Site icon Vistara News

Tractor Accident | ಟ್ರ್ಯಾಕ್ಟರ್ ಪಲ್ಟಿಯಾಗಿ ಒಬ್ಬ ಸಾವು, ಮೂವರಿಗೆ ಗಂಭೀರ ಗಾಯ

Tractor Accident

ತುಮಕೂರು: ಟ್ರ್ಯಾಕ್ಟರ್ ಪಲ್ಟಿ ಹೊಡೆದು ಒಬ್ಬ ಯುವಕ ಮೃತಪಟ್ಟು, ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ (Tractor Accident) ಜಿಲ್ಲೆಯ ಮಧುಗಿರಿ ತಾಲೂಕಿನ ದೊಡ್ಡಮಾಲೂರಿನಲ್ಲಿ ಬುಧವಾರ ನಡೆದಿದೆ.

ಹಾಲಗಾನಹಳ್ಳಿ ಮೂಲದ ದರ್ಶನ್ (೨೦) ಮೃತ, ರಮೇಶ್, ಅಜಿತ್, ಆಂಜಿನಪ್ಪ ಗಾಯಾಳುಗಳು. ರಸ್ತೆ ಗುಂಡಿ ತಪ್ಪಿಸಲು ಹೋದಾಗ ಚಾಲಕನ ನಿಯಂತ್ರಣ ಟ್ರ್ಯಾಕ್ಟರ್ ಹಳ್ಳಕ್ಕೆ ಬಿದ್ದು ಪಲ್ಟಿಯಾಗಿ ದುರಂತ ಸಂಭವಿಸಿದೆ. ಗಾಯಾಳುಗಳನ್ನು ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಡಿಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Abondoned child | ನವಜಾತ ಶಿಶುವನ್ನು ರಸ್ತೆ ಬದಿಯಲ್ಲಿ ಬಿಟ್ಟು ಹೋದ ತಾಯಿ, ಆರೋಗ್ಯ ಇಲಾಖೆ ಕಾರ್ಯಕರ್ತರಿಂದ ರಕ್ಷಣೆ

Exit mobile version