ತಾ?

Vijay Surya drusti bottu serial will start
ಕಿರುತೆರೆ19 mins ago

Vijay Surya: `ದೃಷ್ಟಿಬೊಟ್ಟು’ ಧಾರಾವಾಹಿ ಮೂಲಕ ಖಡಕ್‌ ಎಂಟ್ರಿ ಕೊಟ್ಟ ವಿಜಯ್ ಸೂರ್ಯ!

Visa Free Countries
ಪ್ರವಾಸ22 mins ago

Visa Free Countries: ಪ್ರವಾಸಿ ತಾಣಗಳಿಗೆ ಹೆಸರಾದ ಈ 10 ದೇಶಗಳಿಗೆ ಹೋಗಲು ವೀಸಾ ಬೇಕಿಲ್ಲ!

Indian Economy
ಪ್ರಮುಖ ಸುದ್ದಿ59 mins ago

Indian Economy : 2027ರ ವೇಳೆಗೆ ಭಾರತ 3ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: ಐಎಂಎಫ್​ನ ಗೀತಾ ಗೋಪಿನಾಥ್

Kolkata Doctor Murder Case
Latest1 hour ago

Kolkata Doctor Murder Case: ಕೋಲ್ಕತ್ತಾ ವೈದ್ಯೆಯ ಅತ್ಯಾಚಾರಿಗೆ ಮರಣದಂಡನೆ ವಿಧಿಸುವಂತೆ ಬಾಲಿವುಡ್ ತಾರೆಯರ ಆಗ್ರಹ

Shiva Rajkumar 131st film set on Varamahalakshmi festival
ಸ್ಯಾಂಡಲ್ ವುಡ್1 hour ago

Shiva Rajkumar: ವರಮಹಾಲಕ್ಷ್ಮಿ ಹಬ್ಬದ ದಿನದಂದೇ ಸೆಟ್ಟೇರಿತು ಶಿವರಾಜ್ ಕುಮಾರ್ 131ನೇ ಸಿನಿಮಾ!

Vinesh Phogat
ಪ್ರಮುಖ ಸುದ್ದಿ1 hour ago

Vinesh Phogat : ವಿನೇಶ್​ ಫೈನಲ್ ತಲುಪಿದ್ದೇ ಹೆಮ್ಮೆಯ ವಿಷಯ; ಫೋಗಟ್ ಸಾಧನೆಯನ್ನು ಕೊಂಡಾಡಿದ ಮೋದಿ

Donald Trump
ಪ್ರಮುಖ ಸುದ್ದಿ2 hours ago

Donald Trump : ಡೊನಾಲ್ಡ್​ ಟ್ರಂಪ್​, ಎಲಾನ್​ ಮಸ್ಕ್​ ಮಸ್ತ್​ ಡಾನ್ಸ್​; ಇದು ಕೃತಕ ಬುದ್ದಿಮತ್ತೆಯ ಕರಾಮತ್ತು!

70th National Film Awards Mammootty rishab shetty competition
ಸಿನಿಮಾ2 hours ago

70th National Film Awards: 70ನೇ ರಾಷ್ಟ್ರೀಯ ಪ್ರಶಸ್ತಿ ಕ್ಷಣಗಣನೆ; ರಿಷಬ್‌ ಶೆಟ್ಟಿ ಮೇಲೆ ಸಿನಿಪ್ರಿಯರ ಕಣ್ಣು!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌